Site icon Vistara News

Actor Pratham: ನಟ ಪ್ರಥಮ್‌ಗೆ ಜೀವ ಬೆದರಿಕೆ; ದರ್ಶನ್ ಅಭಿಮಾನಿಗಳ ಮೇಲೆ ಬಿತ್ತು ಕೇಸ್‌

Actor Pratham

ಬೆಂಗಳೂರು: ನಟ ಪ್ರಥಮ್ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ದರ್ಶನ್ ಅಭಿಮಾನಿಗಳ ವಿರುದ್ಧ ಜ್ಞಾನಭಾರತಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ದರ್ಶನ್ ವಿಚಾರದಲ್ಲಿ ದನಿ ಎತ್ತಿದ್ದಕ್ಕೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಪ್ರಥಮ್‌ (Actor Pratham) ದೂರು ನೀಡಿದ್ದರು. ಹೀಗಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಫೇಸ್ ಬುಕ್‌ನಲ್ಲಿ ನಟ ಪ್ರಥಮ್‌ ಹಾಗೂ ಪತ್ನಿ ವಿರುದ್ಧ ಅವಹೇಳನಕಾರಿ ಮತ್ತು ಆಶ್ಲೀಲ ಪೋಸ್ಟ್ ಮಾಡಿ, ನಿರಂತರವಾಗಿ ಧಮ್ಕಿ ಮತ್ತು ಬೆದರಿಕೆ ಕರೆಗಳು ಬರುತ್ತಿದ್ದ ಹಿನ್ನೆಲೆಯಲ್ಲಿ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಪ್ರಥಮ್‌ ದೂರು ನೀಡಿದ್ದರು, ಹೀಗಾಗಿ ಎಫ್‌ಐಆರ್ ದಾಖಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಬಂಧನವಾಗಿದ್ದರೂ ಅವರ ಅಭಿಮಾನಿಗಳು ಸಮರ್ಥಿಸಿಕೊಳ್ಳುತ್ತಿರುವ ಬಗ್ಗೆ ಇತ್ತೀಚೆಗೆ ನಟ ಪ್ರಥಮ್‌ ಕಿಡಿಕಾರಿದ್ದರು. ನನಗೆ ಒಂದು ವಾರ ಪೊಲೀಸ್‌ ಕಾನ್‌ಸ್ಟೇಬಲ್‌ ಆಗಲು ಅವಕಾಶ ಕೊಟ್ಟರೆ, ದರ್ಶನ್‌ ಅಂಧ ಅಭಿಮಾನಿಗಳಿಗೆ ನಾಯಿಗೆ ಹೊಡೆದಂಗೆ ಹೊಡೆಯುತ್ತೇನೆ. ಆ ಪೊಲೀಸ್‌ ಸ್ಟೇಷನ್‌ ಬಳಿ ಇದ್ದವರಲ್ಲಿ ಒಬ್ಬನಾದರೂ ಅವರ ತಾಯಿಗೆ ಒಂದು ಹೊತ್ತು ಊಟ ಕೊಡಿಸಲು ಯೋಗ್ಯತೆ ಇಲ್ಲ ಎಂದು ಆಕ್ರೋಶ ಹೊರಹಾಕಿದ್ದರು. ಹೀಗಾಗಿ ಪ್ರಥಮ್‌ಗೆ ನಟ ದರ್ಶನ್ ಅಭಿಮಾನಿಗಳಿಂದ ಬೆದರಿಕೆ ಕರೆಗಳು ಬಂದಿವೆ.

Actor Darshan

ಇದನ್ನೂ ಓದಿ | Darshan Arrested: ದರ್ಶನ್‌ ಸೇರಿ ನಾಲ್ವರು ಪೊಲೀಸ್‌ ಕಸ್ಟಡಿಗೆ, ಪವಿತ್ರಾ ಗೌಡ ಸೇರಿ 10 ಮಂದಿಗೆ ಜೈಲು

ದೂರು ನೀಡಿದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪೋಸ್ಟ್‌ ಹಂಚಿಕೊಂಡಿದ್ದ ಪ್ರಥಮ್‌ ಅವರು, ಜೀವನ ಬಹಳ ದೊಡ್ಡದು, ಯಾರಿಗೋಸ್ಕರವೋ ನೀವು ಅದನ್ನ ಹಾಳು ಮಾಡಿಕೊಳ್ಳಬೇಡಿ. ನಾನು ತುಂಬಾ ಶಾಂತಿಯಿಂದಲೇ ಇದ್ದೆ, ನೀವು ಅತಿಯಾಗಿ ನಮ್ಮ #ಕರ್ನಾಟಕದ_ಅಳಿಯ ತಂಡದ office no ಗೆ ಕಾಲ್ ಮಾಡಿ ಬೆದರಿಕೆ ಹಾಕುತ್ತಲೆ ಬಂದಿದ್ದೀರಿ. ಇನ್ಮೇಲೆ ನನಗೆ ಬರೋ ಕಾಲ್ msg ಅಥವಾ social media warning ಎಲ್ಲವೂ ಪೋಲೀಸರು ನೋಡಿಕೊಳ್ತಾರೆ. ಬದುಕು ಸುಂದರವಾದದ್ದು, ಅಂಧಾಭಿಮಾನಿಗಳೇ ನಿಮ್ಮ ತಂದೆ ತಾಯಿಗಳಿಗೆ ಮೀಸಲಿಡಿ; ಯಾರಿಗೋಸ್ಕರವೋ ಹಾಳುಮಾಡಿಕೊಳ್ಳಬೇಡಿ. ಕನ್ನಡಕ್ಕಾಗಿ, ಕಾವೇರಿಗಾಗಿ, ಸಂಸ್ಕೃತಿ ಉಳಿಸೋಕೆ ಬೇಕಾದ್ರೆ ಜೈಲಿಗೆ ಹೋಗಿ…; ಯಾರಿಗೋಸ್ಕರವೋ ಲೈಫ಼್ ಹಾಳುಮಾಡಿಕೊಳ್ಳಬೇಡಿ ಎಂದು ತಮಗೆ ಬೆದರಿಕೆ ಹಾಕಿರುವ ದರ್ಶನ್‌ ಅಭಿಮಾನಿಗಳಿಗೆ ಪರೋಕ್ಷವಾಗಿ ಸಲಹೆ ನೀಡಿದ್ದರು.

Exit mobile version