Site icon Vistara News

ಗುಂಡ್ಲುಪೇಟೆ ತಾಲೂಕು ಆಸ್ಪತ್ರೆ ಅವ್ಯವಸ್ಥೆ; ಆಂಬ್ಯುಲೆನ್ಸ್‌ನಲ್ಲಿ ಆಕ್ಸಿಜನ್‌, ವೆಂಟಿಲೇಟರ್‌ ಇಲ್ಲದೆ ಯುವಕ ಸಾವು

ಗುಂಡ್ಲುಪೇಟೆ

ಚಾಮರಾಜನಗರ: ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆಗೆ ಯುವಕನೊಬ್ಬ ಮೃತಪಟ್ಟಿದ್ದಾನೆ. ಆಂಬ್ಯುಲೆನ್ಸ್‌ನಲ್ಲಿ ಆಕ್ಸಿಜನ್, ವೆಂಟಿಲೇಟರ್ ಇಲ್ಲದೆ ಯುವಕ ಮೃತಪಟ್ಟಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಜಿಲ್ಲೆಯ ಗುಂಡ್ಲುಪೇಟೆ ಗೋಪಾಲಸ್ವಾಮಿ ಬೆಟ್ಟಕ್ಕೆ ಮೈಸೂರಿನಿಂದ ಪತ್ನಿಯೊಡನೆ ಅನಿಲ್ ಎಂಬಾತ ಸೋಮವಾರ ಆಗಮಿಸಿದ್ದ. ಬೆಟ್ಟದಿಂದ ವಾಪಾಸ್ ಬರುವಾಗ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಆಂಬ್ಯುಲೆನ್ಸ್‌ನಲ್ಲಿ ಗುಂಡ್ಲುಪೇಟೆ ತಾಲೂಕು ಆಸ್ಪತ್ರೆಗೆ ಸಾಗಿಸಲಾಗಿದೆ.

ಗುಂಡ್ಲುಪೇಟೆ ಆಸ್ಪತ್ರೆಗೆ ಆಗಮಿಸಿದ ಸಂದರ್ಭದಲ್ಲಿ ಆಂಬುಲೆನ್ಸ್‌ನಲ್ಲಿ ಆಕ್ಸಿಜನ್‌, ವೆಂಟಿಲೇಟರ್ ಇಲ್ಲದೆ ಯುವಕ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಅನಿಲ್ ಸಾವಿನಿಂದ ಆಘಾತಕ್ಕೊಳಗಾದ ಪತ್ನಿ, ಆಂಬ್ಯುಲೆನ್ಸ್‌ನಲ್ಲಿ ವೆಂಟಿಲೇಟರ್ ಕೆಲಸ ಮಾಡುತ್ತಿಲ್ಲ ಬನ್ನಿ ಎಂದರೂ ಯಾರು ಸಿಬ್ಬಂದಿ ಬರಲಿಲ್ಲ. ಆಂಬ್ಯುಲೆನ್ಸ್‌ ಅವ್ಯವಸ್ಥೆಯಿಂದ ನನ್ನ ಪತಿ ಮೃತಪಟ್ಟಿದ್ದಾರೆ ಎಂದು ಪತ್ನಿ ಆರೋಪಿಸಿದ್ದಾರೆ.

ಇದನ್ನೂ ಓದಿ | Blood Donate | ಮಾಯಾ ಶ್ವಾನಕ್ಕೆ ರಕ್ತದಾನ ಮಾಡಿ ಜೀವ ಉಳಿಸಿದ ಚಾರ್ಲಿ

Exit mobile version