Site icon Vistara News

Car Catches Fire: ಬೆಂಗಳೂರಿನ ಬಾಳೆಕುಂದ್ರಿ ಸರ್ಕಲ್‌ನಲ್ಲಿ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು

A car caught fire in the middle of the road at Balekundri Circle in Bengaluru

#image_title

ಬೆಂಗಳೂರು: ನಗರದ ಬಾಳೆಕುಂದ್ರಿ ಸರ್ಕಲ್‌ನಲ್ಲಿ ಏಕಾಏಕಿ ನಡುರಸ್ತೆಯಲ್ಲಿ ಕಾರು ಹೊತ್ತಿ ಉರಿದಿದ್ದು (Car Catches Fire), ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಮುಕ್ತಾರ್ ಆಹ್ಮದ್ ಎಂಬುವವರ ಕಾರು ಬೆಂಕಿಗಾಹುತಿಯಾಗಿದೆ. ಕಾರಿನ ಮಾಲೀಕ ಸೇರಿ ನಾಲ್ವರು ಮದುವೆ ಕಾರ್ಯಕ್ರಮಕ್ಕೆಂದು ಆಗಮಿಸಿದ್ದರು. ಬಾಳೆಕುಂದ್ರಿ ಸರ್ಕಲ್‌ನಲ್ಲಿ ಕಾರು ನಿಂತಿದ್ದಾಗ ಏಕಾಏಕಿ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಒಳಗಿದ್ದವರು ಹೊರಗೆ ಬಂದ ಕೆಲ ನಿಮಿಷಗಳಲ್ಲಿ ಸಂಪೂರ್ಣವಾಗಿ ಬೆಂಕಿ ಆವರಿಸಿಕೊಂಡು ಕಾರು ಸುಟ್ಟು ಕರಕಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದರು.

ಇದನ್ನೂ ಓದಿ | ರಾಮನಗರದಲ್ಲಿ ಯುವಕನ ಕತ್ತು ಕೊಯ್ದು ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ; ಕೊಪ್ಪಳದಲ್ಲಿ ಸಿಲಿಂಡರ್‌ ಸ್ಫೋಟದಿಂದ ಹೊತ್ತಿ ಉರಿದ ಡಾಬಾ

Exit mobile version