ಎನ್ಎಚ್‌-48 ರಾಷ್ಟ್ರೀಯ ಹೆದ್ದಾರಿಯಲ್ಲ, ಇದು ಸಾವಿನ ರಹದಾರಿ - Vistara News

ಕರ್ನಾಟಕ

ಎನ್ಎಚ್‌-48 ರಾಷ್ಟ್ರೀಯ ಹೆದ್ದಾರಿಯಲ್ಲ, ಇದು ಸಾವಿನ ರಹದಾರಿ

ತುಮಕೂರು ಜಿಲ್ಲೆಯಲ್ಲಿ ಹಾದುಹೋಗುವ ಬೆಂಗಳೂರು- ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು 20 ಕಿ.ಮೀ ಗುಂಡಿಮಯವಾಗಿರುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ.

VISTARANEWS.COM


on

ಎಎಚ್‌-47
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತುಮಕೂರು: ನಗರದ ಪಕ್ಕದಲ್ಲಿಯೇ ಹಾದುಹೋಗಿರುವ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ-48(Asian Highway-47)ಯಲ್ಲಿ ಸದ್ಯ ಭೀಮಗಾತ್ರದ ಗುಂಡಿಗಳದ್ದೇ ಕಾರುಬಾರು. ಕ್ಯಾತ್ಸಂದ್ರ ಬಳಿಯ ಜಾಸ್ ಟೋಲ್ ಗೇಟ್‌ನಿಂದ ಶಿರಾ ಟೋಲ್ ಗೇಟ್‌ವರೆಗಿನ ರಸ್ತೆ ಸಂಪೂರ್ಣ ಹಾಳಾಗಿರುವುದರಿಂದ ಸುಮಾರು 20 ಕಿಲೋ ಮೀಟರ್ ದೂರ ವಾಹನ ಸವಾರರಿಗೆ ನರಕದ ದರ್ಶನವೇ ಆಗಿಹೋಗುತ್ತದೆ. ಹೀಗಾಗಿ ಹೆದ್ದಾರಿ ದುರಸ್ತಿ ಮಾಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ತುಮಕೂರು ಜಿಲ್ಲೆ ರಾಜಧಾನಿ ಬೆಂಗಳೂರಿನ ಹೆಬ್ಬಾಗಿಲು. ಹೀಗಾಗಿ ಜಿಲ್ಲೆಯ ರಸ್ತೆಗಳಲ್ಲಿ ವಾಹನಗಳ ನಿರಂತರ ಓಡಾಟ ಇದ್ದೇ ಇರುತ್ತದೆ. ಅದರಲ್ಲಿಯೂ ಬೆಂಗಳೂರು- ಪುಣೆಗೆ ಸಂಪರ್ಕ ಕಲ್ಪಿಸುವ ರಾಜ್ಯದ ಪ್ರಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿನಿತ್ಯ ಲಕ್ಷಾಂತರ ಜನ ಸಂಚರಿಸುತ್ತಾರೆ. ರಾಜ್ಯದ ಬಹುತೇಕ ಜನರು ಇದೇ ಹೆದ್ದಾರಿ ಮೂಲಕ ರಾಜಧಾನಿಯನ್ನು ತಲುಪುತ್ತಾರೆ. ಆದರೆ ಈ ರಾಷ್ಟ್ರೀಯ ಹೆದ್ದಾರಿ ಸಾವಿನ ರಹದಾರಿಯಾಗಿ ಬದಲಾಗುತ್ತಿದೆ.

ಇದನ್ನೂ ಓದಿ | Rajakaluve Encroachment | ಬಡವರ ಮನೆ ಮೇಲೆ ಬಿಬಿಎಂಪಿ ಸಿಂಹ ಗರ್ಜನೆ; ಪ್ರಭಾವಿಗಳಿಗೆ ಮೃದು ಧೋರಣೆ!

ಈ ಹೆದ್ದಾರಿಯಲ್ಲಿ ವಾಹನ ಚಾಲನೆ ಮಾಡುವ ಚಾಲಕರ ವ್ಯಥೆಯನ್ನಂತೂ ಕೇಳುವುದೇ ಬೇಡ. ಮೈಯೆಲ್ಲಾ ಕಣ್ಣಾಗಿದ್ದರೂ ಈ ಗುಂಡಿಗಳನ್ನು ತಪ್ಪಿಸುವುದಕ್ಕೆ ಸಾಧ್ಯವೇ ಇಲ್ಲ. ಹೀಗಾಗಿ ಅಂಗೈಯಲ್ಲಿ ಜೀವ ಹಿಡಿದು ಸಂಚರಿಸಬೇಕಾದ ಪರಿಸ್ಥಿತಿ ವಾಹನ ಸವಾರರದ್ದಾಗಿದ್ದು, ಸ್ವಲ್ಪ ಯಾಮಾರಿದರೂ ಜೀವಕ್ಕೇ ಕುತ್ತು ಬರುವುದು ಖಚಿತವಾಗಿದೆ. ಒಮ್ಮೆ ಈ ಗುಂಡಿಮಯ ರಸ್ತೆಯಲ್ಲಿ ಓಡಾಡಿದರೆ ಸಾಕು, ನಿಮಗೆ ಇದ್ದಕ್ಕಿದ್ದ ಹಾಗೆ ಸೊಂಟ ನೋವು ಬಳುವಳಿಯಾಗಿ ಬಂದುಬಿಡುತ್ತದೆ. ಈ ಭೀಮಗಾತ್ರದ ಗುಂಡಿಗಳಿಗೆ ಇಳಿಯೋ ಬಹುತೇಕ ವಾಹನಗಳು ಕೂಡ ಗ್ಯಾರೇಜ್ ಕಡೆ ಮುಖ ಮಾಡುತ್ತಿವೆ. ಕೆಲವು ವಾಹನಗಳ ಟಯರ್‌ಗಳಿಗೆ ಡ್ಯಾಮೇಜ್ ಆಗಿದ್ದರೆ ಇನ್ನೂ ಕೆಲವು ವಾಹನಗಳ ಆಕ್ಸೆಲ್ ಬ್ಲೇಡ್‌ಗಳೇ ತುಂಡಾದ ನಿದರ್ಶನಗಳೂ ಇವೆ.

ಗುಂಡಿಗಳಿಂದ ಹೆಚ್ಚುತ್ತಿದೆ ಅಪಘಾತಗಳ ಸಂಖ್ಯೆ
ಈ ಗುಂಡಿಮಯ ಹೆದ್ದಾರಿಯಿಂದಾಗಿ ಅಪಘಾತಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಸಾವು-ನೋವುಗಳ ಪ್ರಮಾಣವೂ ಜಾಸ್ತಿಯಾಗ್ತಿದೆ. 2022ರ ಜನವರಿಯಿಂದ ಇಲ್ಲಿಯವರೆಗೆ ಈ ಹೆದ್ದಾರಿಯಲ್ಲಿ ಸುಮಾರು 90ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ. ಹತ್ತಾರು ಜನರು ಪ್ರಾಣಬಿಟ್ಟಿದ್ದಾರೆ.

ರಸ್ತೆ ಸುಸ್ಥಿತಿಯಲ್ಲಿ ಇಲ್ಲದಿದ್ದರೂ ಸುಂಕ ವಸೂಲಾತಿಗಿಲ್ಲ ಬ್ರೇಕ್
ಇಷ್ಟೆಲ್ಲಾ ಆಗುತ್ತಿದ್ದರೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾತ್ರ ಇದ್ಯಾವುದಕ್ಕೂ ತಲೆಯನ್ನೇ ಕೆಡಿಸಿಕೊಳ್ಳುತ್ತಿಲ್ಲ. ಏಕೆ ದುರಸ್ತಿ ಮಾಡಿಲ್ಲ ಎಂದು ಸಾರ್ವಜನಿಕರು ಕೇಳಿದರೆ, ಟೆಂಡರ್ ಆಗಿಲ್ಲ, ಮಳೆಯಾಗುತ್ತಿದೆ ಎಂಬ ಸಣ್ಣಪುಟ್ಟ ಕಾರಣಗಳನ್ನು ನೀಡುತ್ತಿದೆ. ಇನ್ನೂ ಸ್ವಲ್ಪ ಜಾಸ್ತಿ ವಿಚಾರಿಸಿದರೆ, ಆ ಹೆದ್ದಾರಿ ವ್ಯಾಪ್ತಿಗೆ ಬರುವುದಿಲ್ಲ, ನೀವು ಚಿತ್ರದುರ್ಗದಲ್ಲಿರುವ ಕಚೇರಿಗೆ ಹೋಗಿ ಕೇಳಿ ಎಂಬ ಉತ್ತರ ಇಲ್ಲಿನ ಎನ್ಎಚ್ಎಐ ಅಧಿಕಾರಿಗಳಿಂದ ಬರುತ್ತಿದೆ. ರಸ್ತೆ ಸುಸ್ಥಿತಿಯಲ್ಲಿ ಇಲ್ಲದೇ ಇದ್ದರೂ ಟೋಲ್ ಗೇಟ್‌ಗಳಲ್ಲಿ ಸುಂಕ ವಸೂಲಾತಿ ಮಾತ್ರ ಹಾಗೆಯೇ ಮುಂದುವರಿದಿದೆ.

ಒಟ್ಟಿನಲ್ಲಿ ಅಧಿಕಾರಿಗಳ ಬೇಜವಾಬ್ದಾರಿತನ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಪ್ರತಿನಿತ್ಯ ಸಾವಿರಾರು ಜನರು ಸಂಚರಿಸುವ ಈ ಹೆದ್ದಾರಿ ಈಗ ಸಾವಿನ ರಹದಾರಿಯಾಗಿ ಪರಿವರ್ತನೆಯಾಗಿದೆ. ಈ ಗುಂಡಿಮಯ ರಸ್ತೆಯಲ್ಲಿ ಸಂಚರಿಸಿ ಆರೋಗ್ಯವನ್ನು ಹಾಳುಮಾಡಿಕೊಂಡು, ವಾಹನವನ್ನೂ ಹಾಳು ಮಾಡಿಕೊಂಡು, ಕೊನೆಗೆ ಟೋಲ್ ಗೇಟ್‌ನಲ್ಲಿ ಸುಂಕವನ್ನು ಕೂಡ ಕಟ್ಟಬೇಕಾದ ಹಣೆಬರಹ ವಾಹನ ಸವಾರರದ್ದಾಗಿದೆ.

ಇದನ್ನೂ ಓದಿ | ನಾವೂ ಕಪ್ಪು ಬಾವುಟ ತೋರಿಸಿ, ಮೊಟ್ಟೆ ಹೊಡೆದೇ ಬಂದಿದ್ದೀವಿ ಗೊತ್ತ?: ಸರ್ಕಾರಕ್ಕೆ ಸಿದ್ದರಾಮಯ್ಯ ಆವಾಜ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಹಾಸನ

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

Prajwal Revanna Case: ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ, ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ತನಿಖೆ ನಡೆಸಲು ನಿರ್ದೇಶನ ನೀಡುವಂತೆ ಕೋರಿ ರಾಜ್ಯಪಾಲರಿಗೆ ಇಂದು ಜೆಡಿಎಸ್‌ ನಿಯೋಗವು ದೂರು ನೀಡಿದೆ. ಅಲ್ಲದೆ, 25,000 ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರೇ ಮಾಸ್ಟರ್ ಮೈಂಡ್ ಎಂದು ಆರೋಪ ಮಾಡಲಾಗಿದೆ. ಜತೆಗೆ ಡಿಕೆಶಿ ವಜಾಕ್ಕೆ ಸಿಎಂ ಸಿದ್ದರಾಮಯ್ಯ ಅವರಿಗೆ ನಿರ್ದೇಶನ ನೀಡುವಂತೆಯೂ ಕೋರಲಾಗಿದೆ.

VISTARANEWS.COM


on

Prajwal Revanna Case DK Shivakumar alleged mastermind in 25000 pen drive allotment
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣ ಹಾಗೂ ಪೆನ್ ಡ್ರೈವ್ ಹಂಚಿಕೆ ಬಗ್ಗೆ ರಾಜ್ಯ ಸರ್ಕಾರ ನೇಮಕ ಮಾಡಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಪಾರದರ್ಶಕವಾಗಿ ತನಿಖೆ ನಡೆಸುತ್ತಿಲ್ಲ. ಆದ್ದರಿಂದ ಈ ಕೇಸ್‌ ಅನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಜೆಡಿಎಸ್ ರಾಜ್ಯಪಾಲರಿಗೆ ಮನವಿ ಮಾಡಿದೆ.

ಮಹಿಳೆಯರ ಅಶ್ಲೀಲ ವಿಡಿಯೊಗಳನ್ನು ತುಂಬಲಾಗಿದ್ದ ಪೆನ್ ಡ್ರೈವ್‌ಗಳನ್ನು ವ್ಯಾಪಕವಾಗಿ ಹಂಚಿಕೆ ಮಾಡಲಾಗಿರುವ ಪ್ರಕರಣದ ಪಿತೂರಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಮಾಸ್ಟರ್ ಮೈಂಡ್ ಆಗಿದ್ದು, ಕೂಡಲೇ ಅವರನ್ನು ಸಂಪುಟದಿಂದ ವಜಾ ಮಾಡಲು ಮುಖ್ಯಮಂತ್ರಿಗಳಿಗೆ ನಿರ್ದೇಶನ ನೀಡಬೇಕು ಎಂದು ಜೆಡಿಎಸ್ ರಾಜ್ಯಪಾಲರಲ್ಲಿ ಮನವಿ ಮಾಡಿದೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದ ಪಕ್ಷದ ನಿಯೋಗವು ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್‌ ಅವರಿಗೆ ದೂರು ಸಲ್ಲಿಸಿತು. ಈ ಸಂದರ್ಭದಲ್ಲಿ ಮನವಿ ಪತ್ರದಲ್ಲಿನ ಎಲ್ಲ ಅಂಶಗಳನ್ನು ಕುಮಾರಸ್ವಾಮಿ ಅವರು ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಟ್ಟರು.

ವಿಶೇಷ ತನಿಖಾ ತಂಡ ಸರ್ಕಾರದ ಹಿತಕ್ಕೆ ತಕ್ಕಂತೆ ಕೆಲಸ ಮಾಡುತ್ತಿದೆ

ವಿಶೇಷ ತನಿಖಾ ತಂಡ (ಎಸ್‌ಐಟಿ) ಸರಿಯಾಗಿ ತನಿಖೆ ಮಾಡುತ್ತಿಲ್ಲ ಹಾಗೂ ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಿಲ್ಲ. ಇಡೀ ಪ್ರಕರಣವನ್ನು ದಿಕ್ಕು ತಪ್ಪಿಸುವ ರೀತಿಯಲ್ಲಿ ಅದು ನಿರ್ವಹಿಸುತ್ತಿದೆ ಎಂದು ಜೆಡಿಎಸ್ ಗಂಭೀರ ಆಪಾದನೆ ಮಾಡಿದೆ.

ಪ್ರಜ್ವಲ್ ರೇವಣ್ಣ ಅವರ ಮಾಜಿ ಕಾರು ಚಾಲಕ ಕಾರ್ತಿಕ್ ಎನ್ನುವ ವ್ಯಕ್ತಿ ವಿಡಿಯೋ ಹಾಗೂ ಚಿತ್ರಗಳನ್ನು ಪ್ರಜ್ವಲ್ ಅವರ ಮೊಬೈಲ್ ಕದ್ದು ಸೋರಿಕೆ ಮಾಡಿದ್ದಾರೆ. ಕಾರ್ತಿಕ್ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭೇಟಿಯಾಗಿ ಸಂಚು ರೂಪಿಸಿದ್ದರು. ಆದರೆ, ಈವರೆಗೂ ಕಾರ್ತಿಕ್‌ನನ್ನು ಬಂಧಿಸಿಲ್ಲ ಎಂದು ಜೆಡಿಎಸ್ ದೂರಿದೆ.

ಹಾಸನ ಸೇರಿದಂತೆ ರಾಜ್ಯಾದ್ಯಂತ ಪೆನ್ ಡ್ರೈವ್ ಹಂಚಿಕೆ ಮಾಡಿರುವ ಪ್ರಕರಣದ ಆರೋಪಿಗಳ ಬಗ್ಗೆ ದೂರು ದಾಖಲಾಗಿದ್ದರೂ ಈವರೆಗೆ ಬಂಧಿಸಿಲ್ಲ. ಈ ಕೃತ್ಯದಲ್ಲಿ ನವೀನ್ ಗೌಡ ಎಂಬ ವ್ಯಕ್ತಿ ಭಾಗಿಯಾಗಿದ್ದು, ಹಾಸನದಲ್ಲಿ FIR ಆಗಿದ್ದರೂ ಅವನನ್ನು ತನಿಖಾ ತಂಡ ಬಂಧನ ಮಾಡಿಲ್ಲ ಎಂದು ರಾಜ್ಯಪಾಲರಿಗೆ ಸಲ್ಲಿಸಿದ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ಆಧುನಿಕ ತಂತ್ರಜ್ಞಾನ ಬಳಕೆ ಮಾಡಿಕೊಂಡು ವಿಡಿಯೊಗಳನ್ನು ಎಲ್ಲೆಡೆ ಸೋರಿಕೆ ಮಾಡಿರುವ ಕಿಡಿಗೇಡಿಗಳನ್ನು ಬಂಧನ ಮಾಡಬೇಕು. ಈ ನಿಟ್ಟಿನಲ್ಲಿ ಎಸ್ ಐಟಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಜೆಡಿಎಸ್ ಆಪಾದಿಸಿದೆ.

ರಾಜ್ಯ ಸರ್ಕಾರ ಸಂಪೂರ್ಣ ವಿಫಲ

ಮಹಿಳೆಯರ ಮಾನ ಹಾನಿಗೆ ಕಾರಣವಾಗಿರುವ ಅಶ್ಲೀಲ ವಿಡಿಯೊಗಳ ಹಂಚಿಕೆ ಮಾಡುವುದನ್ನು ತಡೆಯುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಪ್ರಕರಣದಲ್ಲಿ ನೊಂದಿರುವ ಮಹಿಳೆಯರಿಗೆ ಇದರಿಂದ ಬಹಳ ಆಘಾತವಾಗಿದೆ ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.

ಎಸ್‌ಐಟಿ ನಡೆಸುತ್ತಿರುವ ತನಿಖೆ ಪಾರದರ್ಶಕವಾಗಿಲ್ಲ ಹಾಗೂ ಏಕಪಕ್ಷೀಯವಾಗಿದೆ ಮಾತ್ರವಲ್ಲ, ಪೂರ್ವಾಗ್ರಹ ಪೀಡಿತವಾಗಿದೆ. ನೊಂದ ಮಹಿಳೆಯರ ಅಶ್ಲೀಲ ವಿಡಿಯೊಗಳನ್ನು ತುಂಬಿಸಲಾಗಿದ್ದ ಸುಮಾರು 25 ಸಾವಿರಕ್ಕೂ ಹೆಚ್ಚು ಪೆನ್ ಡ್ರೈವ್‌ಗಳ ಸುರಿಮಳೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ನೇರ ಪಾತ್ರವಿದೆ. ಆ ಪೆನ್ ಡ್ರೈವ್‌ಗಳನ್ನು ಬಸ್ ನಿಲ್ದಾಣ, ಉದ್ಯಾನವನ ಸೇರಿದಂತೆ ಎಲ್ಲ ಸಾರ್ವಜನಿಕ ಪ್ರದೇಶಗಳಲ್ಲಿ ತಂದು ಹಾಕಲಾಗಿದೆ. ಎಂದು ದೂರಿನಲ್ಲಿ ಪ್ರಮುಖವಾಗಿ ಉಲ್ಲೇಖ ಮಾಡಲಾಗಿದೆ.

ವಕೀಲ, ಬಿಜೆಪಿ ಮುಖಂಡ ದೇವರಾಜ್ ಗೌಡ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ನಡೆದಿರುವ ಮೊಬೈಲ್ ಸಂಭಾಷಣೆಯಲ್ಲಿ ಪೆನ್ ಡ್ರೈವ್ ಸಂಚು ಬಹಿರಂಗವಾಗಿದೆ. ರಾಜ್ಯ ಸರ್ಕಾರ ರಚನೆ ಮಾಡಿರುವ ತನಿಖಾ ತಂಡ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಹಿತಾಸಕ್ತಿಗೆ ಅನುಗುಣವಾಗಿ ಕೆಲಸ ಮಾಡುತ್ತಿದೆ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಜೆಡಿಎಸ್ ಪಕ್ಷದ ವರ್ಚಸ್ಸು ಹಾಳು ಮಾಡಲು ಎಸ್‌ಐಟಿಯನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಜೆಡಿಎಸ್ ನೇರವಾಗಿ ಆರೋಪಿಸಿದೆ.

ಅದರಿಂದ ಈ ಎಸ್‌ಐಟಿಯಿಂದ ಈ ಪ್ರಕರಣದ ಪಾರದರ್ಶಕ, ನ್ಯಾಯಯುತ ತನಿಖೆ ಸಾಧ್ಯವಿಲ್ಲ. ಆದ್ದರಿಂದ ಇಡೀ ಪ್ರಕರಣದ ತನಿಖೆಯನ್ನು ಸಿಬಿಐ ಗೆ ವಹಿಸಲು ತಾವು ಮಧ್ಯ ಪ್ರವೇಶ ಮಾಡಬೇಕು ಎಂದು ಜೆಡಿಎಸ್ ರಾಜ್ಯಪಾಲರಲ್ಲಿ ಮನವಿ ಮಾಡಿದೆ.

ಇದನ್ನೂ ಓದಿ: BJP Karnataka: ಕಾಂಗ್ರೆಸ್‌ ವಿರುದ್ಧ ಮೊಟ್ಟೆ ವಿಡಿಯೊ; ಬಿಜೆಪಿ ಸೋಷಿಯಲ್‌ ಮೀಡಿಯಾ ಮುಖ್ಯಸ್ಥನ ಬಂಧನ

ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ. ದೇವೇಗೌಡರು, ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್, ಎಚ್.ಕೆ. ಕುಮಾರಸ್ವಾಮಿ, ಸಿ.ಎಸ್. ಪುಟ್ಟರಾಜು, ಸಾ.ರಾ. ಮಹೇಶ್, ವೆಂಕಟರಾವ್ ನಾಡಗೌಡ, ಅಲ್ಕೊಡ್ ಹನುಮಂತಪ್ಪ, ಆನಂದ್ ಅಸ್ನೋಟಿಕರ್, ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕಿ ಶಾರದಾ ಪೂರ್ಯಾ ನಾಯಕ್, ಶಾಸಕರಾದ ಕರೆಮ್ಮ ನಾಯಕ್, ರಾಜುಗೌಡ ಪಾಟೀಲ್, ನೇಮಿರಾಜ ನಾಯಕ್, ವಿಧಾನ ಪರಿಷತ್ ಸದಸ್ಯರಾದ ಟಿ.ಎ. ಶರವಣ, ಭೋಜೆಗೌಡ, ಮಂಜೇಗೌಡ, ಇಂಚರ ಗೋವಿಂದರಾಜು, ಮಾಜಿ ಶಾಸಕರಾದ ದೊಡ್ಡನಗೌಡ ಪಾಟೀಲ್, ಚೌಡರೆಡ್ಡಿ ತೂಪಲ್ಲಿ, ಡಾ.ಅನ್ನದಾನಿ, ತಿಮ್ಮರಾಯಪ್ಪ, ವೀರಭದ್ರಪ್ಪ ಹಾಲಹರವಿ, ಮಹದೇವು, ಪ್ರಸನ್ನ ಕುಮಾರ್, ಮುನೇಗೌಡ, ಆಂಜಿನಪ್ಪ, ಸೂರಜ್ ನಾಯಕ್ ಸೋನಿ ಮುಂತಾದವರು ನಿಯೋಗದಲ್ಲಿ ಇದ್ದರು.

Continue Reading

ಕರ್ನಾಟಕ

Self Harming: ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಸಾವು

Self Harming: ಗುರುವಾರ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈಕೆಯ ಸಹೋದರ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದು, ವಿಷಯ ತಿಳಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ. ಇವರು ಚನ್ನರಾಯಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

VISTARANEWS.COM


on

Self Harming Guest lecturer hangs herself to death
Koo

ಹಾಸನ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯಿತ್ರಿ ಬಡಾವಣೆಯಲ್ಲಿ ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ.

ಕು. ದೀಪಾ (34) ಆತ್ಮಹತ್ಯೆಗೆ ಶರಣಾದ ಅತಿಥಿ ಉಪನ್ಯಾಸಕಿಯಾಗಿದ್ದಾರೆ. ಇವರು ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ನಿವಾಸಿ ಸೋಮಶೇಖರ್ ಹಾಗೂ ಭಾಗ್ಯ ದಂಪತಿ ಪುತ್ರಿಯಾಗಿದ್ದಾರೆ. ಚನ್ನರಾಯಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

Self Harming Guest lecturer hangs herself to death

ಆದರೆ, ಗುರುವಾರ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈಕೆಯ ಸಹೋದರ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದು, ವಿಷಯ ತಿಳಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.

ಪಾಸ್ ಆಗಿದ್ದರೂ ಫೇಲ್ ಎಂದು ತಿಳಿದು ನೇಣಿಗೆ ಶರಣಾದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ

ಮಂಡ್ಯ: ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC Result 2024) ಪ್ರಕಟಗೊಂಡಿದೆ. ಮಂಡ್ಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿದ್ದಾಳೆ. ಪರೀಕ್ಷೆಯಲ್ಲಿ ಪಾಸ್ ಆಗಿದ್ದರೂ ಫೇಲ್ ಎಂದು ತಿಳಿದು ನೇಣಿಗೆ ಶರಣಾದ್ದಾಳೆ.

ಅಮೃತ (16) ನೇಣಿಗೆ ಶರಣಾದ ವಿದ್ಯಾರ್ಥಿನಿ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಅಮೃತ ನಗರಕೆರೆ ಗ್ರಾಮದ ಸರ್ಕಾರಿ ಅನುದಾನಿತ ಪೂರ್ಣಿಮಾ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ ಅಮೃತ ಶೇ.57 ಅಂಕ ಪಡೆದು ತೇರ್ಗಡೆ ಹೊಂದಿದ್ದಳು.

ಆದರೆ ಪರೀಕ್ಷೆಯಲ್ಲಿ ಫೇಲ್‌ ಆಗಿಬಿಟ್ಟೆ ಎಂದು ತಿಳಿದು ಮನೆಯಲ್ಲಿ ಯಾರು ಇಲ್ಲದಾಗ ನೇಣಿಗೆ ಶರಣಾಗಿದ್ದಾಳೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.

ಕಟ್ಟಡದ ಮೇಲಿಂದ ಬಿದ್ದು ಯುವಕ ಸೂಸೈಡ್‌

ಬೆಂಗಳೂರು: ಪಿ.ಜಿ ಮೇಲಿಂದ ಬಿದ್ದು ಯುವಕ ಆತ್ಮಹತ್ಯೆ (Self harming) ಮಾಡಿಕೊಂಡಿದ್ದಾನೆ. ಬೆಂಗಳೂರಿನ ವೈಟ್ ಫಿಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್ ನಗರದಲ್ಲಿ ಘಟನೆ ನಡೆದಿದೆ. ಕಲಬುರಗಿ ಮೂಲದ 28ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ:SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

ಘಟನಾ ಸ್ಥಳಕ್ಕೆ ವೈಟ್ ಫಿಲ್ಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವಕ ಕೆಲಸ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದ ಎನ್ನಲಾಗಿದೆ. ಆದರೆ ಅಲೆದಾಡಿ ಸುಸ್ತಾದ ಯುವಕನಿಗೆ ಎಲ್ಲೂ ಕೆಲಸ ಸಿಕ್ಕಿರಲಿಲ್ಲ ಎನ್ನಲಾಗಿದೆ. ಇದರಿಂದ ಮನನೊಂದು ತಾನು ವಾಸವಿದ್ದ ಪಿಜಿ ಕಟ್ಟಡದ ಮೇಲಿಂದ ಬಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕೊಡಗು, ಕೊಪ್ಪಳ ಸೇರಿ ಹಲವೆಡೆ ಅಬ್ಬರಿಸುತ್ತಿರುವ ಗಾಳಿ- ಮಳೆ; ನಾಳೆಗೂ ವಾರ್ನಿಂಗ್‌

Karnataka Weather Forecast : ವಿವಿಧೆಡೆ ಭಾರಿ ಗಾಳಿ-ಮಳೆಗೆ (Rain News) ಅನಾಹುತಗಳು ಸಂಭವಿಸಿದೆ. ಮಡಿಕೇರಿಯಲ್ಲಿ ಮಳೆ-ಗಾಳಿಗೆ ಕಾರಿನ ಮೇಲೆ ಮರ ಬಿದ್ದು ಜಖಂಗೊಂಡಿದೆ. ಶುಕ್ರವಾರವು ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇತ್ತ ಮಳೆಗಾಗಿ ಮಕ್ಕಳಿಗೆ ಮದುವೆ ಮಾಡಿಸಿದ ಪ್ರಸಂಗವು ನಡೆದಿದೆ.

VISTARANEWS.COM


on

By

karnataka weather Forecast
Koo

ಕೊಡಗು/ಕೊಪ್ಪಳ/ಬೆಂಗಳೂರು: ರಾಜ್ಯದ ಹಲವೆಡೆ ಗಾಳಿ ಸಹಿತ ಮಳೆಯು (Rain News) ಅಬ್ಬರಿಸುತ್ತಿದೆ. ಗುರುವಾರದಂದು ಕೊಡಗು‌ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ (Karnataka Weather Forecast) ಮಳೆಯಾಗಿದೆ. ಕಳೆದೆರಡು ದಿನಗಳಿಂದ ಸಂಜೆಯಾಗುತ್ತಿದ್ದಂತೆ ಮಳೆಯ ಸಿಂಚನವಾಗುತ್ತಿದೆ. ಮುಂಜಾನೆ ಮೋಡ‌ ಕವಿದ ವಾತಾವರಣವಿದ್ದು, ಸಂಜೆ‌ ಅಬ್ಬರದೊಂದಿಗೆ ಮಳೆ ಸುರಿಯುತ್ತಿದೆ. ಮಳೆಯಿಂದ ಕೊಡಗಿನ‌ ರೈತರು ಹಾಗೂ ಸಾರ್ವಜನಿಕರ ಮೊಗದಲ್ಲಿ ಮಂದಹಾಸ ಮೂಡಿದೆ. ಮಡಿಕೇರಿ ಸಮೀಪ ನಿಲ್ಲಿಸಿದ್ದ ಕಾರಿನ ಮೇಲೆ ಭಾರಿ ಗಾಳಿ‌ಗೆ ಮರವು ಧರೆಗುರುಳಿದೆ. ಮಡಿಕೇರಿಯ ಸುದರ್ಶನ ಅಥಿತಿಗೃಹದ ಬಳಿ ಘಟನೆ ನಡೆದಿದೆ. ಅದೃಷ್ಟವಶಾತ್‌ ಕಾರಿನೊಳಗೆ ಯಾರು ಇರಲಿಲ್ಲ.

ಇತ್ತ ಕೊಪ್ಪಳ ಜಿಲ್ಲೆಯ ಕೆಲವೆಡೆ ಮಳೆಯಾಗಿದೆ. ಬಿಸಿಲನಿಂದ ಕಂಗೆಟ್ಟ ಜನರಿಗೆ ಗಾಳಿ ಸಹಿತ ಮಳೆಯು ಅಬ್ಬರಿಸಿದೆ. ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನಲ್ಲಿ ಜೋರಾಗಿ ಮಳೆಯಾಗಿದೆ. ಬೆಂಗಳೂರಿನ ದೇವನಹಳ್ಳಿಯಲ್ಲಿರುವ ಏರ್‌ಪೋರ್ಟ್‌ನಲ್ಲೂ ಉತ್ತಮ ಮಳೆಯಾಗಿದೆ. ಬೆಳಗ್ಗೆನಿಂದ ಬಿಸಿಲಿಗೆ ಕಂಗೆಟ್ಟಿದ್ದ ಏರ್‌ಪೋರ್ಟ್‌ ಪ್ರಯಾಣಿಕರು, ಟ್ಯಾಕ್ಸಿ ಚಾಲಕರು ಮಳೆ ಆಗಮನದಿಂದ ಖುಷಿಯಾದರು. ಮಳೆಗೆ ವಾತಾವರಣವು ಕೂಲ್‌ ಆಗಿತ್ತು.

ವಿಜಯನಗರದಲ್ಲಿ ಮಳೆಗೆ ಉರುಳಿದ ಬಾಳೆ ಬೆಳೆ

ಹಂಪಿ ಪರಿಸರದಲ್ಲಿ ಸುರಿದ ಮಳೆಗೆ ಬಾಳೆ ಬೆಳೆ ಉರುಳಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ನಡೆದಿದೆ. ಗಾಳಿ, ಮಳೆಗೆ ಸಾವಿರಾರು ಬಾಳೆಗಿಡಗಳು ನೆಲಕ್ಕುರುಳಿವೆ. ರೈತಾಪಿ ವರ್ಗ ವರ್ಷದ ಮೊದಲ ದೊಡ್ಡ ಮಳೆ ಎಂದೇ ಕೊಂಡಾಡಿದ್ದಾರೆ. ವೆಂಕಟಾಪುರ ಮಾಗಣೆ, ನಿಂಬಾಪುರ, ಬುಕ್ಕಸಾಗರ ಮಾಗಣೆ ಗ್ರಾಮಗಳಲ್ಲಿ ಬಾಳೆ ಬೆಳೆ ನೆಲಕ್ಕೆ ಬಿದ್ದಿದೆ.

ರೈತರು ಹೆಚ್ಚಾಗಿ ಸುಗಂದಿ, ಏಲಕ್ಕಿ, ಸಕ್ಕರೆ ಬಾಳೆಯನ್ನು ಬೆಳೆದಿದ್ದರು. ವೆಂಕಟಾಪುರ ಮಾಗಣೆಯಲ್ಲಿ ಗ್ರಾಮದಲ್ಲಿ ಬಾಳೆಗಿಡಗಳಿಗೆ ಹೆಚ್ಚಿನ ಹಾನಿಯಾಗಿದೆ. ಎಕರೆಗೆ 900 ಗಿಡಗಳು ನೆಟ್ಟಿದರೆ ಕೆಲವೆಡೆ 300 ರಿಂದ 400 ಬಾಳೆ ಗಿಡ ನೆಲಸಮವಾಗಿವೆ. ಕೆಲವೆಡೆ ಎಕೆರೆಗಟ್ಟಲೇ ಗಿಡಗಳು ನೆಲಕ್ಕುರುಳಿವೆ ಎಂದು ಕೃಷಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಾಳೆ ಬೆಳೆ ಹಾನಿಗೊಳಗಾದ ರೈತರಿಗೆ ಸೂಕ್ತ ಪರಿಹಾರದ ಭರವಸೆಯನ್ನು ಜಿಲ್ಲಾಡಳಿತ ನೀಡಿದೆ. ಇನ್ನೂ ಹಲವು ತಿಂಗಳಿಂದ ತುರ್ತಾ, ಬಸವಣ್ಣ, ರಾಯ ಕಾಲುವೆಗಳಲ್ಲಿ ನೀರಿಲ್ಲದೇ ಬರಿದಾಗಿತ್ತು. ಇದೀಗ ಮಳೆಗೆ ಕಾಲುವೆಗಳಲ್ಲೂ ನೀರು ಹರಿದಿದ್ದು, ರೈತರಲ್ಲೂ ಕೊಂಚ ಸಂತಸಗೊಂಡಿದ್ದಾರೆ.

ತುಮಕೂರಲ್ಲಿ ಮಳೆಗಾಗಿ ಮಕ್ಕಳಿಗೆ ಮದುವೆ

ಕೆಲವೆಡೆ ಮಳೆಯು ಅಬ್ಬರಿಸುತ್ತಿದ್ದರೆ ಇತ್ತ ಮಳೆಗಾಗಿ ವಿಶೇಷ ಪೂಜೆ-ಪುನಸ್ಕಾರಗಳು ನಡೆಯುತ್ತಿವೆ. ಮಳೆಗಾಗಿ ತುಮಕೂರಿನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿದೆ. ತೀವ್ರ ಬರ ಹಿನ್ನೆಲೆಯಲ್ಲಿ ಬೆಳದಿಂಗಳು ಹಬ್ಬ ಆಚರಣೆ ಮಾಡಿ ಮಳೆಗಾಗಿ ಪ್ರಾರ್ಥಿಸಿದ್ದಾರೆ. ಚಿಕ್ಕ ಮಕ್ಕಳಿಗೆ ವಧು-ವರರಂತೆ ಸಿಂಗಾರಿಸಿ, ಅಲಂಕಾರಿಸಿ ಮದುವೆ ಮಾಡಿ ವಿಶೇಷ ಆಚರಣೆ ಮಾಡಿದ್ದಾರೆ. ತುಮಕೂರಿನ ಜಯಪುರ ಬಡಾವಣೆಯಲ್ಲಿ ಘಟನೆ ನಡೆದಿದೆ. ಮಳೆಗಾಗಿ ಜನರು ಹಲವು ಆಚರಣೆಗಳ ಮೊರೆ ಹೋಗಿದ್ದಾರೆ.

ಇದನ್ನೂ ಓದಿ: SSLC Result 2024: ಪಾಸ್ ಆಗಿದ್ದರೂ ಫೇಲ್ ಎಂದು ತಿಳಿದು ನೇಣಿಗೆ ಶರಣಾದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ

ಭಾರಿ ಮಳೆಯೊಂದಿಗೆ ರಭಸವಾಗಿ ಬೀಸಲಿದೆ ಗಾಳಿ

ಮೇ 10ರಂದು ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಕೆಲವು ಸ್ಥಳಗಳಲ್ಲಿ ಗಾಳಿಯು 40-50 ಕಿ.ಮೀ ವೇಗದಲ್ಲಿ ಬೀಸಲಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ದಕ್ಷಿಣ ಒಳನಾಡಿನಲ್ಲಿ ತುಮಕೂರು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಕೆಲವೆಡೆ ಬಿರುಸಿನ ಗಾಳಿಯೊಂದಿಗೆ ಗುಡುಗು ಸಹಿತ ಮಧ್ಯಮ ಮಳೆಯಾಗಲಿದೆ. ರಾಯಚೂರು, ಕೊಪ್ಪಳ, ಬಾಗಲಕೋಟೆ, ವಿಜಯಪುರದಲ್ಲೂ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯಾದ್ಯಂತ ಮುಂದಿನ 24 ಗಂಟೆಯಲ್ಲಿ ಗರಿಷ್ಠ ತಾಪಮಾನವು 2-4 ಡಿ.ಸೆ ಕಡಿಮೆಯಾಗುವ ಸಾಧ್ಯತೆ ಇದೆ.

ಇನ್ನೂ ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿಗೆ ಗುಡುಗು ಸಹಿತ ಮಳೆಯಾಗಲಿದೆ. ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶವು ಕ್ರಮವಾಗಿ 34-22 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Heavy Rain: ಗಂಗಾವತಿಯಲ್ಲಿ ಭಾರೀ ಬಿರುಗಾಳಿ ಮಳೆಗೆ ಬಾಳೆ, ಮಾವು, ಮನೆಗಳಿಗೆ ಹಾನಿ

Heavy Rain: ಗಂಗಾವತಿ ತಾಲೂಕಿನಲ್ಲಿ ಬುಧವಾರ ರಾತ್ರಿ ಬೀಸಿದ ಭಾರೀ ಬಿರುಗಾಳಿ ಮತ್ತು ಮಳೆಗೆ ಅಪಾರ ಪ್ರಮಾಣದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿರುವ ಘಟನೆ ಜರುಗಿದೆ. ತಾಲೂಕಿನ ಸಣಾಪುರ, ಆನೆಗೊಂದಿ, ಮಲ್ಲಾಪುರ ಸೀಮೆಯಲ್ಲಿ ಬೆಳೆಯಲಾಗಿದ್ದ ನೂರಾರು ಹೆಕ್ಟೇರ್‌ ಪ್ರದೇಶದಲ್ಲಿನ ಬಾಳೆ ಬೆಳೆಗೆ ಹಾನಿಯಾಗಿದ್ದು, ವೆಂಕಟಗಿರಿ ಹೋಬಳಿಯ ಬಸವಪಟ್ಟಣ, ವಡ್ಡರಹಟ್ಟಿ, ಬೆಣಕಲ್ ಸೇರಿದಂತೆ ನಾನಾ ಗ್ರಾಮಗಳಲ್ಲಿನ ನೂರಾರು ಹೆಕ್ಟೇರು ಪ್ರದೇಶದಲ್ಲಿನ ಮಾವು ಬೆಳೆಗೆ ಹಾನಿಯಾಗಿದೆ.

VISTARANEWS.COM


on

Bananas mangoes crops and houses damaged due to heavy rain in Gangavathi
Koo

ಗಂಗಾವತಿ: ಬುಧವಾರ ರಾತ್ರಿ ಬೀಸಿದ ಭಾರೀ ಬಿರುಗಾಳಿ ಮತ್ತು ಮಳೆಗೆ (Heavy Rain) ತಾಲೂಕಿನಲ್ಲಿ ಅಪಾರ ಪ್ರಮಾಣದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿರುವ ಘಟನೆ ಜರುಗಿದೆ. ತಾಲೂಕಿನ ಸಣಾಪುರ, ಆನೆಗೊಂದಿ, ಮಲ್ಲಾಪುರ ಸೀಮೆಯಲ್ಲಿ ಬೆಳೆಯಲಾಗಿದ್ದ ನೂರಾರು ಹೆಕ್ಟೇರ್‌ ಪ್ರದೇಶದಲ್ಲಿನ ಬಾಳೆ ಬೆಳೆಗೆ ಹಾನಿಯಾಗಿದೆ. ವೆಂಕಟಗಿರಿ ಹೋಬಳಿಯ ಬಸವಪಟ್ಟಣ, ವಡ್ಡರಹಟ್ಟಿ, ಬೆಣಕಲ್ ಸೇರಿದಂತೆ ನಾನಾ ಗ್ರಾಮಗಳಲ್ಲಿನ ನೂರಾರು ಹೆಕ್ಟೇರ್‌ ಪ್ರದೇಶದಲ್ಲಿನ ಮಾವು ಬೆಳೆಗೆ ಹಾನಿಯಾಗಿದೆ.

ಬಾಳೆ- ಮಾವು ಹಾನಿ

ತಡರಾತ್ರಿ ಬೀಸಿದ ಭಾರೀ ಪ್ರಮಾಣದ ಬಿರುಗಾಳಿಗೆ ಆನೆಗೊಂದಿ ಭಾಗದಲ್ಲಿ ಬಾಳೆ ಗಿಡಗಳಿಗೆ ಭಾರೀ ಪ್ರಮಾಣದ ಹಾನಿಯಾಗಿದೆ. ಸಣಾಪುರ, ಆನೆಗೊಂದಿ, ಮಲ್ಲಾಪುರ ಸೀಮೆಯಲ್ಲಿ ಬೆಳೆಯಲಾಗಿದ್ದ ನೂರಾರು ಹೆಕ್ಟೇರ್‌ ಪ್ರದೇಶದಲ್ಲಿನ ಬಾಳೆಗೆ ಹಾನಿ ಉಂಟಾಗಿದೆ.

ಇದನ್ನೂ ಓದಿ: Pejawar Swamiji: ದೇವಾಲಯಗಳ ಆಡಳಿತ ಸಂಪೂರ್ಣವಾಗಿ ಹಿಂದೂಗಳಿಗೆ ಒಪ್ಪಿಸಬೇಕು: ಪೇಜಾವರ ಶ್ರೀ

ವೆಂಕಟಗಿರಿ ಹೋಬಳಿಯ ಬಸವಪಟ್ಟಣ, ವಡ್ಡರಹಟ್ಟಿ, ಬೆಣಕಲ್ ಸೇರಿದಂತೆ ನಾನಾ ಗ್ರಾಮಗಳಲ್ಲಿನ ನೂರಾರು ಹೆಕ್ಟೇರು ಪ್ರದೇಶದಲ್ಲಿನ ಮಾವು ಬೆಳೆಗೆ ಹಾನಿಯಾಗಿದೆ. ಭಾರೀ ಬಿರುಗಾಳಿಗೆ ಗಿಡದಲ್ಲಿನ ಮಾವುಗಳು ಉದುರು ಬಿದ್ದಿದ್ದು ಲಕ್ಷಾಂತರ ರೂಪಾಯಿ ಮೊತ್ತದ ಹಾನಿ ಸಂಭವಿಸಿದೆ ಎಂದು ತಿಳಿದುಬಂದಿದೆ.

ಬುಧವಾರ ರಾತ್ರಿ ಬೀಸಿದ ಭಾರೀ ಬಿರುಗಾಳಿ ಸಮೇತ ಮಳೆಗೆ ಗಂಗಾವತಿ ನಗರದ ವಿವಿಧೆಡೆ ದೊಡ್ಡ ಮರಗಳ ಕೊಂಬೆಗಳು ತುಂಡಾಗಿ ರಸ್ತೆಗೆ ಬಿದ್ದ ಪರಿಣಾಮ ಕೆಲಕಾಲ ವಾಹನಗಳ ಸಂಚಾರಕ್ಕೆ ಸಮಸ್ಯೆಯಾಗಿತ್ತು.

ನಗರದ ಅಂಗಡಿ ಸಂಗಣ್ಣ ಕ್ಯಾಂಪ್, ಮಹೆಬೂಬನಗರ, ಗೌಸಿಯಾ ಕಾಲೋನಿ, ಎಚ್.ಆರ್.ಎಸ್. ಕ್ಯಾಂಪ್, ಅಣ್ಣೂರು ಗೌರಮ್ಮಕ್ಯಾಂಪ್, ಲಿಂಗರಾಜ ಕ್ಯಾಂಪ್ ಮತ್ತು ಶರಣಬಸವೇಶ್ವರ ನಗರದಲ್ಲಿ ಕೆಲ ತಗಡಿನ ಮನೆಗಳಿಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Gold Rate Today: ಚಿನ್ನದ ಮಾರುಕಟ್ಟೆ ಇಳಿಮುಖ; 22 ಮತ್ತು 24 ಕ್ಯಾರಟ್‌ ಬಂಗಾರದ ದರಗಳಲ್ಲಿ ಇಳಿಕೆ

ಜಂಟಿ ಸಮೀಕ್ಷೆ

ಬುಧವಾರ ರಾತ್ರಿ ಬೀಸಿದ ಭಾರೀ ಬಿರುಗಾಳಿ, ಮಳೆಗೆ ಆನೆಗೊಂದಿ ಭಾಗದಲ್ಲಿ ಬಾಳೆ ನಾಶವಾಗಿರುವ ಬಗ್ಗೆ ಮಾಹಿತಿ ಲಭಿಸುತ್ತಿದ್ದಂತೆಯೇ ಕಂದಾಯ ಮತ್ತು ತೋಟಗಾರಿಕಾ ಇಲಾಖೆಯ ಜಂಟಿ ಸಮೀಕ್ಷೆ ನಡೆಸಲಾಗುತ್ತಿದೆ. ಹಾನಿಯ ವರದಿಯನ್ನು ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಹಸೀಲ್ದಾರ್ ಯು. ನಾಗರಾಜ್ ತಿಳಿಸಿದ್ದಾರೆ.

Continue Reading
Advertisement
KL Rahul
ಕ್ರೀಡೆ19 mins ago

IPL 2024 : ಲಕ್ನೊ ತಂಡದ ನಾಯಕನ ಸ್ಥಾನದಿಂದ ರಾಹುಲ್ ಔಟ್​?

Prajwal Revanna Case DK Shivakumar alleged mastermind in 25000 pen drive allotment
ಹಾಸನ21 mins ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

Maldives anti-India stance
ಪ್ರಮುಖ ಸುದ್ದಿ1 hour ago

Maldives anti-India stance : ಭಾರತ ವಿರೋಧಿ ಕ್ರಮಕ್ಕೆ ಪಶ್ಚಾತಾಪ ವ್ಯಕ್ತಪಡಿಸಿದ ಮಾಲ್ಡೀವ್ಸ್​​

Self Harming Guest lecturer hangs herself to death
ಕರ್ನಾಟಕ1 hour ago

Self Harming: ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಸಾವು

karnataka weather Forecast
ಮಳೆ2 hours ago

Karnataka Weather : ಕೊಡಗು, ಕೊಪ್ಪಳ ಸೇರಿ ಹಲವೆಡೆ ಅಬ್ಬರಿಸುತ್ತಿರುವ ಗಾಳಿ- ಮಳೆ; ನಾಳೆಗೂ ವಾರ್ನಿಂಗ್‌

Dog bite
Latest2 hours ago

Dog Bite : ಮಗುವಿಗೆ ಕಚ್ಚಿದ ನಾಯಿ; ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದ ದಂಪತಿಗೆ ಥಳಿತ, ಇಲ್ಲಿದೆ ವಿಡಿಯೊ

Toxic Shawarma
ಆರೋಗ್ಯ2 hours ago

Toxic Shawarma: ಚಿಕನ್‌ ಶವರ್ಮಾ ತಿಂದರೆ ಸಾಯುತ್ತಾರೆಯೆ? ಏನು ಕಾರಣ?

Sensex crash
ಪ್ರಮುಖ ಸುದ್ದಿ2 hours ago

Sensex Crash : ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ, ಸೆನ್ಸೆಕ್ಸ್​ 1100 ಅಂಕಗಳಷ್ಟು ಪತನ

Dietary Guidelines
ಆರೋಗ್ಯ2 hours ago

Dietary Guidelines: ಭಾರತೀಯರ ಆಹಾರ ಹೇಗಿರಬೇಕು? ಐಸಿಎಂಆರ್ ಮಾರ್ಗಸೂಚಿ ಹೀಗಿದೆ

Bananas mangoes crops and houses damaged due to heavy rain in Gangavathi
ಮಳೆ2 hours ago

Heavy Rain: ಗಂಗಾವತಿಯಲ್ಲಿ ಭಾರೀ ಬಿರುಗಾಳಿ ಮಳೆಗೆ ಬಾಳೆ, ಮಾವು, ಮನೆಗಳಿಗೆ ಹಾನಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case DK Shivakumar alleged mastermind in 25000 pen drive allotment
ಹಾಸನ21 mins ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ7 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ7 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ7 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು8 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ8 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು9 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ2 days ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

ಟ್ರೆಂಡಿಂಗ್‌