Site icon Vistara News

Accident Case | ತಮಿಳುನಾಡಿನಲ್ಲಿ ರಸ್ತೆ ಅಪಘಾತ; ಕರ್ನಾಟಕದ ಇಬ್ಬರು ಸಾವು, ಮತ್ತೊಬ್ಬರು ಗಂಭೀರ

tamilunadu accident Hogenakal Falls

ಬೆಂಗಳೂರು: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಅಂಚೆಟ್ಟಿ ಬಳಿ ಚಾಲಕನ ನಿಯಂತ್ರಣ ತಪ್ಪಿ (Accident Case) ಮರಕ್ಕೆ ಕಾರು ಡಿಕ್ಕಿಯಾಗಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೊಬ್ಬ ಯುವಕನ ಸ್ಥಿತಿ ಚಿಂತಾಜನಕವಾಗಿದೆ.

ಕರ್ನಾಟಕದಿಂದ ತಮಿಳುನಾಡಿನ ಹೊಗನೇಕಲ್‌ಗೆ ಪ್ರವಾಸ ಹೊರಟಿದ್ದರು ಎಂದು ತಿಳಿದುಬಂದಿದ್ದು, ಮೃತರಿಬ್ಬರ ಹಾಗೂ ಗಾಯಗೊಂಡ ವ್ಯಕ್ತಿಯ ವಿವರಗಳು ಇನ್ನೂ ಲಭ್ಯವಾಗಿಲ್ಲ.

ಕರ್ನಾಟಕದಿಂದ ವೇಗವಾಗಿ ಕಾರು ವೇಗವಾಗಿ ಬಂದಿದೆ ಎನ್ನಲಾಗಿದ್ದು, ಚಾಲಕನ ನಿಯಂತ್ರಣ ತಪ್ಪಿದೆ. ಸೀದಾ ರಸ್ತೆಯಿಂದ ಕೆಳಕ್ಕೆ ಇಳಿದ ಕಾರು ಮರಕ್ಕೆ ಗುದ್ದಿದೆ. ಗುದ್ದಿದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಒಳಗಿದ್ದ ಮೂವರಿಗೆ ಗಂಭೀರ ಗಾಯಗಳಾಗಿವೆ. ಈ ವೇಳೆ ಒಬ್ಬರು ಮಹಿಳೆ ಸೇರಿದಂತೆ ಒಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಅಂಚೆಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ವಿವರಗಳನ್ನು ಕಲೆಹಾಕುತ್ತಿದ್ದಾರೆ.

ಇದನ್ನೂ ಓದಿ | Road accident | ಶಿಡ್ಲಘಟ್ಟದಲ್ಲಿ ಪಲ್ಟಿಯಾದ ಕಾರು: ಇಬ್ಬರು ಸ್ಥಳದಲ್ಲೇ ಸಾವು, ನಾಲ್ವರಿಗೆ ಗಾಯ

Exit mobile version