Actor Darshan: ದರ್ಶನ್ ಬಟ್ಟೆ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ; ಎಫ್‌ಎಸ್‌ಎಲ್ ವರದಿಯಲ್ಲಿ ದೃಢ - Vistara News

ಕರ್ನಾಟಕ

Actor Darshan: ದರ್ಶನ್ ಬಟ್ಟೆ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ; ಎಫ್‌ಎಸ್‌ಎಲ್ ವರದಿಯಲ್ಲಿ ದೃಢ

Actor Darshan: ಎಫ್‌ಎಸ್‌ಎಲ್ ವರದಿಯಲ್ಲಿ ಭಯಾನಕ ಸತ್ಯ ಹೊರಬಿದ್ದಿದೆ. ದರ್ಶನ್ ಮನೆಯಲ್ಲಿ ವಶಪಡಿಸಿಕೊಂಡಿದ್ದ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಹಾಗೂ ಕಪ್ಪು ರೌಂಡ್ ನೆಕ್ ಶರ್ಟ್ ಅನ್ನು ಎಫ್‌ಎಸ್‌ಎಲ್‌ಗೆ ಪೊಲೀಸರು ಕಳುಹಿಸಿದ್ದರು. ಪರಿಶೀಲನೆಯಲ್ಲಿ ದರ್ಶನ್ ಬಟ್ಟೆಯ ಮೇಲೆ ರಕ್ತದ ಕಲೆಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

VISTARANEWS.COM


on

Actor Darshan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇದೀಗ ಅತಿ ದೊಡ್ಡ ರಹಸ್ಯ ರಿವೀಲ್ ಆಗಿದೆ. ದರ್ಶನ್ ಬಟ್ಟೆಗಳ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆಗಳು ಸಿಕ್ಕಿದ್ದು, ಇದರಿಂದ ಪ್ರಕರಣದಲ್ಲಿ ದರ್ಶನ್‌ಗೆ (Actor Darshan) ಕಂಟಕವಾಗಲಿರುವ ಅತಿ ದೊಡ್ಡ ಸಾಕ್ಷ್ಯ ಪೊಲೀಸರಿಗೆ ಸಿಕ್ಕಂತಾಗಿದೆ.

ಎಫ್‌ಎಸ್‌ಎಲ್ ವರದಿಯಲ್ಲಿ ಭಯಾನಕ ಸತ್ಯ ಹೊರಬಿದ್ದಿದೆ. ದರ್ಶನ್ ಮನೆಯಲ್ಲಿ ವಶಪಡಿಸಿಕೊಂಡಿದ್ದ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಹಾಗೂ ಕಪ್ಪು ರೌಂಡ್ ನೆಕ್ ಶರ್ಟ್ ಅನ್ನು ಎಫ್‌ಎಸ್‌ಎಲ್‌ಗೆ ಪೊಲೀಸರು ಕಳುಹಿಸಿದ್ದರು. ಪರಿಶೀಲನೆಯಲ್ಲಿ ದರ್ಶನ್ ಬಟ್ಟೆಯ ಮೇಲೆ ರಕ್ತದ ಕಲೆಗಳು ಪತ್ತೆಯಾಗಿದ್ದವು. ಇವು ರೇಣುಕಾಸ್ವಾಮಿಯ ದೇಹದ ರಕ್ತ ಎಂಬುದು ಎಫ್‌ಎಸ್‌ಎಲ್ ವರದಿಯಲ್ಲಿ ಧೃಡವಾಗಿದೆ ಎನ್ನಲಾಗಿದೆ.

ಆಂಜನೇಯನ ಮೂರ್ತಿ ಜೊತೆಗೆ ದರ್ಶನ್‌ ಫೋಟೋ ಇಟ್ಟು ಪೂಜೆ! ಕಿಡಿ ಕಾರಿದ ಭಕ್ತರು

actor darshan photo with god
actor darshan photo with god

ರಾಯಚೂರು: ದೇವರ ಮೂರ್ತಿಯ (God Idol) ಜೊತೆಗೆ ಕೊಲೆ ಆರೋಪಿ (Murder Suspect) ನಟ ದರ್ಶನ್‌ (Actor Darshan) ಫೋಟೋ ಇಟ್ಟು ಪೂಜೆ (worship) ಮಾಡಿರುವ ರಾಯಚೂರಿನ (Raichur News) ದೇವಾಲಯದ ಅರ್ಚಕರ ನಡೆಗೆ ಭಾರಿ ವಿರೋಧ ವ್ಯಕ್ತವಾಗಿದೆ.

ರಾಯಚೂರಿನ ದೇವದುರ್ಗ ತಾಲೂಕಿನ ಮಸರಕಲ್ ಗ್ರಾಮದ ಪ್ರಸಿದ್ಧ ದೇಗುಲ ಲಕ್ಷ್ಮೀ ರಂಗನಾಥ ದೇವಾಲಯದಲ್ಲಿ ಈ ಅಪಸವ್ಯ ನಡೆದಿದೆ. ಪೂಜೆ ಮಾಡಿದ ಅರ್ಚಕರು ಹಾಗೂ ಪೂಜೆ ಮಾಡಿಸಿದ ದರ್ಶನ್‌ ಫ್ಯಾನ್ಸ್‌ ಇದೀಗ ಭಕ್ತರ ಅಸಮಾಧಾನಕ್ಕೆ ತುತ್ತಾಗಿದ್ದಾರೆ.

ಮಸರಕಲ್ ಲಕ್ಷ್ಮೀ ರಂಗನಾಥ ದೇಗುಲದ ಎದುರಲ್ಲಿರುವ ಆಂಜನೇಯ ಮೂರ್ತಿಯ ಜೊತೆಗೆ ನಟ ದರ್ಶನ್ ಫೋಟೋಗಳನ್ನು ಇಟ್ಟು ಪೂಜೆ ಸಲ್ಲಿಸಲಾಗಿತ್ತು. ಅರ್ಚಕರ ಪೂಜೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಉದ್ಭವ ಮೂರ್ತಿ, ಪ್ರತಿಷ್ಠಾಪನಾ ಮೂರ್ತಿಯ ಮೇಲೆ ಕೊಲೆ ಆರೋಪಿ ದರ್ಶನ್ ಪೋಟೋ ಇಟ್ಟು ಪೂಜೆ ಮಾಡಿರುವುದನ್ನು ಭಕ್ತರು ಪ್ರಶ್ನಿಸಿದ್ದಾರೆ.

ದೇವರ ಮೂರ್ತಿಯ ಜೊತೆಗೆ ಕೊಲೆ ಆರೋಪಿಯ ಫೋಟೋ ಇಟ್ಟು ಪೂಜೆ ಮಾಡಿಸುವ ಮೂಲಕ ದೇಗುಲದ ಅರ್ಚಕರು ಹಾಗೂ ದರ್ಶನ್ ಅಭಿಮಾನಿಗನು ಭಕ್ತರ ಭಾವನೆಗಳಿಗೆ ಧಕ್ಕೆ ಮಾಡಿದ್ದಾರೆ. ದರ್ಶನ್ ಕೊಲೆ ಆರೋಪಿಯಾಗಿ ಜೈಲಿನಲ್ಲಿದ್ದಾರೆ. ಕೊಲೆ ಆರೋಪಿಯ ಫೋಟೋ ಗರ್ಭಗುಡಿಯಲ್ಲಿ ಇಟ್ಟು ಪೂಜೆ ಮಾಡುವ ಅಗತ್ಯ ಏನಿದೆ? ಇದು ಕನ್ನಡ ಸಂಸ್ಕೃತಿಯಲ್ಲ. ಅಭಿಮಾನಿಗಳಿಗೆ ದರ್ಶನ್ ಮೇಲೆ ಅಭಿಮಾನ ಇರಬಹುದು.‌ ಆದರೆ ಮನೆಯಲ್ಲಿ ಹೀಗೆ ಪೂಜೆ ಮಾಡಲಿ. ಸಾರ್ವಜನಿಕ ದೇವಾಲಯದಲ್ಲಿ ಹೀಗೆ ಮಾಡುವುದು ಸಲ್ಲದು ಎಂದು ಕನ್ನಡ ಹೋರಾಟಗಾರರು ರಾಂಗ್‌ ಆಗಿದ್ದಾರೆ.

ಇದನ್ನೂ ಓದಿ | Muda Scam: ರಾಜ್ಯಪಾಲರನ್ನು ಭೇಟಿಯಾದ ಟಿ.ಜೆ.ಅಬ್ರಹಾಂ; ಸಿಎಂ ವಿರುದ್ಧ ತನಿಖೆಗೆ ಮತ್ತಷ್ಟು ದಾಖಲೆ

ಈ ವಿಚಾರದಲ್ಲಿ ಅರ್ಚಕರು ಹಾಗೂ ಪೂಜೆ ಮಾಡಿಸಿದವರ ವಿರುದ್ಧ ಹೋರಾಟ ಮಾಡುತ್ತೇವೆ. ನೀವು ದೇವರ ಪುರೋಹಿತರು ಅಂತ ಹೇಳಲು ನಮಗೆ ನಾಚಿಕೆ ಆಗುತ್ತದೆ. ಕ್ಷಮೆ ಕೇಳಿ ಎಂದು ರಾಯಚೂರಲ್ಲಿ ಕನ್ನಡ ಪರ ಹೋರಾಟಗಾರ ಅಶೋಕ್ ಕುಮಾರ್ ಜೈನ್ ಕಿಡಿ ಕಾರಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Kannada New Movie: ʼಆಪರೇಷನ್ ಕೊಂಬುಡಿಕ್ಕಿʼ ಚಿತ್ರ ನಿರ್ಮಾಣ ಮಾಡಲು ಅಣಿಯಾದ ಅನುಪ್ ಹನುಮಂತೇಗೌಡ

Kannada New Movie: ಕನ್ನಡ ಚಿತ್ರರಂಗದ ಕಿರಿಯ ಮತ್ತು ಯಶಸ್ವಿ ನಿರ್ಮಾಪಕ ಅನುಪ್‌ ಹನುಮಂತೇಗೌಡ ಈಗ “ಸಿಲ್ವರ್‌ ಸ್ಕ್ರೀನ್‌ ಸ್ಟುಡಿಯೋಸ್” ಎಂಬ ನಿರ್ಮಾಣ ಸಂಸ್ಥೆಯನ್ನು ಸ್ಥಾಪಿಸಿ, ಅದರ ಅಡಿಯಲ್ಲಿ “ಆಪರೇಷನ್‌ ಕೊಂಬುಡಿಕ್ಕಿ” ಎಂಬ ಬಿಗ್ ಬಜೆಟ್‌ ಚಿತ್ರ ನಿರ್ಮಾಣದ ಸಾಹಸಕ್ಕೆ ಕೈ ಹಾಕುತ್ತಿದ್ದಾರೆ.

VISTARANEWS.COM


on

Kannada New Movie
Koo

ಬೆಂಗಳೂರು: ಸೂಪರ್ ಹಿಟ್ ಚಿತ್ರ “ಶಿವಾಜಿ ಸುರತ್ಕಲ್” ಡಿಟೆಕ್ಟಿವ್ ಸರಣಿಗಳ ನಿರ್ಮಾಪಕ ಅನುಪ್ ಹನುಮಂತೇಗೌಡ ತಮ್ಮ ಮೂರನೇ ನಿರ್ಮಾಣದ ಚಿತ್ರವನ್ನು ನಿರ್ಮಿಸಲು ಮುಂದಾಗಿದ್ದಾರೆ‌. ಹಿರಿಯ ನಿರ್ದೇಶಕ ಎಸ್. ಮಹೇಂದರ್ ಅವರ ನಿರ್ದೇಶನದಲ್ಲಿ ಕಿಶೋರ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರಕ್ಕೆ “ಆಪರೇಷನ್ ಕೊಂಬುಡಿಕ್ಕಿ” (Kannada New Movie) ಎಂದು ಹೆಸರಿಟ್ಟಿದ್ದಾರೆ.

ಕನ್ನಡ ಚಿತ್ರರಂಗದ ಕಿರಿಯ ಮತ್ತು ಯಶಸ್ವಿ ನಿರ್ಮಾಪಕ ಅನುಪ್‌ ಹನುಮಂತೇಗೌಡ ಈಗ “ಸಿಲ್ವರ್‌ ಸ್ಕ್ರೀನ್‌ ಸ್ಟುಡಿಯೋಸ್” ಎಂಬ ನಿರ್ಮಾಣ ಸಂಸ್ಥೆಯನ್ನು ಸ್ಥಾಪಿಸಿ, ಅದರ ಅಡಿಯಲ್ಲಿ “ಆಪರೇಷನ್‌ ಕೊಂಬುಡಿಕ್ಕಿ” ಎಂಬ ಬಿಗ್ ಬಜೆಟ್‌ ಚಿತ್ರ ನಿರ್ಮಾಣದ ಸಾಹಸಕ್ಕೆ ಕೈ ಹಾಕುತ್ತಿದ್ದಾರೆ.

“ಗಟ್ಟಿಮೇಳ” ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನಿರ್ದೇಶಿಸಿರುವ ಎಸ್. ಮಹೇಂದರ್ ನಿರ್ದೇಶಿಸುತ್ತಿರುವ ಈ ಚಿತ್ರದ ನಾಯಕನಾಗಿ “ಕಂಠಿ” ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ಪ್ರಸ್ತುತ ದಕ್ಷಿಣ ಭಾರತದ ಬಹು ಬೇಡಿಕೆಯ ನಟರಾಗಿರುವ ಅಪ್ಪಟ ಕನ್ನಡಿಗ ಕಿಶೋರ್‌ ಅಭಿನಯಿಸುತ್ತಿದ್ದಾರೆ.

ಇದನ್ನೂ ಓದಿ: Pralhad Joshi: ಪಿಎಂ ಕುಸುಮ್ ಯೋಜನೆಗೆ ಕರ್ನಾಟಕದಿಂದಲೇ 1.79 ಲಕ್ಷ ರೈತರ ಬೇಡಿಕೆ

ಕೆ.ಜಿ.ಎಫ್‌, ಸಲಾರ್‌ ಖ್ಯಾತಿಯ ರವಿ ಬಸ್ರೂರ್‌ ಸಂಗೀತ ನೀಡಲಿದ್ದಾರೆ. ಛಾಯಾಗ್ರಾಹಕರಾಗಿ ಹೆಬ್ಬುಲಿ, ಕ್ರಾಂತಿ ಸಿನಿಮಾಗಳ ಖ್ಯಾತಿಯ ಕರುಣಾಕರ್‌ ಕೆಲಸ ಮಾಡುತ್ತಿದ್ದು, ಕನ್ನಡದ ಹೆಸರಾಂತ ಸಂಕಲನಕಾರ ದೀಪು ಎಸ್. ಕುಮಾರ್‌ ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ. ಕನ್ನಡದ ಹೆಸರಾಂತ ಕಲಾವಿದರು ಹಾಗೂ ತಂತ್ರಜ್ಞರ ಸಮಾಗಮದಲ್ಲಿ ಈ ಚಿತ್ರ ಅದ್ಧೂರಿಯಾಗಿ ಮೂಡಿ ಬರಲಿದೆ.

ಇದನ್ನೂ ಓದಿ: Bangladesh Unrest: ಬಾಂಗ್ಲಾದೇಶಕ್ಕೆ ಎಂದಿನಂತೆ ವಿಮಾನ ಹಾರಾಟ; ಢಾಕಾದಿಂದ ದಿಲ್ಲಿಗೆ ಬಂದಿಳಿದ 205 ಭಾರತೀಯರು

ಚಿತ್ರರಂಗದ ಸದ್ಯದ ಪರಿಸ್ಥಿತಿಯಲ್ಲಿ ದೊಡ್ಡ ನಿರ್ಮಾಣ ಸಂಸ್ಥೆಗಳ ನಿರ್ಮಾಪಕರುಗಳ, ದೊಡ್ಡ ದೊಡ್ಡ ಸ್ಟಾರ್‌ಗಳ ಸಿನಿಮಾಗಳು ಮಾತ್ರ ಮಾರುಕಟ್ಟೆಯಲ್ಲಿ ಯಶಸ್ಸುಗಳಿಸುತ್ತಿದೆ. ಈ ಸಮಯದಲ್ಲಿ ಸದಭಿರುಚಿಯ ಚಿತ್ರಗಳನ್ನು ಸೀಮಿತ ಬಜೆಟ್‌ನಲ್ಲಿ ನಿರ್ಮಾಣ ಮಾಡಿ ಮಾರುಕಟ್ಟೆಯಲ್ಲಿ ಜನರಿಗೆ ತಲುಪಿಸಿ ಅದನ್ನು ಯಶಸ್ವಿಗೊಳಿಸಿದ ನಿರ್ಮಾಪಕ ಅನುಪ್‌ ಹನುಮಂತೇಗೌಡ ಈಗ ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

Continue Reading

ಕರ್ನಾಟಕ

Kali Bridge Collapse: ಕಾಳಿನದಿ ಸೇತುವೆ ಕುಸಿತ; ಉ.ಕ ಡಿಸಿಯಿಂದ ಮಾಹಿತಿ ಪಡೆದ ಸಿಎಂ

Kali Bridge Collapse: ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ಕಾಳಿ ನದಿ ಸೇತುವೆ ಕುಸಿದು ಬಿದ್ದಿರುವ ಕುರಿತು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರಿಗೆ ಕರೆ ಮಾಡಿ ಬುಧವಾರ ಮಾಹಿತಿ ಪಡೆದರು. ಜಿಲ್ಲೆಯಲ್ಲಿ ಎಲ್ಲ ಸೇತುವೆಗಳು, ರಸ್ತೆಗಳ ಸುರಕ್ಷತೆಯ ಕುರಿತು ಖಾತರಿಪಡಿಸುವಂತೆ ಹಾಗೂ ಯಾವುದೇ ಜೀವಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.

VISTARANEWS.COM


on

CM Siddaramaiah
Koo

ಮೈಸೂರು: ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ಕಾಳಿ ನದಿ ಸೇತುವೆ ಕುಸಿದು (Kali Bridge Collapse) ಬಿದ್ದಿರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರಿಗೆ ಕರೆ ಮಾಡಿ ಬುಧವಾರ ಮಾಹಿತಿ ಪಡೆದರು.

ಜಿಲ್ಲೆಯಲ್ಲಿ ಎಲ್ಲ ಸೇತುವೆಗಳು, ರಸ್ತೆಗಳ ಸುರಕ್ಷತೆಯ ಕುರಿತು ಖಾತರಿಪಡಿಸುವಂತೆ ಹಾಗೂ ಯಾವುದೇ ಜೀವಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

ಇದನ್ನೂ ಓದಿ: Namma Metro: ಆ.6ರಂದು ನಮ್ಮ ಮೆಟ್ರೋದಲ್ಲಿ ದಾಖಲೆ ಸಂಖ್ಯೆಯಲ್ಲಿ ಪ್ರಯಾಣಿಕರ ಓಡಾಟ

ಘಟನೆಯ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಸೇತುವೆ ಕುಸಿದ ಸಂದರ್ಭದಲ್ಲಿ ಗಾಯಗೊಂಡ ಲಾರಿ ಚಾಲಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಕ್ಷಣ ಕಾರ್ಯಚರಣೆಗಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಸೇತುವೆಯ ಪರಿಶೀಲನೆಗಾಗಿ ಮತ್ತು ಪ್ರದೇಶದಲ್ಲಿನ ಎಲ್ಲಾ ಸೇತುವೆಗಳ ಸುರಕ್ಷತೆಯನ್ನು ಖಚಿತಪಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (NHAI) ಅಧಿಕೃತ ಪತ್ರವನ್ನು ಕಳುಹಿಸಲಾಗಿದೆ ಎಂದು ವಿವರಿಸಿದರು.

ಕಾಳಿ ನದಿಗೆ ಕಟ್ಟಿದ ಸೇತುವೆ ಕುಸಿತ, ಟ್ರಕ್‌ ಬಿದ್ದು ಚಾಲಕನಿಗೆ ಗಾಯ

ಕಾಳಿ ನದಿಗೆ (Kali River) ಅಡ್ಡಲಾಗಿ ಕಟ್ಟಿದ್ದ ಹಳೆಯ ಸೇತುವೆ (Kali Bridge Collapse) ಕುಸಿದುಬಿದ್ದಿದ್ದು, ಅದರ ಮೇಲೆ ಚಲಿಸುತ್ತಿದ್ದ ಟ್ರಕ್‌ ಕೆಳಗೆ ಬಿದ್ದು ಚಾಲಕನಿಗೆ (truck driver injury) ಗಾಯವಾಗಿದೆ. ಹೊಸ ಸೇತುವೆಯಲ್ಲಿ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಿದ್ದ ಕಾರಣ ಭಾರಿ ಅನಾಹುತ ಆಗಿಲ್ಲ.

ಉತ್ತರಕನ್ನಡ ಜಿಲ್ಲೆಯ ಕಾರವಾರ ನಗರದ ಕೋಡಿಭಾಗ್‌ನಲ್ಲಿರುವ ಈ ಸೇತುವೆಯನ್ನು ಕಾರವಾರ- ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ನಿರ್ಮಿಸಲಾಗಿದೆ. ಇದು ಸುಮಾರು 60 ವರ್ಷ ಹಳೆಯದಾದ ಸೇತುವೆ. ಇತ್ತೀಚೆಗೆ ನಿರ್ಮಿಸಲಾದ ಹೊಸ ಸೇತುವೆಯಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದ್ದು, ಹಳೆಯ ಸೇತುವೆಯನ್ನು ಅಪಾಯಕಾರಿ ಎಂದು ಪರಿಗಣಿಸಲಾಗಿತ್ತು.

ಮಳೆ ಹಾಗೂ ನೀರಿನ ರಭಸ ಹೆಚ್ಚಾಗಿ ಸೇತುವೆ ಕುಸಿದು ಕೆಳಗೆ ಬಿದ್ದಿದ್ದು, ಅದರ ಮೇಲಿದ್ದ ಟ್ರಕ್‌ ಕೆಳಗೆ ಬಿದ್ದು ಚಾಲಕನಿಗೆ ಗಾಯವಾಗಿದೆ. ಚಾಲಕನನ್ನು ಅಗ್ನಿಶಾಮಕ‌ ಹಾಗೂ ಪೊಲೀಸ್ ಸಿಬ್ಬಂದಿ ರಕ್ಷಿಸಿದ್ದಾರೆ. ಲಾರಿ ಚಾಲಕ ಕೇರಳ ಮೂಲದ ರಾಧಾಕೃಷ್ಣ ನಾಳಾ ಸ್ವಾಮಿ (37) ರಕ್ಷಣೆಗೊಳಗಾದವರು. ಟ್ರಕ್‌ ಸಂಪೂರ್ಣ ನೀರಿನಲ್ಲಿ ಮುಳುಗಿದೆ.

ವಿಷಯ ತಿಳಿದ ಕೂಡಲೇ ಎಚ್ಚೆತ್ತ ಉತ್ತರಕನ್ನಡ ಎಸ್.ಪಿ ನಾರಾಯಣ್, ಎಎಸ್‌ಪಿ ಜಯಕುಮಾರ ಹಾಗೂ ಡಿಎಸ್‌ಪಿ ಗಿರೀಶ್ ಸೇರಿದಂತೆ ಪೊಲೀಸರ ತಂಡ ಸ್ಥಳಕ್ಕೆ ಧಾವಿಸಿದೆ. ಲಾರಿ ಚಾಲಕನನ್ನು ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ಪೊಲೀಸರಿಂದ ಮಾಹಿತಿ ಸಿಗುತ್ತಿದ್ದಂತೆ ಡಿಸಿ ಲಕ್ಷ್ಮಿಪ್ರಿಯಾ ಮಧ್ಯರಾತ್ರಿ ಸ್ಥಳಕ್ಕೆ ಧಾವಿಸಿದ್ದು, ಮಾಹಿತಿ ಪಡೆದರು.

ಅವೈಜ್ಞಾನಿಕ ಕಾಮಗಾರಿಯಿಂದ ಕಳೆದ 15 ದಿನಗಳ ಹಿಂದಷ್ಟೆ ಶಿರೂರು ಗುಡ್ಡ ಕುಸಿತ ಆಗಿತ್ತು. ಈಗ ಹಳೆಯ ಸೇತುವೆ ಬಿದ್ದಿರುವ ಹಿನ್ನೆಲೆಯಲ್ಲಿ, ಐಆರ್‌ಬಿಯಿಂದ ನಿರ್ಮಾಣ ಮಾಡಿರುವ ಹೊಸ ಸೇತುವೆಯ ಗುಣಮಟ್ಟ ಪರೀಕ್ಷೆ ಮಾಡಲು ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಈಗ ಕುಸಿದ ಸೇತುವೆಯ ಪಕ್ಕದಲ್ಲಿರುವ ಹೊಸ ಸೇತುವೆಯ ಗುಣಮಟ್ಟ ಪರೀಕ್ಷೆ ಮಾಡಲು, ಸೇತುವ ಗುಣಮಟ್ಟದ ಬಗ್ಗೆ 12 ಗಂಟೆಯೊಳಗೆ ವರದಿ ಸಲ್ಲಿಸುವಂತೆ IRB ಹಾಗೂ NHAIಗೆ ಡಿಸಿ ಲಕ್ಷ್ಮೀಪ್ರಿಯಾ ಆದೇಶಿಸಿದ್ದಾರೆ. ಸೇತುವೆ ಗುಣಮಟ್ಟದ ವರದಿ ಬರುವವರೆಗೂ ಸಂಚಾರ ನಿಷೇಧಿಸಲಾಗಿದ್ದು, ಸದ್ಯ ಕಾರವಾರದಿಂದ ಗೋವಾ ಕಡೆ ಹೋಗುವ ಸಂಚಾರ ಬಂದ್ ಆಗಿದೆ.

ಇದನ್ನೂ ಓದಿ: Bangladesh Unrest: ಬಾಂಗ್ಲಾದೇಶಕ್ಕೆ ಎಂದಿನಂತೆ ವಿಮಾನ ಹಾರಾಟ; ಢಾಕಾದಿಂದ ದಿಲ್ಲಿಗೆ ಬಂದಿಳಿದ 205 ಭಾರತೀಯರು

ಉತ್ತರಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಭಾನುವಾರ ಕಾರವಾರದ ಸುರಂಗ ಮಾರ್ಗದಲ್ಲಿ ಕಲ್ಲು ಕುಸಿದಿತ್ತು. ರಾಷ್ಟ್ರೀಯ ಹೆದ್ದಾರಿ 66ರ ಸುರಂಗ ಮಾರ್ಗದಲ್ಲಿ ಬಿಣಗಾದಿಂದ ಕಾರವಾರಕ್ಕೆ ಆಗಮಿಸುವ ಸುರಂಗದ ಎದುರು ಭಾರಿ ಪ್ರಮಾಣದ ಕಲ್ಲು, ಮಣ್ಣು ಕುಸಿದಿತ್ತು. ಅದೃಷ್ಟವಶಾತ್ ವಾಹನ ಸವಾರರು ಪಾರಾಗಿದ್ದರು. ಸ್ಥಳಕ್ಕೆ ಬಂದ ಕಾರವಾರ ಟ್ರಾಫಿಕ್ ಪೊಲೀಸರು ಐಆರ್‌ಬಿ ಕಾರ್ಮಿಕರಿಂದ ಹೆದ್ದಾರಿಯಲ್ಲಿ ಬಿದ್ದ ಕಲ್ಲು ಮಣ್ಣು ತೆರವು ಮಾಡಿಸಿದ್ದರು. ಮುನ್ನೆಚ್ಚರಿಕಾ ಕ್ರಮವಾಗಿ ಬಿಣಗಾ ಕಾರವಾರ ಟನೆಲ್ ಬಂದ್ ಮಾಡಿಸಿದ್ದರಲ್ಲದೆ, ಬಿಣಗಾದಿಂದ ಬೈತಕೋಲ್ ಮಾರ್ಗದಲ್ಲಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದರು.

Continue Reading

ಬೆಂಗಳೂರು

Metro City: ಬೆಂಗಳೂರಿಗೆ ‘ಮೆಟ್ರೊ ಸಿಟಿ’ ಸ್ಥಾನಮಾನ ನೀಡಲು ನಿರಾಕರಿಸಿದ ಕೇಂದ್ರ ಸರ್ಕಾರ!

Metro City: ದೇಶದ ಐಟಿ ರಾಜಧಾನಿ ಬೆಂಗಳೂರಿಗೆ ಮತ್ತೊಮ್ಮೆ ನಿರಾಸೆಯಾಗಿದೆ. ಮೆಟ್ರೋ ಸಿಟಿ (Metro City) ಸ್ಥಾನಮಾನ ನೀಡಲು ಕೇಂದ್ರ ಸರ್ಕಾರ ನಿರಾಕರಿಸಿದ್ದು, ಬಹು ದಿನಗಳ ಬೇಡಿಕೆಗೆ ಮತ್ತೊಮ್ಮೆ ಹಿನ್ನಡೆಯಾಗಿದೆ. ಭಾರತದ ಅತಿದೊಡ್ಡ ನಗರಗಳಲ್ಲಿ ಒಂದಾದ, ಕರ್ನಾಟಕದ ರಾಜಧಾನಿ ಬೆಂಗಳೂರಿಗೆ ಮೆಟ್ರೋ ಸ್ಥಾನಮಾನವನ್ನು ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಸಂಸತ್‌ನಲ್ಲಿ ನಡೆಯುತ್ತಿರುವ ಮಳೆಗಾಲದ ಅಧಿವೇಶನದಲ್ಲಿ ಮಾತನಾಡಿದ ಕೇಂದ್ರ ಹಣಕಾಸು ಸಚಿವಾಲಯದ ರಾಜ್ಯ ಸಚಿವ ಪಂಕಜ್ ಚೌಧರಿ ಈ ವಿಷತ ತಿಳಿಸಿದರು.

VISTARANEWS.COM


on

Metro City
Koo

ಬೆಂಗಳೂರು: ದೇಶದ ಐಟಿ ರಾಜಧಾನಿ ಬೆಂಗಳೂರಿಗೆ (Bengaluru) ಮತ್ತೊಮ್ಮೆ ನಿರಾಸೆಯಾಗಿದೆ. ಮೆಟ್ರೋ ಸಿಟಿ (Metro City) ಸ್ಥಾನಮಾನ ನೀಡಲು ಕೇಂದ್ರ ಸರ್ಕಾರ ನಿರಾಕರಿಸಿದ್ದು, ಬಹು ದಿನಗಳ ಬೇಡಿಕೆಗೆ ಮತ್ತೊಮ್ಮೆ ಹಿನ್ನಡೆಯಾಗಿದೆ. ಭಾರತದ ಅತಿದೊಡ್ಡ ನಗರಗಳಲ್ಲಿ ಒಂದಾದ, ಕರ್ನಾಟಕದ ರಾಜಧಾನಿ ಬೆಂಗಳೂರಿಗೆ ಮೆಟ್ರೋ ಸ್ಥಾನಮಾನವನ್ನು ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

ಸಂಸತ್‌ನಲ್ಲಿ ನಡೆಯುತ್ತಿರುವ ಮಳೆಗಾಲದ ಅಧಿವೇಶನದಲ್ಲಿ ಮಾತನಾಡಿದ ಕೇಂದ್ರ ಹಣಕಾಸು ಸಚಿವಾಲಯದ ರಾಜ್ಯ ಸಚಿವ ಪಂಕಜ್ ಚೌಧರಿ, ಆದಾಯ ತೆರಿಗೆ ನಿಯಮಗಳು, 1962ರ ನಿಯಮ 2 ಎ ಅಡಿಯಲ್ಲಿ ಮೆಟ್ರೋ ನಗರಗಳು ಮತ್ತು ಇತರ ನಗರಗಳ ನಡುವೆ ವ್ಯತ್ಯಾಸವಿದೆ ಎಂದು ಹೇಳಿದರು. ಪ್ರಸ್ತುತ ದೇಶದ ನಾಲ್ಕು ಪ್ರಮುಖ ನಗರಗಳಾದ ಮುಂಬೈ, ದೆಹಲಿ, ಕೋಲ್ಕತಾ ಮತ್ತು ಚೆನ್ನೈಯನ್ನು ಮೆಟ್ರೋ ಸಿಟಿ ಎಂದು ಗುರುತಿಸಲಾಗುತ್ತಿದೆ.

ಮೆಟ್ರೋ ಸ್ಥಾನಮಾನ ದೊರೆತರಿಗೆ ಆ ನಗರಕ್ಕೆ ಮನೆ ಬಾಡಿಗೆ ಭತ್ಯೆ ತೆರಿಗೆ ವಿನಾಯಿತಿ ಸೇರಿದಂತೆ ಕೆಲವೊಂದು ಅನುಕೂಲಗಳು ಲಭಿಸುತ್ತವೆ. ಅಸ್ತಿತ್ವದಲ್ಲಿರುವ ಮೆಟ್ರೋ ನಗರಗಳಲ್ಲಿ ಸೆಕ್ಷನ್ 10 (13 ಎ) ಅಡಿಯಲ್ಲಿ ವಿನಾಯಿತಿ ಮಿತಿಗಳನ್ನು ಲೆಕ್ಕಹಾಕಲು ವೇತನದ ಶೇ. 50ರಷ್ಟನ್ನು ಪರಿಗಣಿಸಲಾಗುತ್ತದೆ. ಅಂದರೆ ಮೆಟ್ರೋ ನಗರಗಳಲ್ಲಿ ಮೂಲ ವೇತನದ ಶೇ. 50ರಷ್ಟನ್ನು ಮನೆ ಬಾಡಿಗೆ ಭತ್ಯೆ (House Rent Allowance) ತೆರಿಗೆ ವಿನಾಯಿತಿ ಪಡೆಯಬಹುದು. ಆದರೆ ಮೆಟ್ರೋಯೇತರ ನಗರಗಳ ನಿವಾಸಿಗಳು ತಮ್ಮ ಮೂಲ ವೇತನದ ಶೇ. 40ರಷ್ಟನ್ನು ಮಾತ್ರವೇ ಎಚ್‌ಆರ್‌ಎ ತೆರಿಗೆ ವಿನಾಯಿತಿ ಎಂದು ಕ್ಲೈಮ್ ಮಾಡಲು ಸಾಧ್ಯ.

ಅಸ್ತಿತ್ವದಲ್ಲಿರುವ ನೀತಿಯನ್ನು ಬದಲಾಯಿಸುವ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಪಂಕಜ್ ಚೌಧರಿ ಹೇಳಿದರು. “ತೆರಿಗೆ ದರಗಳನ್ನು ತರ್ಕಬದ್ಧಗೊಳಿಸುವುದು ಮತ್ತು ವಿನಾಯಿತಿಗಳು ಹಾಗೂ ಕಡಿತಗಳಿಂದ ದೂರ ಸರಿಯುವುದು ಸರ್ಕಾರದ ಘೋಷಿತ ನೀತಿ. ಆದ್ದರಿಂದ ಹೆಚ್ಚಿನ ನಗರಗಳನ್ನು ಮೆಟ್ರೋ ನಗರಗಳಾಗಿ ಘೋಷಿಸುವುದಿಲ್ಲ. ಅಲ್ಲದೆ ಎಚ್ಆರ್‌ಎ (House Rent Allowance) ಮೇಲಿನ ಹೆಚ್ಚಿನ ವಿನಾಯಿತಿಯನ್ನೂ ಅಂತಹ ನಗರಗಳಿಗೆ ವಿಸ್ತರಿಸುವುದಿಲ್ಲʼʼ ಎಂದು ಹೇಳಿದರು. ಇದರಿಂದಾಗಿ ಬೆಂಗಳೂರಿನ ಬಹು ದಿನಗಳ ಬೇಡಿಕೆಗೆ ಹಿನ್ನಡೆಯಾಗಿದೆ.

ಬೆಂಗಳೂರು ಬೃಹತ್‌ ಐಟಿ ಮತ್ತು ಸ್ಟಾರ್ಟ್ಅಪ್ ಹಬ್ ಆಗಿ ಬೆಳೆಯುತ್ತಿದೆ. ಹೆಚ್ಚಿನ ಜನಸಂಖ್ಯಾ ಸಾಂದ್ರತೆ, ಗಮನಾರ್ಹ ಆರ್ಥಿಕ ಚಟುವಟಿಕೆ ಮತ್ತು ವೇಗದ ಜೀವನಶೈಲಿಯಂತಹ ಇತರ ಮೆಟ್ರೋ ನಗರಗಳ ಎಲ್ಲ ಲಕ್ಷಣಗಳನ್ನು ಬೆಂಗಳೂರು ಹೊಂದಿದೆ. ಆದರೂ ಎಚ್‌ಆರ್‌ಎ ವಿಚಾರವಾಗಿ ಬೆಂಗಳೂರನ್ನು ಇನ್ನೂ ಮೆಟ್ರೋ ಯೇತರ ನಗರವಾಗಿಯೇ ಪರಿಗಣಿಸಲಾಗುತ್ತಿದೆ.

ವಿಶೇಷ ಎಂದರೆ ಮೆಟ್ರೋ ನಗರದ ನಿಯಮಗಳನ್ನು ರಚಿಸಿದಾಗಿನಿಂದ ಈ ಪಟ್ಟಿಯನ್ನು ಪರಿಷ್ಕರಿಸಲಾಗಿಲ್ಲ. ಬೆಂಗಳೂರಿನಲ್ಲಿ ಬಾಡಿಗೆಯ ಪ್ರತಿ ವರ್ಷ ಕನಿಷ್ಠ ಶೇ. 3ರಷ್ಟು ಹೆಚ್ಚಾಗುತ್ತಿದೆ. ವಸತಿ ವೆಚ್ಚಗಳು ಈಗ ದೆಹಲಿ ಅಥವಾ ಮುಂಬೈಗೆ ಪ್ರತಿಸ್ಪರ್ಧಿಯಾಗಿವೆ. ಆದರೂ ಬೆಂಗಳೂರು ನಗರವನ್ನು ಮೆಟ್ರೋ ಎಂದು ವರ್ಗೀಕರಿಸದಿರುವುದರಿಂದ ಲಕ್ಷಗಟ್ಟಲೆ ರೂ. ಸಂಬಳ ಪಡೆಯುವ ಐಟಿ, ಬ್ಯಾಂಕಿಂಗ್ ಮತ್ತು ಇತರ ವೃತ್ತಿಪರರು ಹೆಚ್ಚಿನ ತೆರಿಗೆ ಭರಿಸಬೇಕಿದೆ. ಹೀಗಾಗಿ ಮೆಟ್ರೋ ಸ್ಥಾನಮಾನಕ್ಕೆ ಹಲವು ವರ್ಷಗಳಿಂದ ಬೇಡಿಕೆ ಸಲ್ಲಿಸಲಾಗುತ್ತಿದ್ದು, ಮತ್ತೊಮ್ಮೆ ಮುಖಭಂಗವಾಗಿದೆ.

ಇದನ್ನೂ ಓದಿ: Namma Metro: ಆ.6ರಂದು ನಮ್ಮ ಮೆಟ್ರೋದಲ್ಲಿ ದಾಖಲೆ ಸಂಖ್ಯೆಯಲ್ಲಿ ಪ್ರಯಾಣಿಕರ ಓಡಾಟ

Continue Reading

ಕ್ರೈಂ

Electric Shock: ರಾಣೇಬೆನ್ನೂರಿನಲ್ಲಿ ವಿದ್ಯುತ್ ಶಾಕ್ ಹೊಡೆದು ತಂದೆ ಮಗ-ಸಾವು

Electric Shock: ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಪತ್ತೆಪುರ ಗ್ರಾಮದಲ್ಲಿ ಅವಘಡ ನಡೆದಿದೆ. ಮೋಟಾರ್ ಪಂಪ್‌ಸೆಟ್ ರಿಪೇರಿ ಮಾಡುತ್ತಿದ್ದಾಗ ವಿದ್ಯುತ್‌ ಶಾಕ್‌ ಹೊಡೆದು ತಂದೆ-ಮಗ ಮೃತಪಟ್ಟಿದ್ದಾರೆ.

VISTARANEWS.COM


on

Electric Shock
Koo

ಹಾವೇರಿ: ವಿದ್ಯುತ್ ಶಾಕ್ ಹೊಡೆದು ತಂದೆ-ಮಗ ಮೃತಪಟ್ಟಿರುವ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಪತ್ತೆಪುರ ಗ್ರಾಮದಲ್ಲಿ ನಡೆದಿದೆ. ಮೋಟಾರ್ ಪಂಪ್‌ಸೆಟ್ ರಿಪೇರಿ ಮಾಡುತ್ತಿದ್ದಾಗ ಅವಘಡ (Electric Shock) ನಡೆದಿದ್ದು, ಸ್ಥಳಕ್ಕೆ ಹೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ತಂದೆ ಕರಿಬಸಪ್ಪ (45), ಮಗ ದರ್ಶನ್‌ (25) ಮೃತರು. ತುಂಗಭದ್ರ ನದಿ ದಡದಲ್ಲಿ ಹಾಕಿದ್ದ ಪಂಪ್ ಸೆಟ್ ರಿಪೇರಿ ಮಾಡುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು ತಂದೆ-ಮಗ ಮೃತಪಪಟ್ಟಿದ್ದಾರೆ. ಸ್ಥಳಕ್ಕೆ ಹೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ | Namma Metro: ಆ.6ರಂದು ನಮ್ಮ ಮೆಟ್ರೋದಲ್ಲಿ ದಾಖಲೆ ಸಂಖ್ಯೆಯಲ್ಲಿ ಪ್ರಯಾಣಿಕರ ಓಡಾಟ

Self Harming: ಖಿನ್ನತೆಯಿಂದ ನೇಣಿಗೆ ಶರಣಾದ ಕೇರಳ ಮೂಲದ ಯುವತಿ

Self Harming
Self Harming

ಬೆಂಗಳೂರು: ಕೇರಳ ಮೂಲದ ಯುವತಿಯೊಬ್ಬಳು ಖಿನ್ನತೆಯಿಂದ ನೇಣಿಗೆ ಶರಣಾಗಿರುವ ಘಟನೆ (Self Harming) ನಗರದ ಕುಮಾರಸ್ವಾಮಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಂಜನಾ‌ (26) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ನಗರದ ಪಿ.ಜಿ.ಯಲ್ಲಿ ಯುವತಿ ವಾಸವಿದ್ದಳು. ಇತ್ತೀಚೆಗೆ ತಂದೆ ತೀರಿಕೊಂಡಿದ್ದರಿಂದ ಕೆಲ ದಿನಗಳಿಂದ ಒಂಟಿತನ ಹಾಗೂ ಖಿನ್ನತೆಗೆ ಒಳಗಾಗಿದ್ದಳು ಎನ್ನಲಾಗಿದೆ. ಆಗಸ್ಟ್ 3ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ

ಆನೇಕಲ್: ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಶಿಲೀಂಧ್ರದೊಡ್ಡಿ ಬಾಲಾಜಿ ಬಡಾವಣೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾಗಿದೆ.

ಪಾಳು ಬಿದ್ದ ನೀರಿನ ತೊಟ್ಟಿಯಲ್ಲಿ ಸುಮಾರು 30 ವರ್ಷ ವಯಸ್ಸಿನ ಅಪರಿಚಿತ ಮಹಿಳೆ ಶವ ಪತ್ತೆಯಾಗಿದ್ದು, ಕೊಲೆಗೈದು ತೊಟ್ಟಿಯಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಕಳೆದ ನಾಲ್ಕೈದು ದಿನಗಳ ಹಿಂದೆ ಶವ ಎಸೆದು ಹೋಗಿರುವ ಅನುಮಾನಗಳು ಮೂಡಿವೆ. ಬನ್ನೇರುಘಟ್ಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Continue Reading
Advertisement
Kannada New Movie
ಕರ್ನಾಟಕ7 mins ago

Kannada New Movie: ʼಆಪರೇಷನ್ ಕೊಂಬುಡಿಕ್ಕಿʼ ಚಿತ್ರ ನಿರ್ಮಾಣ ಮಾಡಲು ಅಣಿಯಾದ ಅನುಪ್ ಹನುಮಂತೇಗೌಡ

CM Siddaramaiah
ಕರ್ನಾಟಕ11 mins ago

Kali Bridge Collapse: ಕಾಳಿನದಿ ಸೇತುವೆ ಕುಸಿತ; ಉ.ಕ ಡಿಸಿಯಿಂದ ಮಾಹಿತಿ ಪಡೆದ ಸಿಎಂ

Bigg Boss Kannada host by rishab shetty sudeep Out
ಬಿಗ್ ಬಾಸ್13 mins ago

Bigg Boss Kannada: ಈ ಬಾರಿ ʻಬಿಗ್‌ ಬಾಸ್‌ ಕನ್ನಡʼ ಹೋಸ್ಟ್‌ ಮಾಡ್ತಿದ್ದಾರಂತೆ ರಿಷಬ್‌ ಶೆಟ್ಟಿ; ಕಿಚ್ಚ ಸುದೀಪ್ ಔಟ್‌?

Metro City
ಬೆಂಗಳೂರು18 mins ago

Metro City: ಬೆಂಗಳೂರಿಗೆ ‘ಮೆಟ್ರೊ ಸಿಟಿ’ ಸ್ಥಾನಮಾನ ನೀಡಲು ನಿರಾಕರಿಸಿದ ಕೇಂದ್ರ ಸರ್ಕಾರ!

Vinesh Phogat
ಪ್ರಮುಖ ಸುದ್ದಿ25 mins ago

Vinesh Phogat: ವಿನೇಶ್‌ ಫೋಗಟ್‌ ಅನರ್ಹ; ಕ್ರಮ ಕೈಗೊಳ್ಳುವಂತೆ ಒಲಿಂಪಿಕ್ಸ್‌ ಅಸೋಸಿಯೇಷನ್‌ಗೆ ಮೋದಿ ಸೂಚನೆ!

Vinesh Phogat
ಕ್ರೀಡೆ30 mins ago

Vinesh Phogat: ಫೈನಲ್​ಗೆ ಅನರ್ಹ; ವಿನೇಶ್ ಫೋಗಟ್​ ಕಡು ವೈರಿ ಬ್ರಿಜ್ ಭೂಷಣ್ ಮಗನ ಪ್ರತಿಕ್ರಿಯೆ ಏನು?

Bhoomige Banda Bhagavantha came to end
ಕಿರುತೆರೆ33 mins ago

Bhoomige Banda Bhagavantha: ‘ಭೂಮಿಗೆ ಬಂದ ಭಗವಂತ’ ಧಾರಾವಾಹಿ ಮುಕ್ತಾಯ: ಅಂಕಿತಾ ಜಯರಾಮ್‌  ಭಾವುಕ ಪೋಸ್ಟ್‌!

Helicopter crashed
ವಿದೇಶ45 mins ago

Helicopter crashed: ನೇಪಾಳದಲ್ಲಿ ಹೆಲಿಕಾಪ್ಟರ್‌ ಪತನ; ನಾಲ್ವರ ದುರ್ಮರಣ

Electric Shock
ಕ್ರೈಂ56 mins ago

Electric Shock: ರಾಣೇಬೆನ್ನೂರಿನಲ್ಲಿ ವಿದ್ಯುತ್ ಶಾಕ್ ಹೊಡೆದು ತಂದೆ ಮಗ-ಸಾವು

Vinesh Phogat support by Alia Bhatt Vicky Kaushal Olympics disqualification
ಕ್ರೀಡೆ1 hour ago

Vinesh Phogat: ವಿನೇಶ್ ಪದಕಗಳನ್ನು ಮೀರಿದ ವಿಜೇತೆ: ಆಲಿಯಾ, ವಿಕ್ಕಿ ಸೇರಿದಂತೆ ಬಾಲಿವುಡ್‌ ಸೆಲೆಬ್ರಿಟಿಗಳ ಬೆಂಬಲ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು23 hours ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ24 hours ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ6 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ6 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ6 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌