Site icon Vistara News

ಅಪಘಾತದಲ್ಲಿ ಯುವಕನಿಗೆ ಗಾಯ; ಆಸ್ಪತ್ರೆಗೆ ತೆರಳಲು ಶಾಸಕ ರೇಣುಕಾಚಾರ್ಯ ಸಹಾಯ

ರೇಣುಕಾಚಾರ್ಯ

ದಾವಣಗೆರೆ: ಅಪಘಾತದಲ್ಲಿ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ಸೇರಿಸಲು ಸಹಾಯ ಮಾಡುವ ಮೂಲಕ ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಮಾನವೀಯತೆ ಮೆರೆದಿದ್ದಾರೆ.

ನ್ಯಾಮತಿ ತಾಲೂಕಿನ ಟಿ.ಜಿ.ಹಳ್ಳಿಯ ಬಳಿ ಭಾನುವಾರ ಬೈಕ್ ಅಪಘಾತದಲ್ಲಿ ಯುವಕ ತೀವ್ರವಾಗಿ ಗಾಯಗೊಂಡಿದ್ದ. ಯುವಕನ ‌ತಲೆಗೆ ಪೆಟ್ಟು ಬಿದ್ದಿದ್ದರಿಂದ ಯುವಕನ ತಾಯಿ ಗಾಬರಿಗೊಂಡಿದ್ದರು. ಅದೇ ಮಾರ್ಗದಲ್ಲಿ ಕಾರಿನಲ್ಲಿ ತೆರಳುತ್ತಿದ್ದ ಶಾಸಕ ರೇಣುಕಾಚಾರ್ಯ, ಅಪಘಾತ ಸ್ಥಳದಲ್ಲಿ ನಿಲ್ಲಿಸಿ ಗಾಯಗೊಂಡ ಯುವಕನನ್ನು ಬೆಂಗಾವಲು ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸುವ ವ್ಯವಸ್ಥೆ ಮಾಡಿ, ಯುವಕನ ತಾಯಿಗೆ ಧೈರ್ಯ ಹೇಳಿ ಕಳುಹಿಸಿದ್ದಾರೆ. ರೇಣುಕಾಚಾರ್ಯ ಅವರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ | Praveen Nettaru | ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳ ಬಂಧನ

Exit mobile version