Accident | ಸರಕಾರಿ ಬಸ್‌- ಕಾರು ಮುಖಾಮುಖಿ ಡಿಕ್ಕಿ: ಕಾರು ಚಾಲಕ ಸ್ಥಳದಲ್ಲೇ ಸಾವು - Vistara News

ಕರ್ನಾಟಕ

Accident | ಸರಕಾರಿ ಬಸ್‌- ಕಾರು ಮುಖಾಮುಖಿ ಡಿಕ್ಕಿ: ಕಾರು ಚಾಲಕ ಸ್ಥಳದಲ್ಲೇ ಸಾವು

ಸರಕಾರಿ ಬಸ್‌ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

VISTARANEWS.COM


on

Accident vijayanagara
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಜಯನಗರ: ಕೆಎಸ್ಸಾರ್ಟಿಸಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಹೊಸಪೇಟೆ ತಾಲೂಕಿನ ಕೊಂಡನಾಯಕನ ಹಳ್ಳಿಯಲ್ಲಿ ನಡೆದಿದೆ.

ಹರಪನಹಳ್ಳಿಯಿಂದ ಹೈದರಾಬಾದ್‌ಗೆ ಹೊರಟಿದ್ದ ಸರಕಾರಿ ಬಸ್‌ ಮತ್ತು ಕಮಲಾಪುರದ ಕಡೆಯಿಂದ ಹೊಸಪೇಟೆಗೆ ಹೊರಟಿದ್ದ ಕಾರು ಕೊಂಡ ನಾಯಕನ ಹಳ್ಳಿಯಲ್ಲಿ ಪರಸ್ಪರ ಡಿಕ್ಕಿ ಹೊಡೆದುಕೊಂಡಿವೆ. ಡಿಕ್ಕಿಯ ರಭಸಕ್ಕೆ ಕಾರು ಗುರುತೇ ಹಿಡಿಯಲಾಗದಂತೆ ನಜ್ಜುಗುಜ್ಜಾಗಿದೆ. ಕಾರು ಚಾಲಕ ಮದೀನ್‌ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಹೊಸಪೇಟೆಯ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ | Accident | ಬೈಕ್‌ಗೆ ಗುದ್ದಿದ ಟಿಪ್ಪರ್‌: ಒಂದೇ ಕುಟುಂಬದ ಇಬ್ಬರು ಸ್ಥಳದಲ್ಲೇ ಸಾವು, ಒಬ್ಬ ಗಂಭೀರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Self Harming: ಮೇಲಧಿಕಾರಿಗಳ ಕಿರುಕುಳ, ಹಗರಣದ ಕರಿನೆರಳು: ವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಂಟೆಂಡೆಂಟ್ ಆತ್ಮಹತ್ಯೆ

Self Harming: ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್‌ನಲ್ಲಿರುವ ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂಪಾಯಿ ಮೊತ್ತದ ಹಗರಣಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ.

VISTARANEWS.COM


on

self harming chandrashekar
Koo

ಶಿವಮೊಗ್ಗ: ಮೇಲಧಿಕಾರಿಗಳ ಕಿರುಕುಳ (harassment) ಸಹಿಸಲಾಗುತ್ತಿಲ್ಲ ಎಂದು ಆರೋಪಿಸಿ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ (karnataka state valmiki development corporation) ಸೂಪರಿಂಟೆಂಡೆಂಟ್ ಚಂದ್ರಶೇಖರ್ (52) ಎಂಬವರು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಶಿವಮೊಗ್ಗದ (Shivamogga news) ತಮ್ಮ ಮನೆಯಲ್ಲಿ ಅವರು ನೇಣು ಹಾಕಿಕೊಂಡಿದ್ದಾರೆ.

ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್‌ನಲ್ಲಿರುವ ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂಪಾಯಿ ಮೊತ್ತದ ಹಗರಣಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ.

ಚಂದ್ರಶೇಖರ್‌ ಬರೆದಿರುವ ಡೆತ್ ನೋಟ್ ಒಂದು ಸಿಕ್ಕಿದ್ದು, ಅದರಲ್ಲಿ ತಮ್ಮ ಮೇಲಧಿಕಾರಿಗಳನ್ನು ತಮ್ಮ ಸಾವಿಗಾಗಿ ದೂರಿದ್ದಾರೆ. 6 ಪುಟಗಳ ಡೆತ್ ನೋಟ್ ಬರೆದಿದ್ದು, ಅದರಲ್ಲಿ ಪದ್ಮನಾಭ, ಪರಶುರಾಮ್, ಶುಚಿಸ್ವತ ಎಂಬ ಅಧಿಕಾರಿಗಳೇ ನನ್ನ ಸಾವಿಗೆ ಕಾರಣ ಎಂದು ಬರೆದಿಟ್ಟಿದ್ದಾರೆ. ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡೀಪ್‌ಫೇಕ್‌ ಬಳಸಿ ವಿದ್ಯಾರ್ಥಿನಿಯರ ನಗ್ನಚಿತ್ರ ರೂಪಿಸಿ ಕಿರುಕುಳ

ಬೆಂಗಳೂರು: ಸೆಲೆಬ್ರಿಟಿಗಳಿಗೆ ಕಾಡುತ್ತಿದ್ದ ಡೀಪ್‌ಫೇಕ್‌ ಕಾಟವು ಇದೀಗ ಶಾಲಾ ವಿದ್ಯಾರ್ಥಿನಿಯರಿಗೆ ಶುರುವಾಗಿದೆ. ಪ್ರತಿಷ್ಠಿತ ಶಾಲೆಯ ವಿದ್ಯಾರ್ಥಿನಿಯರ ಮಾರ್ಫಿಂಗ್ ಫೋಟೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಪೋಷಕರಲ್ಲಿ ಆತಂಕ ಹೆಚ್ಚಿದೆ. ಡೀಪ್‌ಫೇಕ್‌ ತಂತ್ರಜ್ಞಾನದ (Deep fake Technology) ದುರ್ಬಳಕೆ ಎಂದರೆ ಇದುವರೆಗೆ ರಶ್ಮಿಕಾ ಮಂದಣ್ಣ, ಕತ್ರಿನಾ ಕೈಫ್‌, ಸಚಿನ್‌ ತೆಂಡೂಲ್ಕರ್‌ ಅವರಂತಹ ಸೆಲೆಬ್ರಿಟಿಗಳು, ನಟಿಯರ ತಿರುಚಿದ ವಿಡಿಯೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದು ಎಂದಾಗಿತ್ತು. ಆದರೆ, ಡೀಪ್‌ಫೇಕ್‌ ತಂತ್ರಜ್ಞಾನದ ಕಾವು (Deep fake Scam) ಶಾಲಾ ವಿದ್ಯಾರ್ಥಿಯರಿಗೂ ಎದುರಾಗಿದೆ.

ಖಾಸಗಿ ಶಾಲೆಯೊಂದರ 9ನೇ ತರಗತಿ ವಿದ್ಯಾರ್ಥಿನಿಯ AI ಅಲ್ಲಿ ರಚನೆಯಾದ ನಗ್ನ ಫೋಟೋ ವೈರಲ್ ಆಗಿದೆ. ಮೇ 24 ರಂದು ಬೆಳಕಿಗೆ ಬಂದ ಪ್ರಕರಣವು ಈಗ ಚರ್ಚೆಗೆ ಗ್ರಾಸವಾಗಿದೆ. ಅಂದಹಾಗೆ 50ಕ್ಕೂ ಹೆಚ್ಚು ಶಾಲೆಯ ವಿದ್ಯಾರ್ಥಿಗಳು ಇದ್ದ ಇನ್ಸ್ಟ್ರಾಗ್ರಾಂನಲ್ಲಿ ಗ್ರೂಪ್‌ವೊಂದು ರಚನೆ ಮಾಡಿದ್ದರು. ಆ ಗ್ರೂಪ್‌ನಲ್ಲಿ ಅನಾಮಧೇಯ ವ್ಯಕ್ತಿಯಿಂದ ವಿದ್ಯಾರ್ಥಿನಿಯರ ಮಾರ್ಫಿಂಗ್ ಫೋಟೋಸ್ ವೈರಲ್ ಆಗಿದೆ. ಆ ವ್ಯಕ್ತಿ ಯಾರು ಎಂಬುದರ ಅರಿವು ಕೂಡ ವಿದ್ಯಾರ್ಥಿನಿಯರಿಗೆ ಇಲ್ಲ.

ಶಾಲಾ ಗ್ರೂಪ್‌ನಲ್ಲಿ ಇದ್ದಾನೆಂದರೆ ಅವನು ಖಂಡಿತ ವಿದ್ಯಾರ್ಥಿ ಆಗಿರಬಹುದೆಂದು ಶಂಕಿಸಲಾಗಿದೆ. ಈ ವಿಚಾರ ತಿಳಿದ ಕೂಡಲೇ ವಿದ್ಯಾರ್ಥಿನಿಯರು ಕುಗ್ಗಿ ಹೋಗಿದ್ದಾರೆ. ಈಗಾಗಲೇ ವಿದ್ಯಾರ್ಥಿನಿಯರ ಪೋಷಕರು ಸೈಬರ್ ಸೆಲ್‌ಗೆ ದೂರು ನೀಡಿದ್ದಾರೆ. ಡೀಪ್‌ಫೇಕ್ ಕಾಟಕ್ಕೆ ವಿದ್ಯಾರ್ಥಿನಿಯರು ಮಾನಸಿಕ ಹಿಂಸೆಗೆ ಒಳಗಾಗಿದ್ದಾರೆ.

ಇದನ್ನೂ ಓದಿ: Kichcha Sudeep: ವಾಲ್ಮೀಕಿ ಜಾತ್ರೆಗೆ ಈ ಬಾರಿ ನಟ ಕಿಚ್ಚ ಸುದೀಪ್‌ಗೆ ಇಲ್ಲ ಆಹ್ವಾನ

Continue Reading

ರಾಜಕೀಯ

MLC Election: ಹೈಕಮಾಂಡ್ ಅಂಗಳದಲ್ಲಿ ಪರಿಷತ್ ಕೈ ಅಭ್ಯರ್ಥಿಗಳ ಆಯ್ಕೆ ಕಸರತ್ತು; ನಾಳೆ ದೆಹಲಿಗೆ ಸಿಎಂ, ಡಿಸಿಎಂ

MLC Election: ಕಾಂಗ್ರೆಸ್‌ಗೆ ಸಿಗುವ 7 ಸ್ಥಾನಗಳಿಗೆ 64ಕ್ಕೂ ಅಧಿಕ ಆಕಾಂಕ್ಷಿಗಳಿಂದ ಲಾಬಿ ನಡೆಯುತ್ತಿದೆ. ಹೀಗಾಗಿ ಅಭ್ಯರ್ಥಿಗಳ ಆಯ್ಕೆ ವಿಚಾರ ಸಿಎಂ, ಡಿಸಿಎಂಗೆ ತಲೆ ನೋವಾಗಿ ಪರಿಣಮಿಸಿದೆ.

VISTARANEWS.COM


on

MLC Election
Koo

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ (MLC Election) ಹಿನ್ನೆಲೆ ಹೈಕಮಾಂಡ್ ಅಂಗಳದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಆಯ್ಕೆ ಕಸರತ್ತು ನಡೆಯುತ್ತಿದೆ. ಇದಕ್ಕಾಗಿ ಮೇ 28ರಂದು ಬೆಳಗ್ಗೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.

ಮೇ 28ರಂದು ಬೆಳಗ್ಗೆ 11ಕ್ಕೆ ವಿಶೇಷ ವಿಮಾನದ ಮೂಲಕ ದೆಹಲಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಪಯಣ ಬೆಳೆಸಲಿದ್ದು, ಮಧ್ಯಾಹ್ನದ ಬಳಿಕ ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದು, ಇದಕ್ಕಾಗಿ ನಾಳೆ ದೆಹಲಿಯಲ್ಲೇ ಸಿಎಂ, ಡಿಸಿಎಂ ವಾಸ್ತವ್ಯ ಹೂಡಲಿದ್ದಾರೆ.

ಕಾಂಗ್ರೆಸ್‌ಗೆ ಸಿಗುವ 7 ಸ್ಥಾನಗಳಿಗೆ 64ಕ್ಕೂ ಅಧಿಕ ಆಕಾಂಕ್ಷಿಗಳಿಂದ ಲಾಬಿ ನಡೆಯುತ್ತಿದೆ. ಹೀಗಾಗಿ ಅಭ್ಯರ್ಥಿಗಳ ಆಯ್ಕೆ ವಿಚಾರ ಸಿಎಂ, ಡಿಸಿಎಂಗೆ ತಲೆ ನೋವಾಗಿ ಪರಿಣಮಿಸಿದೆ. ಸಮುದಾಯವಾರು, ಪ್ರಾದೇಶಿಕವಾರು ಪರಿಷತ್ ಸ್ಥಾನ ಹಂಚಿಕೆ ಮಾಡಲು ಹಿರಿಯ ಸಚಿವರಿಂದ ಒತ್ತಾಯ ಕೇಳಿಬಂದಿದೆ. ಒಬಿಸಿ 2, ದಲಿತ 2, ಲಿಂಗಾಯತ 1, ಒಕ್ಕಲಿಗ 1, ಕ್ರಿಶ್ಚಿಯನ್ ಸಮುದಾಯಕ್ಕೆ 1 ಸ್ಥಾನ ನೀಡುವ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಆದರೆ, ಇನ್ನೂ ಯಾವುದೇ ಸ್ಥಾನಗಳು ಅಂತಿಮವಾಗಿಲ್ಲ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜತೆ ಚರ್ಚಿಸಲು ಸಿಎಂ, ಡಿಸಿಎಂ ತೆರಳಲಿದ್ದಾರೆ.

ಇದನ್ನೂ ಓದಿ | Robert Vadra: “ಮಣಿಶಂಕರ್‌ ಅಯ್ಯರ್‌ ಬಾಯಿ ಬಡುಕ…ಕೇಜ್ರಿವಾಲ್‌ ಅವಕಾಶವಾದಿ”-ರಾಬರ್ಟ್‌ ವಾದ್ರಾ ಅಚ್ಚರಿಯ ಹೇಳಿಕೆ

ವಿಧಾನ ಪರಿಷತ್‌ ಚುನಾವಣೆ: ಖರ್ಗೆ, ಸಿದ್ದು, ಡಿಕೆಶಿ ಆಪ್ತರಿಗೆ ಸ್ಥಾನ ಕೊಡಿಸಲು 2+2+2+1=7 ಫಾರ್ಮುಲಾ; ಏನಿದು?

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ 11 ಸದಸ್ಯರ ಆಯ್ಕೆಗಾಗಿ ನಡೆಯುವ ಚುನಾವಣೆಯು (Karnataka Legislative Council Election) ಕರ್ನಾಟಕ ಕಾಂಗ್ರೆಸ್‌ನಲ್ಲಿ ಬಣಗಳ ಸೃಷ್ಟಿಗೆ ಕಾರಣವಾಗಿದೆ. ಕಾಂಗ್ರೆಸ್‌ ಏಳು ಸ್ಥಾನಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಇದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (D K Shivakumar) ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಸೇರಿ ಹಲವು ನಾಯಕರ ಆಪ್ತರು ಲಾಬಿ ನಡೆಸುತ್ತಿದ್ದು, ಇದಕ್ಕಾಗಿ ಕಾಂಗ್ರೆಸ್‌ ನಾಯಕರು ಭಿನ್ನಮತವೇ ಬೇಡ ಎಂದು 2+2+2+1=7 ಫಾರ್ಮುಲಾ ಕಂಡು ಹಿಡಿದಿದ್ದಾರೆ ಎಂದು ತಿಳಿದಬಂದಿದೆ.

ಯಾರಿಗೆ ಸ್ಥಾನಗಳನ್ನು ನೀಡಬೇಕು ಎಂಬುದರ ಬಗ್ಗೆ ಗೊಂದಲ ಬಗೆಹರಿಸಿಕೊಳ್ಳುವ ದಿಸೆಯಲ್ಲಿ ಫಾರ್ಮುಲಾ ಕಂಡು ಹಿಡಿಯಲಾಗಿದೆ. ಎರಡು ಸ್ಥಾನ ಸಿದ್ದರಾಮಯ್ಯ ಬಣಕ್ಕೆ, ಎರಡು ಸ್ಥಾನ ಡಿಕೆಶಿ ಬಣಕ್ಕೆ, ಇನ್ನೆರಡು ಸ್ಥಾನ ಮಲ್ಲಿಕಾರ್ಜುನ ಖರ್ಗೆ ಹಾಗೂ ಒಂದು ಸ್ಥಾನವನ್ನು ಕಾಂಗ್ರೆಸ್‌ ಹೈಕಮಾಂಡ್ ತೀರ್ಮಾನಿಸುತ್ತದೆ. ಇನ್ನು ಏಳು ಸ್ಥಾನಗಳಿಗಾಗಿ 50 ಆಕಾಂಕ್ಷಿಗಳು ಸಾಲುಗಟ್ಟಿ ನಿಂತಿದ್ದು, ಯಾರು ಯಾವ ಬಣದಲ್ಲಿದ್ದಾರೆ ಎಂಬುದರ ಮೇಲೆ ಮಣೆ ಹಾಕಲಾಗುತ್ತದೆ ಎಂದು ತಿಳಿದುಬಂದಿದೆ.

ಯಾವ ಸಮುದಾಯಕ್ಕೆ ಯಾವ ನಾಯಕ ಮಣೆ ಹಾಕುತ್ತಿದ್ದಾರೆ? ಯಾರ ಯಾರ ಪರ, ಯಾರು ಲಾಬಿ ಮಾಡುತ್ತಿದ್ದಾರೆ ಎಂಬುದರ ಮಾಹಿತಿ ಹೀಗಿದೆ.

ಸಿದ್ದರಾಮಯ್ಯ
ಯತೀಂದ್ರ ಸಿದ್ದರಾಮಯ್ಯ( ಕುರುಬ), ಕೆ.ಗೋವಿಂದ ರಾಜು ( ಒಕ್ಕಲಿಗ), ಎಚ್.ಎಂ. ರೇವಣ್ಣ ( ಕುರುಬ), ವಿ.ಆರ್. ಸುದರ್ಶನ್ (ಗಾಣಿಗ).

ಡಿ.ಕೆ ಶಿವಕುಮಾರ್
ಸಿಗುವ ಎರಡು ಸ್ಥಾನಕ್ಕೆ ವಿಜಯ್ ಮುಳಗುಂದ್ ( ಬ್ರಾಹ್ಮಣ), ವಿನಯ್ ಕಾರ್ತಿಕ್ (ಒಕ್ಕಲಿಗ), ಬಿ.ಎಲ್. ಶಂಕರ್ (ಒಕ್ಕಲಿಗ) ರಮೇಶ್ ಬಾಬು (ಬಲಿಜ), ಐಶ್ವರ್ಯ ಮಹದೇವ ( ಕುರುಬ), ನಟರಾಜ ಗೌಡ ( ಒಕ್ಕಲಿಗ), ನಲಪಾಡ್ ( ಮುಸ್ಲಿಂ) ಅವರು ಲಾಬಿ ನಡೆಸುತ್ತಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ
ಮುದ್ದುಗಂಗಾಧರ್ (ಖರ್ಗೆ ಆಪ್ತ), ಸೂರಜ್ ಹೆಗ್ಡೆ , ಪುಷ್ಪ ಅಮರನಾಥ (ದಲಿತ), ಮುಂಡರಗಿ ನಾಗರಾಜ್ (ದಲಿತ), ವಿ.ಆರ್. ಸುದರ್ಶನ್ (ಗಾಣಿಗ), ಕರಡಿ ಸಂಗಣ್ಣ (ಲಿಂಗಾಯತ), ಹುಸೇನ್ (ಮುಸ್ಲಿಂ)

ಹೈಕಮಾಂಡ್
ಬೋಸರಾಜು (ಹಾಲಿ ಸಚಿವ)

ದೆಹಲಿಗೆ ತೆರಳಲು ಸಿದ್ದು, ಡಿಕೆಶಿ ತೀರ್ಮಾನ

ಇದನ್ನೂ ಓದಿ: Legislative Council Election: ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ದಿನಾಂಕ ಫಿಕ್ಸ್;‌ ಜೂನ್‌ 13ಕ್ಕೆ ಮತದಾನ

ಕಾಂಗ್ರೆಸ್‌ಗೆ ಲಭಿಸುವ ಏಳು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಕಗ್ಗಂಟಾಗಿರುವ ಹಿನ್ನೆಲೆಯಲ್ಲಿ ಶಾರ್ಟ್‌ ಲಿಸ್ಟ್‌ ಹಿಡಿದುಕೊಂಡು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಅವರು ದೆಹಲಿಗೆ ತೆರಳಲು ತೀರ್ಮಾನಿಸಿದ್ದಾರೆ. ಮೇ 28, 29ರಂದು ದೆಹಲಿಯಲ್ಲಿರಲಿರುವ ಇಬ್ಬರೂ ನಾಯಕರು, ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚಿಸಲಿದ್ದಾರೆ. ಇದಾದ ಬಳಿಕವೇ ಅಭ್ಯರ್ಥಿಗಳ ಆಯ್ಕೆಯನ್ನು ಘೋಷಣೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

Continue Reading

ಬಾಗಲಕೋಟೆ

Love Propose : I Love You ಮೆಸೇಜ್‌ ಕಳಿಸಿದ ಮುಸ್ಲಿಂ ಯುವಕನಿಗೆ ವಿವಾಹಿತೆಯಿಂದ ಚಪ್ಪಲಿ ಏಟು!

Love Propose : ಹಿಂದು ಮಹಿಳೆಗೆ ಅನ್ಯಕೋಮಿನ ಯುವಕನೊಬ್ಬ ಪ್ರೀತಿಸುವಂತೆ ಪೀಡಿಸುತ್ತಿದ್ದ. ಅದ್ಹೇಗೋ ಮಹಿಳೆಯ ಫೋನ್‌ ನಂಬರ್‌ ಕಲೆಹಾಕಿದ ಆತ ಐ ಲವ್ ಯೂ ಎಂದು ಮೆಸೇಜ್‌ ಹಾಕಿದ್ದ. ಇದರಿಂದ ಸಿಟ್ಟಾದ ಮಹಿಳೆ ಚಪ್ಪಲಿ ಏಟು ಕೊಟ್ಟಿದ್ದಾಳೆ.

VISTARANEWS.COM


on

By

Love Propose
Koo

ಬಾಗಲಕೋಟೆ: ಐ ಲವ್ ಯೂ ಎಂದು (Love Propose) ಮೆಸೇಜ್‌ ಹಾಕಿದ ಮುಸ್ಲಿಂ ಯುವಕನಿಗೆ ಮಹಿಳೆಯೊಬ್ಬರು ಚಪ್ಪಲಿ ಏಟು ಕೊಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆಯ ಇಳಕಲ್‌ ನಗರದಲ್ಲಿ ಘಟನೆ ನಡೆದಿದೆ. ಯಾಸಿನ್ ಎಂಬಾತ ನಿವೇದಿತಾ ಎಂಬಾಕೆ ಪ್ರೀತಿಸುವಂತೆ ವಾಟ್ಸ್‌ ಆ್ಯಪ್‌ನಿಂದ ಪ್ರೇಮ ನಿವೇದನೆಯನ್ನು ಮಾಡಿದ್ದ.

ನಿವೇದಿತಾ ಹಾಗೂ ಯಾಸಿನ್ ಇಬ್ಬರೂ ಸಹ ವಿವಾಹಿತರು. ಹೀಗಿದ್ದರೂ ಮದುವೆ ಆಗಿರುವ ಮಹಿಳೆಯ ಹಿಂದೆ ಬಿದ್ದ ಯಾಸಿನ್‌ ಪ್ರೀತಿಸುವಂತೆ ನಿವೇದಿತಾಳಿಗೆ ಮಸೇಜ್‌ ಮೂಲಕ ಹಿಂಸೆ ನೀಡುತ್ತಿದ್ದ. ಯಾಸಿನ್‌ ನಡೆಗೆ ರೋಸಿ ಹೋದ ನಿವೇದಿತಾ ಆತನ ಮನೆ ನುಗ್ಗಿ ಕುತ್ತಿಗೆ ಪಟ್ಟಿ ಹಿಡಿದು ಥಳಿಸಿ, ಚಪ್ಪಲಿ ಏಟು ನೀಡಿದ್ದಾರೆ.

ಇನ್ನೂ ನಿವೇದಿತಾ ಹಾಗೂ ಯಾಸಿನ್ ಇಬ್ಬರೂ ಕಾಂಗ್ರೆಸ್ ‌ಪಕ್ಷದ‌ಲ್ಲಿ ಕಾರ್ಯಕರ್ತರಾಗಿದ್ದು, ಪರಿಚಿತರೇ ಆಗಿದ್ದಾರೆ. ಇತ್ತೀಚೆಗೆ ಯಾಸಿನ್‌ ಪ್ರೀತಿ-ಪ್ರೇಮ ಎಂದು ಹಿಂದೆ ಬಿದ್ದು ಚಾಟಿಂಗ್ ಮಾಡುತ್ತಿದ್ದ. ಇದರಿಂದ ರೊಚ್ಚಿಗೆದ್ದ ನಿವೇದಿತಾ ಯಾಸೀನ್ ಮನೆಗೆ ನುಗ್ಗಿ ಚಪ್ಪಲಿ ಏಟು ನೀಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತ ಸ್ಥಳೀಯರ ಮಧ್ಯಸ್ಥಿಕೆಯಿಂದ ಚಪ್ಪಲಿ‌ ಏಟಿನ ಪ್ರಸಂಗ ಬಗೆಹರಿದಿದೆ. ಇಲಕಲ್ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Deep fake Scam : ಸೆಲೆಬ್ರಿಟಿಗಳ ಬಳಿಕ ಈಗ ಬೆಂಗಳೂರು ಶಾಲಾ ವಿದ್ಯಾರ್ಥಿನಿಯರಿಗೆ ಡೀಪ್‌ಫೇಕ್‌ ಕಾಟ; ನಗ್ನ ಫೋಟೋ ವೈರಲ್

ಧ್ರುವ ಸರ್ಜಾ ಜತೆಗಿದ್ದ ಜಿಮ್ ಟ್ರೈನರ್ ಮೇಲೆ ಮಚ್ಚಿನಿಂದ‌ ಹಲ್ಲೆ?

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಧ್ರುವ ಸರ್ಜಾ (Dhruva Sarja) ಜತೆಗಿದ್ದ ಜಿಮ್ ಟ್ರೈನರ್ ಪ್ರಶಾಂತ್ ಮೇಲೆ ಅಟ್ಯಾಕ್ ಆಗಿದೆ ಎಂದು ವರದಿಯಾಗಿದೆ. ಭಾನುವಾರ (ಮೇ 26) ರಾತ್ರಿ ಬೆಂಗಳೂರಿನ ಕೆ ಆರ್ ರಸ್ತೆಯಲ್ಲಿ ಈ ಘಟನೆ ನಡೆದಿರುವುದಾಗಿ ತಿಳಿದು ಬಂದಿದೆ. ಸ್ಥಳೀಯ ಹುಡುಗರ ಜತೆ ಗಲಾಟೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಘಟನೆಗೆ ಸಂಬಂಧಿಸಿದಂತೆ ಧ್ರುವ ಸರ್ಜಾ ಅವರು ಸ್ಪಷ್ಟನೆ ಕೊಡಬೇಕಿದೆ. ಸದ್ಯಕ್ಕೆ ಮಚ್ಚಿನಿಂದ‌ ಪ್ರಶಾಂತ್ ಮೇಲೆ ಹಲ್ಲೆ ಆಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವೈಯಕ್ತಿಕ ವಿಚಾರಕ್ಕೆ ಮಾತಿನ ಚಕಮಕಿ ನಡೆದು ಗಲಾಟೆ ಆಗಿದೆ ಎನ್ನಲಾಗಿದೆ. ಸಿಟ್ಟಿನಲ್ಲಿ ಮಚ್ಚಿನಿಂದ ಪ್ರಶಾಂತ್ ಮೇಲೆ ಸ್ಥಳೀಯ ಹುಡುಗರು ಹಲ್ಲೆ ಮಾಡಿದ್ದಾರೆ. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಶಾಂತ್‌ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸಿನಿಮಾ ವಿಚಾರಕ್ಕೆ ಬಂದರೆ ಪ್ರೇಮ್‌ ಹಾಗೂ ಧ್ರುವ ಸರ್ಜಾ (Dhruva Sarja) ಈಗಾಗಲೇ ʻಕೆಡಿʼ ಸಿನಿಮಾ (KD movie) ಬಿಡುಗಡೆ ಯಾವಾಗ ಎಂಬುದನ್ನು ರಿವೀಲ್‌ ಮಾಡಿದ್ದಾರೆ. ಡಿಸೆಂಬರ್‌ನಲ್ಲಿ ಕೆಡಿ ಸಿನಿಮಾ ತೆರೆ ಕಾಣುತ್ತಿದೆ. ಚಿತ್ರರಂಗಕ್ಕೆ ಬಂದ 12 ವರ್ಷಗಳಲ್ಲಿ ಧ್ರುವ ಸರ್ಜಾ 4 ಸಿನಿಮಾಗಳಲ್ಲಿ ಮಾತ್ರ ನಟಿಸಿದ್ದಾರೆ ಎನ್ನುವ ಬೇಸರ ಕೆಲವರದ್ದು. ಇದೀಗ ಹೊಸ ಸುದ್ದಿಯೊಂದು ವೈರಲ್‌ ಆಗುತ್ತಿದೆ. ಬಾಲಿವುಡ್‌ಗೆ ಧ್ರುವ ಸರ್ಜಾ ಎಂಟ್ರಿ ಕೊಡುತ್ತಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: Dhruva Sarja: ಬಾಲಿವುಡ್‌ ಸಿನಿಮಾಗೆ ಎಂಟ್ರಿ ಕೊಡ್ತಾರಾ ಧ್ರುವ ಸರ್ಜಾ? ಬಿಗ್‌ ಬಜೆಟ್‌ ಚಿತ್ರದಲ್ಲಿ ಸಹೋದರನ ಪಾತ್ರ?

ಬಹುನಿರೀಕ್ಷಿತ ‘ವಾರ್-2’ ಚಿತ್ರದಲ್ಲಿ ಕನ್ನಡದ ನಟ ಬಣ್ಣ ಹಚ್ಚುತ್ತಾರೆ ಎನ್ನಲಾಗುತ್ತಿದೆ. ತೆಲುಗು ಮಾಧ್ಯಮಗಳಲ್ಲಿ ಕೂಡ ಇಂತಹದೊಂದು ಸುದ್ದಿ ಹರಿದಾಡುತ್ತಿದೆ. ಜ್ಯೂ. ಎನ್‌ಟಿಆರ್ ಸಹೋದರನ ಪಾತ್ರದಲ್ಲಿ ಧ್ರುವ ನಟಿಸುತ್ತಾರೆ ಎಂದು ಎಂದು ವರದಿಯಾಗುತ್ತಿದೆ. ಧ್ರುವ ಸರ್ಜಾ ಈ ಚಿತ್ರದಲ್ಲಿ ನಟಿಸುತ್ತಾರೆ, ಆ ಮೂಲಕ ಬಾಲಿವುಡ್‌ಗೆ ಎಂಟ್ರಿ ಕೊಡುತ್ತಾರೆ ಎನ್ನುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ವರದಿಯ ಪ್ರಕಾರ, ಜ್ಯೂನಿಯರ್‌ ಎನ್‌ಟಿಆರ್‌ ವಿಲನ್‌ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬ್ರಹ್ಮಾಸ್ತ್ರ ಸಿನಿಮಾ ಬಳಿಕ ಆದಿತ್ಯ ಚೋಪ್ರಾ ಅವರು ಅಯನ್ ಮುಖರ್ಜಿ ಅವರ ನಿರ್ದೇಶಕ್ಕೆ ಮನಸೋತು, ಈ ಸಿನಿಮಾ ಮಾಡಲು ಅವಕಾಶ ನೀಡಿದ್ದಾರೆ ಎನ್ನಲಾಗಿದೆ.

ಸಿದ್ದಾರ್ಥ್ ಆನಂದ್ ಅವರು ‘ವಾರ್’ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಯಶಸ್ಸು ಕಂಡಿತು. ಈ ಚಿತ್ರದಲ್ಲಿ ಹೃತಿಕ್ ರೋಷನ್ ಹಾಗೂ ಟೈಗರ್ ಶ್ರಾಫ್ ನಟಿಸಿದ್ದರು. ಮೊದಲ ಪಾರ್ಟ್​​ನಲ್ಲಿ ಟೈಗರ್ ಶ್ರಾಫ್ ಪಾತ್ರ ಕೊನೆಗೊಂಡಿದೆ. ಹೀಗಾಗಿ ‘ವಾರ್-2’ ಚಿತ್ರದಲ್ಲಿ ಹೃತಿಕ್ ಮಾಡಿರುವ ಕಬೀರ್ ಪಾತ್ರ ಮುಂದುವರಿಯುತ್ತಿದೆ. ಜ್ಯೂನಿಯರ್‌ ಎನ್‌ಟಿಆರ್‌ ಅವರು ತಮ್ಮ ಮೊದಲ ಬಾಲಿವುಡ್​ ಚಿತ್ರಕ್ಕೆ ಇಷ್ಟು ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಿರುವುದು ವಿಶೇಷ. ವಾರ್‌-2 ಪ್ಯಾನ್ ಇಂಡಿಯಾ ಚಲನಚಿತ್ರವಾಗಿದ್ದು, ಉತ್ತರ ಮತ್ತು ದಕ್ಷಿಣ ಭಾಗದ ಸೂಪರ್‌ಸ್ಟಾರ್‌ಗಳನ್ನು ಹೊಂದಿದೆ. ಕಿಯಾರಾ ಆಡ್ವಾಣಿ ಈ ಸಿನಿಮಾ ನಾಯಕಿ. ʼವಾರ್ 2ʼ 2025ರ ಆಗಸ್ಟ್ 14ರಂದು ಬಿಡುಗಡೆಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

BS Yediyurappa: ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಸಾವು

BS Yediyurappa: ಉಸಿರಾಟ ಸಮಸ್ಯೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮಹಿಳೆ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರ ವಿರುದ್ಧ ನೀಡಿದ ದೂರಿನ ಮೇರೆಗೆ ಮಾರ್ಚ್‌ 14ರಂದು ಪೋಕ್ಸೊ ಪ್ರಕರಣ ದಾಖಲಾಗಿತ್ತು.

VISTARANEWS.COM


on

BS Yediyurappa
Koo

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್‌ ದಾಖಲಿಸಿದ್ದ ಮಹಿಳೆ ಮೃತಪಟ್ಟಿದ್ದಾರೆ. ಉಸಿರಾಟದ ತೊಂದರೆಯಿಂದ ಹುಳಿಮಾವು ಬಳಿಯ ನ್ಯಾನೋ‌ ಆಸ್ಪತ್ರೆಯಲ್ಲಿ ಮಹಿಳೆ ಮೃತಪಟ್ಟಿದ್ದಾರೆ. ಮಮತಾ ಮೃತ ಮಹಿಳೆ. ಉಸಿರಾಟ ಸಮಸ್ಯೆ ಸಂಬಂಧ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಮಹಿಳೆಯ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಈ ಹಿಂದೆ ಲೈಂಗಿಕ ದೌರ್ಜನ್ಯ ಆಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಎಸ್‌ಐಟಿ ತನಿಖೆಗೆ ವಹಿಸುವಂತೆ ಸಹಕರಿಸಬೇಕು ಎಂದು ಮನವಿ ಮಾಡಲು 2024ರ ಫೆಬ್ರವರಿ 2ರಂದು ಯಡಿಯೂರಪ್ಪನವರ ಮನೆಗೆ ಸಂತ್ರಸ್ತ ಮಗಳ ಜತೆಗೆ ಮಹಿಳೆ ಹೋಗಿದ್ದರು. ಈ ವೇಳೆ ಯಡಿಯೂರಪ್ಪ ಅವರು ತಾಯಿ ಮತ್ತು ಮಗಳ ಜತೆ 9 ನಿಮಿಷಗಳ ಕಾಲ ಮಾತನಾಡಿದ್ದರು ಎನ್ನಲಾಗಿತ್ತು. ಆಗ ಅವರು ಬಾಲಕಿಗೆ ಮತ್ತು ಆಕೆಯ ತಾಯಿಗೆ ಸಾಂತ್ವನ ಹೇಳಿದ್ದರು ಎನ್ನಲಾಗಿತ್ತು. ಆದರೆ ಆ ಬಾಲಕಿಯ ತಾಯಿ ಕೆಲ ದಿನಗಳ ಬಳಿಕ ಯಡಿಯೂರಪ್ಪ ವಿರುದ್ಧವೇ ಆರೋಪ ಮಾಡಿದ್ದರು. ಆದರೆ ಈ ಆರೋಪವನ್ನು ಯಡಿಯೂರಪ್ಪ ಅವರು ಸ್ಪಷ್ಟವಾಗಿ ನಿರಾಕರಿಸಿದ್ದರು. ಈ ಆರೋಪ ದುರುದ್ದೇಶಪೂರಿತ ಎಂದು ಹೇಳಿದ್ದರು. ನಂತರ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿತ್ತು.

ಇದನ್ನೂ ಓದಿ | Road Accident: ಭೀಕರ ರಸ್ತೆ ಅಪಘಾತ; ಕೆಕೆಆರ್‌ಟಿಸಿ ಬಸ್‌ ಅಪ್ಪಳಿಸಿ 3 ಬೈಕ್‌ ಸವಾರರು ಬಲಿ

ಸೆಲೆಬ್ರಿಟಿಗಳ ಬಳಿಕ ಈಗ ಬೆಂಗಳೂರು ಶಾಲಾ ವಿದ್ಯಾರ್ಥಿನಿಯರಿಗೆ ಡೀಪ್‌ಫೇಕ್‌ ಕಾಟ; ನಗ್ನ ಫೋಟೋ ವೈರಲ್

deep fake

ಬೆಂಗಳೂರು: ಡೀಪ್‌ಫೇಕ್‌ ತಂತ್ರಜ್ಞಾನದ (Deep fake Technology) ದುರ್ಬಳಕೆ ಎಂದರೆ ಇದುವರೆಗೆ ರಶ್ಮಿಕಾ ಮಂದಣ್ಣ, ಕತ್ರಿನಾ ಕೈಫ್‌, ಸಚಿನ್‌ ತೆಂಡೂಲ್ಕರ್‌ ಅವರಂತಹ ಸೆಲೆಬ್ರಿಟಿಗಳು, ನಟಿಯರ ತಿರುಚಿದ ವಿಡಿಯೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದು ಎಂದಾಗಿತ್ತು. ಆದರೆ, ಡೀಪ್‌ಫೇಕ್‌ ತಂತ್ರಜ್ಞಾನದ ಕಾವು (Deep fake Scam) ಶಾಲಾ ವಿದ್ಯಾರ್ಥಿಯರಿಗೂ ಎದುರಾಗಿದೆ.

ಸೆಲೆಬ್ರಿಟಿಗಳಿಗೆ ಕಾಡುತ್ತಿದ್ದ ಡೀಪ್‌ಫೇಕ್‌ ಕಾಟವು ಇದೀಗ ಶಾಲಾ ವಿದ್ಯಾರ್ಥಿನಿಯರಿಗೆ ಶುರುವಾಗಿದೆ. ಪ್ರತಿಷ್ಠಿತ ಶಾಲೆಯ ವಿದ್ಯಾರ್ಥಿನಿಯರ ಮಾರ್ಫಿಂಗ್ ಫೋಟೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಪೋಷಕರಲ್ಲಿ ಆತಂಕ ಹೆಚ್ಚಿದೆ.

ಖಾಸಗಿ ಶಾಲೆಯೊಂದರ 9ನೇ ತರಗತಿ ವಿದ್ಯಾರ್ಥಿನಿಯ AI ಅಲ್ಲಿ ರಚನೆಯಾದ ನಗ್ನ ಫೋಟೋ ವೈರಲ್ ಆಗಿದೆ. ಮೇ 24 ರಂದು ಬೆಳಕಿಗೆ ಬಂದ ಪ್ರಕರಣವು ಈಗ ಚರ್ಚೆಗೆ ಗ್ರಾಸವಾಗಿದೆ. ಅಂದಹಾಗೆ 50ಕ್ಕೂ ಹೆಚ್ಚು ಶಾಲೆಯ ವಿದ್ಯಾರ್ಥಿಗಳು ಇದ್ದ ಇನ್ಸ್ಟ್ರಾಗ್ರಾಂನಲ್ಲಿ ಗ್ರೂಪ್‌ವೊಂದು ರಚನೆ ಮಾಡಿದ್ದರು. ಆ ಗ್ರೂಪ್‌ನಲ್ಲಿ ಅನಾಮಧೇಯ ವ್ಯಕ್ತಿಯಿಂದ ವಿದ್ಯಾರ್ಥಿನಿಯರ ಮಾರ್ಫಿಂಗ್ ಫೋಟೋಸ್ ವೈರಲ್ ಆಗಿದೆ. ಆ ವ್ಯಕ್ತಿ ಯಾರು ಎಂಬುದರ ಅರಿವು ಕೂಡ ವಿದ್ಯಾರ್ಥಿನಿಯರಿಗೆ ಇಲ್ಲ.

ಇದನ್ನೂ ಓದಿ | physical Abuse : ಮಗನ ಕಾಮಚೇಷ್ಠೆಗೆ ತಾಯಿ ಸಾಥ್‌; ಬೆತ್ತಲೆ ಫೋಟೊ ತೋರಿ ಬೆದರಿಸುತ್ತಿದ್ದ ಕಾಮುಕರಿಬ್ಬರು ಅರೆಸ್ಟ್‌

ಶಾಲಾ ಗ್ರೂಪ್‌ನಲ್ಲಿ ಇದ್ದಾನೆಂದರೆ ಅವನು ಖಂಡಿತ ವಿದ್ಯಾರ್ಥಿ ಆಗಿರಬಹುದೆಂದು ಶಂಕಿಸಲಾಗಿದೆ. ಈ ವಿಚಾರ ತಿಳಿದ ಕೂಡಲೇ ವಿದ್ಯಾರ್ಥಿನಿಯರು ಕುಗ್ಗಿ ಹೋಗಿದ್ದಾರೆ. ಈಗಾಗಲೇ ವಿದ್ಯಾರ್ಥಿನಿಯರ ಪೋಷಕರು ಸೈಬರ್ ಸೆಲ್‌ಗೆ ದೂರು ನೀಡಿದ್ದಾರೆ. ಡೀಪ್‌ಫೇಕ್ ಕಾಟಕ್ಕೆ ವಿದ್ಯಾರ್ಥಿನಿಯರು ಮಾನಸಿಕ ಹಿಂಸೆಗೆ ಒಳಗಾಗಿದ್ದಾರೆ.

Continue Reading
Advertisement
self harming chandrashekar
ಕ್ರೈಂ2 mins ago

Self Harming: ಮೇಲಧಿಕಾರಿಗಳ ಕಿರುಕುಳ, ಹಗರಣದ ಕರಿನೆರಳು: ವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಂಟೆಂಡೆಂಟ್ ಆತ್ಮಹತ್ಯೆ

MLC Election
ರಾಜಕೀಯ25 mins ago

MLC Election: ಹೈಕಮಾಂಡ್ ಅಂಗಳದಲ್ಲಿ ಪರಿಷತ್ ಕೈ ಅಭ್ಯರ್ಥಿಗಳ ಆಯ್ಕೆ ಕಸರತ್ತು; ನಾಳೆ ದೆಹಲಿಗೆ ಸಿಎಂ, ಡಿಸಿಎಂ

Kiccha Sudeep visit chamundeshwari temple
ಸ್ಯಾಂಡಲ್ ವುಡ್44 mins ago

Kiccha Sudeep: ಚಾಮುಂಡಿ ಬೆಟ್ಟಕ್ಕೆ ಕಿಚ್ಚ ಸುದೀಪ್ ಭೇಟಿ; ಇವರನ್ನು ನೋಡಲು ಜನವೋ ಜನ!

Viral Video
ವೈರಲ್ ನ್ಯೂಸ್1 hour ago

Viral Video: ರೈಫಲ್‌ ಜೊತೆ ಬಾರ್‌ಗೆ ನುಗ್ಗಿದ ಕಿಡಿಗೇಡಿ..ಡಿಜೆ ಮೇಲೆ ಗುಂಡಿನ ದಾಳಿ-ಶಾಕಿಂಗ್‌ ವಿಡಿಯೋ ನೋಡಿ

Mitchell Starc
ಕ್ರೀಡೆ1 hour ago

Mitchell Starc : ಐಪಿಎಲ್ ಯಶಸ್ಸಿನ ಶ್ರೇಯಸ್ಸನ್ನು ಪತ್ನಿಗೆ ಅರ್ಪಿಸಿದ ಸ್ಟಾರ್ಕ್​; ಅವರ ಪತ್ನಿಯೂ ಕ್ರಿಕೆಟರ್​

Love Propose
ಬಾಗಲಕೋಟೆ2 hours ago

Love Propose : I Love You ಮೆಸೇಜ್‌ ಕಳಿಸಿದ ಮುಸ್ಲಿಂ ಯುವಕನಿಗೆ ವಿವಾಹಿತೆಯಿಂದ ಚಪ್ಪಲಿ ಏಟು!

Dhruva Sarja Trainer Prashanth Was Attacked First Reaction
ಸ್ಯಾಂಡಲ್ ವುಡ್2 hours ago

Dhruva Sarja: ಜಿಮ್ ಟ್ರೈನರ್ ಮೇಲೆ ಹಲ್ಲೆ; ಧ್ರುವ ಸರ್ಜಾ ನೀಡಿದ ಸ್ಪಷ್ಟನೆ ಏನು?

Asaduddin Owaisi Party Leader
ದೇಶ2 hours ago

Asaduddin Owaisi: ಓವೈಸಿ ಪಕ್ಷದ ನಾಯಕನ ಮೇಲೆ ಗುಂಡಿನ ದಾಳಿ

BS Yediyurappa
ಪ್ರಮುಖ ಸುದ್ದಿ2 hours ago

BS Yediyurappa: ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಸಾವು

Fire accident
ದೇಶ2 hours ago

Fire Accident: 4 ವರ್ಷ ನೀವು ನಿದ್ದೆಯಲ್ಲಿದ್ರಾ? ನಿಮಗೆ ಕಣ್ಣು ಕಾಣೋದಿಲ್ವಾ?-ಗುಜರಾತ್‌ ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ21 hours ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು22 hours ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ4 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ5 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು6 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು6 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ಟ್ರೆಂಡಿಂಗ್‌