Site icon Vistara News

Accident case | ಅಪರಿಚಿತ ವಾಹನ ಡಿಕ್ಕಿ; ಹಂಪಿ ಕನ್ನಡ ವಿವಿ ಪ್ರಾಧ್ಯಾಪಕ ಪ್ರೊ. ವಾಸುದೇವನ್ ಸಾವು

accident davanagere jagaluru Prof Vasudevan passes away

ದಾವಣಗೆರೆ: ಜಗಳೂರು ತಾಲೂಕಿನ ಕಲ್ಲೆದೇವಪುರ ಹಾಗೂ ಬಸಪ್ಪನಟ್ಟಿ ಗ್ರಾಮಗಳ ನಡುವೆ ಇರುವ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಶನಿವಾರ ತಡರಾತ್ರಿ ಅಪಘಾತ (Accident case) ಸಂಭವಿಸಿದ್ದು, ಹಂಪಿ ಕನ್ನಡ ವಿವಿ ಪ್ರಾಧ್ಯಾಪಕ ಪ್ರೊ. ವಾಸುದೇವನ್ ಮೃತಪಟ್ಟಿದ್ದಾರೆ. ಅಲ್ಲದೆ, ಕಾರಿನಲ್ಲಿದ್ದ ಅವರ ಪುತ್ರ ಸೇರಿ ಮೂವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪ್ರೊ. ವಾಸುದೇವನ್

ಜಗಳೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಅವರು ಸಂಚರಿಸುತ್ತಿದ್ದಾಗ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಆದರೆ, ಆ ವಾಹನದವರು ನಿಲ್ಲಿಸದೇ ಹೋಗಿದ್ದಾರೆ ಎಂದು ಶಂಕಿಸಲಾಗಿದೆ. ಈ ಹಿನ್ನೆಲೆಯಲ್ಲಿ ತೀವ್ರ ರಕ್ತಸ್ರಾವಗೊಂಡಿದ್ದ ಪ್ರೊ. ವಾಸುದೇವನ್‌ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ವಾಸುದೇವನ್‌ ಅವರು ತಮ್ಮ ಪುತ್ರ ಹಾಗೂ ಇಬ್ಬರು ವಿದ್ಯಾರ್ಥಿನಿಯರ ಜತೆ ಪ್ರಯಾಣಿಸುತ್ತಿದ್ದರು. ಅವರ ಪುತ್ರ ಹಾಗೂ ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ‌ಗಳಾಗಿವೆ. ಎಲ್ಲರನ್ನೂ ದಾವಣಗೆರೆ ಎಸ್‌ಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾವ ವಾಹನ ಡಿಕ್ಕಿ ಹೊಡೆದಿದೆ ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ | ಮಂಗಳೂರು ಸ್ಫೋಟ | ಚಾರ್ಮಾಡಿ ತಪ್ಪಲಲ್ಲಿ ನಡೀತಾ ಟ್ರಯಲ್‌ ಬ್ಲಾಸ್ಟ್? ಸ್ಯಾಟಲೈಟ್‌ ಫೋನ್‌ ತನಿಖೆ ವೇಳೆ ಸಿಕ್ಕ ಸ್ಫೋಟಕ ಮಾಹಿತಿ

Exit mobile version