Fraud Case: ಬೆಳದಿಂಗಳ ಬಾಲೆ ಪ್ರಕರಣಕ್ಕೆ ಟ್ವಿಸ್ಟ್‌; ಸ್ವಾಮೀಜಿ ವಂಚನೆ ಕೇಸಲ್ಲಿ ಎ2 ಆರೋಪಿ ಈಗ ಎ1! - Vistara News

ಕರ್ನಾಟಕ

Fraud Case: ಬೆಳದಿಂಗಳ ಬಾಲೆ ಪ್ರಕರಣಕ್ಕೆ ಟ್ವಿಸ್ಟ್‌; ಸ್ವಾಮೀಜಿ ವಂಚನೆ ಕೇಸಲ್ಲಿ ಎ2 ಆರೋಪಿ ಈಗ ಎ1!

Channaveera Shivacharya Swamiji: ಭಕ್ತೆಯ ಸೋಗಿನಲ್ಲಿ ಬಂದಾಕೆ ಬಳಿಕ ವಿಡಿಯೊ ಕಾಲ್‌ ಮೂಲಕ ಸ್ವಾಮೀಜಿಗೆ ಹತ್ತಿರವಾಗಿ ಬಳಿಕ ಅವರಿಂದ 35 ಲಕ್ಷ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದೆ. ಈ ಸಂಬಂಧ ಆಡಿಯೊವೊಂದು ಬಿಡುಗಡೆಯಾಗಿದೆ.

VISTARANEWS.COM


on

Channaveera Shivacharya Swamiji fraud case
ಎ3 ಆರೋಪಿ ಅವನಿಕಾ, ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಮತ್ತು ಎ1 ಆರೋಪಿ ಮಂಜುಳಾ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಯುವತಿಯೊಬ್ಬಳ ವಂಚನೆಯಿಂದ 35 ಲಕ್ಷ ರೂಪಾಯಿ ಕಳೆದುಕೊಂಡಿರುವ (Fraud Case) ಕಬ್ಬಾಳ ಮಹಾಸಂಸ್ಥಾನದ ಶ್ರೀ ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದೆ. ಇಲ್ಲೀಗ ಎ2 ಆರೋಪಿ ಎ1 ಆಗಿ ಬದಲಾಗಿದ್ದಾರೆ. ಇದು ಪೊಲೀಸರೇ ಹೆಣೆದ ಪ್ಲ್ಯಾನ್‌ ಎಂದು ಹೇಳಲಾಗುತ್ತಿದ್ದು, ಸ್ವಾಮೀಜಿಯನ್ನು ಬಚಾವ್‌ ಮಾಡಲು ಹೀಗೆ ಮಾಡಲಾಗಿದೆಯೇ ಎಂಬ ಅನುಮಾನವೂ ಮೂಡಿದೆ. ಕಾರಣ, ಎ2 ಹಾಗೂ ಎ3 ಆರೋಪಿಗಳ ಸಂಭಾಷಣೆಯ ಆಡಿಯೊ ಇದನ್ನು ಪುಷ್ಟೀಕರಿಸುತ್ತಿದೆ.

ತಾವು ಯುವತಿಯೊಬ್ಬಳನ್ನು ನಂಬಿ 35 ಲಕ್ಷ ರೂಪಾಯಿಯನ್ನು ಕಳೆದುಕೊಂಡಿದ್ದಾಗಿ (Fraud Case) ಶ್ರೀ ಚನ್ನವೀರ ಶಿವಾಚಾರ್ಯ ಸ್ವಾಮೀಜಿ ದೂರು ನೀಡಿದ್ದರು. ಒಂದು ತಿಂಗಳ ಬಳಿಕ ಈ ರಹಸ್ಯ ಎಲ್ಲರಿಗೂ ಗೊತ್ತಾಗಿತ್ತು. ಅವರು ನೀಡಿದ ದೂರಿನನ್ವಯ ವರ್ಷ ಎಂಬ ಯುವತಿ ವಿಡಿಯೊ ಕಾಲ್‌ ಮೂಲಕ ಪರಿಚಯವಾಗಿದ್ದು, ಜಾಗದ ಹೆಸರಿನಲ್ಲಿ ಮೋಸ ಮಾಡಿದ್ದಳು ಎಂದು ದೂರಿನಲ್ಲಿ ತಿಳಿಸಿದ್ದರು. ಆದರೆ, ಆಕೆಯ ಸ್ನೇಹಿತೆ ಮಂಜುಳಾ ಎಂಬಾಕೆಯ ಖಾತೆಗೆ ಹಣವನ್ನು ಹಾಕಿದ್ದಾಗಿ ದೂರಿನಲ್ಲಿ ಉಲ್ಲೇಖಿಸಿದ್ದರು. ಹೀಗಾಗಿ ಪೊಲೀಸರು ಈ ಪ್ರಕರಣದಲ್ಲಿ ಎ 1 ಆರೋಪಿಯನ್ನಾಗಿ ವರ್ಷಳನ್ನು ಹಾಗೂ ಮಂಜುಳಾ ಎಂಬಾಕೆಯನ್ನು ಎ2 ಆರೋಪಿಯನ್ನಾಗಿ ಮಾಡಿದ್ದರು. ಆದರೆ, ಈಗ ವರ್ಷ ಎನ್ನುವ ಯುವತಿಯೇ ಇಲ್ಲ. ತಾನೇ ಹಾಗೆ ಮಾಡಿದ್ದು ಎಂದು ಮಂಜುಳಾ ಎಂಬಾಕೆಯಿಂದ ತಪ್ಪೊಪ್ಪಿಗೆ ಪತ್ರವನ್ನು ಬರೆಸಿಕೊಂಡು ಪ್ರಕರಣಕ್ಕೆ ಬಿ ರಿಪೋರ್ಟ್‌ ಹಾಕಿ ತಿಲಾಂಜಲಿ ಹಾಕಲು ಪ್ರಯತ್ನಿಸಲಾಗಿದೆ ಎಂಬ ಅನುಮಾನ ಮೂಡಿದೆ.

ಇದನ್ನೂ ಓದಿ: Monsoon Precaution: ಮಳೆಗಾಲಕ್ಕೆ ಶುರುವಾಯ್ತು ಕ್ಷಣಗಣನೆ; ಈ ಆ್ಯಪ್‌ಗಳು ಈಗ ನಿಮಗೆ ಅತ್ಯಗತ್ಯ

ಪೊಲೀಸರ ಪ್ಲ್ಯಾನ್‌?

4 ಲಕ್ಷ ರೂಪಾಯಿಗೆ ಕೇಸ್ ಕ್ಲೋಸ್ ಮಾಡಲು ಯಾರು ಹೊರಟಿದ್ದಾರೆ ಎಂಬ ಪ್ರಶ್ನೆ ಈಗ ಉದ್ಭವಿಸಿದೆ. ಈ ಪ್ರಕರಣದ ಆಡಿಯೊ ಈಗ ಲಭ್ಯವಾಗಿದೆ. ಎ2 ಆರೋಪಿ ಮಂಜುಳಾ ಮತ್ತು ಎ3 ಆರೋಪಿ ಅವನಿಕಾ ನಡುವಿನ ಸಂಭಾಷಣೆ ಬಹಿರಂಗಗೊಂಡಿದೆ.

ಸ್ವಾಮೀಜಿ ನೀಡಿದ್ದ ದೂರಿನಲ್ಲಿ A1 ಆರೋಪಿಯಾಗಿ ವರ್ಷ ಎಂಬ ಯುವತಿ ಇದ್ದಳು. A2 ಆರೋಪಿಯಾಗಿ ವರ್ಷಾಳ ಸ್ನೇಹಿತೆ ಮಂಜುಳಾ ಮೇಲೆ ದೂರಿತ್ತು. ಇನ್ನು ಈ ಸಂಬಂಧ ಸ್ವಾಮೀಜಿ ಬಳಿ ಮಾತುಕತೆಗೆ ಬಂದಿದ್ದ ಸಂಘಟನೆಯೊಂದ ಮುಖ್ಯಸ್ಥೆ ಅವನಿಕಾ A3 ಆರೋಪಿಯಾಗಿದ್ದಾಳೆ. ಸ್ವಾಮೀಜಿ ನೀಡಿದ ದೂರಿನಂತೆ ಪ್ರಕರಣದ ತನಿಖೆಯನ್ನು ದಾಬಸ್‌ಪೇಟೆ ಪೊಲೀಸರು ಆರಂಭಿಸಿದ್ದರು. ಅಲ್ಲದೆ, ಈ ಕೇಸನ್ನು ದೊಡ್ಡದು ಮಾಡ್ಬೇಡಿ, ಚಿಕ್ಕದಾಗಿ‌ ಮುಗಿಸಿ‌ ಎಂದು ಸ್ವಾಮೀಜಿ ಮನವಿ ಮಾಡಿದ್ದರು ಎನ್ನಲಾಗಿದೆ.

ಆದರೆ, ಪೊಲೀಸರಿಗೆ ಸಮಸ್ಯೆಯಾಗಿದ್ದು ಎ1 ಆರೋಪಿ ವರ್ಷ. ಕಾರಣ, ಇಲ್ಲಿ ವರ್ಷ ಎಂಬ ಕ್ಯಾರೆಕ್ಟರ್ ಇಲ್ಲವೇ ಇಲ್ಲ ಎಂಬುದು ಪೊಲೀಸರ ತನಿಖಾ ಆಯಾಮವಾಗಿದೆ. ಏಕೆಂದರೆ ವರ್ಷಳ ಮುಖ ನೋಡದೆ ಸ್ವಾಮೀಜಿ ಹಣ ಹಾಕಲು ಹೇಗೆ ಸಾಧ್ಯ ಎಂಬುದು ಅವರ ಪ್ರಶ್ನೆಯಾಗಿದೆ. ಸ್ವಾಮೀಜಿ ವರ್ಷ ಎಂದರೆ ಯಾರು ಎಂಬ ವಿಷಯವನ್ನು ಮುಚ್ಚಿಟ್ಟಿದ್ದಾರೆಯೇ ಎಂಬ ಅನುಮಾನವೂ ಮೂಡಿದೆ. ಜತೆಗೆ, ಕೇಸ್ ಮುಂದುವರಿಯಲು ವರ್ಷ ಬೇಕೇ ಬೇಕು. ಹೀಗಾಗಿ ಪೊಲೀಸರು ಪ್ಲ್ಯಾನ್‌ ಮಾಡಿದ್ದಾರೆ. ಎ2 ಆರೋಪಿ ಮಂಜುಳಾಳನ್ನೇ ವರ್ಷಳನ್ನಾಗಿ ಬದಲಾಗೋಕೆ ಹೇಳಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Fraud Case: ಬೆಳದಿಂಗಳ ಬಾಲೆಯ ಮೋಹಕ್ಕೆ ಬಿದ್ದರೇ ಸ್ವಾಮೀಜಿ? 35 ಲಕ್ಷ ರೂಪಾಯಿ ದೋಖಾ!

ವರ್ಷಳ ಪರಿಚಯಿಸಿದ್ದ ಮಂಜುಳಾ?

ಇನ್ನೊಂದು ಕಡೆ ಮಂಜುಳಾನೇ ಸ್ವಾಮೀಜಿಗೆ ವರ್ಷಳನ್ನು ಪರಿಚಯ ಮಾಡಿಸಿರಬಹುದು ಎಂಬ ಅನುಮಾನವೂ ಮೂಡಿದೆ. ಸ್ವಾಮೀಜಿ ಅಕೌಂಟಿಂದ ಹಣ ಹೋಗಿರುವುದು ಸಹ ಮಂಜುಳಾ ಅಕೌಂಟಿಗೇ ಆಗಿದೆ. ಹೀಗಾಗಿ ಈ ಪ್ರಕರಣವನ್ನು ಕೊನೆಗಾಣಿಸಲು ಪೊಲೀಸರು ಮುಂದಾಗಿದ್ದಾರೆ ಎನ್ನಲಾಗಿದೆ.

ಪೊಲೀಸರು ಹೇಗೆ ಪ್ಲ್ಯಾನ್ ಮಾಡಿದರು ಎನ್ನುವ ಮಾತುಕತೆಯ ಆಡಿಯೊ ಈಗ ಬಹಿರಂಗವಾಗಿದೆ. ಮೂರು ಲಕ್ಷ ರೂಪಾಯಿ ಕೊಟ್ಟರೆ ಬಿ ರಿಪೋರ್ಟ್ ಹಾಕುತ್ತೇವೆ. ನೀನು ಬೇಲ್ ಕೂಡ ತೆಗೆದುಕೊಳ್ಳುವುದು ಬೇಡ. ಆದರೆ ನೀನೇ ವರ್ಷ ಎಂಬಂತೆ ಬರವಣಿಗೆ ಮತ್ತು ವಿಡಿಯೊ ಹೇಳಿಕೆ ಕೊಡಬೇಕು ಎಂದು ಪೊಲೀಸರು ಮಂಜುಳಾಳಿಗೆ ಹೇಳಿದ್ದಾರೆ ಎಂಬ ಬಗ್ಗೆ ಆಡಿಯೊದಲ್ಲಿ ಮಾತುಕತೆ ನಡೆಸಲಾಗಿದೆ.

ವಂಚನೆ ಪ್ರಕರಣದ ಆಡಿಯೊ ಇಲ್ಲಿದೆ

ಈಗಾಗಲೇ ಪೊಲೀಸರ ಒತ್ತಡಕ್ಕೆ ಬರವಣಿಗೆ ಮೂಲಕ ಮಂಜುಳಾ ತಪ್ಪೊಪ್ಪಿಗೆ ಪತ್ರವನ್ನು ಬರೆದುಕೊಟ್ಟಿದ್ದಾಳೆ ಎನ್ನಲಾಗಿದೆ. ಆದರೆ, ಹೀಗೆ ಹೇಳಿಕೆ ನೀಡುವಂತೆ ಮಂಜುಳಾಗೆ ವಕೀಲರ ಮೂಲಕ ಪೊಲೀಸರು ಹೇಳಿಸಿದ್ದಾರೆಯೇ ಎಂಬ ಅನುಮಾನವೂ ಮೂಡಿದೆ.

ಇದನ್ನೂ ಓದಿ: ವಿಧವೆ ಅನ್ನೋದಕ್ಕೆ ರಾಷ್ಟ್ರಪತಿಯನ್ನು ಸಂಸತ್‌ ಭವನ ಉದ್ಘಾಟನೆಗೆ ಮೋದಿ ಆಹ್ವಾನಿಸಿಲ್ಲವೆಂದ ಕುಂ. ವೀರಭದ್ರಪ್ಪ

ನನ್ನ ಮಗ ಮಠದಲ್ಲಿ ಓದುತ್ತಿದ್ದ. ಆಗ ಸ್ವಾಮೀಜಿ ಮತ್ತು ನನಗೆ ಪರಿಚಯ ಆಯ್ತು. ಫೇಸ್‌ಬುಕ್‌ ಮತ್ತು ವಾಟ್ಸಾಪ್‌ನಲ್ಲಿ ಪರಿಚಯ ಮಾಡಿಕೊಂಡಿದ್ದೆವು. ನಾನು ಭಕ್ತೆಯಾಗಿದ್ದು, ಸ್ವಾಮೀಜಿಗೆ 10 ಎಕರೆ ಜಮೀನು ಕೊಡುತ್ತೇನೆ ಎಂದು ಹೇಳಿದ್ದೆ. ಹಾಗಾಗಿ ಸ್ವಾಮೀಜಿ ನನಗೆ ದುಡ್ಡು ಕೊಟ್ಟರು. .ಈ ಕೇಸ್‌ಗೂ ಸಂಘಟನೆಯ ಅವನಿಕಾ, ಕಾವೇರಿ ಸೇರಿದಂತೆ ಯಾರಿಗೂ ಸಂಬಂಧ ಇಲ್ಲ ಎಂದು ಮಂಜುಳಾ ತಪ್ಪೊಪ್ಪಿಗೆ ಪತ್ರವನ್ನು ಕೊಟ್ಟಿದ್ದಾಳೆ. ಈ ಎಲ್ಲ ವಿಚಾರಗಳೂ ಆಡಿಯೊದಲ್ಲಿ ಬಹಿರಂಗವಾಗಿದೆ. ಹೀಗಾಗಿ ಈ ಪ್ರಕರಣ ಮತ್ತೆ ಯಾವ ರೂಪ ಪಡೆದುಕೊಳ್ಳಲಿದೆ ಎಂಬುದು ಸದ್ಯದ ಕುತೂಹಲವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪರಿಸರ

Areca Price: ಅಡಿಕೆ ದರ ಗಗನಮುಖಿ; ಚುನಾವಣೆ ಬಳಿಕ ಮತ್ತಷ್ಟು ಏರಿಕೆ?

ಕಳೆದೆರಡು ವಾರದಲ್ಲಿ ಅಡಿಕೆಯ (Areca Price) ಎಲ್ಲಾ ವೆರೈಟಿಗಳು ಧಾರಣೆ ಮೇಲ್ಮುಖವಾಗಿ ಏರುತ್ತಿದ್ದು, ರೈತರ ಮುಖದಲ್ಲಿ ಮಂದಹಾಸ ಕಾಣುತ್ತಿದೆ. ಕಳೆದ ಮೂರ್ನಾಲ್ಕು ತಿಂಗಳಿಂದ ಒಂದೇ ರೀತಿ 47,000-48,000 ನಡೆಯುತ್ತಿದ್ದ ರಾಶಿ ಅಡಿಕೆ ಧಾರಣೆ, ಕಳೆದ ವಾರ 50,000 ರೂ. ದಾಟಿ, ಈಗ 53,856ಕ್ಕೆ ತಲುಪಿದೆ. ಇನ್ನೂ ಏರುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗುತ್ತಿದೆ.

VISTARANEWS.COM


on

Areca Price
Koo
Aravind Sigadal

-ಅರವಿಂದ ಸಿಗದಾಳ್, ಮೇಲುಕೊಪ್ಪ
ಒಂದು ನಿರ್ದಿಷ್ಟ ಪಕ್ಷ (Areca Price) ಎಲೆಕ್ಷನ್‌ನಲ್ಲಿ ಗೆಲ್ಲುತ್ತದೆ ಅಂತ ಸರ್ವೆ ಏಜೆನ್ಸಿಗಳು ಹೇಳುವಾಗ, ಷೇರು ಮಾರುಕಟ್ಟೆ ಏರುತ್ತದೆ. ಇನ್ನೊಂದು ನಿರ್ದಿಷ್ಟ ಪಕ್ಷ ಎಲೆಕ್ಷನ್‌ನಲ್ಲಿ ಗೆಲ್ಲುತ್ತದೆ ಅಂತ ಸರ್ವೆ ಏಜೆನ್ಸಿಗಳು ಹೇಳುವಾಗ ಷೇರು ಮಾರುಕಟ್ಟೆ ಕುಸಿಯುತ್ತದೆ. ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಷೇರು ಮಾರುಕಟ್ಟೆಯ ಏರಿಳತವೂ ತಲ್ಲಣವನ್ನೇ ಸೃಷ್ಟಿ ಮಾಡುತ್ತದೆ. ಆದರೆ, ಈ ಬಾರಿ ಮುಂಬಯಿ ಸ್ಟಾಕ್ ಎಕ್ಸ್ಚೇಂಜ್ ಏರಿಳಿತವನ್ನು ಮೀರಿಸುವಂತೆ ಅಡಿಕೆ ದರ ಗೂಳಿಯ ಕುಣಿತವಾಗಿದೆ! ಕಳೆದೆರಡು ವಾರದಲ್ಲಿ ಅಡಿಕೆಯ ಎಲ್ಲಾ ವೆರೈಟಿಗಳು ಧಾರಣೆ ಮೇಲ್ಮುಖವಾಗಿ ಏರುತ್ತಿದ್ದು, ರೈತರ ಮುಖದಲ್ಲಿ ಮಂದಹಾಸ ಕಾಣುತ್ತಿದೆ. ಕಳೆದ ಮೂರ್ನಾಲ್ಕು ತಿಂಗಳಿಂದ ಒಂದೇ ರೀತಿ 47,000-48,000 ನಡೆಯುತ್ತಿದ್ದ ರಾಶಿ ಅಡಿಕೆ ಧಾರಣೆ, ಕಳೆದ ವಾರ 50,000 ರೂ. ದಾಟಿ, ಈಗ 53,856ಕ್ಕೆ ತಲುಪಿದೆ. ಇನ್ನೂ ಏರುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗುತ್ತಿದೆ. ಅದೇ ರೀತಿ, ಮೂರು ತಿಂಗಳ ಹಿಂದೆ 53,000 ಇದ್ದ ಬೆಟ್ಟ ಅಡಿಕೆ ಧಾರಣೆ ಕಳೆದ ವಾರ 55,000 ರೂ. ದಾಟಿ, ಇವತ್ತು 56,333 ರೂ.ಗೆ ತಲುಪಿದೆ. ಇದೇ ಸಮಯದಲ್ಲಿ ಅಡಿಕೆ ಮಾರುಕಟ್ಟೆಗೆ ಬರುತ್ತಿರುವ ಆವಕವೂ ಏರುತ್ತಿದ್ದು, ಅಡಿಕೆ ಆವಕ ಏರಿದರೂ ಅಡಿಕೆ ಧಾರಣೆ ಏರುತ್ತಿರುವುದು ವಿಶೇಷವಾಗಿದೆ.
ಶಿವಮೊಗ್ಗ APMC ದಾಖಲೆಗಳ ಪ್ರಕಾರ ಹೆಚ್ಚು ವ್ಯಾಪಾರವಾಗುವ ರಾಶಿ ಇಡಿ ಅಡಿಕೆ ಆವಕ ಬಾರೀ ಏರಿಕೆ ಕಂಡಿದೆ:
ದಿನಾಂಕ 17.04.2024: 3,907 ಕ್ವಿಂಟಾಲ್
ದಿನಾಂಕ 19.04.2024: 4,378 ಕ್ವಿಂಟಾಲ್
ದಿನಾಂಕ 22.04.2024: 4543 ಕ್ವಿಂಟಾಲ್
ದಿನಾಂಕ 23.04.2024: 17,474 ಕ್ವಿಂಟಾಲ್
ರಾಶಿ ಇಡಿ ಧಾರಣೆ 53,800 ರೂ., ಬೆಟ್ಟೆ 56,300 ರೂ. ದಾಟಿದಾಗ ಸಹಜವಾಗಿಯೇ ಗೊರಬಲು 41 ಸಾವಿರದ ಸನಿಹ ತಲುಪಿದೆ. ಈ ಎಲ್ಲ ವೆರೈಟಿಗಳ ಧಾರಣೆಯ ಏರಿಕೆಯ ಹಿನ್ನೆಲೆಯಲ್ಲಿ ಸಿಪ್ಪೆ ಗೋಟು ದರವೂ ಏರುವ ನಿರೀಕ್ಷೆಯಿದ್ದು, ಸದ್ಯದಲ್ಲೇ ಓಪನ್ ನಗದು ಮಾರುಕಟ್ಟೆಯಲ್ಲಿ 20,000 ರೂ. ದಾಟುವ ನಿರೀಕ್ಷೆ ರೈತರದು. APMC ಮಂಡಿ ಮತ್ತು ಸೊಸೈಟಿಗಳಲ್ಲಿ ಸಿಪ್ಪೆ ಗೋಟು ವ್ಯವಹಾರವೂ ಬಹಳ ಕಮ್ಮಿ. APMC ಒಳಗೆ ವ್ಯಾಪ್ತಿಗೆ ಬರದೆಯೇ ಸಿಪ್ಪೆ ಗೋಟು ವ್ಯವಹಾರ ನೆಡೆಯುತ್ತದೆ. ಅದನ್ನು APMC ವ್ಯಾಪ್ತಿಯ ಒಳಗೆ ಸಂಪೂರ್ಣ ತರಲು ಪ್ರಯತ್ನ ನೆಡೆಯುತ್ತಿಲ್ಲ.

Areca nut

ಚುನಾವಣೆ ಬಳಿಕ ಏನಾಗಲಿದೆ?

ಎಲ್ಲಾ ವೆರೈಟಿ ಅಡಿಕೆಗಳ (ಹಸ, ಬೆಟ್ಟೆ, ಇಡಿ, ಗೊರಬಲು, ಸಿಪ್ಪೆ ಗೋಟು) ದೊಡ್ಡ ಮಟ್ಟದ ಓಪನ್ ನಗದು ವ್ಯವಹಾರಕ್ಕೆ ಒಂದಿಷ್ಟು ಚುನಾವಣೆ ನೀತಿ ಸಂಹಿತೆ ನಿರ್ಬಂಧ ಇರುವುದರಿಂದ, ಎಲೆಕ್ಷನ್ ಮುಗಿದ ಮೇಲೆ ಅಡಿಕೆ ನಗದು ವ್ಯವಹಾರ ಇನ್ನಷ್ಟು ತೀವ್ರತೆ ಪಡೆದ ಮೇಲೆ ಧಾರಣೆ ಏರಿಕೆಯ ಸಾಧ್ಯತೆಯೂ ಇದೆ ಎಂದು ಅಭಿಪ್ರಾಯ ಇದೆ.
ಏನೇ ಆದರೂ, ಅಡಿಕೆ ಮಾರುಕಟ್ಟೆಯ ಧಾರಣೆ ಸಂಪೂರ್ಣ ಲೆಕ್ಕಾಚಾರಕ್ಕೆ ಸಿಗುವಂಥದ್ದಲ್ಲ! ಅದೂ ಷೇರು ಮಾರುಕಟ್ಟೆಯ ರೀತಿ, ಯಾವಾಗ ಗೂಳಿ ಮುನ್ನುಗ್ಗುತ್ತದೆ, ಕರಡಿ ಕುಣಿಯುತ್ತದೆ ಗೊತ್ತಾಗುವುದಿಲ್ಲ.
ಅಡಿಕೆ ಧಾರಣೆಯ ಗೂಳಿ ನುಗ್ಗುವ ಸಮಯದಲ್ಲೇ ಕಾಳು ಮೆಣಸಿನ ಧಾರಣೆಯೂ ಏರು ಮುಖ ಕಾಣುತ್ತಿದೆ. ಕಾಳು ಮೆಣಸಿನ ದರ ಈಗ 57,000 ರೂ. ತಲುಪಿದೆ. ಒಟ್ಟಿನಲ್ಲಿ ಅಡಿಕೆ, ಕಾಳು ಮೆಣಸು ಧಾರಣೆ ರೈತರ ಮೊಗದಲ್ಲಿ ಸಂತಸ ಮೂಡಿಸಿದೆ. ನಾಲ್ಕು ಜನ ಸೇರಿದಲ್ಲಿ, ರಾಜಕೀಯ ವಿಚಾರದೊಂದಿಗೆ ಅಡಿಕೆ ಧಾರಣೆಯ ಚರ್ಚೆಯೂ ಜೋರಾಗಿ ಸೌಂಡ್ ಮಾಡ್ತಾ ಇದೆ!

ಇದನ್ನೂ ಓದಿ: ವಿಸ್ತಾರ ಗ್ರಾಮ ದನಿ: ಅಡಿಕೆ ರೋಗಗಳಿಗೆ, ಇಳುವರಿ ಕ್ಷೀಣಿಸುವುದಕ್ಕೆ ಕಾರಣವೇ ಇದು! ಬೆಳೆಗಾರರೇ ಗಮನಿಸಿ…

Continue Reading

ಶ್ರದ್ಧಾಂಜಲಿ

Arjun Deva: ಹಿರಿಯ ಪತ್ರಕರ್ತ ಅರ್ಜುನ್ ದೇವ ನಿಧನ; ಗಣ್ಯರ ಕಂಬನಿ

Arjun Deva: ಅರ್ಜುನ್​ ದೇವ ಅವರು ತಾಯಿನಾಡು ಪತ್ರಿಕೆ, ಸಂಯುಕ್ತ ಕರ್ನಾಟಕ ಹಾಗೂ ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಮುಖ ಹುದ್ದೆಗಳನ್ನು ನಿರ್ವಹಣೆ ಮಾಡಿದ್ದಾರೆ. ಪತ್ರಿಕೋದ್ಯಮದ ಸೂಕ್ಷ್ಮತೆಯನ್ನು ಅರಿತಿದ್ದ ಇವರು, ಸರಳ ವ್ಯಕ್ತಿತ್ವವನ್ನು ಹೊಂದಿದ್ದರು. ಇದಲ್ಲದೆ, ಸೂರ್ಯೋದಯ ಪತ್ರಿಕೆಯ ಸಂಪಾದಕರಾಗಿಯೂ ಸೇವೆ ಸಲ್ಲಿಸಿದ್ದರು. ಅವರು ಹುಟ್ಟೂರು ಕೋಲಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

VISTARANEWS.COM


on

Veteran journalist Arjun Deva passes away
Koo

ಬೆಂಗಳೂರು: ಹಿರಿಯ ಪತ್ರಕರ್ತ ಅರ್ಜುನ್ ದೇವ (Arjun Deva) ಅವರು ಬುಧವಾರ (ಏಪ್ರಿಲ್​ 24) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕರ್ನಾಟಕ ಮಾಧ್ಯಮ ಅಕಾಡೆಮಿ (ಹಿಂದಿನ ಪತ್ರಕರ್ತರ ಅಕಾಡೆಮಿ) ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ಅರ್ಜುನ್​ ದೇವ ಅವರಿಗೆ 92 ವರ್ಷವಾಗಿತ್ತು. ಅನಾರೋಗ್ಯ ಹಿನ್ನೆಲಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ. ಅವರಿಗೆ ಇಬ್ಬರು ಮಕ್ಕಳು ಇದ್ದಾರೆ.

ಅರ್ಜುನ್​ ದೇವ ಅವರು ತಾಯಿನಾಡು ಪತ್ರಿಕೆ, ಸಂಯುಕ್ತ ಕರ್ನಾಟಕ ಹಾಗೂ ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಮುಖ ಹುದ್ದೆಗಳನ್ನು ನಿರ್ವಹಣೆ ಮಾಡಿದ್ದಾರೆ. ಪತ್ರಿಕೋದ್ಯಮದ ಸೂಕ್ಷ್ಮತೆಯನ್ನು ಅರಿತಿದ್ದ ಇವರು, ಸರಳ ವ್ಯಕ್ತಿತ್ವವನ್ನು ಹೊಂದಿದ್ದರು. ಇದಲ್ಲದೆ, ಸೂರ್ಯೋದಯ ಪತ್ರಿಕೆಯ ಸಂಪಾದಕರಾಗಿಯೂ ಸೇವೆ ಸಲ್ಲಿಸಿದ್ದರು.

ಅರ್ಜುನ್​ ದೇವ ಅವರು ಕೋಲಾರ ಜಿಲ್ಲೆಯ ಚೌಡದೇವನಹಳ್ಳಿಯಲ್ಲಿಯವರಾಗಿದ್ದಾರೆ. ಬುಧವಾರ ಸಂಜೆ ಚೌಡದೇವನಹಳ್ಳಿಯಲ್ಲಿ ಅಂತ್ಯಸಂಸ್ಕಾರವನ್ನು ನೆರವೇರಿಸಲಾಗುವುದು ಎಂದು ಕುಟುಂಬ ಮೂಲದವರು ತಿಳಿಸಿದ್ದಾರೆ.

ಹಿರಿಯ ಪತ್ರಕರ್ತರಾದ ಅರ್ಜುನ್ ದೇವ್‌ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಪ್ರಜಾವಾಣಿ, ಸಂಯುಕ್ತ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಯಲ್ಲಿ ಸಲ್ಲಿಸಿದ್ದ ಸೇವೆ ಅನನ್ಯವಾದದ್ದು. ಪತ್ರಕರ್ತರ ಸಂಘಟನೆಯಲ್ಲಿ ಅವರಿಗಿದ್ದ ಬದ್ಧತೆ, ಸಮಾಜಮುಖಿಯಾಗಿ ತೊಡಗಿಸಿಕೊಳ್ಳುವ ಪರಿ ನಿಜಕ್ಕೂ ಶ್ಲಾಘನೀಯ. ಸಂಘದ ಅಧ್ಯಕ್ಷರಾಗಿ ಕ್ರಿಯಾಶೀಲವಾಗಿ ಕೆಲಸ ಮಾಡಿದ್ದ ಅರ್ಜುನ್ ದೇವ ಅವರ ನಿಧನದಿಂದ ಸುದ್ದಿಮನೆಗೆ ತುಂಬಲಾರದ ನಷ್ಟವಾಗಿದೆ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಎಚ್‌ಡಿಕೆ ಸಂತಾಪ

ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ, ನಾಡಿನ ಹಲವಾರು ಪತ್ರಿಕೆಗಳ ಸಂಪಾದಕರಾಗಿ ಅನನ್ಯ ಸೇವೆ ಸಲ್ಲಿಸಿದ್ದ ಅರ್ಜುನ ದೇವ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಯಿತು. ಹಲವು ತಲೆಮಾರುಗಳ ಮಾಧ್ಯಮ ಬೆಳವಣಿಗೆಯ ಕೊಂಡಿಯಾಗಿದ್ದ ಅವರು ನಿಷ್ಠೆ, ಪ್ರಾಮಾಣಿಕತೆ, ದಕ್ಷತೆಗೆ ಹೆಸರಾಗಿದ್ದರು. ಅನೇಕ ಗ್ರಾಮೀಣ ಪ್ರತಿಭೆಗಳನ್ನು ಮಾಧ್ಯಮ ಲೋಕಕ್ಕೆ ಪರಿಚಯಿಸಿದ್ದರು. ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಅಭಿಮಾನಿಗಳು, ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: Lok Sabha Election 2024: ಬೆಂಗಳೂರು ಗ್ರಾಮಾಂತರಕ್ಕೆ ಡಬಲ್ ಸೆಕ್ಯೂರಿಟಿ; 28 ಲೋಕಸಭಾ ಕ್ಷೇತ್ರದ ಮತದಾರರು ಎಷ್ಟು?

ಕೆಯುಡಬ್ಲ್ಯೂಜೆ ಕಂಬನಿ

ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಅರ್ಜುನ್ ದೇವ್ (92) ಅವರು ನಿಧನಕ್ಕೆ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ ವ್ತಕ್ತಪಡಿಸಿದೆ. ತಾಯಿನಾಡು, ಸಂಯುಕ್ತ ಕರ್ನಾಟಕ, ಪ್ರಜಾವಾಣಿ, ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದ ಹಿರಿಯ ಚೇತನ ಅರ್ಜುನ್ ದೇವ್ ಅವರಾಗಿದ್ದರು ಎಂದು ಕೆಯುಡಬ್ಲ್ಯೂಜೆ ಶೋಕ ವ್ಯಕ್ತಪಡಿಸಿದೆ.

ಪತ್ರಕರ್ತರ ಸಂಘಟನೆಯಲ್ಲಿ ಅವರಿಗಿದ್ದ ಬದ್ಧತೆ, ಸಮಾಜಮುಖಿಯಾಗಿಯಾಗಿ ತೊಡಗಿಸಿಕೊಳ್ಳುವ ಪರಿ ನಿಜಕ್ಕೂ ಶ್ಲಾಘನೀಯ. ಸಂಘದ ಅಧ್ಯಕ್ಷರಾಗಿ ಕ್ರಿಯಾಶೀಲವಾಗಿ ಕೆಲಸ ಮಾಡಿದ್ದ ಅರ್ಜುನ್ ದೇವ್ ಅವರ ನಿಧನ ಸುದ್ದಿಮನೆಗೆ ತುಂಬಲಾರದ ನಷ್ಟ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸಂತಾಪ ಸೂಚಿಸಿದ್ದಾರೆ.

Continue Reading

ಬೆಂಗಳೂರು ಗ್ರಾಮಾಂತರ

Lok Sabha Election 2024: ಬೆಂಗಳೂರು ಗ್ರಾಮಾಂತರಕ್ಕೆ ಡಬಲ್ ಸೆಕ್ಯೂರಿಟಿ; 28 ಲೋಕಸಭಾ ಕ್ಷೇತ್ರದ ಮತದಾರರು ಎಷ್ಟು?

Lok Sabha Election 2024: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಅಕ್ರಮಗಳು ನಡೆಯಬಹುದು. ಈ ಕ್ಷೇತ್ರದಲ್ಲಿ ಪ್ರಭಾವಿ ಎದುರಾಳಿಗಳು ಆಡಳಿತಯಂತ್ರವನ್ನು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಹೆಚ್ಚಿನ ಭದ್ರತೆ ಹಾಗೂ ಅರೆ ಸೇನಾ ಪಡೆಯನ್ನು ನಿಯೋಜನೆ ಮಾಡುವಂತೆ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್.‌ ಮಂಜುನಾಥ್ ಅವರು ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ರಾಜ್ಯ ಚುನಾವಣಾ ಆಯೋಗವು ಈ ಮನವಿಯನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ರವಾನೆ ಮಾಡಿತ್ತು. ಅಲ್ಲಿಂದ ಜಿಲ್ಲಾಧಿಕಾರಿಗೆ ಸೂಚನೆಯನ್ನು ನೀಡಲಾಗಿತ್ತು. ಅದರನ್ವಯ ಈಗ ಕ್ರಮ ವಹಿಸಲಾಗಿದೆ. ಚುನಾವಣಾಧಿಕಾರಿಗಳ ಕೋರಿಕೆಯಂತೆ ಹೆಚ್ಚು ಭದ್ರತೆ ಮಾಡಲಾಗಿದೆ ಎಂದು ಮನೋಜ್‌ ಕುಮಾರ್ ಮೀನಾ ಹೇಳಿದ್ದಾರೆ.

VISTARANEWS.COM


on

Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇದೇ ಏಪ್ರಿಲ್‌ 26ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ. ಇನ್ನು ಅತಿ ಸೂಕ್ಷ್ಮ ಲೋಕಸಭಾ ಕ್ಷೇತ್ರವೆಂದು ಪರಿಗಣಿಸಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ (Bangalore Rural Lok Sabha constituency) ಡಬಲ್ ಸೆಕ್ಯೂರಿಟಿ ಸಿಸ್ಟಮ್ ಅನ್ನು ಅಳವಡಿಕೆ ಮಾಡಲಾಗಿದೆ. ಇಲ್ಲಿಗೆ ಒಟ್ಟು 7 ಪ್ಯಾರಾ ಮಿಲಿಟರಿ ತುಕಡಿಯನ್ನು (Para military contingent) ನಿಯೋಜನೆ ಮಾಡಲಾಗಿದೆ. ಅಲ್ಲದೆ, 28 ಲೋಕಸಭಾ ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ, ಮತದಾನ ಪ್ರಕ್ರಿಯೆಯ ನಿಯಮಗಳನ್ನು ಸಹ ಚುನಾವಣಾ ಆಯೋಗವು ಪ್ರಕಟಿಸಿದೆ.

ಈ ಬಗ್ಗೆ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಎಲ್ಲ ಮತಗಟ್ಟೆಯಲ್ಲಿ ಶೇಕಡಾ 100 ವೆಬ್ ಕಾಸ್ಟಿಂಗ್ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಅಕ್ರಮಗಳು ನಡೆಯಬಹುದು. ಈ ಕ್ಷೇತ್ರದಲ್ಲಿ ಪ್ರಭಾವಿ ಎದುರಾಳಿಗಳು ಆಡಳಿತಯಂತ್ರವನ್ನು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಹೆಚ್ಚಿನ ಭದ್ರತೆ ಹಾಗೂ ಅರೆ ಸೇನಾ ಪಡೆಯನ್ನು ನಿಯೋಜನೆ ಮಾಡುವಂತೆ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್.‌ ಮಂಜುನಾಥ್ ಅವರು ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ರಾಜ್ಯ ಚುನಾವಣಾ ಆಯೋಗವು ಈ ಮನವಿಯನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ರವಾನೆ ಮಾಡಿತ್ತು. ಅಲ್ಲಿಂದ ಜಿಲ್ಲಾಧಿಕಾರಿಗೆ ಸೂಚನೆಯನ್ನು ನೀಡಲಾಗಿತ್ತು. ಅದರನ್ವಯ ಈಗ ಕ್ರಮ ವಹಿಸಲಾಗಿದೆ. ಚುನಾವಣಾಧಿಕಾರಿಗಳ ಕೋರಿಕೆಯಂತೆ ಹೆಚ್ಚು ಭದ್ರತೆ ಮಾಡಲಾಗಿದೆ ಎಂದು ಮನೋಜ್‌ ಕುಮಾರ್ ಮೀನಾ ಹೇಳಿದರು.

ಸಿಎಂ, ಡಿಸಿಎಂ ಪ್ರತಿಭಟನೆ ವಿರುದ್ಧ ದೂರು ಬಂದಿದೆ

ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಇದುವರೆಗೆ 23 ಕೇಸ್ ದಾಖಲಾಗಿದೆ. ಬಿಜೆಪಿ 12, ಕಾಂಗ್ರೆಸ್ 9, ಹಾಗೂ ಜೆಡಿಎಸ್ ಮೇಲೆ 2 ಪ್ರಕರಣಗಳು ದಾಖಲಾಗಿವೆ. ಇನ್ನಿತರ ನಾಯಕರ ಮೇಲೆ 5 ಕೇಸ್‌ಗಳು ದಾಖಲಾಗಿವೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ನಡೆದ ಪ್ರತಿಭಟನೆ ವಿಚಾರವಾಗಿ ದೂರು ಸಲ್ಲಿಕೆಯಾಗಿದೆ. ಈ ಕುರಿತು ನಿಯಮ ಉಲ್ಲಂಘನೆ ಆಗಿರುವ ಬಗ್ಗೆ ಪರಿಶೀಲನೆ ಮಾಡುತ್ತಿದ್ದೇವೆ. ಮೇಲ್ನೋಟಕ್ಕೆ ಸಾಬೀತಾದರೆ ಮುಂದಿನ ಕ್ರಮವನ್ನು ಜರುಗಿಸಲಾಗುವುದು ಎಂದು ಮನೋಜ್‌ ಕುಮಾರ್ ಮೀನಾ ಹೇಳಿದರು.

28 ಲೋಕಸಭಾ ಕ್ಷೇತ್ರಗಳ ಮತದಾರರ ವಿವರ; ಬೇಕಿರುವ ದಾಖಲೆ, ನಿಯಮ ಏನು? ಈ ಪಿಡಿಎಫ್‌ ಡೌನ್ಲೋಡ್‌ ಆಯ್ಕೆ ಮೇಲೆ ಕ್ಲಿಕ್ ಮಾಡಿ

ಆಂಬ್ಯಲೆನ್ಸ್‌ ನಿಯೋಜನೆ

ಈಗ ಬೇಸಿಗೆ ಕಾಲವಾಗಿದ್ದರಿಂದ ಬಿಸಿಲಿನ ಪ್ರಮಾನ ಹೆಚ್ಚಿದೆ. ಹೀಗಾಗಿ ಮತದಾನದ ವೇಳೆ ಬಿಸಿಲಿನ ಕಾರಣಕ್ಕಾಗಿ ಏನಾದರೂ ಸಮಸ್ಯೆಯಾಗಬಹುದು ಎಂಬ ಕಾರಣಕ್ಕಾಗಿ ಆಂಬ್ಯುಲೆನ್ಸ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಎಲ್ಲ ರೀತಿಯಲ್ಲಿಯೂ ಸಜ್ಜಾಗಲಾಗಿದೆ. ಜತೆಗೆ ತುರ್ತು ಚಿಕಿತ್ಸೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮನೋಜ್‌ ಕುಮಾರ್ ಮೀನಾ ಹೇಳಿದರು.

ಇದನ್ನೂ ಓದಿ: Modi in Karnataka: ಏಪ್ರಿಲ್‌ 28 – 29ಕ್ಕೆ ಕರ್ನಾಟಕಕ್ಕೆ ಮೋದಿ; 2ನೇ ಹಂತಕ್ಕೆ ಬಿಜೆಪಿ ಪ್ಲ್ಯಾನ್‌ ರೆಡಿ!

5.47 ಕೋಟಿ ಮತದಾರರು

ಕರ್ನಾಟಕದ 28 ಲೋಕಸಭಾ ಕ್ಷೇತ್ರದಲ್ಲಿ ಒಟ್ಟಾರೆ ಮತದಾರರ ಸಂಖ್ಯೆಯನ್ನು ಸಹ ಚುನಾವಣಾ ಆಯೋಗವು ಬಿಡುಗಡೆ ಮಾಡಿದೆ. ಇದರ ಅನುಸಾರ ಒಟ್ಟು 5,47,36,835 ಮತದಾರರು ಈ ಬಾರಿ ಸಂಸತ್‌ ಚುನಾವಣೆಯ ಭವಿಷ್ಯವನ್ನು ಬರೆಯಲಿದ್ದಾರೆ. ಇದಲ್ಲದೆ, ಮತದಾರರು ಯಾವ ದಾಖಲೆಗಳನ್ನು ತರಬೇಕು? ಮತದಾನ ಪ್ರಕ್ರಿಯೆಯಲ್ಲಿನ ನಿಯಮಗಳು ಏನು? ಕೊನೆಯ 48 ಗಂಟೆಯ ಶೂನ್ಯ ಅವಧಿಗೆ ಸಂಬಂಧಪಟ್ಟಂತೆ ಇರುವ ನಿಯಮಗಳೇನು? ಎಂಬಿತ್ಯಾದಿ ಅಂಶಗಳನ್ನು ಚುನಾವಣಾ ಆಯೋಗ ಪ್ರಕಟಿಸಿದೆ.

Continue Reading

ಯಾದಗಿರಿ

Yadgiri News: ಸಾಮಾಜಿಕ ಕಾರ್ಯಗಳಿಂದ ಆತ್ಮತೃಪ್ತಿ: ಶಾಂತವೀರ ಸ್ವಾಮೀಜಿ

Yadgiri News: ಯಾದಗಿರಿ ಜಿಲ್ಲೆ ಶಹಾಪೂರ ತಾಲೂಕಿನ ಇಬ್ರಾಹಿಂಪುರ ಗ್ರಾಮದ ಸದ್ಗುರು ಸಾಯಿ ಬಾಬಾ ದೇವಸ್ಥಾನದ 2ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ ಸಾಮೂಹಿಕ ವಿವಾಹ ಕಾರ್ಯಕ್ರಮ ಜರುಗಿತು.

VISTARANEWS.COM


on

shree Saibaba jatra mahotsav and Mass marriage programme
Koo

ಯಾದಗಿರಿ: ಸಾಮಾಜಿಕ ಕಾರ್ಯಗಳಿಂದ ಸಿಗುವಷ್ಟು ಆತ್ಮತೃಪ್ತಿ ಬೇರೆ ಯಾವುದರಿಂದ ಸಿಗುವುದಿಲ್ಲ ಎಂದು ಗುರುಮಿಠಕಲ್ ಖಾಸಾ ಮಠದ ಪೀಠಾಧಿಪತಿ ಶ್ರೀ ಶಾಂತವೀರ ಮುರುಘರಾಜೇಂದ್ರ ಸ್ವಾಮೀಜಿ (Yadgiri News) ತಿಳಿಸಿದರು.

ಶಹಾಪುರ ತಾಲೂಕಿನ ಇಬ್ರಾಹಿಂಪುರ ಗ್ರಾಮದ ಸದ್ಗುರು ಸಾಯಿ ಬಾಬಾ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದ 2ನೇ ವರ್ಷದ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಉದ್ಘಾಟಿಸಿ, ಶ್ರೀಗಳು ಆಶೀರ್ವಚನ ನೀಡಿದರು.

ಭಗವಂತ ನಮಗೆ ನೀಡಿರುವ ದೈನಂದಿನ ಕಾಯಕದ ಜತೆಗೆ ಸಂಪಾದಿಸಿದ ಸ್ವಲ್ಪ ಹಣವನ್ನು ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸಿದರೆ ಬದುಕಿನ ಮೌಲ್ಯ ವೃದ್ಧಿಯಾಗುತ್ತದೆ, ಅಲ್ಲದೇ ಅಂತಹ ವ್ಯಕ್ತಿಗಳ ಸಾಧನೆ, ಹೆಸರು ಚರಿತ್ರೆಯಲ್ಲಿ ಉಳಿಯುತ್ತದೆ ಎಂದರು.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆ ಇಂದು ತುಸು ಏರಿಕೆ; 22K, 24K ಬಂಗಾರದ ಬೆಲೆಗಳನ್ನು ಇಲ್ಲಿ ಖಚಿತಪಡಿಸಿಕೊಳ್ಳಿ

ಈ ದಿಸೆಯಲ್ಲಿ ಯುವಕರಾಗಿರುವ ಮಹಾರಾಜ ದಿಗ್ಗಿಯವರು ಇಲ್ಲಿ ಭವ್ಯ ಮಂದಿರ ನಿರ್ಮಾಣ ಮಾಡುವ ಮೂಲಕ ಸಾಮರಸ್ಯ ವಾತಾವರಣ ಸೃಷ್ಟಿ ಮಾಡಿ, ಧಾರ್ಮಿಕ ಕಾರ್ಯಕ್ರಮಗಳ ಜತೆಗೆ ಸಾಮೂಹಿಕ ವಿವಾಹ ಹಮ್ಮಿಕೊಂಡಿರುವುದರಿಂದ ದುಂದು ವೆಚ್ಚಕ್ಕೆ ಕಡಿವಾಣ ಹಾಕಿದಂತಾಗಿದೆ, ಎಲ್ಲಾ ವರ್ಗದ ಬಡ ಕುಟುಂಬಗಳಿಗೆ ಸಹಕಾರಿಯಾಗಿದೆ, ಇದು ಇತರರಿಗೆ ಮಾದರಿಯಾಗಲಿ ಎಂದು ಹಾರೈಸಿದರು.

ಸರೂರ-ಅಗತೀರ್ಥ ಗುರು ಪೀಠದ ಶಾಂತಮಯ ಸ್ವಾಮೀಜಿ, ಚಿಗರಳ್ಳಿಯ ಕಬೀರಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ಮಾಲಹಳ್ಳಿಯ ಕೆಂಚರಾಯ ಪೂಜಾರಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಾಯಿ ಮಂದಿರದ ಅಧ್ಯಕ್ಷ ಮಹಾರಾಜ್ ದಿಗ್ಗಿ ಮಾತನಾಡಿ, ಎಲ್ಲರ ಸಹಕಾರದಿಂದ ಇಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜತೆಗೆ ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳುವ ಇನ್ನೂ ಹಲವಾರು ಸಂಕಲ್ಪಗಳಿವೆ, ಆ ಭಗವಂತ ಶಕ್ತಿ ನೀಡಿದರೆ ಖಂಡಿತ ಈ ಭಾಗಕ್ಕೆ ಸದಾ ಒಳಿತಾಗುವ ಕಾರ್ಯ ಮಾಡುತ್ತೇನೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ 14 ಜೋಡಿ ನವ ವಧು-ವರರಿಗೆ ಎಲ್ಲಾ ಶ್ರೀಗಳು, ಗಣ್ಯರು ಶುಭ ಹಾರೈಸಿದರು.

ಇದನ್ನೂ ಓದಿ: Sachin Birthday: ಸಚಿನ್ ತೆಂಡೂಲ್ಕರ್ ಬಳಿ ಇರುವ ಅತ್ಯಂತ ದುಬಾರಿ ಆಸ್ತಿಗಳಿವು!

ದೋರನಹಳ್ಳಿಯ ಚಿಕ್ಕಮಠದ ಶಿವಲಿಂಗರಾಜೇಂದ್ರ ಸ್ವಾಮೀಜಿ, ಸೂಗೂರ ಎನ್. ಭೋಜಲಿಂಗೇಶ್ವರ ಸಿದ್ದ ಸಂಸ್ಥಾನ ಮಠದ ಹಿರಗಪ್ಪ ತಾತನವರು, ಮಹಲರೋಜಾದ ಮಲ್ಲಿಕಾರ್ಜುನ ಮುತ್ಯಾ, ಹೋತಪೇಟ್‌ದ ಕೈಲಾಸ ಮಠದ ಶಿವಲಿಂಗೇಶ್ವರ ಸ್ವಾಮೀಜಿ, ಗೋಗಿಯ ಸೈಯದ್ ಷಾ ಚಾಂದ್ ಹುಸೇನಿ, ಶಹಾಬಾದದ ಅಪ್ಪಣ್ಣ ಶ್ರೀಗಳು, ಗಬ್ಬೂರವಾಡಿಯ ಬಳಿರಾಮ ಮಹಾರಾಜರು, ದೇವಸ್ಥಾನದ ಕಾರ್ಯದರ್ಶಿ ಸಿದ್ದಪ್ಪಾಜಿ, ಸಿದ್ದಣ್ಣ ದಿಗ್ಗಿ, ಭೀಮರಡ್ಡಿ ರಾಂಪೂರಹಳ್ಳಿ ಹತ್ತಿಕುಣಿ, ಗೌಡಪ್ಪಗೌಡ ಆಲ್ದಾಳ, ಭೀಮಾಶಂಕರ ಇಬ್ರಾಹಿಂಪುರ, ಶಂಕ್ರಪ್ಪ ಶಾಣೇನೋರ ದೋರನಹಳ್ಳಿ, ಶ್ರೀಶೈಲ ಹೊಸಮನಿ, ಬಸವರಾಜ ರಾಠೋಡ, ಮಲ್ಲಿಕಾರ್ಜುನ ಮೌನೇಶ ಹಳಿಸಗರ, ಡಾ. ರವೀಂದ್ರನಾಥ ಹೊಸಮನಿ ಸೇರಿದಂತೆ ಹಲವರು ಮುಖಂಡರು ಉಪಸ್ಥಿತರಿದ್ದರು.

Continue Reading
Advertisement
Marcus Stoinis
ಕ್ರಿಕೆಟ್6 mins ago

IPL 2024: 13 ವರ್ಷದ ಐಪಿಎಲ್​ ದಾಖಲೆ ಮುರಿದ ಮಾರ್ಕಸ್​ ಸ್ಟೋಯಿನಿಸ್

Areca Price
ಪರಿಸರ8 mins ago

Areca Price: ಅಡಿಕೆ ದರ ಗಗನಮುಖಿ; ಚುನಾವಣೆ ಬಳಿಕ ಮತ್ತಷ್ಟು ಏರಿಕೆ?

Veteran journalist Arjun Deva passes away
ಶ್ರದ್ಧಾಂಜಲಿ10 mins ago

Arjun Deva: ಹಿರಿಯ ಪತ್ರಕರ್ತ ಅರ್ಜುನ್ ದೇವ ನಿಧನ; ಗಣ್ಯರ ಕಂಬನಿ

pm narendra modi jp morgan jamie dimon
ಪ್ರಮುಖ ಸುದ್ದಿ25 mins ago

PM Narendra Modi: “ಅಮೆರಿಕಕ್ಕೆ ಮೋದಿಯಂಥ ನಾಯಕ ಬೇಕು” ಜೆಪಿ ಮೋರ್ಗನ್‌ ಸಂಸ್ಥೆ ಸಿಇಒ ಜೇಮಿ ಶ್ಲಾಘನೆ

IPL 2024 Points Table
ಕ್ರೀಡೆ39 mins ago

IPL 2024 Points Table: ಚೆನ್ನೈಗೆ ಹೀನಾಯವಾಗಿ ಸೋಲುಣಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಲಕ್ನೋ

Noida Scrap Mafia
ವಿದೇಶ55 mins ago

Noida Scrap Mafia: ಥೈಲ್ಯಾಂಡ್‌ನಲ್ಲಿ ಪೊಲೀಸ್‌ ಬಲೆಗೆ ಬಿದ್ದ ಗ್ಯಾಂಗ್‌ಸ್ಟರ್‌ ರವಿ ಕಾನಾ

ಬೆಂಗಳೂರು ಗ್ರಾಮಾಂತರ58 mins ago

Lok Sabha Election 2024: ಬೆಂಗಳೂರು ಗ್ರಾಮಾಂತರಕ್ಕೆ ಡಬಲ್ ಸೆಕ್ಯೂರಿಟಿ; 28 ಲೋಕಸಭಾ ಕ್ಷೇತ್ರದ ಮತದಾರರು ಎಷ್ಟು?

shree Saibaba jatra mahotsav and Mass marriage programme
ಯಾದಗಿರಿ1 hour ago

Yadgiri News: ಸಾಮಾಜಿಕ ಕಾರ್ಯಗಳಿಂದ ಆತ್ಮತೃಪ್ತಿ: ಶಾಂತವೀರ ಸ್ವಾಮೀಜಿ

Vijayanagara News Sri Kolashanteswara Swamy Rathotsava in arasikere
ವಿಜಯನಗರ1 hour ago

Vijayanagara News: ವಿಜೃಂಭಣೆಯಿಂದ ಜರುಗಿದ ಶ್ರೀ ಕೋಲಶಾಂತೇಶ್ವರ ಸ್ವಾಮಿ ರಥೋತ್ಸವ

Harshika Poonacha bhuvan ponnanna met pralhad joshi
ಸಿನಿಮಾ1 hour ago

Harshika Poonacha: ಹಲ್ಲೆ ಪ್ರಕರಣ; ನ್ಯಾಯ ಕೋರಿ ಪ್ರಲ್ಹಾದ ಜೋಶಿ ಭೇಟಿಯಾದ ಹರ್ಷಿಕಾ ಪೂಣಚ್ಚ ದಂಪತಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ10 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು2 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌