Site icon Vistara News

Murder Case | ರೌಡಿಶೀಟರ್‌ ಹಂದಿ ಅಣ್ಣಿ ಕೊಲೆ ಪ್ರಕರಣದ 8 ಆರೋಪಿಗಳು ಪೊಲೀಸರಿಗೆ ಶರಣು

ಹಂದಿ ಅಣ್ಣಿ

ಶಿವಮೊಗ್ಗ: ರೌಡಿಶೀಟರ್ ಹಂದಿ ಅಣ್ಣಿ ಕೊಲೆ ಪ್ರಕರಣದ (Murder Case) 8 ಆರೋಪಿಗಳು ಚಿಕ್ಕಮಗಳೂರಿನಲ್ಲಿ ಶರಣಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎಂ. ಲಕ್ಷ್ಮಿಪ್ರಸಾದ್ ತಿಳಿಸಿದ್ದಾರೆ.

ಕಾರ್ತಿಕ್, ನಿತಿನ್, ಮಧು, ಬಾಲು, ಆಂಜನೇಯ, ಮದನ್, ಮಧು, ಚಂದನ್ ಬಂಧಿತ ಆರೋಪಿಗಳಾಗಿದ್ದಾರೆ. ಜಿಲ್ಲಾ ಪೊಲೀಸರ ಎರಡು ತಂಡವು ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ನಡೆಸುತ್ತಿತ್ತು. ಆದರೆ, ಆರೋಪಿಗಳೇ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಶರಣಾಗಿದ್ದಾರೆ. ಹೀಗಾಗಿ ಸ್ಥಳೀಯ ಪೊಲೀಸರು ಜಿಲ್ಲಾ ಪೊಲೀಸರಿಗೆ 8 ಆರೋಪಿಗಳನ್ನು ಹಸ್ತಾಂತರಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದ ನಂತರ ಸತ್ಯಾಂಶ ಹೊರಬರಲಿದೆ. ಹತ್ಯೆ ಹಿಂದೆ ಇವರಷ್ಟೇ ಇದ್ದಾರೆಯೇ ಅಥವಾ ಬೇರೆಯವರು ಇದ್ದಾರೋ ಎಂಬುವುದು ತಿಳಿಯಬೇಕಾಗಿದೆ. ಬಂಧಿತರಲ್ಲಿ ಹಲವರ ಮೇಲೆ ಪ್ರಕರಣಗಳಿವೆ. ಇವರಿಗಾಗಿ ಬೆಂಗಳೂರು, ಹೊನ್ನಾವರ, ಮಡಿಕೇರಿ ಸೇರಿ ಹಲವು ಕಡೆ ಹುಡುಕಾಟ ನಡೆಸಲಾಗಿತ್ತು ಎಂದು ತಿಳಿಸಿದ್ದಾರೆ.

ಜುಲೈ 14ರರಂದು ಶಿವಮೊಗ್ಗದ ವಿನೋಬಾನಗರದಲ್ಲಿ ಹಾಡಹಗಲೇ ರೌಡಿಶೀಟರ್‌ ಹಂದಿ ಅಣ್ಣಿಯನ್ನು ಆರೋಪಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಬಳಿಕ ಅವರು ಇನ್ನೋವಾ ಕಾರಿನಲ್ಲಿ ಅಲ್ಲಿಂದ ಪರಾರಿಯಾಗಿದ್ದರು.

ಇದನ್ನೂ ಓದಿ | ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿಶೀಟರ್‌ ಮರ್ಡರ್‌; ಮುಖ್ಯರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

Exit mobile version