Accident news | ಬೆಂಗಳೂರು- ಮೈಸೂರು ದಶಪಥದಲ್ಲಿ ಅಪಘಾತ, 2 ಸಾವು, ಹಲವರಿಗೆ ಗಾಯ - Vistara News

ಕರ್ನಾಟಕ

Accident news | ಬೆಂಗಳೂರು- ಮೈಸೂರು ದಶಪಥದಲ್ಲಿ ಅಪಘಾತ, 2 ಸಾವು, ಹಲವರಿಗೆ ಗಾಯ

ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಸಾವಿಗೀಡಾಗಿ ಹಲವರಿಗೆ ಗಂಭೀರ ಗಾಯಗಳಾಗಿವೆ.

VISTARANEWS.COM


on

accident news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಮನಗರ: ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಸಾವಿಗೀಡಾಗಿ ಹಲವರಿಗೆ ಗಂಭೀರ ಗಾಯಗಳಾಗಿವೆ.

ಚನ್ನಪಟ್ಟಣ ತಾಲೂಕಿನ ಮುದುಗೆರೆ ಗೇಟ್ ಬಳಿ ಶನಿವಾರ ಮುಂಜಾನೆ ಸಂಭವಿಸಿದ ಅಪಘಾತದಲ್ಲಿ ಕ್ಯಾಂಟರ್‌ಗೆ ಟಿಟಿ ಡಿಕ್ಕಿಯಾಗಿದೆ. ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತರನ್ನು ಪಾಂಡವಪುರ ತಾಲೂಕಿನ ಚಿಕ್ಕಾಡೆ ಗ್ರಾಮದ ಮಹೇಶ್, ಕೃಷ್ಣ ಎಂದು ಗುರುತಿಸಲಾಗಿದೆ. ಹಲವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

ಟೆಂಪೊ ಟ್ರಾವೆಲರ್‌ನಲ್ಲಿದ್ದವರು ತಿರುಪತಿಗೆ ಭೇಟಿ ನೀಡಿ ಹಿಂದಿರುಗುತ್ತಿದ್ದರು. ದಶಪಥದಲ್ಲಿದ್ದ ಕ್ಯಾಂಟರ್‌ಗೆ ಟಿಟಿ ಹಿಂಬದಿಯಿಂದ ತೀವ್ರ ವೇಗದಿಂದ ಬಂದು ಡಿಕ್ಕಿ ಹೊಡೆದಿದೆ. ಬಹುಶಃ ಚಾಲಕ ನಿದ್ರಾವಶನಾಗಿದ್ದರಿಂದ ಹೀಗಾಗಿರಬಹುದು ಎಂದು ಶಂಕಿಸಲಾಗಿದೆ. ಡಿಕ್ಕಿಯಾದ ರಭಸಕ್ಕೆ ಟಿಟಿ ವಾಹನದ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿ | Bus accident | ಶಾಲಾ ಪ್ರವಾಸದ ಬಸ್ ಪಲ್ಟಿ, 4 ಮಕ್ಕಳು ಸೇರಿ 7 ಮಂದಿಗೆ ಗಾಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Road Accident : ಬೈಕ್‌ಗಳಿಗೆ ಗುದ್ದಿ ಸವಾರರನ್ನು ಕೊಂದು ಪರಾರಿಯಾಗಲು ಯತ್ನಿಸಿದ ಕಾರು ಚಾಲಕ

Road Accident : ಕಾರು ಚಾಲಕನ ನಿರ್ಲಕ್ಷ್ಯಕ್ಕೆ ಬೈಕ್‌ ಸವಾರರಿಬ್ಬರು ಪ್ರಾಣವನ್ನು ಕಳೆದುಕೊಂಡರೆ, ಮೂವರು ಗಂಭೀರ ಗಾಯಗೊಂಡಿದ್ದಾರೆ. ಅಪಘಾತ ಮಾಡಿ ಪರಾರಿ ಆಗಲು ಯತ್ನಿಸಿದ ಕಾರಣಕ್ಕೆ, ಸ್ಥಳೀಯರು ಕಲ್ಲುತೂರಾಟ ಮಾಡಿದ್ದಾರೆ. ಚಾಲಕ ಕುಡಿದು ವಾಹನ ಚಲಾಯಿಸಿದ್ದಾರೆ ಎಂದು ಆರೋಪಿಸಿದರು.

VISTARANEWS.COM


on

By

Road Accident
Koo

ಬೆಂಗಳೂರು ಗ್ರಾಮಾಂತರ: ಅಪಘಾತ ಮಾಡಿ (Road Accident) ಪರಾರಿ ಆಗುವ ಭರದಲ್ಲಿ ಕಾರು ಚಾಲಕನೊಬ್ಬ ಮತ್ತೆರಡು ಬೈಕ್‌ಗಳಿಗೆ ಗುದ್ದಿದ್ದಾನೆ. ಕಾರು ಗುದ್ದಿದ ರಭಸಕ್ಕೆ ಇಬ್ಬರ ದುರ್ಮರಣ ಹೊಂದಿದ್ದರೆ, ಮೂವರು ಗಂಭೀರ ಗಾಯಗೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರದ ಹೊಸಕೋಟೆ- ಚಿಂತಾಮಣಿ ರಾಜ್ಯ ಹೆದ್ದಾರಿಯ ಮದೀನ ಹೋಟೆಲ್ ಬಳಿ ಘಟ‌ನೆ ನಡೆದಿದೆ.

ಕಣ್ಣೂರಹಳ್ಳಿ ನಿವಾಸಿ ಜಗದೀಶ್ (30) ಮತ್ತು ಶಿವಾಜಿನಗರ ನಿವಾಸಿ ಮೊಹಮದ್ ಪೈಜ್ (18) ಮೃತ ದುರ್ದೈವಿಗಳು. ಅಬ್ಬಾಸ್, ಹಬ್ಬಾಸ್ ಪಾಷ ಮತ್ತು ಅಬುಜರ್ ಗಾಯಾಳುಗಳು ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಐ20 ಕಾರಿನಲ್ಲಿ ಬಂದ ಚಾಲಕ ಪ್ರಗತೀಶ್ ರಾವ್‌ ಎಂಬಾತ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿ ಅಪಘಾತ ಮಾಡಿದ್ದಾನೆ. ಜನರು ಸೇರುತ್ತಿದ್ದಂತೆ ಎಸ್ಕೇಪ್‌ ಆಗಲು ಯತ್ನಿಸಿದ್ದಾನೆ. ಪರಾರಿ ಆಗುವ ಭರದಲ್ಲಿ ರಸ್ತೆ ಬದಿಯಲ್ಲಿದ್ದ ಬೈಕ್‌ಗಳಿಗೆ ಗುದ್ದಿದ್ದಾನೆ. ಪರಿಣಾಮ ಸವಾರು ಚೆಲ್ಲಾ ಪಿಲ್ಲಿಯಾಗಿ ಬಿದ್ದರು. ಕಾರು ಚಾಲಕ ಸಣ್ಣ-ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಕುಡಿದ ಅಮಲಿನಲ್ಲಿ ಕಾರು ಅಡ್ಡಾದಿಡ್ಡಿ ಚಲಾಯಿಸಿ ಅಪಘಾತ ಮಾಡಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಪರಾರಿಯಾಗಲು ಯತ್ನಿಸಿದ್ದಕ್ಕೆ ಸಿಟ್ಟಿನಲ್ಲಿ ಕಾರಿಗೆ ಕಲ್ಲು ತೂರಾಟ ಮಾಡಿದ್ದಾರೆ. ಮೃತರ ಕುಟುಂಬಗಳಿಗೆ ನ್ಯಾಯ ಕೊಡಿಸುವಂತೆ ಸ್ಥಳೀಯರು ಒತ್ತಾಯಿಸಿದರು. ಹೊಸಕೋಟೆ ಶವಾಗಾರದ ಬಳಿ ಮೃತ ಜಗದೀಶ್ ಕುಟುಂಬಸ್ಥರು ಪ್ರತಿಭಟಿಸಿದರು. ಹೊಸಕೋಟೆ ಸಂಚಾರಿ ಪೊಲೀಸರು ಮನವೊಲಿಸಿದ ಬಳಿಕ ಮೃತದೇಹವನ್ನು ಕೊಂಡೊಯ್ದರು. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Physical Abuse : ಕಾಂಪೌಂಡ್‌ ಹಾರಿ ಬಂದ ಪುರಸಭೆ ಮಾಜಿ ಅಧ್ಯಕ್ಷೆಯ ಗಂಡನಿಗೆ ಚಳಿ ಬಿಡಿಸಿದ ಮಹಿಳೆಯರು

ಚಲಿಸುತ್ತಿದ್ದ ಕ್ರೇನ್‌ ಮೇಲೆ ಬಿದ್ದ ಮರ

ಉಡುಪಿಯ ಬ್ರಹ್ಮಾವರ ತಾಲೂಕು ಬೆಣ್ಣೆಕುದ್ರು ಬಾರ್ಕೂರು ಪಾಂಡೇಶ್ವರ ರಸ್ತೆಯಲ್ಲಿ ಚಲಿಸುತ್ತಿದ್ದ ಕ್ರೇನ್ ಮೇಲೆ ಬೃಹತ್ ಗಾತ್ರದ ಮರವೊಂದು ಬಿದ್ದಿದೆ. ಮರ ಬಿದ್ದ ರಭಸಕ್ಕೆ ಕ್ರೇನ್ ಹಾಗೂ ವಿದ್ಯುತ್ ಕಂಬ ಜಖಂಗೊಂಡಿತ್ತು. ಬೆಣ್ಣೆ ಕುದ್ರುವಿನಲ್ಲಿ ನಡೆಯುತ್ತಿರುವ ಕಾಮಗಾರಿ ಮುಗಿಸಿ ಬರುತ್ತಿದ್ದಾಗ ಘಟನೆ ನಡೆದಿದೆ. ಈ ಘಟನೆಯಿಂದಾಗಿ ಸುಮಾರು 2 ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ಮೆಸ್ಕಾಂ ಸಿಬ್ಬಂದಿ ಮತ್ತು ಸಾರ್ವಜನಿಕರ ನೆರವಿನಿಂದ ಮರ ತೆರವು ಕಾರ್ಯ ನಡೆಯಿತು.

ಬಿಯರ್ ತುಂಬಿದ ಲಾರಿ ಪಲ್ಟಿ; ಎಣ್ಣೆಗಾಗಿ ಮುಗಿಬಿದ್ದ ಜನ

ರಾಯಚೂರು ತಾಲೂಕಿನ ಹೆಗ್ಗಸನಹಳ್ಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಿಯರ್‌ ತುಂಬಿದ್ದ ಲಾರಿಯು ಪಲ್ಟಿಯಾಗಿದೆ. ವಾಹನ ಪಲ್ಟಿಯಾಗುತ್ತಿದ್ದಂತೆ ಬಿಯರ್ ಬಾಟಲ್ ರಸ್ತೆ ಮಧ್ಯೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಇದನ್ನು ಕಂಡ ಬಿಯರ್ ಪ್ರಿಯರು ಬಾಟಟ್‌ಗಾಗಿ ಮುಗಿ ಬಿದ್ದರು. ಬಿಯರ್ ಡಬ್ಬಿಗೆ ಒಮ್ಮೆಲೆ ಜನ ಮುಗಿ ಬಿದ್ದ ಕಾರಣ ಕೆಲಹೊತ್ತು ರಸ್ತೆ ಸಂಚಾರ ಸ್ಥಗಿತವಾಗಿತ್ತು. ಟ್ರಾಫಿಕ್ ಜಾಂನಿಂದ ವಾಹನ ಸವಾರರು ಹೈರಾಣಾದರು. ರಾಯಚೂರು ಗ್ರಾಮಾಂತರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

HD Kumaraswamy: ಎಚ್‌ಡಿ ಕುಮಾರಸ್ವಾಮಿ ಕೇಳಿದ ಕೃಷಿ ಖಾತೆ ಮೇಲೇ ನಿತೀಶ್‌ ಕಣ್ಣು; ಯಾರಿಗೆ ಒಲಿಯತ್ತೆ ಇಲಾಖೆ?

HD Kumaraswamy: ಕೃಷಿ, ಗ್ರಾಮೀಣಾಭಿವೃದ್ಧಿ ಮತ್ತು ಜಲಶಕ್ತಿಯಂತಹ, ಬಿಹಾರದ ಹಿತಾಸಕ್ತಿಗಳಿಗೆ ಹತ್ತಿರವಿರುವ ಸಚಿವಾಲಯಗಳು ತನಗೆ ಬೇಕು ಎಂದು ಜೆಡಿಯು ಕೇಳಿದೆ. ಜೆಡಿಎಸ್‌ ಮುಖಂಡ ಎಚ್‌ಡಿ ಕುಮಾರಸ್ವಾಮಿ, ಕೃಷಿ ಖಾತೆ ಕೊಟ್ಟರೆ ನಿಭಾಯಿಸುವುದಾಗಿ ಮೊದಲೇ ಹೇಳಿದ್ದಾರೆ.

VISTARANEWS.COM


on

hd kumaraswamy nitish kumar
Koo

ಹೊಸದಿಲ್ಲಿ: ಈ ಬಾರಿ ಕೇಂದ್ರ ಸಂಪುಟ (Central Cabinet) ರಚನೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ಕಗ್ಗಂಟಾಗಲಿದೆ ಎಂಬ ಸೂಚನೆಗಳು ಮೊದಲ ದಿನವೇ ದೊರೆತಿವೆ. ಮುಖ್ಯ ಇಲಾಖೆಗಳಿಗೆ ಎನ್‌ಡಿಎಯ (NDA) ಬಲಿಷ್ಠ ಮಿತ್ರ ಪಕ್ಷಗಳಾದ ಟಿಡಿಪಿ (TDP) ಹಾಗೂ ಜೆಡಿಯು (JDU) ಡಿಮ್ಯಾಂಡ್‌ ಮಾಡಿವೆ. ಕೃಷಿ ಖಾತೆಯನ್ನು (agriculture ministry) ನಿತೀಶ್‌ ಕುಮಾರ್‌ (Nitish Kumar) ಕೇಳಿದ್ದು, ಇತ್ತ ಕರ್ನಾಟಕದಿಂದ ಎಚ್‌.ಡಿ ಕುಮಾರಸ್ವಾಮಿ (HD Kumaraswamy) ಕೂಡ ಕೃಷಿ ಇಲಾಖೆ ಅಪೇಕ್ಷಿಸಿದ್ದಾರೆ.

ಬಿಹಾರದ ಜೆಡಿಯು ಈ ಬಾರಿ ಮೂರು ಕ್ಯಾಬಿನೆಟ್ ಸ್ಥಾನಗಳ ಜೊತೆಗೆ ಕೆಲವು ಸಹಾಯಕ ಸಚಿವ ಸ್ಥಾನಗಳ ಮೇಲೂ ಕಣ್ಣಿಟ್ಟಿದೆ ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ಕೃಷಿ, ಗ್ರಾಮೀಣಾಭಿವೃದ್ಧಿ ಮತ್ತು ಜಲಶಕ್ತಿಯಂತಹ, ಬಿಹಾರದ ಹಿತಾಸಕ್ತಿಗಳಿಗೆ ಹತ್ತಿರವಿರುವ ಸಚಿವಾಲಯಗಳು ತನಗೆ ಬೇಕು ಎಂದು ಜೆಡಿಯು ಕೇಳಿದೆ. ಪಾರ್ಟಿಯ ಹಿರಿಯ ಸಂಸದ ಲಲ್ಲನ್ ಸಿಂಗ್ ಸಚಿವರಾಗುವ ಸಾಧ್ಯತೆಗಳು ಇವೆ ಎಂಬ ಊಹಾಪೋಹವೂ ಇದೆ. ರಾಜ್ಯದ ಸಂಸದೆ ಶೋಭಾ ಕರಂದ್ಲಾಜೆ ಕಳೆದ ಅವಧಿಯಲ್ಲಿ ಕೃಷಿ ಮತ್ತು ಕೃಷಿಕರ ಕಲ್ಯಾಣ ಖಾತೆಯ ಸಹಾಯಕ ಸಚಿವರಾಗಿದ್ದರು.

ಇತ್ತ ರಾಜ್ಯದಿಂದ ಇಬ್ಬರು ಸಂಸದರನ್ನು ಆರಿಸಿ ಕಳಿಸಿರುವ ಜೆಡಿಎಸ್‌ ಕೂಡ ಕೃಷಿ ಖಾತೆಯನ್ನು ಅಪೇಕ್ಷಿಸಿದೆ. ಸ್ವತಃ ಜೆಡಿಎಸ್‌ ಮುಖಂಡ ಎಚ್‌ಡಿ ಕುಮಾರಸ್ವಾಮಿ, ಕೃಷಿ ಖಾತೆ ಕೊಟ್ಟರೆ ನಿಭಾಯಿಸುವುದಾಗಿ ಮೊದಲೇ ಹೇಳಿದ್ದಾರೆ. ನಮಗೆ ಎರಡು ಸಚಿವ ಸ್ಥಾನ ಬೇಕು ಎಂದು ಎಚ್‌ಡಿಕೆ ಬೇಡಿಕೆ ಇಟ್ಟಿದ್ದಾರೆ. ನಿನ್ನೆ ಎನ್‌ಡಿಎ ಸಭೆಗಾಗಿ ದಿಲ್ಲಿ ತಲುಪಿದಾಗಲೇ ಈ ಬಗೆಗೆ ಎಚ್‌ಡಿಕೆ ಮಾತನಾಡಿದ್ದರು. ಆದರೆ ಸಭೆಯಲ್ಲಿ ಈ ಬಗ್ಗೆ ಏನೂ ಮಾತಾಡಿರಲಿಲ್ಲ. ಸಭೆಯಲ್ಲಿ ಖಾತೆಗಳ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆಯಲಿಲ್ಲ. ಮೊದಲು ಸರ್ಕಾರ ರಚನೆಯಾಗಲಿ, ನಂತರ ಖಾತೆಗಳ ಹಂಚಿಕೆ ಬಗ್ಗೆ ಮಾತಾಡೋಣ ಎಂಬ ಒಪ್ಪಂದಕ್ಕೆ ಎಲ್ಲರೂ ಬಂದಿದ್ದಾರೆ.

“ಎನ್‌ಡಿಎ ಮೈತ್ರಿಕೂಟದ ಭಾಗವಾಗಿ ನಾವಿದ್ದೇವೆ. ನಮ್ಮನ್ನು ಪರಿಗಣಿಸಿ ಸೂಕ್ತ ಸ್ಥಾನ ಮಾನ ನೀಡಬೇಕು. ಜೆಡಿಎಸ್‌ಗೆ ಒಂದು ಸ್ಥಾನ ನೀಡಬೇಕು. ನನಗೆ ಕೃಷಿ ಖಾತೆಯಲ್ಲಿ ಬಹಳ ಆಸಕ್ತಿ ಇದೆ. ಹಾಗಾಗಿ ನನಗೆ ಕೃಷಿ ಖಾತೆ ನೀಡಿ” ಎಂದಿರುವ ಕುಮಾರಸ್ವಾಮಿ, ಆರೋಗ್ಯ ಖಾತೆಯನ್ನು ಡಾ.ಸಿಎನ್ ಮಂಜುನಾಥ್ ಅವರಿಗೆ ನೀಡುವಂತೆಯೂ ಅವರ ಪರ ಬ್ಯಾಟಿಂಗ್‌ ಮಾಡಿದ್ದಾರೆ. ಆರೋಗ್ಯ ಸೇವೆಯ ಬಗ್ಗೆ ಹೆಚ್ಚಿನ ತಿಳಿವಳಿಕೆ ಹೊಂದಿರುವ ಡಾ.ಮಂಜುನಾಥ್‌ ಅವರಿಗೆ ಅದೇ ಇಲಾಖೆಯಲ್ಲೇ ಒಂದು ಸ್ಥಾನ ಸಿಗಬಹುದು ಎಂದು ರಾಜ್ಯದ ಜನತೆಯೂ ನಿರೀಕ್ಷಿಸುತ್ತಿದೆ.

ಮೈತ್ರಿಧರ್ಮವನ್ನು ಪರಿಗಣಿಸಿ ಮೋದಿ ಯಾವ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂಬುದು ರಹಸ್ಯವಾಗಿದೆ. ಯಾಕೆಂದರೆ 12 ಸಂಸದರನ್ನು ಆರಿಸಿ ಎನ್‌ಡಿಎಗೆ ಬಲ ತುಂಬಿರುವ ಜೆಡಿಯು ಬೇಡಿಕೆಯನ್ನು ಮೋದಿ ನಿರ್ಲಕ್ಷಿಸಲು ಸಾಧ್ಯವಿಲ್ಲ. ಆದರೆ ಜೆಡಿಎಸ್‌ಗೂ ಒಂದು ಇಲಾಖೆ ಕೊಡುವುದು ಅಗತ್ಯವಾಗಿದೆ. ಕೃಷಿ ಖಾತೆಗೆ ಜೆಡಿಯು ಪಟ್ಟುಹಿಡಿದರೆ ಎಚ್‌ಡಿಕೆ ಅದನ್ನು ಪಡೆಯುವುದು ಕಷ್ಟವಾಗಬಹುದು. ಹೀಗಾಗಿ ಕೃಷಿ ಖಾತೆ ಯಾರಿಗೆ ಸೇರಲಿದೆ, ಕುಮಾರಸ್ವಾಮಿ ಅವರಿಗೆ ಯಾವ ಖಾತೆ ದೊರೆಯಲಿದೆ ಎಂದು ಕುತೂಹಲ ಇದೀಗ ಗರಿಗೆದರಿದೆ.

ಶನಿವಾರ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವುದು ಖಚಿತವಾಗಿದೆ. ಅಂದು ಮೋದಿಯವರ ಜೊತೆಗೆ ಯಾರ್ಯಾರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂಬುದು ಗೊತ್ತಾಗಲಿದೆ. ಬಹುಶಃ ಖಾತೆ ಹಂಚಿಕೆಗಳು ಆ ಬಳಿಕ ನಡೆಯಲಿವೆ.

ಇದನ್ನೂ ಓದಿ: HD Kumaraswamy: ಕೃಷಿ ಖಾತೆ ಬಯಸಿದ್ದ ಎಚ್‌ಡಿಕೆ ಎನ್‌ಡಿಎ ಮೈತ್ರಿಕೂಟದ ಸಭೆಯಲ್ಲಿ ತುಟಿ ಬಿಚ್ಚಲೇ ಇಲ್ಲ!

Continue Reading

ಕ್ರೈಂ

ಯುವಕನ ಕಾಲರ್ ಪಟ್ಟಿ ಹಿಡಿದು ಜಾಡಿಸಿ ಒದ್ದ ಯುವತಿ; ಎರಡು ಕೈ ಮೇಲೆತ್ತಿ ಬೈಕ್‌ ಸವಾರಿ, ಸವಾರನ ಹುಚ್ಚಾಟಕ್ಕೆ ಕಿಡಿ

Assault Case : ವಿಜಯಪುರದಲ್ಲಿ ಬೈಕ್‌ ಸವಾರನ ಹುಚ್ಚಾಟಕ್ಕೆ ಸ್ಥಳೀಯರು ದಂಗಾಗಿದ್ದರು. ಬೆಂಗಳೂರಲ್ಲಿ ಆಟೋ ಚಾಲಕನೊಬ್ಬ ಕಿರಿಕ್‌ ತೆಗೆದು ಬೈಕ್‌ ಟ್ಯಾಕ್ಸಿ ಚಾಲಕನಿಗೆ ಥಳಿಸಿರುವ ಘಟನೆ ನಡೆದಿದೆ. ರಾಯಚೂರಿನಲ್ಲಿ ಯುವತಿಯೊಬ್ಬಳು ಯುವಕನ ಕಾಲರ್‌ ಪಟ್ಟಿ ಹಿಡಿದು ಜಾಡಿಸಿ ಒದ್ದಿದ್ದಾಳೆ.

VISTARANEWS.COM


on

By

A rider standing on a bike and Young man and woman fight in road
Koo

ವಿಜಯಪುರ/ರಾಯಚೂರು/ಬೆಂಗಳೂರು: ವಿಜಯಪುರದಲ್ಲಿ ಸವಾರನೊಬ್ಬನ ಹುಚ್ಚಾಟಕ್ಕೆ ಸಹ ಸವಾರರು ಆತಂಕ ಪಡುವಂತಾಗಿತ್ತು. ಬೈಕ್‌ ಮೇಲೆಯೇ ನಿಂತು, ಎರಡು ಕೈ ಮೇಲೆತ್ತಿ ನಡುರಸ್ತೆಯಲ್ಲಿ ವಾಹನ ಚಲಾಯಿಸಿ ಹುಚ್ಚಾಟ (Bike Rider) ಮೆರೆದಿದ್ದಾನೆ. ವಿಜಯಪುರ ನಗರದ ಬಸ್ ನಿಲ್ದಾಣದಿಂದ ಕೋರ್ಟ್ ಮಾರ್ಗದಲ್ಲಿ ನಿನ್ನೆ ಬುಧವಾರ ರಾತ್ರಿ ಘಟನೆ ನಡೆದಿದೆ. ಬೈಕ್ ಸವಾರನ ಹುಚ್ಚಾಟ ಕಂಡು ಸ್ಥಳೀಯರು ದಂಗಾದರು. ಕುಡಿದ ಮತ್ತಿನಲ್ಲಿ ಈ ರೀತಿ ಮಾಡಿರಬಹುದೆಂದು ಶಂಕಿಸಲಾಗಿದೆ. ವಿಜಯಪುರ (Vijayapura News) ನಗರದ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಆಟೋ ಚಾಲಕನಿಂದ ಬೈಕ್‌ ಟ್ಯಾಕ್ಸಿ ಚಾಲಕನಿಗೆ ಹಲ್ಲೆ

ಬೆಂಗಳೂರಲ್ಲಿ ಆಟೋ ಚಾಲಕನಿಂದ ಬೈಕ್ ಟ್ಯಾಕ್ಸಿ ಚಾಲಕ ನಂದಕಿಶೋರ್ ಎಂಬಾತನ ಮೇಲೆ ಹಲ್ಲೆ (Assault Case) ನಡೆದಿದೆ. ಬೆಂಗಳೂರಿನ 80 ಫೀಟ್ ರೋಡ್ ಕೋರಮಂಗಲ ಬಳಿ ಘಟನೆ ನಡೆದಿದೆ. ಬೈಕ್ ಚಾಲಕನಿಗೆ ತಿಳಿಯದ ರೀತಿಯಲ್ಲಿ ಆಟೋ ಚಾಲಕ ಗಾಡಿಯ ಕೀ ಕದ್ದಿದ್ದ. ಈ ಸಂಬಂಧ ಮಾತಿಗೆ ಮಾತು ಬೆಳೆದಿದೆ.

ಬೈಕ್ ಟ್ಯಾಕ್ಸಿ ಎಂಬ ನೆಪದಲ್ಲಿ ಆಟೋಚಾಲಕ ಮೊಬೈಲ್ ಕಿತ್ತು ಹಲ್ಲೆ ನಡೆಸಿದ್ದಾನೆ. ಈಗಾಗಲೆ ಹೈಕೋರ್ಟ್ ಕೂಡ ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ಹಲ್ಲೆ ನಡೆಸದಂತೆ ನಿರ್ದೇಶನ ನೀಡಿದೆ. ಆದರೂ ಆಟೋ ಹಾಗು ಬೈಕ್ ಟ್ಯಾಕ್ಸಿ ಚಾಲಕರ ನಡುವೆ ಜಟಾಪಟಿ ಮುಂದುವರಿದೆ. ಘಟನೆ ಬಗ್ಗೆ ಮೊಬೈಲ್ ರೆಕಾರ್ಡ್ ಮಾಡಿ ಬೈಕ್ ಟ್ಯಾಕ್ಸಿ ಚಾಲಕ ದೂರು ನೀಡಿದ್ದಾರೆ.

ಕಾಲರ್ ಪಟ್ಟಿ ಹಿಡಿದು ಜಾಡಿಸಿ ಒದ್ದ ಯುವತಿ

ರಾಯಚೂರು ನಗರದ ಲೋಕಾಯುಕ್ತ ಪೊಲೀಸ್ ಠಾಣೆ ಎದುರಿಗೆ ಯುವಕ ಯುವತಿ ಹೊಡೆದಾಡಿಕೊಂಡಿದ್ದಾರೆ. ಯುವಕನ ಕಾಲರ್ ಪಟ್ಟಿ ಹಿಡಿದ ಯುವತಿ ಜಾಡಿಸಿ ಒದ್ದಿದ್ದಾಳೆ. ಬಳಿಕ ಜಗಳವಾಡುತ್ತಾ ಲೋಕಾಯುಕ್ತ ಪೊಲೀಸ್ ಠಾಣೆಗೆ ತೆರಳಿ‌ದ್ದಾರೆ. ಈ ವೇಳೆ ಪೊಲೀಸರು ಇಬ್ಬರನ್ನು ಬೈದು ಠಾಣೆಯಿಂದ ಕಳುಹಿಸಿದ್ದಾರೆ. ಇತ್ತ ಇವರಿಬ್ಬರ ಪರಸ್ಪರ ಹೊಡೆದಾಟ ದೃಶ್ಯವನ್ನು ಸಾರ್ವಜನಿಕರು ನೋಡುತ್ತಾ ನಿಂತಿದ್ದರು. ಸದ್ಯ ಇವರಿಬ್ಬರ ಗಲಾಟೆಗೆ ಏನು ಕಾರಣ ಎಂಬುದು ತಿಳಿದು ಬಂದಿಲ್ಲ. ಪಶ್ಚಿಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Food Poisoning : ಇಲಿ ಬಿದ್ದ ಪಲ್ಯ ಸೇವಿಸಿದ ಎಸ್‌ ವ್ಯಾಸ ಕಾಲೇಜು ವಿದ್ಯಾರ್ಥಿಗಳಿಗೆ ವಾಂತಿ

ಚಲಿಸುತ್ತಿದ್ದ ಕ್ರೇನ್‌ ಮೇಲೆ ಬಿದ್ದ ಮರ

ಉಡುಪಿಯ ಬ್ರಹ್ಮಾವರ ತಾಲೂಕು ಬೆಣ್ಣೆಕುದ್ರು ಬಾರ್ಕೂರು ಪಾಂಡೇಶ್ವರ ರಸ್ತೆಯಲ್ಲಿ ಚಲಿಸುತ್ತಿದ್ದ ಕ್ರೇನ್ ಮೇಲೆ ಬೃಹತ್ ಗಾತ್ರದ ಮರವೊಂದು ಬಿದ್ದಿದೆ. ಮರ ಬಿದ್ದ ರಭಸಕ್ಕೆ ಕ್ರೇನ್ ಹಾಗೂ ವಿದ್ಯುತ್ ಕಂಬ ಜಖಂಗೊಂಡಿತ್ತು. ಬೆಣ್ಣೆ ಕುದ್ರುವಿನಲ್ಲಿ ನಡೆಯುತ್ತಿರುವ ಕಾಮಗಾರಿ ಮುಗಿಸಿ ಬರುತ್ತಿದ್ದಾಗ ಘಟನೆ ನಡೆದಿದೆ. ಈ ಘಟನೆಯಿಂದಾಗಿ ಸುಮಾರು 2 ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ಮೆಸ್ಕಾಂ ಸಿಬ್ಬಂದಿ ಮತ್ತು ಸಾರ್ವಜನಿಕರ ನೆರವಿನಿಂದ ಮರ ತೆರವು ಕಾರ್ಯ ನಡೆಯಿತು.

ಬಿಯರ್ ತುಂಬಿದ ಲಾರಿ ಪಲ್ಟಿ; ಎಣ್ಣೆಗಾಗಿ ಮುಗಿಬಿದ್ದ ಜನ

ರಾಯಚೂರು ತಾಲೂಕಿನ ಹೆಗ್ಗಸನಹಳ್ಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಿಯರ್‌ ತುಂಬಿದ್ದ ಲಾರಿಯು ಪಲ್ಟಿಯಾಗಿದೆ. ವಾಹನ ಪಲ್ಟಿಯಾಗುತ್ತಿದ್ದಂತೆ ಬಿಯರ್ ಬಾಟಲ್ ರಸ್ತೆ ಮಧ್ಯೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಇದನ್ನು ಕಂಡ ಬಿಯರ್ ಪ್ರಿಯರು ಬಾಟಟ್‌ಗಾಗಿ ಮುಗಿ ಬಿದ್ದರು. ಬಿಯರ್ ಡಬ್ಬಿಗೆ ಒಮ್ಮೆಲೆ ಜನ ಮುಗಿ ಬಿದ್ದ ಕಾರಣ ಕೆಲಹೊತ್ತು ರಸ್ತೆ ಸಂಚಾರ ಸ್ಥಗಿತವಾಗಿತ್ತು. ಟ್ರಾಫಿಕ್ ಜಾಂನಿಂದ ವಾಹನ ಸವಾರರು ಹೈರಾಣಾದರು. ರಾಯಚೂರು ಗ್ರಾಮಾಂತರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Valmiki Corporation Scam: ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ; ಸಚಿವ ನಾಗೇಂದ್ರ ರಾಜೀನಾಮೆ

Valmiki Corporation Scam: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಭಾಗಿಯಾದ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಯುವಜನ ಸೇವಾ, ಕ್ರೀಡಾ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ಸಲ್ಲಿಸಿದ್ದಾರೆ.

VISTARANEWS.COM


on

Valmiki Corporation Scam
Koo

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದಲ್ಲಿ ಮೊದಲ ವಿಕೆಟ್‌ ಪತನವಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ (Valmiki Corporation Scam) ಆರೋಪಗಳು ಕೇಳಿಬಂದಿದ್ದರಿಂದ ಯುವಜನ ಸೇವಾ, ಕ್ರೀಡಾ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ರಾಜೀನಾಮೆ ಸಲ್ಲಿಸಿದ್ದಾರೆ.

ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಾಯಕರು ರಾಜಭವನ ಚಲೋ ನಡೆಸಿ, ರಾಜ್ಯಪಾಲರಿಗೆ ಗುರುವಾರ ಬೆಳಗ್ಗೆ ಮನವಿ ಪತ್ರಸಲ್ಲಿಸಿದ್ದರು. ನಂತರ ಸಚಿವ ಸ್ವಯಂ ಪ್ರೇರಿತವಾಗಿಯೇ ರಾಜೀನಾಮೆ ನೀಡಲಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದರು. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಪ್ರಕರಣದಲ್ಲಿ ಸಿಬಿಐ ಎಂಟ್ರಿಯಾದರೆ ಸರ್ಕಾರಕ್ಕೂ ಸಂಕಷ್ಟ ಎದುರಾಗಲಿದೆ. ಹೀಗಾಗಿ ಅವ್ಯವಹಾರದಲ್ಲಿ ಭಾಗಿಯಾಗಿರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುವಂತೆ ಸಚಿವ ಬಿ.ನಾಗೇಂದ್ರಗೆ (B Nagendra) ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದರು. ಹೀಗಾಗಿ ಸಚಿವ ರಾಜೀನಾಮೆ ಸಲ್ಲಿಸಿದ್ದಾರೆ.

ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಈಗಾಗಲೇ ಎಸ್‌ಐಟಿ ರಚಿಸಿದೆ. ಒಂದು ವೇಳೆ ಸಿಬಿಐ ಎಂಟ್ರಿಯಾದರೆ ಎಸ್‌ಐಟಿಗೆ ತನಿಖೆ ನಡೆಸುವ ಅವಕಾಶ ಇರಲ್ಲ. ಹೀಗಾಗಿ ಸಿಬಿಐ ತನಿಖೆ ಬಿಸಿ ತಟ್ಟುವ ಮುನ್ನ ನಾಗೇಂದ್ರ ರಾಜಿನಾಮೆ ಪಡೆಯುವುದು ಸೂಕ್ತ ಎನ್ನುವ ಅಭಿಪ್ರಾಯ ವ್ಯಕ್ತವಾಗಿತ್ತು.

ಅಕ್ರಮ ಹಣ ವರ್ಗಾವಣೆ ಸಂಬಂಧ ಈಗಾಗಲೇ ನಿಗಮದ ಎಂಡಿ ಸೇರಿದಂತೆ ಪ್ರಕರಣದಲ್ಲಿ ಹೆಸರು ಕೇಳಿಬಂದ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಪ್ರಕರಣದ ತನಿಖೆಯನ್ನು CIDಗೆ ವಹಿಸಲಾಗಿದೆ. ಹೀಗಾಗಿ ಪ್ರಕರಣದಿಂದ ಸರ್ಕಾರಕ್ಕೆ ಮುಖಭಂಗವಾಗಬಾರದು ಎಂದು ಸಚಿವ ನಾಗೇಂದ್ರ ಅವರಿಗೆ ರಾಜೀನಾಮೆ ನೀಡಲು ಸಿಎಂ ಸೂಚಿಸಿದ್ದರು. ಪ್ರಕರಣದ ತನಿಖೆಯ ನಂತರ ಸಂಪುಟಕ್ಕೆ ಮತ್ತೆ ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು ಸಿಎಂ ತಿಳಿಸಿದ್ದರು.

ಅಕ್ರಮ ಹಣ ವರ್ಗಾವಣೆಯ (Illegal Money transfer) ಗಂಭೀರ ಸ್ವರೂಪದ ಪ್ರಕರಣ ಇದಾಗಿರುವುದರಿಂದ ಈಗಾಗಲೇ ಸಿಐಡಿ ತನಿಖೆಗೆ ಸರ್ಕಾರ ನೀಡಿತ್ತು. ಆದರೆ ಪ್ರತಿಪಕ್ಷಗಳು ಸಿಬಿಐ ತನಿಖೆಗೆ ನೀಡಲು ಒತ್ತಾಯಿಸುತ್ತಿವೆ. RBI ರೂಲ್ಸ್ ಪ್ರಕಾರ, 10 ಕೋಟಿಗೂ ಹೆಚ್ಚು ಹಣ ಅಕ್ರಮವಾಗಿ ವರ್ಗಾವಣೆಯಾದ ಹಿನ್ನೆಲೆಯಲ್ಲಿ, ಈ ಪ್ರಕರಣವನ್ನು ಸಿಬಿಐ ಕೂಡ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ.

ಈ ಪ್ರಕರಣವನ್ನು ಸಿಬಿಐಗೆ ಕೊಡುವಂತೆ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿದೆ. ಮೂರು ಕೋಟಿಗೂ ಹೆಚ್ಚು ಬ್ಯಾಂಕ್ ವ್ಯವಹಾರದಲ್ಲಿ ಅವ್ಯವಹಾರವಾಗಿದ್ದರೆ ಸಿಬಿಐ ಎಂಟ್ರಿ ಆಗಬಹುದು.

ಏನಿದು ಪ್ರಕರಣ?

ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಅವರು ಮೇ 26ರಂದು ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಗಮದ 187 ಕೋಟಿ ರೂ.ಗಳನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ, ಇದರಲ್ಲಿ 88 ಕೋಟಿ ಹಣ ದುರುಪಯೋಗವಾಗಿದೆ ಎಂದು ಅವರು ಡೆತ್‌ನೋಟ್‌ನಲ್ಲಿ ಬರೆದಿದ್ದರು. ಹೀಗಾಗಿ ಎಂಡಿ ಮತ್ತು ಲೆಕ್ಕಾಧಿಕಾರಿಯನ್ನು ಅಮಾನತು ಮಾಡಲಾಗಿತ್ತು. ನಂತರ ಅಧಿಕಾರಿಗಳ ಬಂಧನವಾಗಿತ್ತು.

ಚಂದ್ರಶೇಖರ್‌ ಬರೆದಿರುವ ಡೆತ್ ನೋಟ್‌ನಲ್ಲಿ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ ಹಾಗೂ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಸುಚಿಸ್ಮಿತಾ ಅವರೇ ನನ್ನ ಸಾವಿಗೆ ಕಾರಣ ಎಂದು ಬರೆದಿಟ್ಟಿದ್ದರು. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ. ವಾಲ್ಮೀಕಿ ನಿಗಮಕ್ಕೆ ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಾಗಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಕೆ. ಆರ್. ರಾಜ್ ಕುಮಾರ್ ಅವರನ್ನು ನೇಮಿಸಿದೆ.

ಇದನ್ನೂ ಓದಿ | Prajwal Revanna Case : ಪೆನ್​ಡ್ರೈವ್ ಸಾರ್ವಜನಿಕ ಸ್ಥಳಗಳಲ್ಲಿ ಸಿಗುವುದರಿಂದ ಹಿಡಿದು ಪ್ರಜ್ವಲ್ ಬಂಧನದವರೆಗೆ; ಪ್ರಕರಣದ ಟೈಮ್​ಲೈನ್​ ಇಲ್ಲಿದೆ

ಪ್ರಕರಣದಲ್ಲಿ ಸರ್ಕಾರದ ಪೂರ್ವ ಅನುಮತಿ ಪಡೆದು ಬ್ಯಾಂಕ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂ.ಡಿ & ಸಿಇಒ ಹಾಗೂ ಎಲ್ಲಾ ನಿರ್ದೇಶಕರು ಸೇರಿ 6 ಬ್ಯಾಂಕ್ ಅಧಿಕಾರಿಗಳ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ. ಇನ್ನು 88 ಕೋಟಿ ದುರುಪಯೋಗ ಹಣವನ್ನು ಈಗಾಗಲೇ ಮುಖ್ಯ ಖಾತೆಗೆ ಅಧಿಕಾರಿಗಳು ವಾಪಸ್ ಪಡೆಯುತ್ತಿದ್ದಾರೆ. ಶಿವಮೊಗ್ಗ ಮತ್ತು ಬೆಂಗಳೂರಿನ ಸಿಐಡಿ ಅಧಿಕಾರಿಗಳು ಪ್ರಕರಣದ ತನಿಖೆ ಚುರುಕುಗೊಳಿಸಿದ್ದಾರೆ.

Continue Reading
Advertisement
Love Jihad
ಪ್ರಮುಖ ಸುದ್ದಿ4 mins ago

Love jihad : ಬಿಹಾರದ ಹಿಂದೂ ಯುವತಿಯನ್ನು ಉತ್ತರಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ ಆರಿಫ್; ಲವ್​ ಜಿಹಾದ್ ಆರೋಪ

Road Accident
ಕ್ರೈಂ5 mins ago

Road Accident : ಬೈಕ್‌ಗಳಿಗೆ ಗುದ್ದಿ ಸವಾರರನ್ನು ಕೊಂದು ಪರಾರಿಯಾಗಲು ಯತ್ನಿಸಿದ ಕಾರು ಚಾಲಕ

Election Results 2024
ದೇಶ14 mins ago

Election Results 2024: ರಾಮನೂರಿನಲ್ಲೇ ಬಿಜೆಪಿ ಹಿನ್ನಡೆ; ಹೀನಾಯ ಸೋಲಿಗೆ ಕಾರಣ ಏನು?

Sonu Nigam Hit Backs To Ayodhya People For Not Vote For BJP
ಬಾಲಿವುಡ್18 mins ago

Sonu Nigam: ಅಯೋಧ್ಯೆ ಜನರಿಗೆ ಛೀಮಾರಿ ಹಾಕಿದ್ರಾ ಸೋನು ನಿಗಮ್?

K Annamalai
ವೈರಲ್ ನ್ಯೂಸ್21 mins ago

K Annamalai: ಮೇಕೆಯ ತಲೆಗೆ ಅಣ್ಣಾಮಲೈ ಫೋಟೊ ಅಂಟಿಸಿ ಕಡಿದ ಡಿಎಂಕೆ ಕಾರ್ಯಕರ್ತರು!

hd kumaraswamy nitish kumar
ಪ್ರಮುಖ ಸುದ್ದಿ24 mins ago

HD Kumaraswamy: ಎಚ್‌ಡಿ ಕುಮಾರಸ್ವಾಮಿ ಕೇಳಿದ ಕೃಷಿ ಖಾತೆ ಮೇಲೇ ನಿತೀಶ್‌ ಕಣ್ಣು; ಯಾರಿಗೆ ಒಲಿಯತ್ತೆ ಇಲಾಖೆ?

Virat Kohli
ಕ್ರೀಡೆ28 mins ago

Virat Kohli: ‘ಕೊಹ್ಲಿ ಕೊ ಬೌಲಿಂಗ್​ ದೋ’ ನ್ಯೂಯಾರ್ಕ್​ ಸ್ಟೇಡಿಯಂನಲ್ಲಿ ಮೊಳಗಿದ ಅಭಿಮಾನಿಗಳ ಕೂಗು

Kannada Serials TRP arce Ninagaagi shri gowri
ಕಿರುತೆರೆ40 mins ago

Kannada Serials TRP: ಟಿಆರ್‌ಪಿ ರೇಸ್‌ನಲ್ಲಿ ʻಶ್ರೀಗೌರಿ,ʼ ʻನಿನಗಾಗಿʼ; ʻಅಮೃತಧಾರೆʼ ಜಿಗಿತ!

A rider standing on a bike and Young man and woman fight in road
ಕ್ರೈಂ50 mins ago

ಯುವಕನ ಕಾಲರ್ ಪಟ್ಟಿ ಹಿಡಿದು ಜಾಡಿಸಿ ಒದ್ದ ಯುವತಿ; ಎರಡು ಕೈ ಮೇಲೆತ್ತಿ ಬೈಕ್‌ ಸವಾರಿ, ಸವಾರನ ಹುಚ್ಚಾಟಕ್ಕೆ ಕಿಡಿ

Valmiki Corporation Scam
ಪ್ರಮುಖ ಸುದ್ದಿ1 hour ago

Valmiki Corporation Scam: ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ; ಸಚಿವ ನಾಗೇಂದ್ರ ರಾಜೀನಾಮೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ4 hours ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ3 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು5 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌