Site icon Vistara News

Actor Sri Murali: ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರಳಿ ಕಾಲಿಗೆ ಪೆಟ್ಟು; ಆಸ್ಪತ್ರೆಗೆ ದಾಖಲು

Actor Sri Murali

ಬೆಂಗಳೂರು: ʼಬಘೀರ’ ಚಿತ್ರದ ಶೂಟಿಂಗ್​ ವೇಳೆ ನಟ ಶ್ರೀಮುರಳಿ ಕಾಲಿಗೆ ಪೆಟ್ಟಾಗಿದೆ. ಫೈಟಿಂಗ್ ಸೀನ್ ಚಿತ್ರಿಸುವ ವೇಳೆ ಶ್ರೀಮುರಳಿ ಅವರ ಕಾಲಿಗೆ ಪೆಟ್ಟಾಗಿದ್ದು, ಸದ್ಯ ವೀಲ್ ಚೇರ್ ಸಹಾಯದ ಮೂಲಕ ನಟ ಓಡಾಡುತ್ತಿದ್ದಾರೆ. ಎರಡು ದಿನಗಳ ನಂತರ ಅವರು ಸರ್ಜರಿ ಮಾಡಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ರೋರಿಂಗ್ ಸ್ಟಾರ್ ಶ್ರೀಮುರಳಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸ್ಯಾಂಡಲ್‌ವುಡ್‌ ರೋರಿಂಗ್‌ ಸ್ಟಾರ್‌ ಶ್ರೀಮುರಳಿ (Actor Sriimurali) ಅವರ ಬಹುನಿರೀಕ್ಷಿತ ‘ಬಘೀರ’ ಚಿತ್ರದ ಟೀಸರ್ ಇತ್ತೀಚೆಗೆ ರಿಲೀಸ್ ಆಗಿತ್ತು. ಒಂದೂವರೆ ನಿಮಿಷದ ಆಕ್ಷನ್ ಪ್ಯಾಕ್ಡ್ ಟೀಸರ್ ರಿಲೀಸ್ ಆಗಿ ಸದ್ದು ಮಾಡಿತ್ತು. ಚಿತ್ರದಲ್ಲಿ ರಗಡ್‌ ಲುಕ್‌ನಲ್ಲಿ ಶ್ರೀ ಮುರುಳಿ ಮಿಂಚಿದ್ದಾರೆ.

ʼಕೆಜಿಎಫ್ ಚಾಪ್ಟರ್ 2ʼ ಮತ್ತು ʼಕಾಂತಾರʼ ಸಿನಿಮಾಗಳ ಮೆಗಾ ಯಶಸ್ಸಿನ ನಂತರ ಹೊಂಬಾಳೆ ಫಿಲ್ಮ್ಸ್ ʼಬಘೀರʼ ಚಿತ್ರವನ್ನು ನಿರ್ಮಿಸುತ್ತಿದೆ. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ಕಥೆ ಬರೆದಿದ್ದು, ʼಲಕ್ಕಿʼ ಸಿನಿಮಾ ಖ್ಯಾತಿಯ ಡಾ. ಸೂರಿ ನಿರ್ದೇಶನ ಮಾಡುತ್ತಿದ್ದಾರೆ.

ಸೂರಿ ಅವರು ಯಶ್‌ ಅವರ ʼಲಕ್ಕಿ ʼ ಚಿತ್ರದ ನಂತರ ನಾಲ್ಕು ವರ್ಷಗಳ ನಂತರ ಮತ್ತೆ ನಿರ್ದೇಶನಕ್ಕೆ ಬರುತ್ತಿದ್ದಾರೆ. ಮಫ್ತಿ, ಭರಾಟೆ, ರಥಾವರ, ಕಂಠಿ ಚಿತ್ರಗಳಲ್ಲಿ ಅಬ್ಬರಿಸಿದ ಶ್ರೀಮುರುಳಿ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ರಕ್ಷಿತ್‌ ಶೆಟ್ಟಿ ನಟನೆಯ ʻಸಪ್ತ ಸಾಗರದಾಚೆ ಎಲ್ಲೋʼ, ಗಣೇಶ್ ನಟನೆಯ “ಬಾನ ದಾರಿಯಲ್ಲಿʼ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸುತ್ತಿರುವ ರುಕ್ಮಿಣಿ ವಸಂತ್ ಈಗ “ಬಘೀರʼ ಚಿತ್ರಕ್ಕೂ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ಈ ಬಾರಿ ಕಾಮಿಡಿ ಕಿಲಾಡಿ ಶೋನಲ್ಲಿ ಯಾರೂ ನಗಂಗಿಲ್ಲ! ಏನಿದು ಹೊಸ ಶೋ?

ಬೆಂಗಳೂರು: ಜೀ ಕನ್ನಡ ವಾಹಿನಿಯ ಅಚ್ಚು ಮೆಚ್ಚಿನ ರಿಯಾಲಿಟಿ ಶೋ ಅಂದರೆ ಅದುವೇ ʻಕಾಮಿಡಿ ಕಿಲಾಡಿಗಳುʼ ಶೋ. (Comedy Khiladigalu Premier League) “ಸೈಡ್‌ಗಿಡ್ರಿ ನಿಮ್‌ ಟೆನ್ಷನ್‌ಗಳು, ಮತ್ತೆ ಬಂದಿದ್ದಾರೆ ಕಾಮಿಡಿ ಕಿಲಾಡಿಗಳು” ಎಂಬ ಸ್ಲೋಗನ್‌ ಮೂಲಕ ವಾರಾಂತ್ಯದಲ್ಲಿ ಕರುನಾಡನ್ನೇ ನಗೆಗಡಲಲ್ಲಿ ತೇಲಿಸುವ ಕೀರ್ತಿ ಈ ಕಾರ್ಯಕ್ರಮಕ್ಕೆ ಸಲ್ಲುತ್ತದೆ. ಇದೀಗ ಸೀಸನ್‌ 5 ಪ್ರೇಕ್ಷಕರ ಮುಂದೆ ಬರುತ್ತಿದೆ. ಇದೀಗ ವಾಹಿನಿ ಹೊಸ ಪ್ರೋಮೊ ಹಂಚಿಕೊಂಡಿದ್ದು, ನೋಡಲು ತುಂಬ ವಿಶೇಷವಾಗಿದೆ. ʻಈ ಬಾರಿ ನಗುವ ಹಾಗೆ ಇಲ್ವಂತೆ. ನಕ್ಕರೆ ಲಾಸು, ನಗಿಸೋರಿಗೆ ಕೈತುಂಬಾ ಕಾಸುʼ ಎನ್ನುತ್ತಲೇ ನವರಸ ನಾಯಕ ಜಗ್ಗೇಶ್ ವೀಕ್ಷಕರಿಗೆ ಕುತೂಹಲ ಕೆರಳಿಸಿದ್ದಾರೆ.

ಕಾಮಿಡಿ ಕಿಲಾಡಿಗಳು ಮುಂದಿನ ಸೀಸನ್‌ ವಿಶೇಷವಾಗಿರಲಿದೆ. ​ಗನ್ ಹಿಡಿದು ಕೆಲವರು ಜಗ್ಗೇಶ್‌ ಹಿಂದೆ ನಿಂತು ಸೀರಿಯಸ್ ಆಗಿದ್ದಾರೆ. ಜಗ್ಗಣ್ಣ ನಕ್ಕು ಬಿಡಿ ಅಂದಾಗ, ಇವರೆಲ್ಲ ಗುಂಡು ಹಾರಿಸಿ ಇಡೀ ವಾತಾವರಣ ರಣರಂಗ ಮಾಡಿ ಬಿಡುತ್ತಾರೆ. ಆಗ ಒಟ್ಟಿಗೆ ನಗುತ್ತಾರೆ. ಕಾಮಿಡಿ ಶೋ ಇರುವುದು ನಗೋಕೆ ಮತ್ತು ನಗಿಸೋಕೆ. ಆದರೆ ಈ ಸಲ ನಗೋ ಹಾಗಿಲ್ಲ ಅನ್ನೋದೇ ಕಾನ್ಸೆಪ್ಟ್ ಅನಿಸುತ್ತದೆ. ಹಾಗಾಗಿಯೇ ಈ ಶೋ ಮೊದಲ ಪ್ರೋಮೊ ಇದೀಗ ವಿಶೇಷವಾಗಿಯೇ ಕಾಣಿಸುತ್ತಿದೆ. ಇದರ ಪ್ರೀಮಿಯರ್​ ಶೋ ಶೀಘ್ರದಲ್ಲಿ ಎಂದು ಹಂಚಿಕೊಳ್ಳಲಾಗಿದೆ. ಆದರೆ ಇದನ್ನ ನೋಡುವ ಪ್ರೇಕ್ಷಕರು ಮತ್ತು ನಿರ್ಣಾಯಕರು ನಗಬಹುದು ಎನ್ನುವುದನ್ನೂ ಇಂಟರೆಸ್ಟಿಂಗ್ ಆಗಿಯೇ ಜಗ್ಗೇಶ್​ ಅವರು ಹೇಳಿದ್ದಾರೆ.

ಇದನ್ನೂ ಓದಿ: Comedy khiladi Nayana: ಹೆಣ್ಣು ಮಗುವಿಗೆ ತಾಯಿಯಾದ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಯನಾ!

ಸೀಸನ್ 4 ಈಗಾಗಲೇ ಮುಕ್ತಾಯಗೊಂಡಿದೆ. ಸೀಸನ್‌ 4ರ ವಿಜೇತರಾಗಿ ಹರೀಶ್ ಹಿರಿಯೂರು, ಮೊದಲನೇ ರನ್ನರ್ ಅಪ್ ಆಗಿ ಮಂಡ್ಯದ ಗಿಲ್ಲಿ ನಟ ಮತ್ತು ಎರಡನೇ ರನ್ನರ್ ಆಫ್ ಆಗಿ ಶುಭಾ ಸ್ಥಾನ ಪಡೆದಿದ್ದರು. ಒಟ್ಟು 12 ಜನ ಟಾಪ್​ ಫೈನಲಿಸ್ಟ್‌ಗಳ ನಡುವೆ ಈ ಮೂವರು ವಿಶೇಷ ಸ್ಥಾನ ಪಡೆದಿದ್ದರು.

ಪ್ರತಿ ಬಾರಿಯಂತೆ ಈ ಬಾರಿಯೂ ನವರಸನಾಯಕ ಜಗ್ಗೇಶ್‌, ನಟಿ ರಕ್ಷಿತಾ ಪ್ರೇಮ್‌ ಕಾಮಿಡಿ ಕಿಲಾಡಿಗೆ ತೀರ್ಪುಗಾರರಾಗಿರಲಿದ್ದಾರೆ ಎಂದೇ ವರದಿಯಾಗಿದೆ. ಈ ಕಾರ್ಯಕ್ರಮದ ಮೂಲಕ ಹೆಸರು ಪಡೆದವರು ಅದೆಷ್ಟೋ ಸ್ಟಾರ್‌ ನಟರ ಜತೆ, ಬೆಳ್ಳಿ ಪರದೆಯಲ್ಲಿ ಕಲಾವಿದರಾಗಿ ಮಿಂಚುತ್ತಿದ್ದಾರೆ. ಮೆಗಾ ಆಡಿಷನ್‌ನಲ್ಲಿ ಈ ಬಾರಿಯೂ ವಿವಿಧ ಭಾಗದ ಬೇರೆ ಬೇರೆ ಕಲಾವಿದರು ಆಯ್ಕೆಯಾಗಿದ್ದಾರೆ. ತಮ್ಮ ವಿಶೇಷ ಪ್ರತಿಭೆಗಳಿಂದ ನೋಡುಗರನ್ನು ರಂಜಿಸಲಿದ್ದಾರೆ.‌ ಈ ಕಾರ್ಯಕ್ರಮದ (Comedy Khiladigalu) ಎಲ್ಲ ಸೀಸನ್‌ಗಳಲ್ಲಿಯೂ ಅದ್ಭುತವಾಗಿ ನಿರೂಪಣೆ ಮಾಡಿರುವ ಮಾಸ್ಟರ್‌ ಆನಂದ್‌ ಈ ಬಾರಿಗೂ ನಿರೂಪಣೆ ಜವಾಬ್ದಾರಿಯನ್ನು ಹೊತ್ತಿದ್ದಾರೆ ಎನ್ನಲಾಗಿದೆ.

Exit mobile version