7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು - Vistara News

ಕರ್ನಾಟಕ

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

ರಾಜ್ಯ ಸರ್ಕಾರವು ಏಳನೇ ವೇತನ ಆಯೋಗವನ್ನು (7th Pay Commission) ರಚಿಸಿರುವುದಕ್ಕೆ ಸರ್ಕಾರಿ ನೌಕರರು ಹರ್ಷ ವ್ಯಕ್ತಪಡಿಸುತ್ತಿದ್ದು, ಆಯೋಗದ ಶಿಫಾರಸುಗಳು ಮುಂದಿನ ಏಪ್ರಿಲ್‌ನಿಂದಲೇ ಜಾರಿಯಾಗಬಹುದೆಂಬ ನಿರೀಕ್ಷೆಯಲ್ಲಿದ್ದಾರೆ.

VISTARANEWS.COM


on

7th Pay Commission
ವೇತನ ಆಯೋಗ ರಚಿಸುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುತ್ತಿರುವ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ಸರ್ಕಾರವು ಏಳನೇ ವೇತನ ಆಯೋಗವನ್ನು (7th Pay Commission) ರಚಿಸಿರುವುದಕ್ಕೆ ಸರ್ಕಾರಿ ನೌಕರರು ಹರ್ಷ ವ್ಯಕ್ತಪಡಿಸುತ್ತಿದ್ದು, ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತಿದ್ದಾರೆ.

ಈ ಹಿಂದೆ ತಿಳಿಸಿದಂತೆ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಏಳನೇ ವೇತನ ಆಯೋಗವನ್ನು ರಚಿಸಿರುವುದಾಗಿ ದಾವಣಗೆರೆಯಲ್ಲಿ ಬುಧವಾರ ಬೆಳಗ್ಗೆ ಘೋಷಿಸಿದ್ದಾರೆ. ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ್ ರಾವ್‌ ಅವರನ್ನು ಈ ಆಯೋಗದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ಸಂಬಂಧ ಸರ್ಕಾರದ ಅಧಿಸೂಚನೆ ಇನ್ನಷ್ಟೇ ಹೊರಡಬೇಕಿದೆ. ಆಯೋಗಕ್ಕೆ ಎರಡು ತಿಂಗಳೊಳಗೆ ಮಧ್ಯಂತರ ವರದಿ ನೀಡುವಂತೆ ಸರ್ಕಾರ ಸೂಚಿಸಿದ್ದು, ಮುಂದಿನ ಫೆಬ್ರವರಿಯ ಒಳಗೆ ಆಯೋಗ ವರದಿ ನೀಡಲಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಮೂಲವೇತನದೊಂದಿಗೆ ತುಟ್ಟಿ ಭತ್ಯೆ (ಡಿಎ) ಸೇರಿಸಿ ಅದರ ಆಧಾರದಲ್ಲಿ ವೇತನ ಪರಿಷ್ಕರಣೆ ಮಾಡಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘ ಈಗಾಗಲೇ ಸರ್ಕಾರವನ್ನು ಒತ್ತಾಯಿಸಿತ್ತು. ಈ ಮೂಲಕ ಮೂಲ ವೇತನದ ಶೇ.40ರಷ್ಟು ವೇತನ ಹೆಚ್ಚಳ ನಿರೀಕ್ಷಿಸಲಾಗುತ್ತಿದೆ.

ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇವೆ
ಸರ್ಕಾರ ವೇತನ ಆಯೋಗ ರಚನೆ ಮಾಡಿ ಆದೇಶ ಹೊರಡಿಸುತ್ತಿರುವುದು ಖುಷಿಯ ವಿಚಾರ. ಸರ್ಕಾರಿ ನೌಕರರ ಬಗ್ಗೆ ವಿಶೇಷ ಕಾಳಜಿ ತೋರುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಧನ್ಯವಾದಗಳು. ಈ ಕುರಿತು ನಮ್ಮ ಬೇಡಿಕೆಗೆ ಸಹಮತ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರನ್ನೂ ಈ ಸಂದರ್ಭದಲ್ಲಿ ಸ್ಮರಿಸುತ್ತೇವೆ.
ಸಿ ಎಸ್‌ ಷಡಾಕ್ಷರಿ | ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು.

2023ರ ಏಪ್ರಿಲ್‌ 1 ರಿಂದ ಆರ್ಥಿಕ ಅನುಕೂಲ ಸಿಗಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ. ಈಗಾಗಲೇ ಮುಖ್ಯಮಂತ್ರಿಯವರು ಈ ಬಗ್ಗೆ ಭರವಸೆಯನ್ನು ನೀಡಿದ್ದಾರೆ. ಆಯೋಗ 2023ರ ಫೆಬ್ರವರಿಯಲ್ಲಿ ಮಧ್ಯಂತರ ವರದಿ ನೀಡಲಿದ್ದು, ಫೆಬ್ರವರಿಯಲ್ಲಿ ಮಂಡಿಸಲಾಗುವ ಬಜೆಟ್‌ನಲ್ಲೇ ವೇತನ ಪರಿಷ್ಕರಣೆಯ ತೀರ್ಮಾನವನ್ನು ಸರ್ಕಾರ ಪ್ರಕಟಿಸುವ ನಿರೀಕ್ಷೆಯಿದೆ. ಮಾರ್ಚ್‌ನಲ್ಲಿ ಈ ಸಂಬಂಧ ಆದೇಶ ಹೊರಡಿಸಲಿದ್ದು, ಏಪ್ರಿಲ್‌ನಿಂದ ಜಾರಿಯಾಗಲಿದೆ ಎಂದು ಸಿ.ಎಸ್‌. ಷಡಾಕ್ಷರಿ ತಿಳಿಸಿದ್ದಾರೆ.

ಗುರುವಾರ ಸಿಎಂಗೆ ಅಭಿನಂದನೆ
7ನೇ ವೇತನ ಆಯೋಗ ರಚನೆ ಬಗ್ಗೆ ದೃಢ ನಿರ್ಧಾರ ತೆಗೆದುಕೊಂಡ ಮುಖ್ಯಮಂತ್ರಿಗಳನ್ನು ನವೆಂಬರ್‌ 10ರಂದು ಅಭಿನಂದನಿಸಲು ರಾಜ್ಯ ಸರ್ಕಾರಿ ನೌಕರರ ಸಂಘವು ತೀರ್ಮಾನಿಸಿದೆ. ಗುರುವಾರ ಬೆಳಗ್ಗೆ 10.30 ಕ್ಕೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ರಾಜ್ಯದ ಸರ್ಕಾರಿ ನೌಕರರ, ನಿಗಮ ಮಂಡಳಿ, ಪ್ರಾಧಿಕಾರ ಹಾಗೂ ನಿವೃತ್ತ ನೌಕರರ 11 ಲಕ್ಷ ಕುಟುಂಬದ ಸದಸ್ಯರ ಪರವಾಗಿ ಅವರಿಗೆ ಅಭಿನಂದನೆ ಸಲ್ಲಿಸಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷ ಸಿ. ಎಸ್‌. ಷಡಾಕ್ಷರಿ ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು, ಜಿಲ್ಲಾ ಮತ್ತು ತಾಲೂಕು ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ನಿರ್ದೇಶಕರುಗಳು, ವೃಂದ ಸಂಘಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

ಇದನ್ನೂ ಓದಿ | 7th Pay Commission | 7ನೇ ವೇತನ ಆಯೋಗ ರಚನೆಯ ಘೋಷಣೆ; ಅಧ್ಯಕ್ಷರಾಗಿ ಸುಧಾಕರ್‌ ರಾವ್‌ ನೇಮಕ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
1 Comment

1 Comment

  1. Kamalanabhaiah Puttarangaiah

    9 November 2022, 7:52 PM at 7:52 pm

    ಮಾನ್ಯ ಷಡಕ್ಷರಿ ಅವರೇ,
    ಇರುವ DA ಯನ್ನು ಮೂಲ ವೇತನಕ್ಕೆ ವಿಲೀನ ಗೊಳಿಸಿ 2% DA ಕೊಡುವುದು ಪರಿಷ್ಕರಣೆ ಆಗಲಾರದು. ನಿಮ್ಮ ಈ ಶ್ರಮವನ್ನು ಕಾದು ನೋಡುತ್ತೇವೆ.
    ನಮಸ್ಕಾರ.

Leave a Reply

Cancel reply

Your email address will not be published. Required fields are marked *

ಶ್ರದ್ಧಾಂಜಲಿ

Arjun Deva: ಹಿರಿಯ ಪತ್ರಕರ್ತ ಅರ್ಜುನ್ ದೇವ ನಿಧನ; ಗಣ್ಯರ ಕಂಬನಿ

Arjun Deva: ಅರ್ಜುನ್​ ದೇವ ಅವರು ತಾಯಿನಾಡು ಪತ್ರಿಕೆ, ಸಂಯುಕ್ತ ಕರ್ನಾಟಕ ಹಾಗೂ ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಮುಖ ಹುದ್ದೆಗಳನ್ನು ನಿರ್ವಹಣೆ ಮಾಡಿದ್ದಾರೆ. ಪತ್ರಿಕೋದ್ಯಮದ ಸೂಕ್ಷ್ಮತೆಯನ್ನು ಅರಿತಿದ್ದ ಇವರು, ಸರಳ ವ್ಯಕ್ತಿತ್ವವನ್ನು ಹೊಂದಿದ್ದರು. ಇದಲ್ಲದೆ, ಸೂರ್ಯೋದಯ ಪತ್ರಿಕೆಯ ಸಂಪಾದಕರಾಗಿಯೂ ಸೇವೆ ಸಲ್ಲಿಸಿದ್ದರು. ಅವರು ಹುಟ್ಟೂರು ಕೋಲಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

VISTARANEWS.COM


on

Veteran journalist Arjun Deva passes away
Koo

ಬೆಂಗಳೂರು: ಹಿರಿಯ ಪತ್ರಕರ್ತ ಅರ್ಜುನ್ ದೇವ (Arjun Deva) ಅವರು ಬುಧವಾರ (ಏಪ್ರಿಲ್​ 24) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕರ್ನಾಟಕ ಮಾಧ್ಯಮ ಅಕಾಡೆಮಿ (ಹಿಂದಿನ ಪತ್ರಕರ್ತರ ಅಕಾಡೆಮಿ) ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ಅರ್ಜುನ್​ ದೇವ ಅವರಿಗೆ 92 ವರ್ಷವಾಗಿತ್ತು. ಅನಾರೋಗ್ಯ ಹಿನ್ನೆಲಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ. ಅವರಿಗೆ ಇಬ್ಬರು ಮಕ್ಕಳು ಇದ್ದಾರೆ.

ಅರ್ಜುನ್​ ದೇವ ಅವರು ತಾಯಿನಾಡು ಪತ್ರಿಕೆ, ಸಂಯುಕ್ತ ಕರ್ನಾಟಕ ಹಾಗೂ ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಮುಖ ಹುದ್ದೆಗಳನ್ನು ನಿರ್ವಹಣೆ ಮಾಡಿದ್ದಾರೆ. ಪತ್ರಿಕೋದ್ಯಮದ ಸೂಕ್ಷ್ಮತೆಯನ್ನು ಅರಿತಿದ್ದ ಇವರು, ಸರಳ ವ್ಯಕ್ತಿತ್ವವನ್ನು ಹೊಂದಿದ್ದರು. ಇದಲ್ಲದೆ, ಸೂರ್ಯೋದಯ ಪತ್ರಿಕೆಯ ಸಂಪಾದಕರಾಗಿಯೂ ಸೇವೆ ಸಲ್ಲಿಸಿದ್ದರು.

ಅರ್ಜುನ್​ ದೇವ ಅವರು ಕೋಲಾರ ಜಿಲ್ಲೆಯ ಚೌಡದೇವನಹಳ್ಳಿಯಲ್ಲಿಯವರಾಗಿದ್ದಾರೆ. ಬುಧವಾರ ಸಂಜೆ ಚೌಡದೇವನಹಳ್ಳಿಯಲ್ಲಿ ಅಂತ್ಯಸಂಸ್ಕಾರವನ್ನು ನೆರವೇರಿಸಲಾಗುವುದು ಎಂದು ಕುಟುಂಬ ಮೂಲದವರು ತಿಳಿಸಿದ್ದಾರೆ.

ಹಿರಿಯ ಪತ್ರಕರ್ತರಾದ ಅರ್ಜುನ್ ದೇವ್‌ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಪ್ರಜಾವಾಣಿ, ಸಂಯುಕ್ತ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಯಲ್ಲಿ ಸಲ್ಲಿಸಿದ್ದ ಸೇವೆ ಅನನ್ಯವಾದದ್ದು. ಪತ್ರಕರ್ತರ ಸಂಘಟನೆಯಲ್ಲಿ ಅವರಿಗಿದ್ದ ಬದ್ಧತೆ, ಸಮಾಜಮುಖಿಯಾಗಿ ತೊಡಗಿಸಿಕೊಳ್ಳುವ ಪರಿ ನಿಜಕ್ಕೂ ಶ್ಲಾಘನೀಯ. ಸಂಘದ ಅಧ್ಯಕ್ಷರಾಗಿ ಕ್ರಿಯಾಶೀಲವಾಗಿ ಕೆಲಸ ಮಾಡಿದ್ದ ಅರ್ಜುನ್ ದೇವ ಅವರ ನಿಧನದಿಂದ ಸುದ್ದಿಮನೆಗೆ ತುಂಬಲಾರದ ನಷ್ಟವಾಗಿದೆ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಎಚ್‌ಡಿಕೆ ಸಂತಾಪ

ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ, ನಾಡಿನ ಹಲವಾರು ಪತ್ರಿಕೆಗಳ ಸಂಪಾದಕರಾಗಿ ಅನನ್ಯ ಸೇವೆ ಸಲ್ಲಿಸಿದ್ದ ಅರ್ಜುನ ದೇವ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಯಿತು. ಹಲವು ತಲೆಮಾರುಗಳ ಮಾಧ್ಯಮ ಬೆಳವಣಿಗೆಯ ಕೊಂಡಿಯಾಗಿದ್ದ ಅವರು ನಿಷ್ಠೆ, ಪ್ರಾಮಾಣಿಕತೆ, ದಕ್ಷತೆಗೆ ಹೆಸರಾಗಿದ್ದರು. ಅನೇಕ ಗ್ರಾಮೀಣ ಪ್ರತಿಭೆಗಳನ್ನು ಮಾಧ್ಯಮ ಲೋಕಕ್ಕೆ ಪರಿಚಯಿಸಿದ್ದರು. ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಅಭಿಮಾನಿಗಳು, ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: Lok Sabha Election 2024: ಬೆಂಗಳೂರು ಗ್ರಾಮಾಂತರಕ್ಕೆ ಡಬಲ್ ಸೆಕ್ಯೂರಿಟಿ; 28 ಲೋಕಸಭಾ ಕ್ಷೇತ್ರದ ಮತದಾರರು ಎಷ್ಟು?

ಕೆಯುಡಬ್ಲ್ಯೂಜೆ ಕಂಬನಿ

ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಅರ್ಜುನ್ ದೇವ್ (92) ಅವರು ನಿಧನಕ್ಕೆ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ ವ್ತಕ್ತಪಡಿಸಿದೆ. ತಾಯಿನಾಡು, ಸಂಯುಕ್ತ ಕರ್ನಾಟಕ, ಪ್ರಜಾವಾಣಿ, ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದ ಹಿರಿಯ ಚೇತನ ಅರ್ಜುನ್ ದೇವ್ ಅವರಾಗಿದ್ದರು ಎಂದು ಕೆಯುಡಬ್ಲ್ಯೂಜೆ ಶೋಕ ವ್ಯಕ್ತಪಡಿಸಿದೆ.

ಪತ್ರಕರ್ತರ ಸಂಘಟನೆಯಲ್ಲಿ ಅವರಿಗಿದ್ದ ಬದ್ಧತೆ, ಸಮಾಜಮುಖಿಯಾಗಿಯಾಗಿ ತೊಡಗಿಸಿಕೊಳ್ಳುವ ಪರಿ ನಿಜಕ್ಕೂ ಶ್ಲಾಘನೀಯ. ಸಂಘದ ಅಧ್ಯಕ್ಷರಾಗಿ ಕ್ರಿಯಾಶೀಲವಾಗಿ ಕೆಲಸ ಮಾಡಿದ್ದ ಅರ್ಜುನ್ ದೇವ್ ಅವರ ನಿಧನ ಸುದ್ದಿಮನೆಗೆ ತುಂಬಲಾರದ ನಷ್ಟ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸಂತಾಪ ಸೂಚಿಸಿದ್ದಾರೆ.

Continue Reading

ಬೆಂಗಳೂರು ಗ್ರಾಮಾಂತರ

Lok Sabha Election 2024: ಬೆಂಗಳೂರು ಗ್ರಾಮಾಂತರಕ್ಕೆ ಡಬಲ್ ಸೆಕ್ಯೂರಿಟಿ; 28 ಲೋಕಸಭಾ ಕ್ಷೇತ್ರದ ಮತದಾರರು ಎಷ್ಟು?

Lok Sabha Election 2024: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಅಕ್ರಮಗಳು ನಡೆಯಬಹುದು. ಈ ಕ್ಷೇತ್ರದಲ್ಲಿ ಪ್ರಭಾವಿ ಎದುರಾಳಿಗಳು ಆಡಳಿತಯಂತ್ರವನ್ನು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಹೆಚ್ಚಿನ ಭದ್ರತೆ ಹಾಗೂ ಅರೆ ಸೇನಾ ಪಡೆಯನ್ನು ನಿಯೋಜನೆ ಮಾಡುವಂತೆ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್.‌ ಮಂಜುನಾಥ್ ಅವರು ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ರಾಜ್ಯ ಚುನಾವಣಾ ಆಯೋಗವು ಈ ಮನವಿಯನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ರವಾನೆ ಮಾಡಿತ್ತು. ಅಲ್ಲಿಂದ ಜಿಲ್ಲಾಧಿಕಾರಿಗೆ ಸೂಚನೆಯನ್ನು ನೀಡಲಾಗಿತ್ತು. ಅದರನ್ವಯ ಈಗ ಕ್ರಮ ವಹಿಸಲಾಗಿದೆ. ಚುನಾವಣಾಧಿಕಾರಿಗಳ ಕೋರಿಕೆಯಂತೆ ಹೆಚ್ಚು ಭದ್ರತೆ ಮಾಡಲಾಗಿದೆ ಎಂದು ಮನೋಜ್‌ ಕುಮಾರ್ ಮೀನಾ ಹೇಳಿದ್ದಾರೆ.

VISTARANEWS.COM


on

Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇದೇ ಏಪ್ರಿಲ್‌ 26ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ. ಇನ್ನು ಅತಿ ಸೂಕ್ಷ್ಮ ಲೋಕಸಭಾ ಕ್ಷೇತ್ರವೆಂದು ಪರಿಗಣಿಸಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ (Bangalore Rural Lok Sabha constituency) ಡಬಲ್ ಸೆಕ್ಯೂರಿಟಿ ಸಿಸ್ಟಮ್ ಅನ್ನು ಅಳವಡಿಕೆ ಮಾಡಲಾಗಿದೆ. ಇಲ್ಲಿಗೆ ಒಟ್ಟು 7 ಪ್ಯಾರಾ ಮಿಲಿಟರಿ ತುಕಡಿಯನ್ನು (Para military contingent) ನಿಯೋಜನೆ ಮಾಡಲಾಗಿದೆ. ಅಲ್ಲದೆ, 28 ಲೋಕಸಭಾ ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ, ಮತದಾನ ಪ್ರಕ್ರಿಯೆಯ ನಿಯಮಗಳನ್ನು ಸಹ ಚುನಾವಣಾ ಆಯೋಗವು ಪ್ರಕಟಿಸಿದೆ.

ಈ ಬಗ್ಗೆ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಎಲ್ಲ ಮತಗಟ್ಟೆಯಲ್ಲಿ ಶೇಕಡಾ 100 ವೆಬ್ ಕಾಸ್ಟಿಂಗ್ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಅಕ್ರಮಗಳು ನಡೆಯಬಹುದು. ಈ ಕ್ಷೇತ್ರದಲ್ಲಿ ಪ್ರಭಾವಿ ಎದುರಾಳಿಗಳು ಆಡಳಿತಯಂತ್ರವನ್ನು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಹೆಚ್ಚಿನ ಭದ್ರತೆ ಹಾಗೂ ಅರೆ ಸೇನಾ ಪಡೆಯನ್ನು ನಿಯೋಜನೆ ಮಾಡುವಂತೆ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್.‌ ಮಂಜುನಾಥ್ ಅವರು ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ರಾಜ್ಯ ಚುನಾವಣಾ ಆಯೋಗವು ಈ ಮನವಿಯನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ರವಾನೆ ಮಾಡಿತ್ತು. ಅಲ್ಲಿಂದ ಜಿಲ್ಲಾಧಿಕಾರಿಗೆ ಸೂಚನೆಯನ್ನು ನೀಡಲಾಗಿತ್ತು. ಅದರನ್ವಯ ಈಗ ಕ್ರಮ ವಹಿಸಲಾಗಿದೆ. ಚುನಾವಣಾಧಿಕಾರಿಗಳ ಕೋರಿಕೆಯಂತೆ ಹೆಚ್ಚು ಭದ್ರತೆ ಮಾಡಲಾಗಿದೆ ಎಂದು ಮನೋಜ್‌ ಕುಮಾರ್ ಮೀನಾ ಹೇಳಿದರು.

ಸಿಎಂ, ಡಿಸಿಎಂ ಪ್ರತಿಭಟನೆ ವಿರುದ್ಧ ದೂರು ಬಂದಿದೆ

ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಇದುವರೆಗೆ 23 ಕೇಸ್ ದಾಖಲಾಗಿದೆ. ಬಿಜೆಪಿ 12, ಕಾಂಗ್ರೆಸ್ 9, ಹಾಗೂ ಜೆಡಿಎಸ್ ಮೇಲೆ 2 ಪ್ರಕರಣಗಳು ದಾಖಲಾಗಿವೆ. ಇನ್ನಿತರ ನಾಯಕರ ಮೇಲೆ 5 ಕೇಸ್‌ಗಳು ದಾಖಲಾಗಿವೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ನಡೆದ ಪ್ರತಿಭಟನೆ ವಿಚಾರವಾಗಿ ದೂರು ಸಲ್ಲಿಕೆಯಾಗಿದೆ. ಈ ಕುರಿತು ನಿಯಮ ಉಲ್ಲಂಘನೆ ಆಗಿರುವ ಬಗ್ಗೆ ಪರಿಶೀಲನೆ ಮಾಡುತ್ತಿದ್ದೇವೆ. ಮೇಲ್ನೋಟಕ್ಕೆ ಸಾಬೀತಾದರೆ ಮುಂದಿನ ಕ್ರಮವನ್ನು ಜರುಗಿಸಲಾಗುವುದು ಎಂದು ಮನೋಜ್‌ ಕುಮಾರ್ ಮೀನಾ ಹೇಳಿದರು.

28 ಲೋಕಸಭಾ ಕ್ಷೇತ್ರಗಳ ಮತದಾರರ ವಿವರ; ಬೇಕಿರುವ ದಾಖಲೆ, ನಿಯಮ ಏನು? ಈ ಪಿಡಿಎಫ್‌ ಡೌನ್ಲೋಡ್‌ ಆಯ್ಕೆ ಮೇಲೆ ಕ್ಲಿಕ್ ಮಾಡಿ

ಆಂಬ್ಯಲೆನ್ಸ್‌ ನಿಯೋಜನೆ

ಈಗ ಬೇಸಿಗೆ ಕಾಲವಾಗಿದ್ದರಿಂದ ಬಿಸಿಲಿನ ಪ್ರಮಾನ ಹೆಚ್ಚಿದೆ. ಹೀಗಾಗಿ ಮತದಾನದ ವೇಳೆ ಬಿಸಿಲಿನ ಕಾರಣಕ್ಕಾಗಿ ಏನಾದರೂ ಸಮಸ್ಯೆಯಾಗಬಹುದು ಎಂಬ ಕಾರಣಕ್ಕಾಗಿ ಆಂಬ್ಯುಲೆನ್ಸ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಎಲ್ಲ ರೀತಿಯಲ್ಲಿಯೂ ಸಜ್ಜಾಗಲಾಗಿದೆ. ಜತೆಗೆ ತುರ್ತು ಚಿಕಿತ್ಸೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮನೋಜ್‌ ಕುಮಾರ್ ಮೀನಾ ಹೇಳಿದರು.

ಇದನ್ನೂ ಓದಿ: Modi in Karnataka: ಏಪ್ರಿಲ್‌ 28 – 29ಕ್ಕೆ ಕರ್ನಾಟಕಕ್ಕೆ ಮೋದಿ; 2ನೇ ಹಂತಕ್ಕೆ ಬಿಜೆಪಿ ಪ್ಲ್ಯಾನ್‌ ರೆಡಿ!

5.47 ಕೋಟಿ ಮತದಾರರು

ಕರ್ನಾಟಕದ 28 ಲೋಕಸಭಾ ಕ್ಷೇತ್ರದಲ್ಲಿ ಒಟ್ಟಾರೆ ಮತದಾರರ ಸಂಖ್ಯೆಯನ್ನು ಸಹ ಚುನಾವಣಾ ಆಯೋಗವು ಬಿಡುಗಡೆ ಮಾಡಿದೆ. ಇದರ ಅನುಸಾರ ಒಟ್ಟು 5,47,36,835 ಮತದಾರರು ಈ ಬಾರಿ ಸಂಸತ್‌ ಚುನಾವಣೆಯ ಭವಿಷ್ಯವನ್ನು ಬರೆಯಲಿದ್ದಾರೆ. ಇದಲ್ಲದೆ, ಮತದಾರರು ಯಾವ ದಾಖಲೆಗಳನ್ನು ತರಬೇಕು? ಮತದಾನ ಪ್ರಕ್ರಿಯೆಯಲ್ಲಿನ ನಿಯಮಗಳು ಏನು? ಕೊನೆಯ 48 ಗಂಟೆಯ ಶೂನ್ಯ ಅವಧಿಗೆ ಸಂಬಂಧಪಟ್ಟಂತೆ ಇರುವ ನಿಯಮಗಳೇನು? ಎಂಬಿತ್ಯಾದಿ ಅಂಶಗಳನ್ನು ಚುನಾವಣಾ ಆಯೋಗ ಪ್ರಕಟಿಸಿದೆ.

Continue Reading

ಯಾದಗಿರಿ

Yadgiri News: ಸಾಮಾಜಿಕ ಕಾರ್ಯಗಳಿಂದ ಆತ್ಮತೃಪ್ತಿ: ಶಾಂತವೀರ ಸ್ವಾಮೀಜಿ

Yadgiri News: ಯಾದಗಿರಿ ಜಿಲ್ಲೆ ಶಹಾಪೂರ ತಾಲೂಕಿನ ಇಬ್ರಾಹಿಂಪುರ ಗ್ರಾಮದ ಸದ್ಗುರು ಸಾಯಿ ಬಾಬಾ ದೇವಸ್ಥಾನದ 2ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ ಸಾಮೂಹಿಕ ವಿವಾಹ ಕಾರ್ಯಕ್ರಮ ಜರುಗಿತು.

VISTARANEWS.COM


on

shree Saibaba jatra mahotsav and Mass marriage programme
Koo

ಯಾದಗಿರಿ: ಸಾಮಾಜಿಕ ಕಾರ್ಯಗಳಿಂದ ಸಿಗುವಷ್ಟು ಆತ್ಮತೃಪ್ತಿ ಬೇರೆ ಯಾವುದರಿಂದ ಸಿಗುವುದಿಲ್ಲ ಎಂದು ಗುರುಮಿಠಕಲ್ ಖಾಸಾ ಮಠದ ಪೀಠಾಧಿಪತಿ ಶ್ರೀ ಶಾಂತವೀರ ಮುರುಘರಾಜೇಂದ್ರ ಸ್ವಾಮೀಜಿ (Yadgiri News) ತಿಳಿಸಿದರು.

ಶಹಾಪುರ ತಾಲೂಕಿನ ಇಬ್ರಾಹಿಂಪುರ ಗ್ರಾಮದ ಸದ್ಗುರು ಸಾಯಿ ಬಾಬಾ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದ 2ನೇ ವರ್ಷದ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಉದ್ಘಾಟಿಸಿ, ಶ್ರೀಗಳು ಆಶೀರ್ವಚನ ನೀಡಿದರು.

ಭಗವಂತ ನಮಗೆ ನೀಡಿರುವ ದೈನಂದಿನ ಕಾಯಕದ ಜತೆಗೆ ಸಂಪಾದಿಸಿದ ಸ್ವಲ್ಪ ಹಣವನ್ನು ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸಿದರೆ ಬದುಕಿನ ಮೌಲ್ಯ ವೃದ್ಧಿಯಾಗುತ್ತದೆ, ಅಲ್ಲದೇ ಅಂತಹ ವ್ಯಕ್ತಿಗಳ ಸಾಧನೆ, ಹೆಸರು ಚರಿತ್ರೆಯಲ್ಲಿ ಉಳಿಯುತ್ತದೆ ಎಂದರು.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆ ಇಂದು ತುಸು ಏರಿಕೆ; 22K, 24K ಬಂಗಾರದ ಬೆಲೆಗಳನ್ನು ಇಲ್ಲಿ ಖಚಿತಪಡಿಸಿಕೊಳ್ಳಿ

ಈ ದಿಸೆಯಲ್ಲಿ ಯುವಕರಾಗಿರುವ ಮಹಾರಾಜ ದಿಗ್ಗಿಯವರು ಇಲ್ಲಿ ಭವ್ಯ ಮಂದಿರ ನಿರ್ಮಾಣ ಮಾಡುವ ಮೂಲಕ ಸಾಮರಸ್ಯ ವಾತಾವರಣ ಸೃಷ್ಟಿ ಮಾಡಿ, ಧಾರ್ಮಿಕ ಕಾರ್ಯಕ್ರಮಗಳ ಜತೆಗೆ ಸಾಮೂಹಿಕ ವಿವಾಹ ಹಮ್ಮಿಕೊಂಡಿರುವುದರಿಂದ ದುಂದು ವೆಚ್ಚಕ್ಕೆ ಕಡಿವಾಣ ಹಾಕಿದಂತಾಗಿದೆ, ಎಲ್ಲಾ ವರ್ಗದ ಬಡ ಕುಟುಂಬಗಳಿಗೆ ಸಹಕಾರಿಯಾಗಿದೆ, ಇದು ಇತರರಿಗೆ ಮಾದರಿಯಾಗಲಿ ಎಂದು ಹಾರೈಸಿದರು.

ಸರೂರ-ಅಗತೀರ್ಥ ಗುರು ಪೀಠದ ಶಾಂತಮಯ ಸ್ವಾಮೀಜಿ, ಚಿಗರಳ್ಳಿಯ ಕಬೀರಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ಮಾಲಹಳ್ಳಿಯ ಕೆಂಚರಾಯ ಪೂಜಾರಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಾಯಿ ಮಂದಿರದ ಅಧ್ಯಕ್ಷ ಮಹಾರಾಜ್ ದಿಗ್ಗಿ ಮಾತನಾಡಿ, ಎಲ್ಲರ ಸಹಕಾರದಿಂದ ಇಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜತೆಗೆ ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳುವ ಇನ್ನೂ ಹಲವಾರು ಸಂಕಲ್ಪಗಳಿವೆ, ಆ ಭಗವಂತ ಶಕ್ತಿ ನೀಡಿದರೆ ಖಂಡಿತ ಈ ಭಾಗಕ್ಕೆ ಸದಾ ಒಳಿತಾಗುವ ಕಾರ್ಯ ಮಾಡುತ್ತೇನೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ 14 ಜೋಡಿ ನವ ವಧು-ವರರಿಗೆ ಎಲ್ಲಾ ಶ್ರೀಗಳು, ಗಣ್ಯರು ಶುಭ ಹಾರೈಸಿದರು.

ಇದನ್ನೂ ಓದಿ: Sachin Birthday: ಸಚಿನ್ ತೆಂಡೂಲ್ಕರ್ ಬಳಿ ಇರುವ ಅತ್ಯಂತ ದುಬಾರಿ ಆಸ್ತಿಗಳಿವು!

ದೋರನಹಳ್ಳಿಯ ಚಿಕ್ಕಮಠದ ಶಿವಲಿಂಗರಾಜೇಂದ್ರ ಸ್ವಾಮೀಜಿ, ಸೂಗೂರ ಎನ್. ಭೋಜಲಿಂಗೇಶ್ವರ ಸಿದ್ದ ಸಂಸ್ಥಾನ ಮಠದ ಹಿರಗಪ್ಪ ತಾತನವರು, ಮಹಲರೋಜಾದ ಮಲ್ಲಿಕಾರ್ಜುನ ಮುತ್ಯಾ, ಹೋತಪೇಟ್‌ದ ಕೈಲಾಸ ಮಠದ ಶಿವಲಿಂಗೇಶ್ವರ ಸ್ವಾಮೀಜಿ, ಗೋಗಿಯ ಸೈಯದ್ ಷಾ ಚಾಂದ್ ಹುಸೇನಿ, ಶಹಾಬಾದದ ಅಪ್ಪಣ್ಣ ಶ್ರೀಗಳು, ಗಬ್ಬೂರವಾಡಿಯ ಬಳಿರಾಮ ಮಹಾರಾಜರು, ದೇವಸ್ಥಾನದ ಕಾರ್ಯದರ್ಶಿ ಸಿದ್ದಪ್ಪಾಜಿ, ಸಿದ್ದಣ್ಣ ದಿಗ್ಗಿ, ಭೀಮರಡ್ಡಿ ರಾಂಪೂರಹಳ್ಳಿ ಹತ್ತಿಕುಣಿ, ಗೌಡಪ್ಪಗೌಡ ಆಲ್ದಾಳ, ಭೀಮಾಶಂಕರ ಇಬ್ರಾಹಿಂಪುರ, ಶಂಕ್ರಪ್ಪ ಶಾಣೇನೋರ ದೋರನಹಳ್ಳಿ, ಶ್ರೀಶೈಲ ಹೊಸಮನಿ, ಬಸವರಾಜ ರಾಠೋಡ, ಮಲ್ಲಿಕಾರ್ಜುನ ಮೌನೇಶ ಹಳಿಸಗರ, ಡಾ. ರವೀಂದ್ರನಾಥ ಹೊಸಮನಿ ಸೇರಿದಂತೆ ಹಲವರು ಮುಖಂಡರು ಉಪಸ್ಥಿತರಿದ್ದರು.

Continue Reading

ವಿಜಯನಗರ

Vijayanagara News: ವಿಜೃಂಭಣೆಯಿಂದ ಜರುಗಿದ ಶ್ರೀ ಕೋಲಶಾಂತೇಶ್ವರ ಸ್ವಾಮಿ ರಥೋತ್ಸವ

Vijayanagara News: ಹರಪನಹಳ್ಳಿ ತಾಲೂಕಿನ ಅರಸೀಕೆರೆ ಗ್ರಾಮದಲ್ಲಿ ಪಂಚಗಣಾಧೀಶ್ವರರಲ್ಲಿ ಒಬ್ಬರಾದ ಶ್ರೀ ಕೋಲಶಾಂತೇಶ್ವರ ಸ್ವಾಮಿಯ ರಥೋತ್ಸವವು ಅಪಾರ ಭಕ್ತರ ಮಧ್ಯೆ ವಿಜೃಂಭಣೆಯಿಂದ ಜರುಗಿತು.

VISTARANEWS.COM


on

Vijayanagara News Sri Kolashanteswara Swamy Rathotsava in arasikere
Koo

ಹರಪನಹಳ್ಳಿ: ತಾಲೂಕಿನ ಅರಸೀಕೆರೆ ಗ್ರಾಮದಲ್ಲಿ ಪಂಚಗಣಾಧೀಶ್ವರರಲ್ಲಿ ಒಬ್ಬರಾದ ಶ್ರೀ ಕೋಲಶಾಂತೇಶ್ವರ ಸ್ವಾಮಿಯ ರಥೋತ್ಸವವು ಅಪಾರ ಭಕ್ತರ ಮಧ್ಯೆ ವಿಜೃಂಭಣೆಯಿಂದ (Vijayanagara News) ಜರುಗಿತು. ಭಕ್ತಾದಿಗಳು ಶ್ರದ್ಧಾ ಭಕ್ತಿಯಿಂದ ರಥವನ್ನು ಎಳೆದು ಇಷ್ಠಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆ ಇಂದು ತುಸು ಏರಿಕೆ; 22K, 24K ಬಂಗಾರದ ಬೆಲೆಗಳನ್ನು ಇಲ್ಲಿ ಖಚಿತಪಡಿಸಿಕೊಳ್ಳಿ

ನಂದಿಕೋಲು ಹಾಗೂ ವಿವಿಧ ವಾದ್ಯಗಳು ರಥೋತ್ಸವಕ್ಕೆ ಮೆರುಗು ನೀಡಿದವು. ಭಕ್ತರು ಬಾಳೆಹಣ್ಣು ಎಸೆದು, ರಥದ ಚಕ್ರಕ್ಕೆ ತೆಂಗಿನಕಾಯಿ ಒಡೆದು ಭಕ್ತಿ ಸಮರ್ಪಿಸಿದರು.

ಇದನ್ನೂ ಓದಿ: Sachin Birthday: ಸಚಿನ್ ತೆಂಡೂಲ್ಕರ್ ಬಳಿ ಇರುವ ಅತ್ಯಂತ ದುಬಾರಿ ಆಸ್ತಿಗಳಿವು!

ರಥೋತ್ಸವದ ಸಂದರ್ಭದಲ್ಲಿ ಮಠದ ಶ್ರೀ ಶಾತಲಿಂಗ ದೇಶೀಕೇಂದ್ರ ಸ್ವಾಮೀಜಿ ಶಂಕರ ಸ್ವಾಮೀಜಿ, ಚಿನ್ಮಯಾನಂದ ಸ್ವಾಮೀಜಿ, ಸಂಸದ ವೈ. ದೇವೇಂದ್ರಪ್ಪ, ಮುಖಂಡರಾದ ವೈ ಡಿ.ಅಣ್ಣಪ್ಪ, ಪ್ರಶಾಂತ್ ಪಾಟೀಲ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಎ.ಇನಾಯತ್ ಉಲ್ಲಾ, ಬಿ.ರಾಮಣ್ಣ, ಅಡ್ಡಿ ಚನ್ನವೀರಪ್ಪ, ಎ.ಎಚ್.ಪಂಪಣ್ಣ, ಎಚ್. ನಾಗರಾಜಪ್ಪ, ಜಿ.ವಿ.ವೆಂಕಟೇಶ್ ಶೆಟ್ರು, ಎನ್. ಶಿವರುದ್ರಪ್ಪ, ಎನ್.ಎಂ. ವೃಷಬೇಂದ್ರಯ್ಯ, ಕೆ.ಎಂ. ವಿಶ್ವನಾಥಯ್ಯ, ಪೂಜಾರ್ ಮರಿಯಪ್ಪ, ನೆಲಗೊಂಡನಹಳ್ಳಿ ಭರತ್, ಐ. ಸಲಾಂ ಸಾಹೇಬ್, ಎಸ್.ಆನಂದಪ್ಪ ಹಾಗೂ ಇತರರು ಪಾಲ್ಗೊಂಡಿದ್ದರು.

Continue Reading
Advertisement
Veteran journalist Arjun Deva passes away
ಶ್ರದ್ಧಾಂಜಲಿ2 mins ago

Arjun Deva: ಹಿರಿಯ ಪತ್ರಕರ್ತ ಅರ್ಜುನ್ ದೇವ ನಿಧನ; ಗಣ್ಯರ ಕಂಬನಿ

pm narendra modi jp morgan jamie dimon
ಪ್ರಮುಖ ಸುದ್ದಿ17 mins ago

PM Narendra Modi: “ಅಮೆರಿಕಕ್ಕೆ ಮೋದಿಯಂಥ ನಾಯಕ ಬೇಕು” ಜೆಪಿ ಮೋರ್ಗನ್‌ ಸಂಸ್ಥೆ ಸಿಇಒ ಜೇಮಿ ಶ್ಲಾಘನೆ

IPL 2024 Points Table
ಕ್ರೀಡೆ32 mins ago

IPL 2024 Points Table: ಚೆನ್ನೈಗೆ ಹೀನಾಯವಾಗಿ ಸೋಲುಣಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಲಕ್ನೋ

Noida Scrap Mafia
ವಿದೇಶ47 mins ago

Noida Scrap Mafia: ಥೈಲ್ಯಾಂಡ್‌ನಲ್ಲಿ ಪೊಲೀಸ್‌ ಬಲೆಗೆ ಬಿದ್ದ ಗ್ಯಾಂಗ್‌ಸ್ಟರ್‌ ರವಿ ಕಾನಾ

ಬೆಂಗಳೂರು ಗ್ರಾಮಾಂತರ50 mins ago

Lok Sabha Election 2024: ಬೆಂಗಳೂರು ಗ್ರಾಮಾಂತರಕ್ಕೆ ಡಬಲ್ ಸೆಕ್ಯೂರಿಟಿ; 28 ಲೋಕಸಭಾ ಕ್ಷೇತ್ರದ ಮತದಾರರು ಎಷ್ಟು?

shree Saibaba jatra mahotsav and Mass marriage programme
ಯಾದಗಿರಿ53 mins ago

Yadgiri News: ಸಾಮಾಜಿಕ ಕಾರ್ಯಗಳಿಂದ ಆತ್ಮತೃಪ್ತಿ: ಶಾಂತವೀರ ಸ್ವಾಮೀಜಿ

Vijayanagara News Sri Kolashanteswara Swamy Rathotsava in arasikere
ವಿಜಯನಗರ55 mins ago

Vijayanagara News: ವಿಜೃಂಭಣೆಯಿಂದ ಜರುಗಿದ ಶ್ರೀ ಕೋಲಶಾಂತೇಶ್ವರ ಸ್ವಾಮಿ ರಥೋತ್ಸವ

Harshika Poonacha bhuvan ponnanna met pralhad joshi
ಸಿನಿಮಾ56 mins ago

Harshika Poonacha: ಹಲ್ಲೆ ಪ್ರಕರಣ; ನ್ಯಾಯ ಕೋರಿ ಪ್ರಲ್ಹಾದ ಜೋಶಿ ಭೇಟಿಯಾದ ಹರ್ಷಿಕಾ ಪೂಣಚ್ಚ ದಂಪತಿ

IED Blast
Lok Sabha Election 20242 hours ago

IED Blast: ಎರಡನೇ ಹಂತದ ಮತದಾನಕ್ಕೆ ದಿನಗಣನೆ; ಮಣಿಪುರದ ಸೇತುವೆ ಮೇಲೆ ಐಇಡಿ ಸ್ಫೋಟ

Modi in Karnataka from April 28 and 29 BJP plan for second phase ready
Lok Sabha Election 20242 hours ago

Modi in Karnataka: ಏಪ್ರಿಲ್‌ 28 – 29ಕ್ಕೆ ಕರ್ನಾಟಕಕ್ಕೆ ಮೋದಿ; 2ನೇ ಹಂತಕ್ಕೆ ಬಿಜೆಪಿ ಪ್ಲ್ಯಾನ್‌ ರೆಡಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ10 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು2 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌