ನಿರ್ವಹಣೆ ಕೊರತೆಯಿಂದ ಮುಳುಗಿದ ಲಾಂಚ್;‌ 4 ತಿಂಗಳಿಂದ ತ್ರಿಶಂಕು ಸ್ಥಿತಿಯಲ್ಲಿ ಗ್ರಾಮಸ್ಥರು - Vistara News

ಕರ್ನಾಟಕ

ನಿರ್ವಹಣೆ ಕೊರತೆಯಿಂದ ಮುಳುಗಿದ ಲಾಂಚ್;‌ 4 ತಿಂಗಳಿಂದ ತ್ರಿಶಂಕು ಸ್ಥಿತಿಯಲ್ಲಿ ಗ್ರಾಮಸ್ಥರು

‌ಶಿವಮೊಗ್ಗ ಜಿಲ್ಲೆಯ ಚನ್ನಗೊಂಡ ಗ್ರಾಪಂ ವ್ಯಾಪ್ತಿಯ ಕೋಗಾರು – ಸಿಗ್ಗಲು ಲಾಂಚ್‌, ಕಳೆದ ನಾಲ್ಕು ತಿಂಗಳ ಹಿಂದೆ ಶರಾವತಿ ಹಿನ್ನೀರಿನಲ್ಲಿ ಮುಳುಗಿದ್ದರಿಂದ ಈ ಭಾಗದ ಜನರ ಓಡಾಡಕ್ಕೆ ಸಮಸ್ಯೆಯಾಗಿದೆ.

VISTARANEWS.COM


on

ಲಾಂಚ್
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಶರಾವತಿ ಹಿನ್ನೀರಿನಲ್ಲಿ ಮುಳುಗಿರುವ ಲಾಂಚ್.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ನಿರ್ವಹಣೆ ಕೊರತೆಯಿಂದ ಸಾಗರ ತಾಲೂಕಿನ ಕೋಗಾರು – ಸಿಗ್ಗಲು ಕಡವು(ಲಾಂಚ್‌), ಶರಾವತಿ ಹಿನ್ನೀರಿನಲ್ಲಿ ಮುಳುಗಿರುವುದರಿಂದ ಇಲ್ಲಿನ ಜನರ ಸಂಚಾರಕ್ಕೆ ತೊಂದರೆಯಾಗಿದೆ. ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಎಡದಂಡೆಯ ಕರೂರು ಹೋಬಳಿಯ ಚನ್ನಗೊಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಗಾರು – ಸಿಗ್ಗಲು ಲಾಂಚ್‌ ಕಳೆದ ನಾಲ್ಕು ತಿಂಗಳ ಹಿಂದೆ ಶರಾವತಿ ಹಿನ್ನೀರಿನಲ್ಲಿ ಮುಳುಗಿತ್ತು. ಚನ್ನಗೊಂಡ ಗ್ರಾಮ ಪಂಚಾಯಿಗೆ ಸಂಪರ್ಕ ಕಲ್ಪಿಸುವ ಸಲುವಾಗಿ ಸಿಗ್ಗಲು, ಚಂಬಳಿ ಮುಂತಾದ ಗ್ರಾಮಗಳಿಗೆ ಶರಾವತಿ ಹಿನ್ನೀರಿನ ಮಾರ್ಗದಲ್ಲಿ ಸೇವೆ ಸಲ್ಲಿಸಲು ನೀಡಿದ್ದ ಲಾಂಚ್ ಮುಳುಗಿ ಹೋಗಿ ನಾಲ್ಕು ತಿಂಗಳು ಕಳೆದಿದ್ದರೂ ಅದನ್ನು ದುರಸ್ತಿ ಪಡಿಸುವ ಕೆಲಸ ನಡೆದಿಲ್ಲ ಎಂದ ಸ್ಥಳೀಯರು ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ | ಭೂತಾನ್‌ನಿಂದ ಅಡಕೆ ಆಮದು; ಆತಂಕ ಬೇಡ, ಪ್ರತಿಕೂಲ ಪರಿಣಾಮವಾಗದು ಎಂದ ಗೃಹ ಸಚಿವ ಆರಗ ಜ್ಞಾನೇಂದ್ರ

ಗ್ರಾಮ ಪಂಚಾಯಿತಿ ಕೇಂದ್ರ ಮತ್ತು ಬ್ಯಾಂಕ್, ಪಡಿತರ, ವ್ಯಾಪಾರ ವಹಿವಾಟು ಸೇವೆಗೆ ನದಿ ದಾಟಿ ಹೋಗಲು ಲಾಂಚ್ ನೀಡಿ ಎಂದು ಈ ಭಾಗದ ಗ್ರಾಮಸ್ಥರು 2018 ಚುನಾವಣಾ ಬಹಿಷ್ಕಾರ ನಿರ್ಧಾರ ಘೋಷಣೆ ಮಾಡಿದ್ದರು. ಆದ ಸ್ಥಳಕ್ಕೆ ಬಂದ ಉಪ ವಿಭಾಗಾಧಿಕಾರಿಗಳು ಭರವಸೆ ನೀಡಿ ಮನವೊಲಿಸಿದ್ದರು. ಸಾಗರ ಶಾಸಕರ ಹರತಾಳು ಹಾಲಪ್ಪನವರ ಗಮನಕ್ಕೆ ತಂದು ಮನವಿ ಮಾಡಿಕೊಂಡಿದ್ದರು. ಸ್ವತಃ ಶಾಸಕರು ಇಚ್ಛಾ ಶಕ್ತಿ ತೋರಿಸಿ ಒಳನಾಡು ಜಲಸಾರಿಗೆ ಇಲಾಖೆ ಹಸಿರುಮಕ್ಕಿ ಮಾರ್ಗದ ಹಳೆ ಲಾಂಚ್ ಇಲ್ಲಿಗೆ ವರ್ಗಾಯಿಸಿ ಚನ್ನಗೊಂಡ ಗ್ರಾಮ ಪಂಚಾಯಿತಿ ಉಸ್ತುವಾರಿ ನೋಡಿಕೊಳ್ಳುವಂತೆ ವ್ಯವಸ್ಥೆ ಮಾಡಿ ಕಳೆದ ಬೇಸಿಗೆಯಲ್ಲಿ ಉದ್ಘಾಟಿಸಿದ್ದರು. ಆದರೆ ನಿರ್ವಹಣೆ ಕೊರತೆಯಿಂದ ಇದು ಮುಳುಗಿತ್ತು.

ಸದ್ಯ ನಾಲ್ಕು ತಿಂಗಳಿಂದ ಸೇವೆ ನೀಡದ ಲಾಂಚ್ ಸಮರ್ಪಕ ನಿರ್ವಹಣೆ ಇಲ್ಲದೇ ಸೇವೆ ಸ್ಥಗಿತಗೊಳಿಸಿ ಮಳೆಗಾಲದ ರಭಸಕ್ಕೆ ಶಿಥಿಲವಾಗಿದೆ. ಒಳನಾಡು ಜಲಸಾರಿಗೆ ಇಲಾಖೆ ಒಡೆತನದ ಈ ಲಾಂಚ್ ಮೂಲ ಬೆಲೆ 25 ಲಕ್ಷ ರೂ.ಗಳಿಗೂ ಹೆಚ್ಚು ಇದ್ದು, ಪಂಚಾಯತ್ ರಾಜ್ ಇಲಾಖೆಗೆ ಅದನ್ನು ಹಸ್ತಾಂತರ ಮಾಡಿ ಇಲಾಖೆ ತನ್ನ ಜವಾಬ್ದಾರಿ ಕಳಚಿಕೊಂಡಿದ್ದು, ಗ್ರಾಮ ಪಂಚಾಯಿತಿ ಚನ್ನಗೊಂಡ ನಿರ್ವಹಣೆಯಲ್ಲಿ ವಿಫಲಗೊಂಡು ಸರ್ಕಾರಿ ಹಣ ಹೊಳೆಯಲ್ಲಿ ಮುಳುಗಿಸಿದರು ಎನ್ನುವ ಮಾತು ಇಲ್ಲಿ ಅಕ್ಷರಶಃ ನಿಜವಾಗಿದೆ.

ಜನರ ಸೇವೆಗೆ ಸಿಗದ ಈ ಕಡವು(ಲಾಂಚ್) ಹಾಗೂ ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಯ ಅಧಿಕಾರಿಗಳ ವಿರುದ್ಧ ಜನರು ಹಿಡಿಶಾಪ ಹಾಕುತ್ತಿದ್ದು, ಸಂಚಾರಕ್ಕೆ ಅನುಕೂಲವಾಗಲು ಲಾಂಚ್‌ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ | Call Kappi wala | ಒಂದೇ ಕಾಫಿ ಫ್ಲೇವರ್‌ ಕುಡಿದು ಬೋರ್‌ ಆಗಿದ್ಯಾ? ಮಾರುಕಟ್ಟೆಗೆ ಬಂದಿವೆ ಹಲವು ಫ್ಲೇವರ್ಡ್‌ ಕಾಫಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: 313 ಹುದ್ದೆಗಳ ಭರ್ತಿಗೆ ಕೆಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಡಿಪ್ಲೋಮಾ ಪದವಿ ಪಡೆದವರು ಇಂದೇ ಅಪ್ಲೈ ಮಾಡಿ

Job Alert: ಸರ್ಕಾರಿ ಉದ್ಯೋಗ ಹುಡುಕುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಕರ್ನಾಟಕ ಲೋಕಸೇವಾ ಆಯೋಗ ಜಲ ಸಂಪನ್ಮೂಲ ಇಲಾಖೆ & ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ಖಾಲಿ ಇರುವ 313 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಮೇ 28. ಡಿಪ್ಲೋಮಾ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ನಡೆಯಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹುಡುಕುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಕರ್ನಾಟಕ ಲೋಕಸೇವಾ ಆಯೋಗ (KPSC) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಜಲ ಸಂಪನ್ಮೂಲ ಇಲಾಖೆ & ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ ಈ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಪ್ರಕಟಿಸಿದೆ. ಕಿರಿಯ ಎಂಜಿನಿಯರ್‌, ಸಹಾಯಕ ಗ್ರಂಥ ಪಾಲಕ ಸೇರಿ ಒಟ್ಟು 313 ಹುದ್ದೆಗಳಿವೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ಇನಾಂಕ ಮೇ 28 (Job Alert).

ಹುದ್ದೆಗಳ ವಿವರ

ಕಿರಿಯ ಎಂಜಿನಿಯರ್‌ (ಸಿವಿಲ್‌)-ಜಲ ಸಂಪನ್ಮೂಲ ಇಲಾಖೆ: 216 ಹುದ್ದೆ, ಕಿರಿಯ ಎಂಜಿನಿಯರ್‌ (ಸಿವಿಲ್‌)-ಜಲ ಸಂಪನ್ಮೂಲ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸೇವಾ ನಿರತ ಗ್ರೂಪ್‌ ಸಿ ಸಿಬ್ಬಂದಿಗೆ: 54 ಹುದ್ದೆ, ಕಿರಿಯ ಎಂಜಿನಿಯರ್‌ (ಮೆಕ್ಯಾನಿಕಲ್‌)- ಜಲ ಸಂಪನ್ಮೂಲ ಇಲಾಖೆ: 26 ಹುದ್ದೆ, ಕಿರಿಯ ಎಂಜಿನಿಯರ್‌ (ಮೆಕ್ಯಾನಿಕಲ್‌)-ಜಲ ಸಂಪನ್ಮೂಲ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸೇವಾ ನಿರತ ಗ್ರೂಪ್‌ ಸಿ ಸಿಬ್ಬಂದಿಗೆ: 4 ಹುದ್ದೆ, ಸಹಾಯಕ ಗ್ರಂಥಪಾಲಕ-ಸಾರ್ವಜನಿಕ ಗ್ರಂಥಾಲಯ: 13 ಹುದ್ದೆಗಳಿವೆ.

ವಿದ್ಯಾರ್ಹತೆ

ಕಿರಿಯ ಇಂಜಿನಿಯರ್ (JE): ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಮೂರು ವರ್ಷಗಳ ಸಿವಿಲ್‌ / ಮೆಕ್ಯಾನಿಕಲ್‌ ಡಿಪ್ಲೋಮಾ ಪದವಿ ಪಡೆದಿರಬೇಕು.

ಗ್ರಂಥಾಲಯ ಸಹಾಯಕ: ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಮೂರು ವರ್ಷಗಳ ಡಿಪ್ಲೋಮಾ ಇನ್‌ ಲೈಬ್ರರಿ ಸೈನ್ಸ್‌ (Diploma in Library Science) ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ ಇದೆ.

ಅರ್ಜಿ ಶುಲ್ಕ

ಸಾಮಾನ್ಯ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 600 ರೂ. ಪಾವತಿಸಬೇಕು. ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳು 300 ರೂ. ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕವಿಲ್ಲ. ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್/ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್ / ಯುಪಿಐ ಮೂಲಕ ಆನ್‌ಲೈನ್‌ನಲ್ಲೇ ಪಾವತಿ ಮಾಡಬೇಕು.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಯು ಸಾಮಾನ್ಯ ಪತ್ರಿಕೆ ಮತ್ತು ನಿರ್ದಿಷ್ಟ ವಿಷಯಗಳ ಪತ್ರಿಕೆಯನ್ನು ಹೊಂದಿದೆ. ಪ್ರತಿಯೊಂದು ಪತ್ರಿಕೆಯು 100 ಅಂಕಗಳ ಪ್ರಶ್ನೆಯನ್ನು ಒಳಗೊಂಡಿರುತ್ತದೆ. ಪರೀಕ್ಷೆಯ ಒಟ್ಟು ಅಂಕ 200. ಗಮನಿಸಿ, ಪರೀಕ್ಷೆಯಲ್ಲಿ ನೆಗೆಟಿವ್‌ ಅಂಕವಿದ್ದು, ಎಚ್ಚರಿಕೆಯಿಂದ ಉತ್ತರಿಸಬೇಕು. ಆಯ್ಕೆಯಾಗುವ ಕಿರಿಯ ಎಂಜಿನಿಯರ್‌ಗೆ 33,450 ರೂ. -62,600 ರೂ. ಮತ್ತು ಗ್ರಂಥಾಲಯ ಸಹಾಯಕರಿಗೆ 30,350 ರೂ. – 58,250 ರೂ. ಮಾಸಿಕ ವೇತನ ಲಭಿಸಲಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಅರ್ಜಿ ಸಲ್ಲಿಸಿ

Continue Reading

ಪ್ರಮುಖ ಸುದ್ದಿ

Prajwal Revanna Case: ಪ್ರಜ್ವಲ್‌ ರೇವಣ್ಣ ಪತ್ತೆಗೆ ಬ್ಲೂ ಕಾರ್ನರ್‌ ನೋಟೀಸ್!‌ ಏನಿದರ ಅಗತ್ಯ?

Prajwal Revanna Case: ಆರೋಪಿಯ ಚಲನವಲನಗಳ ಬಗ್ಗೆ ಮಾಹಿತಿಯನ್ನು ಕಲೆ ಹಾಕಲು ಬ್ಲ್ಯೂ ಕಾರ್ನರ್ ನೋಟೀಸ್‌ ಜಾರಿಗೊಳಿಸಲಾಗುತ್ತದೆ. ಆರೋಪಿ ಬಗ್ಗೆ ಸುಳಿವು ಸಿಕ್ಕ ಬಳಿಕ ಆ ಮಾಹಿತಿಯನ್ನು ಸಿಐಡಿಗೆ ಸಿಬಿಐ ನೀಡಲಿದೆ. ಮತ್ತೆ ಇದನ್ನು ಆಧರಿಸಿ ಕೋರ್ಟ್‌ಗೆ ಮಾಹಿತಿ ‌ನೀಡಿ ರೆಡ್ ಕಾರ್ನರ್ ನೊಟೀಸ್ ಜಾರಿ ಮಾಡಲು ಎಸ್ಐಟಿ ಮನವಿ ಮಾಡಬೇಕಿದೆ. ಸಿಬಿಐ, ಇಂಟರ್‌ಫೋಲ್‌ಗೆ ಮನವಿ ಮಾಡಿ ರೆಡ್ ಕಾರ್ನರ್ ನೊಟೀಸ್ ಪಡೆಯಲಿದೆ.

VISTARANEWS.COM


on

prajwal revanna case blue corner notice
Koo

ಬೆಂಗಳೂರು: ಲೈಂಗಿಕ ಹಗರಣದ (Pen Drive Case) ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ (Prajwal Revanna case) ಪತ್ತೆಗೆ ಬ್ಲೂ ಕಾರ್ನರ್ ನೊಟೀಸ್ (Blue Corner Notice) ಜಾರಿ ಮಾಡಲು ಎಸ್ಐಟಿ (SIT) ಅಧಿಕಾರಿಗಳಿಂದ ಮನವಿ ಮಾಡಲಾಗಿದೆ. ಸಿಬಿಐಗೆ (CBI) ಈ ಕುರಿತು ಎಸ್‌ಐಟಿ ಮನವಿ ಮಾಡಿದ್ದು, ಇಂಟರ್‌ಪೋಲ್‌ (Interpol) ಮೂಲಕ ಇದನ್ನು ಜಾರಿ ಮಾಡಬೇಕಿದೆ.

ಆರೋಪಿಯ ಚಲನವಲನಗಳ ಬಗ್ಗೆ ಮಾಹಿತಿಯನ್ನು ಕಲೆ ಹಾಕಲು ಬ್ಲ್ಯೂ ಕಾರ್ನರ್ ನೋಟೀಸ್‌ ಜಾರಿಗೊಳಿಸಲಾಗುತ್ತದೆ. ಆರೋಪಿ ಬಗ್ಗೆ ಸುಳಿವು ಸಿಕ್ಕ ಬಳಿಕ ಆ ಮಾಹಿತಿಯನ್ನು ಸಿಐಡಿಗೆ ಸಿಬಿಐ ನೀಡಲಿದೆ. ಮತ್ತೆ ಇದನ್ನು ಆಧರಿಸಿ ಕೋರ್ಟ್‌ಗೆ ಮಾಹಿತಿ ‌ನೀಡಿ ರೆಡ್ ಕಾರ್ನರ್ ನೊಟೀಸ್ ಜಾರಿ ಮಾಡಲು ಎಸ್ಐಟಿ ಮನವಿ ಮಾಡಬೇಕಿದೆ. ಸಿಬಿಐ, ಇಂಟರ್‌ಫೋಲ್‌ಗೆ ಮನವಿ ಮಾಡಿ ರೆಡ್ ಕಾರ್ನರ್ ನೊಟೀಸ್ ಪಡೆಯಲಿದೆ.

ಸದ್ಯ ಪ್ರಜ್ವಲ್ ರೇವಣ್ಣ ಎಲ್ಲಿದ್ದಾರೆ ಎಂಬ ಮಾಹಿತಿಯ ಪತ್ತೆಗೆ ಎಸ್‌ಐಟಿ ಅಧಿಕಾರಿಗಳು ಮುಂದಾಗಿದ್ದಾರೆ. ಯಾವ ದೇಶದಲ್ಲಿ ಇದ್ದಾರೆ ಎನ್ನುವುದು ಪತ್ತೆಯಾಗಬೇಕಿದೆ. ಈ ಬಗ್ಗೆ ಸಿಬಿಐಗೆ ಈಗಾಗಲೇ ಮನವಿ ಮಾಡಲಾಗಿದೆ. ಬ್ಲೂ ಕಾರ್ನರ್ ನೊಟೀಸ್ ಜಾರಿ ಮಾಡುವಂತೆ ಸಿಬಿಐಗೆ ಮನವಿ ಮಾಡಲಾಗಿದೆ. ನಿನ್ನೆಯವರೆಗೂ ಪ್ರಜ್ವಲ್‌ ಜರ್ಮನಿಯಲ್ಲಿ ಇದ್ದರು ಎಂಬ ಮಾಹಿತಿ ಇತ್ತು. ನಿನ್ನೆ ದುಬೈಗೆ ತೆರಳಿದ್ದಾರೆ ಎಂದು ಹೇಳಲಾಗಿದೆ. ಪ್ರಜ್ವಲ್‌ ತಮ್ಮಲ್ಲಿರುವ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಬಳಸಿ ವಿದೇಶಯಾನ ಮಾಡುತ್ತಿದ್ದಾರೆ ಎಂದು ಗೊತ್ತಾಗಿದೆ.

ಬ್ಲೂ ಕಾರ್ನರ್ ನೊಟೀಸ್ ಜಾರಿಯಾದ ಬಳಿಕ ಇಂಟರ್‌ಪೋಲ್ ಇತರ ಕಡೆಗಳಿಗೂ ಆರೋಪಿಯ ಮಾಹಿತಿಯನ್ನು ಕಳಿಸಿ, ಆರೋಪಿಯ ನೆಲೆಯ ಬಗ್ಗೆ ಮಾಹಿತಿ ಸಂಗ್ರಹಿಸುತ್ತದೆ. ಯಾವ ದೇಶದಲ್ಲಿ ಇದ್ದಾರೆ, ಎಲ್ಲಿ ಲೊಕೇಟ್ ಆಗಿದ್ದಾರೆ ಅನ್ನುವ ಚಲನವಲನ ಪತ್ತೆ ಮಾಡುತ್ತಾರೆ. ಬಳಿಕ ಸಿಬಿಐಗೆ ಆರೋಪಿಯ ಚಲನವಲನ ಬಗ್ಗೆ ಮಾಹಿತಿ ನೀಡುತ್ತಾರೆ. ಸಿಬಿಐ ಮೂಲಕ ಎಸ್ಐಟಿಗೆ ಪ್ರಜ್ವಲ್ ಎಲ್ಲಿದ್ದಾರೆ ಅನ್ನುವ ಮಾಹಿತಿ ಸಿಗುತ್ತದೆ. ಹೀಗಾಗಿ ಈ ನೋಟೀಸ್‌, ಸುಳಿವು ಪಡೆಯಲು ಮುಖ್ಯವಾಗಿದೆ.

ಇನ್ನಷ್ಟು ಸಿಬ್ಬಂದಿ

ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿಗೆ ಇನ್ನಷ್ಟು ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಮತ್ತೆ ಎಂಟು ಮಂದಿ ಅಧಿಕಾರಿ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ. ಮೂವರು ಇನ್ಸ್‌ಪೆಕ್ಟರ್ ಹಾಗೂ ಮಹಿಳಾ ಸಿಬ್ಬಂದಿ ಸೇರಿದಂತೆ ಐವರು ಸಿಬ್ಬಂದಿ ನಿಯೋಜಿಸಲಾಗಿದ್ದು, ಕೂಡಲೇ ಸಿಐಡಿ ಕಚೇರಿಯ ಎಸ್ಐಟಿಯಲ್ಲಿ ವರದಿ ಮಾಡಿಕೊಳ್ಳಲು ಆದೇಶಿಸಲಾಗಿದೆ. ಓರ್ವ ಎಸ್ಪಿ, ಇಬ್ಬರು ಇನ್ಸ್ಪೆಕ್ಟರ್ ಗಳು, ಒರ್ವ ಸಬ್ ಇನ್ಸ್ಪೆಕ್ಟರ್ ಹಾಗೂ ನಾಲ್ವರು ಸಿಬ್ಬಂದಿ ಸೇರಿ ಎಂಟು ಜನರ ನೇಮಕ ಮಾಡಲಾಗಿದೆ.

ರೇವಣ್ಣ ಮೇಲೂ ಲುಕೌಟ್‌ ನೋಟೀಸ್‌

ಎಚ್‌.ಡಿ. ರೇವಣ್ಣ (HD Revanna) ವಿರುದ್ಧವೂ ಎಸ್‌ಐಟಿ ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದೆ. ದೇಶ ಬಿಟ್ಟು ಹೋಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಲುಕ್‌ಔಟ್ ನೋಟಿಸ್ (Lookout Notice) ಜಾರಿ ಮಾಡಲಾಗಿದೆ ಎನ್ನಲಾಗಿದೆ. ಈಗಾಗಲೇ ಮಾಜಿ ಸಚಿವ ಎಚ್.ಡಿ. ರೇವಣ್ಣ ವಿರುದ್ಧವೂ ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಪ್ರಕರಣ ದಾಖಲಾಗಿದೆ. ಕಳೆದ ಎರಡು ದಿನಗಳಿಂದ ಎಚ್.ಡಿ. ರೇವಣ್ಣ ಕಾಣಿಸಿಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್‌ ಅನ್ನು ಜಾರಿ ಮಾಡಿದ್ದಾರೆ.

ಕೆ. ಆರ್. ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಡಿ ಲುಕ್ ಔಟ್ ನೋಟಿಸ್‌ ಅನ್ನು ಜಾರಿ ಮಾಡಲಾಗಿದೆ. ಈಗ ಎಚ್.ಡಿ. ರೇವಣ್ಣ ಸಹ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದ್ದು, ದೇಶ ಬಿಟ್ಟು ಹೋಗುವ ಸಾಧ್ಯತೆ ಇದೆ. ಒಂದು ವೇಳೆ ಅವರು ದೇಶ ಬಿಟ್ಟು ಹೋದರೆ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಲಿದೆ. ಇದೊಂದು ಹೈಪ್ರೊಫೈಲ್‌ ಕೇಸ್‌ ಆಗಿದ್ದು, ಸೂಕ್ಷ್ಮವಾಗಿ ತನಿಖೆ ನಡೆಸಬೇಕಿದೆ. ಹೀಗಾಗಿ ಎಸ್‌ಐಟಿ ಅಧಿಕಾರಿಗಳು ಎಲ್ಲ ಆಯಾಮಗಳಲ್ಲಿಯೂ ತನಿಖೆ ಮಾಡುತ್ತಿದ್ದಾರೆ.

ಇದರ ಜತೆಗೆ ರೇವಣ್ಣ ಅವರಿಗೆ ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ನೋಟಿಸ್‌ ನೀಡುತ್ತಲೇ ಬರಲಾಗಿದೆ. ಇಷ್ಟಾದರೂ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಎಸ್‌ಐಟಿ ಲುಕ್‌ಔಟ್‌ ನೋಟಿಸ್‌ ಜಾರಿಗೊಳಿಸಿದೆ.

ಇದನ್ನೂ ಓದಿ: Prajwal Revanna Case: ಮೊಮ್ಮಗನ ದೆಸೆಯಿಂದ ದೇವೇಗೌಡರ ಆರೋಗ್ಯ ಏರುಪೇರು, ಕುಟುಂಬದಿಂದ ತೀವ್ರ ನಿಗಾ

Continue Reading

ಬೆಂಗಳೂರು

Covishield vaccine: ಕೋವಿಶೀಲ್ಡ್‌ ಲಸಿಕೆಯಿಂದ ಸೈಡ್‌ ಎಫೆಕ್ಟ್‌ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಭಾರತ ಸೇರಿದಂತೆ ಎಲ್ಲೆಡೆ ಕೊರೊನಾ ವೈರಸ್‌ (Corona Virus) ಎದುರಿಸಲು ಪಡೆದಿದ್ದ ಕೋವಿಶೀಲ್ಡ್‌ ಲಸಿಕೆ (Covishield vaccine) ಕುರಿತು ಚರ್ಚೆಗಳು ನಡೆಯುತ್ತಿವೆ. ಕೋವಿಶೀಲ್ಡ್‌ ಲಸಿಕೆ ತೆಗೆದುಕೊಂಡವರಲ್ಲಿ ರಕ್ತ ಹೆಪ್ಪುಗಟ್ಟುವ (blood clotting) ಅಡ್ಡ ಪರಿಣಾಮ ಕುರಿತು ಆತಂಕ ಹೆಚ್ಚಿದೆ. ಈ ಮಧ್ಯೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೋವಿಶೀಲ್ಡ್‌ನಿಂದ ಸ್ವಲ್ಪ ಪ್ರಮಾಣದ ಎಫೆಕ್ಟ್ ಆಗಿದೆ ಎಂದಿದ್ದಾರೆ.

VISTARANEWS.COM


on

By

Covishield Vaccine
ಸಾಂದರ್ಭಿಕ ಚಿತ್ರ
Koo

ಹುಬ್ಬಳ್ಳಿ: ಕೋವಿಡ್‌ ವಿರುದ್ಧ ಹೋರಾಡಲು ಭಾರತದಲ್ಲಿ ವ್ಯಾಪಕವಾಗಿ ಕೋವಿಶೀಲ್ಡ್ ಲಸಿಕೆ (Covishield vaccine) ಬಳಸಲಾಗಿತ್ತು. ಇದೀಗ ಇದರ ಸೈಡ್‌ ಎಫೆಕ್ಟ್‌ (Side Effect) ಕುರಿತು ಆತಂಕ ಹೆಚ್ಚಾಗುತ್ತಿದೆ. ಕೋವಿಡ್‌ ನಂತರದ ದಿನಗಳಲ್ಲಿ ಯುವಜನರಲ್ಲಿಯೂ ವಿವರಿಸಲಾಗದ ತೀವ್ರ ಅಸ್ವಸ್ಥತೆ, ಹೃದಯಸ್ತಂಭನ ಮುಂತಾದವುಗಳು ಕಂಡುಬಂದಿವೆ. ಭಾರತದಲ್ಲಿಯೂ ಹಲವಾರು ಪ್ರಕರಣಗಳು ನಡೆದಿದ್ದು, ಕೋವಿಡ್‌ ಹಾಗೂ ಅದರ ಲಸಿಕೆಯ ಬಗ್ಗೆ ಅನುಮಾನ ಮೂಡಿಸಿದ್ದವು. ರಾಜ್ಯದಲ್ಲಿ ಕೋವಿಶೀಲ್ಡ್ ಲಸಿಕೆಯ ಸೈಡ್‌ ಎಫೆಕ್ಟ್ ಆತಂಕ ಹೆಚ್ಚು ಮಾಡಿದ್ದು, ಈ ಬಗ್ಗೆ ಹುಬ್ಬಳ್ಳಿಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಸ್ತಾರ ನ್ಯೂಸ್‌ ಜತೆಗೆ ಮಾತನಾಡಿದ್ದಾರೆ.

ಯಾವುದೇ ಔಷಧವನ್ನು ತೆಗೆದುಕೊಂಡಾಗ ಅಲ್ಪ ಪ್ರಮಾಣದ ಸೈಡ್‌ ಎಫೆಕ್ಟ್‌ ಇದ್ದೆ ಇರುತ್ತದೆ. ಆದರೆ ಈ ಕೋವಿಶೀಲ್ಡ್‌ನಿಂದ ಸ್ವಲ್ಪ ಪ್ರಮಾಣದ ಎಫೆಕ್ಟ್ ಆಗಿದೆ. ಹಾಗಂತ ಭಯ, ಆತಂಕಪಡುವ ಅವಶ್ಯಕತೆಯಿಲ್ಲ. ಏನೋ ಆಗಿ ಬಿಡುತ್ತೆ ಎಂಬ ಗಾಬರಿ ಪಡುವಂತಿಲ್ಲ. ಕೋವಿಶೀಲ್ಡ್ ತಯಾರಿಸುವ ಸಿರಮ್ ಇನ್ಸ್‌ಟಿಟ್ಯೂಟ್ ಬಗ್ಗೆ ಸಾಕಷ್ಟು‌ ಆರೋಪಗಳಿವೆ. ಕೇಂದ್ರ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ಎಲೆಕ್ಟೋರಲ್ ಬಾಂಡ್ ಕೊಟ್ಟಿದ್ದಾರೆ. ಸಿರಮ್ ಬಗ್ಗೆ ಸಾಕಷ್ಟು ಕಾಂಟ್ರವರ್ಸಿಗಳಿವೆ, ಆದರೆ ಕೋವಿಶಿಲ್ಡ್‌ ಲಸಿಕೆ ಬಗ್ಗೆ ಆತಂಕ ಬೇಡ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಇನ್ನೂ ಕರ್ನಾಟಕದಲ್ಲಿ ದೊಡ್ಡ ಪ್ರಮಾಣದ ಎಫೆಕ್ಟ್ ಏನೂ ಆಗಿಲ್ಲ. ವ್ಯಾಕ್ಸಿನ್ ಕೊಟ್ಟು ಎರಡು ವರ್ಷ ಅಯಿತು. ಕೋಟ್ಯಂತರ ಜನರಿಗೆ ಲಸಿಕೆ ಕೊಡಲಾಗಿದೆ, ನಾಲ್ಕೈದು ಪ್ರಕರಣಗಳಲ್ಲಿ ಸೈಡ್ ಎಫೆಕ್ಟ್ ಆಗಿದೆ. ವ್ಯಾಕ್ಸಿನ್‌ನಿಂದಲೇ ಆಗಿದೆಯಾ ಎನ್ನುವುದು ಕೂಡ ಇನ್ನೂ ಗೊತ್ತಾಗಬೇಕಿದೆ. ಕೇಂದ್ರ ಆರೋಗ್ಯ ಇಲಾಖೆಯಿಂದ ಏನೆಲ್ಲ ಮಾರ್ಗಸೂಚಿ ಬರುತ್ತದೆಯೋ ಅದನ್ನು ಪಾಲಿಸುತ್ತೇವೆ ಎಂದರು.

ಇದನ್ನೂ ಓದಿ: Covishield vaccine: ಕೋವಿಶೀಲ್ಡ್‌ ‌ ತಗೋಬೇಡಿ, ಒಳ್ಳೆಯದಲ್ಲ ಎಂದು ಅಪ್ಪುಗೆ ಮನವಿ ಮಾಡಿದ್ದ ಅಭಿಮಾನಿ: ಪೋಸ್ಟ್‌ ವೈರಲ್‌!

ಲಸಿಕೆಯಿಂದ ರಕ್ತ ಹೆಪ್ಪುಗಟ್ಟುವಿಕೆ!

ಕೊರೊನಾ ಸೋಂಕು (coronavirus, Covid 19) ಎದುರಿಸಲು ನಾವು ನೀವೆಲ್ಲ ತೆಗೆದುಕೊಂಡ ಕೋವಿಶೀಲ್ಡ್‌ ಲಸಿಕೆ (Covishield Vaccine) ಅಡ್ಡ ಪರಿಣಾಮವನ್ನು (Side effects) ಹೊಂದಿದೆ ಎಂದು ಸ್ವತಃ ಅದನ್ನು ತಯಾರಿಸಿದ ಕಂಪನಿಯೇ ಇದೀಗ ಒಪ್ಪಿಕೊಂಡಿತ್ತು. ಇದರೊಂದಿಗೆ, ಕೊರೊನಾ ನಂತರದ ದಿನಗಳ ಅಸ್ವಸ್ಥತೆ, ಹೃದಯಾಘಾತಗಳ ಬಗ್ಗೆ ಮೂಡಿದ್ದ ಆತಂಕಕ್ಕೆ ಇನ್ನಷ್ಟು ಆಧಾರ ದೊರೆತಿತ್ತು. ಬ್ರಿಟಿಷ್ ಫಾರ್ಮಾ ದೈತ್ಯ ಅಸ್ಟ್ರಾಜೆನೆಕಾ (AstraZeneca) ತನ್ನ ಕೋವಿಡ್ ಲಸಿಕೆ ಕೋವಿಶೀಲ್ಡ್‌ ಅಪರೂಪವಾಗಿ ಅಡ್ಡ ಪರಿಣಾಮವನ್ನು ಉಂಟುಮಾಡಬಹುದು ಎಂದು ನ್ಯಾಯಾಲಯದಲ್ಲಿ ಒಪ್ಪಿಕೊಂಡಿತ್ತು. ರಕ್ತ ಹೆಪ್ಪುಗಟ್ಟುವಿಕೆ ಮತ್ತು ರಕ್ತದಲ್ಲಿ ಪ್ಲೇಟ್‌ಲೆಟ್ ಕಡಿಮೆಯಾಗುವ ಪರಿಸ್ಥಿತಿಯನ್ನು ಉಂಟುಮಾಡಬಹುದು ಎಂದು ಲಸಿಕೆ ತಯಾರಕರು ಹೇಳಿದ್ದರು. ಆದರೆ ಇದು ಅಪರೂಪದ ಸಂದರ್ಭಗಳಲ್ಲಿ ಆಗಬಹುದು ಎಂದಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬಳ್ಳಾರಿ

A Devendra Gowda: ಎಂ. ಗೋನಾಳ್ ಗ್ರಾಮದ ಮುಖಂಡ ಎ. ದೇವೇಂದ್ರ ಗೌಡ ನಿಧನ

A Devendra Gowda: ಬಳ್ಳಾರಿ ತಾಲೂಕಿನ ಎಂ‌.ಗೋನಾಳ್ ಗ್ರಾಮದ ಮುಖಂಡ ಎ. ದೇವೇಂದ್ರಗೌಡ (90) ಶುಕ್ರವಾರ ಸಂಜೆ ನಗರದ ದೊಡ್ಡಬಸವೇಶ್ವರ ನಗರದ ಅವರ ಪುತ್ರನ ನಿವಾಸದಲ್ಲಿ ವಯೋ ಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.

VISTARANEWS.COM


on

A Devendra Gowda passed away in Ballari
Koo

ಬಳ್ಳಾರಿ: ಬಳ್ಳಾರಿ ತಾಲೂಕಿನ ಎಂ‌. ಗೋನಾಳ್ ಗ್ರಾಮದ ಮುಖಂಡ ಎ. ದೇವೇಂದ್ರ ಗೌಡ (90) (A Devendra Gowda) ಶುಕ್ರವಾರ ಸಂಜೆ ನಗರದ ದೊಡ್ಡಬಸವೇಶ್ವರ ನಗರದ ಅವರ ಪುತ್ರನ ನಿವಾಸದಲ್ಲಿ ವಯೋ ಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.

ಮೃತರು ಪುತ್ರ ನಟರಾಜ್‌ ಗೌಡ ಸೇರಿದಂತೆ ನಾಲ್ಕು ಜನ ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು-ಬಳಗದವರನ್ನು ಅಗಲಿದ್ದಾರೆ. ಇವರ ಅಂತ್ಯಕ್ರಿಯೆ ಶನಿವಾರ ಮಧ್ಯಾಹ್ನ ಬಳ್ಳಾರಿಯ ವೀರಶೈವ ರುದ್ರಭೂಮಿಯಲ್ಲಿ ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Continue Reading
Advertisement
Job Alert
ಉದ್ಯೋಗ3 mins ago

Job Alert: 313 ಹುದ್ದೆಗಳ ಭರ್ತಿಗೆ ಕೆಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಡಿಪ್ಲೋಮಾ ಪದವಿ ಪಡೆದವರು ಇಂದೇ ಅಪ್ಲೈ ಮಾಡಿ

prajwal revanna case blue corner notice
ಪ್ರಮುಖ ಸುದ್ದಿ6 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಪತ್ತೆಗೆ ಬ್ಲೂ ಕಾರ್ನರ್‌ ನೋಟೀಸ್!‌ ಏನಿದರ ಅಗತ್ಯ?

Covishield Vaccine
ಬೆಂಗಳೂರು30 mins ago

Covishield vaccine: ಕೋವಿಶೀಲ್ಡ್‌ ಲಸಿಕೆಯಿಂದ ಸೈಡ್‌ ಎಫೆಕ್ಟ್‌ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

A Devendra Gowda passed away in Ballari
ಬಳ್ಳಾರಿ42 mins ago

A Devendra Gowda: ಎಂ. ಗೋನಾಳ್ ಗ್ರಾಮದ ಮುಖಂಡ ಎ. ದೇವೇಂದ್ರ ಗೌಡ ನಿಧನ

MI vs KKR
ಕ್ರೀಡೆ42 mins ago

MI vs KKR: ಮತ್ತೆ ಮುಂಬೈ ವಿರುದ್ಧ ಕೇಳಿಬಂದ ಟಾಸ್​ ಫಿಕ್ಸಿಂಗ್​ ಆರೋಪ

Amrutha Ramamoorthi has been rejected fifteen times
ಕಿರುತೆರೆ44 mins ago

Amrutha Ramamoorthi: ಆಡಿಷನ್‌ನಲ್ಲಿ ಬರೋಬ್ಬರಿ 15 ಬಾರಿ ರಿಜೆಕ್ಟ್ ಆಗಿದ್ದರಂತೆ ಈ ಖ್ಯಾತ ನಟಿ!

Viral Video
ವೈರಲ್ ನ್ಯೂಸ್51 mins ago

Viral Video:ʼವಡಾಪಾವ್‌ ಗರ್ಲ್‌ʼನ ಬೀದಿ ರಂಪಾಟ; ಸೋಶಿಯಲ್ ಮೀಡಿಯಾ ಸ್ಟಾರ್‌ನ ವಿಡಿಯೋ ಫುಲ್‌ ವೈರಲ್‌

IPL 2024
ಬೆಂಗಳೂರು1 hour ago

Traffic Restrictions: ಐಪಿಎಲ್‌ ಕ್ರಿಕೆಟ್‌; ಈ ರೋಡ್‌ನಲ್ಲಿ ಅಪ್ಪಿತಪ್ಪಿಯೂ ಪಾರ್ಕಿಂಗ್ ಮಾಡಬೇಡಿ

Rahul Gandhi
Lok Sabha Election 20241 hour ago

Rahul Gandhi: ರಾಹುಲ್‌ ಗಾಂಧಿಗೆ ಸ್ವಂತ ಕಾರು, ಮನೆ ಇಲ್ಲ; ಇಲ್ಲಿದೆ ಕಾಂಗ್ರೆಸ್‌ ಮುಖಂಡ ಘೋಷಿಸಿದ ಆಸ್ತಿ ವಿವರ

IPL 2024
ಕ್ರೀಡೆ2 hours ago

IPL 2024: ಕೆಎಸ್‌ಸಿಎಗೆ ಮತ್ತೆ ಸಂಕಷ್ಟ; ಚಿನ್ನಸ್ವಾಮಿ ಸ್ಟೇಡಿಯಂನ ಎಲ್ಲ ನೀರಿನ ಮೂಲದ ವಿವರ ಕೇಳಿದ ಎನ್‌ಜಿಟಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ9 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ22 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ1 day ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌