Site icon Vistara News

Accident news | ಬೆಂಗಳೂರು- ಮೈಸೂರು ದಶಪಥದಲ್ಲಿ ಅಪಘಾತ, 2 ಸಾವು, ಹಲವರಿಗೆ ಗಾಯ

accident news

ರಾಮನಗರ: ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಸಾವಿಗೀಡಾಗಿ ಹಲವರಿಗೆ ಗಂಭೀರ ಗಾಯಗಳಾಗಿವೆ.

ಚನ್ನಪಟ್ಟಣ ತಾಲೂಕಿನ ಮುದುಗೆರೆ ಗೇಟ್ ಬಳಿ ಶನಿವಾರ ಮುಂಜಾನೆ ಸಂಭವಿಸಿದ ಅಪಘಾತದಲ್ಲಿ ಕ್ಯಾಂಟರ್‌ಗೆ ಟಿಟಿ ಡಿಕ್ಕಿಯಾಗಿದೆ. ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತರನ್ನು ಪಾಂಡವಪುರ ತಾಲೂಕಿನ ಚಿಕ್ಕಾಡೆ ಗ್ರಾಮದ ಮಹೇಶ್, ಕೃಷ್ಣ ಎಂದು ಗುರುತಿಸಲಾಗಿದೆ. ಹಲವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

ಟೆಂಪೊ ಟ್ರಾವೆಲರ್‌ನಲ್ಲಿದ್ದವರು ತಿರುಪತಿಗೆ ಭೇಟಿ ನೀಡಿ ಹಿಂದಿರುಗುತ್ತಿದ್ದರು. ದಶಪಥದಲ್ಲಿದ್ದ ಕ್ಯಾಂಟರ್‌ಗೆ ಟಿಟಿ ಹಿಂಬದಿಯಿಂದ ತೀವ್ರ ವೇಗದಿಂದ ಬಂದು ಡಿಕ್ಕಿ ಹೊಡೆದಿದೆ. ಬಹುಶಃ ಚಾಲಕ ನಿದ್ರಾವಶನಾಗಿದ್ದರಿಂದ ಹೀಗಾಗಿರಬಹುದು ಎಂದು ಶಂಕಿಸಲಾಗಿದೆ. ಡಿಕ್ಕಿಯಾದ ರಭಸಕ್ಕೆ ಟಿಟಿ ವಾಹನದ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿ | Bus accident | ಶಾಲಾ ಪ್ರವಾಸದ ಬಸ್ ಪಲ್ಟಿ, 4 ಮಕ್ಕಳು ಸೇರಿ 7 ಮಂದಿಗೆ ಗಾಯ

Exit mobile version