7th Pay Commission: ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌; ನಾಳೆ ಸಿಎಂಗೆ 7ನೇ ರಾಜ್ಯ ವೇತನ ಆಯೋಗದ ವರದಿ ಸಲ್ಲಿಕೆ - Vistara News

ಕರ್ನಾಟಕ

7th Pay Commission: ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌; ನಾಳೆ ಸಿಎಂಗೆ 7ನೇ ರಾಜ್ಯ ವೇತನ ಆಯೋಗದ ವರದಿ ಸಲ್ಲಿಕೆ

7th Pay Commission: 7ನೇ ರಾಜ್ಯ ವೇತನ ಆಯೋಗದ ಅವಧಿ ಮಾ.15ಕ್ಕೆ ಮುಗಿದಿರುವ ಹಿನ್ನೆಲೆಯಲ್ಲಿ ಮಾ.16ರಂದು ರಾಜ್ಯ ಸರ್ಕಾರಕ್ಕೆ ಆಯೋಗವು ವರದಿ ಸಲ್ಲಿಸಲಿದೆ ಎನ್ನಲಾಗುತ್ತಿದೆ.

VISTARANEWS.COM


on

7th State Pay Commission report
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ರಚಿಸಲಾಗಿದ್ದ 7ನೇ ರಾಜ್ಯ ವೇತನ ಆಯೋಗದ ವರದಿ (7th Pay Commission) ಸಿದ್ಧಗೊಂಡಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ಆಯೋಗವು ಶನಿವಾರ ವರದಿ ಸಲ್ಲಿಸುವ ಸಾಧ್ಯತೆ ಇದೆ. ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ 7ನೇ ರಾಜ್ಯ ವೇತನ ಆಯೋಗದ ಅವಧಿ ಶುಕ್ರವಾರಕ್ಕೆ (ಮಾ.15) ಮುಗಿದಿರುವ ಹಿನ್ನೆಲೆಯಲ್ಲಿ ಮಾ.16ರಂದು ರಾಜ್ಯ ಸರ್ಕಾರಕ್ಕೆ ವೇತನ ಆಯೋಗವು ವರದಿ ಸಲ್ಲಿಸಲಿದೆ ಎನ್ನಲಾಗುತ್ತಿದೆ.

ಮೂಲಗಳ ಪ್ರಕಾರ 7ನೇ ರಾಜ್ಯ ವೇತನ ಆಯೋಗದ ವರದಿ ಸಿದ್ಧಗೊಂಡಿದ್ದರೂ ಸ್ವೀಕರಿಸಲು ರಾಜ್ಯ ಸರ್ಕಾರವೇ ಹಿಂದೇಟು ಹಾಕುತ್ತಿದೆ ಎಂದು ಹೇಳಲಾಗುತ್ತಿದೆ. ಗ್ಯಾರಂಟಿ ಯೋಜನೆಗಳಿಗೆ ಸುಮಾರು 52 ಸಾವಿರ ಕೋಟಿ ರೂ. ಬಳಕೆ ಸೇರಿದಂತೆ ಒಟ್ಟು ಯೋಜನಾ ವೆಚ್ಚಕ್ಕೆ 1.20 ಲಕ್ಷ ಕೋಟಿ ರೂ.ಗಳನ್ನು ನಿಗದಿ ಮಾಡಿರುವ ಸರ್ಕಾರಕ್ಕೆ ರಾಜ್ಯಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಹಣಕಾಸಿನ ಕೊರತೆ ಎದುರಾಗಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ವರದಿಯನ್ನು ಸ್ವೀಕರಿಸುವ ಬದಲು ಮತ್ತಷ್ಟು ಕಾಲ ಆಯೋಗದ ಅವಧಿ ವಿಸ್ತರಣೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ | Job Alert: ಗುಡ್‌ನ್ಯೂಸ್‌; 247 ಪಿಡಿಒ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ; ಇಲ್ಲಿದೆ ವಿವರ

ವೇತನ ಆಯೋಗದ ವರದಿಯಲ್ಲಿ ಸರ್ಕಾರಿ ನೌಕರರಿಗೆ ಶೇ.30 ರಷ್ಟು ವೇತನ ಹೆಚ್ಚು (salary Hike) ಮಾಡಬೇಕು ಎಂಬ ಶಿಫಾರಸುಗಳಿವೆ ಎನ್ನಲಾಗಿದ್ದು, ಈಗಾಗಲೇ ಮಧ್ಯಂತರ ಪರಿಹಾರವಾಗಿ ಶೇ.17ರಷ್ಟು ವೇತನ ಹೆಚ್ಚಳವನ್ನು ಈ ಹಿಂದಿನ ಸರ್ಕಾರ ಜಾರಿ ಮಾಡಿತ್ತು. ಇನ್ನು ಚುನಾವಣಾ ಪ್ರಣಾಳಿಕೆಯಲ್ಲಿ 7ನೇ ವೇತನ ಆಯೋಗದ ವರದಿ ಜಾರಿ ಬಗ್ಗೆ ಕಾಂಗ್ರೆಸ್ ಭರವಸೆ ನೀಡಿತ್ತು. ಆದರೆ, ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಗ್ಯಾರಂಟಿಗಳಿಗೆ ಆದ್ಯತೆ ನೀಡಿ, ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಗಮನ ಹರಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ಶನಿವಾರ ಮಧ್ಯಾಹ್ನ ಕೇಂದ್ರ ಚುನಾವಣಾ ಆಯೋಗ ಲೋಕಸಭೆ ಚುನಾವಣೆ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ. ಅಷ್ಟರೊಳಗಾಗಿ ವರದಿ ಸ್ವೀಕರಿಸಬೇಕು, ಇಲ್ಲವೇ ಆಯೋಗದ ಅವಧಿಯನ್ನು ವಿಸ್ತರಿಸಬೇಕಿದೆ. ವೇಳಾಪಟ್ಟಿ ಪ್ರಕಟಗೊಂಡ ಕ್ಷಣದಿಂದಲೇ ನೀತಿ ಸಂಹಿತೆ ಜಾರಿಯಾಗಲಿದ್ದು, ಸರ್ಕಾರವು ಯಾವುದೇ ಹೊಸ ಯೋಜನೆ ಅಥವಾ ನಿರ್ಧಾರಗಳನ್ನು ಕೈಗೊಳ್ಳಲು ಸಾಧ್ಯವಾಗುವುದಿಲ್ಲ. ಹೀಗಾಗಿ ವೇತನ ಪರಿಷ್ಕರಣೆಯ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರು ಸಹಜವಾಗಿಯೇ ಗೊಂದಲಕ್ಕೆ ಒಳಗಾಗಿದ್ದಾರೆ.

ಇದನ್ನೂ ಓದಿ | Job Alert: ಪದವೀಧರರಿಗೆ ಗುಡ್‌ನ್ಯೂಸ್‌; ಕೆಪಿಎಸ್‌ಸಿಯಿಂದ 50 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

2 ಬಾರಿ ಆಯೋಗದ ಅವಧಿ ವಿಸ್ತರಣೆ

ಸುಧಾಕರ್ ರಾವ್ ನೇತೃತ್ವದಲ್ಲಿ ರಾಜ್ಯ ಸರ್ಕಾರ 2022ರ ನ.19 ರಂದು ಆಯೋಗವನ್ನು ರಚಿಸಿ ಆರು ತಿಂಗಳಲ್ಲಿ ವರದಿ ನೀಡುವ ಗಡುವು ನೀಡಿತ್ತು. ಆನಂತರ 2023 ರ ಮೇ 15 ರಂದು ಮತ್ತೆ ಆರು ತಿಂಗಳ ಅವಧಿಗೆ ಆಯೋಗದ ಅವಧಿಯನ್ನು ವಿಸ್ತರಿಸಲಾಗಿತ್ತು. ಬಳಿಕ 2023 ರ ನವೆಂಬರ್ 6 ರಂದು ಆಯೋಗದ ಅವಧಿಯನ್ನು ಮಾ.15ರನವರೆಗೆ ವಿಸ್ತರಿಸಿ ಆದೇಶ ಹೊರಡಿಸಿತ್ತು.

ನೌಕರರ ಬೇಡಿಕೆಗಳೇನು?

ಶೇ. 40ರಷ್ಟು ಹೆಚ್ಚಳದೊಂದಿಗೆ 7ನೇ ವೇತನ ಆಯೋಗದ ವರದಿಯನ್ನು ಜಾರಿಗೊಳಿಸುವುದು, ರಾಜ್ಯದ ಎಲ್ಲಾ ನೌಕರರಿಗೂ PFRDA ಕಾಯ್ದೆ /NPS ಪದ್ದತಿ ರದ್ದುಪಡಿಸಿ ನಿಶ್ಚಿತ ಪಿಂಚಣಿ ಯೋಜನೆ (OPS) ಮರುಸ್ಥಾಪಿಸುವುದು, ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವುದು, ಗುತ್ತಿಗೆ/ಹೊರಗುತ್ತಿಗೆ ಅರೆಕಾಲಿಕ ನೇಮಕಾತಿಯಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ಸುಪ್ರೀಂ ಕೋರ್ಟ್ ಆದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವುದು, ಇವರ ವೇತನವನ್ನು ಸರ್ಕಾರದಿಂದ ನೇರವಾಗಿ ಖಾತೆಗೆ ಜಮಾ ಮಾಡುವುದು, ಇವರುಗಳನ್ನು ಎಲ್ಲಾ ನೇರ ನೇಮಕಾತಿಗಳಲ್ಲಿ ಕಾಯಂಗೊಳಿಸುವುದು. ಹೊರಗುತ್ತಿಗೆ ನೇಮಕಾತಿಯನ್ನು ಕೈಬಿಟ್ಟು ಕಾಯಂ ನೇಮಕಾತಿ ಮಾಡಿಕೊಳ್ಳುವುದು ರಾಜ್ಯ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಗಳಾಗಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಯಚೂರು

Self Harming : ಮಾನಸಿಕ ಖಿನ್ನತೆ; ಮಗಳ ಜತೆ ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ

Self Harming: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಮಗಳೊಂದಿಗೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

VISTARANEWS.COM


on

By

Self Harming
Koo

ರಾಯಚೂರು: ಮಗಳ ಜತೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ (Raichur News) ಲಿಂಗಸಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ ನಡೆದಿದೆ. ಲಕ್ಷೀ (46) ಮತ್ತು ಅಂಬಿಕಾ (13)ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟವರು.

ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆಗೆ ಶರಣಾಗಿರಬಹುದೆಂದು ಶಂಕಿಸಲಾಗಿದೆ. 14 ವರ್ಷಗಳ ಹಿಂದೆಯೇ ಪತಿಯಿಂದ ದೂರವಾಗಿದ್ದ ಲಕ್ಷ್ಮೀ ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. 1 ತಿಂಗಳ ಹಿಂದಷ್ಟೇ ಗ್ರಾಮಕ್ಕೆ ತಾಯಿ-ಮಗಳು ಬಂದಿದ್ದರು. ಸುಮಾರು ವರ್ಷಗಳಿಂದ ಲಕ್ಷ್ಮಿ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

ಸೋಮವಾರ ಏಕಾಏಕಿ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಲಕ್ಷ್ಮೀಯ ಪುತ್ರ ಪಂಪನಗೌಡ ನೀಡಿದ ದೂರಿನ್ವಯ ಪ್ರಕರಣ ದಾಖಲಾಗಿದೆ. ಲಿಂಗಸಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಇದನ್ನೂ ಓದಿ: Murder Case : ಮೈಸೂರಿನಲ್ಲಿ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿಯ ಬರ್ಬರ ಕೊಲೆ

ನಗ್ನ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್‌; ಮರ್ಯಾದೆಗೆ ಅಂಜಿದ ತಂದೆ ಬಳಿಕ ಮಗಳು ಮೃತ್ಯು

ಮೈಸೂರು/ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟದಲ್ಲಿ (MM Hills) ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ (Self Harming) ಯತ್ನಿಸಿದ ಪ್ರಕರಣಕ್ಕೆ (Physical Abuse) ಸಂಬಂಧಿಸಿದ್ದಂತೆ ಮೊನ್ನೆ ಶುಕ್ರವಾರ ತಂದೆ ಮಹಾದೇವನಾಯಕ (65) ಮೃತಪಟ್ಟಿದ್ದರು. ಇಂದು ಸೋಮವಾರ (ಜೂ.10) ಚಿಕಿತ್ಸೆ ಫಲಕಾರಿಯಾಗದೆ ಅವರ ಮಗಳು ಲೀಲಾವತಿ (45 ) ಮೃತಪಟ್ಟಿದ್ದಾರೆ. ಲೀಲಾವತಿಗೆ ಮೂರು ದಿನಗಳಿಂದ ಚಾಮರಾಜನಗರ ಸಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಕ್ರಿಮಿ ನಾಶಕ ಸೇವಿಸಿದ ತೀವ್ರತೆಗೆ ಮೃತಪಟ್ಟಿದ್ದಾರೆ.

ಲೀಲಾವತಿ ಅವರ ಮಗಳು ರಿಷೀತಾಳ ನಗ್ನ ಫೋಟೊ ತೋರಿಸಿ ಕಾಮುಕನೊಬ್ಬ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ. ಇದೇ ಕಾರಣಕ್ಕೆ ಮರ್ಯಾದೆಗೆ ಅಂಜಿ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಘಟನೆಯಲ್ಲಿ ತಂದೆ-ಮಗಳು ಮೃತಪಟ್ಟರೆ, ಅಜ್ಜಿ- ಮೊಮ್ಮಗಳ ಸ್ಥಿತಿ ಗಂಭೀರವಾಗಿದ್ದು, ಇಬ್ಬರಿಗೂ ಚಾಮರಾಜನಗರ ಸಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಸಂತ್ರಸ್ತೆಯ ದೂರು ಸ್ವೀಕರಿಸದ ಮೂವರು ಅಮಾನತು

ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ, ಇಬ್ಬರು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಕೆಆರ್‌ನಗರ ಠಾಣೆ ಇನ್ಸ್‌ಪೆಕ್ಟರ್, ಎಎಸ್‌ಐ ಹಾಗೂ ಮುಖ್ಯಪೇದೆ ಅಮಾನತು ಮಾಡಲಾಗಿದೆ. ಸಂತ್ರಸ್ತೆಯ ಪೋಷಕರ ದೂರು ಸ್ವೀಕರಿಸದ ಹಿನ್ನೆಲೆಯಲ್ಲಿ ಇನ್‌ಸ್ಪೆಕ್ಟರ್ ಪಿ.ಪಿ.ಸಂತೋಷ್, ಸಹಾಯಕ ಸಬ್‌ ಇನ್‌ಸ್ಪೆಕ್ಟರ್ ಗಿರೀಶ್ ಹಾಗೂ ಮುಖ್ಯಪೇದೆ ರಾಘವೇಂದ್ರ ಎಂಬುವವರನ್ನು ಅಮಾನತು ಮಾಡಲಾಗಿದೆ. ಅಮಾನತು ಮಾಡಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ ಆದೇಶಿಸಿದ್ದಾರೆ.

Physical Abuse
ಅಮಾನತುಗೊಂಡ ಅಧಿಕಾರಿಗಳು

ಅಪ್ರಾಪ್ತೆ ಕುಟುಂಬಸ್ಥರು ನೀಡಿದ ದೂರನ್ನು ಎಸ್.ಸಿ., ಎಸ್.ಟಿ. ದೌರ್ಜನ್ಯ ತಡೆ ಕಾಯ್ದೆ, ಪೋಕ್ಸೋ ಕಾಯ್ದೆ ಹಾಗೂ ಐಪಿಸಿ 370 ಸೆಕ್ಷನ್‌ನಡಿ ದಾಖಲು ಮಾಡಿಕೊಳ್ಳದೇ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದರು. ಕೆಆರ್‌ನಗರ ತಾಲೂಕಿನ ಗ್ರಾಮವೊಂದರ ಲೋಕೇಶ್ ಎಂಬಾತ ಸಂತ್ರಸ್ತೆ ಬಾಲಕಿಯ ಖಾಸಗಿ ಫೋಟೋ, ವಿಡಿಯೋ ಮಾಡಿ ವೈರಲ್ ಮಾಡುವುದಾಗಿ ಬ್ಲಾಕ್‌ಮೇಲ್ ಮಾಡುತ್ತಿದ್ದ.

ಈ ಸಂಬಂಧ ಸಂತ್ರಸ್ತೆಯ ಪೋಷಕರು ಕೆ.ಆರ್.ನಗರ ಠಾಣೆಗೆ ದೂರು ನೀಡಲು ಮುಂದಾಗಿದ್ದರು. ಆದರೆ ದೂರು ದಾಖಲಿಸಿಕೊಳ್ಳದೆ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದರು. ತಮಗೆ ನ್ಯಾಯ ಸಿಗುವ ಭರವಸೆ ಇಲ್ಲದೆ ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರಕ್ಕೆ ಬಂದಿತ್ತು. ಅದರಂತೆ ಕಳೆದ ಶುಕ್ರವಾರ ಮಹದೇಶ್ವರ ಬೆಟ್ಟಕ್ಕೆ ತೆರಳಿ ದೇವರ ದರ್ಶನ ಪಡೆದು ವಾಪಸ್ ಬರುವಾಗ ತಾಳಬೆಟ್ಟದಲ್ಲಿ ಆತ್ಮಹತ್ಯೆ ಯತ್ನಿಸಿದ್ದರು. ಘಟನೆಯಲ್ಲಿ ಬಾಲಕಿ ರಿಷಿತಾಳ ತಾತ ಮೃತಪಟ್ಟಿದ್ದರು. ಅಸ್ವಸ್ಥಗೊಂಡಿದ್ದ ಅಜ್ಜಿ, ತಾಯಿ, ಮೊಮ್ಮಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇದೀಗ ರಿಷಿತಾಳ ತಾಯಿ ಕೂಡ ಮೃತಪಟ್ಟಿದ್ದು, ಅಜ್ಜಿ, ಮೊಮ್ಮಗಳು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.

ಇದನ್ನೂ ಓದಿ: Self Harming : ಮಗಳ ನಗ್ನ ಫೋಟೊ ತೋರಿಸಿ ಪ್ರಿಯಕರ ಬ್ಲ್ಯಾಕ್‌ಮೇಲ್‌; ಮರ್ಯಾದೆಗೆ ಅಂಜಿ ವಿಷ ಸೇವಿಸಿದ ಕುಟುಂಬಸ್ಥರು

ಬಾಲಕಿಯ ಡೆತ್‌ನೋಟ್‌ ಪತ್ತೆ

ಮಹಾದೇವನಾಯಕ ಹಾಗೂ ಗೌರಮ್ಮ ದಂಪತಿಯ ಮಗಳು ಲೀಲಾವತಿ ಹಾಗೂ ಈಕೆ ಮಗಳು ರಿಷಿತಾ ಈ ನಾಲ್ವರು ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್‌ ಬರೆದಿಟ್ಟಿದ್ದಾರೆ. ಕಾಮ ಕ್ರಿಮಿ ಲೋಕೇಶ್ ಕೊಟ್ಟ ಟಾರ್ಚರ್‌ಗೆ ಬೇಸತ್ತು ಇಡೀ ಕುಟುಂಬ ಕ್ರಿಮಿ ನಾಶಕ ಸೇವಿಸಿದ್ದರು. ಅಪ್ರಾಪ್ತೆ ಬರೆದಿಟ್ಟ ಡೆತ್‌ನೋಟ್ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದೆ.

Physical abuse lokesh
ಆರೋಪಿ ಲೋಕೇಶ್‌

ಡೆತ್‌ನೋಟ್‌ನಲ್ಲಿ ಆರೋಪಿ ಲೋಕೇಶ್‌ ಕೊಟ್ಟ ಹಿಂಸೆಯನ್ನು ಎಳೆ ಎಳೆಯಾಗಿ ಬರೆದಿಟ್ಟಿದ್ದಾಳೆ. ಲೋಕೇಶ್ ಎಲ್ಲಾ ಹೆಣ್ಣು ಮಕ್ಕಳನ್ನು ಕೆಟ್ಟ ದೃಷ್ಠಿಯಿಂದ ನೋಡುತ್ತಾನೆ. ನನ್ನನ್ನು ಸಹ ಲೋಕೇಶ್ ಕೆಟ್ಟ ದೃಷ್ಠಿಯಿಂದ ನೋಡಿದ್ದ. ನಮ್ಮ ಕುಟುಂಬದ ಮಾನ ಮರ್ಯಾದೆ ಕಳೆದು ಹಾಕಿದ್ದಾನೆ. ಲೋಕೇಶ್‌ನನ್ನು ಸುಮ್ಮನೆ ಬಿಡಬೇಡಿ, ಆತನನ್ನ ಸುಮ್ಮನೆ ಬಿಟ್ಟರೆ ನನ್ನಂತ ಎಷ್ಟೋ ಹೆಣ್ಣು ಮಕ್ಕಳ ಜೀವ ಹಾಳಾಗುತ್ತೆ ಎಂದು ತನಗೆ ಆದ ಅಪಮಾನ ಹಾಗೂ ಮಾನಸಿಕ ಹಿಂಸೆಯ ಕುರಿತು ಬರೆದಿಟ್ಟಿದ್ದಾಳೆ.

ಶವವಿಟ್ಟು ಗ್ರಾಮಸ್ಥರ ಪ್ರತಿಭಟನೆ

ಈ ವಿಷಯ ತಿಳಿಯುತ್ತಿದ್ದ ಆಕ್ರೋಶಗೊಂಡ ಚಂದಗಾಲು ಗ್ರಾಮಸ್ಥರು ಮಹದೇವನಾಯಕರ ಮೃತದೇಹವನ್ನು ರಸ್ತೆಯಲ್ಲಿಟ್ಟು ಪ್ರತಿಭಟನೆ ನಡೆಸಿದರು. ಕೆ.ಆರ್.ನಗರ ಮುಖ್ಯರಸ್ತೆಯಲ್ಲಿ ಶವ ಇಟ್ಟು ಪ್ರತಿಭಟಿಸಿ, ಆರೋಪಿಗೆ ಉಗ್ರ ಶಿಕ್ಷೆ ಕೊಡಬೇಕೆಂದು ಆಗ್ರಹಿಸಿದರು. ನಿರ್ಲಕ್ಷ್ಯ ವಹಿಸಿದ ಪೊಲೀಸರ ಮೇಲೂ ಕಠಿಣ ಕ್ರಮ ಆಗಬೇಕೆಂದರು. ರಸ್ತೆ ತಡೆಯಿಂದಾಗಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Election Results 2024: ಟಾರ್ಗೆಟ್ 20 ರೀಚ್ ಆಗಲು ವಿಫಲ; ಎಐಸಿಸಿಯಿಂದ ಪರಾಮರ್ಶೆ ಸಮಿತಿ, ಸಚಿವರ ಮೇಲೆ ತೂಗುಗತ್ತಿ!

Election Results 2024: ರಾಜ್ಯದ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಹಿನ್ನಡೆಗೆ ಕಾರಣಗಳನ್ನು ತಿಳಿಯಲು ಎಐಸಿಸಿಯಿಂದ ಪರಾಮರ್ಶೆ ಸಮಿತಿ ರಚನೆ‌ ಮಾಡಲಾಗಿದೆ. ಇದರಿಂದ ಲೀಡ್ ಕಡಿಮೆ ಆಗಿರುವ ಕ್ಷೇತ್ರಗಳ ಸಚಿವರಿಗೆ ಢವ ಢವ ಶುರುವಾಗಿದೆ. ಪರಾಮರ್ಶೆ ಬಳಿಕ ಹಲವರ ಸಚಿವ ಸ್ಥಾನಕ್ಕೆ ಕುತ್ತು ಬರುವ ಆತಂಕ ಎದುರಾಗಿದೆ.

VISTARANEWS.COM


on

Election Results 2024
Koo

ಬೆಂಗಳೂರು: ರಾಜ್ಯದ ಲೋಕಸಭಾ ಚುನಾವಣೆಯಲ್ಲಿ (Lok sabha Election 2024) ಟಾರ್ಗೆಟ್ 20 ರೀಚ್ ಆಗದೆ ಪಕ್ಷಕ್ಕೆ ಹಿನ್ನಡೆ ಆಗಿರುವುದನ್ನು ಕಾಂಗ್ರೆಸ್‌ ಹೈಕಮಾಂಡ್ ಗಂಭೀರವಾಗಿ ತೆಗೆದುಕೊಂಡಿದೆ. ಗ್ಯಾರಂಟಿ ಕೊಟ್ಟರೂ ನಿರೀಕ್ಷಿತ ಗುರಿ ಮುಟ್ಟಲು ವಿಫಲವಾದ ಹಿನ್ನೆಲೆಯಲ್ಲಿ ಪರಾಮರ್ಶೆ ಸಮಿತಿ ರಚನೆಗೆ ಎಐಸಿಸಿ ನಿರ್ಧಾರ ಮಾಡಿದೆ. ಸಮಿತಿಯು ಎಐಸಿಸಿ ಹಾಗೂ ರಾಜ್ಯದ ಹಿರಿಯ ನಾಯಕರನ್ನು ಒಳಗೊಳ್ಳಲಿದ್ದು, ಪ್ರತಿ ವಿಧಾನಸಭಾವಾರು ಮತ ಪ್ರಮಾಣ ಕಲೆ ಹಾಕಲು ಪ್ಲ್ಯಾನ್ ಮಾಡಲಾಗಿದೆ. ಚುನಾವಣೆಯಲ್ಲಿ (Election Results 2024) ಯಾಕೆ ಲೀಡ್ ಕಡಿಮೆ ಆಯಿತು ಎಂಬ ಮಾಹಿತಿ ಸಂಗ್ರಹಿಸಿ ಎಐಸಿಸಿಗೆ ಸಮಿತಿಯು ವರದಿ ಸಲ್ಲಿಕೆ ಮಾಡಲಿದೆ.

ಎಐಸಿಸಿಯಿಂದ ಪರಾಮರ್ಶೆ ಸಮಿತಿ ರಚನೆ‌ ಬೆನ್ನಲ್ಲೇ ಲೀಡ್ ಕಡಿಮೆ ಆಗಿರುವ ಕ್ಷೇತ್ರಗಳ ಸಚಿವರಿಗೆ ಢವ ಢವ ಶುರುವಾಗಿದೆ. ಪರಾಮರ್ಶೆ ಬಳಿಕ ಸಚಿವ ಸ್ಥಾನಕ್ಕೆ ಕುತ್ತು ಬರುವ ಆತಂಕ ಎದುರಾಗಿದೆ. ಹೀಗಾಗಿ ಆತಂಕದಿಂದ ಕೆಲ ಸಚಿವರು ಒಂದಷ್ಟು ಸೇಫ್ ಗೇಮ್ ಪ್ಲ್ಯಾನ್ ಮಾಡಿದ್ದಾರೆ.

ಇದನ್ನೂ ಓದಿ | Congress Guarantee: ಗ್ಯಾರಂಟಿ ನಿಲ್ಲಿಸುವ ಮಾತು ಬೇಡ: ಕೈ ನಾಯಕರಿಗೆ ಎಚ್.ಎಂ ರೇವಣ್ಣ ಎಚ್ಚರಿಕೆ

ಸಚಿವರ ಸೇಫ್ ಗೇಮ್ ಪ್ಲ್ಯಾನ್ ಏನು?

ಚುನಾವಣೆಯಲ್ಲಿ ಪಕ್ಷ ಯಾಕೆ ಸೋತಿದೆ ಎಂಬ ಬಗ್ಗೆ ವಿವರಣೆ ನೀಡಲು ಸಚಿವರು ಕೆಲ ಅಂಶಗಳನ್ನು ಹೈಕಮಾಂಡ್‌ ಮುಂದಿಡಲು ಚಿಂತನೆ ನಡೆಸಿದ್ದಾರೆ. ಈ ಮೂಲಕ ಹೈ ಕಮಾಂಡ್‌ ಕೋಪಕ್ಕೆ ಗುರಿಯಾಗದೇ ಸೇಫ್‌ ಆಗಲು ಪ್ಲ್ಯಾನ್‌ ಮಾಡಿದ್ದಾರೆ. ಅವುಗಳಲ್ಲಿ ಪ್ರಮುಖವಾದವುಗಳೆಂದರೆ…

  • ಸಮುದಾಯವಾರು ಡಿಸಿಎಂ ಹುದ್ದೆ ಸೃಷ್ಟಿ ಮಾಡಿಲ್ಲ
  • ಎಸ್ಸಿ, ಎಸ್ಟಿ, ಲಿಂಗಾಯತ, ಮುಸ್ಲಿಂ ಸಮುದಾಯಕ್ಕೆ ಡಿಸಿಎಂ ಹುದ್ದೆಗೆ ಬೇಡಿಕೆ
  • ಡಿಸಿಎಂ ಹುದ್ದೆ ನೀಡಿದ್ದರೆ ಪಕ್ಷಕ್ಕೆ ಅನುಕೂಲ ಆಗುತ್ತಿತ್ತು
  • ಈ ಚುನಾವಣೆಯಲ್ಲಿ ಅಹಿಂದ ಮತ ಬ್ಯಾಂಕ್ ಕಾಂಗ್ರೆಸ್ ಪಕ್ಷದ ಬೆನ್ನಿಗೆ ನಿಂತಿದೆ
  • ಒಕ್ಕಲಿಗ- ಲಿಂಗಾಯತ ಸಮುದಾಯ ಮೈತ್ರಿಕೂಟ ಜೊತೆ ಹೋಗಿದೆ
  • ಸಮುದಾಯವಾರು ಡಿಸಿಎಂ ಹುದ್ದೆ ಕೊಟ್ಟಿದ್ದರೆ ಲಾಭ ಆಗುತ್ತಿತ್ತು
  • ಹಳೆ ಮೈಸೂರು ಭಾಗದಲ್ಲಿ ಒಕ್ಕಲಿಗ ಸಮುದಾಯ ಬೆಂಬಲ ಸಿಕ್ಕಿಲ್ಲ
  • ಗ್ಯಾರಂಟಿಗಳ ಪ್ರಚಾರ ಎಫೆಕ್ಟಿವ್ ಆಗಿ ಆಗಿಲ್ಲ
  • ಜೆಡಿಎಸ್- ಬಿಜೆಪಿ ಮೈತ್ರಿಕೂಟ ಸರಿ ಸುಮಾರು 10 ಕ್ಷೇತ್ರಗಳಲ್ಲಿ ಆಗಿದೆ

ಯಾವ ಸಚಿವರ ಮೇಲೆ ಪರಾಮರ್ಶೆ ತೂಗುಗತ್ತಿ

ಬೆಂಗಳೂರು ಸೆಂಟ್ರಲ್ ಕ್ಷೇತ್ರ

ಸಚಿವ ದಿನೇಶ್ ಗುಂಡೂರಾವ್ – ಗಾಂಧಿನಗರ ಕ್ಷೇತ್ರ
ಪಿ.ಸಿ ಮೋಹನ್, ಬಿಜೆಪಿ – 74,447
ಮನ್ಸೂರ್ ಖಾನ್, ಕಾಂಗ್ರೆಸ್ – 51,123
ಬಿಜೆಪಿ ಲೀಡ್ – 23,324

ಕೋಲಾರ ಲೋಕಸಭಾ ಕ್ಷೇತ್ರ

ಸಚಿವ ಎಂಸಿ ಸುಧಾಕರ್ – ಚಿಂತಾಮಣಿ ಕ್ಷೇತ್ರ
ಕೆ.ವಿ. ಗೌತಮ್, ಕಾಂಗ್ರೆಸ್ – 82,206
ಮಲ್ಲೇಶ್ ಬಾಬು, ಜೆಡಿಎಸ್ – 89,456
ಜೆಡಿಎಸ್ ಲೀಡ್ – 7,250

ಶಿವಮೊಗ್ಗ ಲೋಕಸಭಾ ಕ್ಷೇತ್ರ

ಸಚಿವ ಮಧು ಬಂಗಾರಪ್ಪ – ಸೊರಬ ಕ್ಷೇತ್ರ
ಗೀತಾ ಶಿವರಾಜ್ ಕುಮಾರ್ – 70233
ಬಿವೈ ರಾಘವೇಂದ್ರ – 88170
ಬಿಜೆಪಿ ಲೀಡ್ – 17937

ಬೆಂಗಳೂರು ದಕ್ಷಿ‌ಣ ಲೋಕಸಭಾ ಕ್ಷೇತ್ರ

ಸಚಿವ ರಾಮಲಿಂಗಾರೆಡ್ಡಿ – ಬಿಟಿಎಂ ಲೇಔಟ್ ಕ್ಷೇತ್ರ
ತೇಜಸ್ವಿ ಸೂರ್ಯ, ಬಿಜೆಪಿ – 72,541
ಸೌಮ್ಯ ರೆಡ್ಡಿ, ಕಾಂಗ್ರೆಸ್ – 63,192
ಬಿಜೆಪಿ ಲೀಡ್ -‌ 9,349

ಧಾರವಾಡ ಲೋಕಸಭಾ ಕ್ಷೇತ್ರ

ಸಚಿವ ಸಂತೋಷ್ ಲಾಡ್ – ಕಲಘಟಗಿ ಕ್ಷೇತ್ರ
ಪ್ರಹ್ಲಾದ್ ಜೋಶಿ, ಬಿಜೆಪಿ – 96,402
ವಿನೋದ್ ಅಸೂಟಿ, ಕಾಂಗ್ರೆಸ್ – 63,665
ಬಿಜೆಪಿ ಲೀಡ್ – 32,737

ತುಮಕೂರು ಲೋಕಸಭಾ ಕ್ಷೇತ್ರ

ಸಚಿವ ಡಾ.‌ಜಿ ಪರಮೇಶ್ವರ್ – ಕೊರಟಗೆರೆ ಕ್ಷೇತ್ರ
ವಿ. ಸೋಮಣ್ಣ, ಬಿಜೆಪಿ – 93,446
ಮುದ್ದಹನುಮೇಗೌಡ – 67,905
ಬಿಜೆಪಿ ಲೀಡ್ – 25,541

ಸಚಿವ ಕೆ.ಎನ್ ರಾಜಣ್ಣ – ಮಧುಗಿರಿ ಕ್ಷೇತ್ರ

ವಿ. ಸೋಮಣ್ಣ, ಬಿಜೆಪಿ -77,494
ಮುದ್ದಹನುಮೇಗೌಡ – 66,692
ಬಿಜೆಪಿ ಲೀಡ್ – 12,802

ಮಂಡ್ಯ ಲೋಕಸಭಾ ಕ್ಷೇತ್ರ

ಸಚಿವ ಚೆಲುವರಾಯಸ್ವಾಮಿ – ನಾಗಮಂಗಲ ಕ್ಷೇತ್ರ
ಕುಮಾರಸ್ವಾಮಿ, ಜೆಡಿಎಸ್ -1,13,087
ಸ್ಟಾರ್ ಚಂದ್ರು, ಕಾಂಗ್ರೆಸ್ – 66,576
ಜೆಡಿಎಸ್ ಲೀಡ್ – 46,511

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ

ಸಚಿವ ಮಂಕಾಳ ವೈದ್ಯ – ಭಟ್ಕಳ ಕ್ಷೇತ್ರ
ವಿಶ್ವೇಶ್ವರ ಹೆಗಡೆ ಕಾಗೇರಿ – 1,00,288
ಅಂಜಲಿ ನಿಂಬಾಳ್ಕರ್, ಕಾಂಗ್ರೆಸ್ – 67,885
ಬಿಜೆಪಿ ಲೀಡ್ – 32,343

ಬೆಳಗಾವಿ ಲೋಕಸಭಾ ಕ್ಷೇತ್ರ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ – ಬೆಳಗಾವಿ ಗ್ರಾಮೀಣ ಕ್ಷೇತ್ರ
ಜಗದೀಶ ಶೆಟ್ಟರ್ – 1,24,970
ಮೃಣಾಲ್ ಹೆಬ್ಬಾಳ್ಕರ್‌ – 74,441
ಬಿಜೆಪಿ ಲೀಡ್ – 50,529

ವಿಜಯಪುರ ಲೋಕಸಭಾ ಕ್ಷೇತ್ರ

ಸಚಿವ ಶಿವಾನಂದ ಪಾಟೀಲ್‌ – ಬಸವನ ಬಾಗೇವಾಡಿ ಕ್ಷೇತ್ರ
ರಮೇಶ ಜಿಗಜಿಣಗಿ,ಬಿಜೆಪಿ – 83916
ರಾಜು ಆಲಗೂರ, ಕಾಂಗ್ರೆಸ್ – 66363
ಬಿಜೆಪಿ ಲೀಡ್ – 17553

ಸಚಿವ ಎಂ.ಬಿ. ಪಾಟೀಲ್ – ಬಬಲೇಶ್ವರ ಕ್ಷೇತ್ರ

ರಮೇಶ ಜಿಗಜಿಣಗಿ ಬಿಜೆಪಿ – 79002
ರಾಜು ಆಲಗೂರ್ ಕಾಂಗ್ರೆಸ್ – 75651
ಬಿಜೆಪಿ ಲೀಡ್ – 3351

ಬೆಂಗಳೂರು ಉತ್ತರ ಕ್ಷೇತ್ರ

ಸಚಿವ ಕೃಷ್ಣಬೈರೇಗೌಡ – ಬ್ಯಾಟರಾಯನಪುರ ಕ್ಷೇತ್ರ
ಶೋಭ ಕರಂದ್ಲಾಜೆ, ಬಿಜೆಪಿ – 1,64,574
ರಾಜೀವ್ ಗೌಡ, ಕಾಂಗ್ರೆಸ್ – 1,29,523
ಬಿಜೆಪಿ ಲೀಡ್ – 35,051

ಚಿತ್ರದುರ್ಗ ಲೋಕಸಭಾ ಕ್ಷೇತ್ರ

ಸಚಿವ ಡಿ. ಸುಧಾಕರ್ – ಹಿರಿಯೂರು‌ ಕ್ಷೇತ್ರ
ಗೋವಿಂದ ಕಾರಜೋಳ, ಬಿಜೆಪಿ – 88,794
ಬಿಎನ್ ಚಂದ್ರಪ್ಪ, ಕಾಂಗ್ರೆಸ್- 82,597
ಬಿಜೆಪಿ ಲೀಡ್ – 6197

Continue Reading

ಬೆಂಗಳೂರು

UGCET 2024: ಸಿಇಟಿ ಅಪ್‌ಡೇಟ್‌; ಮೊದಲ ದಿನ 250 ವಿಕಲಚೇತನರ ವೈದ್ಯಕೀಯ ತಪಾಸಣೆ

UGCET 2024: ವೈದ್ಯಕೀಯ, ಎಂಜಿನಿಯರಿಂಗ್‌ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳಿಗೆ ವಿಕಲಚೇತನಾ ಕೋಟಾದಲ್ಲಿ ಮೀಸಲಾತಿ ಕ್ಲೇಮ್‌ ಮಾಡಿರುವ ಅಭ್ಯರ್ಥಿಗಳಿಗೆ (UGCET 2024) ಜೂನ್‌ 10 ರಿಂದ 12ರವರೆಗೆ ವೈದ್ಯಕೀಯ ತಪಾಸಣೆಯನ್ನು (Medical Test) ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಆಯೋಜಿಸಿದೆ.

VISTARANEWS.COM


on

By

UGCET 2024
Koo

ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್‌ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳಿಗೆ (UGCET 2024) ವಿಕಲಚೇತನಾ ಕೋಟಾದಲ್ಲಿ ಮೀಸಲಾತಿ ಕ್ಲೇಮ್‌ ಮಾಡಿರುವ ಅಭ್ಯರ್ಥಿಗಳ ವೈದ್ಯಕೀಯ ತಪಾಸಣೆಯು ಜೂ.10 ಸೋಮವಾರದಿಂದ ಆರಂಭವಾಯಿತು. ಮಲ್ಲೇಶ್ವರದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಚೇರಿಯಲ್ಲಿ ನಡೆಯುತ್ತಿರುವ ವೈದ್ಯಕೀಯ ತಪಾಸಣೆಗೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ಚಾಲನೆ ನೀಡಿದರು.

ಬೌರಿಂಗ್ ಮತ್ತು ವಿಕ್ಟೋರಿಯಾ ಆಸ್ಪತ್ರೆಯಿಂದ ಬಂದಿದ್ದ ಆರು ಮಂದಿ ಮೂಳೆ ರೋಗ ಮತ್ತು ಕಣ್ಣು- ಮೂಗು-ಕಿವಿ (ಇಎನ್ ಟಿ) ತಜ್ಞ ವೈದ್ಯರು ಅಭ್ಯರ್ಥಿಗಳನ್ನು ತಪಾಸಣೆ ಮಾಡಿ, ದಾಖಲೆಗಳನ್ನು ಪರಿಶೀಲಿಸಿದರು. ಇದನ್ನು ಖುದ್ದು ಪ್ರಸನ್ನ ಅವರು ಮೇಲ್ವಿಚಾರಣೆ ನಡೆಸಿದರು.

ಇನ್ನೂ ಸಿಇಟಿಗೆ ಅರ್ಜಿ ಸಲ್ಲಿಸುವಾಗ ಒಟ್ಟು 783 ಮಂದಿ ವಿಕಲಚೇತನರ ಕೋಟಾದಲ್ಲಿ ಮೀಸಲಾತಿ ಕ್ಲೇಮ್‌ ಮಾಡಿದ್ದು, ಅಷ್ಟೂ ಮಂದಿಗೆ ಇದೇ 12ರ ವರೆಗೆ ತಪಾಸಣೆ ನಡೆಸಲಾಗುತ್ತದೆ. ಮೊದಲ ದಿನ 250 ಮಂದಿಗೆ ಬರಲು ಸೂಚಿಸಲಾಗಿದೆ ಎಂದು ಪ್ರಸನ್ನ ತಿಳಿಸಿದ್ದಾರೆ.

UGCET 2024

ಕಣ್ಣಿನ ಸಮಸ್ಯೆ ಇರುವವರ ತಪಾಸಣೆ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ನಡೆಯುತ್ತಿದ್ದು, ಅಲ್ಲಿಗೆ ಕೆಇಎ ಸಿಬ್ಬಂದಿಯೇ ಅಂತಹವರನ್ನು ವಾಹನದಲ್ಲಿ ಕರೆದೊಯ್ಯುವ ಕೆಲಸ ಮಾಡಲಾಗಿದೆ. ವೈದ್ಯಕೀಯ ಸಮಿತಿಯು ಪರಿಶೀಲಿಸಿ ನೀಡುವ ವಿಕಲಚೇತನರ ಅರ್ಹತೆ ವಿಷಯದಲ್ಲಿ ವೈದ್ಯಕೀಯ ಸಮಿತಿಯ ನಿರ್ಧಾರವೇ ಅಂತಿಮವಾಗಿರಲಿದೆ.

ದಾಖಲೆ ಏನು ತರಬೇಕು?

ಯುಜಿಸಿಇಟಿ ಅರ್ಜಿಯ ಪ್ರತಿ, ಪ್ರವೇಶ ಪತ್ರ, ಅಭ್ಯರ್ಥಿಯ ಭಾವಚಿತ್ರ ಇರುವ ಗುರುತಿನ ಚೀಟಿ, ವೈದ್ಯಕೀಯ ಪ್ರಮಾಣಪತ್ರ, ಕಿವುಡುತನದ ಸಮಸ್ಯೆ ಇರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಅಖಿಲ ಭಾರತ ವಾಕ್‌ ಮತ್ತು ಶ್ರವಣ ಸಂಸ್ಥೆಯಿಂದ ಪಡೆದ ಪ್ರಮಾಣ ಪತ್ರಗಳನ್ನು ತಪಾಸಣೆ ಸಂದರ್ಭದಲ್ಲಿ ತಂದಿರಬೇಕು. ಅಭ್ಯರ್ಥಿಗಳು ಬೆಳಗ್ಗೆ 9:30ಕ್ಕೆ ವರದಿ ಮಾಡಿಕೊಳ್ಳಬೇಕು. 10 ಗಂಟೆಯಿಂದ ವೈದ್ಯಕೀಯ ತಪಾಸಣೆ ನಡೆಯಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮೈಸೂರು

Murder Case : ಮೈಸೂರಿನಲ್ಲಿ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿಯ ಬರ್ಬರ ಕೊಲೆ

Murder case : ಮೈಸೂರಿನಲ್ಲಿ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿಯನ್ನು ಅವರ ಸಹಾಯಕನೇ ಬರ್ಬರವಾಗಿ ಕೊಂದಿದ್ದಾನೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

VISTARANEWS.COM


on

By

murder case
Koo

ಮೈಸೂರು: ಮೈಸೂರಿನಲ್ಲಿ ಹಿರಿಯ ಸ್ವಾಮೀಜಿಯೊಬ್ಬರ ಬರ್ಬರ (Murder case) ಕೊಲೆಯಾಗಿದೆ. ಮೈಸೂರಿನ ಸಿದ್ದಾರ್ಥನಗರದಲ್ಲಿರುವ ಅನ್ನದಾನೇಶ್ವರ ಮಠದ ಶಿವಾನಂದ (90) ಸ್ವಾಮೀಜಿ ಕೊಲೆಯಾದವರು.

ಶಿವಾನಂದ ಸ್ವಾಮೀಜಿ ಅವರ ಸಹಾಯಕನಾಗಿದ್ದ ಭದ್ರತಾ ಸಿಬ್ಬಂದಿಯಿಂದಲೇ ಕೊಲೆ ನಡೆದಿದೆ. ರವಿ (60) ಎಂಬಾತನಿಂದ ಈ ಕೃತ್ಯ ನಡೆದಿದೆ. ಶಿವಾನಂದ ಸ್ವಾಮೀಜಿಯನ್ನು ಮಾರಕಾಸ್ತ್ರದಿಂದ ಚುಚ್ಚಿ ಕೊಲೆ ಮಾಡಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನಜರ್‌ಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಮಂಚದ ಮೇಲೆ ಮಲಗಿದ್ದಲ್ಲೇ ಶಿವಾನಂದ ಸ್ವಾಮೀಜಿಗೆ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಇದನ್ನೂ ಓದಿ: Physical Abuse : ಪಿಕ್‌ ಅಪ್, ಡ್ರಾಪ್ ನೆಪದಲ್ಲಿ ಸಲುಗೆ; ಅಂಕಲ್ ಗಾಳಕ್ಕೆ ಸಿಲುಕಿದ ಬಾಲಕಿಯ ನರಳಾಟ

ಹಾಸನದಲ್ಲಿ ಕಾರಿನಿಂದ ಗುದ್ದಿಸಿ ವ್ಯಕ್ತಿಯ ಕೊಲೆ

ಹಾಲಿನ ಡೈರಿ ವಿಚಾರದಲ್ಲಿ ಗಲಾಟೆ ಹಿನ್ನೆಲೆಯಲ್ಲಿ ಕಾರಿನಿಂದ ಗುದ್ದಿಸಿ ವ್ಯಕ್ತಿಯ ಬರ್ಬರ ಕೊಲೆ ಮಾಡಲಾಗಿದೆ. ಹಾಸನ ತಾಲೂಕಿನ ದುದ್ದ ಸಮೀಪದ ಮಾಯಸಮುದ್ರ ಗ್ರಾಮದ ಬಳಿ ಘಟನೆ ನಡೆದಿದೆ. ಉದ್ದೂರುಹಳ್ಳಿ ಗ್ರಾಮದ ನಿವಾಸಿ ಅಣ್ಣಪ್ಪ(64) ಸ್ಥಳದಲ್ಲೆ ಮೃತಪಟ್ಟರೆ, ಮಂಜುನಾಥ ಎಂಬುಬಬರಿಗೆ ಗಂಭೀರ ಗಾಯವಾಗಿದೆ.

ಉದ್ದೂರುಹಳ್ಳಿಯ ಧರ್ಮ ಹಾಗು ಆತನ ಸಂಬಂಧಿ ಚಿದಾನಂದ್ ಎಂಬಾತನಿಂದ ಕೊಲೆ ನಡೆದಿದೆ ಎನ್ನಲಾಗಿದೆ. ಹಾಲಿನ ಡೈರಿಯಲ್ಲಿ ಕೆಲಸ ಮಾಡುವ ವಿಚಾರಕ್ಕೆ ಧರ್ಮ ಹಾಗು ಮಂಜುನಾಥ ನಡುವೆ ಗಲಾಟೆ ನಡೆದಿತ್ತು. ಗಲಾಟೆಯನ್ನೇ ಮನಸ್ಸಿನಲ್ಲಿಟ್ಟುಕೊಂಡ ಆರೋಪಿಗಳು ಇನ್ನೋವಾ ಕಾರಿನಿಂದ ಗುದ್ದಿಸಿ ಕೊಂದಿದ್ದಾರೆ. ಅದೃಷ್ಟವಶಾತ್ ಅಪಾಯದಿಂದ ಮಂಜುನಾಥ ಪಾರಾಗಿದ್ದರೆ, ಅಣ್ಣಪ್ಪ ಮೃತಪಟ್ಟಿದ್ದಾರೆ.

ಹಂತಕರು ಕೊಲೆಗೈದು ಎಸ್ಕೇಪ್ ಆಗಿದ್ದು, ದುದ್ದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ. ಗಾಯಾಳು ಮಂಜುನಾಥ್‌ನನ್ನು ಹಾಸನದ ವೈದ್ಯಕೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Yuva Rajkumar divorce reaction by shiva Rajkumar
ಸ್ಯಾಂಡಲ್ ವುಡ್1 min ago

Yuva Rajkumar: ಸತ್ಯವಾಗಿಯೂ ʻಯುವʼ ಡಿವೋರ್ಸ್‌ ವಿಚಾರ ನಮಗೆ ಗೊತ್ತಿಲ್ಲ ಎಂದ ಶಿವಣ್ಣ!

Self Harming
ರಾಯಚೂರು6 mins ago

Self Harming : ಮಾನಸಿಕ ಖಿನ್ನತೆ; ಮಗಳ ಜತೆ ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ

Narendra Modi 3.20
ಪ್ರಮುಖ ಸುದ್ದಿ49 mins ago

Narendra Modi 3.0 : ಮೋದಿ ಅಧಿಕಾರಕ್ಕೆ ಬಾರದಿರಲಿ ಎಂದು ಕಾದು ಕೂತು, ಕೊನೆಗೂ ಅಭಿನಂದನೆ ತಿಳಿಸಿದ ಪಾಕಿಸ್ತಾನ!

Election Results 2024
ಕರ್ನಾಟಕ52 mins ago

Election Results 2024: ಟಾರ್ಗೆಟ್ 20 ರೀಚ್ ಆಗಲು ವಿಫಲ; ಎಐಸಿಸಿಯಿಂದ ಪರಾಮರ್ಶೆ ಸಮಿತಿ, ಸಚಿವರ ಮೇಲೆ ತೂಗುಗತ್ತಿ!

Yuva Rajkumar Allegation of cruelty against wife
ಸ್ಯಾಂಡಲ್ ವುಡ್1 hour ago

Yuva Rajkumar: ರಾಘಣ್ಣ ದಂಪತಿ ವಿರೋಧದ ನಡುವೆಯೂ ಯುವನಿ​ಗೆ ಮದ್ವೆ ಮಾಡಿಸಿದ್ದು ‘ಅಪ್ಪು’!

UGCET 2024
ಬೆಂಗಳೂರು1 hour ago

UGCET 2024: ಸಿಇಟಿ ಅಪ್‌ಡೇಟ್‌; ಮೊದಲ ದಿನ 250 ವಿಕಲಚೇತನರ ವೈದ್ಯಕೀಯ ತಪಾಸಣೆ

Reasi Terror Attack
ಪ್ರಮುಖ ಸುದ್ದಿ1 hour ago

Reasi Terror Attack : ಉಗ್ರರ ಮುಂದೆ ಸತ್ತಂತೆ ನಟಿಸಿ ಬದುಕುಳಿದ ಹಿಂದೂ ಯಾತ್ರಿಗಳು…

murder case
ಮೈಸೂರು1 hour ago

Murder Case : ಮೈಸೂರಿನಲ್ಲಿ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿಯ ಬರ್ಬರ ಕೊಲೆ

pm narendra modi leopord
ಪ್ರಮುಖ ಸುದ್ದಿ1 hour ago

PM Narendra Modi: ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ಕಾಣಿಸಿಕೊಂಡ ನಿಗೂಢ ಪ್ರಾಣಿ! ವಿಡಿಯೋ ಇದೆ ನೋಡಿ

Yuva Rajkumar son of raghavendra Rajkumar yuva divorce
ಸ್ಯಾಂಡಲ್ ವುಡ್2 hours ago

Yuva Rajkumar: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಯುವ ರಾಜ್​ಕುಮಾರ್​ ; ಅಣ್ಣಾವ್ರ ಕುಟುಂಬದಲ್ಲಿ ಇದೇ ಮೊದಲ ಪ್ರಕರಣ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ7 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌