Site icon Vistara News

Car Catches Fire: ಚಲಿಸುತ್ತಿದ್ದಾಗಲೇ ಸುಟ್ಟು ಕರಕಲಾದ ಕಾರು; ಪ್ರಯಾಣಿಕರು ಪಾರು

#image_title

ಕಾರವಾರ: ಚಲಿಸುತ್ತಿದ್ದಾಗಲೇ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟು ಕರಕಲಾದ ಘಟನೆ (Car Catches Fire) ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಹೊನ್ನಾವರ-ಸಾಗರ ರಾಜ್ಯ ಹೆದ್ದಾರಿ 206ರ ಮೂರುಕಟ್ಟೆ ಬಳಿ ಅವಘಡ ಸಂಭವಿಸಿದೆ. ಹೊನ್ನಾವರ ತಾಲೂಕಿನ ಚಿಕ್ಕೊಳ್ಳಿ ಗ್ರಾಮದ ಜಗದೀಶ ಗೌಡ ಎಂಬುವವರ ಕಾರು ಬೆಂಕಿಗಾಹುತಿಯಾಗಿದೆ. ಹೊನ್ನಾವರದಿಂದ ಚಿಕ್ಕೊಳ್ಳಿಗೆ ತೆರಳುತ್ತಿದ್ದ ವೇಳೆ ಏಕಾಏಕಿ ಕಾರಿನಲ್ಲಿ ಕಾಣಿಸಿಕೊಂಡಿದೆ. ತಕ್ಷಣವೇ ಕಾರನ್ನು ಹೆದ್ದಾರಿ ಪಕ್ಕ ನಿಲ್ಲಿಸಿ ಜಗದೀಶ ಹಾಗೂ ಸ್ನೇಹಿತರು ಹೊರಬಂದಿದ್ದಾರೆ. ನಂತರ ನೋಡನೋಡುತ್ತಿದ್ದಂತೆ ಬೆಂಕಿ ಸಂಪೂರ್ಣ ವ್ಯಾಪಿಸಿ ಕಾರು ಸುಟ್ಟು ಕರಕಲಾಗಿದೆ.

ಇದನ್ನೂ ಓದಿ | Bengaluru Theft Case: ಮನೆ ಮಾಲೀಕನಿಗೆ ಊಟದಲ್ಲಿ ಅಮಲು ಔಷಧಿ ಬೆರೆಸಿ ಚಿನ್ನಾಭರಣ ಕಳ್ಳತನ; ನೇಪಾಳಿ ಗ್ಯಾಂಗ್‌ ಅರೆಸ್ಟ್‌

ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದರು. ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಎಂಜಿನ್‌ನಲ್ಲಿ ತಾಂತ್ರಿಕ ತೊಂದರೆಯಿಂದ ಬೆಂಕಿ ಹೊತ್ತಿಕೊಂಡ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Exit mobile version