Site icon Vistara News

ಸಚಿವ ಡಾ‌.ಕೆ.ಸುಧಾಕರ್ ಕಾರ್ಯಕ್ರಮದಲ್ಲಿ ಡ್ಯಾಗರ್‌ ಇಟ್ಟುಕೊಂಡಿದ್ದ ಅನುಮಾನಾಸ್ಪದ ವ್ಯಕ್ತಿ ಬಂಧನ

ಸಚಿವ ಸುಧಾಕರ್‌

ಚಿಕ್ಕಬಳ್ಳಾಪುರ: ಸಚಿವ ಡಾ‌.ಕೆ.ಸುಧಾಕರ್ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಶರ್ಟ್‌ ಒಳಗೆ ಡ್ಯಾಗರ್‌ ಇಟ್ಟುಕೊಂಡಿದ್ದ ಅನುಮಾನಾಸ್ಪದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿಯಲ್ಲಿ ಶುಕ್ರವಾರ ಕುಡಿದ ಮತ್ತಿನಲ್ಲಿದ್ದ ಗಂಗರಾಜು ಎಂಬಾತ ಡಾ.ಕೆ.ಸುಧಾಕರ್‌ ಅವರನ್ನು ಹಿಂಬಾಲಿಸುತ್ತಿರುವುದನ್ನು ಗಮನಿಸಿದ ಗುಡಿಬಂಡೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಚಿವರು ಜನರ ಬಳಿ ಮಾತನಾಡಿಸುತ್ತಿದ್ದಾಗ ಗಂಗರಾಜು ಜನರನ್ನು ಪಕ್ಕಕ್ಕೆ ನೂಕಿ ಅವರತ್ತ ತೆರಳುತ್ತಿದ್ದ. ಆದರೆ, ಸಚಿವರಿಗೆ ಈ ಬಗ್ಗೆ ಗಮನಕ್ಕೆ ಬಂದಿರಲಿಲ್ಲ. ಈತನ ಅನುಮಾನಾಸ್ಪದ ನಡೆಯನ್ನು ಗಮನಿಸಿದ ಪೊಲೀಸರು ಅನುಮಾನಾಸ್ಪದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಸಚಿವರ ಆಪ್ತರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣವನ್ನು NIAಗೆ ವಹಿಸಿದ ರಾಜ್ಯ ಸರ್ಕಾರ: ಸಿಎಂ ಬೊಮ್ಮಾಯಿ ಘೋಷಣೆ

Exit mobile version