Alcohol Effect : ಕುಡಿದ ಮತ್ತಿನಲ್ಲಿ 6 ದಿನದ ಹಸುಗೂಸನ್ನು ದಾರಿಯಲ್ಲೇ ಇಟ್ಟು ಹೋದ ತಂದೆ! - Vistara News

ಕರ್ನಾಟಕ

Alcohol Effect : ಕುಡಿದ ಮತ್ತಿನಲ್ಲಿ 6 ದಿನದ ಹಸುಗೂಸನ್ನು ದಾರಿಯಲ್ಲೇ ಇಟ್ಟು ಹೋದ ತಂದೆ!

Alcohol Effect : ವ್ಯಕ್ತಿಯೊಬ್ಬ ತಾಯಿಯ ಮಡಿಲಿನಲ್ಲಿದ್ದ ಆರು ದಿನಗಳ ಹಸುಗೂಸನ್ನು ಎತ್ತಿಕೊಂಡು ಬಂದು ಬಸ್‌ ನಿಲ್ದಾಣದಲ್ಲಿ ಬಿಟ್ಟು ಹೋಗಿದ್ದಾನೆ. ಎಂಥಾ ಅಪ್ಪ ಇವನು?

VISTARANEWS.COM


on

Child kept at bus stand in Lakshmeshwara by father
ತಂದೆಯೇ ಮಗುವನ್ನು ಎತ್ತಿಕೊಂಡು ತಿರುಗುತ್ತಿರುವುದು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗದಗ: ಕುಡಿತದ ಅಮಲು, ಬೇಜವಾಬ್ದಾರಿತನ, ಅಮಾನವೀಯತೆಗಳು ಸೇರಿದರೆ ಏನಾಗುತ್ತದೆ ಎನ್ನುವುದಕ್ಕೆ ಇದೊಂದು ಒಳ್ಳೆಯ ಉದಾಹರಣೆ. ಇಲ್ಲೊಬ್ಬ ವ್ಯಕ್ತಿ ಎಷ್ಟು ನಿರ್ಲಕ್ಷ್ಯದಿಂದ ವರ್ತಿಸಿದ್ದಾನೆ ಎಂದರೆ ಇನ್ನೂ ಆರು ದಿನದ ಹಸುಗೂಸನ್ನು (New born Child) ತಾಯಿಯ ಮಡಿಲಿನಿಂದ ಎತ್ತಿಕೊಂಡು ಹೋಗಿ ದಾರಿ ಮಧ್ಯೆ (Man takes 6 days child from Mother side) ಬಿಟ್ಟುಬಂದಿದ್ದಾನೆ. ಅವನ ಕುಡಿತದ ಅಮಲು (Alcohol Effect) ಎಷ್ಟರ ಮಟ್ಟಿಗೆ ಇತ್ತೆಂದರೆ ಅಮಲು ಇಳಿದ ಮೇಲೆ ಮಗುವನ್ನು ಎಲ್ಲಿ ಬಿಟ್ಟಿದ್ದೇನೆ ಎನ್ನುವುದೇ ನೆನಪಿರಲಿಲ್ಲ. ಈ ಘಟನೆ ನಡೆದಿರುವುದು ಗದಗ ಜಿಲ್ಲೆಯಲ್ಲಿ (Gadaga News). ತಂದೆ-ತಾಯಿ ಇಬ್ಬರೂ ಇದ್ದರೂ ಹಸುಗೂಸು ಅನಾಥವಾದ ಮನಕಲಕುವ ವಿದ್ಯಮಾನ ಇದು.

ಅವಳಿಗೆ ಗದಗ ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಯಾಗಿ ಗಂಡು ಮಗು ಜನಿಸಿತ್ತು. ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ಬಳಿಕ ಬಾಣಂತಿ ತಾಯಿ ಹಾಗೂ ಮಗು ಗದಗದಲ್ಲಿ ವಾಸವಾಗಿದ್ದರು. ಈ ನಡುವೆ, ಗಂಡ ಕುಡಿದ ಮತ್ತಿನಲ್ಲಿದ್ದ. ರಾತ್ರಿ ಅನಾಮತ್ತಾಗಿ ಆರು ದಿನದ ಹಸುಗೂಸನ್ನು ತಾಯಿ ಪಕ್ಕದಿಂದ ಎತ್ತಿಕೊಂಡು ಹೋಗೇ ಬಿಟ್ಟಿದ್ದ!

Child kept at bus stand in Lakshmeshwara by father
ಲಕ್ಷ್ಮೇಶ್ವರ ಆಸ್ಪತ್ರೆಯಲ್ಲಿ ಮಗುವಿನ ಆರೈಕೆ

ಇದಾದ ಬಳಿಕ ತಡರಾತ್ರಿ ಲಕ್ಷ್ಮೇಶ್ವರ ಪಟ್ಟಣದ ರಸ್ತೆಯಲ್ಲಿ ಮಗು ಸಮೇತ ಪ್ರತ್ಯಕ್ಷವಾಗಿದ್ದ. ಈ ರಾತ್ರಿಯ ಹೊತ್ತು ಮಗುವನ್ನು ಹಿಡಿದುಕೊಂಡು ಈ ರೀತಿ ಹುಚ್ಚನಂತೆ ಅಲೆಯುತ್ತಿರುವುದನ್ನು ಯಾರೋ ಗಮನಿಸಿ ಲಕ್ಷ್ಮೇಶ್ವರ ಪೊಲೀಸರಿಗೆ ಮಾಹಿತಿ ನೀಡಿದರು.

ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿದರು. ಆದರೆ, ಪೊಲೀಸರು ಬರುತ್ತಿದ್ದಂತೆಯೇ ಆ ವ್ಯಕ್ತಿ ಮಗುವನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಪೊಲೀಸರು‌ ಹಾಗೂ ಅಧಿಕಾರಿಗಳು ಮಗುವನ್ನು ರಕ್ಷಣೆ ಮಾಡಿ ಆಸ್ಪತ್ರೆಯಲ್ಲಿ ಸೂಕ್ತ‌ ಚಿಕಿತ್ಸೆ ಕೊಡಿಸಿದ್ದಾರೆ.

ಇದನ್ನೂ ಓದಿ: Child theft: ನವಜಾತ ಶಿಶು ಕಳ್ಳರಿಂದ ಕೆಲವೇ ಗಂಟೆಗಳಲ್ಲಿ ರಕ್ಷಣೆ, ಮಗುವನ್ನು ಬಿಗಿದಪ್ಪಿ ಕಣ್ಣೀರಾದ ತಾಯಿ

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಲ್ಯಾಣ‌ ಸಮಿತಿಯಲ್ಲಿ ಪ್ರಕರಣ ದಾಖಲಾಗಿ ಮಕ್ಕಳ ದತ್ತು ಸ್ವೀಕಾರ ಕೇಂದ್ರದಲ್ಲಿ ಮಗುವನ್ನು ಆರೈಕೆ ಮಾಡಲಾಗುತ್ತಿದೆ.

ಇದಾದ ಮರುದಿನ ಗಂಡ ಮತ್ತು ಹೆಂಡತಿ ಇಬ್ಬರೂ ಸೇರಿಕೊಂಡು ಮಗುವನ್ನು ಕೊಡಿ ಎಂದು ಕೇಳಿಕೊಂಡು ಬಂದಿದ್ದಾರೆ. ಆದರೆ, ಮಧ್ಯರಾತ್ರಿ ಮಗುವನ್ನು ಎತ್ತಿಕೊಂಡು ಬಂದಿದ್ದೇಕೆ? ಎಳೆ ಹಸುಳೆಯನ್ನು ಯಾಕೆ ಈ ರೀತಿ ಮಾಡಿದ್ದೀರಿ ಎಂದು ಕೇಳಿದ್ದಕ್ಕೆ ಅವರಲ್ಲಿ ಉತ್ತರವಿರಲಿಲ್ಲ.

ಹೀಗಾಗಿ ಮಗುವನ್ನು ಅವರ ಕೈಗೆ ಹಸ್ತಾಂತರಿಸಲು ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಹಿಂದೇಟು ಹಾಕಿದ್ದಾರೆ. ಸೂಕ್ತ ತನಿಖೆ ಬಳಿಕವೇ ತಂದೆ ತಾಯಿಗೆ ಮಗು ನೀಡಲು ಅಧಿಕಾರಿಗಳ‌ ನಿರ್ಧರಿಸಿದ್ದಾರೆ. ಲಕ್ಷ್ಮೇಶ್ವರ ಪೊಲೀಸ್ ಠಾಣೆ‌ ವ್ಯಾಪ್ತಿಯಲ್ಲಿ ನಡೆದ ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಯಲಿದೆ. ಅಲ್ಲಿವರೆಗೆ ಮಗು ದತ್ತು ಸ್ವೀಕಾರ ಕೇಂದ್ರದಲ್ಲಿ ಪೋಷಣೆಯಲ್ಲಿ ಇರಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna Case: ಪ್ರಜ್ವಲ್‌ ರೇವಣ್ಣ ಅಜ್ಞಾತವಾಸಕ್ಕೆ ಒಂದು ತಿಂಗಳು, ಎಲ್ಲಿದ್ದೀಯಪ್ಪಾ ಪ್ರಜ್ವಲ್?

Prajwal Revanna Case: ಏಪ್ರಿಲ್ 26ರಂದು ನಡೆದ ಎರಡನೇ ಹಂತದ ಮತದಾನ ಮುಗಿಸಿ ಪ್ರಜ್ವಲ್‌ ಮಾರನೇ ದಿನ ಮುಂಜಾನೆ ದೇಶ ಬಿಟ್ಟು ಎಸ್ಕೇಪ್ ಆಗಿದ್ದರು. ತಲೆ ಮರೆಸಿಕೊಂಡು ತಿಂಗಳು ಕಳೆದರೂ ಅವರ ಸುಳಿವು ಪತ್ತೆಯಾಗಿಲ್ಲ. ಒಂದು ತಿಂಗಳಿನಿಂದ ಎಸ್‌ಐಟಿಗೆ (SIT) ಚಳ್ಳೆ ಹಣ್ಣು ತಿನ್ನಿಸಿ ತಲೆ ಮರೆಸಿಕೊಂಡಿರುವ ಪ್ರಜ್ವಲ್‌ ವಿರುದ್ಧ ಮೂರು ಅತ್ಯಾಚಾರ ಆರೋಪ ಕೇಸ್‌ಗಳಿವೆ.

VISTARANEWS.COM


on

Prajwal Revanna Case Will SIT team go abroad for arrest Prajwal
Koo

ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ (Hassan MP Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್ (pen drive case video viral) ಪ್ರಕರಣಕ್ಕೆ ಸಂಬಂಧಿಸಿ ತನಿಖೆಯಿಂದ ತಪ್ಪಿಸಿಕೊಳ್ಳಲು ವಿದೇಶಕ್ಕೆ ಹಾರಿರುವ ಪ್ರಜ್ವಲ್ ರೇವಣ್ಣ ಅವರ ದೇಶಾಂತರ ವಾಸಕ್ಕೆ ಒಂದು ತಿಂಗಳು ಪೂರ್ಣವಾಗಿದೆ. ಇನ್ನೂ ಅವರು ದೇಶಕ್ಕೆ ಹಿಂದಿರುಗುವ ಯಾವ ಸುಳಿವನ್ನೂ ಕಾಣಿಸಿಲ್ಲ.

ಏಪ್ರಿಲ್ 26ರಂದು ನಡೆದ ಎರಡನೇ ಹಂತದ ಮತದಾನ ಮುಗಿಸಿ ಪ್ರಜ್ವಲ್‌ ಮಾರನೇ ದಿನ ಮುಂಜಾನೆ ದೇಶ ಬಿಟ್ಟು ಎಸ್ಕೇಪ್ ಆಗಿದ್ದರು. ತಲೆ ಮರೆಸಿಕೊಂಡು ತಿಂಗಳು ಕಳೆದರೂ ಅವರ ಸುಳಿವು ಪತ್ತೆಯಾಗಿಲ್ಲ. ಒಂದು ತಿಂಗಳಿನಿಂದ ಎಸ್‌ಐಟಿಗೆ (SIT) ಚಳ್ಳೆ ಹಣ್ಣು ತಿನ್ನಿಸಿ ತಲೆ ಮರೆಸಿಕೊಂಡಿರುವ ಪ್ರಜ್ವಲ್‌ ವಿರುದ್ಧ ಮೂರು ಅತ್ಯಾಚಾರ ಆರೋಪ ಕೇಸ್‌ಗಳಿವೆ.

ಮೂರು ಕೇಸ್ ದಾಖಲಾದರೂ ತಲೆ ಕೆಡಿಸಿಕೊಳ್ಳದ ಪ್ರಜ್ವಲ್ ತಂದೆ ಎಚ್‌.ಡಿ ರೇವಣ್ಣ (HD revanna) ಅವರ ಬಂಧನವಾದ್ರೂ ಹಿಂದಿರುಗಿಲ್ಲ. ಚಿಕ್ಕಪ್ಪ, ಮಾಜಿ ಸಿಎಂ‌ ಎಚ್‌.ಡಿ ಕುಮಾರಸ್ವಾಮಿ (HD Kumaraswami) ಮನವಿಗೂ ಡೋಂಟ್ ಕೇರ್ ಮಾಡಿದ್ದಾರೆ. ತಾತ, ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರ (HD Deve gowda) ಎಚ್ಚರಿಕೆಗೂ ಸೊಪ್ಪುಹಾಕಿಲ್ಲ. ʼಕೂಡಲೇ ಹಿಂದಿರುಗಿ ಬಾರದಿದ್ದರೆ ಕುಟುಂಬದಲ್ಲಿ ಒಂಟಿಯಾಗಬೇಕಾಗುತ್ತದೆʼ ಎಂದು ದೇವೇಗೌಡರು ಎಚ್ಚರಿಸಿದ್ದರೂ ಪ್ರಜ್ವಲ್‌ ತುಟಿ ಪಿಟಕ್‌ ಎಂದಿಲ್ಲ.

ಪ್ರಜ್ವಲ್ ಎಲ್ಲಿದ್ದಾನೆಂಬ ಖಚಿತ ಮಾಹಿತಿ ಎಸ್ಐಟಿಗೆ ದೊರೆತಿಲ್ಲ. ಜರ್ಮನಿ, ದುಬೈ, ಹಂಗೇರಿ, ಇಂಗ್ಲೆಂಡ್ ಹೀಗೆ ಹಲವು ದೇಶಗಳಲ್ಲಿ ಓಡಾಡಿದ್ದಾರೆ ಎಂದು ಹೇಳಲಾಗಿದೆ. ಜರ್ಮನಿಯಿಂದ ಹಿಂದಿರುಗುವ ಟಿಕೆಟ್‌ ರಿಸರ್ವ್‌ ಮಾಡಿಸಿ ನಂತರ ಕೊನೆಯ ಕ್ಷಣದಲ್ಲಿ ರದ್ದುಪಡಿಸಿದ್ದು ಗೊತ್ತಾಗಿದೆ. ಪ್ರಜ್ವಲ್‌ ಎಲ್ಲಿದ್ದಾರೆ ಎಂಬ ಸುಳಿವು ಹೊಂದಿರಬಹುದಾದ ಭವಾನಿ ರೇವಣ್ಣ (Bhavani revanna) ಕೂಡ ವಿಚಾರಣೆಗೆ ಹಾಜರಾಗಿಲ್ಲ.

ಪ್ರಜ್ವಲ್ ಹೊಂದಿರುವ ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್ ರದ್ದುಗೊಳಿಸಲು ಕೋರಿ ಕೇಂದ್ರ ವಿದೇಶಾಂಗ ಇಲಾಖೆಗೆ ರಾಜ್ಯ ಸರ್ಕಾರ ಎರಡೆರಡು ಸಲ ಪತ್ರ ಬರೆದಿದೆ. ಈ ವಾರ ಪಾಸ್‌ಪೋರ್ಟ್ ರದ್ದಾದರೆ ಪ್ರಜ್ವಲ್ ವಾಪಸ್ ಮರಳಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ಹೀಗಾಗಿ ಕೇಂದ್ರ ಗೃಹ ಇಲಾಖೆ ನಡೆ ಏನು ಎಂಬುದು ಕುತೂಹಲ ಮೂಡಿಸಿದೆ.

ಇನ್ನೊಂದು ಕಡೆ, ಪ್ರಜ್ವಲ್‌ನ ಕರೆಸಿ ಅಂತ ಪುತ್ರ ರೇವಣ್ಣಗೆ ದೇವೇಗೌಡರು ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ವಾರ್ನಿಂಗ್ ಬೆನ್ನಲ್ಲೇ ಪ್ರಜ್ವಲ್ ವಾಪಸ್ ಕರೆಸಲು ಕಸರತ್ತು ಜೋರಾಗಿದೆ. ಪ್ರಜ್ವಲ್ ಸಂಪರ್ಕಕ್ಕೆ ರೇವಣ್ಣ ಕುಟುಂಬಸ್ಥರು ಯತ್ನಿಸುತ್ತಿದ್ದು, ಪ್ರಜ್ವಲ್ ತಾಯಿ ಕಡೆಯ ಸಂಬಂಧಿಕರ ಮೂಲಕ ಹಾಗೂ ವಿದೇಶದಲ್ಲಿರುವ ಪ್ರಜ್ವಲ್ ಸ್ನೇಹಿತರ ಮೂಲಕವೂ ಸಂಪರ್ಕಕ್ಕೆ ತೀವ್ರ ಪ್ರಯತ್ನ ನಡೆಯುತ್ತಿದೆ.

ಇನ್ನು ಎರಡು ಮೂರು ದಿನಗಳಲ್ಲಿ ಪ್ರಜ್ವಲ್‌ನನ್ನು ಕರೆಸಿ ಎಸ್ಐಟಿ ಮುಂದೆ ಹಾಜರು ಮಾಡಿಸಲು ಶತ ಪ್ರಯತ್ನ ಮಾಡಲಾಗುತ್ತಿದೆ. ಈಗಾಗಲೇ ಪ್ರಜ್ವಲ್ ರೇವಣ್ಣಗೆ ವಿದೇಶಾಂಗ ಸಚಿವಾಲಯ ಶೋಕಾಸ್ ನೋಟಿಸ್ ನೀಡಿದೆ. ಒಂದು ವೇಳೆ ಪ್ರಜ್ವಲ್ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದಾದರೆ ಪ್ರಕರಣದಲ್ಲಿ ಪ್ರಜ್ವಲ್‌ಗೆ ಸಂಕಷ್ಟ ಎದುರಾಗಲಿದೆ. ಆಗ ಕುಟುಂಬಕ್ಕೆ ಮತ್ತಷ್ಟು ಮುಜುಗರ ಉಂಟಾಗುತ್ತದೆ. ತೀವ್ರ ಸ್ವರೂಪದ ಮುಜುಗರ ತಪ್ಪಿಸಿಕೊಳ್ಳಲು ಪ್ರಜ್ವಲ್ ವಿದೇಶದಿಂದ ಕರೆಸಲು ರೇವಣ್ಣ ಕುಟುಂಬಸ್ಥರು ಎಲ್ಲಾ ಆಯಾಮದಲ್ಲೂ ಪ್ರಯತ್ನ ಮಾಡುತ್ತಿದ್ದಾರೆ.

ಚುನಾವಣೆ ಫಲಿತಾಂಶ ಜೂನ್‌ 4ರಂದು ಬರಲಿದ್ದು, ಅದಕ್ಕೂ ಮುನ್ನ ಪ್ರಜ್ವಲ್‌ ದೇಶಕ್ಕೆ ಮರಳುವುದು ಅಸಂಭವ ಎನ್ನಲಾಗುತ್ತಿದೆ. ಈ ಸಲದ ಚುನಾವಣೆಯಲ್ಲಿ ಸೋತರೆ ಅನಿವಾರ್ಯವಾಗಿ ಶರಣಾಗಬೇಕಾಗುತ್ತದೆ. ಗೆದ್ದರೆ ಸಂಸದೀಯ ಸ್ಥಾನದ ಪ್ರಭಾವ ಬಳಸುವ ಸಾಧ್ಯತೆಯಿದೆ.

ಇದನ್ನೂ ಓದಿ: Prajwal Revanna Case: ವಿಡಿಯೊ ವೈರಲ್ ಅಪರಾಧದ ಸೆಕ್ಷನ್ ಹೇಳಿದ ಎಚ್‌ಡಿಕೆ; ಸಿಎಂ ಕುರ್ಚಿಯಲ್ಲಿ ಊಸರವಳ್ಳಿ ಎಂದು ಕಿಡಿ

Continue Reading

ಕ್ರೈಂ

Illegal Relationship:`ಅತ್ತಿಗೆಯಿಂದ ದೂರ ಇರುʼ ಎಂದ ಮೈದುನನ ಬರ್ಬರವಾಗಿ ಹತ್ಯೆ ಮಾಡಿದ ಪ್ರಿಯಕರ

Illegal Relationship: ಕೊಲೆಯಾದ ಹೀರಾಲಾಲ್‌ನ ಅತ್ತಿಗೆ ಜೊತೆ ರವಿ ಎಂಬಾತ ಅಕ್ರಮ ಸಂಬಂಧ ಹೊಂದಿದ್ದ. ಹೀರಾಲಾಲ್ ಅಣ್ಣ ಬಾಬು ಲದಾಫ್, ತನ್ನ ಪತ್ನಿಯ ಅನೈತಿಕ ಸಂಬಂಧ ಕಂಡು ಅದರಿಂದ ದೂರ ಇರುವಂತೆ ಪತ್ನಿಗೆ ಹೇಳಿದ್ದ. ಆದರೆ ಬಾಬು ಲದಾಫ್ ಹೆಂಡತಿ ತನ್ನ ಪ್ರಿಯಕರನ ಜೊತೆ ಸೇರಿ ಗಂಡನ ಮೇಲೆಯೇ ಹಲ್ಲೆ ಮಾಡಿಸಿದ್ದಳು.

VISTARANEWS.COM


on

kalaburagi illegal relationship
ಕೊಲೆಯಾದ ಹೀರಾಲಾಲ್ ಲದಾಫ್
Koo

ಕಲಬುರಗಿ: ತನ್ನ ಅತ್ತಿಗೆಯ ಜೊತೆಗಿನ ಅನೈತಿಕ ಸಂಬಂಧದಿಂದ (Illegal Relationship) ದೂರ ಇರು ಎಂದು ಬುದ್ಧಿವಾದ ಹೇಳಿದ ಮೈದುನನನ್ನು ಅತ್ತಿಗೆಯ ಪ್ರಿಯಕರ ಬರ್ಬರವಾಗಿ ಕಲ್ಲಿನಿಂದ ಜಜ್ಜಿ ಹತ್ಯೆ (Stoned to death, murder case) ಮಾಡಿದ್ದಾನೆ. ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಮುನ್ನೊಳ್ಳಿ ಗ್ರಾಮದಲ್ಲಿ ಘಟನೆ (Kalaburagi crime news) ನಡೆದಿದೆ.

ಹೀರಾಲಾಲ್ ಲದಾಫ್ (35) ಎಂಬವರನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ. ಮುನ್ನೊಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿರುವ ಘಟನೆಯಿದು. ಕೊಲೆಯಾದ ಹೀರಾಲಾಲ್‌ನ ಅತ್ತಿಗೆ ಜೊತೆ ರವಿ ಎಂಬಾತ ಅಕ್ರಮ ಸಂಬಂಧ ಹೊಂದಿದ್ದ. ಹೀರಾಲಾಲ್ ಅಣ್ಣ ಬಾಬು ಲದಾಫ್, ತನ್ನ ಪತ್ನಿಯ ಅನೈತಿಕ ಸಂಬಂಧ ಕಂಡು ಅದರಿಂದ ದೂರ ಇರುವಂತೆ ಪತ್ನಿಗೆ ಹೇಳಿದ್ದ.

ಆದರೆ ಬಾಬು ಲದಾಫ್ ಹೆಂಡತಿ ತನ್ನ ಪ್ರಿಯಕರನ ಜೊತೆ ಸೇರಿ ಗಂಡನ ಮೇಲೆಯೇ ಹಲ್ಲೆ ಮಾಡಿಸಿದ್ದಳು. ಪತ್ನಿಯ ಅನೈತಿಕ ಸಂಬಂಧ ಹಾಗೂ ಹಲ್ಲೆಯಿಂದ ಮಾನಸಿಕವಾಗಿ ನೊಂದು ಬಾಬು ಲದಾಫ್‌ ಊರನ್ನೇ ಬಿಟ್ಟು ಹೋಗಿದ್ದ. ಅಣ್ಣನ ಸಂಸಾರವನ್ನು ಸರಿದಾರಿಗೆ ತರಲು ಯತ್ನಿಸಿದ್ದ ಹೀರಾಲಾಲ್, ಅನೈತಿಕ ಸಂಬಂಧ ಬಿಟ್ಟು ಬಿಡುವಂತೆ ರವಿಗೆ ಹೇಳಿದ್ದ. ಇದೇ ವಿಚಾರವಾಗಿ ಹೀರಾಲಾಲ್ ಹಾಗೂ ರವಿ ಮಧ್ಯೆ ಆಗಾಗ ಗಲಾಟೆ ಕೂಡ ಆಗಿತ್ತು.

ಮೊನ್ನೆ ಕುಡಿದ ನಶೆಯಲ್ಲಿ ಇವರಿಬ್ಬರೂ ಗಲಾಟೆ ಮಾಡಿಕೊಂಡಿದ್ದರು. ಬಳಿಕ ರವಿ ಹೀರಾಲಾಲ್‌ ಮೇಲೆ ಹಲ್ಲೆ ಮಾಡಿ ಕಲ್ಲಿನಿಂದ ಜಜ್ಜಿಹಾಕಿದ್ದಾನೆ. ಗಾಯಗೊಂಡು ಹೀರಾಲಾಲ್‌ನನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ನಿನ್ನೆ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ. ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಟವಾಡುತ್ತ ಸಂಪ್‌ಗೆ ಬಿದ್ದು 2 ವರ್ಷದ ಕಂದಮ್ಮ ದುರ್ಮರಣ

ಬೆಳಗಾವಿ: 2 ವರ್ಷದ ಮಗುವೊಂದು ಆಟವಾಡುತ್ತ ಹೋಗಿ ನೀರಿನ ಸಂಪ್‌ಗೆ (Water Sump) ಬಿದ್ದು ಸಾವಿಗೀಡಾದ ದುರ್ಘಟನೆ (Child Death) ಬೆಳಗಾವಿಯ (Belagavi news) ಕಂಗ್ರಾಳ ಗಲ್ಲಿಯಲ್ಲಿ ನಡೆದಿದೆ.

ಸಾಯೀಶಾ ಸಂದೀಪ್ ಬಡವನಾಚೆ(2) ಮೃತಪಟ್ಟ ಮಗು. ಆಟವಾಡುತ್ತಿದ್ದ ಮಗು ಇದ್ದಕ್ಕಿದ್ದಂತೆ ಕಣ್ಮರೆಯಾದುದರಿಂದ ಗಾಬರಿಯಾದ ಪೋಷಕರು ಹುಡುಕಾಟ ಆರಂಭಿಸಿದ್ದರು. ಎಷ್ಟೇ ಹುಡುಕಿದರೂ ಕಾಣದಿದ್ದಾಗ ಪೋಷಕರು ಸಂಪ್ ಒಪನ್ ಮಾಡಿ ನೋಡಿದ್ದರು. ಸಂಪ್ ಓಪನ್ ಮಾಡುತ್ತಿದ್ದಂತೆ ಅಲ್ಲಿ ಬಿದ್ದಿದ್ದ ಮಗು ಸಾಯೀಶಾ ಕಂಡುಬಂದಿದ್ದಳು.

ಕೂಡಲೇ ಸಮೀಪದ ಆಸ್ಪತ್ರೆಗೆ ಮಗುವನ್ನು ಪೋಷಕರು ಕರೆದೊಯ್ದರಾದರೂ, ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಮಗು ತೀರಿ ಹೋಗಿದ್ದರ ಬಗ್ಗೆ ವೈದ್ಯರು ಮಾಹಿತಿ ನೀಡಿದರು. ಖಡೇ ಬಜಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮರ ಬಿದ್ದು ಮಹಿಳೆ ಸಾವು

ಯಾದಗಿರಿ: ಮಳೆ ಅವಾಂತರದಿಂದಾಗಿ, ನೀರು ತರಲು ಹೋದ ಮಹಿಳೆ ಮೇಲೆ ಮರ ಬಿದ್ದು ಮಹಿಳೆ ಸಾವಿಗೀಡಾಗಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಿನ್ನೆ ಸಂಜೆ ಘಟನೆ ನಡೆದಿದೆ. ಶ್ವೇತಾ ರಾಠೋಡ (21) ಮೃತ ಮಹಿಳೆ.

ಬಿರುಗಾಳಿ ಸಹಿತ ಮಳೆ ಬರುತ್ತಿದ್ದಾಗಲೇ ನೀರು ತರಲು ಹೋದ ಶ್ವೇತಾ ರಾಠೋಡ ಮೇಲೆ ಮರ ಬಿದ್ದಿದೆ. ಗಂಭೀರ ಗಾಯಗೊಂಡ ಶ್ವೇತಾರನ್ನು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡ ಸರಕಾರಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ.

ಇದನ್ನೂ ಓದಿ: Constables: ಬಿಯರ್‌ ಸೇವಿಸಿ ಇಬ್ಬರು ಕಾನ್‌ಸ್ಟೆಬಲ್‌ಗಳ ಸಾವು; ಮದ್ಯ ಪ್ರಿಯರೇ ಇನ್ನಾದರೂ ಎಚ್ಚರ!

Continue Reading

ಹಾಸನ

Arjuna Elephant: ಅರ್ಜುನ ಆನೆ ಸ್ಮಾರಕ ನಿರ್ಮಾಣ ಹೆಸರಿನಲ್ಲಿ ಅಕ್ರಮ ಹಣ ಸಂಗ್ರಹ?

ಅರ್ಜುನ ಸ್ಮಾರಕ ಹೋರಾಟಕ್ಕೆ ನಿಮ್ಮ ಬೆಂಬಲ ಬೇಕು ಎಂದು ನವೀನ್‌ ಎಂಬ ಯುವಕ ಹಣಸಹಾಯ ಕೇಳುತ್ತಿದ್ದಾನೆ. ಆದರೆ ಸಾರ್ವಜನಿಕರಿಂದ ಹಣ ಪಡೆಯುವುದಕ್ಕೆ ಈತನಿಗೆ ಅನುಮತಿ ಕೊಟ್ಟವರು ಯಾರು? ಅನಧಿಕೃತವಾಗಿ ಹಣ ಸಂಗ್ರಹಿಸುತ್ತಿರುವ ಈತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಲೆನಾಡು ರಕ್ಷಣಾ ಸೇನೆ ರಾಜ್ಯಾಧ್ಯಕ್ಷ ಸಾಗರ್‌ ಜಾನಕೆರೆ ವೀಡಿಯೋ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

VISTARANEWS.COM


on

arjuna elephant
ಅರ್ಜುನ ಆನೆ, ಸಾಗರ್‌ ಜಾನಕೆರೆ
Koo

ಹಾಸನ: ದಸರಾ ಮೆರವಣಿಗೆಯ ಅಂಬಾರಿಯನ್ನು (Mysuru dasara procession) ಹೊರುತ್ತಿದ್ದ ಆನೆ ಅರ್ಜುನನಿಗೆ (Arjuna Elephant) ಸ್ಮಾರಕ (memorial) ನಿರ್ಮಾಣ ಮಾಡುವ ಹೆಸರಿನಲ್ಲಿ ಅಕ್ರಮವಾಗಿ ಹಣ ಸಂಗ್ರಹ (money collection) ಮಾಡಲಾಗುತ್ತಿದೆ ಎಂದು ಸ್ಥಳೀಯರು ಗಂಭೀರ ಆರೋಪ ಮಾಡಿದ್ದಾರೆ. ಮೈಸೂರು ಜಿಲ್ಲೆಯ ನವೀನ್ ಹೆಚ್.ಎನ್. ಎಂಬಾತ ಹಣ ಕಲೆಕ್ಟ್ ಮಾಡುತ್ತಿರುವುದು ಗೊತ್ತಾಗಿದೆ.

ಸೋಶಿಯಲ್ ಮೀಡಿಯಾ ಮೂಲಕ ಹಣ ಕಲೆಕ್ಟ್ ಮಾಡಲಾಗುತ್ತಿದೆ. ನವೀನ್ ಹೆಚ್.ಎನ್. ಎಂಬ ವ್ಯಕ್ತಿಯ ಅಕೌಂಟ್‌ಗೆ ಈ ಹೆಸರಿನಲ್ಲಿ ಈಗಾಗಲೇ ಲಕ್ಷಾಂತರ ಹಣ ಸಂದಾಯವಾಗಿದೆ. ʼಅರ್ಜುನ ಪಡೆʼ ಎಂಬ ವಾಟ್ಸ್ಯಾಪ್ ಗ್ರೂಪ್ ಕ್ರಿಯೇಟ್ ಮಾಡಿ ಹಣ ಸಂಗ್ರಹಿಸಲಾಗುತ್ತಿದೆ ಎಂದು ಸಕಲೇಶಪುರದ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅರ್ಜುನ ಸ್ಮಾರಕ ಹೋರಾಟಕ್ಕೆ ನಿಮ್ಮ ಬೆಂಬಲ ಬೇಕು ಎಂದು ನವೀನ್‌ ಎಂಬ ಯುವಕ ಹಣಸಹಾಯ ಕೇಳುತ್ತಿದ್ದಾನೆ. ಆದರೆ ಸಾರ್ವಜನಿಕರಿಂದ ಹಣ ಪಡೆಯುವುದಕ್ಕೆ ಈತನಿಗೆ ಅನುಮತಿ ಕೊಟ್ಟವರು ಯಾರು? ಅನಧಿಕೃತವಾಗಿ ಹಣ ಸಂಗ್ರಹಿಸುತ್ತಿರುವ ಈತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಲೆನಾಡು ರಕ್ಷಣಾ ಸೇನೆ ರಾಜ್ಯಾಧ್ಯಕ್ಷ ಸಾಗರ್‌ ಜಾನಕೆರೆ ವೀಡಿಯೋ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

ವಾಟ್ಸ್ಯಾಪ್ ಮೂಲಕ ಸಹಾಯ ಬೇಡಿರುವ ನವೀನ್ ಅಕೌಂಟ್‌ಗೆ ಲಕ್ಷಾಂತರ ರೂಪಾಯಿ ಹಣ ಬರುತ್ತಿದೆ. ಆತನ ಅಕೌಂಟ್‌ಗೆ ನೂರಾರು ಜನ ಹಣ ಸಂದಾಯ ಮಾಡುತ್ತಿರುವ ಸ್ಕ್ರೀನ್‌ ಶಾಟ್‌ಗಳು ವೈರಲ್ ಆಗುತ್ತಿವೆ. ಆದರೆ ಇದು ಈತನ ಖಾಸಗಿ ಅಕೌಂಟ್‌ ಆಗಿದ್ದು, ಈ ಹಣ ಎಲ್ಲಿಗೆ ಹೋಗಲಿದೆ ಎಂಬುದು ಯಾರಿಗೂ ಗೊತ್ತಿಲ್ಲ. ಹೀಗಾಗಿ ಈತನ ಖಾಸಗಿ ಆಕೌಂಟ್‌ಗೆ ಯಾರೂ ಹಣ ಹಾಕದಂತೆ ಒತ್ತಾಯಿಸಿದ್ದಾರೆ.

ಈತ ಮಾಡಿರುವ ಪ್ಲಾನ್‌ನಿಂದಲೇ ಸ್ಮಾರಕ ನಿರ್ಮಾಣ ಮಾಡಿರುವ ವಿಚಾರದಲ್ಲಿ ನಟ ದರ್ಶನ್ ಅವರ ಹೆಸರು ಬಂದಿದೆ. ಸಹಾಯಹಸ್ತಕ್ಕಾಗಿ ಈತನೇ ದರ್ಶನ್ ಅವರ ಪಿಎಯನ್ನು ಸಂಪರ್ಕ ಮಾಡಿದ್ದಾನೆ. ಅವರಿಂದ ಕಲ್ಲನ್ನು ತೆಗೆಸಿಕೊಂಡು ಬಂದಿದ್ದಾನೆ. ಅದೇ ಕಲ್ಲಿಗೆ ಅರಣ್ಯ ಇಲಾಖೆಯವರಿಂದ 30 ಸಾವಿರ ಹಣವನ್ನೂ ಪಡೆದುಕೊಂಡು ಹೋಗಿದ್ದಾನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಮಾರಕ ನಿರ್ಮಾಣದ ತಗಾದೆ

ಇತ್ತೀಚೆಗೆ ಅರ್ಜುನ ಸ್ಮಾರಕ ಕುರಿತು ತಗಾದೆ ಎದ್ದಿದೆ. ದಸರಾ ಸಡಗರದ ವೇಳೆ ಬಹಳಷ್ಟು ಬಾರಿ ಅಂಬಾರಿ ಹೊತ್ತು ತನ್ನ ಗಜಗಾಂಭೀರ್ಯಕ್ಕೆ ಹೆಸರುವಾಸಿಯಾಗಿದ್ದ ಅರ್ಜುನ ಕಳೆದ ವರ್ಷ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ಮೃತಪಟ್ಟಿರುವುದು ತಿಳಿದೇ ಇದೆ. ಆತನ ಸಮಾಧಿಗೆ ಯಾರೂ ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ ಎಂದು ಮಳೆಗಾಲ ಶುರುವಾಗುವ ಮುನ್ನ ಅರ್ಜುನನ ಸಮಾಧಿ ನಿರ್ಮಾಣಕ್ಕೆ ದರ್ಶನ್‌ (Actor Darshan) ಕರೆ ಕೊಟ್ಟಿದ್ದರು. ದರ್ಶನ್ ಸ್ವಂತ ಹಣ ಖರ್ಚು ಮಾಡಿ ಗ್ರಾನೈಟ್ ಕಳಿಸಿದ್ದರು. ಆದರೆ ಕೆಲಸ ನಡೆಯುತ್ತಿದ್ದ ವೇಳೆ ಅರಣ್ಯಾಧಿಕಾರಿಗಳು ತಡೆದಿದ್ದು, ಈ ಬಗ್ಗೆ ಅರಣ್ಯಾಧಿಕಾರಿಗಳ ವಿರುದ್ಧ ದರ್ಶನ್ ಅಭಿಮಾನಿಗಳಿಂದ ಆಕ್ರೋಶ ವ್ಯಕ್ತವಾಗಿತ್ತು. ಸದ್ಯ ದರ್ಶನ್ ಹಾಗೂ ಅರಣ್ಯಾಧಿಕಾರಿಗಳ ಗುದ್ದಾಟ ಮುಂದುವರಿದಿದೆ. “ಮೊದಲು ಅನುಮತಿ ಕೊಟ್ಟು ಬಳಿಕ ನಾವೇ ಮಾಡ್ತೀವಿ ಎನ್ನುತ್ತಿದ್ದಾರೆ.” ಎಂದು ಅರಣ್ಯಾಧಿಕಾರಿಗಳ ವಿರುದ್ಧ ದರ್ಶನ್ ಅಭಿಮಾನಿಗಳು ಆಕ್ರೋಶ ಹೊರಹಾಕುತ್ತಿದ್ದಾರೆ.

ಇದನ್ನೂ ಓದಿ: Actor Darshan: ಅರ್ಜುನನ ಸಮಾಧಿ ನಿರ್ಮಾಣ: ಅರಣ್ಯಾಧಿಕಾರಿಗಳ ವಿರುದ್ಧ ದರ್ಶನ್ ಅಭಿಮಾನಿಗಳಿಂದ ಆಕ್ರೋಶ!

Continue Reading

ಕ್ರೈಂ

Child Death: ಆಟವಾಡುತ್ತ ಸಂಪ್‌ಗೆ ಬಿದ್ದು 2 ವರ್ಷದ ಕಂದಮ್ಮ ದುರ್ಮರಣ, ಮಳೆಗೆ ಮರ ಬಿದ್ದು ಮಹಿಳೆ ಸಾವು

Child Death: ಆಟವಾಡುತ್ತಿದ್ದ ಮಗು ಇದ್ದಕ್ಕಿದ್ದಂತೆ ಕಣ್ಮರೆಯಾದುದರಿಂದ ಗಾಬರಿಯಾದ ಪೋಷಕರು ಹುಡುಕಾಟ ಆರಂಭಿಸಿದ್ದರು. ಎಷ್ಟೇ ಹುಡುಕಿದರೂ ಕಾಣದಿದ್ದಾಗ ಪೋಷಕರು ಸಂಪ್ ಒಪನ್ ಮಾಡಿ ನೋಡಿದ್ದರು.

VISTARANEWS.COM


on

child death belagavi
ಮೃತ ಸಾಯೀಶಾ, ಶ್ವೇತಾ ರಾಠೋಡ
Koo

ಬೆಳಗಾವಿ: 2 ವರ್ಷದ ಮಗುವೊಂದು ಆಟವಾಡುತ್ತ ಹೋಗಿ ನೀರಿನ ಸಂಪ್‌ಗೆ (Water Sump) ಬಿದ್ದು ಸಾವಿಗೀಡಾದ ದುರ್ಘಟನೆ (Child Death) ಬೆಳಗಾವಿಯ (Belagavi news) ಕಂಗ್ರಾಳ ಗಲ್ಲಿಯಲ್ಲಿ ನಡೆದಿದೆ.

ಸಾಯೀಶಾ ಸಂದೀಪ್ ಬಡವನಾಚೆ(2) ಮೃತಪಟ್ಟ ಮಗು. ಆಟವಾಡುತ್ತಿದ್ದ ಮಗು ಇದ್ದಕ್ಕಿದ್ದಂತೆ ಕಣ್ಮರೆಯಾದುದರಿಂದ ಗಾಬರಿಯಾದ ಪೋಷಕರು ಹುಡುಕಾಟ ಆರಂಭಿಸಿದ್ದರು. ಎಷ್ಟೇ ಹುಡುಕಿದರೂ ಕಾಣದಿದ್ದಾಗ ಪೋಷಕರು ಸಂಪ್ ಒಪನ್ ಮಾಡಿ ನೋಡಿದ್ದರು. ಸಂಪ್ ಓಪನ್ ಮಾಡುತ್ತಿದ್ದಂತೆ ಅಲ್ಲಿ ಬಿದ್ದಿದ್ದ ಮಗು ಸಾಯೀಶಾ ಕಂಡುಬಂದಿದ್ದಳು.

ಕೂಡಲೇ ಸಮೀಪದ ಆಸ್ಪತ್ರೆಗೆ ಮಗುವನ್ನು ಪೋಷಕರು ಕರೆದೊಯ್ದರಾದರೂ, ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಮಗು ತೀರಿ ಹೋಗಿದ್ದರ ಬಗ್ಗೆ ವೈದ್ಯರು ಮಾಹಿತಿ ನೀಡಿದರು. ಖಡೇ ಬಜಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮರ ಬಿದ್ದು ಮಹಿಳೆ ಸಾವು

ಯಾದಗಿರಿ: ಮಳೆ ಅವಾಂತರದಿಂದಾಗಿ, ನೀರು ತರಲು ಹೋದ ಮಹಿಳೆ ಮೇಲೆ ಮರ ಬಿದ್ದು ಮಹಿಳೆ ಸಾವಿಗೀಡಾಗಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಿನ್ನೆ ಸಂಜೆ ಘಟನೆ ನಡೆದಿದೆ. ಶ್ವೇತಾ ರಾಠೋಡ (21) ಮೃತ ಮಹಿಳೆ.

ಬಿರುಗಾಳಿ ಸಹಿತ ಮಳೆ ಬರುತ್ತಿದ್ದಾಗಲೇ ನೀರು ತರಲು ಹೋದ ಶ್ವೇತಾ ರಾಠೋಡ ಮೇಲೆ ಮರ ಬಿದ್ದಿದೆ. ಗಂಭೀರ ಗಾಯಗೊಂಡ ಶ್ವೇತಾರನ್ನು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡ ಸರಕಾರಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ.

ಮಳೆ ಅವಾಂತರ; ಮನೆಯ ಶೀಟ್‌ ಮೇಲಿದ್ದ ಕಲ್ಲು ಬಿದ್ದು ಬಾಲಕಿ ಸಾವು

ಯಾದಗಿರಿ: ಮಳೆ ಅವಾಂತರಕ್ಕೆ ನಾಲ್ಕು ವರ್ಷದ ಬಾಲಕಿ ಬಲಿಯಾಗಿರುವ ಘಟನೆ ಜಿಲ್ಲೆಯ ಗುರುಮಠಕಲ್ ಪಟ್ಟಣದ ಚಪೆಟ್ಲಾ ರಸ್ತೆ ಬದಿ ನಡೆದಿದೆ. ಬಾಲಕಿ ಮನಸ್ವಿ ತಿಪ್ಪಣ್ಣ ಯಾದವ್ ಮೃತ ಬಾಲಕಿ. ಮನೆ ಶೀಟ್‌ ಮೇಲೆ ಇಟ್ಟಿದ್ದ ಕಲ್ಲು ತಲೆ ಮೇಲೆ ಬಿದ್ದಿದ್ದರಿಂದ ಬಾಲಕಿ ಮೃತಪಟ್ಟಿದ್ದಾಳೆ.

ಜಮೀನಿನ ಶೀಟ್‌ ಮನೆಯಲ್ಲಿ ಪೋಷಕರ ಜತೆ ಬಾಲಕಿ ವಾಸವಾಗಿದ್ದಳು. ಬಿರುಗಾಳಿ ಸಹಿತ ಭಾರಿ ಮಳೆ ಹಿನ್ನೆಲೆ ಮನೆ ಶೀಟ್‌ ಮೇಲೆ ಇಟ್ಟಿದ್ದ ಕಲ್ಲು ಬಿದ್ದು ಬಾಲಕಿ ಕೊನೆಯುಸಿರೆಳೆದಿದ್ದಾಳೆ. ಸ್ಥಳದಲ್ಲಿ ಪೋಷಕರ ಅಕ್ರಂದನ ಮುಗಿಲು ಮುಟ್ಟಿದೆ.

ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ವಿಜಯನಗರ/ರಾಯಚೂರು/ಯಾದಗಿರಿ: ವೀಕೆಂಡ್‌ ಮೂಡ್‌ನಲ್ಲಿದ್ದವರಿಗೆ ವರುಣ ಶಾಕ್‌ (Karnataka Rain) ಕೊಟ್ಟಿದ್ದಾನೆ. ರಾಜ್ಯ ಹಲವೆಡೆ ಬಿರುಗಾಳಿ ಸಹಿತ (Karnataka weather Forecast) ಮಳೆಯಾಗುತ್ತಿದ್ದು, ಪ್ರತ್ಯೇಕ ಕಡೆಗಳಲ್ಲಿ ಸಿಡಿಲು ಬಡಿದು ಕಟ್ಟಿಗೆಯಲ್ಲಿ ಕಟ್ಟಿದ್ದ ಎಮ್ಮೆ ಮೃತಪಟ್ಟಿವೆ.

ವಿಜಯನಗರದ ಹೂವಿನಹಡಗಲಿ ತಾಲೂಕಿನ ಎಂ.ಕಲ್ಲಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಎಮ್ಮೆ ಮೃತಪಟ್ಟಿದೆ. ಕೆಂಚನಗೌಡ್ರ ಬಸವರಾಜ ಎಂಬ ರೈತ ಎಮ್ಮೆಯನ್ನು ಕೊಟ್ಟಿಗೆಯಲ್ಲಿ ಕಟ್ಟಿದ್ದರು. ಮಳೆಯೊಂದಿಗೆ ಗುಡುಗು, ಸಿಡಿಲು ಬಡಿದ ಪರಿಣಾಮ ಎಮ್ಮೆ ಮೃತಪಟ್ಟಿದೆ.

ಇನ್ನೂ ರಾಯಚೂರಿನ ಲಿಂಗಸುಗೂರಿನ ಕರೆಮರಡಿ ತಾಂಡದಲ್ಲಿ ಸಿಡಿಲು ಬಡಿದು ಎಮ್ಮೆಯೊಂದು ಮೃತಪಟ್ಟಿದೆ. ಲಕ್ಷಣ್ಣ ಗುಂಡಪ್ಪ ರಾಠೋಡ ಎಂಬುವವರ ಎಮ್ಮೆಯನ್ನು ಮನೆ ಪಕ್ಕದಲ್ಲಿರುವ ಮರಕ್ಕೆ ಕಟ್ಟಿಹಾಕಿದ್ದರು. ಗುಡುಗು ಮಿಂಚು ಸಹಿತ ಸುರಿದ ಮಳೆ ವೇಳೆ ಸಿಡಿಲು ಬಡಿದ್ದರಿಂದ ಎಮ್ಮೆ ಸ್ಥಳದಲ್ಲೇ ಮೃತಪಟ್ಟಿದೆ. ಮುದಗಲ್ ಠಾಣೆ ಪೊಲೀಸ್ ಸಿಬ್ಬಂದಿ ಹಾಗೂ ನಾಗಲಾಪೂರ ಪಶು ಆಸ್ಪತ್ರೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Constables: ಬಿಯರ್‌ ಸೇವಿಸಿ ಇಬ್ಬರು ಕಾನ್‌ಸ್ಟೆಬಲ್‌ಗಳ ಸಾವು; ಮದ್ಯ ಪ್ರಿಯರೇ ಇನ್ನಾದರೂ ಎಚ್ಚರ!

Continue Reading
Advertisement
Prajwal Revanna Case Will SIT team go abroad for arrest Prajwal
ಕ್ರೈಂ5 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಜ್ಞಾತವಾಸಕ್ಕೆ ಒಂದು ತಿಂಗಳು, ಎಲ್ಲಿದ್ದೀಯಪ್ಪಾ ಪ್ರಜ್ವಲ್?

Robert Vadra
ದೇಶ5 mins ago

Robert Vadra: “ಮಣಿಶಂಕರ್‌ ಅಯ್ಯರ್‌ ಬಾಯಿ ಬಡುಕ…ಕೇಜ್ರಿವಾಲ್‌ ಅವಕಾಶವಾದಿ”-ರಾಬರ್ಟ್‌ ವಾದ್ರಾ ಅಚ್ಚರಿಯ ಹೇಳಿಕೆ

Gautam Gambhir
ಕ್ರೀಡೆ19 mins ago

Gautam Gambhir : ಟ್ರೋಫಿ ಗೆದ್ದ ಸಂಭ್ರಮ; ಗಂಭೀರ್​ಗೆ ಖಾಲಿ ಚೆಕ್​ ಕೊಟ್ಟರೇ ಶಾರುಖ್​ ಖಾನ್​ ?

Netraa Jadhav Out From Serial perform Yakshagana on the special occasion
ಕಿರುತೆರೆ32 mins ago

Netraa Jadhav: ಸೀರಿಯಲ್‌ನಿಂದ ಔಟ್‌ ಆಗುತ್ತಿದ್ದಂತೆ ʻಯಕ್ಷಗಾನʼದಲ್ಲಿ ಶಾರ್ವರಿ ಶೈನ್‌!

Pune Porsche accident
ದೇಶ52 mins ago

Pune Porsche accident: ಕಾರು ಗುದ್ದಿ ಇಬ್ಬರನ್ನು ಸಾಯಿಸಿದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ; ಇಬ್ಬರು ವೈದ್ಯರು ಅರೆಸ್ಟ್‌

Chris Gayle
ಕ್ರಿಕೆಟ್52 mins ago

Chris Gayle : ಎಣ್ಣೆ ಹೊಡಿತಾ ಕೆಕೆಆರ್ ತಂಡಕ್ಕೆ ಶುಭಾಶಯ ತಿಳಿಸಿದ ಕ್ರಿಸ್​ ಗೇಲ್; ಇಲ್ಲಿದೆ ವಿಡಿಯೊ

Comedy Khiladigalu anchor anushree and Jaggesh Remembers Dogs
ಕಿರುತೆರೆ1 hour ago

Comedy Khiladigalu: ನನ್ನ ಮಗ ಚಿನ್ನುವನ್ನು ಇದೇ ಕೈಯಲ್ಲಿ ಕಳ್ಕೊಂಡೆ: ಅನುಶ್ರೀ ಭಾವುಕ!

kalaburagi illegal relationship
ಕ್ರೈಂ1 hour ago

Illegal Relationship:`ಅತ್ತಿಗೆಯಿಂದ ದೂರ ಇರುʼ ಎಂದ ಮೈದುನನ ಬರ್ಬರವಾಗಿ ಹತ್ಯೆ ಮಾಡಿದ ಪ್ರಿಯಕರ

IPL 2024
ಕ್ರೀಡೆ1 hour ago

IPL 2024 : ಕೆಕೆಆರ್​ ಗೆದ್ದ ಬಳಿಕ ವಿವಾದಿತ ಫ್ಲೈಯಿಂಗ್ ಕಿಸ್​ ಕೊಟ್ಟ ಶಾರುಖ್ ಖಾನ್​; ಇದಕ್ಕೂ ಒಂದು ಕಾರಣವಿದೆ

Ranbir Kapoor and Alia Bhatt flew to Italy
ಬಾಲಿವುಡ್2 hours ago

Anant Ambani Radhika: ಅಂಬಾನಿ ಮಗನ ಮತ್ತೊಂದು ಪ್ರಿ ವೆಡ್ಡಿಂಗ್‌: ಇಟಲಿಗೆ ಹೊರಟ ಆಲಿಯಾ ಭಟ್ ದಂಪತಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ17 hours ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು18 hours ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ4 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ5 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು6 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು6 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ7 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ಟ್ರೆಂಡಿಂಗ್‌