Site icon Vistara News

Accident Case | ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

bike accident bengaluru

ಬೆಂಗಳೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದ (Accident Case) ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಲ್ಲಿನ ಜಾಲಹಳ್ಳಿಯ ಮುತ್ಯಾಲಮ್ಮ ಬ್ರಿಡ್ಜ್ ಬಳಿ ನಡೆದಿದೆ.

ಸಚಿನ್ ಹೆಬ್ಬಾರ್ (28) ಮೃತ ಯುವಕ. ಇವರು ಮುತ್ಯಾಲಮ್ಮ ಬ್ರಿಡ್ಜ್ ಕಡೆಯಿಂದ ಹೆಬ್ಬಾಳ ಕಡೆ ಬುಧವಾರ ತಡರಾತ್ರಿ 2.30ರ ವೇಳೆಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಈ ವೇಳೆ ಅತಿ ವೇಗದಲ್ಲಿ ಬಂದ ವಾಹನವೊಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ಯುವಕನ ದೇಹವು ಛಿದ್ರಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಜಾಲಹಳ್ಳಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಾಹನ ಪತ್ತೆಗೆ ಮುಂದಾಗಿದ್ದು, ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಇದನ್ನೂ ಓದಿ | Cyrus Mistry | ಸೈರಸ್ ಮಿಸ್ತ್ರಿ ಕಾರ್ ಅಪಘಾತಕ್ಕೆ ಸೇತುವೆಯ ದೋಷಪೂರಿತ ವಿನ್ಯಾಸ ಕಾರಣ!

Exit mobile version