Aero India 2023: ಫೆ.13ರಂದು ವೈಮಾನಿಕ, ರಕ್ಷಣಾ ಕೈಗಾರಿಕೆಗಳ ಸಿಇಒಗಳ ದುಂಡು ಮೇಜಿನ ಸಭೆ; ರಾಜನಾಥ್ ಸಿಂಗ್ ಅಧ್ಯಕ್ಷತೆ - Vistara News

Aero India

Aero India 2023: ಫೆ.13ರಂದು ವೈಮಾನಿಕ, ರಕ್ಷಣಾ ಕೈಗಾರಿಕೆಗಳ ಸಿಇಒಗಳ ದುಂಡು ಮೇಜಿನ ಸಭೆ; ರಾಜನಾಥ್ ಸಿಂಗ್ ಅಧ್ಯಕ್ಷತೆ

Aero India 2023: ಕೇಂದ್ರ ರಕ್ಷಣಾ ಸಚಿವಾಲಯದಿಂದ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಫೆಬ್ರವರಿ 13ರಿಂದ 17ರವರೆಗೆ 14ನೇ ಆವೃತ್ತಿಯ ಏರೋ ಇಂಡಿಯಾ 2023 ವೈಮಾನಿಕ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಇದರ ಭಾಗವಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಸಿಇಒಗಳ ಸಭೆ ಆಯೋಜಿಸಲಾಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಏರೋ ಇಂಡಿಯಾ-2023 ವೈಮಾನಿಕ (Aero India 2023) ಪ್ರದರ್ಶನ ಹಿನ್ನೆಲೆಯಲ್ಲಿ ರಕ್ಷಣಾ ಸಚಿವಾಲಯದಿಂದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಫೆಬ್ರವರಿ 13 ರಂದು ನಗರದ ಯಲಹಂಕ ವಾಯುನೆಲೆಯಲ್ಲಿ ‘ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಗಳ ದುಂಡು ಮೇಜಿನ ಸಭೆ’ ಆಯೋಜಿಸಲಾಗಿದೆ.

“ಆಗಸವೇ ಮಿತಿಯಲ್ಲ: ಗಡಿಗಳನ್ನು ಮೀರಿದ ಅವಕಾಶಗಳು” ಎಂಬ ಘೋಷವಾಕ್ಯದ ವೇದಿಕೆಯು ‘ಮೇಕ್-ಇನ್ ಇಂಡಿಯಾ’ ಅಭಿಯಾನವನ್ನು ಉತ್ತೇಜಿಸಲಿದೆ ಮತ್ತು ‘ಸುಲಭದ ವ್ಯಾಪಾರ ನಡೆಸುವ’ ದೃಷ್ಟಿಯಿಂದ ಉದ್ಯಮ ಪಾಲುದಾರರು ಮತ್ತು ಸರ್ಕಾರದ ನಡುವೆ ಹೆಚ್ಚು ಉತ್ಕೃಷ್ಠ ಸಂವಾದಕ್ಕೆ ಅಡಿಪಾಯ ಹಾಕುವ ನಿರೀಕ್ಷೆಯಿದೆ. ‘ಮೇಕ್-ಇನ್-ಇಂಡಿಯಾ ಫಾರ್ ದಿ ವರ್ಲ್ಡ್’ಗೆ ವೇದಿಕೆಯಾಗಲಿರುವ ಏರೋ ಇಂಡಿಯಾ 2023, ಭಾರತದಲ್ಲಿ ಉತ್ಪಾದನೆಗೆ ಒಇಎಂಗಳಿಗೆ ಪೂರಕ ವೇದಿಕೆಯನ್ನು ಒದಗಿಸುತ್ತದೆ.

ಬೋಯಿಂಗ್, ಲಾಕ್ಹೀಡ್, ಇಸ್ರೇಲ್ ಏರೋಸ್ಪೇಸ್ ಇಂಡಸ್ಟ್ರೀಸ್, ಜನರಲ್ ಅಟಾಮಿಕ್ಸ್, ಲೈಬರ್ ಗ್ರೂಪ್, ರೇಥಿಯಾನ್ ಟೆಕ್ನಾಲಜೀಸ್, ಸಫ್ರಾನ್, ಮಿಲಿಟರಿ ಇಂಡಸ್ಟ್ರೀಸ್ ಜನರಲ್ ಅಥಾರಿಟಿ (ಜಿಎಎಂಐ) ನಂತಹ ಜಾಗತಿಕ ಹೂಡಿಕೆದಾರರು ಸೇರಿ 26 ದೇಶಗಳ ಅಧಿಕಾರಿಗಳು ಮತ್ತು ಪ್ರತಿನಿಧಿಗಳು ಮತ್ತು ಜಾಗತಿಕ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ದುಂಡು ಮೇಜಿನ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ | Highway Projects: ಕರ್ನಾಟಕದ 6 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ₹3,582 ಕೋಟಿ ನೀಡಿದ ಕೇಂದ್ರ ಸರ್ಕಾರ: ನಿತಿನ್‌ ಗಡ್ಕರಿ ಘೋಷಣೆ

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್), ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್), ಭಾರತ್ ಡೈನಾಮಿಕ್ಸ್ ಲಿಮಿಟೆಡ್ (ಬಿಡಿಎಲ್), ಬಿಇಎಂಎಲ್ ಲಿಮಿಟೆಡ್, ಮಿಶ್ರಾ ಧಾತು ನಿಗಮ ನಿಯಮಿತ ಮತ್ತಿತರ ದೇಶೀಯ ಸಾರ್ವಜನಿಕ ವಲಯದ ಕಂಪನಿಗಳು ಮತ್ತು ಭಾರತದ ಪ್ರಮುಖ ಖಾಸಗಿ ರಕ್ಷಣಾ ಮತ್ತು ವೈಮಾನಿಕ ಕಂಪನಿಗಳಾದ ಲಾರ್ಸೆನ್ ಮತ್ತು ಟೂಬ್ರೋ, ಭಾರತ್ ಫೋರ್ಜ್, ಡೈನಾಮಿಟಿಕ್ ಟೆಕ್ನಾಲಜೀಸ್, ಬ್ರಹ್ಮೋಸ್ ಏರೋಸ್ಪೇಸ್ ಸೇರಿ ಮತ್ತಿತರ ಸಂಸ್ಥೆಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿವೆ.

ಇದು ಸಹ-ಅಭಿವೃದ್ಧಿ ಮತ್ತು ಸಹ-ಉತ್ಪಾದನೆಗಾಗಿ ಕೈಗಾರಿಕೆಗಳನ್ನು ತೊಡಗಿಸಿಕೊಳ್ಳುತ್ತದೆ. ಭಾರತವನ್ನು ವಾಣಿಜ್ಯ ಉತ್ಪಾದನಾ ಕೇಂದ್ರವಾಗಿ ಮಾಡಲು ಮತ್ತು ಜಾಗತಿಕ ಉತ್ಪನ್ನ ಬೆಂಬಲಕ್ಕೆ ಆಧಾರವಾಗಿಸುತ್ತದೆ. ಭಾರತೀಯ ಮತ್ತು ಜಾಗತಿಕ ಮಾರುಕಟ್ಟೆಯನ್ನು ಶೋಧಿಸುವಾಗ ಮತ್ತು ಕೈಗಾರಿಕೆಗಳು ಕೇವಲ ‘ಮೇಕ್ ಇನ್ ಇಂಡಿಯಾ’ ಆದರೆ ಸಾಲದು ‘ಮೇಕ್ ಇನ್ ಇಂಡಿಯಾ ಫಾರ್ ದಿ ವಲ್ಡ್‌’ ಆಗುವ ಅವಕಾಶ ಸೃಷ್ಟಿಯಾಗಲಿದೆ.

ಭಾರತವು ಜಾಗತಿಕನಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಒಂದಾಗಿ ಹೊರಹೊಮ್ಮಿದೆ. ಹೂಡಿಕೆಗಳು ಮತ್ತು ವ್ಯಾಪಾರಕ್ಕಾಗಿ ಅಭಿವೃದ್ಧಿ ಹೊಂದುತ್ತಿರುವ ಮತ್ತು ಸ್ಥಿರ ವಾತಾವರಣವನ್ನು ಇಡೀ ವಿಶ್ವಕ್ಕೆ ಒದಗಿಸುತ್ತದೆ. ಭಾರತದ ಮೇಲೆ ಜಗತ್ತಿನ ಗಮನವು ಹೆಚ್ಚಾಗುತ್ತಿರುವುದರಿಂದ ವ್ಯಾಪಾರಕ್ಕೆ ಪೂರಕ ವ್ಯವಸ್ಥೆ ಮತ್ತು ಕಡಿಮೆ ವೆಚ್ಚದಲ್ಲಿ ಪರಿಣಾಮಕಾರಿ ಸ್ಪರ್ಧಾತ್ಮಕತೆಯ ಅನ್ವೇಷಣೆಗೆ ಕಾರಣವಾಗಿದೆ.

ಭಾರತವು ಇಂದು ವಿಶ್ವದ 3ನೇ ಅತಿದೊಡ್ಡ ಮಿಲಿಟರಿಯನ್ನು ಹೊಂದಿದೆ. ಮುಂದಿನ 5-7 ವರ್ಷಗಳಲ್ಲಿ ನೌಕಾಪಡೆ (ಫ್ಲೀಟ್) ಆಧುನೀಕರಣಕ್ಕಾಗಿ 130 ಶತಕೋಟಿ ಅಮೆರಿಕನ್ ಡಾಲರ್ ಖರ್ಚು ಮಾಡಲು ಸರ್ಕಾರ ಯೋಜಿಸಿದೆ. ಪರವಾನಗಿಗಳನ್ನು ತೆಗೆದುಹಾಕುವುದು, ನಿಯಂತ್ರಣಗಳನ್ನು ತೆಗೆದುಹಾಕುವುದು, ಆಮದು ಬದಲಿಗಾಗಿ ಧನಾತ್ಮಕ ಸ್ವದೇಶೀಕರಣ ಪಟ್ಟಿಗಳು, ರಫ್ತು ಉತ್ತೇಜನ, ಎಫ್‌ಡಿಐ ಉದಾರೀಕರಣ ಮತ್ತು ರಕ್ಷಣಾ ಕೈಗಾರಿಕಾ ಕಾರಿಡಾರ್‌ಗಳ ಸ್ಥಾಪನೆಯಂತಹ ನೀತಿ ಉಪಕ್ರಮಗಳ ಸರಣಿಯ ಮೂಲಕ ಸರ್ಕಾರವು ಭಾರತೀಯ ರಕ್ಷಣಾ ಉತ್ಪಾದನಾ ಪೂರಕ ವ್ಯವಸ್ಥೆಯಲ್ಲಿ “ಸ್ವಾವಲಂಬನೆ” ಸಾಧಿಸಲು ನಿರ್ಧರಿಸಿದೆ.

ಜಾಗತಿಕ ವೈಮಾನಿಕ ಉದ್ಯಮದಲ್ಲಿ ಒಂದು ಪ್ರಮುಖ ಪ್ರದರ್ಶನವಾದ ಏರೋ ಇಂಡಿಯಾ ಭಾರತದ ಅತ್ಯಂತ ಪ್ರಮುಖ ವೈಮಾನಿಕ ಮತ್ತು ರಕ್ಷಣಾ ಪ್ರದರ್ಶನವಾಗಿದೆ, ಇದು ಯಲಹಂಕದ ವಾಯುನೆಲೆಯ ಒಟ್ಟು 35,000 ಚದರ ಮೀಟರ್ ಪ್ರದೇಶದಲ್ಲಿ ಎರಡು ವರ್ಷಕ್ಕೊಮ್ಮೆ (ದೈವಾರ್ಷಿಕವಾಗಿ) ನಡೆಯುತ್ತದೆ. 1996ರಲ್ಲಿ ಆರಂಭವಾದ ಪ್ರದರ್ಶನ ಈ ವರ್ಷ 14ನೇ ಆವೃತ್ತಿಯದ್ದಾಗಿದೆ. ಇದು ಉದ್ಯಮಕ್ಕೆ ಅದರ ಸಾಮರ್ಥ್ಯಗಳು, ಉತ್ಪನ್ನಗಳು ಮತ್ತು ಸೇವೆಗಳನ್ನು ಪ್ರದರ್ಶಿಸಲು ಅನನ್ಯ ಅವಕಾಶ ಒದಗಿಸುತ್ತದೆ. ಏರೋ ಶೋನ ಈ ಆವೃತ್ತಿಯಲ್ಲಿ, ವಿಶ್ವಾದ್ಯಂತ ಒಟ್ಟು 731 ಪ್ರದರ್ಶಕರು ಭಾಗವಹಿಸಲಿದ್ದಾರೆ.

ಇದನ್ನೂ ಓದಿ | Tech layoffs : ಇ-ಕಾಮರ್ಸ್‌ ಇಬೇ ಕಂಪನಿಯಲ್ಲಿ 500 ಉದ್ಯೋಗಿಗಳ ವಜಾ

ಐದು ದಿನಗಳ ಪ್ರದರ್ಶನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ. ವೈಮಾನಿಕ ಪ್ರದರ್ಶನದಲ್ಲಿ ಏರೋಸ್ಪೇಸ್ ಕಂಪನಿಗಳ ಬೃಹತ್ ಪ್ರದರ್ಶನ ಮತ್ತು ವ್ಯಾಪಾರ ಮೇಳದೊಂದಿಗೆ ವಿಮಾನಗಳ ವೈಮಾನಿಕ ಪ್ರದರ್ಶನಗಳನ್ನು ಒಳಗೊಂಡಿರುತ್ತದೆ. ಈ ವರ್ಷದ ಪ್ರದರ್ಶನದಲ್ಲಿ ಹೆಚ್ಚಿನ ಪ್ರಮಾಣದ ಪ್ರತಿನಿಧಿಗಳ ಪಾಲ್ಗೊಳ್ಳುವಿಕೆಯೊಂದಿಗೆ ಅತಿದೊಡ್ಡ ವೈಮಾನಿಕ ಪ್ರದರ್ಶನವಾಗುವ ನಿರೀಕ್ಷೆ ಇದೆ ಮತ್ತು ಪ್ರಮುಖ ಅಂತಾರಾಷ್ಟ್ರೀಯ ಚಿಂತಕರ ತಂಡಗಳು, ತಜ್ಞರು, ಪ್ರಮುಖ ಏರೋಸ್ಪೇಸ್ ಕಂಪನಿಗಳು ಮತ್ತು ಜಾಗತಿಕ ನಾಯಕರು ಭಾಗಿಯಾಗಲಿದ್ದಾರೆ.

ಭಾರತವು ಭರವಸೆಯ ವೈಮಾನಿಕ ಮತ್ತು ರಕ್ಷಣಾ ಉತ್ಪಾದನಾ ತಾಣವಾಗಿ ಹೊರಹೊಮ್ಮುತ್ತಿರುವುದರಿಂದ, ಜಾಗತಿಕ ಕಂಪನಿಗಳು ಪರಸ್ಪರ ಗುರಿಗಾಗಿ ಹೊಸ ಪಾಲುದಾರಿಕೆಗಳನ್ನು ಕಂಡುಕೊಳ್ಳುತ್ತಿವೆ. ಏರೋ ಇಂಡಿಯಾ ಪ್ರದರ್ಶನವು ವೈಮಾನಿಕ ಮತ್ತು ರಕ್ಷಣಾ ಉದ್ಯಮಗಳೊಳಗಿನ ಸಂಸ್ಥೆಗಳಿಗೆ ಈ ವಲಯದ ಸದ್ಯದ ಮತ್ತು ಭವಿಷ್ಯದ ಅಗತ್ಯತೆಗಳನ್ನು ಪೂರೈಸಲು ಪಾಲುದಾರಿಕೆಗಳನ್ನು ಹೊಂದಲು ಹಲವು ವೇದಿಕೆಗಳನ್ನು ಒದಗಿಸುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Aero India

Aero india 2023 : ರಕ್ಷಣಾ ಇಲಾಖೆಯಿಂದ 32 ಕಂಪನಿಗಳ ಜತೆ ಒಪ್ಪಂದ

ಏರೋ ಇಂಡಿಯಾದಲ್ಲಿ (Aero india 2023) ರಕ್ಷಣಾ ವಲಯಕ್ಕೆ ಅಗತ್ಯಕ್ಕೆ ತಕ್ಕ ಹಾಗೆ ಒಂಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ.

VISTARANEWS.COM


on

Aero India

ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದಲ್ಲಿ (Aero india 2023) 35 ಕಂಪನಿಗಳ ಜತೆ ರಕ್ಷಣಾ ಇಲಾಖೆಯು ಒಪ್ಪಂದ ಮಾಡಿಕೊಂಡಿದೆ. ಬಂಧನ್ ಕಾರ್ಯಕ್ರಮದಡಿಯಲ್ಲಿ ಈ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. 2,930.98 ಕೋಟಿ ರೂಪಾಯಿ ಮೊತ್ತದ ಒಪ್ಪಂದ ನಡೆದಿದೆ. ಕಾರ್ಯಕ್ರಮದಲ್ಲಿ ಒಟ್ಟು 266 ಕಂಪನಿಗಳು ಪಾಲ್ಗೊಂಡಿದ್ದವು.

ಒಪ್ಪಂದಗಳಿಗೆ ಸಹಿ ಹಾಕಿದ ಕಂಪನಿಗಳು

ಬೆಲಾಟೆಕ್ಸ್ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್-630 ಕೋಟಿ, ಏಡಿನ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್-500 ಕೋಟಿ, ಫಿಕ್ಸಲ್ ಸ್ಪೇಸ್ ಇಂಡಿಯಾ ಪ್ರೈ.ಲಿ-300 ಕೋಟಿ, ಡೈನಾಮೆಟಿಕ್ ಟೆಕ್ನಾಲಜೀಸ್-250 ಕೋಟಿ, ಫ್ಲೈಯಿಂಗ್ ವೆಡ್ಜ್ ಡಿಫೆನ್ಸ್ &ಏರೋಸ್ಪೇಸ್ ಟೆಕ್ನಾಲಜೀಸ್ , TESCOM-100 ಕೋಟಿ, ಡೆಲ್ಪ್ಟ್ (ಜೆ.ಕೆ.ಪೇಪರ್ ಲಿ.)-100 ಕೋಟಿ, ನೆಕ್ಸ್ಟ್ ಬಿಗ್ ಇನೋವೇಷನ್ ಲ್ಯಾಬ್ಸ್ ಲಿ.-100 ಕೋಟಿ, SASMOS HET ಟೆಕ್ನಾಲಜಿಸ್ ಲಿ.-75 ಕೋಟಿ, MS ವೇವ್ಸ್ ಮಷಿನ್-50 ಕೋಟಿ, ಭೂಮಿ ಎನ್ ಟೆಕ್ ಇಕ್ವಿಪ್ ಮೆಂಟ್ಸ್ ಪ್ರೈ.ಲಿ-50 ಕೋಟಿ, ಏರೋ ಪ್ಲಾಟಿನ್ ಟೆಕ್ನಾಲಜಿಸ್ ಪ್ರೈ.ಲಿ-30 ಕೋಟಿ, ಕಾಸ್ಟ್ ಕ್ರಾಪ್ಟ್-30 ಕೋಟಿ, ಡಕಂ ಏರೋಸ್ಪೇಸ್ ಟೆಕ್ನಾಲಜೀಸ್ ಪ್ರೈ.ಲಿ-25 ಕೋಟಿ, ಎಲ್ಡಾಸ್ ಟೆಕ್ನಾಲಜಿ-23 ಕೋಟಿ, ಟೆಕ್ಸಲ್ ಎಂಜಿನಿಯರ್ಸ್-20 ಕೋಟಿ.

ಇದನ್ನೂ ಓದಿ : Aero India 2023 : ಏರೋ ಇಂಡಿಯಾದಲ್ಲಿ ಅಮೆರಿಕದ ಅತಿ ದೊಡ್ಡ ತಂಡ, ನೂತನ F-35 ಯುದ್ಧ ವಿಮಾನ ಪ್ರದರ್ಶನ

ವೈಭವ್ ಎಂಟರ್ ಪ್ರೈಸಸ್-20 ಕೋಟಿ, ಹಿಮಾನ್ಸಿ ಥರ್ಮಲ್ ಸೊಲ್ಯೂಷನ್ಸ್-16.28 ಕೋಟಿ, ಎವಿಟಮ್ ಟೆಕ್ನಾಲಜೀಸ್ -16 ಕೋಟಿ, ಆರವ ಏರೋಸ್ಪೇಸ್-16 ಕೋಟಿ, SST ಕಟಿಂಗ್ ಟೂಲ್ಸ್-15 ಕೋಟಿ, ಆಲ್ಟೀಸ್ ಏರೋಸ್ಪೇಸ್ ಪ್ರೈ.ಲಿ-15 ಕೋಟಿ, ಉದಯ್ ಎಂಟರ್ ಪ್ರೈಸಸ್-15 ಕೋಟಿ, ಸೋಮಾ ಆಟೋಮೇಶನ್-12 ಕೋಟಿ, IIGP ವಾಲ್ವ್ ಟೆಕ್ನಾಲಜೀಸ್ ಪ್ರೈ.ಲಿ-12 ಕೋಟಿ, ಲವೀರಾ ಟೆಕ್ನಾಲಜಿ ಪ್ರೈ.ಲಿ-11 ಕೋಟಿ, ಗರುಡ ಏರೋಟೆಕ್-10 ಕೋಟಿ, G S ಗಿಯರ್ಸ್ ಪ್ರೈ.ಲಿ-8 ಕೋಟಿ, ಇನ್ಫಿನಿಟಿ ಏರೋಟೆಕ್-7 ಕೋಟಿ, ಡಟಾಕ್ಯೂ ಸರ್ವೀಸಸ್ ಪ್ರೈ.ಲಿ-2.70 ಕೋಟಿ, ಬುರ್ಜಿ ಏರೋಸ್ಪೇಸ್-2 ಕೋಟಿ, ಜನರಸ್ ಏರೋಸ್ಪೇಸ್ & ಇನ್ಪಾರ್ಮೇಶನ್ ಟೆಕ್ನಾಲಜಿ ಪ್ರೈ.ಲಿ-320 ಕೋಟಿ, ಏಸೋನಾಟೆಕ್ ಮ್ಯಾನಿಫ್ಯಾಕ್ಚರಿಂಗ್ ಪ್ರೈ.ಲಿ-150 ಕೋಟಿ.

Continue Reading

Aero India

Aero India 2023: ರಾಷ್ಟ್ರದ ರಕ್ಷಣಾ ವಲಯ ಬೇಡಿಕೆಯ ಪೂರೈಕೆಯಲ್ಲಿ ರಾಜ್ಯದ ಪಾಲು ಶೇ.65: ಸಿಎಂ ಬೊಮ್ಮಾಯಿ

Aero India 2023: ನಮ್ಮ ದೇಶದ ರಕ್ಷಣಾ ವಲಯದ ಉತ್ಪಾದನಾ ಸಾಮರ್ಥ್ಯ ನಾವು ಅಂದುಕೊಂಡಿದ್ದಕ್ಕಿಂತ ಹೆಚ್ಚಿದೆ ಮತ್ತು ದೇಶೀಯ ಸಂಸ್ಥೆಗಳು ನಮ್ಮ ಬೇಡಿಕೆಯನ್ನು ಪೂರೈಸುವ ಎಲ್ಲ ಸಾಮರ್ಥ್ಯ ಹೊಂದಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

VISTARANEWS.COM


on

Approval for release of funds for various infrastructure projects in state cabinet meeting

ಬೆಂಗಳೂರು: ರಕ್ಷಣಾ ವಲಯದಲ್ಲಿ (Aero India 2023) ಬಂಧನ್‌ ಎನ್ನುವುದು ರಕ್ಷಣಾ ಇಲಾಖೆ ಮತ್ತು ಸಾರ್ವಜನಿಕ ಸಂಸ್ಥೆಗಳ ಮಧ್ಯೆ ಇರುವ ದೀರ್ಘಕಾಲದ ಸಂಬಂಧವಾಗಿದ್ದು, ರಾಷ್ಟ್ರದ ರಕ್ಷಣಾ ವಲಯ ಬೇಡಿಕೆಯ ಪೂರೈಕೆಯಲ್ಲಿ ರಾಜ್ಯದ ಪಾಲು ಶೇ.65 ರಷ್ಟಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಏರೋ ಇಂಡಿಯಾ 2023ರ ಬಂಧನ್ – ಒಪ್ಪಂದಗಳಿಗೆ ಸಹಿ ಹಾಕುವ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಪಾಲ್ಗೊಂಡು ಮಾತನಾಡಿದರು.

ರಕ್ಷಣೆ ಮತ್ತು ಏರೋಸ್ಪೇಸ್ ವಲಯವು ಸ್ಥಾಪಿತ ಕ್ಷೇತ್ರವಾಗಿದ್ದು, ಇದರಲ್ಲಿ ಅತ್ಯಂತ ಪರಿಣಿತರು ಮಾತ್ರ ಕೆಲಸವನ್ನು ಸಂಪೂರ್ಣಗೊಳಿಸಬಲ್ಲರು. ಪ್ರಧಾನಿ ನರೇಂದ್ರ ಮೋದಿ ಅವರ ಆಶೀರ್ವಾದೊಂದಿಗೆ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ನೇತೃತ್ವದಲ್ಲಿ ರಕ್ಷಣಾ ವಲಯವು ತೆರೆದುಕೊಂಡಿದೆ. ನಮ್ಮ ದೇಶದ ರಕ್ಷಣಾ ವ್ಯವಸ್ಥೆ ಬೇಡಿಕೆಯ ಶೇ.80 ರಷ್ಟನ್ನು ನಾವು ಆಮದು ಮಾಡಿಕೊಳ್ಳುತ್ತಿದ್ದ ಕಾಲವೊಂದಿತ್ತು. ಆದರೆ, ಈಗ ಪ್ರಧಾನಿಗಳ ಮೇಕ್ ಇನ್ ಇಂಡಿಯಾ ಪರಿಕಲ್ಪನೆ ಅಡಿಯಲ್ಲಿ ದೇಶದಲ್ಲಿಯೇ ತಯಾರಿಕೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ | Karnataka Budget: ಈ ಬಾರಿಯ ಬಜೆಟ್‌ನಲ್ಲಿ ಶಿಕ್ಷಣಕ್ಕೆ ಬೇಕು ಪ್ರತ್ಯೇಕ ಅನುದಾನ: ಸಿಎಂಗೆ ಪ್ರೊ. ಎಂ.ಆರ್.‌ ದೊರೆಸ್ವಾಮಿ ಪತ್ರ

ನಮ್ಮ ಉತ್ಪಾದನೆ ಸಾಮರ್ಥ್ಯ ಅಂದುಕೊಂಡದ್ದಕ್ಕಿಂತ ಹೆಚ್ಚಿದೆ

ನಮ್ಮ ದೇಶದ ರಕ್ಷಣಾ ವಲಯದ ಉತ್ಪಾದನಾ ಸಾಮರ್ಥ್ಯ ನಾವು ಅಂದುಕೊಂಡಿದ್ದಕ್ಕಿಂತ ಹೆಚ್ಚಿದೆ ಮತ್ತು ನಮ್ಮ ದೇಶದ ಉತ್ಪಾದನಾ ಸಂಸ್ಥೆಗಳು ನಮ್ಮ ಬೇಡಿಕೆಯನ್ನು ಪೂರೈಸುವ ಎಲ್ಲ ಸಾಮರ್ಥ್ಯ ಹೊಂದಿವೆ. ಎಂಎಸ್ಎಂಇ ಕೂಡ ಇದನ್ನು ಉತ್ಪಾದನೆ ಮಾಡಬಲ್ಲುದಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ರಕ್ಷಣಾ ವಸ್ತುಗಳ ಉತ್ಪಾದನಾ ಸಂಸ್ಥೆಗಳು ಅತ್ಯುನ್ನತ ತಂತ್ರಜ್ಞಾನವನ್ನು ಹೊಂದಿದ್ದು, ಅತ್ಯಂತ ದಕ್ಷವಾಗಿ ಕಾರ್ಯನಿರ್ವಹಿಸಬಲ್ಲುದಾಗಿದೆ ಎಂದು ಹೇಳಿದರು.

ರಕ್ಷಣಾ ಕ್ಷೇತ್ರದಲ್ಲಿ ವಿಫುಲ ಅವಕಾಶ

ಉತ್ಪಾದನಾ ವಲಯದಲ್ಲಿ ಡೊಮೈನ್ ಬದಲಾವಣೆಯಿಂದ ವಿಫುಲ ಅವಕಾಶಗಳು ಸೃಷ್ಟಿಯಾಗಿವೆ. ಆದ್ದರಿಂದ ನಾವು ಮಹತ್ವಾಕಾಂಕ್ಷೆಯಿಂದ ವೈಜ್ಞಾನಿಕವಾಗಿ ಯೋಚನೆ ಮಾಡಬೇಕಿದೆ. ಈ ಎಲ್ಲ ವಿಷಯಗಳನ್ನು ಬಂಧನ್ ಹೆಸರಲ್ಲಿ ನಾವು ಒಟ್ಟಿಗೆ ತಂದಿದ್ದೇವೆ. ಇಂದು ಸಹಿ ಆಗಿರುವ ಎಲ್ಲ ಒಪ್ಪಂದಗಳು ಭವಿಷ್ಯದ ಅಗತ್ಯ, ಬೆಳವಣಿಗೆ ಮತ್ತು ಸಾಮರ್ಥ್ಯ ವೃದ್ಧಿಗೆ ಸಾಕ್ಷಿಯಾಗಲಿವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ | Payment aggregator : ರಿಲಯನ್ಸ್‌, ಜೊಮ್ಯಾಟೊ ಸೇರಿ 32 ಕಂಪನಿಗಳಿಗೆ ಪೇಮೆಂಟ್‌ ಅಗ್ರಿಗೇಟರ್‌ ಲೈಸೆನ್ಸ್ ವಿತರಣೆ

32 ಒಪ್ಪಂದಗಳಿಗೆ ರಾಜ್ಯ ಸಹಿ

ಬೆಂಗಳೂರಿನಲ್ಲಿ ಏರೋ ಸ್ಪೇಸ್ ಪಾರ್ಕ್ ಸ್ಥಾಪನೆ ಮತ್ತು ಅದರ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಅತ್ಯುತ್ತಮ ಕೊಡುಗೆ ನೀಡಿರುವ ಅಧಿಕಾರಿಗಳಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ರಾಷ್ಟ್ರದ ಒಟ್ಟು ರಕ್ಷಣಾ ಉತ್ಪಾದನೆಯಲ್ಲಿ ರಾಜ್ಯದ ಸಾರ್ವಜನಿಕ ವಲಯದ ಉದ್ಯಮಗಳು ಮತ್ತು ಖಾಸಗಿ ಸಂಸ್ಥೆಗಳು ಶೇ.65 ಪಾಲನ್ನು ಪೂರೈಸುತ್ತಿದೆ. 2900 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹೂಡಿಕೆಯ 32 ಒಪ್ಪಂದಗಳಿಗೆ ರಾಜ್ಯದ ಸಾರ್ವಜನಿಕ ವಲಯದ ಉದ್ಯಮಗಳು ಸಹಿ ಹಾಕಿವೆ. ಈ ಏರೋ ಇಂಡಿಯಾ ಪ್ರದರ್ಶನ “ಟಾಕ್ ಆಫ್ ದಿ ಟೌನ್” ಆಗಿದೆ ಎಂದು ಸಿಎಂ ಹೇಳಿದರು.

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಖಾತೆ ಸಚಿವ ಮುರುಗೇಶ್ ನಿರಾಣಿ, ಕೇಂದ್ರ ಸರ್ಕಾರದ ರಕ್ಷಣಾ ಕಾರ್ಯದರ್ಶಿ ಗಿರಿಧರ್ ಅರಮಾನೆ, ಭಾರತೀಯ ಸಶಸ್ತ್ರ ಪಡೆಗಳ ಮುಖ್ಯಸ್ಥ ಅನಿಲ್ ಚೌಹಾಣ್, ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ ಸೇರಿ ಅನೇಕ ಗಣ್ಯರು ಉಪಸ್ಥಿತರಿದ್ದರು.

Continue Reading

Aero India

Aero India 2023: ಏರೋಸ್ಪೇಸ್ ವಲಯದಲ್ಲಿ ಕರ್ನಾಟಕ ನಂ.1 ಆಗಲು ಅರ್ಹ: ಸಿಎಂ ಬೊಮ್ಮಾಯಿ

ಏರೊ ಇಂಡಿಯಾ-2023ನಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿರುವ ವಿದೇಶಿ ಗಣ್ಯರು ಹಾಗೂ ಉದ್ಯಮಿಗಳಿಗೆ ಏರ್ಪಡಿಸಿದ್ದ ಭೋಜನ ಕೂಟದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದಾರೆ.

VISTARANEWS.COM


on

CM Basavaraj Bommai says Karnataka deserves to be no.1 in aerospace sector:

ಬೆಂಗಳೂರು: ಏರೋಸ್ಪೇಸ್ (Aero India 2023) ವಲಯದಲ್ಲಿ ಲಂಡನ್ ಮತ್ತು ಸಿಂಗಾಪುರದ ನಂತರ ಕರ್ನಾಟಕ ರಾಜ್ಯವಿದ್ದು, ಕರ್ನಾಟಕ ನಂ.1 ಸ್ಥಾನಕ್ಕೇರಲು ಎಲ್ಲ ಅರ್ಹತೆ ಹೊಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಏರೊ ಇಂಡಿಯಾ-2023ನಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿರುವ ವಿದೇಶಿ ಗಣ್ಯರು ಹಾಗೂ ಉದ್ಯಮಿಗಳಿಗೆ ಏರ್ಪಡಿಸಿದ್ದ ಭೋಜನ ಕೂಟದಲ್ಲಿ ಮಾತನಾಡಿ, ಬೆಂಗಳೂರು ಸತತ 14 ಬಾರಿ ಏರ್ ಶೋ ಏರ್ಪಡಿಸಿದೆ. ದೇಶದ ಯಾವುದೇ ರಾಜ್ಯ ಇಷ್ಟೊಂದು ಏರ್ ಶೋ ಏರ್ಪಡಿಸಿಲ್ಲ. ಈ ಬಾರಿ ಅತಿ ದೊಡ್ಡ ಶೋ, ಹೆಚ್ಚಿನ ಉದ್ಯಮಿಗಳು ಭಾಗವಹಿಸುತ್ತಿದ್ದು, ಹೆಚ್ಚಿನ ಪ್ರದರ್ಶನಗಳು ನಡೆಯುತ್ತಿದೆ ಎಂದರು.

ಬೆಂಗಳೂರಿನಲ್ಲಿ ಅಪಾರ ಅವಕಾಶಗಳು ಇವೆ. ಎಂಜಿನಿಯರ್‌ಗಳು, ತಂತ್ರಜ್ಞರ ನಿರಂತರ ಶ್ರಮದಿಂದ ಏರ್ ಶೋ ಯಶಸ್ವಿಯಾಗಿ ನಡೆಯುತ್ತಿದೆ. ನಮ್ಮ ಹಿರಿಯರು 1960ರಲ್ಲಿ ಇಲ್ಲಿ ಬಂಡವಾಳ ಹೂಡುವಲ್ಲಿ ಯಶಸ್ವಿಯಾಗಿದ್ದಾರೆ. ಹೊಸ ತಂತ್ರಜ್ಞಾನ ಸಾಕಷ್ಟು ಬದಲಾವಣೆ ತಂದಿದೆ. ರಾಜ್ಯದ ಅಧಿಕಾರಿಗಳು ಯಶಸ್ಬಿಯಾಗಿ ಏರ್ ಶೋ ಆಯೋಜನೆ ಮಾಡಿದ್ದಾರೆ ಎಂದು ಅಭಿನಂದಿಸಿದರು.‌

ನಮ್ಮ ರಾಜ್ಯ ಯುವ ಪ್ರತಿಭಾವಂತ ಉದ್ಯಮಿಗಳು, ತಂತ್ರಜ್ಞರು, ಉದ್ಯಮಗಳು ಬೆಳೆಯಲು ಕಾರಣರಾಗಿದ್ದಾರೆ. ಯುವ ಪ್ರತಿಭಾವಂತರು ಇರುವುದರಿಂದ ಏರೊ ಸ್ಪೇಸ್ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿವೆ. ಏರೊಸ್ಪೇಸ್ ನೀತಿ ರಾಜ್ಯದಲ್ಲಿದ್ದು, ಸಣ್ಣ ಕೈಗಾರಿಕೆಗಳು ಹಾಗೂ ಬೃಹತ್ ಉದ್ಯಮಗಳಿಗೆ ಸೂಕ್ತ ಅವಕಾಶಗಳಿವೆ. ನಾವು ಶೇ.65 ರಷ್ಟು ರಕ್ಷಣಾ ಪರಿಕರ ಉತ್ಪಾದನೆ ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಶೇ.70 ರಷ್ಟು ಉತ್ಪಾದನೆ ಮಾಡುತ್ತೇವೆ.
ಈಗಾಗಲೇ ಅನೇಕರು ಇಲ್ಲಿ ಬಂಡವಾಳ ಹೂಡಿದ್ದಾರೆ, ಇನ್ನು ಅನೇಕರು ಬಂಡವಾಳ ಹೂಡುವ ಇಚ್ಛೆ ಹೊಂದಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ | Sevalal Jayanthi: ಸಂತ ಸೇವಾಲಾಲ್‌ ಮಹಾಮಠ ಪ್ರತಿಷ್ಠಾನಕ್ಕೆ ₹10 ಕೋಟಿ ಅನುದಾನ: ಸಿಎಂ ಬೊಮ್ಮಾಯಿ

ಯುಎಸ್ ಕಾನ್ಸುಲೇಟ್ ರಾಯಭಾರಿ ಬೆಂಗಳೂರು ಏರೋ ಇಂಡಿಯಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಇಲ್ಲಿ ಉತ್ತಮ ಪರಿಸರ, ಆರ್ಥಿಕ ಪರಿಸ್ಥಿತಿಯಿದ್ದು, ನಮ್ಮ ಬೆಳವಣಿಗೆಯಲ್ಲಿ ನೀವು ಭಾಗಿದಾರರಾಗಿ ಎಂದು ಕರೆ ನೀಡಿದರು.

ಬೃಹತ್ ಕೈಗಾರಿಕಾ ಸಚಿವರಾದ ಮುರುಗೇಶ ನಿರಾಣಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣಾ ಹಾಜರಿದ್ದರು.

Continue Reading

Aero India

Aero India 2023: ಭಾರತದಲ್ಲಿ ಉತ್ಪಾದನಾ ಘಟಕ ಸ್ಥಾಪಿಸಲು ಹೂಡಿಕೆದಾರರಿಗೆ ಸರ್ಕಾರ ಆಹ್ವಾನ

ಭಾರತದಲ್ಲಿ ರಕ್ಷಣಾ ವಲಯದ ಉದ್ದಿಮೆಗೆ ಸರ್ಕಾರ ಉತ್ತೇಜನ ಮುಂದುವರಿಸಲಿದೆ. ಇದು ದೇಶವನ್ನು ಸ್ವಾವಲಂಬಿಯಾಗಿಸುವುದಲ್ಲದೆ, ಉದ್ಯೋಗ ಸೃಷ್ಟಿಗೆ ಕೂಡ ಸಹಕಾರಿ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ (Aero India 2023) ವಿವರಿಸಿದ್ದಾರೆ.

VISTARANEWS.COM


on

rajanath singh

ಬೆಂಗಳೂರು: ಭಾರತದಲ್ಲಿ ಉತ್ಪಾದನಾ ಘಟಕಗಳನ್ನು ತೆರೆಯುವಂತೆ ಜಾಗತಿಕ ಮಟ್ಟದ ಹೂಡಿಕೆದಾರರು, ಉದ್ಯಮಿಗಳು, ನಾನಾ ಉತ್ಪನ್ನಗಳ ಮೂಲ ಉತ್ಪಾದಕರಿಗೆ (Global original equipment manufactures) ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಆಹ್ವಾನಿಸಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಏರೋ-ಇಂಡಿಯಾ ಏರ್‌ ಶೋದ (Aero India 2023) ನೇಪಥ್ಯದಲ್ಲಿ ಬಹು ರಾಷ್ಟ್ರೀಯ ಕಂಪನಿಗಳ ಸಿಇಒಗಳನ್ನು ಅವರು ಭೇಟಿಯಾದರು.

ಜಾಗತಿಕ ಉತ್ಪಾದಕರು ಭಾರತದಲ್ಲಿ ಜಂಟಿಯಾಗಿ ಉತ್ಪಾದನಾ ಘಟಕಗಳನ್ನು ಸ್ಥಾಪಿಸಬಹುದು. ಇಲ್ಲಿಂದಲೇ ಜಗತ್ತಿಗೆ ರಫ್ತು ಮಾಡಬಹುದು ಎಂದು ಅವರು ಆಹ್ವಾನಿಸಿದರು. ಜನರಲ್‌ ಆಟೋಮಿಕ್ಸ್‌, ಬೋಯಿಂಗ್‌, ಎಂಬ್ರೇರ್‌, ರಾಫೆಲ್‌ ಅಡ್ವಾನ್ಸ್‌ಡ್‌ ಡಿಫೆನ್ಸ್‌ ಸಿಸ್ಟಮ್ಸ್‌ ಸೇರಿದಂತೆ ಹಲವಾರು ಕಂಪನಿಗಳ ಮುಖ್ಯಸ್ಥರು ಈ ಸಂದರ್ಭ ಸಭೆಯಲ್ಲಿ ಭಾಗವಹಿಸಿದ್ದರು.

ಉದ್ದಿಮೆ ಸ್ಥಾಪಿಸುವವರಿಗೆ ಭೂಮಿ, ಮೂಲಸೌಕರ್ಯಕ್ಕೆ ತಗಲುವ ವೆಚ್ಚ, ಸರ್ಕಾರದ ರೀತಿ-ನೀತಿ, ಉತ್ತೇಜನ, ಮಾನವ ಸಂಪನ್ಮೂಲದ ಲಭ್ಯತೆ, ದೇಶೀಯ ರಕ್ಷಣಾ ವಲಯದ ಮಾರುಕಟ್ಟೆಯ ವಿವರಗಳನ್ನು ಸಚಿವರು ನೀಡಿದರು.

ಭಾರತವು ರಕ್ಷಣಾ ವಲಯದ ಉತ್ಪಾದನೆಯನ್ನು ಉತ್ತೇಜಿಸುತ್ತೆ. ಭಾರತ ಈ ವಲಯದಲ್ಲಿ ಸ್ವಾವಲಂಬಿಯಾಗಲು ಹಾಗೂ ಉದ್ಯೋಗ ಸೃಷ್ಟಿಗೆ ಇದು ಮಹತ್ತರ ಪಾತ್ರ ವಹಿಸಲಿದೆ ಎಂದರು. ರಕ್ಷಣಾ ಉದ್ಯಮ ಕಾರಿಡಾರ್‌ಗಳ ಸ್ಥಾಪನೆಗೆ ಉತ್ತರಪ್ರದೇಶ ಮತ್ತು ತಮಿಳುನಾಡು ಸರ್ಕಾರಗಳು ಘೋಷಿಸಿರುವ ಇನ್ಸೆಂಟಿವ್‌ಗಳನ್ನೂ ಸಚಿವರು ಪ್ರಸ್ತಾಪಿಸಿದರು.

ಸ್ವದೇಶಿ ಎಲ್‌ಸಿಎ ಎಂಜಿನ್‌ ಉತ್ಪಾದನೆಗೆ ಸಿದ್ಧತೆ: ಭಾರತವು ಶೀಘ್ರದಲ್ಲಿಯೇ ಸ್ವದೇಶಿ ನಿರ್ಮಿತ ಲಘು ಯುದ್ಧ ವಿಮಾನ ಎಂಜಿನ್‌ಗಳನ್ನು ತಯಾರಿಸಲಿದೆ ಎಂದು (light combat aircraft engine) ಡಿಆರ್‌ ಡಿಒ ಮುಖ್ಯಸ್ಥ ಸಮೀರ್ ಕಾಮತ್‌ ತಿಳಿಸಿದ್ದಾರೆ.

Continue Reading
Advertisement
Rakshit Shetty Richard Anthony Produce By Hombale
ದೇಶ5 hours ago

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

ಪ್ರಮುಖ ಸುದ್ದಿ5 hours ago

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

ಕರ್ನಾಟಕ5 hours ago

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

ದೇಶ1 day ago

ಬಂಗಾಳದಲ್ಲಿ ಬಿಜೆಪಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ, ಯಾರ ಪಾಲಾಗಲಿದೆ ಮುಖ್ಯಮಂತ್ರಿ ಗದ್ದುಗೆ?

ರಾಜಕೀಯ1 day ago

ವಿಜಯ್‌ ಪ್ರಮಾಣವಚನಕ್ಕೆ ಬ್ರೇಕ್‌, ರಾಷ್ಟ್ರಪತಿಗೆ ಟಿವಿಕೆ ಪತ್ರಚೆನ್ನೈ

ರಾಜಕೀಯ1 day ago

ತಮಿಳುನಾಡು ರಾಜಕೀಯಕ್ಕೆ ರೋಚಕ ಟ್ವಿಸ್ಟ್‌, ದಳಪತಿ ಪ್ರಮಾಣವಚನಕ್ಕೆ ಬ್ರೇಕ್‌, ಡಿಎಂಕೆ-ಎಐಎಡಿಎಂಕೆ ಮೈತ್ರಿ ಸಾಧ್ಯತೆ

ಕ್ರೈಂ1 day ago

ಪ.ಬಂಗಾಳ ಶೂಟೌಟ್‌ಗೆ ಟ್ವಿಸ್ಟ್‌, ಅಸಲಿಗೆ ಸುವೇಂದು ಟಾರ್ಗೆಟ್‌ ಆಗಿದ್ರಾ?

ಕ್ರೈಂ1 day ago

ಪಶ್ಚಿಮ ಬಂಗಾಳದಲ್ಲಿ ರಕ್ತದೋಕುಳಿ, ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌ ಶೂಟೌಟ್‌‌..!

Latest2 days ago

ಪಶ್ಚಿಮ ಬಂಗಾಳದಲ್ಲಿ ಕೇಸರಿ ಪರ್ವ: ಯಾರಾಗಲಿದ್ದಾರೆ ʼಸಿಎಂʼ?

Latest2 days ago

ದಳಪತಿʼ ಪಟ್ಟಾಭಿಷೇಕಕ್ಕೆ ಕ್ಷಣಗಣನೆ : ತಮಿಳುನಾಡು ರಾಜಕಾರಣದಲ್ಲಿ ಬಿರುಗಾಳಿ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌