7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ - Vistara News

ಕರ್ನಾಟಕ

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

ಸರ್ಕಾರಿ ಕಚೇರಿಗಳ ಕೆಲಸದ ಅವಧಿಯನ್ನು ಒಂದು ಗಂಟೆ ಹೆಚ್ಚಿಸಿ ವಾರದ ಒಟ್ಟು ಕೆಲಸದ ದಿನಗಳ ಸಂಖ್ಯೆಯನ್ನು ಐದಕ್ಕೆ ಇಳಿಸಬೇಕು ಎನ್ನುವ ಮಹತ್ವದ ಬೇಡಿಕೆಯನ್ನು ರಾಜ್ಯ ಸರ್ಕಾರಿ ನೌಕರರ ಸಂಘ ಏಳನೇ ವೇತನ ಆಯೋಗದ (7th pay commission) ಮುಂದಿಟ್ಟಿದೆ.

VISTARANEWS.COM


on

Govt employees ssociation
ಸರ್ಕಾರಿ ನೌಕರರ ಸಂಘ ವತಿಯಿಂದ ಏಳನೇ ವೇತನ ಆಯೋಗದ ಅಧ್ಯಕ್ಷರಿಗೆ ಶಿಫಾರಸುಗಳನ್ನು ಸಲ್ಲಿಸಲಾಯಿತು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ, ಸಂಘದ ಹಿರಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ಸರ್ಕಾರಿ ಕಚೇರಿಗಳ ಕೆಲಸ ಅವಧಿಯನ್ನು ಈಗಿರುವ ಏಳುವರೆ ಗಂಟೆ ಬದಲಾಗಿ ಎಂಟುವರೆ ಗಂಟೆಗೆ ವಿಸ್ತರಿಸಿ, ತಿಂಗಳ ಮೊದಲ ಮತ್ತು ಕೊನೆಯ ಶನಿವಾರ ಸಾರ್ವತ್ರಿಕ ರಜೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೇಡಿಕೆ ಮುಂದಿಟ್ಟಿದೆ. ಈಗಾಗಲೇ ವಾರದ ಎರಡನೇ ಮತ್ತು ನಾಲ್ಕನೇ ಶನಿವಾರ ಸರ್ಕಾರಿ ಕಚೇರಿಗಳಿಗೆ ರಜೆ ಇರುವುದರಿಂದ ಸಂಘವು ವಾರಕ್ಕೆ ಐದು ದಿನದ ಕೆಲಸಕ್ಕೆ ಬೇಡಿಕೆ ಇಟ್ಟಂತಾಗಿದೆ. ಕರ್ನಾಟಕ ರಾಜ್ಯ 7ನೇ ವೇತನ ಆಯೋಗದ (7th pay commission) ಪ್ರಶ್ನಾವಳಿಗಳಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ನೀಡಲಾದ ಉತ್ತರದಲ್ಲಿ ಈ ಬೇಡಿಕೆಯನ್ನು ಮುಂದಿಡಲಾಗಿದೆ.

ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆಗಾಗಿ ಸರ್ಕಾರ ನಿವೃತ್ತ ಮುಖ್ಯ ಕಾರ್ಯದರ್ಶಿಗಳಾದ ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ ರಾಜ್ಯ 7ನೇ ವೇತನ ಆಯೋಗವನ್ನು ರಚಿಸಿತ್ತು. ಈ ಕುರಿತು ಶಿಫಾರಸುಗಳನ್ನು ಮಾಡುವ ಮುನ್ನ ಸರ್ಕಾರಿ ನೌಕರರ ಬೇಡಿಕೆಗಳ ಬಗ್ಗೆ ಅರಿಯುವುದಕ್ಕಾಗಿ, ರಾಜ್ಯ ಸರ್ಕಾರಿ ವೇತನ ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ವೇತನ ಆಯೋಗವು ೨೦೨೩ರ ಜನವರಿ ೧೭ರಂದು ಪ್ರಶ್ನಾವಳಿಗಳನ್ನು ಬಿಡುಗಡೆಗೊಳಿಸಿ ಸರ್ಕಾರಿ ನೌಕರರ ಸಂಘದಿಂದ ಉತ್ತರ, ಅಭಿಪ್ರಾಯ ಮತ್ತು ಸಲಹೆಗಳನ್ನು ಕೇಳಿತ್ತು.

ಅದರಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯದ್ಯಂತ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ-ನೌಕರರಿಂದ ಮಾಹಿತಿಗಳನ್ನು ಸಂಗ್ರಹಿಸಿ ೬೫ ಪುಟಗಳ ವರದಿಯನ್ನು ತಯಾರಿಸಿತ್ತು. ಫೆಬ್ರವರಿ ೧೦ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ, ಸಂಘದ ಹಿರಿಯ ಪದಾಧಿಕಾರಿಗಳು ಮತ್ತು ವೃಂದ ಸಂಘದ ಅಧ್ಯಕ್ಷರ ನಿಯೋಗವು ಈ ವರದಿಯನ್ನು ವೇತನ ಆಯೋಗದ ಅಧ್ಯಕ್ಷರು, ಕಾರ್ಯದರ್ಶಿಗಳು ಮತ್ತು ಸದಸ್ಯರಿಗೆ ಒಪ್ಪಿಸಿತು.

ರಾಜ್ಯ 7ನೇ ವೇತನ ಆಯೋಗದ ಪ್ರಶ್ನಾವಳಿಗಳಿಗೆ ಸಲ್ಲಿಸಲಾದ ಉತ್ತರಗಳ ಮುಖ್ಯಾಂಶಗಳು

1. ಹೊಸ ವೇತನ ಶ್ರೇಣಿಗಳ ರಚನೆಗೆ ಅಳವಡಿಸಿಕೊಳ್ಳುವ ಮಾನದಂಡಗಳೇನಿರಬೇಕು?
– ಸಮಾನ ಕೆಲಸಕ್ಕೆ ಸಮಾನ ವೇತನ, ವಿದ್ಯಾರ್ಹತೆ, ಜವಾಬ್ದಾರಿಯ ಗುಣಮಟ್ಟ, ಕಾರ್ಯಕ್ಷಮತೆ, ಕಾರ್ಯಕ್ಷೇತ್ರದ ವ್ಯಾಪ್ತಿ, ಜೊತೆಗೆ ನೆರೆ ರಾಜ್ಯ ಮತ್ತು ಕೇಂದ್ರ ವೇತನ ಮತ್ತು ಭತ್ಯೆಗಳ ಹೋಲಿಕೆ ಮಾಡಬೇಕು.

2. ಕಚೇರಿ ವೇಳೆಯನ್ನು ಹೆಚ್ಚಿಸಿ, ವಾರದ ಕರ್ತವ್ಯ ದಿನಗಳನ್ನು ಕಡಿಮೆ ಮಾಡುವ ಬಗ್ಗೆ
ಸರ್ಕಾರಕ್ಕೆ ಸಾರಿಗೆ, ವಿದ್ಯುತ್, ನೀರು, ಟ್ರಾಫಿಕ್, ಸರ್ಕಾರಿ ವಾಹನಗಳ ಇಂಧನ ಹಾಗೂ ವೆಚ್ಚದಲ್ಲಿ ಆರ್ಥಿಕ ಮಿತವ್ಯಯ ಸಾಧಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರಿ ನಿರ್ವಹಣೆ ನೌಕರರಿಗಿರುವಂತೆ-
– ಬೆಳಗ್ಗೆ 10.00ಕ್ಕೆ ಬದಲಾಗಿ ಬೆಳಿಗ್ಗೆ 9.30ರಿಂದ ಹಾಗೂ ಸಂಜೆ 5.30ಕ್ಕೆ ಬದಲಾಗಿ ಸಂಜೆ 6.00ರವರೆಗೆ ಬದಲಾಯಿಸುವುದು.
– ತಿಂಗಳ ಮೊದಲ ಮತ್ತು ಮೂರನೆ ಶನಿವಾರ ಸಾರ್ವತ್ರಿಕ ರಜೆ ನೀಡುವುದು.

೩. ವೇತನ ಹೆಚ್ಚಳ ಹೊರೆ-ಸರಿದೂಗಿಸುವುದು ಹೇಗೆ?
– ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕುವುದು.
– ಆಡಳಿತದಲ್ಲಿ ತಂತ್ರಜ್ಞಾನವನ್ನು ಹೆಚ್ಚಿಸುವುದು.
– ನೌಕರರಲ್ಲಿ ದಕ್ಷತೆ ಮತ್ತು ನೈಪುಣ್ಯತೆ ಹಾಗೂ ಕ್ರಿಯಾಶೀಲತೆಯನ್ನು ಹೆಚ್ಚಿಸಲು ಎಟಿಐ ಮಾದರಿ ತರಬೇತಿ ನೀಡುವುದು.

೪. ವೇತನ ಪರಿಷ್ಕರಣೆಗೆ ಕೇಂದ್ರ-ನೆರೆ ರಾಜ್ಯಗಳ ವೇತನ ಶ್ರೇಣಿಗಳನ್ನು ಪರಿಗಣಿಸಬೇಕೆ?
– ಅನುಕೂಲವಾಗುವ ಕೇಂದ್ರ ಮತ್ತು ಕೇರಳ ರಾಜ್ಯ ನೌಕರರ ವೇತನ-ಭತ್ಯೆಗಳನ್ನು ಪರಿಗಣಿಸುವುದು.

5. ಕೇಂದ್ರಕ್ಕೆ ಸಮಾನ ವೇತನ ನೀಡುವ ಸಾಧ್ಯತೆ ಬಗ್ಗೆ ಸಮಂಜಸವಾದ ಸಮರ್ಥನೆಗಳು
– 6ನೇ ವೇತನ ಆಯೋಗದಲ್ಲಿ ಪ್ರಸ್ತುತ ಮೂಲ ವೇತನಕ್ಕೆ ಹಾಲಿ ಇರುವ ಶೇ.31ರಷ್ಟು ತುಟ್ಟಿಭತ್ಯೆಯನ್ನು ವಿಲೀನಗೊಳಿಸಿ ಶೇ. 40ರಷ್ಟು ಫಿಟ್‌ಮೆಂಟ್ ಸೌಲಭ್ಯವನ್ನು 01.07.2022ರಿಂದ ಜಾರಿಗೆ ತರುವುದು.
– 2026ರಲ್ಲಿ ಪರಿಷ್ಕರಣೆಯಾಗಲಿರುವ ಕೇಂದ್ರ ವೇತನ ಮತ್ತು ಭತ್ಯೆಗಳನ್ನು ರಾಜ್ಯ ಸರ್ಕಾರಿ ನೌಕರರಿಗೂ ಈಗಾಗಲೇ 26 ರಾಜ್ಯಗಳಲ್ಲಿರುವಂತೆ ಯಥಾವತ್ತಾಗಿ ಅನ್ವಯಗೊಳಿಸಲು ಆಯೋಗವು ಸರ್ಕಾರಕ್ಕೆ ಶಿಫಾರಸು ಮಾಡುವುದು.

6. ಹಾಲಿ ಇರುವ ಮುಖ್ಯ ವೇತನ ಶ್ರೇಣಿ ಹಾಗೂ 25 ಪ್ರತ್ಯೇಕ ವೇತನ ಶ್ರೇಣಿಗಳನ್ನು ಮುಂದುವರಿಸಬಹುದೇ?
– ಹಾಲಿ ಇರುವ 25 ಮಾಸ್ಟರ್ ವೇತನ ಶ್ರೇಣಿ ಹಾಗೂ 92 ವೇತನ ಹಂತಗಳನ್ನು ಮುಂದುವರಿಸುವುದು.

7. ನೂತನ ವೇತನ ಶ್ರೇಣಿಗಳನ್ನು ಯಾವ ಆಧಾರ ಮೇಲೆ ರೂಪಿಸಬೇಕು?
– ಹೊಸ ವೇತನ ಶ್ರೇಣಿಗಳನ್ನು 2022ನೇ ಸಾಲಿನ ಬೆಲೆ ಸೂಚ್ಯಾಂಕದ 12 ತಿಂಗಳ ಸರಾಸರಿಯ ಆಧಾರದ ಮೇಲೆ ವೇತನ ಶ್ರೇಣಿಗಳ ದರಗಳನ್ನು ನಿಗದಿಪಡಿಸುವುದು.

8. ಪ್ರಸ್ತುತ ವೇತನ ಮತ್ತು ಭತ್ಯೆಗಳು ಸೇರಿ ಮಾಹೆಯಾನ ಎಷ್ಟಿರಬೇಕು?
– ಕನಿಷ್ಠ 40% ಫಿಟ್‌ಮೆಂಟ್‌ನೊಂದಿಗೆ ಹಾಗೂ ಜೀವನ ನಿರ್ವಹಣೆಯನ್ನಾಧರಿಸಿ…
ಗ್ರೂಪ್ ‘ಡಿ’ ನೌಕರನ ಕನಿಷ್ಠ ಮೂಲ ವೇತನ ರೂ. 31,000ಕ್ಕೆ ನಿಗದಿಗೊಳಿಸುವುದು.

9. ಮುಖ್ಯ ವೇತನ ಶ್ರೇಣಿಯ ಗರಿಷ್ಠ ಹಾಗೂ ಕನಿಷ್ಠ ವೇತನಗಳ ನಡುವಿನ ಅನುಪಾತ ಪುನರ್‌ ಪರಿಶೀಲನೆ ಆಗಬೇಕೆ?
-ಪರಿಷ್ಕರಿಸಲಿರುವ ವೇತನ ಶ್ರೇಣಿಗಳಲ್ಲಿನ ಕನಿಷ್ಠ ಹಾಗೂ ಗರಿಷ್ಠ ವೇತನದ ನಡುವಿನ ಈಗಿರುವ ಅನುಪಾತ 1:5,20 ಬದಲಾಗಿ 1:8.86 ಕ್ಕೆ ನಿಗದಿಪಡಿಸಿ ಶಿಫಾರಸು ಮಾಡುವುದು.

10. ವೇತನ ಶ್ರೇಣಿಗಳ ನಡುವೆ ಇರುವ ಹೋಲಿಕೆ-ಜವಾಬ್ದಾರಿಗಳಿಗೆ ಅನುಗುಣವಾಗಿದೆಯೇ?
– ವೇತನ ಶ್ರೇಣಿಗಳ ನಡುವಿನ ಸಾಪೇಕ್ಷೆಗಳನ್ನು (Relativity) ಸಾಧ್ಯವಾದಷ್ಟು ಮಟ್ಟಿಗೆ ಹಾಗೆಯೇ ಮುಂದುವರಿಸುವುದು ಸಮಂಜಸವಾಗಿರುತ್ತದೆ.

11. ಸರ್ಕಾರಿ ನೌಕರರಿಗೆ ಸೇವೆಯಲ್ಲಿ ಎಷ್ಟು ಮುಂಬಡ್ತಿಗಳಿರಬೇಕು.
– ಒಬ್ಬ ಸರ್ಕಾರಿ ನೌಕರನಿಗೆ ಸೇವಾವಧಿಯಲ್ಲಿ ಕನಿಷ್ಠ 3-4 ಮುಂಬಡ್ತಿ ಅವಕಾಶಗಳು ಲಭ್ಯವಾಗುವಂತೆ ಶಿಫಾರಸ್ಸು ಮಾಡುವುದು.

ಸರ್ಕಾರಿ ನೌಕರರ ಸಂಘ ವತಿಯಿಂದ ಏಳನೇ ವೇತನ ಆಯೋಗದ ಅಧ್ಯಕ್ಷರಿಗೆ ಶಿಫಾರಸುಗಳನ್ನು ಸಲ್ಲಿಸಲಾಯಿತು.

12 ಕನಿಷ್ಠ ವಾರ್ಷಿಕ ವೇತನ ಬಡ್ತಿ ದರ ಎಷ್ಟಿರಬೇಕು?
– ವಾರ್ಷಿಕ ವೇತನ ಬಡ್ತಿಯ ದರವನ್ನು ಕೇರಳ ರಾಜ್ಯದ ಮಾದರಿಯಲ್ಲಿ ಮೂಲ ವೇತನಕ್ಕೆ 3.04% ರಷ್ಟು ನಿಗದಿಪಡಿಸುವುದು.

13. ಸ್ಥಗಿತ ವೇತನ ಬಡ್ತಿ ಸಂಖ್ಯೆ ಬಗ್ಗೆ ನಿಮ್ಮ ಅಭಿಮತ
– ಸ್ಥಗಿತ ವೇತನ ಬಡ್ತಿಯನ್ನು ಹಾಲಿ ಇರುವ 8ರಿಂದ 12ಕ್ಕೆ ಹೆಚ್ಚಿಸುವುದು ಹಾಗೂ ಕಚೇರಿ ಮುಖ್ಯಸ್ಥರು ಮಂಜೂರು ಮಾಡುವುದು.

14. ಸಚಿವಾಲಯ-ಸಚಿವಾಲಯೇತರ ಸಮಾನ ಹುದ್ದೆಗಳ ವೇತನ ಸಮಾನಾಂತರಗೊಳಿಸುವುದು.
– ಸಚಿವಾಲಯ-ಸಚಿವಾಲಯೇತರ ಸಮಾನ ಹುದ್ದೆಗಳ ವೇತನವನ್ನು ಸಮಾನಗೊಳಿಸಲು ಶಿಫಾರಸ್ಸು ಮಾಡುವುದು. ಸಚಿವಾಲಯ ಸಿಬ್ಬಂದಿಗೆ ಕೇಂದ್ರ ಸಚಿವಾಲಯದ ಮಾದರಿಯಲ್ಲಿ ಹಾಗೂ ವಿಧಾನಸಭೆ/ವಿಧಾನ ಪರಿಷತ್ ಸಚಿವಾಲಯಗಳ ನೌಕರರಿಗೆ ಲೋಕಸಭೆ/ರಾಜ್ಯಸಭೆ ಸಚಿವಾಲಯ ಮಾದರಿಯಲ್ಲಿ ಪ್ರತ್ಯೇಕ ವೇತನ ಶ್ರೇಣಿ ಮತ್ತು ಭತ್ಯೆಗಳನ್ನು ಮಂಜೂರು ಮಾಡಲು ಶಿಫಾರಸು ಮಾಡುವುದು.

15. ವಿಶೇಷ ಭತ್ಯೆಗಳು ಹೇಗಿರಬೇಕು?
– ಅತ್ಯಂತ ವಿಶೇಷ-ಕ್ಲಿಷ್ಟಕರ, ಅನಾರೋಗ್ಯಕರ ವಾತಾವರಣದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ಪ್ರಸ್ತುತ ನೀಡುತ್ತಿರುವ ವಿಶೇಷ ಭತ್ಯೆಯನ್ನು ದ್ವಿಗುಣಗೊಳಿಸುವುದು.

16. ತುಟ್ಟಿಭತ್ಯೆ ವಿಷಯದಲ್ಲಿ ಅಭಿಮತ
– ಪ್ರತಿ ಆರು ತಿಂಗಳಿಗೆ ನೀಡಲಾಗುವ ತುಟ್ಟಿಭತ್ಯೆಯನ್ನು ಪರಿಷ್ಕೃತ ವೇತನದಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾಗಿ ರಾಜ್ಯ ಸರ್ಕಾರಿ ನೌಕರರಿಗೆ ವಿಳಂಬವಿಲ್ಲದೆ ನೀಡುವುದು.

17. ಮನೆ ಬಾಡಿಗೆ ಭತ್ಯೆ
– ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯಲ್ಲಿ ಲಭ್ಯವಿರುವ 2021ರ ಜನಸಂಖ್ಯೆಯ ಮಾಹಿತಿಯನ್ನಾಧರಿಸಿ ನಗರ ಹಾಗೂ ಪಟ್ಟಣ ಪ್ರದೇಶಗಳನ್ನು ಪುನರ್‌ವರ್ಗೀಕರಿಸುವುದು ಹಾಗೂ ಬಿಬಿಎಂಪಿ ವ್ಯಾಪ್ತಿಯನ್ನು ಬೆಂಗಳೂರು ನಗರ ಜಿಲ್ಲೆ ಗಡಿ ವ್ಯಾಪ್ತಿಗೆ ವಿಸ್ತರಿಸುವುದು. ಪ್ರಸ್ತುತ ಜೀವನ ನಿರ್ವಹಣೆ ಆಧಾರದ ಮೇಲೆ ಈ ಕೆಳಕಂಡ ದರದಲ್ಲಿ ಮನೆ ಬಾಡಿಗೆ ಭತ್ಯೆ ನೀಡುವುದು.

೧. ‘ಎ’ ವರ್ಗಕ್ಕೆ -ಶೇ 24 ರಿಂದ ಶೇ.30%
2. ‘ಬಿ’ ವರ್ಗಕ್ಕೆ ಶೇ 16 ರಿಂದ ಶೇ.20
3. ‘ಸಿ’ ವರ್ಗಕ್ಕೆ ಶೇ.8% ರಿಂದ ಶೇ 15%

-ಕೇಂದ್ರ ಮಾದರಿಯಲ್ಲಿ ತುಟ್ಟಿಭತ್ಯೆಯು ಶೇ.25 ಮತ್ತು ಶೇ.50ರ ಹಂತವನ್ನು ತಲುಪಿದಾಗ ಮನೆ ಬಾಡಿಗೆ ಭತ್ಯೆಗಳನ್ನು ಸ್ವಯಂಚಾಲಿತವಾಗಿ ಶೇ. 3ರಷ್ಟು ಹೆಚ್ಚಿಸುವುದು.

18. ರಜಾ ಪ್ರಯಾಣ ರಿಯಾಯಿತಿ (LTC) ಹೇಗಿರಬೇಕು?
ನಮ್ಮ ರಾಜ್ಯದಲ್ಲಿ ಸೇವಾವಧಿಯಲ್ಲಿ 2 ಬಾರಿ ಇದ್ದು, ಕೇಂದ್ರ ಸರ್ಕಾರದಲ್ಲಿ (LTC) ಸೌಲಭ್ಯವು ಪ್ರತಿ 4 ವರ್ಷಕ್ಕೊಮ್ಮೆ ನೀಡುತ್ತಿದ್ದು, ಆದರಂತೆ ನೀಡುವುದು. ಹಾಗೂ ದಿನಭತ್ಯೆಯನ್ನು ಸಹ ನೀಡುವುದು.

19. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS)
– ಈ ಯೋಜನೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಕಾರ್ಯೋನ್ಮುಖವಾಗಿದೆ.
– ಸರ್ಕಾರಿ ನೌಕರರು ವಂತಿಗೆ ನೀಡುವುದರಿಂದ ಅವಲಂಬಿತರ ಆದಾಯದ ಮಿತಿಯನ್ನು ತೆಗೆದುಹಾಕುವುದು.
– ವಿವಾಹಿತ ಮಹಿಳಾ ಸರ್ಕಾರಿ ನೌಕರರ ತಂದೆ-ತಾಯಿಯವರನ್ನು ಈ ಯೋಜನೆಯ ವ್ಯಾಪ್ತಿಗೆ ತರುವುದು.
– ಎಲ್ಲಾ ವೈದ್ಯಕೀಯ ಸೇವೆಗಳು ವಿಳಂಬವಿಲ್ಲದೇ ಸರಳವಾಗಿ ಹಾಗೂ ತ್ವರಿತಗತಿಯಲ್ಲಿ ಲಭ್ಯವಾಗಬೇಕು.

20. ಮಹಿಳಾ ಉದ್ಯೋಗಿಗಳ ವಿಶೇಷ ಸಮಸ್ಯೆಗಳ ಕುರಿತು
ಈಗಿರುವ ಸೌಲಭ್ಯಗಳ ಜೊತೆಗೆ ಕೆಳಗಿನ ಸೌಲಭ್ಯಗಳನ್ನು ಒದಗಿಸುವುದು.
-ಮಕ್ಕಳಿಗೆ ದಿನಕ್ಕೆ 2 ಬಾರಿ ಸ್ತನ್ಯಪಾನಕ್ಕಾಗಿ ಅವಕಾಶ ನೀಡುವುದು.
– ನಿಗದಿತ ವೇಳೆಯ ನಂತರ ಕೆಲಸ ಮಾಡಿದ ಸಂದರ್ಭದಲ್ಲಿ ಸುರಕ್ಷಿತವಾಗಿ ಮನೆಗೆ ಬಿಡುವುದು.
– ತಮ್ಮ ಕಾರ್ಯವ್ಯಾಪ್ತಿಯಲ್ಲಿ ಶುಚಿತ್ವವಾದ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಿಸುವುದು.
– ಬಾಡಿಗೆ ತಾಯ್ತನದ ಮಹಿಳಾ ನೌಕರರಿಗೆ ಶಿಶುಪಾಲನಾ, ಹೆರಿಗೆ ರಜೆ ಮಂಜೂರು ಮಾಡುವುದು.
– ಹಾಲಿ ಇರುವ ಶಿಶುಪಾಲನಾ ರಜೆಯ ಮಂಜೂರಾತಿಯನ್ನು ಕನಿಷ್ಠ 15 ದಿನಗಳ ಬದಲಾಗಿ 7 ದಿನಗಳಿಗೆ ನಿಗದಿಪಡಿಸುವುದು.

21. ಇತರೆ ಭತ್ಯೆಗಳು
– ಬೆಟ್ಟಗುಡ್ಡಗಳಿರುವ ಪ್ರದೇಶಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ನೌಕರರಿಗೆ ಗಿರಿಭತ್ಯೆಯನ್ನು ಮಂಜೂರು ಮಾಡುವುದು.
– ಪ್ರಸ್ತುತ ನೀಡುತ್ತಿರುವ ವಾಹನ ಭತ್ಯೆ, ಸಮವಸ್ತ್ರ ಭತ್ಯೆ, ಅನ್ಯಸೇವೆ ಭತ್ಯೆ, ವಿಶೇಷಭತ್ಯೆಗಳನ್ನು ದ್ವಿಗುಣಗೊಳಿಸುವುದು.
– ನಿಗದಿತ ಪ್ರಯಾಣ ಭತ್ಯೆ, ಅನ್ಯಸೇವೆ ಭತ್ಯೆ ಹಾಗೂ ಪ್ರಭಾರ ಭತ್ಯೆ ದರವನ್ನು ಹೆಚ್ಚಿಸುವುದು.

22. ವರ್ಗಾವಣೆ ಅನುದಾನ-ಸಾಮಾನು ಸಾಗಣೆ ವೆಚ್ಚ
– ಕೇಂದ್ರ ಮಾದರಿಯಂತೆ ವರ್ಗಾವಣೆಗೊಂಡ/ವಯೋನಿವೃತ್ತಿ ಹೊಂದುವ ರಾಜ್ಯ ಸರ್ಕಾರಿ ನೌಕರರಿಗೆ ಕೊನೆ ಮಾಹೆಯ ಮೂಲವೇತನದ ಶೇ. 8೦ರಷ್ಟು ವರ್ಗಾವಣೆ ಅನುದಾನ ಮತ್ತು ಸಾಮಾನು ಸರಂಜಾಮು ಸಾಗಣೆ ಭತ್ಯೆಯನ್ನು ನೀಡುವಂತೆ ಶಿಫಾರಸ್ಸು ಮಾಡುವುದು.

23. ಪ್ರಯಾಣ ಭತ್ಯೆ ಹಾಗೂ ದಿನಭತ್ಯೆ
ಹಾಗೂ ಊಟ-ಉಪಹಾರಗಳು, ಇಂಧನ ಬೆಲೆ, ಪ್ರಯಾಣ ಸಾರಿಗೆ ವೆಚ್ಚ, ವಸತಿ ದುಬಾರಿಯಾಗಿರುವುದರಿಂದ ಪ್ರಯಾಣ ಭತ್ಯೆ, ದಿನಭತ್ಯೆ ವಿಮಾನ,ರೈಲು ಮತ್ತು ಬಸ್ಸಿನ ದರಗಳನ್ನು ಹೆಚ್ಚಿಸುವುದು.

24. (ಎ)ರಜೆ ಸೌಲಭ್ಯಗಳು ಮತ್ತು ಗಳಿಕೆ ರಜೆ ಅಧ್ಯರ್ಪಣೆ ನಗದೀಕರಣ ಮತ್ತು ನಿವೃತ್ತಿ-ಗಳಿಕೆ ರಜಾ ನಗದೀಕರಣ
– ರಜೆ ಸೌಲಭ್ಯವನ್ನು ಪಡೆಯುವ ಉದ್ದೇಶಕ್ಕಾಗಿ ಮಾತ್ರ ಗಳಿಕೆ ರಜೆಯ ಮಿತಿಯನ್ನು ತೆಗೆದು ಹಾಕುವುದು.
– ನಿವೃತ್ತಿ ನಂತರ 300 ಗಳಿಕೆ ರಜಾ ದಿನಗಳ ನಗದೀಕರಣ ಸೌಲಭ್ಯದ ಗರಿಷ್ಠ ಮಿತಿಯನ್ನು 330ಕ್ಕೆ ಹೆಚ್ಚಿಸುವುದು.
ಬಿ. ಬೈಸಿಕಲ್, ಮೋಟಾರು ವಾಹನ, ಗೃಹ ನಿರ್ಮಾಣ, ಗೃಹ ರಿಪೇರಿ ಮುಂಗಡ
– ರೂ. 25,000-00 ಗಳ ಬಡ್ಡಿರಹಿತ ಹಬ್ಬದ ಮುಂಗಡವನ್ನು ಯಾವುದೇ ಷರತ್ತುಗಳನ್ನು ವಿಧಿಸದೆ ಎಲ್ಲಾ ನೌಕರರಿಗೂ ಮಂಜೂರು ಮಾಡುವುದು.
– ಎಲ್ಲಾ ಮುಂಗಡಗಳ ಮೇಲಿನ ಬಡ್ಡಿಯನ್ನು ಕಡಿಮೆ ಮಾಡುವುದು.
– ಮುಂಗಡದ ಮೊತ್ತವನ್ನು ಮಾರುಕಟ್ಟೆಗಳಿಗೆ ಅನುಗುಣವಾಗಿ ಹೆಚ್ಚಿಸುವುದು.
– ಕನಿಷ್ಠ ವೇತನದ ಮಿತಿಯನ್ನು (Home take Salary) ಶೇ. 60% ರಿಂದ ಶೇ. 40%ಕ್ಕೆ ನಿಗದಿಗೊಳಿಸುವುದು.

(ಸಿ)ಅಂಧ ಮತ್ತು ಅಂಗವಿಕಲ ನೌಕರರಿಗೆ ಈಗ ನೀಡಲಾಗುತ್ತಿರುವ ಮಾಹೆಯಾನ ಮೂಲ ವೇತನದ ಶೇಕಡ 6 ರಂತೆ ವಾಹನ ಭತ್ಯೆ.
– ಅಂಧ ಮತ್ತು ಅಂಗವಿಕಲ ನೌಕರರ ವಾಹನ ಭತ್ಯೆಯನ್ನು ಮೂಲ ವೇತನದ ಶೇ. ೬ರಿಂದ ಶೇ. 10ಕ್ಕೆ ಹೆಚ್ಚಳ ಮಾಡಲು ಶಿಫಾರಸ್ಸು ಮಾಡುವುದು.

25. ಸಾಮೂಹಿಕ ವಿಮಾ ಯೋಜನೆ
– ಒಂದು ಯುನಿಟ್ ದರ ರೂ. 120/-ರಿಂದ 1200/ ಕ್ಕೆ ಹೆಚ್ಚಿಸುವ ಮೂಲಕ ವಿಮಾ ಮೊತ್ತವನ್ನು ಹೆಚ್ಚಿಸುವುದು.
– ಉಳಿತಾಯ ನಿಧಿ ಮತ್ತು ವಿಮಾ ನಿಧಿ ಸದ್ಯದ 70:30ರ ಅನುಪಾತವನ್ನು 75:25 ಮಾರ್ಪಡಿಸುವುದು.
– ಉಳಿತಾಯ ನಿಧಿ ಮೇಲಿನ ಬಡ್ಡಿ ದರವನ್ನು ಶೇ.2ರಷ್ಟು ಹೆಚ್ಚಿಸುವುದು.

26. ಸ್ವಇಚ್ಛಾ ನಿವೃತ್ತಿ
– ಸ್ವಇಚ್ಛಾ ನಿವೃತ್ತಿಗೆ 15 ವರ್ಷ ಕನಿಷ್ಠ ಸೇವೆ ಅಥವಾ 50 ವರ್ಷ ವಯಸ್ಸು ಎನ್ನುವ ಬದಲಾಗಿ 12 ವರ್ಷಗಳ ಸೇವಾವಧಿ ಅಥವಾ 45 ವರ್ಷಗಳ ವಯಸ್ಸಾಗಿರಬೇಕೆಂದು ತಿದ್ದುಪಡಿ ಮಾಡುವುದು.

27. ಪಿಂಚಣಿ ಪ್ರಯೋಜನಗಳು
– ನಿವೃತ್ತಿ ಪಿಂಚಣಿಗಾಗಿ ಕನಿಷ್ಠ ಸೇವೆ-30 ರಿಂದ 25ಕ್ಕೆ ಇಳಿಸುವುದು.
– ಕುಟುಂಬ/ವಿಶ್ರಾಂತಿ ಪಿಂಚಣಿ ಕನಿಷ್ಠ ೧೬,೫೦೦ರಿಂದ ಗರಿಷ್ಠ ರೂ.1,50,000ಕ್ಕೆ ಹೆಚ್ಚಿಸುವುದು.
-ಮರಣ-ನಿವೃತ್ತಿ ಉಪದಾನ-ಗರಿಷ್ಠ ಮಿತಿಯನ್ನು 20 ಲಕ್ಷಗಳಿಂದ 25 ಲಕ್ಷಗಳಿಗೆ ಹೆಚ್ಚಿಸುವುದು.
– ಪರಿವರ್ತಿತ ಹಣವನ್ನು 15 ವರ್ಷಗಳ ಕಾಲ ಪ್ರತಿ ತಿಂಗಳ ಪಿಂಚಣಿಯಲ್ಲಿ ಕಟಾಯಿಸುವ ಪದ್ಧತಿಯನ್ನು ಕೈಬಿಟ್ಟು 12 ವರ್ಷಗಳ ಕಾಲ ಮಾತ್ರ ಪಿಂಚಣಿಯಲ್ಲಿ ಕಟಾಯಿಸುವುದು.

28. ಪಿಂಚಣಿ ಪಾವತಿ ನಿಯಮ ಸರಳೀಕರಣ
-ಎಲೆಕ್ಟ್ರಾನಿಕ್ ಸರ್ವೀಸ್ ರಿಜಿಸ್ಟರ್ ವ್ಯವಸ್ಥೆಯನ್ನು ಶೀಘ್ರ ಜಾರಿಗೊಳಿಸಿ ನಿವೃತ್ತಿ ಹೊಂದುವ ನೌಕರರಿಗೆ ಪಿಂಚಣಿ ಸವಲತ್ತುಗಳನ್ನು ಹೆಚ್.ಆರ್.ಎಂ.ಎಸ್. ತಂತ್ರಾಂಶದ ಮೂಲಕವೇ ಪಡೆಯುವ ಅವಕಾಶ ಕಲ್ಪಿಸುವುದು.

29. ನಿವೃತ್ತ ಪಿಂಚಣಿದಾರರಿಗೆ ತುಟ್ಟಿಭತ್ಯೆ
-ಸೇವಾನಿರತ ನೌಕರರಿಗೆ ನೀಡುವ ವಾರ್ಷಿಕ ವೇತನ ಬಡ್ತಿ ದರದಲ್ಲಿಯೇ ನಿವೃತ್ತ ನೌಕರರಿಗೂ ಸಹ ಸಮನಾಂತರ ತುಟ್ಟಿಭತ್ಯೆಯನ್ನು ನೀಡಲು ಶಿಫಾರಸು ಮಾಡುವುದು.

30. 80 ವರ್ಷ ಮೇಲ್ಪಟ್ಟವರಿಗೆ ಹೆಚ್ಚುವರಿ ನಿವೃತ್ತಿ ವೇತನ
– 80 ವರ್ಷ ಮೇಲ್ಪಟ್ಟವರಿಗೆ ಪಿಂಚಣಿದಾರರಿಗೆ ವಯೋಮಾನವನ್ನಾಧರಿಸಿ ಹೆಚ್ಚುವರಿ ಪಿಂಚಣಿಯನ್ನು ಮಂಜೂರು ಮಾಡಲು ಸರ್ಕಾರಕ್ಕೆ ಶಿಫಾರಸು ಮಾಡುವುದು.

31. ಕುಟುಂಬ ಪಿಂಚಣಿ
– ಹಾಲಿ ಇರುವ ಶೇ. 30 ಕುಟುಂಬ ಪಿಂಚಣಿಯ ಪ್ರಮಾಣವನ್ನು ಮೂಲ ವೇತನದ ಶೇ. 40ಕ್ಕೆ ಹೆಚ್ಚಳ ಮಾಡುವುದು.

32. ರಾಷ್ಟ್ರೀಯ ಪಿಂಚಣಿ ಯೋಜನೆ
– ರಾಷ್ಟ್ರದ ಕೆಲವು ರಾಜ್ಯಗಳು ಈಗಾಗಲೇ ಎನ್.ಪಿ.ಎಸ್. ಯೋಜನೆಯನ್ನು ರದ್ದುಪಡಿಸಿರುವ ಮಾದರಿಯಂತೆ ರಾಜ್ಯದಲ್ಲೂ ಸಹ ಎನ್.ಪಿ.ಎಸ್ ಯೋಜನೆಯನ್ನು ರದ್ದುಗೊಳಿಸಿ ದಿನಾಂಕ:01-4-2006 ರಿಂದ ಅನ್ವಯವಾಗುವಂತೆ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರಕ್ಕೆ ಶಿಫಾರಸು ಮಾಡುವುದು.
-ಸೇವೆಯಲ್ಲಿರುವ ಎನ್.ಪಿ.ಎಸ್. ಯೋಜನೆಗೆ ಒಳಪಡುವ ನೌಕರನಿಂದ ಇದುವರೆವಿಗೂ ಕಟಾವಣೆಗೊಂಡಿರುವ ಯೋಜನೆಯ ಒಟ್ಟು ಮೊತ್ತವನ್ನು ನೌಕರನಿಗೆ ಹಿಂದಿರುಗಿಸುವುದು ಅಥವಾ ಸಾಮಾನ್ಯ ಭವಿಷ್ಯನಿಧಿ ಖಾತೆ (ಜಿ.ಪಿ.ಎಫ್) ತೆರೆದು ವರ್ಗಾಯಿಸುವುದು.
-ವಯೋನಿವೃತ್ತಿ/ಮೃತಪಟ್ಟಿರುವ ನೌಕರನ ಸೇವಾವಧಿಯಲ್ಲಿ ಕಟಾವಣೆಗೊಂಡ ಎನ್.ಪಿ.ಎಸ್. ಮೊತ್ತವನ್ನು ಅವಲಂಬಿತ ಕುಟುಂಬ ಸದಸ್ಯರಿಗೆ ಮರುಪಾವತಿಸುವುದು.

– ಈಗಾಗಲೇ ಎನ್.ಪಿ.ಎಸ್. ಯೋಜನೆಗೆ ಒಳಪಟ್ಟು ವಯೋನಿವೃತ್ತಿ/ಮೃತಪಟ್ಟಿರುವ ನೌಕರರಿಗೆ ಹಾಗೂ ಸೌಲಭ್ಯಗಳನ್ನು ಹಳೆ ಪಿಂಚಣಿದಾರರ ಮಾದರಿಯಲ್ಲಿ ನಿವೃತ್ತಿ ವೇತನ ಜಾರಿಗೊಳಿಸುವುದು.

33. ಪ್ರಶ್ನಾವಳಿಯಲ್ಲಿ ಒಳಗೊಂಡಿರದ ವಿಷಯಗಳು
– 2,50,363 ಖಾಲಿ ಹುದ್ದೆಗಳ ಭರ್ತಿ ಮಾಡಿ ನೌಕರರನ್ನು ಒತ್ತಡದಿಂದ ಮುಕ್ತಿಗೊಳಿಸಿ ಸಮುದಾಯಕ್ಕೆ ಗುಣಮಟ್ಟದ ನಾಗರಿಕ ಸೇವೆಗಳನ್ನು ನೀಡಲು ಶಿಫಾರಸು ಮಾಡುವುದು.
– ಸರ್ಕಾರಿ ನೌಕರರ ಮಕ್ಕಳು ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡಿದಲ್ಲಿ ಪ್ರೋತ್ಸಾಹ ಧನವನ್ನು ನೀಡುವುದು.
-ಶವಸಂಸ್ಕಾರ ಭತ್ತೆಯನ್ನು ರೂ.15000-00 ಗಳನ್ನು 30,000 ರೂ.ಗೆ ಹೆಚ್ಚಿಸುವುದು.
-ಕೇಂದ್ರ ಮಾದರಿಯಲ್ಲಿ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಶೈಕ್ಷಣಿಕ ಭತ್ಯೆ ಯೋಜನೆ ಜಾರಿಗೆ ತರುವುದು.

ಇದನ್ನೂ ಓದಿ : CLT Exam | ಸರ್ಕಾರಿ ನೌಕರರ ಕಂಪ್ಯೂಟರ್‌ ಟೆಸ್ಟ್‌; ಗಡುವು ಮಾ.31ರ ವರೆಗೆ ವಿಸ್ತರಣೆ

ವಿಸ್ತಾರ ನ್ಯೂಸ್​ನ ಇನ್ನಷ್ಟು ಸುದ್ದಿಗಳಿಗೆ https://www.facebook.com/vistaranewsspecial ಫೇಸ್​ಬುಕ್​ ಪೇಜ್​ ಫಾಲೊ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Lok Sabha Election 2024: ಮಂಡ್ಯದಿಂದ ಎಚ್‌ಡಿಕೆ ಕಣಕ್ಕೆ? ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಬದಲು?

Lok Sabha Election 2024: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದಿನೇ ದಿನೆ ರಾಜಕೀಯ ಚಟುವಟಿಕೆ ಬಿರುಸುಗೊಳ್ಳುತ್ತಿವೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್‌ನಿಂದ ಸಿ.ಎಸ್.‌ ಪುಟ್ಟರಾಜು ಅವರೇ ಕಣಕ್ಕಿಳಿಯುತ್ತಾರೆ ಎನ್ನಲಾಗಿತ್ತು. ಆದರೆ, ಈಗ ಎಚ್.ಡಿ. ಕುಮಾರಸ್ವಾಮಿ ಅವರೇ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿದೆ. ಇವರು ಸ್ಪರ್ಧೆ ಮಾಡಿದರೆ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳನ್ನೇ ಬದಲು ಮಾಡುವ ಲೆಕ್ಕಾಚಾರದಲ್ಲಿದೆ ಎಂದು ತಿಳಿದುಬಂದಿದೆ.

VISTARANEWS.COM


on

Lok Sabha Election 2024 HD Kumaraswamy contest from Mandya and Congress candidate to be replaced
Koo

ಮಂಡ್ಯ: ಲೋಕಸಭಾ ಚುನಾವಣೆ (Lok Sabha Election 2024) ದಿನೇ ದಿನೆ ರಂಗು ಪಡೆದುಕೊಳ್ಳುತ್ತಿದೆ. ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಆಯ್ಕೆ ಕಸರತ್ತನ್ನು ಮಾಡುತ್ತಿವೆ. ಬಿಜೆಪಿ ಹಾಗೂ ಕಾಂಗ್ರೆಸ್‌ ತಮ್ಮ ಪಕ್ಷಗಳು ಕರ್ನಾಟಕದ ಅಭ್ಯರ್ಥಿಗಳಿಗೆ ಸಂಬಂಧಪಟ್ಟಂತೆ ಮೊದಲ ಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಿವೆ. ಎರಡನೇ ಪಟ್ಟಿಯನ್ನು ಅಂತಿಮ ಮಾಡಿಡಲಾಗಿದ್ದು, ಯಾವುದೇ ಸಮಯದಲ್ಲಿ ಬೇಕಿದ್ದರೂ ಬಿಡುಗಡೆ ಮಾಡಬಹುದಾಗಿದೆ. ಈ ನಡುವೆ ಬಿಜೆಪಿಯ ಮೈತ್ರಿ ಪಕ್ಷ ಜೆಡಿಎಸ್‌ನಿಂದ (BJP JDS Alliance) ಅಭ್ಯರ್ಥಿಗಳ ಆಯ್ಕೆ ನಡೆದಿದೆಯಾದರೂ ಘೋಷಣೆ ಮಾತ್ರ ಬಾಕಿ ಇದೆ. ಈಗ ಬದಲಾದ ಸನ್ನಿವೇಶದಲ್ಲಿ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರೇ ಮಂಡ್ಯ ಲೋಕಸಭಾ ಕ್ಷೇತ್ರದಿಂದ (Mandya Lok Sabha constituency) ಸ್ಪರ್ಧೆ ಮಾಡಲಿದ್ದಾರೆ ಎಂಬ ಸುದ್ದಿ ದಟ್ಟವಾಗಿದೆ. ಒಂದು ವೇಳೆ ಎಚ್‌ಡಿಕೆ ಇಲ್ಲಿ ಅಖಾಡಕ್ಕೆ ಇಳಿದಿದ್ದೇ ಆದಲ್ಲಿ ಕಾಂಗ್ರೆಸ್‌ನಲ್ಲಿ (Congress Karnataka) ಸಹ ಎಫೆಕ್ಟ್‌ ಹೊಡೆಯಲಿದ್ದು, ಅಭ್ಯರ್ಥಿಯೇ ಬದಲಾದರೂ ಆಶ್ಚರ್ಯ ಇಲ್ಲ ಎನ್ನುವ ಸ್ಥಿತಿ ಇದೆ ಎನ್ನಲಾಗಿದೆ.

ಮಂಡ್ಯ ಲೋಕಸಭಾ ಕ್ಷೇತ್ರದ ಬಗ್ಗೆ ಹಾಲಿ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಅವರು ಇನ್ನೂ ತಮ್ಮ ನಿರ್ಧಾರವನ್ನು ಪ್ರಕಟ ಮಾಡಿಲ್ಲ. ಅವರನ್ನು ಬಿಜೆಪಿ ಹೈಕಮಾಂಡ್‌ (BJP high command) ನಾಯಕರು ನವ ದೆಹಲಿಗೆ ಕರೆಸಿಕೊಂಡಿದ್ದು, ಮಾತುಕತೆ ನಡೆಸುತ್ತಿದ್ದಾರೆ. ಈ ಸಂಬಂಧ ಅವರು ಇನ್ನೂ ಡೆಲ್ಲಿಯಲ್ಲಿಯೇ ನೆಲೆಸಿದ್ದಾರೆ. ಅಲ್ಲಿನ ಚರ್ಚೆ ಬಳಿಕ ತಮ್ಮ ಮುಂದಿನ ನಡೆ ಏನೆಂಬುದು ಬೆಂಬಲಿಗರು ಹಾಗೂ ಕಾರ್ಯಕರ್ತರ ಜತೆ ಚರ್ಚೆ ನಡೆಸಿ ನಿರ್ಧಾರವನ್ನು ಪ್ರಕಟ ಮಾಡುವುದಾಗಿ ಹೇಳಿದ್ದಾರೆ. ಹೀಗಾಗಿ ಅವರ ಮನವೊಲಿಕೆ ಮಾಡಿ ತಾವೇ ಚುನಾವಣೆಗೆ ಸ್ಪರ್ಧೆ ಮಾಡಿದರೆ ಹೇಗೆ ಎಂಬ ತರ್ಕಕ್ಕೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಬಂದಿದ್ದಾರೆ ಎನ್ನಲಾಗಿದೆ. ‌

ಜೆಡಿಎಸ್‌ ನಾಯಕರಿಂದಲೂ ಒತ್ತಡ

ಇತ್ತ ಮಂಡ್ಯ ಜಿಲ್ಲೆಯ ಜೆಡಿಎಸ್ (JDS Karnataka) ನಾಯಕರು ಸಹ ಎಚ್.ಡಿ. ಕುಮಾರಸ್ವಾಮಿ ಅವರೇ ಕಣಕ್ಕಿಳಿದರೆ ಬೆಸ್ಟ್‌ ಎಂದು ಒತ್ತಾಯ ಮಾಡುತ್ತಿದ್ದಾರೆ. ಮಂಡ್ಯ ರಾಜಕೀಯವೇ ಬೇರೆ ರೀತಿ ಇದ್ದು, ಈ ಹೊತ್ತಿನಲ್ಲಿ ನಿಮ್ಮ ಸ್ಪರ್ಧೆಯೇ ಸೂಕ್ತ ಎಂದು ಹೇಳುತ್ತಿದ್ದಾರೆ. ಹೀಗಾಗಿ ಕೊನೇ ಕ್ಷಣದಲ್ಲಿ ಮಂಡ್ಯದಿಂದ ಮೈತ್ರಿ ಅಭ್ಯರ್ಥಿಯಾಗಿ ಕುಮಾರಸ್ವಾಮಿಯೇ ಕಣಕ್ಕಿಳಿಯುತ್ತಾರೆ ಎಂದು ಜೆಡಿಎಸ್ ಮೂಲಗಳು ಹೇಳುತ್ತಿವೆ.

ಸಿ.ಎಸ್.‌ ಪುಟ್ಟರಾಜು ಏನು ಮಾಡ್ತಾರೆ?

ಇಷ್ಟು ದಿನಗಳ ಕಾಲ ಮಾಜಿ ಸಚಿವ ಸಿ.ಎಸ್. ಪುಟ್ಟರಾಜು (CS Puttarajau) ಅವರೇ ಮೈತ್ರಿ ಅಭ್ಯರ್ಥಿ ಆಗಲಿದ್ದಾರೆ ಎಂದು ಹೇಳಲಾಗಿತ್ತು. ಅವರೂ ಸಹ ಈಗಾಗಲೇ ದೇವಸ್ಥಾನಗಳ ಭೇಟಿ ಸೇರಿದಂತೆ ಕೆಲವು ಮುಖಂಡರ ಜತೆ ಚರ್ಚೆ ನಡೆಸುತ್ತಿದ್ದಾರೆ. ಆದರೆ, ಬದಲಾದ ಪರಿಸ್ಥಿತಿಯಲ್ಲಿ ಎಚ್.ಡಿ. ಕುಮಾರಸ್ವಾಮಿಯೇ ಕಣಕ್ಕಿಳಿದರೆ ಅವರು ಏನು ಮಾಡುತ್ತಾರೆ ಎಂಬ ಪ್ರಶ್ನೆ ಎದುರಾಗಿದೆ. ಪುಟ್ಟರಾಜು ಅವರು ಕಟ್ಟರ್‌ ಜೆಡಿಎಸ್‌ ಆಗಿದ್ದರಿಂದ ಎಚ್‌ಡಿಕೆಗೆ ಬೆಂಬಲ ಕೊಡುತ್ತಾರೆ. ಹೀಗಾಗಿ ಇದು ಸಮಸ್ಯೆಯಾಗದು ಎಂಬ ಲೆಕ್ಕಾಚಾರದಲ್ಲಿ ಜೆಡಿಎಸ್‌ ಇದೆ.

ಮಾರ್ಚ್‌ 25ರಂದು ಎಚ್‌ಡಿಕೆ ಘೋಷಣೆ

ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಮಂಡ್ಯ ಸ್ಪರ್ಧೆ ಸಂಬಂಧ ಮಾರ್ಚ್‌ 25ರಂದು ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ. ಈ ವೇಳೆ ಅವರೇ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೋ ಇಲ್ಲವೇ ಸಿ.ಎಸ್.‌ ಪುಟ್ಟರಾಜು ಅವರನ್ನೇ ಅಭ್ಯರ್ಥಿಯಾಗಿ ಘೋಷಣೆ ಮಾಡಲಿದ್ದಾರೋ ಎಂಬುದು ಗೊತ್ತಾಗಲಿದೆ.

ಇದನ್ನೂ ಓದಿ: Lok Sabha Election 2024: ಜೆ.ಪಿ. ನಡ್ಡಾ ಜತೆ ಸುಮಲತಾ ಚರ್ಚೆ; ಯಾವುದೇ ಕಾರಣಕ್ಕೂ ಮಂಡ್ಯ ಬಿಡಲ್ಲ ಎಂದ ಸಂಸದೆ

ಬದಲಾಗ್ತಾರಾ ಕಾಂಗ್ರೆಸ್‌ ಅಭ್ಯರ್ಥಿ?

ಒಂದು ವೇಳೆ ಎಚ್.ಡಿ. ಕುಮಾರಸ್ವಾಮಿ ಅವರು ಮೈತ್ರಿ ಅಭ್ಯರ್ಥಿ ಆಗಿ ಕಣಕ್ಕಿಳಿದರೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನೇ ಬದಲು ಮಾಡುವ ಲೆಕ್ಕಾಚಾರದಲ್ಲಿದೆ ಎಂದು ತಿಳಿದು ಬಂದಿದೆ. ಸ್ಟಾರ್‌ ಚಂದ್ರು ದೊಡ್ಡ ಮಟ್ಟದ ಗುತ್ತಿಗೆದಾರರಾಗಿದ್ದು, ಹಣ ಬಲ ಭಾರಿ ಇದ್ದರೂ ಅವರಿಗೆ ಚುನಾವಣೆ ಹೊಸದು. ಆದರೆ, ಮಂಡ್ಯದ ಮಟ್ಟಿಗೆ ಕುಮಾರಸ್ವಾಮಿ ಮೇಲೆ ಜನರಿಗೆ ಸಾಫ್ಟ್‌ ಕಾರ್ನರ್‌ ಇದ್ದೇ ಇದೆ. ಹೀಗಾಗಿ ಎಚ್‌ಡಿಕೆ ಅಖಾಡಕ್ಕಿಳಿದರೆ ಅವರ ವಿರುದ್ಧ ಪ್ರಬಲವಾದ ಇನ್ನೊಬ್ಬ ಅಭ್ಯರ್ಥಿಯನ್ನು ಹಾಕುವ ಬಗ್ಗೆ ಕಾಂಗ್ರೆಸ್‌ ಚಿಂತನೆ ನಡೆಸಿದೆ ಎನ್ನಲಾಗಿದೆ. ಇದೆಲ್ಲವೂ ಎಚ್‌ಡಿಕೆ ನಿರ್ಧಾರದ ಮೇಲೆ ನಿಂತಿದೆ.

Continue Reading

ಬೆಂಗಳೂರು

Explosives Found : ಬೆಂಗಳೂರಿನ ಶಾಲೆ ಬಳಿ ಬೃಹತ್‌ ಪ್ರಮಾಣದ ಸ್ಫೋಟಕ ಪತ್ತೆ, ಮತ್ತೆ ಆತಂಕ

Explosives found : ಬೆಂಗಳೂರಿನ ಶಾಲೆಯೊಂದರ ಬಳಿ ದೊಡ್ಡ ಪ್ರಮಾಣದ ಸ್ಫೋಟಕಗಳು ಪತ್ತೆಯಾಗಿರುವುದು ಭಾರಿ ಆತಂಕಕ್ಕೆ ಕಾರಣವಾಗಿದೆ. ಶಾಲೆಗಳಿಗೆ ಈ ಹಿಂದೆಯೇ ಬೆದರಿಕೆ ಇದ್ದುದನ್ನು ಪೋಷಕರು ನೆನಪು ಮಾಡಿಕೊಂಡಿದ್ದಾರೆ.

VISTARANEWS.COM


on

Explosives found near School in Bengaluru
ಪ್ರಾತಿನಿಧಿಕ ಚಿತ್ರ
Koo

ಬೆಂಗಳೂರು: ಬೆಂಗಳೂರಿನ ವೈಟ್‌ ಫೀಲ್ಡ್‌ ಸಮೀಪದ ಬ್ರೂಕ್‌ ಫೀಲ್ಡ್‌ನಲ್ಲಿರುವ ಜನಪ್ರಿಯ ರಾಮೇಶ್ವರಂ ಕೆಫೆ (Rameshwaram Cafe) ಬಾಂಬ್ ಸ್ಫೋಟ ಪ್ರಕರಣ (Blast in Bengaluru) ಇಡೀ ದೇಶವನ್ನು ಬೆಚ್ಚಿ ಬೀಳಿಸಿತ್ತು. ಮಾರ್ಚ್‌ 1ರಂದು ನಡೆದ ಈ ಘಟನೆಯ ರೂವಾರಿಯನ್ನು ಪತ್ತೆ ಹಚ್ಚಲು ಪೊಲೀಸರು ಇನ್ನೂ ಸಫಲರಾಗಿಲ್ಲ. ಅದರ ನಡುವೆಯೇ ಬೆಂಗಳೂರಿನ ಪ್ರತಿಷ್ಠಿತ ಶಾಲೆಯೊಂದರ (Explosives found near school) ಮುಂಭಾಗದಲ್ಲಿ ದೊಡ್ಡ ಪ್ರಮಾಣದ ಸ್ಫೋಟಕ ವಸ್ತುಗಳು ಪತ್ತೆಯಾಗಿ (Explosives found) ಆತಂಕ ಮೂಡಿಸಿವೆ.

ಬೆಂಗಳೂರಿನ ಬೆಳ್ಳಂದೂರಿನ ಪ್ರಕ್ರಿಯಾ ಶಾಲೆ ಮುಂಭಾಗದ ಖಾಲಿ ಜಮೀನಿನಲ್ಲಿ ಬೃಹತ್‌ ಪ್ರಮಾಣದ ಜಿಲೆಟಿನ್ ಕಡ್ಡಿ, ಡಿಟೋನೇಟರ್​​ ಹಾಗೂ ಇತರ ಕೆಲವು ಸ್ಫೋಟಕಗಳು ಸಿಕ್ಕಿವೆ. ಈ ಸ್ಫೋಟಕಗಳನ್ನು ಟ್ರ್ಯಾಕ್ಟರ್‌ ಒಂದರಲ್ಲಿ ಇಟ್ಟಿರುವುದು ಪತ್ತೆಯಾಗಿದೆ.

ಬೆಳ್ಳಂದೂರು ಬಳಿಯ ಚಿಕ್ಕನಾಯಕನಹಳ್ಳಿ ದಿಣ್ಣೆಯ ಜಾಗದ ಮೇಲೆ ದಾಳಿ ಮಾಡಿದಾಗ ಈ ಸ್ಫೋಟಕಗಳು ಪತ್ತೆಯಾಗಿವೆ. ಮೆಲ್ನೋಟಕ್ಕೆ ಕಟ್ಟಡ ನಿರ್ಮಾಣ ಮಾಡುವ ಜಾಗದಲ್ಲಿ ಬಂಡೆಗಳನ್ನು ಸ್ಫೋಟಿಸಲು ಸ್ಫೋಟಕಗಳನ್ನು ಇಟ್ಟಿರುವ ಮಾಹಿತಿ ಇದೆಯಾದರೂ ಅಕ್ರಮವಾಗಿ ಸ್ಫೋಟಕ ವಸ್ತು ಸಂಗ್ರಹಿಟ್ಟಿರುವುದು ಸ್ಪಷ್ಟವಾಗಿದೆ.

ಸ್ಫೋಟಕ ವಸ್ತುಗಳನ್ನು ಹೀಗೆ ಸಾರ್ವಜನಿಕ ಜಾಗದಲ್ಲಿ ಇಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಅಕ್ರಮವಾಗಿ ಸ್ಪೋಟಕ ವಸ್ತುಗಳನ್ನು ಸಂಗ್ರಹಿಸಿಡಲಾಗಿದೆ ಎಂದು ಪೊಲೀಸರು ಸ್ವಯಂಪ್ರೇರಿತರಾಗಿ ಕೇಸ್ ದಾಖಲು ಮಾಡಿಕೊಂಡಿದ್ದಾರೆ.

ಬಂಡೆ ಒಡೆಯಲು ಇಟ್ಟಿದ್ದ ಸ್ಪೋಟಕ ವಸ್ತುಗಳು ಇವೆಂದು ಹೇಳಲಾಗಿದ್ದರೂ ಲೆಸೆನ್ಸ್ ಇಲ್ಲದೇ ಅಕ್ರಮವಾಗಿ ಸಂಗ್ರಹ ಮಾಡಲಾಗಿದೆ. ಜಿಲೆಟಿನ್ ಕಡ್ಡಿಗಳು ಮತ್ತು ಹಾಗೂ ಬ್ಲಾಸ್ಟ್ ಮಾಡಲು ಇಟ್ಟಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ : Blast in Bengaluru : ರಾಮೇಶ್ವರಂ ಕೆಫೆ ಸ್ಫೋಟ; ಶಂಕಿತ ಉಗ್ರ ಮಾಝ್‌ ಮುನೀರ್‌ NIA ವಶಕ್ಕೆ

Explosive found : ಶಾಲೆಗಳಿಗೆ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಹೆಚ್ಚು ಆತಂಕ

ಕೆಲವು ವಾರಗಳ ಹಿಂದೆ ಎರಡು ಬಾರಿ ಬೆಂಗಳೂರಿನ ಪ್ರತಿಷ್ಠಿತ ಶಾಲೆಗಳಿಗೆ ಬಾಂಬ್‌ ಬೆದರಿಕೆ ಹಾಕಲಾಗಿತ್ತು. ಶಾಲೆಯ ಆವರಣದಲ್ಲಿ ಬಾಂಬ್‌ ಇಡಲಾಗಿದೆ ಎಂದು ಎಲ್ಲಾ ಶಾಲೆಗಳಿಗೆ ಈ ಮೇಲ್‌ ಮೂಲಕ ಪತ್ರ ಬರೆಯಲಾಗಿತ್ತು. ಇದರಿಂದ ಭಾರಿ ಆತಂಕ ಸೃಷ್ಟಿಯಾಗಿತ್ತು. ಶಾಲೆಗಳ ಆವರಣದಲ್ಲಿ ಸಂಪೂರ್ಣ ಹುಡುಕಾಟ ನಡೆಸಿದ ಬಳಿಕವಷ್ಟೇ ಇದೊಂದು ಸುಳ್ಳು ಬೆದರಿಕೆ ಕರೆ ಎಂದು ಗೊತ್ತಾಗಿತ್ತು. ಇದೀಗ ಶಾಲೆಯ ಆವರಣದಲ್ಲೇ ಸ್ಫೋಟಕ ಸಿಕ್ಕಿದಾಗ ಸಹಜವಾಗಿ ಆತಂಕ ಜೋರಾಗಿದೆ.

ಇತ್ತ ಮಾರ್ಚ್ ಒಂದರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ ಸಂಭವಿಸಿತ್ತು. ವ್ಯಕ್ತಿಯೊಬ್ಬ ಇಟ್ಟು ಹೋದ ಬಾಂಬ್‌ ಸ್ಫೋಟಗೊಂಡು ಹತ್ತು ಮಂದಿ ಗಾಯಗೊಂಡಿದ್ದರು. ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ ನಡೆಸುತ್ತಿದ್ದರೂ ಆರೋಪಿ ಸಿಕ್ಕಿಲ್ಲ. ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಬಿಡಲಾಗಿದೆ. ಈ ಹಿಂದೆ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದವರನ್ನೇ ಮತ್ತೆ ವಿಚಾರಣೆ ನಡೆಸಲಾಗುತ್ತಿದೆ. ರಾಜ್ಯದ ನಾನಾ ಭಾಗಗಳಲ್ಲಿ ಹುಡುಕಾಡಿದರೂ ಆರೋಪಿ ಸಿಗದೆ ಇರುವುದು ಚರ್ಚೆಗೆ ಕಾರಣವಾಗಿದೆ.

Continue Reading

ವೈರಲ್ ನ್ಯೂಸ್

Pralhad Joshi : ಸಂತೋಷ್‌ ಲಾಡ್‌ ದಿನಾ ಮೋದಿಗೆ ಬಯ್ಯೋದ್ಯಾಕೆ: ರಹಸ್ಯ ಬಿಚ್ಚಿಟ್ಟ ಜೋಶಿ!

Pralhad Joshi : ಸಂತೋಷ್‌ ಲಾಡ್‌ ಅವರು ದಿನವೂ ಮೋದಿಯನ್ನು ಬೈಯೋದ್ಯಾಕೆ: ಈ ಪ್ರಶ್ನೆಗೆ ಹಾಸ್ಯಮಯ ಉತ್ತರ ನೀಡಿದ್ದಾರೆ ಪ್ರಹ್ಲಾದ್‌ ಜೋಶಿ.. ಏನಂತಾರೆ ಕೇಳಿ!

VISTARANEWS.COM


on

Pralhad Joshi Santhosh lad
Koo

ಹುಬ್ಬಳ್ಳಿ: ರಾಜ್ಯದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ (Minister Santhosh Lad) ಅವರು ಇತ್ತೀಚೆಗೆ ಪ್ರಬಲ ಮೋದಿ ಟೀಕಾಕಾರನಾಗಿ (Critic of Narendra Modi) ಬದಲಾಗಿದ್ದಾರೆ. ತುಂಬ ಅಧ್ಯಯನ ಮಾಡಿ, ಮೋದಿ ಅವರನ್ನು ಪ್ರಶ್ನೆ ಮಾಡುತ್ತಿದ್ದಾರೆ. ಚರ್ಚೆಗಳಲ್ಲಿ, ಸಭೆಗಳಲ್ಲಿ, ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲ ಮೋದಿ ಅವರನ್ನು ಟೀಕಿಸುತ್ತಿದ್ದಾರೆ. ಹಾಗಿದ್ದರೆ ಸಂತೋಷ್‌ ಲಾಡ್‌ ಒಮ್ಮಿಂದೊಮ್ಮೆಗೆ ಹೀಗೆ ಪ್ರಖರ ಟೀಕಾಕಾರನಾಗಿ ಬದಲಾಗಿದ್ದು ಹೇಗೆ? ಇದಕ್ಕೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಅವರಿಗೆ ಸ್ಪಷ್ಟ ಉತ್ತರ ಸಿಕ್ಕಿದೆಯಂತೆ!

ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಪ್ರಹ್ಲಾದ್‌ ಜೋಶಿ ಅವರು ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಸಂತೋಷ್‌ ಲಾಡ್‌ ಬೈಗುಳದ ರಹಸ್ಯ ತೆರೆದಿಟ್ಟಿದ್ದಾರೆ.

ಸಂತೋಷ್‌ ಲಾಡ್‌ ಅವರು ಇತ್ತೀಚೆಗೆ ನನ್ನನ್ನು ಮತ್ತು ಮೋದಿಯವರನ್ನು ನಿರಂತರವಾಗಿ ಬಯ್ಯುತ್ತಿದ್ದಾರೆ, ಟೀಕೆ ಮಾಡುತ್ತಿದ್ದಾರೆ. ಅವರು ಈ ರೀತಿಯ ಟೀಕೆ ಮಾಡುತ್ತಿರುವುದು ತಮ್ಮ ಸಚಿವ ಪದವಿ ಉಳಿಸಿಕೊಳ್ಳಲು. ಇದನ್ನು ಸ್ವತಃ ಅವರೇ ನನ್ನ ಬಳಿ ಹೇಳಿಕೊಂಡಿದ್ದಾರೆ ಎಂದು ಜೋಶಿ ಹೇಳಿದರು.

ನಾನು ಮತ್ತು ಲಾಡ್‌ ಆಗಾಗ ಫ್ಲೈಟ್‌ನಲ್ಲಿ ಸಿಗ್ತಾ ಇರುತ್ತೇವೆ. ದಿಲ್ಲಿಯಿಂದ ಬರುವಾಗ, ಬೆಂಗಳೂರಿನಿಂದ ಬರುವಾಗ ಸಿಗುತ್ತೇವೆ. ಮಾತಾಡಿಕೊಳ್ತೇವೆ. ಒಂದು ದಿನ ನಾನು ಕೇಳಿದೆ. ನೀವು ನನ್ನ ಮೇಲೆ ನಿರಂತರವಾಗಿ ಟೀಕೆ ಮಾಡ್ತಾ ಇರ್ತೀರಿ. ಅದೇನೂ ತೊಂದರೆ ಇಲ್ಲ. ನಾನು ಸಣ್ಣವನು. ಆದರೆ, ಮೋದಿ ಅವರ ಮೇಲೂ ದಾಳಿ ಮಾಡ್ತೀರಲ್ಲಾ, ನಿಮ್ಮ ಪರಿಸ್ಥಿತಿ ಏನು? ಎಂದು ಕೇಳಿದೆ.

ನಾನು ಮತ್ತು ಸಂತೋಷ್‌ ಲಾಡ್‌ ಹಿಂದಿಯಲ್ಲಿ ಮಾತಾಡೋದು ಜಾಸ್ತಿ. ಅವರು ಹಿಂದಿಯಲ್ಲಿ ಹೇಳಿದರು: ಕ್ಯಾ ಕರೂ ಸಾಬ್‌, ಊಪರ್‌ ಸೇ ಇನ್‌ಸ್ಟ್ರಕ್ಷನ್‌ ಹೈ, ಮೈ ಡೈಲಿ ಗಾಲಿ ನಹೀ ದಿಯಾ ತೋ ನೌಕರಿ ಚಲೀ ಜಾತೀ ಹೈ! (ಏನು ಮಾಡಲಿ ಸಾಹೇಬ್ರೆ.. ಮೇಲಿನಿಂದ ನನಗೆ ಸೂಚನೆ ಇದೆ. ದಿನಾ ಬಯ್ಯದೆ ಹೋದರೆ ನನ್ನ ಕೆಲಸವೇ ಹೋಗಿ ಬಿಡ್ತದೆ) ಎಂದು ಹೇಳಿದೆ.

ಆಗಿಂದ ನಾನು ತಲೆ ಕೆಡಿಸಿಕೊಂಡಿಲ್ಲ, ನೀವು ತಲೆ ಕೆಡಿಸಿಕೊಳ್ಳಬೇಡಿ. ಉತ್ತರ ಕೊಡುವಾಗ ಕೊಡ್ತೀನಿ ಎಂದು ಜೋಶಿಯವರು ಸಭೆಯಲ್ಲಿ ಹೇಳುವ ವಿಡಿಯೊ ಈಗ ಎಲ್ಲೆಡೆ ವೈರಲ್ ಆಗಿದೆ.

ಇದನ್ನೂ ಓದಿ : Lok Sabha Election 2024: ಈಶ್ವರಪ್ಪ ಬದಲಾಗುತ್ತಾರೆಂದ ಜೋಶಿ; ಕ್ಷೇತ್ರ ಬದಲಾವಣೆ ಆಗಲ್ಲ ಎಂದ ಬೊಮ್ಮಾಯಿ

Pralhad Joshi : ಸಂತೋಷ್‌ ಲಾಡ್‌ ಮಾಡಿದ ಪ್ರಮುಖ ಟೀಕೆಗಳೇನು?

  1. ಮೋದಿಯವರು ಅವರು ಯಾವುದೇ ಪತ್ರಿಕಾಗೋಷ್ಠಿ ಎದುರಿಸಲ್ಲ. ಎಲ್ಲವೂ ಪೂರ್ವ ನಿರ್ಧರಿತ ಮಾತು ಮಾತ್ರ. ಅವರು ನೇರ ಪ್ರಶ್ನೆಗೆ ಉತ್ತರ ನೀಡಿದರೆ ಅವರ ಬಂಡವಾಳ ಬಯಲಾಗುತ್ತದೆ.
  2. ಕಳೆದ ಬಾರಿ ಪುಲ್ವಾಮ ದಾಳಿಯಿಟ್ಟುಕೊಂಡು ಚುನಾವಣೆ ಎದುರಿಸಿದ ಬಿಜೆಪಿ, ಬಳಿಕ ಆ ಕುರಿತ ಚರ್ಚೆಯನ್ನೇ ಮಾಡಲಿಲ್ಲ.
  3. ಕಳೆದ 9 ವರ್ಷಗಳ ಕಾಲ ಶ್ರೀರಾಮಮಂದಿರ ನಿರ್ಮಾಣದ ಬಗ್ಗೆ ಮಾತನಾಡಲಿಲ್ಲ. ಇದೀಗ ನಾವೇ ಮಾಡಿದ್ದು ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ
  4. ದೇಶದ ಬಹುತೇಕ ಬಿಜೆಪಿ ನಾಯಕರು ಹಿಂದೂ -ಮುಸ್ಲಿಂ ಎಂದು ಮಾತನಾಡುತ್ತಿದ್ದಾರೆಯೇ ವಿನಃ ದೇಶದ ಸಮಸ್ಯೆಗಳ ಬಗ್ಗೆ ಚಕಾರ ಎತ್ತುತ್ತಿಲ್ಲ.
  5. ಬುಲೆಟ್ ಟ್ರೇನ್ ಬಿಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಈ ವರೆಗೂ ಬುಲೆಟ್ ಟ್ರೇನ್ ಬರಲಿಲ್ಲ. ನಾವು ಟಿಕೆಟ್ ತೆಗೆದುಕೊಂಡು ಕಾಯುತ್ತಿದ್ದೇವೆ.
  6. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಕರ್ನಾಟಕವನ್ನು ತಾಲಿಬಾನ್‌ಗೆ ಹೋಲಿಸಿದ್ದರು. ಆಗ ಯಾರೂ ಖಂಡಿಸಲಿಲ್ಲ. ಕಾಂಗ್ರೆಸ್ ಎಂದಾಕ್ಷಣ ಮಾಧ್ಯಮಗಳ ಎದುರು ಬಿಜೆಪಿ ನಾಯಕರು ಪ್ರತ್ಯಕ್ಷವಾಗಿಬಿಡುತ್ತಾರೆ.
Continue Reading

ಪ್ರಮುಖ ಸುದ್ದಿ

ಹನುಮಾನ್‌ ಚಾಲೀಸಾ ಕೇಸ್:‌ ಐದು ಮಂದಿ ಬಂಧನ, ಇಂದು ನಗರ್ತಪೇಟೆಯಲ್ಲಿ ಕೇಸರಿ ಹವಾ

ಹನುಮಾನ್‌ ಚಾಲೀಸಾ ಕೇಸ್: ಇವರು ಹಲ್ಲೆ ನಡೆಸಿ, ಪ್ರಕರಣ ಬಿಗಡಾಯಿಸುತ್ತಲೂ ಕೆಜಿ ಹಳ್ಳಿ ಭಾಗದಲ್ಲಿ ತಲೆ ಮರೆಸಿಕೊಂಡಿದ್ದರು ಎಂದು ಗೊತ್ತಾಗಿದೆ.

VISTARANEWS.COM


on

hanuman chalisa case
Koo

ಬೆಂಗಳೂರು: ಹನುಮಾನ್‌ ಚಾಲೀಸಾ (Hanuman Chalisa) ಹಾಕಿದ್ದಕ್ಕೆ ಮೊಬೈಲ್‌ ಅಂಗಡಿಯಾತನ ಮೇಲೆ ಹಲ್ಲೆ (assault case) ನಡೆಸಿದ ಪ್ರಕರಣದಲ್ಲಿ ಇದುವರೆಗೂ ಇನ್ನೂ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಇದರೊಂದಿಗೆ ಹಲ್ಲೆ ಪ್ರಕರಣದಲ್ಲಿ (crime news) ಒಟ್ಟು ಐವರನ್ನು ಬಂಧಿಸಿದಂತಾಗಿದೆ.

ಮೊಬೈಲ್‌ ಅಂಗಡಿ ಮಾಲೀಕ ಮುಖೇಶ್ ಎಂಬವರ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಇನ್ನಿಬ್ಬರು ಆರೋಪಿಗಳನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ಸುಲೈಮಾನ್, ರೋಹಿತ್ ಮತ್ತು ಶಹನವಾಜ್ ಎಂಬ ಮೂರು ಆರೋಪಿಗಳನ್ನು ಬಂಧಿಸಿದ್ದರು. ತರುಣ್ ಮತ್ತು ಇನ್ನೊಬ್ಬ ಯುವಕನನ್ನು ನಿನ್ನೆ ರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೀಗಾಗಿ ಈ ಪ್ರಕರಣದಲ್ಲಿ ಒಟ್ಟು ಐದು ಜನ ಆರೋಪಿಗಳು ಪೊಲೀಸರ ವಶಕ್ಕೆ ಸಿಕ್ಕಿದಂತಾಗಿದೆ.

ಇವರು ಹಲ್ಲೆ ನಡೆಸಿ, ಪ್ರಕರಣ ಬಿಗಡಾಯಿಸುತ್ತಲೂ ಕೆಜಿ ಹಳ್ಳಿ ಭಾಗದಲ್ಲಿ ತಲೆ ಮರೆಸಿಕೊಂಡಿದ್ದರು ಎಂದು ಗೊತ್ತಾಗಿದೆ. ವಶಕ್ಕೆ ಪಡೆದಿರುವ ಆರೋಪಿಗಳನ್ನು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಒಟ್ಟು ಆರು ಜನರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇನ್ನೂ ಒಬ್ಬನನ್ನು ಬಂಧಿಸಬೇಕಾಗಿದೆ.

“ಭಾನುವಾರ ಸಾಯಂಕಾಲ 6:15ರ ಸುಮಾರಿಗೆ ಐದು ಮಂದಿ ಮೊಬೈಲ್‌ ಅಂಗಡಿಯ ಮುಖೇಶ್‌ ಮೇಲೆ ಹಲ್ಲೆ ಮಾಡಿದ್ದಾರೆ. ಅಂಗಡಿಯಿಂದ ಹೊರಗೆಳೆದು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆಂದು ದೂರು ನೀಡಿದ್ದಾರೆ. ಈ ದಿನ ಮೂವರನ್ನು ಆರೆಸ್ಟ್ ಮಾಡಿದ್ದೇವೆ. ಮೂವರನ್ನೂ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಆರೋಪಿಗಳಲ್ಲಿ ಎರಡೂ ಕೋಮಿನವರು ಇದ್ದಾರೆ. ಓರ್ವ ಆರೋಪಿ ಮೇಲೆ ಎರಡು ಪ್ರಕರಣಗಳಿವೆ, ಹಲ್ಲೆ ಹಾಗೂ ಸುಲಿಗೆ ಕೇಸ್ ಇದೆ” ಎಂದು ನಿನ್ನೆ ಕೇಂದ್ರ ವಿಭಾಗ ಡಿಸಿಪಿ ಶೇಖರ್ ಹೆಚ್.ಟಿ ಹೇಳಿಕೆ ನೀಡಿದ್ದರು.

ಇಂದು ನಗರ್ತಪೇಟೆಯಲ್ಲಿ ಕೇಸರಿ ಹವಾ

ಮುಖೇಶ್ ಮೇಲಿನ ಹಲ್ಲೆ ಪ್ರಕರಣ ಹಿನ್ನೆಲೆಯಲ್ಲಿ ನಗರ್ತಪೇಟೆಯಲ್ಲಿ ಇಂದು ಹನುಮಾನ್ ಚಾಲೀಸಾದೊಂದಿಗೆ ಕೇಸರಿ ಸಂಚಾರ ನಡೆಯಲಿದೆ. ಹಿಂದೂ ಕಾರ್ಯಕರ್ತರಿಗೆ ಕೇಸರಿ ಶಾಲು, ಕೇಸರಿ ಧ್ವಜ ಧರಿಸಿ ಬರಲು ಸಂಸದ ತೇಜಸ್ವಿ ಸೂರ್ಯ (Tejaswi Surya) ಸೂಚನೆ ನೀಡಿದ್ದು, ಅಂಗಡಿ ಮುಂಗಟ್ಟುಗಳಲ್ಲಿ ಹನುಮಾನ್‌ ಚಾಲೀಸ್‌ ಮೊಳಗಿಸುವಂತೆ ಕರೆ ನೀಡಿದ್ದಾರೆ.

ಮಧ್ಯಾಹ್ನ 12:30ಕ್ಕೆ ಮುಖೇಶ್ ಅಂಗಡಿ ಬಳಿ ಹಾಜರಾಗಲಿರುವ ಹಿಂದೂ- ಬಿಜೆಪಿ ಕಾರ್ಯಕರ್ತರು, ಸಿದ್ದಣ್ಣನ ಗಲ್ಲಿಯ ಮುಖೇಶ್ ಅಂಗಡಿಯಿಂದ ಸಂಚಾರ ಪ್ರಾರಂಭಿಸಲಿದ್ದಾರೆ. ಈ ವಿಚಾರವಾಗಿ ಕರೆಕೊಟ್ಟಿರುವ ತೇಜಸ್ವಿ ಸೂರ್ಯ ಜೊತೆಗೆ ಸಂಸದ ಪಿ.ಸಿ ಮೋಹನ್, ಸಪ್ತಗಿರಿಗೌಡ ಇನ್ನಿತರರು ಭಾಗಿಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಹನುಮಾನ್‌ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಕೇಸ್‌; ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ವಿಜಯೇಂದ್ರ ಆಗ್ರಹ

Continue Reading
Advertisement
Mukesh Khanna rejects Ranveer Singh as Shaktimaan
ಬಾಲಿವುಡ್9 mins ago

Mukesh Khanna: ʻಶಕ್ತಿಮಾನ್ʼ ಆಗುವ ಯೋಗ್ಯತೆ ರಣವೀರ್‌ಗೆ ಇಲ್ಲ ಎಂದ ಮಹಾಭಾರತದ ʻಭೀಷ್ಮʼ!

narendra modi rumen radev
ದೇಶ17 mins ago

PM Narendra Modi: ಮೋದಿಗೆ ಥ್ಯಾಂಕ್ಸ್‌ ಹೇಳಿದ ಬಲ್ಗೇರಿಯಾ ಅಧ್ಯಕ್ಷ, ಮೋದಿ ಉತ್ತರ ಹೀಗಿತ್ತು

Lok Sabha Election 2024 HD Kumaraswamy contest from Mandya and Congress candidate to be replaced
Lok Sabha Election 202418 mins ago

Lok Sabha Election 2024: ಮಂಡ್ಯದಿಂದ ಎಚ್‌ಡಿಕೆ ಕಣಕ್ಕೆ? ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಬದಲು?

Ravichandran Ashwin
ಕ್ರೀಡೆ19 mins ago

IPL 2024: ಆರ್​ಸಿಬಿ-ಚೆನ್ನೈ ಪಂದ್ಯದ ಟಿಕೆಟ್​ಗಾಗಿ ಸಹಾಯ ಕೋರಿದ ಸ್ಟಾರ್​ ಆಟಗಾರ ಅಶ್ವಿನ್

Explosives found near School in Bengaluru
ಬೆಂಗಳೂರು37 mins ago

Explosives Found : ಬೆಂಗಳೂರಿನ ಶಾಲೆ ಬಳಿ ಬೃಹತ್‌ ಪ್ರಮಾಣದ ಸ್ಫೋಟಕ ಪತ್ತೆ, ಮತ್ತೆ ಆತಂಕ

KL Rahul
ಕ್ರೀಡೆ51 mins ago

IPL 2024: ಐಪಿಎಲ್​ಗೆ ಕನ್ನಡಿಗ ರಾಹುಲ್‌ ಫಿಟ್‌; ಆದರೆ…

Pralhad Joshi Santhosh lad
ವೈರಲ್ ನ್ಯೂಸ್1 hour ago

Pralhad Joshi : ಸಂತೋಷ್‌ ಲಾಡ್‌ ದಿನಾ ಮೋದಿಗೆ ಬಯ್ಯೋದ್ಯಾಕೆ: ರಹಸ್ಯ ಬಿಚ್ಚಿಟ್ಟ ಜೋಶಿ!

hanuman chalisa case
ಪ್ರಮುಖ ಸುದ್ದಿ1 hour ago

ಹನುಮಾನ್‌ ಚಾಲೀಸಾ ಕೇಸ್:‌ ಐದು ಮಂದಿ ಬಂಧನ, ಇಂದು ನಗರ್ತಪೇಟೆಯಲ್ಲಿ ಕೇಸರಿ ಹವಾ

Delhi
ದೇಶ2 hours ago

Delhi Pollution: ಮತ್ತೆ ವಿಶ್ವದ ಅತ್ಯಂತ ಕಲುಷಿತ ರಾಜಧಾನಿಯಾದ ದೆಹಲಿ

Kannada New Movie Pavan Kumar Wadeyar New Movie
ಸ್ಯಾಂಡಲ್ ವುಡ್2 hours ago

Kannada New Movie: ಸೆಟ್ಟೇರಿತು ಪವನ್ ಒಡೆಯರ್ ನಿರ್ಮಾಣದ ಮತ್ತೊಂದು ಸಿನಿಮಾ

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina Bhavishya
ಭವಿಷ್ಯ6 hours ago

Dina Bhavishya : ಈ ರಾಶಿಯವರು ಎಚ್ಚರ ವಹಿಸಿ; ಅಮೂಲ್ಯವಾದ ವಸ್ತುವೊಂದು ಕೈ ತಪ್ಪಬಹುದು

Tejaswi Surya About Hanuman Chalisa Issue
ಬೆಂಗಳೂರು17 hours ago

ಹನುಮಾನ್‌ ಚಾಲೀಸಾ ಕೇಸ್‌; ಆರೋಪಿಗಳು ಅರೆಸ್ಟ್ ಆಗದಿದ್ದರೆ ಪ್ರತಿಭಟನೆ- ತೇಜಸ್ವಿ ಸೂರ್ಯ ಎಚ್ಚರಿಕೆ

read your daily horoscope predictions for march 18 2024
ಭವಿಷ್ಯ1 day ago

Dina Bhavishya : ಈ ದಿನ ನೀವೂ ಮೋಸ ಹೋಗುವುದು ಗ್ಯಾರಂಟಿ; ಬೆನ್ನ ಹಿಂದೆಯೇ ನಡೆಯುತ್ತೆ ಪಿತೂರಿ

Lok Sabha Election 2024 Congress finalises list of 13 seats
Lok Sabha Election 20242 days ago

Lok Sabha Election 2024: ಕಾಂಗ್ರೆಸ್‌ನಲ್ಲಿ 13 ಕ್ಷೇತ್ರಗಳ ಪಟ್ಟಿ ಫೈನಲ್!‌ ಸಂಭಾವ್ಯ ಅಭ್ಯರ್ಥಿಗಳ ಲಿಸ್ಟ್‌ ಇಲ್ಲಿದೆ

dina Bhvishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಅತ್ತೆ ಮನೆಯಿಂದ ಸಿಗಲಿದೆ ಭರಪೂರ ಉಡುಗೊರೆ

Dina Bhavishya
ಭವಿಷ್ಯ3 days ago

Dina Bhavishya : ಇವತ್ತು ಈ ರಾಶಿಯವರು ಮೌನದಿಂದ ಇರುವುದು ಒಳಿತು

Lok Sabha Election 2024 Is Operation JDS Worker Behind DK Brothers Breakfast Meeting
Lok Sabha Election 20244 days ago

Lok Sabha Election 2024: ಡಿಕೆ ಬ್ರದರ್ಸ್‌ ಬ್ರೇಕ್‌ಫಾಸ್ಟ್‌ ಮೀಟಿಂಗ್ ಹಿಂದೆ ‘ಆಪರೇಷನ್‌ ಜೆಡಿಎಸ್‌ ಕಾರ್ಯಕರ್ತ’?

read your daily horoscope predictions for march 15 2024
ಭವಿಷ್ಯ4 days ago

Dina Bhavishya : ಕೆಲವು ರಹಸ್ಯ ವಿಷಯಗಳು ಈ ರಾಶಿಯವರಿಗೆ ಅಚ್ಚರಿ ತರಲಿದೆ

Lok Sabha Election 2024 Yaduveer talks about entering politics and Yaduveer Krishnadatta Chamaraja Wadiyar meets BY Vijayendra
ಕರ್ನಾಟಕ5 days ago

‌Lok Sabha Election 2024: ಮೆಣಸಿನಕಾಯಿಯನ್ನು ಜೀರ್ಣಿಸಿಕೊಳ್ತೇನೆ; ನನ್ನ ಮೇಲೆ ರಾಜಸ್ಥಾನದ ಪ್ರಭಾವ ಇಲ್ಲ: ಯದುವೀರ್

Different Danny Filed Case Against Ravi Varma
ಬೆಂಗಳೂರು5 days ago

Different Danny : ಫೈಟ್‌ ಮಾಸ್ಟರ್ಸ್‌ ಫೈರ್‌ ಫೈಟಿಂಗ್‌; ರವಿವರ್ಮ ವಿರುದ್ಧ ಡಿಫರೆಂಟ್‌ ಡ್ಯಾನಿ ಸಮರ

ಟ್ರೆಂಡಿಂಗ್‌