Site icon Vistara News

Actor Darshan: ಅವರ ಋಣ ನಮ್ಮ ಕುಟುಂಬದ ಮೇಲಿದೆ… ದರ್ಶನ್‌ ಭೇಟಿ ಬಳಿಕ ರಚಿತಾ ರಾಮ್‌ ಕಣ್ಣೀರು

Actor Darshan

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್‌(Actor Darshan) ಅವರನ್ನು ಪರಪ್ಪನ ಅಗ್ರಹಾರ ಜೈಲಿ(Parappana Agrahara)ನಲ್ಲಿ ಡಿಂಪಲ್ ಕ್ವೀನ್ ರಚಿತಾ ರಾಮ್(Rachita Ram) ಭೇಟಿಯಾಗಿದ್ದಾರೆ. ಇತ್ತೀಚೆಗಷ್ಟೇ ನನ್ನ ಗುರು ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದ ರಚಿತಾರಾಮ್‌ ಇಂದು ಮಧ್ಯಾಹ್ನ ಮೂರು ಗಂಟೆ ನಂತರ ದರ್ಶನ್ ಆಪ್ತ ಸಚ್ಚಿದಾನಂದ್ ಜೊತೆಗೆ ಜೈಲಿಗೆ ಆಗಮಿಸಿದ್ದಾರೆ. ಇದೇ ವೇಳೆ ಮಾತನಾಡಿದ ಅವರು ರಾಜನನ್ನ ರಾಜನ ರೀತಿ ನೋಡೋಕೆ ನನಗಿಷ್ಟ, ಈ ರೀತಿಯಲ್ಲಿ ನೋಡೋಕೆ ಕಷ್ಟ ಆಗುತ್ತೆ ಎಂದಿದ್ದಾರೆ.

ನಟ ದರ್ಶನ್ ಅವಸ್ಥೆ ನೋಡಿ ಕಣ್ಣೀರು ಸುರಿಸಿದ ರಚಿತಾರಾಮ್‌ ಅವರಿಗೆ ಸ್ವತಃ ದರ್ಶನ್‌ ಅವರೇ ಸಾಂತ್ವನ ಹೇಳಿದ್ದಾರೆ. ಬಳಿಕ ನಟ ದರ್ಶನ್ ಯೋಗಕ್ಷೇಮ ವಿಚಾರಿಸಿದ್ದಾರೆ. ಕೆಲಹೊತ್ತು ಇಬ್ಬರೂ ಸಿನಿಮಾ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಇನ್ನು ಭೇಟಿ ಬಳಿಕ ಪತ್ರಕರ್ತರ ಜೊತೆ ಮಾತನಾಡಿದ ರಚಿತಾ, ದರ್ಶನ್ ಈ ಪ್ರಕರಣದಲ್ಲಿ ಭಾಗಿಯಾಗಿರೋದು ನಂಬಲು ಕಷ್ಟ ಅಂತಾ ತಿಳಿಸಿದ್ರು.

ಅವ್ರ ಬ್ಯಾನರ್‌ನಿಂದ ನಾನು ಇಂಡಸ್ಟ್ರಿಗೆ ಇಂಟ್ರಡ್ಯೂಸ್ ಆಗಿದ್ದು. ಅವ್ರು ನೋ ಅಂದಿದ್ರೆ.. ಬಿಂದ್ಯಾ ರಾಮ್ ರಚಿತಾ ರಾಮ್ ಆಗ್ತಿರಲಿಲ್ಲ. ಅವರ ಖುಣ ನಮ್ಮ ಕುಟುಂಬದ ಮೇಲೆ ಇದೆ. ಆದಷ್ಟು ಬೇಗ ನಮಗೆ ಒಳ್ಳೆಯ ಸುದ್ದಿ ಸಿಗಲಿ ಎಂದು ದೇವರಲ್ಲಿ ಕೇಳಿಕೊಳ್ತೀನಿ. ಸಿನಿಮಾರಂಗಕ್ಕೆ ನನ್ನನ್ನು ಪರಿಚಯಿಸಿದ ದರ್ಶನ್ ಅವರು ನನಗೆ ಗುರು ಸಮಾನರು. ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದ ಅವರು ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬುದನ್ನು ನಂಬಲು ಸ್ವಲ್ಪ ಕಷ್ಟ ಆಗುತ್ತಿದೆ ಎಂದರು.

ಇಂದು ಒಬ್ಬರನ್ನೊಬ್ಬರು ನೋಡಿದ ಕೂಡಲೇ ಇಬ್ಬರೂ ಭಾವುಕರಾದೆವು. ಅವ್ರೇ ನನಗೆ ಧೈರ್ಯ ಹೇಳಿದ್ರು ಸಮಾಧಾನ ಮಾಡಿದ್ರು. ದರ್ಶನ್ ಸರ್‌ ಅವರು ತುಂಬಾ ಆರೋಗ್ಯವಾಗಿದ್ದಾರೆ. ಕಷ್ಟ ಆಗುತ್ತದೆ ಅವರನ್ನ ಈ ರೀತಿ ನೋಡೋದು. ದರ್ಶನ್ ಅವರನ್ನ ಎಲ್ಲರೂ ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇವೆ. ಅವರ ಅಭಿಮಾನಿಗಳು ಕೂಡ ಎಷ್ಟು ಮಿಸ್ ಮಾಡಿಕೊಳ್ಳುತ್ತಾರೆ. ಪ್ಲೀಸ್ ಬೇಗ ಹೊರಗೆ ಬನ್ನಿ ಅಂತ ಹೇಳಿ ಬಂದೆ ಎಂದರು.

ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್ ತೂಗುದೀಪ, ನಟಿ ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ನಟ ದರ್ಶನ್ ಕಳೆದ 60 ದಿನಗಳಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲೇ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಿದ್ದಾರೆ.

ಇದನ್ನೂ ಓದಿ: Actor Darshan: ದರ್ಶನ್‌ಗೆ ಸದ್ಯಕ್ಕಿಲ್ಲ ಮನೆಯೂಟದ ಭಾಗ್ಯ; ಅರ್ಜಿ ವಿಚಾರಣೆ ಸೆ.5ಕ್ಕೆ ಮುಂದೂಡಿದ ಹೈಕೋರ್ಟ್

Exit mobile version