B.S. Yediyurappa Birthday: ಅವತ್ತು ಯಡಿಯೂರಪ್ಪನವರ ಮಾತು ಕೇಳಿ ಕಣ್ಣಲ್ಲಿ ನೀರು ತುಂಬಿ ಬಂದಿತ್ತು: ನಟ ದ್ವಾರಕೀಶ್‌ ಲೇಖನ - Vistara News

ಕರ್ನಾಟಕ

B.S. Yediyurappa Birthday: ಅವತ್ತು ಯಡಿಯೂರಪ್ಪನವರ ಮಾತು ಕೇಳಿ ಕಣ್ಣಲ್ಲಿ ನೀರು ತುಂಬಿ ಬಂದಿತ್ತು: ನಟ ದ್ವಾರಕೀಶ್‌ ಲೇಖನ

ಕನ್ನಡ ಚಿತ್ರರಂಗದಲ್ಲಿ ಕುಳ್ಳ ಎಂದೇ ಖ್ಯಾತರಾದ ದ್ವಾರಕೀಶ್ 5 ದಶಕಗಳಿಗೂ ಹೆಚ್ಚು ಕಾಲ ನಿರ್ಮಾಪಕ, ನಿರ್ದೇಶನ, ಹಾಸ್ಯನಟನಾಗಿ ತಮ್ಮ ಹೆಜ್ಜೆ ಗುರುತುಗಳನ್ನು ಮೂಡಿಸಿದ್ದಾರೆ. ಅನೇಕ ಉತ್ತಮ ಚಲನಚಿತ್ರಗಳನ್ನು ಕನ್ನಡ ಚಿತ್ರರಸಿಕರಿಗೆ ನೀಡಿದ ಹೆಗ್ಗಳಿಕೆ ದ್ವಾರಕೀಶ್‌ ಅವರದ್ದು.

VISTARANEWS.COM


on

Actor Dwarakish article on the occation of B S Yediyurappa Birthday
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದ್ವಾರಕೀಶ್
ನಿಜ! ಜೀವನದಲ್ಲಿ ಪ್ರತಿಯೊಬ್ಬರಿಗೂ ಹಠವಿರಬೇಕು, ಆದರೆ ಆ ಹಠ ಒಳ್ಳೆಯ ಧೈಯ ಹೊಂದಿರಬೇಕು. ಅಂತಹ ಜೀವನದಲ್ಲಿ ಸತ್ಯದ ಸೇವೆಯ, ಜನಸೇವೆಯ ಪ್ರೀತಿ ಅಭಿಮಾನದ, ದೇಶಾಭಿಮಾನದ, ಭಾಷಾಭಿಮಾನದ, ಸದುದ್ಧೇಯದ ಹಠವನ್ನು ಹೊತ್ತು ಒಂದು ಚಿಕ್ಕ ಹಳ್ಳಿಯಲ್ಲಿ ಬಡ ರೈತನ ಮಗನಾಗಿ ಹುಟ್ಟಿ ಇಂದು ತಾನು ಹುಟ್ಟಿದ ನಾಡಿನ ನಾಯಕರಾಗಿದ್ದಾರೆ ನಮ್ಮ ಯಡಿಯೂರಪ್ಪನವರು. ಅವರ ಹೃದಯದ ಕೆಚ್ಚು ಹಠದ ಬಗ್ಗೆ ನಮಗೆ ಬಹಳ ಅಭಿಮಾನವೆನಿಸುತ್ತದೆ.

ಇಷ್ಟೆಲ್ಲ ನಾನು ಅವರ ಬಗ್ಗೆ ಹೇಳಲಿಕ್ಕೆ ಕಾರಣ, ಅವರಿಗಿದ್ದ ಹಠದ ಜೊತೆಯಲ್ಲಿ ಅವರು ನಡೆದು ಬಂದ ದಾರಿ. ಮನುಷ್ಯನಾಗಿ ಧೈಯ ಹೇಗೆ ಮುಖ್ಯವೋ, ಅಷ್ಟೇ ಮುಖ್ಯ ಅವರು ನಡೆದು ಬರುವ ದಾರಿ. ಮೊದಲಿನಿಂದಲೂ ಒಂದೇ ಪಕ್ಷವನ್ನು ದೃಢವಾಗಿ ನಂಬಿ, ಆ ಪಕ್ಷಕ್ಕಾಗಿ ದುಡಿದು-ದುಡಿದು ಇಂದು ಆ ಪಕ್ಷವನ್ನು, ಅಂದರೆ, ಭಾರತೀಯ ಜನತಾ ಪಕ್ಷವನ್ನು ಕರ್ನಾಟಕದಲ್ಲಿ ಹಿಡಿದೆಬ್ಬಿಸಿ ನಿಲ್ಲಿಸಿದ್ದಾರೆ. ಇದು ಅವರ ಬಗ್ಗೆ ನಮಗೆ ಬಹಳ ಹೆಮ್ಮೆಯನ್ನು ತಂದಿದೆ, ಮನಸ್ಸಿಗೆ ಸಂತಸ ತಂದಿದೆ. ನನ್ನ ಹಾಗೂ ಯಡಿಯೂರಪ್ಪನವರ ಪರಿಚಯ ಸ್ನೇಹದ ಬಗ್ಗೆ ಹೇಳುವುದಾದರೆ ಕೆಲವು ತಿಂಗಳುಗಳ ಕಾಲ ಅವರ ಜತೆಯಲ್ಲಿ ಒಡನಾಟ ಆ ಅನುಭವ! ಸಾಮಾನ್ಯವಾಗಿ ಅನ್ನ ಆಗಿದೆಯೋ ಎಂದು ಹೇಗೆ ಒಂದು ಅಗಳು ಅನ್ನ ನೋಡಿ ತಿಳಿದುಕೊಳ್ಳಬಹುದೋ ಹಾಗೆ, ಕೆಲವು ದಿನ ಅವರೊಡನೆ ಕಳೆದ ದಿನಗಳು ಅವರ ಬಗ್ಗೆ ಬರೆಯಲು ನನಗೆ ಧೈರ್ಯ-ಹುಮ್ಮಸ್ಸು ಕೊಡುತ್ತದೆ. 1998ನೇ ಇಸವಿಯಲ್ಲಿ ಅವರ ಜೊತೆಯಲ್ಲಿ ಪಕ್ಷಕ್ಕಾಗಿ ಓಡಾಡುವ ಅವಕಾಶ ನನಗೆ ದೊರಕಿತು. ಶಿವಮೊಗ್ಗ, ಗುಲ್ಬರ್ಗಾ, ಬೆಳಗಾಂ ಮತ್ತು ಕೋಲಾರ ಜಿಲ್ಲೆಗಳಲ್ಲಿ ಚುನಾವಣಾ ಪ್ರಚಾರಕ್ಕಾಗಿ ಅವರ ಜೊತೆಯಲ್ಲಿ ಓಡಾಡಿದ್ದೇನೆ.

ಒಬ್ಬ ಸಾಮಾನ್ಯ ಕಲಾವಿದನಾದ ನನಗೆ ಅವರು ತೋರಿಸಿದ ಅತೀ ಹೆಚ್ಚಿನ ಪ್ರೀತಿ ವಿಶ್ವಾಸ, ಆದರ, ಅಭಿಮಾನದಿಂದ ನಾವು ಅವರ ಒಳ್ಳೆಯತನವನ್ನು ನೋಡಿದೆವು. ಅದನ್ನು ಕೇವಲ ನಾಲ್ಕಾರು ಪದಗಳಿಂದ ಹೇಳಲು ಸಾಧ್ಯವಿಲ್ಲ. ಆಗತಾನೇ ನನಗೆ ಹೃದಯ ಚಿಕಿತ್ಸೆಯಾಗಿ ಕೆಲವೇ ದಿನಗಳಾಗಿತ್ತು. ನಾವು ಹೋದ ಪ್ರತಿಯೊಂದು ವೇದಿಕೆಯಲ್ಲೂ ಅವರ ಬಿಡುವಿಲ್ಲದ ಕಾರ್ಯಕ್ರಮಗಳ ಮಧ್ಯದಲ್ಲಿಯೂ ನನ್ನ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ತೆಗೆದುಕೊಳ್ಳುತ್ತಿದ್ದರು. ಆದ್ದರಿಂದ ನನಗೆ ಆಗುತ್ತಿದ್ದ ಆ ತೃಪ್ತಿ, ಸಮಾಧಾನ, ಸಂತೋಷ ಓಹ್! ಅನುಭವಿಸಿದವರಿಗೇ ಗೊತ್ತಾಗುವುದು. ಇಂದಲ್ಲ ನಾಳೆ ಭಾರತೀಯ ಜನತಾ ಪಾರ್ಟಿ ಸರ್ಕಾರ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದೇ ಬರುತ್ತದೆ ಎಂಬ ವಿಶ್ವಾಸ, ನಂಬಿಕೆ ಅವರಲ್ಲಿದ್ದುದನ್ನು ನಾನು ಕಂಡಿದ್ದೆ. ಸೋಲುಗಳೇ ಯಶಸ್ಸಿನ ಮೆಟ್ಟಿಲು ಎಂದು ಹೇಳುತ್ತಾರೆ. ಯಾವ ಸೋಲುಗಳನ್ನೂ ಲೆಕ್ಕಿಸದೇ ಗೆಲುವನ್ನೇ ಗುರಿಯಾಗಿಟ್ಟುಕೊಂಡು ಗೆದ್ದವರು ನಮ್ಮ ಯಡಿಯೂರಪ್ಪನವರು.

ಸಾಮಾನ್ಯವಾಗಿ ಯಡಿಯೂರಪ್ಪನವರ ಬಗ್ಗೆ ಕೇಳಿ ಬರುವ ಮಾತು ಅವರಿಗೆ ಕೋಪ ಜಾಸ್ತಿ ಅಂತ. ಅವರ ಜೊತೆಯಲ್ಲಿ ಸ್ವಲ್ಪ ಕಾಲ ಕಳೆದ ನಾನೇನೋ ಎಂದೂ ಹಾಗೆ ಕಂಡಿಲ್ಲ. ಕೋಪದ ಮಾತು ಎಂದು ಹೇಳುವುದಕ್ಕಿಂತ ಸತ್ಯದ ಮಾತು ಎಂದರೆ ಸಮಂಜಸವಾಗುತ್ತದೆ. ಕಾರಣ, ಸತ್ಯ ಎಂದೂ ನಿಷ್ಠುರ, ಸತ್ಯ ಎಂದಿದ್ದರೂ ಕಠಿಣ. ಎಷ್ಟೋ ಬಾರಿ ವೇದಿಕೆ ಮೇಲೆ ಅವರ ಜೊತೆಯಲ್ಲಿ ಕುಳಿತು ಅವರ ಭಾಷಣಗಳನ್ನು ಕೇಳಿದ್ದೇನೆ. ಎಂದೂ ಯಡಿಯೂರಪ್ಪನವರು ಭಾಷಣದಲ್ಲಿ ತೊದಲಿದವರಲ್ಲ ಅಥವಾ ಅತಿಯಾದ ಯೋಚನೆ ಮಾಡಿ ಮಾತನಾಡುವವರಲ್ಲ. ಬ್ರೇಕಿಲ್ಲದೇ ಬಿರುಗಾಳಿಯಂತೆ ಮಾತನಾಡುವವರು ಯಡಿಯೂರಪ್ಪನವರು. ಯಾಕಪ್ಪ ಈ ಬಿರಿಸು ಅವರ ಮಾತಿನಲ್ಲಿ ಎಂದರೆ, ಎಲ್ಲವೂ ಸತ್ಯಕ್ಕೆ ಹತ್ತಿರದ ಮಾತುಗಳೇ ಅವು ! ಯಡಿಯೂರಪ್ಪನವರ ಸತ್ಯದ ಮಾತುಗಳೇ ಕರ್ನಾಟಕ ಜನತೆಯಲ್ಲಿ ಬೇರೂರಿ ಇಂದು ಭಾರತೀಯ ಜನತಾ ಪಕ್ಷದ ಬಾವುಟ ಹಾರಾಡಿದೆ.

ಜ್ಞಾಪಕಶಕ್ತಿಯಲ್ಲಿ ಯಡಿಯೂರಪ್ಪನವರು ಯಾರಿಗೂ ಕಡಿಮೆಯಿಲ್ಲ. ಸರ್ಕಾರದಿಂದ ನನಗೆ ಜೀವಮಾನ ಸಾಧನೆಗೆ ಪ್ರಶಸ್ತಿ ಬಂದಾಗ ನನ್ನ ಬಗ್ಗೆ ಅವರು ಆಡಿದ ಮುತ್ತಿನಂತಹ ಮಾತುಗಳು ನನ್ನ ಮನಸ್ಸಿನಾಳದಲ್ಲಿ ಇನ್ನೂ ಧ್ವನಿಸುತ್ತಿದೆ. ಹತ್ತು ವರ್ಷಗಳ ಹಿಂದೆ ಅವರ ಜೊತೆಯಲ್ಲಿ ಕಾಲ ಕಳೆದಾಗ ನಾನೊಬ್ಬ ಶ್ರೀ ರಾಘವೇಂದ್ರ ಸ್ವಾಮಿಗಳ ಭಕ್ತ, ಆರಾಧಕ ಎಂದು ಅವರಿಗೆ ತಿಳಿದಿತ್ತು. ಅದನ್ನು ಮರೆತಿರದ ಅವರು, ಆ ದಿನ ಪ್ರಶಸ್ತಿ ಪ್ರಧಾನ ಮಾಡುವಾಗ ಇಂದು ಶ್ರೀ ರಾಘವೇಂದ್ರ ಸ್ವಾಮಿಗಳವರ ಆರಾಧನಾ ದಿನ ಈ ದಿವಸ ಅವರ ಭಕ್ತ ಆರಾಧಕ ಶ್ರೀ ದ್ವಾರಕೀಶರವರಿಗೆ ಪ್ರಶಸ್ತಿ ಬಂದಿದೆ, ಅದಕ್ಕಿಂತ ಹೆಚ್ಚಿನ ಸಂತೋಷ ನನಗಿಲ್ಲ ಎಂದು ಹೇಳಿದ್ದರವರು. ಆ ದಿನ ನನಗೆ ಹೃದಯ ತುಂಬಿ ಬಂದು ಕಣ್ಣಲ್ಲಿ ನೀರು ತಂದಿತ್ತು. ಈಗ ಕೂಡ ಅದನ್ನು ನೆನೆಸಿಕೊಳ್ಳುವಾಗ ಒಂದು ತರಹ ಅಪೂರ್ವವಾದ ಆನಂದ, ತೃಪ್ತಿ ಮನಸ್ಸಿಗೆ ಆಗುತ್ತದೆ. ಇದರಿಂದ ಅವರಿಗೆ ನನ್ನ ಮೇಲೆ ಇರುವ ಪ್ರೀತಿ ವಿಶ್ವಾಸವನ್ನು ನಾನು ಹೇಗೆ ತಾನೇ ಮರೆಯಲು ಸಾಧ್ಯ !

ನಾನು ಸಿನಿಮಾ ಜೀವನದಲ್ಲಿದ್ದವನೇ ಹೊರತು ರಾಜಕೀಯದ ಬಗ್ಗೆ ಕನಸಿನಲ್ಲೂ ಯೋಚಿಸಿದವನಲ್ಲ. ಆದರೆ ಎಲ್ಲೋ ಶ್ರೀ ವಾಜಪೇಯಿಯವರ ಮೇಲೆ ಎಲ್ಲೂ ಇಲ್ಲದ ಅಭಿಮಾನ -ಪ್ರೀತಿ-ವಿಶ್ವಾಸ. ಒಬ್ಬ ಭಾರತೀಯ ಪ್ರಜೆಯಾಗಿ, ಅವರ ಮೇಲೆ ನನಗೆ ಮಾತ್ರವಲ್ಲ, ನನ್ನ ಹಿರಿಯ ಮಗ ಸಂತೋಷ್, ಈಗ ಅಮೇರಿಕಾದಲ್ಲಿ ವಿಪ್ರೋ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾನೆ, ಅವನಿಗೂ ಸಹ ಶ್ರೀ ವಾಜಪೇಯಿಯವರೆಂದರೆ ಬಹಳ ಅಚ್ಚು ಮೆಚ್ಚು. ಅವರಷ್ಟೇ ಅಲ್ಲ, ಎಲ್ಲಾ ಬಿ.ಜೆ.ಪಿ ಮುಖಂಡರ ಮೇಲೂ ಅತಿಯಾದ ಪ್ರೀತಿ ಅಭಿಮಾನ ಮತ್ತು ವಿಶ್ವಾಸ. ಅಂದ ಹಾಗೆ ಮರೆತಿದ್ದೆ, ನಾನು ಹುಡುಗನಾಗಿದ್ದಾಗ ಅಂದರೆ 1955-56ನೇ ಇಸವಿಯಲ್ಲಿ (ನಮಸ್ತೆ ಸದಾ ವತ್ಸಲೇ ಮಾತೃಭೂಮೆ…ಎಂದು ಹೇಳುತ್ತಿದ್ದರು). ನನ್ನ ಮನ ಭಾರತೀಯ ಜನತಾ ಪಕ್ಷದ ಕಡೆಗೆ ಸೆಳೆಯಿತು, ಅದರ ಪ್ರತಿಫಲವೇ 1998 ರಲ್ಲಿ ಬೆಂಗಳೂರು ವುಡ್‌ಲ್ಯಾಂಡ್ಸ್‌ ಹೋಟೆಲ್ನಲ್ಲಿ ಪಕ್ಷದ ಅಧಿವೇಶನ ನಡೆದಾಗ ಶ್ರೀ ಆಡ್ವಾನಿಯವರ ನೇತೃತ್ವದಲ್ಲಿ ಮುಖ್ಯ ಮಂತ್ರಿ ಚಂದ್ರು ಜೊತೆ ಪಕ್ಷದ ಧ್ವಜವನ್ನು ಹಿಡಿಯುವಂತಾಯಿತು. ಆದರೆ ನನ್ನ ಸಂಸಾರ ಮದ್ರಾಸಿನಲ್ಲಿದ್ದುದರಿಂದ, ಗಮನವೆಲ್ಲ ಚಿತ್ರರಂಗದಲ್ಲಿಯೇ ಉಳಿಯಬೇಕಾಯಿತು. ನಾನೇನಾದರೂ ಚುನಾವಣಾ ಪ್ರಚಾರಕ್ಕೆ ಹೋಗಿದ್ದೆ ಆದರೆ, ಅದಕ್ಕೆ ಕಾರಣ ಮಾನ್ಯ ಮುಖ್ಯಮಂತ್ರಿ ಶ್ರೀ ಯಡಿಯೂರಪ್ಪನವರು. ಚುನಾವಣಾ ಪ್ರಚಾರ ಎಂದರೆ ಒಂದು ವಿಚಾರ ನೆನಪಿಗೆ ಬರುತ್ತದೆ. ಅದನ್ನು ಇಲ್ಲಿ ಹೇಳುವುದು ಬಹು ಸಮಂಜಸವಾಗಿದೆ ಎಂದರೆ ತಪ್ಪಾಗುವುದಿಲ್ಲ.

ನಾವು ಚುನಾವಣಾ ಪ್ರಚಾರಕ್ಕೆ ಮೂರು ದಿನ ಬೆಳಗಾವಿಗೆ ಹೊರಡುವುದು ನಿಶ್ಚಿತವಾಗಿತ್ತು. ನನಗೆ ಮನಸ್ಸಿನಲ್ಲಿ ಏನೋ ಒಂದು ರೀತಿಯ ಕಳವಳ, ಭಯ, ಕಾರಣ ನನಗೆ ಸಿನಿಮಾದಲ್ಲಿ ಮಾತನಾಡಿ ಅಭ್ಯಾಸವಿತ್ತೇ ವಿನಃ ಚುನಾವಣಾ ಭಾಷಣದ ವೈಖರಿ ಗೊತ್ತಿರಲಿಲ್ಲ. ಅದಕ್ಕೆ ತಕ್ಕ ಹಾಗೆ ಹಿಂದಿನ ದಿನ ರಾತ್ರಿ ನನಗೊಂದು ಫೋನ್ ಕಾಲ್ ಬಂತು ಅದು ಬೆಳಗಾವಿಯಿಂದ. ಒಬ್ಬ ವ್ಯಕ್ತಿ ಪೋನ್‌ನಲ್ಲಿ ಯಾರೀ ಮಾತನಾಡುತ್ತಿರುವುದು, ದ್ವಾರಕೀಶ್ ಅವರಾ, ರೀ ನೀವು ದಯವಿಟ್ಟು ಬೆಳಗಾವಿಗೆ ಬರಬೇಡಿ. ಬಂದರೆ ನಿಮ್ಮ ಗ್ರಹಚಾರ ಕಡಿಮೆಯಾಗುತ್ತೆ ಅಷ್ಟೇ ತಿಳಿದುಕೊಳ್ಳಿ” ಎಂದು ಸ್ವಲ್ಪ ಉದ್ವೇಗ, ಜೋರಿನಿಂದಲೇ ಹೇಳಿದರು, ಆಗ ನಿಜವಾಗಿಯೂ ನನಗೆ ತುಂಬಾ ಭಯವೇ ಆಯಿತು. ಏನಪ್ಪಾ ಮಾಡುವುದು ಎಂದು ಯೋಚನೆ ಮಾಡಿ ಕೊನೆಗೆ ಬೇರೆ ದಾರಿ ಇಲ್ಲ ಯಡಿಯೂರಪ್ಪ ಅವರನ್ನೇ ಕೇಳಿ ಬಿಡೋಣ ಎಂದುಕೊಂಡು, ಅವರಿಗೆ ಪೋನ್ ಮಾಡಿ ಈ ವಿಚಾರ ತಿಳಿಸಿದೆ, ಆಗ ಅವರು ತಕ್ಷಣ ನಕ್ಕುಬಿಟ್ಟರು.

(ಮೂಲ: ʼದಣಿವರಿಯದ ಧೀಮಂತʼ ಕೃತಿ(2020). ಲೇಖನ: ʼಯಡಿಯೂರಪ್ಪ ಹಠವಾದಿʼ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Pralhad Joshi: ರಾಜ್ಯದಲ್ಲಿ ಹತ್ಯೆ, ಆತ್ಮಹತ್ಯೆಗಳೇ ಅಧಿಕ, ಅಭಿವೃದ್ಧಿ ಸಮಾಧಿ: ಪ್ರಲ್ಹಾದ್‌ ಜೋಶಿ ಟೀಕೆ

Pralhad Joshi: ಸಿಎಂ‌ ಸಿದ್ದರಾಮಯ್ಯನವರು ಹೊಣೆಗೇಡಿತನದ ಹೇಳಿಕೆ‌‌ ನೀಡಿದ್ದರ ಪರಿಣಾಮ‌ ಈಗ ಇಂಥ ಕೃತ್ಯಗಳು ಮರುಕಳಿಸುತ್ತಿವೆ ಎಂದು ಹುಬ್ಬಳ್ಳಿ ಅಂಜಲಿ ಹತ್ಯೆ ಬಗ್ಗೆ ಸಚಿವ ಪ್ರಲ್ಹಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Pralhad Joshi
Koo

ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಹತ್ಯೆ, ಆತ್ಮಹತ್ಯೆ ಕೃತ್ಯಗಳೇ ಅಧಿಕವಾಗಿದ್ದು, ಅಭಿವೃದ್ಧಿ ಸಮಾಧಿಯಾಗಿದೆ. ರಾಜ್ಯದಲ್ಲಿ ಅಪರಾಧ ಪ್ರಕರಣಗಳು ತೀವ್ರವಾಗಿವೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬರೋಬ್ಬರಿ 490 ಕೊಲೆಗಳಾಗಿವೆ. 600 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಆಕ್ರೋಶ ವ್ಯಕ್ತಪಡಿಸಿದರು.

ಬಿಹಾರ ಪ್ರಚಾರಕ್ಕೆ ತೆರಳಿದ್ದ ಸಚಿವರು ಭಾನುವಾರ ಹುಬ್ಬಳ್ಳಿಗೆ ಬರುತ್ತಲೇ ನೇರ ಅಂಜಲಿ ಮನೆಗೆ ತೆರಳಿ ಕುಟುಂಬಕ್ಕೆ ಸಾಂತ್ವನ ಹೇಳಿ, ಸರ್ಕಾರದ ವಿರುದ್ಧ ಹರಿ ಹಾಯ್ದರು. ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ಬಳಿಕ ಈಗ ಮತ್ತೊಬ್ಬ ಯುವತಿ ಭೀಕರವಾಗಿ ಕೊಲೆಯಾಗಿದ್ದಾಳೆ. ಅಂಜಲಿ ಅಜ್ಜಿ ಮತ್ತು ‌ಸಹೋದರಿಯರು‌ ಹೇಳಿದ್ದನ್ನು ಕೇಳಿದ್ರೆ ಭಯ ಹುಟ್ಟುತ್ತದೆ. ಈ ಹಿಂದೆಯೆ ಆರೋಪಿ ಬಗ್ಗೆ ದೂರು ನೀಡಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬುದು ಅವರ ಆರೋಪ. ಆ ಸಂದರ್ಭ ಯಾವ ಅಧಿಕಾರಿಗಳಿದ್ದರು‌? ಅವರ ಬಗ್ಗೆಯೂ‌ ತನಿಖೆಯಾಗಬೇಕು ಎಂದು ಸಚಿವ ಜೋಶಿ ಆಗ್ರಹಿಸಿದರು.

ಇದನ್ನೂ ಓದಿ | Ebrahim Raisi: ಪತನದ ಬಳಿಕ ಹೆಲಿಕಾಪ್ಟರ್‌ ನಾಪತ್ತೆ; ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು?

ನೇಹಾ ಹತ್ಯೆಯಾದಾಗ ಬಹುದೊಡ್ಡ ಜನಾಂದೋಲನವೇ ಆಯಿತು. ಆ ವೇಳೆ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ ಅವರ ಹೇಳಿಕೆ‌ ಕೃತ್ಯ ನಡೆಸುವವರಿಗೆ‌ ಪ್ರೋತ್ಸಾಹ ನೀಡಿದಂತಾಗಿದೆ. ಸಿಎಂ‌ ಸಿದ್ದರಾಮಯ್ಯನವರು ಹೊಣೆಗೇಡಿತನದ ಹೇಳಿಕೆ‌‌ ನೀಡಿದ್ದರ ಪರಿಣಾಮ‌ ಈಗ ಇಂಥ ಕೃತ್ಯಗಳು ಮರುಕಳಿಸುತ್ತಿವೆ. ರಾಜ್ಯ ಸರ್ಕಾರಕ್ಕೆ ಗಂಭೀರತೆಯೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ನಡೆದ ಅಪರಾಧ ಕೃತ್ಯಗಳ ಬಗ್ಗೆ ಪ್ರಶ್ನೆ ಮಾಡಿದರೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಷ್ಟು ಪ್ರಕರಣಗಳಾಗಿವೆ ಎಂಬುದನ್ನು ಹುಡುಕಲು ಅಧಿಕಾರಿಗಳನ್ನು ನೇಮಿಸುತ್ತಾರೆ ಎಂದು ಕಿಡಿಕಾರಿದರು.

ಅಧಿಕಾರಿಗಳ ವರ್ಗಾವಣೆ ದಂಧೆ

ರಾಜ್ಯದಲ್ಲಿ ಅಧಿಕಾರಿಗಳ ವರ್ಗಾವಣೆಗೆ ಸಿಕ್ಕಾಪಟ್ಟೆ ಹಣ ತೆಗೆದುಕೊಳ್ತಾರೆ. ಗಾಂಜಾ‌, ಅಫೀಮು‌ ಚಟುವಟಿಕೆಗಳಿಗೆ‌ ಕಡಿವಾಣ ಹಾಕಲು ಆಗ್ತಿಲ್ಲ. ಕಾನೂನು‌ ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಅಭಿವೃದ್ದಿಯು ಸಮಾಧಿಯಾಗಿದೆ ಎಂದು ಸಚಿವ ಜೋಶಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಪಾಲಕರಲ್ಲಿ ಭಯ

ರಾಜ್ಯದಲ್ಲಿ ಕಡುಬಡ‌ವರು ಹೆಣ್ಣು ಮಕ್ಕಳನ್ನು ಕಾಲೇಜಿಗೆ ಶಾಲೆಗೆ ಕಳುಹಿಸಲು ಭಯಪಡುತ್ತಿದ್ದಾರೆ. ಜನರು ಬೀದಿಗಿಳಿಯುವ ಪರಿಸ್ಥಿತಿಯನ್ನ‌ ಸರ್ಕಾರ ತಂದುಕೊಳ್ಳಬಾರದು. ಕೊಲೆ, ಹತ್ಯೆ, ಆತ್ಮಹತ್ಯೆ ಪ್ರಕರಣಗಳಲ್ಲಿ ಸರ್ಕಾರ ಗಂಭೀರ ಕ್ರಮ ತೆಗೆದುಕೊಳ್ಳಬೇಕು. ಅದು ಬಿಟ್ಟು ಯಾರೋ ಒಬ್ಬ ಅಧಿಕಾರಿ‌ಯನ್ನು ಅಮಾನತ್ತು ಮಾಡಿ ಕೈ ತೊಳೆದುಕೊಳ್ಳಬಾರದು ಎಂದು ಹೇಳಿದರು.

ಅಂಜಲಿ ಭಾವಚಿತ್ರಕ್ಕೆ ಪುಷ್ಪ ನಮನ

ದುಷ್ಕರ್ಮಿಯಿಂದ ಹತ್ಯೆಗೀಡಾದ ಹುಬ್ಬಳ್ಳಿ ವೀರಾಪುರ ಓಣಿಯ ಅಂಜಲಿ ಅಂಬಿಗೇರ ಭಾವಚಿತ್ರಕ್ಕೆ ಸಚಿವರು ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.

ಇದನ್ನೂ ಓದಿ | R Ashok: ರಾಜ್ಯದಲ್ಲಿ ಮಳೆಗಿಂತ ಹೆಚ್ಚಾಗಿ ಕೊಲೆಗಳೇ ನಡೆಯುತ್ತಿವೆ: ಆರ್‌.ಅಶೋಕ್‌ ಕಿಡಿ

ಈ‌ ಸಂದರ್ಭದಲ್ಲಿ ಮಾಜಿ ಶಾಸಕರಾದ ಅಶೋಕ‌ ಕಾಟವೆ, ಅಂಬಿಗೇರ ಸಮಾಜದ ಮುಖಂಡರಾದ ಮಾರುತಿ ಕಬ್ಬೇರ, ಪಕ್ಷದ ಪ್ರಮುಖರಾದ ಶಿವು ಮೆಣಸಿನಕಾಯಿ, ಪ್ರಭು ನವಲಗುಂದಮಠ, ಚಂದ್ರಶೇಖರ ಗೋಕಾಕ, ಬಸವರಾಜ ಅಮ್ಮಿನಬಾವಿ, ಶಶಿ ಬಿಜುವಾಡ, ಅನೂಪ್ ಬಿಜುವಾಡ, ರಾಜು ಜರ್ತಾರಘರ್, ಶಿವಯ್ಯ ಹಿರೇಮಠ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Continue Reading

ದಕ್ಷಿಣ ಕನ್ನಡ

Mrs India Karnataka: ಮಿಸಸ್ ಕರ್ನಾಟಕ ಮಂಗಳೂರು ಗ್ರ್ಯಾಂಡ್ ಫಿನಾಲೆ; ಸಾಂಪ್ರದಾಯಿಕ, ಮಾಡರ್ನ್ ಉಡುಗೆಯಲ್ಲಿ ಮಿಂಚಿದ ನಾರಿಯರು

Mrs India Karnataka: ಮಂಗಳೂರಿನ ಕದ್ರಿ ಪಾರ್ಕ್‌ನಲ್ಲಿ ಭಾನುವಾರ ಮಿಸಸ್ ಕರ್ನಾಟಕ ಮಂಗಳೂರು ಕಾರ್ಯಕ್ರಮ ನೆರವೇರಿತು. ಸಾಂಪ್ರದಾಯಿಕ, ಮಾಡರ್ನ್ ಉಡುಗೆ ವಿಭಾಗಗಳಲ್ಲಿ ನಡೆದ ಫ್ಯಾಷನ್‌ ಶೋ ನೆರೆದಿದ್ದ ಜನರ ಕಣ್ಮನ ಸೆಳೆಯಿತು.

VISTARANEWS.COM


on

Mrs India Karnataka
Koo

ಮಂಗಳೂರು: ಮಹಿಳೆಯರಿಗೆ ಫ್ಯಾಷನ್ ಲೋಕದಲ್ಲಿ ಅವಕಾಶವನ್ನು ಕಲ್ಪಿಸುವ ನಿಟ್ಟಿನಲ್ಲಿ ಪ್ರತಿಭಾ ಸಂಶೀಮಠ ಅವರ ನೇತೃತ್ವದಲ್ಲಿ ವಿಸ್ತಾರ ನ್ಯೂಸ್ ಸಹಯೋಗದಲ್ಲಿ ಮಿಸಸ್ ಕರ್ನಾಟಕ ಮಂಗಳೂರು (Mrs India Karnataka) ಗ್ರ್ಯಾಂಡ್ ಫಿನಾಲೆ ಮಂಗಳೂರಿನ ಕದ್ರಿ ಪಾರ್ಕ್‌ನಲ್ಲಿ ಭಾನುವಾರ ನಡೆಯಿತು.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಯ ಸುಮಾರು 26 ಮಹಿಳೆಯರು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ನಾಲ್ಕು ವರ್ಷಗಳಿಂದ ಮಿಸಸ್ ಕರ್ನಾಟಕವನ್ನು ಆಯೋಜನೆ ಮಾಡುತ್ತಿದ್ದು, ಇದೀಗಾ 5ನೇ ವರ್ಷದ ಮಿಸಸ್ ಕರ್ನಾಟಕ ಆವೃತ್ತಿ ಮಂಗಳೂರಿನಲ್ಲಿ ನಡೆಯಿತು. ಸಾಂಪ್ರದಾಯಿಕ, ಮಾಡರ್ನ್ ಉಡುಗೆ ವಿಭಾಗಗಳಲ್ಲಿ ನಡೆದ ಈ ಗ್ರ್ಯಾಂಡ್ ಫಿನಾಲೆ ನೆರೆದಿದ್ದ ಜನರ ಕಣ್ಮನ ಸೆಳೆಯಿತು.

ಇದನ್ನೂ ಓದಿ | Sequins Partywear Fashion: ಪಾರ್ಟಿಪ್ರಿಯರಿಗೆ ಬಂತು ಮಿರಮಿರ ಮಿನುಗುವ ಸಿಕ್ವೀನ್ಸ್‌ ಔಟ್‌ಫಿಟ್ಸ್‌

Continue Reading

ಕರ್ನಾಟಕ

Tourist Boat Capsizes: ತದಡಿ ಬಳಿ ಮಗುಚಿದ ಪ್ರವಾಸಿಗರ ಬೋಟ್; 40 ಪ್ರವಾಸಿಗರ ರಕ್ಷಣೆ

Tourist Boat Capsizes: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಬಳಿ ಸಮುದ್ರದ ಹಿನ್ನೀರಿನಲ್ಲಿ ಘಟನೆ ನಡೆದಿದೆ. ದೋಣಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರನ್ನು ಹತ್ತಿಸಿಕೊಂಡಿದ್ದರಿಂದ ಬೋಟ್ ಮಗುಚಿದೆ.

VISTARANEWS.COM


on

Tourist boat capsizes
Koo

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಸಮೀಪ ಸಮುದ್ರದ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಮಗುಚಿದ್ದು, 40 ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ. ಅಳಿವೆ ಸಂಗಮ ಸ್ಥಳದಿಂದ ತುಸು ದೂರದಲ್ಲಿ ಘಟನೆ (Tourist Boat Capsizes) ನಡೆದಿದ್ದು, ಕರಾವಳಿ ಕಾವಲು ಪಡೆ ಮತ್ತು ಸ್ಥಳೀಯ ರಕ್ಷಣಾ ತಂಡದಿಂದ ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ.

ಮೂಡಂಗಿಯ ಗಣೇಶ, ರಮೇಶ ಎಂಬುವವರ ಪ್ರವಾಸಿ ಬೋಟ್ ಮಗುಚಿದ್ದು, ದೋಣಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರನ್ನು ಹತ್ತಿಸಿಕೊಂಡಿದ್ದರಿಂದ ಬೋಟ್ ಮಗುಚಿದೆ. ಸಕಾಲಕ್ಕೆ ಕರಾವಳಿ ಕಾವಲು ಪಡೆ ಆಗಮಿಸಿ ರಕ್ಷಣೆ ಮಾಡಿದ್ದರಿಂದ ದೊಡ್ಡ ದುರಂತವೊಂದು ತಪ್ಪಿದೆ.

Drown in Lake: ಮೀನು ಹಿಡಿಯಲು ಕೆರೆಗೆ ಹೋಗಿದ್ದ ಇಬ್ಬರು ನೀರು ಪಾಲು

ಉಡುಪಿ: ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರು ಪಾಲಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಶಿರ್ಲಾಲುವಿನ ಉಬ್ಬರಬೈಲಿನಲ್ಲಿ ನಡೆದಿದೆ. ಮುಡ್ಡಾಯಿಗುಡ್ಡೆ ಹರೀಶ್ ಪೂಜಾರಿ (48), ಹೃತೇಶ್ ಪೂಜಾರಿ (18) ಮೃತಪಟ್ಟವರು.

ಮೀನು ಹಿಡಿಯಲೆಂದು ಉಬ್ಬರಬೈಲು ಕೆರೆಗೆ ಹೋಗಿದ್ದಾಗ ದುರ್ಘಟನೆ ನಡೆದಿದೆ. ಮೀನಿಗೆ ಬಲೆ‌ ಹಾಕುವಾಗ ಆಯತಪ್ಪಿ ಕೆರೆಗೆ ಬಿದ್ದು ಇಬ್ಬರೂ ನೀರುಪಾಲಾಗಿದ್ದಾರೆ. ಕಾರ್ಕಳ ಅಜೆಕಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ | Harish Poonja: ಪೊಲೀಸರಿಗೆ ಧಮ್ಕಿ; ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

ಅನಾರೋಗ್ಯದಿಂದ ತಾಯಿ ಸಾವು, ಶವದ ಜತೆ 4 ದಿನ ಕಳೆದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು!

Kundapur News

ಉಡುಪಿ: ಒಂದೆಡೆ ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ಮೃತಪಟ್ಟಿದ್ದರೆ, ಆ ಬಗ್ಗೆ ಅರಿವೇ ಇಲ್ಲದ ಬುದ್ಧಿಮಾಂದ್ಯ ಪುತ್ರಿಯೂ ಕೂಡ ತೀವ್ರ ಅಸ್ವಸ್ಥಗೊಂಡು ಕೊನೆಯುಸಿರೆಳೆದಿರುವ ಮನ ಕಲಕುವ ಘಟನೆ ಜಿಲ್ಲೆಯ ಕುಂದಾಪುರ (Kundapur News) ತಾಲೂಕಿನ ಮೂಡುಗೋಪಾಡಿಯ ದಾಸನಹಾಡಿಯಲ್ಲಿ ನಡೆದಿದೆ.

ತಾಯಿ ಜಯಂತಿ ಶೆಟ್ಟಿ (62), ಮಗಳು ಪ್ರಗತಿ ಶೆಟ್ಟಿ (32) ಮೃತರು. ಅನಾರೋಗ್ಯದಿಂದ ಬಳಲುತ್ತಿದ್ದ ಜಯಂತಿ ಶೆಟ್ಟಿ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ತಾಯಿಯ ಶವದ ಜತೆಗೆ 4 ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿ, ತೀವ್ರ ಅಸ್ವಸ್ಥಗೊಂಡಿದ್ದಳು.

ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪರಿಶೀಲಿಸಿದಾಗ ಮಹಿಳೆ ಮೃತಪಟ್ಟಿರುವ ವಿಷಯ ಬೆಳಕಿಗೆ ಬಂದಿದೆ. ಈ ವೇಳೆ ತೀವ್ರ ಅಸ್ವಸ್ಥಗೊಂಡಿದ್ದ ಮಗಳನ್ನು ರಕ್ಷಿಸಿದ್ದ ಕುಂದಾಪುರ ಪೊಲೀಸರು, ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಯುವತಿ ಮೃತಪಟ್ಟಿದ್ದಾಳೆ.

ಇದನ್ನೂ ಓದಿ | Viral News: ಬಾಯ್‌ಫ್ರೆಂಡ್‌ನ ಗುಪ್ತಾಂಗವನ್ನೇ ಕಟ್‌ ಮಾಡಿ ಕಸದ ಬುಟ್ಟಿಗೆ ಎಸೆದ ಮಹಿಳೆ

Continue Reading

ಕರ್ನಾಟಕ

Dangerous Bike Stunt: ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ಓಡಿಸಿದ ಯುವಕ ಅರೆಸ್ಟ್‌

Dangerous Bike Stunt: ಬೆಂಗಳೂರಿನಲ್ಲಿ ಅಪಾಯಕಾರಿ ಬೈಕ್‌ ರೈಡಿಂಗ್ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆದ ಹಿನ್ನೆಲೆಯಲ್ಲಿ ಯುವಕನನ್ನು ಪೊಲೀಸರು ಬಂಧಿಸಿ, ಬೈಕ್‌ ವಶಕ್ಕೆ ಪಡೆದಿದ್ದಾರೆ.

VISTARANEWS.COM


on

Dangerous Bike Stunt
Koo

ಬೆಂಗಳೂರು: ನಗರದಲ್ಲಿ ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ರೈಡ್ (Dangerous Bike Stunt) ಮಾಡಿದ್ದ ಯುವಕನನ್ನು ಹೆಬ್ಬಾಳ ಸಂಚಾರ ಪೊಲೀಸರು ಬಂಧಿಸಿದ್ದಾರೆ. ಅಪಾಯಕಾರಿ ಬೈಕ್‌ ರೈಡಿಂಗ್ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆದ ಹಿನ್ನೆಲೆಯಲ್ಲಿ ಯುವಕನನ್ನು ಪೊಲೀಸರು ಬಂಧಿಸಿ, ಬೈಕ್‌ ವಶಕ್ಕೆ ಪಡೆದಿದ್ದಾರೆ.

ಶಾಂಪುರ ನಿವಾಸಿ ಸಿಲಂಬರಸನ್ (21) ಬಂಧಿತ ಯುವಕ. ಯುವತಿಯನ್ನು ಯುವಕ ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ಚಾಲನೆ ಮಾಡಿದ್ದ ವಿಡಿಯೊ ವೈರಲ್‌ ಆಗಿತ್ತು. ಇದರಿಂದ ಬೈಕ್ ನಂಬರ್ ಪ್ಲೇಟ್ ಅಧರಿಸಿ ಸಿಲಂಬರಸನ್‌ನನ್ನು ಪೊಲೀಸರು ಬಂಧಿಸಿ, ಡಿಎಲ್ ರದ್ದು ಮಾಡಲು ಆರ್‌ಟಿಒಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ | Bomb Threat: ಏರ್‌ಪೋರ್ಟ್‌ನಲ್ಲಿ ಬಾಂಬ್‌ ಇದೆ ಎಂದು ತಮಾಷೆ ಮಾಡಲು ಹೋಗಿ ಜೈಲು ಪಾಲಾದ

ಬೈಕ್​ನಲ್ಲಿ ಹೋಗುತ್ತಲೇ ರೊಮ್ಯಾನ್ಸ್!

yelahanka flyover

ಇತ್ತೀಚೆಗೆ ಜೋಡಿಗಳು ಬೈಕ್​ನಲ್ಲಿ ಹೋಗುತ್ತಲೇ ರೊಮ್ಯಾನ್ಸ್ (Romance in bike riding) ಮಾಡುವ ಪ್ರಕರಣಗಳು ಹೆಚ್ಚಾಗುತ್ತಿದೆ. ಹುಚ್ಚು ಸಾಹಸವೂ, ಪ್ರೇಮದ ಉನ್ಮಾದವೋ ಗೊತ್ತಿಲ್ಲ. ಇದು ಅಪಾಯಕಾರಿ ಎಂದು ಗೊತ್ತಿದ್ದರೂ ಪರಸ್ಪರ ಎದುರುಬದುರು ಕುಳಿತುಕೊಂಡು ಮುದ್ದಾಡಿಕೊಂಡು ಹೋಗುವುದು, ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಡೆಡ್ಲಿ ರೈಡಿಂಗ್‌ ಮಾಡುವುದು ಹೆಚ್ಚುತ್ತಿದೆ. ಅದೇ ರೀತಿ ಬೆಂಗಳೂರಲ್ಲಿ (Yelahanka flyover) ಜೋಡಿಯೊಂದರ ಬೈಕ್ ರೈಡಿಂಗ್ (Bike Riding ವಿಡಿಯೊ ವೈರಲ್‌ ಆಗಿತ್ತು.

ಯುವತಿಯನ್ನು ತೊಡೆಯ ಮೇಲೆ ಕೂರಿಸಿಕೊಂಡು ಯುವಕ ಸಿಲಂಬರಸನ್ ಬೈಕ್‌ ರೈಡ್ ಮಾಡಿದ್ದ. ಬೆಂಗಳೂರಿನ ಏರ್‌ಪೋರ್ಟ್ ರಸ್ತೆಯ ಯಲಹಂಕ ಫ್ಲೈ‌ಓವರ್‌ನಲ್ಲಿ ಮೇ 17ರ ರಾತ್ರಿ‌ ಈ ಘಟನೆ ನಡೆದಿತ್ತು. ಯುವ ಜೋಡಿಗಳು ಹೆಲ್ಮೆಟ್ ಧರಿಸದೇ ಅಜಾಗರೂಕತೆಯಿಂದ ಬೈಕ್ ಚಾಲನೆ ಮಾಡಿದ್ದರು. ಜೋಡಿಗಳ ಜಾಲಿ‌ ರೈಡ್‌ನ ದೃಶ್ಯ ಕಾರಿನಲ್ಲಿ ಹೋಗುತ್ತಿದ್ದ ಪ್ರಯಾಣಿಕರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದರು.

ಇದನ್ನೂ ಓದಿ: Viral Video: ಐಸ್ ಕ್ರೀಮ್‌ನಲ್ಲಿ ಚಿನ್ನದ ಉಂಗುರ ಅಡಗಿಸಿಕೊಟ್ಟ ಪ್ರಿಯತಮ! ಮುಂದೇನಾಯ್ತು?

ನಂತರ ಸೋಶಿಯಲ್‌ ಮೀಡಿಯಾದಲ್ಲಿ ಈ ವಿಡಿಯೊ ವೈರಲ್‌ ಆಗಿದೆ. ಸಾರ್ವಜನಿಕ ಸುರಕ್ಷತೆ ಅಪಾಯಗಳ ಬಗ್ಗೆ ವ್ಯಾಪಕ ಕಳವಳ ಹುಟ್ಟುಹಾಕಿತ್ತು. ಹೆಲ್ಮೆಟ್ ಧರಿಸದೆ ಇರುವುದು ಜತೆಗೆ ಯುವತಿ ಪೆಟ್ರೋಲ್‌ ಟ್ಯಾಂಕ್ ಮೇಲೆ ಕುಳಿತು ತನ್ನ ಸಂಗಾತಿಯನ್ನು ಅಪ್ಪಿಕೊಂಡಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

ಇದನ್ನೂ ಓದಿ: Murder Case : ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಹತ್ಯೆ; ಕೆಆರ್‌ ಮಾರ್ಕೆಟ್‌ನಲ್ಲಿ ಶವ ಪತ್ತೆ

ಅಜಾಗರೂಕ ಮತ್ತು ಅನುಚಿತ ವರ್ತನೆಗಾಗಿ ದಂಡ ವಿಧಿಸಿ ಎಂದು ನೆಟ್ಟಿಗರು ಕಾಮೆಂಟ್‌ ಹಾಕಿದ್ದರು. ರಸ್ತೆ ಸುರಕ್ಷತೆಯ ಬಗ್ಗೆ ಮತ್ತು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಅಗತ್ಯತೆಯ ಬಗ್ಗೆ ಚರ್ಚಿಸಿದ್ದರು. ಹೀಗಾಗಿ ಯಲಹಂಕ ಸಂಚಾರ ಪೊಲೀಸ್ ಠಾಣೆ ಪೊಲೀಸರು ಯುವಕನ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

Continue Reading
Advertisement
Pralhad Joshi
ಕರ್ನಾಟಕ4 hours ago

Pralhad Joshi: ರಾಜ್ಯದಲ್ಲಿ ಹತ್ಯೆ, ಆತ್ಮಹತ್ಯೆಗಳೇ ಅಧಿಕ, ಅಭಿವೃದ್ಧಿ ಸಮಾಧಿ: ಪ್ರಲ್ಹಾದ್‌ ಜೋಶಿ ಟೀಕೆ

Ebrahim Raisi
ವಿದೇಶ4 hours ago

Ebrahim Raisi: ಪತನದ ಬಳಿಕ ಹೆಲಿಕಾಪ್ಟರ್‌ ನಾಪತ್ತೆ; ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು?

Mrs India Karnataka
ದಕ್ಷಿಣ ಕನ್ನಡ4 hours ago

Mrs India Karnataka: ಮಿಸಸ್ ಕರ್ನಾಟಕ ಮಂಗಳೂರು ಗ್ರ್ಯಾಂಡ್ ಫಿನಾಲೆ; ಸಾಂಪ್ರದಾಯಿಕ, ಮಾಡರ್ನ್ ಉಡುಗೆಯಲ್ಲಿ ಮಿಂಚಿದ ನಾರಿಯರು

IPL 2024 Eliminato
ಕ್ರೀಡೆ5 hours ago

IPL 2024 Eliminator: ಎಲಿಮಿನೇಟರ್​ ಪಂದ್ಯಕ್ಕೂ ಮುನ್ನ ಆರ್​ಸಿಬಿಗೆ ಆಘಾತ; ಇಬ್ಬರು ಸ್ಟಾರ್​ ಆಟಗಾರರು ಅಲಭ್ಯ!

Tourist boat capsizes
ಕರ್ನಾಟಕ5 hours ago

Tourist Boat Capsizes: ತದಡಿ ಬಳಿ ಮಗುಚಿದ ಪ್ರವಾಸಿಗರ ಬೋಟ್; 40 ಪ್ರವಾಸಿಗರ ರಕ್ಷಣೆ

RR vs KKR
ಕ್ರೀಡೆ5 hours ago

RR vs KKR: ಮಳೆಯಿಂದ​ ಪಂದ್ಯ ರದ್ದು; ಎಲಿಮಿನೇಟರ್‌ ಪಂದ್ಯದಲ್ಲಿ​ ಆರ್​ಸಿಬಿಗೆ ರಾಜಸ್ಥಾನ್​ ಎದುರಾಳಿ

Parliament Security
ದೇಶ5 hours ago

Parliament Security: ನಾಳೆಯಿಂದ ಸಂಸತ್‌ಗೆ ಸಿಆರ್‌ಪಿಎಫ್‌ ಬದಲು ಸಿಐಎಸ್‌ಎಫ್‌ ಭದ್ರತೆ; ಏಕಿಂಥ ನಿರ್ಧಾರ?

Dangerous Bike Stunt
ಕರ್ನಾಟಕ6 hours ago

Dangerous Bike Stunt: ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ಓಡಿಸಿದ ಯುವಕ ಅರೆಸ್ಟ್‌

Narendra Modi
ದೇಶ6 hours ago

Narendra Modi: ಮುಸ್ಲಿಮರ ವೋಟಿಗಾಗಿ ಮಮತಾ ಬ್ಯಾನರ್ಜಿ ಹಿಂದು ಸಂಘಟನೆಗಳ ವಿರುದ್ಧ ಆರೋಪ; ಮೋದಿ ಟೀಕೆ

SRH vs PBKS
ಕ್ರೀಡೆ7 hours ago

SRH vs PBKS: ಆರ್​ಸಿಬಿಯ ಸಿಕ್ಸರ್​ ದಾಖಲೆ ಮುರಿದ ಹೈದರಾಬಾದ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ12 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ13 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ14 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌