Site icon Vistara News

Accident | ಸವದತ್ತಿಯಲ್ಲಿ ಪೆಟ್ರೋಲ್ ಟ್ಯಾಂಕರ್‌, ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಯುವಕ ಸಾವು

Accident

ಬೆಳಗಾವಿ: ಜಿಲ್ಲೆಯ ಸವದತ್ತಿ ಪಟ್ಟಣದ ಹೊರವಲಯದಲ್ಲಿ ಪೆಟ್ರೋಲ್ ಟ್ಯಾಂಕರ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ(Accident) ಕಾರಿನಲ್ಲಿದ್ದ ಯುವಕ ಮೃತಪಟ್ಟಿದ್ದಾನೆ.

ಹುಬ್ಬಳ್ಳಿಯ ಶಾಂತಿನಗರ ನಿವಾಸಿ ಸಾಗರ ವಿಠ್ಠಲ ಕೇಶನ್ನವರ (34) ಮೃತ. ಸವದತ್ತಿ ರೇಣುಕಾದೇವಿ ದರ್ಶನಕ್ಕೆ ಯುವಕ ಕಾರಿನಲ್ಲಿ ತೆರಳುವಾಗ ಪೆಟ್ರೋಲ್‌ ಟ್ಯಾಂಕರ್‌ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಕಾರಿಗೆ ಡಿಕ್ಕಿ ಹೊಡೆದು ಪೆಟ್ರೋಲ್ ಟ್ಯಾಂಕರ್‌ ರಸ್ತೆ ಪಕ್ಕದ ಜಮೀನಿಗೆ ನುಗ್ಗಿದೆ. ಈ ವೇಳೆ ಟ್ಯಾಂಕರ್‌ನಿಂದ ಪೆಟ್ರೋಲ್‌ ಸೋರಿಕೆಯಾಗಿದ್ದು, ಸ್ಥಳೀಯರು ಅಪಾಯವನ್ನು ಲೆಕ್ಕಿಸದೇ ಪೆಟ್ರೋಲ್‌ ಅನ್ನು ಕ್ಯಾನ್‌ಗಳನ್ನು ತುಂಬಿಸಿಕೊಳ್ಳಲು ಮುಗಿಬಿದ್ದಿದ್ದಾರೆ. ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | ಕುಶಾಲನಗರದಲ್ಲಿ ಯುವತಿ, ಯುವಕನಿಗೆ ಇರಿದ ಹೋಟೆಲ್‌ ಸಪ್ಲಯರ್‌, ತ್ರಿಕೋನ ಪ್ರೇಮ ಕಾರಣವೇ?

Exit mobile version