Alcoholics association| ಅಸ್ತಿತ್ವಕ್ಕೆ ಬಂತು ಕುಡುಕರ ಸಂಘ: ಕುತೂಹಲಕಾರಿ ಬೇಡಿಕೆಗಳು ಇಲ್ಲಿವೆ ನೋಡಿ! - Vistara News

ಕರ್ನಾಟಕ

Alcoholics association| ಅಸ್ತಿತ್ವಕ್ಕೆ ಬಂತು ಕುಡುಕರ ಸಂಘ: ಕುತೂಹಲಕಾರಿ ಬೇಡಿಕೆಗಳು ಇಲ್ಲಿವೆ ನೋಡಿ!

ಸಮಾಜದಲ್ಲಿ ಯಾರನ್ನೂ ನಿರ್ಲಕ್ಷ್ಯ ಮಾಡುವಂತಿಲ್ಲ. ಪ್ರತಿಯೊಬ್ಬರೂ ಅವರವರ ಸೇವೆಯನ್ನು ನೀಡುತ್ತಲೇ ಇರುತ್ತಾರೆ. ಕೊರೊನಾ ಕಾಲದಲ್ಲಿ ಈ ದೇಶ ನಡೆದಿದ್ದೇ ಕುಡುಕರಿಂದ ಎಂದು ಹೇಳಿಕೊಂಡವರೂ ಇದ್ದಾರೆ. ಈಗ ಹಾಸನದಲ್ಲಿ ಕುಡುಕರು ಒಂದು ಸಾಹಸಕ್ಕೆ ಮುಂದಾಗಿದ್ದಾರೆ (Alcoholics association). ಅದೇನು? ಇಲ್ಲಿ ನೋಡಿ.

VISTARANEWS.COM


on

drinks party
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾಸನ: ಈ ಜಗತ್ತಿನಲ್ಲಿ ಸೇವೆಗಾಗಿ, ಸ್ಥಾನಕ್ಕಾಗಿ, ಪ್ರಚಾರಕ್ಕಾಗಿ ಅದೆಷ್ಟೋ ಸಂಘಟನೆಗಳು ಹುಟ್ಟಿಕೊಂಡಿವೆ. ಹಾಗಿರುವಾಗ ಮದ್ಯಪ್ರಿಯರ ಸಂಘಟನೆ (Alcoholics association) ಯಾಕಿರಬಾರದು? ಹೀಗೊಂದು ಆಲೋಚನೆ ಸಾಕಷ್ಟು ಬಾರಿ ಹುಟ್ಟಿಕೊಂಡಿರಬಹುದು. ಯಾಕೆಂದರೆ, ಈ ರಾಜ್ಯದಲ್ಲಿ ಅತಿ ಹೆಚ್ಚು ತೆರಿಗೆ ಪಾವತಿ ಮಾಡುವವರು ಕುಡುಕರು, ರಾಜ್ಯಾಡಳಿತ ನಡೆಯುವುದೇ ಕುಡುಕರಿಂದ ಎಂದು ಕೆಲವರು ಹೇಳಿಕೊಳ್ಳುತ್ತಿದ್ದಾರೆ!

ಇದೀಗ ಹಾಸನದಲ್ಲಿ ಒಂದು ಮದ್ಯಪಾನ ಪ್ರಿಯರ ಹೋರಾಟ ಸಂಘವೇ ಅಸ್ತಿತ್ವಕ್ಕೆ ಬಂದಿದೆ. ಅದರ ರಾಜ್ಯಾಧ್ಯಕ್ಷರು ವೆಂಕಟೇಶ್‌ ಗೊರರಹಳ್ಳಿ. ಅವರು ಶುಕ್ರವಾರ ಹಾಸನ ಪತ್ರಕರ್ತರ ಸಂಘದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ಸಂಘದ ಉದ್ಘಾಟನೆಗೆ ಅಬಕಾರಿ ಸಚಿವರನ್ನೇ ಕರೀತೇವೆ ಎಂದು ಅವರು ಹೇಳಿಕೊಂಡರು. ಈ ನಡುವೆ, ಪತ್ರಿಕಾಗೋಷ್ಠಿ ನಡೆಸಿದವರು ಮತ್ತು ಪತ್ರಕರ್ತರ ನಡುವೆ ಮಾತಿನ ಚಕಮಕಿಯೂ ನಡೆಯಿತು.

ಈ ಪತ್ರಿಕಾಗೋಷ್ಠಿ, ಮದ್ಯಪ್ರಿಯರ ಸಂಘದ ಉದ್ಘಾಟನೆ ಸುದ್ದಿ ಯಾಕೆ ಇಷ್ಟೊಂದು ಮಹತ್ವದ್ದೆಂದರೆ, ನಮ್ಮೂರಲ್ಲಿ​ ​ ​ ಮದ್ಯದಂಗಡಿ ಬೇಡವೇ ಬೇಡ ಎಂದು ಒಂದಲ್ಲ ಒಂದು ಕಡೆ ಪ್ರತಿಭಟನೆ ನಡೆಯುತ್ತಿದೆ. ಮದ್ಯಪಾನ ನಿಲ್ಲಿಸಿ ಎಂದು ಮಹಿಳೆಯರು, ಪುರುಷರು ಡಿಸಿ ಕಚೇರಿ ಮುಂದೆ ಪ್ರತಿಭಟನೆ ಮಾಡೋದು ಕಾಮನ್‌. ಕೆಲವು ಕಡೆ ಮದ್ಯದಂಗಡಿ ಬೇಕು ಎಂದು ಪ್ರತಿಭಟನೆ ನಡೆದಿದೆಯಾದರೂ ಇಷ್ಟೊಂದು ವ್ಯವಸ್ಥಿತವಾಗಿ ಸಂಘ ಕಟ್ಟಿಕೊಂಡು ಮದ್ಯಪಾನದ ಪರ ಹೋರಾಟ ಮಾಡಿದ್ದು ಕಡಿಮೆಯೇ.

ನಮ್ಮ ಮಕ್ಕಳಿಗೆ ಹಾಸ್ಟೆಲ್‌ ಬೇಕು, ಯಾಕೆಂದರೆ!
ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ವೆಂಕಟೇಶ್‌ ಅವರು ಕೆಲವರು ತುಂಬಾ ಲಘುವಾಗಿ ಪರಿಗಣಿಸಬಹುದಾದ, ಆದರೆ, ಕುಡುಕರ ಕುಟುಂಬಗಳಿಗೆ ತುಂಬಾ ಗಂಭೀರವಾಗಿರುವ ವಿಚಾರವನ್ನು ಪ್ರಸ್ತಾಪಿಸಿದರು.
ನಾವು ಕುಡಿದು ಮನೆಗೆ ಹೋದಾಗ ಬೇರೆ ಬೇರೆ ಕಾರಣಗಳಿಗೆ ಜಗಳಗಳು ಆಗಬಹುದು. ಆಗ ನಮ್ಮ ಮಕ್ಕಳಿಗೆ ಓಡಲು ಕಷ್ಟವಾಗುತ್ತದೆ. ಮಕ್ಕಳಿಗೆ ಕಲಿಕೆಯ ವಾತಾವರಣ ಇರಬೇಕು. ಹೀಗಾಗಿ ಕುಡಿದು ಮನೆಗೆ ಹೋಗಿ ಗಲಾಟೆ ಮಾಡುವವರ ಕುಟುಂಬಗಳನ್ನು ಗುರುತಿಸಿ ಅವರ ಮಕ್ಕಳಿಗೆ ಹಾಸ್ಟೆಲ್‌ ಸೌಲಭ್ಯವನ್ನು ಒದಗಿಸಬೇಕು ಎಂದು ಅಭಿಪ್ರಾಯಪಟ್ಟರು.
ಈ ಗೋಷ್ಠಿಯಲ್ಲಿ ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘದ ತಿಮ್ಮೇಗೌಡ, ಮಳಲಿಗೌಡ, ಮಧು, ಸಿದ್ದೇಶ್, ಕುಮಾರ್, ರಮೇಶ್ ಇತರರು ಉಪಸ್ಥಿತರಿದ್ದರು.

ಕುಡುಕರ ಸಂಘದ ಗುರಿ ಮತ್ತು ಉದ್ದೇಶಗಳು
1. ಮದ್ಯ ಪ್ರಿಯರ ಕೌಟುಂಬಿಕ ಕಲ್ಯಾಣಕ್ಕಾಗಿ ಹೋರಾಟ ಮಾಡುವುದು.
೨. ಮದ್ಯಪ್ರಿಯರಿಗೆ ವಿಮಾ ಸೌಲಭ್ಯ ಒದಗಿಸುವುದಕ್ಕೆ ಹೋರಾಟ ಮಾಡುವುದು.
೩. ಮದ್ಯಪ್ರಿಯರ ನಿಗಮ ಮಂಡಳಿ ರಚಿಸುವುದಕ್ಕೆ ಹೋರಾಟ.
5.ಮದ್ಯಪ್ರಿಯರ ಆರೋಗ್ಯದ ಸವಲತ್ತಿನ ಬಗ್ಗೆ ಹೋರಾಟ ಮಾಡುವುದು
6. ಮದ್ಯಪ್ರಿಯರ ಕೌಟುಂಬಿಕ ವಸತಿಯ ಬಗ್ಗೆ ಪ್ರೋತ್ಸಾಹ ನೀಡುವುದು.
೭. ಧಾರ್ಮಿಕ ಪರಂಪರೆ, ತತ್ವಜ್ಞಾನ, ಆಧ್ಯಾತ್ಮಿಕ ವಿಷಯಗಳ ಅಧ್ಯಯನ
8. ಯುವ ಜನಾಂಗವನ್ನು ಸಾಮಾಜಿಕವಾಗಿ, ಆರ್ಥಿಕವಾಗಿ ಪ್ರೋತ್ಸಾಹಿಸುವುದು.
೯. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದು ಹಾಗೂ ಪುರಸ್ಕರಿಸುವುದು.
10. ಯುವಕರಿಗಾಗಿ ಕ್ರೀಡೆಗಳನ್ನು ಆಯೋಜಿಸುವುದು.
೧೧. ಸಮಾಜದಲ್ಲಿ ನೈತಿಕ, ಧಾರ್ಮಿಕ ಹಾಗೂ ಆಧ್ಯಾತ್ಮಿಕ ವಿಚಾರಗಳನ್ನು ಪ್ರಚಾರ ಮಾಡುವುದು.
11. ವಾರ್ಷಿಕವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವುದು.
೧೨. ಪ್ರತಿಷ್ಠಾನದ ಉದ್ದೇಶಕ್ಕಾಗಿ ದಾನ ವಂತಿಗೆ ಪಡೆಯುವುದು.
1೩. ಯುವಕರ ಸರ್ವತೋಮುಖ ಅಭಿವೃದ್ಧಿ ಮತ್ತು ಬೆಳವಣಿಗೆಗೆ ಶ್ರಮಿಸುವುದು.
1೪. ವ್ಯವಸಾಯ ಮತ್ತು ಹೈನುಗಾರಿಕೆಯ ಅಭಿವೃದ್ಧಿಗೆ ಉತ್ತೇಜನ ನೀಡುವುದು.

ಇದನ್ನೂ ಓದಿ | Vistara News Impact | ಕ್ಲಾಸ್‌ಗೆ ಚಕ್ಕರ್‌ ಹಾಕಿ ಎಣ್ಣೆ ಪಾರ್ಟಿ ಮಾಡ್ತಿದ್ದ ನಾಲ್ವರು ಶಿಕ್ಷಕರು ಸಸ್ಪೆಂಡ್‌, HM ವಿರುದ್ಧ ಶಿಸ್ತುಕ್ರಮ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Prajwal Revanna Case: ವಿದೇಶದಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಮರಳುವ ಬಗ್ಗೆ ವಿಸ್ತಾರ ನ್ಯೂಸ್‌ಗೆ ಖಚಿತ ಮಾಹಿತಿ ಲಭ್ಯವಾಗಿದೆ.‌ ಎಲ್ಲಿಂದ, ಯಾವಾಗ ಸಂಸದ ಆಗಮಿಸಲಿದ್ದಾರೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

Prajwal Revanna Case
Koo
VISTARA-EXCLUSIVE

ಬೆಂಗಳೂರು: ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ (Prajwal Revanna Case) ಎಸ್‌ಐಟಿ ಮೋಸ್ಟ್ ವಾಂಟೆಡ್‌ ಲಿಸ್ಟ್‌ನಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ, ಇಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಎಸ್‌ಐಟಿ ಅಧಿಕಾರಿಗಳು ಅಲರ್ಟ್‌ ಆಗಿದ್ದಾರೆ. ಈ ನಡುವೆ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧನವಾಗಿದ್ದ ಎಚ್‌.ಡಿ.ರೇವಣ್ಣ ಅವರಿಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಪ್ರಜ್ವಲ್‌ ನ್ಯಾಯಾಲಯಕ್ಕೆ ಶರಣಾಗಲಿದ್ದಾರೆ ಎನ್ನಲಾಗುತ್ತಿತ್ತು. ಇದೀಗ ಪ್ರಜ್ವಲ್‌ ರೇವಣ್ಣ ವಿದೇಶದಿಂದ ಇಂದೇ ವಾಪಸ್‌ ಬರಲಿದ್ದಾರೆ ಎಂಬ ಮಹತ್ವದ ಮಾಹಿತಿ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದೆ.

ಹೌದು, ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಮರಳುವ ಬಗ್ಗೆ ವಿಸ್ತಾರ ನ್ಯೂಸ್‌ಗೆ ಖಚಿತ ಮಾಹಿತಿ (Vistara Exclusive) ಲಭ್ಯವಾಗಿದೆ.‌ ಜರ್ಮನಿಯಲ್ಲಿರುವ ಪ್ರಜ್ವಲ್‌, ಲುಫ್ತಾನ್ಸಾ ಏರ್‌ಲೈನ್ಸ್‌ ಮೂಲಕ ಪ್ರಜ್ವಲ್‌ ಭಾರತಕ್ಕೆ ಹಿಂತಿರುಗಲಿದ್ದಾರೆ. ಜರ್ಮನಿಯಲ್ಲಿ ನಾಳೆ (ಮೇ 15) ಬೆಳಗ್ಗೆ 11.20 ರಿಂದ 11.50ರೊಳಗೆ ಬೋರ್ಡಿಂಗ್‌ ಆಗಲಿದ್ದು, ಅವರಿಗಾಗಿ ಸೀಟ್‌ ನಂಬರ್‌ 6ಜಿ ಬುಕ್‌ ಮಾಡಲಾಗಿದೆ. LH0764 ವಿಮಾನದಲ್ಲಿ ಸಂಸದ ಆಗಮಿಸಲಿದ್ದಾರೆ.

ಹರಿಯಾಣದ ಅಕಲ್‌ ಟ್ರಾವೆಲ್ಸ್‌ನಿಂದ ಪ್ರಜ್ವಲ್‌ಗೆ ಟಿಕೆಟ್‌ ಬುಕ್‌ ಮಾಡಲಾಗಿದೆ. ಜರ್ಮನಿಯ ಮ್ಯೂನಿಚ್‌ನಲ್ಲಿ ಇಂದು ಬೆಳಗ್ಗೆ 12.05ಕ್ಕೆ ಫ್ಲೈಟ್‌ ಟೇಕಾಫ್‌ ಆಗಲಿದ್ದು, ರಾತ್ರಿ 12.30ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ಬಂದ ಕೂಡಲೇ ಅವರನ್ನು ವಶಕ್ಕೆ ಪಡೆಯಲು ಎಸ್‌ಐಟಿ ಸಜ್ಜಾಗಿದ್ದು, ವಿಮಾನ ನಿಲ್ದಾಣದಲ್ಲಿ ಸಿಬ್ಬಂದಿಯನ್ನು ಆಯೋಜಿಸಲಾಗಿದೆ.

ಇದನ್ನೂ ಓದಿ | HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್‌ಗೆ ಲುಕ್‌ ಔಟ್‌ ನೋಟಿಸ್‌ ಹಾಗೂ ಬ್ಲೂ ಕಾರ್ನರ್‌ ನೋಟಿಸ್‌ ಜಾರಿ ಮಾಡಲಾಗಿತ್ತು. ತಂದೆಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ನ್ಯಾಯಾಲಯದ ಮುಂದೆ ಶರಣಾಗುವ ಸಾಧ್ಯತೆ ಇದ್ದು, ಬಹುತೇಕ ಈ ವಾರದಲ್ಲೇ ವಿದೇಶದಿಂದ ಆಗಮಿಸಬಹುದು ಎನ್ನಲಾಗಿತ್ತು. ಇದೀಗ ಅವರು ಇಂದೇ ದೇಶಕ್ಕೆ ಆಗಮಿಸುವ ಮಾಹಿತಿ ಲಭ್ಯವಾಗಿದೆ.

ಎಸ್ಐಟಿ ಮುಂದೆ ಬುಧವಾರ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದ್ದು, ಪ್ರಜ್ವಲ್‌ ರೇವಣ್ಣ ಬುಧವಾರ ಸಂಜೆ ಬೆಂಗಳೂರಿಗೆ ಬಂದು ಗುರುವಾರ ನ್ಯಾಯಾಲಯದ ಮುಂದೆ ಹಾಜರಾಗುವ ಸಾಧ್ಯತೆ ಇದೆ. ರೇವಣ್ಣಗೆ ಜಾಮೀನು ಸಿಕ್ಕ ಬಳಿಕ ನ್ಯಾಯಲಯದ ಮುಂದೆ ಹಾಜರಾಗುವಂತೆ ರೇವಣ್ಣ ಕುಟುಂಬದ ವಕೀಲರು ಸಲಹೆ ನೀಡಿದ್ದರಿಂದ ಪ್ರಜ್ವಲ್‌ ರೇವಣ್ಣ ವಿದೇಶದಿಂದ ಬರುತ್ತಿದ್ದಾರೆ ಎನ್ನಲಾಗಿದೆ.

ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

HD Revanna Released first reaction after release will be acquitted of all charges

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆ.ಆರ್.‌ ನಗರದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪದಡಿ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆ ಆಗಿರುವ ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ (HD Revanna Released) ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ. ರೇವಣ್ಣ, ನನಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ. ನ್ಯಾಯ ಸಿಗುತ್ತದೆ ಎಂಬ ವಿಶ್ವಾಸ ಇದೆ. ದೇವರಲ್ಲಿ ಅದನ್ನೇ ಪ್ರಾರ್ಥನೆ ಮಾಡಿಕೊಂಡಿದ್ದೇನೆ. ನಾನು ಹೆಚ್ಚಿಗೆ ಏನು ಮಾತನಾಡಲ್ಲ. ಕಳೆದ 11 ದಿನಗಳಿಂದ ನ್ಯಾಯಾಲಯದ ಕಾನೂನನ್ನು ಪಾಲಿಸಿದೇನೆ. ಈ ಆಪಾದನೆಯಿಂದ ಹೊರಗೆ ಬರುತ್ತೇನೆ ಎಂಬ ನಂಬಿಕೆ ಇದೆ ಎಂದು ಹೇಳಿದರು.

ಇದನ್ನೂ ಓದಿ | HD Revanna Released: ತಬ್ಬಿಕೊಂಡ ಎಚ್‌ಡಿಕೆ; ಕುಟುಂಬಸ್ಥರ ಕಂಡು ಕಣ್ಣೀರಿಟ್ಟ ರೇವಣ್ಣ, ಇಷ್ಟಾದರೂ ಬಾರದ ಭವಾನಿ!

Continue Reading

ಉಡುಪಿ

Karnataka Weather : ಮೇ 18ರವರೆಗೆ ಮಳೆ ಅಬ್ಬರ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Rain News : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಇದ್ದು, 7 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು (Karnataka Weather Forecast) ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ಮಲೆನಾಡು, ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗಲಿದೆ (Rain News) ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸಲಿದೆ.

ದಕ್ಷಿಣ ಒಳನಾಡಿನ ತುಮಕೂರು, ರಾಮನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ ಮತ್ತು ಮೈಸೂರು, ಬೆಂಗಳೂರು ನಗರ , ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ವಿಜಯನಗರ, ರಾಯಚೂರು, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಮಳೆಯು ವ್ಯಾಪಕವಾಗಿ ಹಗುರದಿಂದ ಕೂಡಿರಲಿದೆ.

ಇದನ್ನು ಓದಿ: Silicon City Hospital: ಲಕ್ಷಕ್ಕೆ ಇಬ್ಬರಿಗೆ ಬರುವ ಮೆದುಳಿನ ರಕ್ತನಾಳ ಒಡೆಯುವ ಕಾಯಿಲೆ; ಯಶಸ್ವಿ ಶಸ್ತ್ರಚಿಕಿತ್ಸೆಯಿಂದ ಬಾಲಕಿ ಪಾರು

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಭಾರೀ ಮಳೆಯೊಂದಿಗೆ ಗುಡುಗು ಮತ್ತು ಗಾಳಿ ವೇಗವು ಗಂಟೆಗೆ 40-50 ಕಿ.ಮೀ ಇರಲಿದೆ. ಹೀಗಾಗಿ ಬಳ್ಳಾರಿ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ರಾಜ್ಯ ಪ್ರಾಥಮಿಕ- ಪ್ರೌಢಶಾಲಾ ಶಿಕ್ಷಣದ ಪರಿಸ್ಥಿತಿ ಸರಿಹೋಗುವುದೆಂದು?

SSLC Result: ಶಾಲೆಗಳನ್ನು ಪ್ರಯೋಗಶಾಲೆಗಳಂತೆ ನೋಡುವ ಮನಸ್ಥಿತಿ ಪ್ರತಿಯೊಂದು ಸರಕಾರದ್ದಾಗಿದೆ. ಇದಕ್ಕೆ ಇತ್ತೀಚೆಗೆ ಪದವಿ ಶಿಕ್ಷಣದಲ್ಲಿ ಮಾಡುತ್ತಿರುವ ಬದಲಾವಣೆಯೇ ದೃಷ್ಟಾಂತ. ನಾಲ್ಕು ವರ್ಷಗಳ ಪದವಿಯನ್ನು ಮತ್ತೆ ಮೂರು ವರ್ಷಕ್ಕೆ ಇಳಿಸಿರುವ ಈ ಕ್ರಮದಿಂದಾಗಿ, ರಾಜ್ಯ ಶಿಕ್ಷಣ ವ್ಯವಸ್ಥೆಯು ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಪ್ರತ್ಯೇಕತೆ ಕಾಪಾಡಿಕೊಂಡು, ಎನ್‌ಇಪಿಯಿಂದ ದೊರೆಯಬಹುದಾದ ಲಾಭಗಳಿಂದ ವಂಚಿತವಾಗಲಿದೆ.

VISTARANEWS.COM


on

SSLC Result
Koo

ಈ ವರ್ಷದ ಎಸ್‌ಎಸ್‌ಎಲ್‌ಸಿ ಫಲಿತಾಂಶ ಬಂದ ಬಳಿಕ, ಊಹಿಸಿದಂತೆಯೇ ಆಗಿದೆ. ಕರ್ನಾಟಕದಲ್ಲಿ ಶಾಲಾ ಶಿಕ್ಷಣದ ಗುಣಮಟ್ಟದ ಬಗ್ಗೆ ಚರ್ಚೆ ಎದ್ದಿದೆ. ಶಿಕ್ಷಣ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿಯಿಂದ ಪ್ರಸ್ತುತ ಪ್ರಾಥಮಿಕ ಹಾಗೂ ಪ್ರೌಢ ಹಂತದಲ್ಲಿ ಕಲಿಕೆಯ ಗುಣಮಟ್ಟ ಕುಸಿದಿದೆ (SSLC Result) ಎಂದು ಖಾಸಗಿ ಶಾಲಾ ಒಕ್ಕೂಟ (ಕ್ಯಾಮ್ಸ್) ಅಸಮಾಧಾನ ಹೊರಹಾಕಿದೆ. ಸರ್ಕಾರಿ ಶಾಲಾ ಶಿಕ್ಷಣದ ಬಗ್ಗೆ ಹೆತ್ತವರು ಯಾವ ಅಭಿಪ್ರಾಯ ಹೊಂದಿದ್ದಾರೆ ಎಂಬುದನ್ನು ಸಂಕಲಿಸಿದರೆ ದಾರುಣ ಚಿತ್ರ ಸಿಗಬಹುದು; ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳ ಹೆತ್ತವರು ಕೆಳಮಧ್ಯಮ ವರ್ಗದ, ಕೆಳವರ್ಗದವರಾದುದರಿಂದ ಅವರಿಗೆ ಬೇರೆ ದಾರಿಯಿಲ್ಲ. ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಕಳಿಸುತ್ತಿರುವವರು, ಅಲ್ಲಿಗೆ ಕಳಿಸುತ್ತಿರುವುದೇಕೆ ಎಂದು ಕೇಳಿದರೆ ಸರ್ಕಾರಿ ಶಿಕ್ಷಣದ ಕಳಪೆ ಗುಣಮಟ್ಟದತ್ತ ಬೆಟ್ಟು ಮಾಡುತ್ತಾರೆ. ಆದರೆ ಇದೂ ಪೂರ್ತಿ ಸತ್ಯವಲ್ಲ. ಯಾಕೆಂದರೆ ಹಲವಾರು ಅನುದಾನಿತ, ಅನುದಾನರಹಿತ ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಇದು ಒಟ್ಟಾರೆಯಾಗಿ ರಾಜ್ಯ ಶೈಕ್ಷಣಿಕ ಪಠ್ಯದ ಸಮಸ್ಯೆಗಳತ್ತ ಬೆಟ್ಟು ಮಾಡುತ್ತದೆ. ಒಟ್ಟಾರೆಯಾಗಿ ಪಠ್ಯದ ಸಮಸ್ಯೆ ಹಾಗೂ ಕಲಿಕೆಯ ಸಮಸ್ಯೆಗಳು ಒಗ್ಗೂಡಿ ಇಂದಿನ ಈ ಸ್ಥಿತಿಗೆ ತಂದಿವೆ.

ಸರ್ಕಾರ ಶಾಲಾ ಶಿಕ್ಷಣದ ಗುಣಮಟ್ಟ ಹೆಚ್ಚಿಸುವಲ್ಲಿ ಸರ್ಕಾರ ಯಾವುದೇ ಪರಿಣಾಮಕಾರಿ ರೂಪುರೇಷೆಗಳನ್ನು ರೂಪಿಸುತ್ತಿಲ್ಲ. ಬದಲಿಗೆ ಶಿಕ್ಷಣ ಇಲಾಖೆ ದಿನಕ್ಕೊಂದು ನಿಯಮಗಳನ್ನು ಮಾಡುತ್ತಿದೆ. ಆದರೆ ತಾವೇ ನಡೆಸುವ ಸರ್ಕಾರಿ ಶಾಲೆಗಳಲ್ಲಿ ಅನುಷ್ಠಾನ ಮಾಡದೇ, ಕೇವಲ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ನಿಯಮ ಎಂಬಂತೆ ವರ್ತಿಸುತ್ತಿದೆ ಎಂದು ಶಾಲಾ ಒಕ್ಕೂಟ ಆಕ್ರೋಶ ಹೊರಹಾಕಿದೆ. ಇದೂ ನಿಜ. ಶಾಲೆಗಳನ್ನು ಪ್ರಯೋಗಶಾಲೆಗಳಂತೆ ನೋಡುವ ಮನಸ್ಥಿತಿ ಪ್ರತಿಯೊಂದು ಸರಕಾರದ್ದಾಗಿದೆ. ಇದಕ್ಕೆ ಇತ್ತೀಚೆಗೆ ಪದವಿ ಶಿಕ್ಷಣದಲ್ಲಿ ಮಾಡುತ್ತಿರುವ ಬದಲಾವಣೆಯೇ ದೃಷ್ಟಾಂತ. ನಾಲ್ಕು ವರ್ಷಗಳ ಪದವಿಯನ್ನು ಮತ್ತೆ ಮೂರು ವರ್ಷಕ್ಕೆ ಇಳಿಸಿರುವ ಈ ಕ್ರಮದಿಂದಾಗಿ, ರಾಜ್ಯ ಶಿಕ್ಷಣ ವ್ಯವಸ್ಥೆಯು ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಪ್ರತ್ಯೇಕತೆ ಕಾಪಾಡಿಕೊಂಡು, ಎನ್‌ಇಪಿಯಿಂದ ದೊರೆಯಬಹುದಾದ ಲಾಭಗಳಿಂದ ವಂಚಿತವಾಗಲಿದೆ.

ರಾಜ್ಯದಲ್ಲಿ ಪ್ರಾಥಮಿಕ ಹಂತದಲ್ಲೆ ಶಿಕ್ಷಣದ ಗುಣಮಟ್ಟ ಕಾಪಾಡದೇ ಇರುವುದರಿಂದಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಕುಸಿತ ಉಂಟಾಗಿದೆ. 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನಿರಾಶದಾಯವಾಗಿದೆ. ಸಿಸಿಟಿವಿ ಹಾಕಿದ್ದಕ್ಕೆ ಫಲಿತಾಂಶ ಕಡಿಮೆ ಬಂದಿದೆ ಎಂದು ಶಾಲಾ ಶಿಕ್ಷಣ ಇಲಾಖೆಯೇ ಒಪ್ಪಿಕೊಂಡಿದೆ. ಅಧಿಕಾರಿಗಳ ಬಳಿ ಚರ್ಚೆ ಮಾಡಿದಾಗ, ಮಕ್ಕಳು ತುಂಬಾ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಹೀಗಾಗಿ ಅವರನ್ನು ಪಾಸ್ ಮಾಡಬೇಕು ಎನ್ನುತ್ತಾರೆ. ಹೀಗಾಗಿ ಗ್ರೇಸ್‌ ಅಂಕ ಕೊಡಲಾಗಿದೆ. ಹತ್ತು ವರ್ಷಗಳಿಂದ ಶಾಲೆಯಲ್ಲಿ ಕಲಿತರೂ 10ನೇ ತರಗತಿಗೆ ಬಂದಾಗ ಕನಿಷ್ಠ 25 ಅಂಕ ಗಳಿಸಲೂ ಆಗದ ಮಕ್ಕಳ ಸಂಖ್ಯೆ ಹೆಚ್ಚು ಇದೆ ಎಂದರೆ ಏನರ್ಥ? ಇದು ಶಿಕ್ಷಣವೇ? ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಬದಲು ಮಕ್ಕಳ ಹಿತದೃಷ್ಟಿಯ ಹೆಸರಲ್ಲಿ ಗ್ರೇಸ್‌ ಅಂಕದ ಪ್ರಮಾಣ ಹೆಚ್ಚಿಸುತ್ತಿರುವುದು ಸರಿಯಲ್ಲ. ಇದು ಕ್ರಿಕೆಟ್‌ನಲ್ಲಿ ಬೌಂಡರಿಗೆ ಬಾಲ್‌ ಹೋಗುತ್ತಿಲ್ಲ ಎಂದು ಬೌಂಡರಿ ವ್ಯಾಪ್ತಿಯನ್ನೇ ಕುಗ್ಗಿಸಿದಂತೆ! ಇದರಿಂದ ಆಟಗಾರರ ಪ್ರತಿಭೆಯೇನೂ ಹೆಚ್ಚುವುದಿಲ್ಲ!

ಇದನ್ನೂ ಓದಿ:ವಿಸ್ತಾರ ಸಂಪಾದಕೀಯ: ಹೋರ್ಡಿಂಗ್ ಕುಸಿತ ಬೆಂಗಳೂರಿಗರಿಗೂ ಎಚ್ಚರಿಕೆಯ ಗಂಟೆ

ಪ್ರತಿ ಸಲ ಸರ್ಕಾರ ಬಂದಾಗಲೂ ರಾಜಕೀಯ ಸಿದ್ಧಾಂತದ ಹಿನ್ನೆಲೆಯಲ್ಲಿ ಪಠ್ಯಕ್ರಮ ಪರಿಷ್ಕರಣೆ ಆಗುತ್ತಿದೆ. ಕಳೆದ ಹತ್ತಾರು ವರ್ಷಗಳಿಂದ ಇದೇ ರೀತಿ ನಡೆದುಕೊಂಡು ಬರುತ್ತಿದೆ. ಶಿಕ್ಷಣ ಇಲಾಖೆಯಿಂದ ಗುಣಮಟ್ಟದ ಪಠ್ಯ ಪುಸ್ತಕ ರಚನೆ ಆಗದೇ ಇದ್ದಲ್ಲಿ ಇದರ ಅಡ್ಡಪರಿಣಾಮವನ್ನು ಮುಂದೆ ಅನುಭವಿಸಬೇಕಾಗುತ್ತದೆ. ಮಕ್ಕಳಿಗೆ ಬೇಕಾದಂತಹ ಸಂಯೋಜಿತ ಪಠ್ಯ ರಚನೆಯಾಗದೆ ಇದ್ದರೆ, ಪೋಷಕರು ಅನಿವಾರ್ಯವಾಗಿ CBSE-ICSE ಕಡೆ ಹೋಗಬೇಕಾಗುತ್ತದೆ. ರಾಜ್ಯದ ವಿದ್ಯಾರ್ಥಿಗಳು ನೆರೆಹೊರೆ ರಾಜ್ಯಗಳ ಪಠ್ಯಕ್ಕೆ ಹಾಗೂ ರಾಷ್ಟ್ರಮಟ್ಟದ ಶಿಕ್ಷಣಕ್ಕೆ ಸ್ಪರ್ಧಾತ್ಮಕವಾಗಿ ಸಿದ್ಧ ಮಾಡುವುದು ಸರ್ಕಾರದ ಆದ್ಯ ಜವಾಬ್ದಾರಿ. ಆದರೆ ಈ ವಿಚಾರದಲ್ಲಿ ಸದಾ ರಾಜಕೀಯ. ವಿದ್ಯಾರ್ಥಿಗಳ ಹಿತದೃಷ್ಟಿಗಿಂತ ತಮ್ಮ ಸಿದ್ಧಾಂತಗಳನ್ನು ಹೇರುವುದೇ ಪಕ್ಷಗಳ ಆದ್ಯತೆಯಾಗಿದೆ. ಶಿಕ್ಷಣ ತಜ್ಞರನ್ನು ಮುಂದಿಟ್ಟುಕೊಂಡು ಪಠ್ಯಕ್ರಮ ರಚಿಸುವುದಕ್ಕಿಂತಲೂ ರಾಜಕೀಯ ಚಿಂತನೆಯ ತಜ್ಞರನ್ನು ಸಮಿತಿಯಲ್ಲಿ ನೇಮಿಸಿಕೊಂಡು ಪಠ್ಯ ರಚಿಸಲಾಗುತ್ತಿದೆ. ಇದು ಮಕ್ಕಳ ಬಾಳಿನಲ್ಲಿ ಆಡುವ ಚೆಲ್ಲಾಟ. ಇದು ನಿಲ್ಲಬೇಕು. ಇಲ್ಲವಾದರೆ ಈ ಫಲಿತಾಂಶ ಕುಸಿತ ಹಾಗೂ ಅವಮಾನ ಮುಂದುವರಿಯಲಿದೆ.

Continue Reading

ಶಿವಮೊಗ್ಗ

Karnataka Weather: ಭಾರೀ ಗಾಳಿ ಮಳೆಗೆ ಧರೆಗುರುಳಿದ ಬೃಹತ್‌ ಮರ, ವಿದ್ಯುತ್‌ ಕಂಬ

Karnataka Weather: ಬಿರುಗಾಳಿ ಸಮೇತ ಸುರಿದ ಮಳೆಗೆ ವಿದ್ಯುತ್ ಕಂಬಗಳು ಹಾಗೂ ಬೃಹತ್‌ ಮರವೊಂದು ಧರೆಗುರುಳಿದ ಘಟನೆ ಸೊರಬ ತಾಲೂಕಿನ ಚಂದ್ರಗುತ್ತಿ ಸಮೀಪದ ಜೋಳದ ಗುಡ್ಡೆ ಗ್ರಾಮದ ಮುಖ್ಯರಸ್ತೆಯಲ್ಲಿ ಮಂಗಳವಾರ ಸಂಜೆ ನಡೆದಿದೆ. ಗಾಳಿ-ಮಳೆಗೆ ಜೋಳದ ಗುಡ್ಡೆ ಗ್ರಾಮದಲ್ಲಿ ಬೃಹತ್ ಮರವೊಂದು ವಿದ್ಯುತ್ ತಂತಿ ಮೇಲೆ ಉರುಳಿ ರಸ್ತೆಗೆ ಅಡ್ಡಲಾಗಿ ಧರೆಗುರುಳಿದ ಪರಿಣಾಮ ಸುಮಾರು ಮೂರು ವಿದ್ಯುತ್ ಕಂಬಗಳು ಮುರಿದು ಹೋಗಿವೆ.

VISTARANEWS.COM


on

heavy wind and rain damaged tree and electricity poles In Jholada Gudde village
Koo

ಸೊರಬ: ಬಿರುಗಾಳಿ ಸಮೇತ ಸುರಿದ ಮಳೆಗೆ (Karnataka Weather) ವಿದ್ಯುತ್ ಕಂಬಗಳು ಹಾಗೂ ಬೃಹತ್‌ ಮರವೊಂದು ಧರೆಗುರುಳಿದ ಘಟನೆ ಚಂದ್ರಗುತ್ತಿ ಸಮೀಪದ ಜೋಳದ ಗುಡ್ಡೆ ಗ್ರಾಮದ ಮುಖ್ಯರಸ್ತೆಯಲ್ಲಿ ಮಂಗಳವಾರ ಸಂಜೆ ಜರುಗಿದೆ. ಮಧ್ಯಾಹ್ನದ ವರೆಗೆ ಬಿರು ಬಿಸಿಲಿನಿಂದ ಕೂಡಿದ ವಾತಾವರಣ ನಂತರ ಮೋಡ ಕವಿದು ಬಿರುಗಾಳಿ ಸಮೇತ ಮಳೆ ಸುರಿದಿದೆ.

ಗಾಳಿ-ಮಳೆಗೆ ಜೋಳದ ಗುಡ್ಡೆ ಗ್ರಾಮದಲ್ಲಿ ಬೃಹತ್ ಮರವೊಂದು ವಿದ್ಯುತ್ ತಂತಿ ಮೇಲೆ ಉರುಳಿ ರಸ್ತೆಗೆ ಅಡ್ಡಲಾಗಿ ಧರೆಗೆ ಉರುಳಿದ ಪರಿಣಾಮ ಸುಮಾರು ಮೂರು ವಿದ್ಯುತ್ ಕಂಬಗಳು ಮುರಿದು ಹೋಗಿದ್ದು, ಕೆಲ ಸಮಯ ಸೊರಬ ಚಂದ್ರಗುತ್ತಿ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ತೊಡಕಾಯಿತು.

ಇದನ್ನೂ ಓದಿ: Uttara Kannada News: ಬದುಕಿನ ಪುರುಷಾರ್ಥಗಳ ಸಾಧನೆಗೆ ರಾಮಾಯಣ ಸಾಧನ; ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ

ವಿಷಯ ತಿಳಿದು ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿ ಆಗಮಿಸಿದರು. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯರ ನೆರವಿನೊಂದಿಗೆ ಮರವನ್ನು ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಗ್ರಾಪಂ ಸದಸ್ಯ ಲೋಕೇಶ್ ಸೇರಿದಂತೆ ಇತರರು ಅಧಿಕಾರಿಗಳಿಗೆ ಸಹಕಾರ ನೀಡಿದರು.

ಚಂದ್ರಗುತ್ತಿ ಹೋಬಳಿ ವ್ಯಾಪ್ತಿಯ ಬಹುತೇಕ ಕಡೆ ಮಳೆಯಾಗಿದ್ದು, ಬಿಸಿಲಿನಿಂದ ಕಾದ ಇಳೆಗೆ ಮಳೆ ತಂಪೆರೆಚಿದಂತಾಗಿದೆ.

Karnataka weather: ಸಿಡಿಲಿಗೆ ಸಿದ್ದಾಪುರದ ವ್ಯಕ್ತಿ ಬಲಿ; ಇನ್ನೂ ನಾಲ್ಕು ದಿನ ಇದೆ ಭಾರಿ ಮಳೆ ಎಚ್ಚರಿಕೆ!

ಬೆಂಗಳೂರು: ರಾಜ್ಯಾದ್ಯಂತ ಮಳೆಯಾರ್ಭಟ ಜೋರಾಗಿದೆ. ಗುಡುಗು – ಸಿಡಿಲಿನಿಂದ ಕೂಡಿದ ಮಳೆಯಾಗುತ್ತಿದೆ. ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಇನ್ನು ಮೇ 18ರ ವರೆಗೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು (Karnataka weather Forecast) ಹವಾಮಾನ ಇಲಾಖೆ ನೀಡಿದೆ.

ಸಿದ್ದಾಪುರ ಗ್ರಾಮದ ಸುರೇಶ್‌ ಶೆಟ್ಟಿ (38) ಮೃತ ದುರ್ದೈವಿ. ಇಂದು ಸಂಜೆ ಹೊತ್ತಿಗೆ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿದಿದೆ. ಈ ವೇಳೆ ಸುರೇಶ್‌ ಶೆಟ್ಟಿ ಅವರಿಗೆ ಸಿಡಿಲು ಬಡಿದಿದ್ದು, ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ.

ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಗಾಳಿ ಸಹಿತ ಭಾರಿ (Heavy Rain) ಮಳೆಯಾಗಿದೆ. ಮಂಗಳವಾರ ಸಂಜೆ ಶುರುವಾದ ಮಳೆಯು ಕಳೆದ ಒಂದು ಗಂಟೆಗೂ ಹೆಚ್ಚು ಸಮಯ ಸುರಿದಿದೆ. ಶೃಂಗೇರಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನಲ್ಲಿ ಧಾರಾಕಾರ ಮಳೆ‌ಯಾಗಿದ್ದು, ಪ್ರವಾಸಿಗರು ಹಾಗೂ ಜನ-ಜೀವನ ಅಸ್ತವ್ಯಸ್ತವಾಗಿದೆ. ಬಲವಾದ ಗಾಳಿ – ಮಳೆಗೆ ಶೃಂಗೇರಿ ತಾಲೂಕಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಸತತ ಮಳೆಯಿಂದಾಗಿ (Rain News) ತುಂಗಾ ನದಿಯ ಹರಿವು ಕೊಂಚ ಏರಿಕೆಯಾಗುವ ಸಾಧ್ಯತೆ ಇದೆ. ಧಾರವಾಡದಲ್ಲಿಯೂ ಭಾರಿ ಮಳೆಯಾಗಿದೆ.

ಉತ್ತರ ಕನ್ನಡದಲ್ಲೂ ವರುಣಾರ್ಭಟ

ಉತ್ತರ ಕನ್ನಡದ ಘಟ್ಟದ ಮೇಲಿನ ತಾಲೂಕುಗಳಲ್ಲೂ ವರುಣಾರ್ಭಟ ಜೋರಾಗಿದೆ. ಶಿರಸಿ, ಸಿದ್ದಾಪುರ ಭಾಗದಲ್ಲೂ ಭಾರಿ ಗಾಳಿ ಸಹಿತ ಮಳೆಯಾಗಿದೆ. ಶಿರಸಿಯಲ್ಲಿ ಭಾರಿ ಮಳೆಗೆ ಮರಗಳು ಧರೆಗುರುಳಿವೆ. ನಗರದ ಸಹ್ಯಾದ್ರಿ ಕಾಲೋನಿಯಲ್ಲಿ ಮರ ಬಿದ್ದು, ವಿದ್ಯುತ್ ಕಂಬ ಮುರಿದು ರಸ್ತೆ ಸಂಪೂರ್ಣ ಬ್ಲಾಕ್ ಆಗಿದೆ. ಹತ್ತಕ್ಕೂ ಅಧಿಕ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Victoria Hospital: ವಿಕ್ಟೋರಿಯಾ ಆಸ್ಪತ್ರೆಯಿಂದ ವಜಾಗೊಂಡಿದ್ದ 55 ಸಿಬ್ಬಂದಿ ಮರು ನೇಮಕ

ಕುಮಟಾ ತಾಲೂಕಿನ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಬಿಸಿಲಿಗೆ ಕಾದಿದ್ದ ಇಳೆಗೆ ವರುಣ ತಂಪೆರೆದಿದ್ದಾನೆ. ಅರ್ಧ ಗಂಟೆಗೂ ಅಧಿಕ ಕಾಲ ಧಾರಾಕಾರ ಮಳೆಯಾಗಿದೆ. ಘಟ್ಟದ ಮೇಲಿನ ತಾಲೂಕುಗಳಲ್ಲಿ ಮಳೆಯಾದರೂ ಕರಾವಳಿಗೆ ವರುಣ ಕಾಲಿಟ್ಟಿರಲಿಲ್ಲ. ಇದೀಗ ವರುಣಾಗಮನದಿಂದ ಕರಾವಳಿ ಜನತೆ ಖುಷಿಯಾಗಿದ್ದಾರೆ. ಭಟ್ಕಳ, ಹೊನ್ನಾವರ, ಅಂಕೋಲಾ, ಕಾರವಾರ ಭಾಗದಲ್ಲಿ ಮೋಡ ಕವಿದ ವಾತಾವರಣವಿದೆ.

ಧಾರವಾಡದಲ್ಲಿ ಮಳೆಯ ಅಬ್ಬರ

ಧಾರವಾಡದಲ್ಲಿ ಮಂಗಳವಾರ ಬೆಳಗ್ಗೆಯಿಂದಲ್ಲೂ ಮೋಡ ಕವಿದ ವಾತಾವರಣವಿತ್ತು. ಇಳಿ ಸಂಜೆಯಾಗುತ್ತಿದ್ದಂತೆ ಧಾರವಾಡ ನಗರಕ್ಕೆ ವರುಣನ ಆಗಮನವಾಗಿದೆ. ಕಳೆದ ಎರಡು ದಿನಗಳ ಹಿಂದೆ ಸುರಿದಿದ್ದ ಮಳೆಯು ಸ್ವಲ್ಪ ಸಮಯ ಬ್ರೇಕ್‌ ಕೊಟ್ಟಿತ್ತು. ಇಂದು ಮತ್ತೆ ಮಳೆ ಸುರಿದಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

ಮೇ 18ರ ವರೆಗೆ ಮಳೆ ಸಾಧ್ಯತೆ
ಮೇ 18ರ ವರೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ತಜ್ಞರು ನೀಡಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಕಡೆ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗಲಿದೆ.

ಕೊಡಗು, ಮೈಸೂರು, ಮಂಡ್ಯದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ (40-50 ಕಿಮೀ)ಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಕನ್ನಡ, ಧಾರವಾಡ, ಗದಗ, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಜಿಲ್ಲೆಯಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Viral News: ಗಾಜಾದಲ್ಲಿ ಆಹಾರ ಸಿಗದೆ ನಾಣ್ಯ, ಕಲ್ಲು, ಬ್ಯಾಟರಿ ತಿನ್ನುತ್ತಿರುವ ಮಕ್ಕಳು!

ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆ

ನಿನ್ನೆ ಸೋಮವಾರ (ಮೇ 13) ರಾಜ್ಯಾದ್ಯಂತ ಮಳೆಯಾಗಿದ್ದು, ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆಯಾಗಿದ್ದು, ಮಂಡ್ಯದ ಪಿಟಿಒನಲ್ಲಿ 9 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ. ಶಿರಾಳಿಯಲ್ಲಿ ಗರಿಷ್ಠ ಉಷ್ಣಾಂಶ 38.4 ಡಿ.ಸೆನಷ್ಟು ದಾಖಲಾಗಿದೆ.

Continue Reading
Advertisement
Prajwal Revanna Case
ಕರ್ನಾಟಕ14 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

copper mine lift collapse
ಪ್ರಮುಖ ಸುದ್ದಿ40 mins ago

M‌ine Lift Collapse: ತಾಮ್ರದ ಗಣಿಯೊಳಗೆ ಲಿಫ್ಟ್‌ ಕುಸಿದು 14 ಮಂದಿ ಪಾತಾಳದಲ್ಲಿ ಟ್ರ್ಯಾಪ್

Health Tips in Kannada
ಆರೋಗ್ಯ45 mins ago

Health Tips in Kannada: ಕುತ್ತಿಗೆ ನೋವಿನಿಂದ ಬಳಲುತ್ತಿದ್ದೀರಾ? ಈ ಸಂಗತಿ ತಿಳಿದುಕೊಂಡಿರಿ

Mango Juice Benefits
ಆರೋಗ್ಯ2 hours ago

Mango Juice Benefits: ತಾಜಾ ಮಾವಿನ ರಸ ಕುಡಿಯುವುದರಿಂದ ಎಷ್ಟೊಂದು ಪ್ರಯೋಜನ ಇದೆ ನೋಡಿ…

Karnataka Weather Forecast
ಉಡುಪಿ2 hours ago

Karnataka Weather : ಮೇ 18ರವರೆಗೆ ಮಳೆ ಅಬ್ಬರ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Dina Bhavishya
ಭವಿಷ್ಯ3 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

SSLC Result
ಪ್ರಮುಖ ಸುದ್ದಿ8 hours ago

ವಿಸ್ತಾರ ಸಂಪಾದಕೀಯ: ರಾಜ್ಯ ಪ್ರಾಥಮಿಕ- ಪ್ರೌಢಶಾಲಾ ಶಿಕ್ಷಣದ ಪರಿಸ್ಥಿತಿ ಸರಿಹೋಗುವುದೆಂದು?

Kangana Ranaut
ಪ್ರಮುಖ ಸುದ್ದಿ8 hours ago

Kangana Ranaut : ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್​ ಬಳಿ ಇರುವ ಆಸ್ತಿ ಎಷ್ಟು? ಇಲ್ಲಿದೆ ಎಲ್ಲ ಮಾಹಿತಿ

heavy wind and rain damaged tree and electricity poles In Jholada Gudde village
ಶಿವಮೊಗ್ಗ8 hours ago

Karnataka Weather: ಭಾರೀ ಗಾಳಿ ಮಳೆಗೆ ಧರೆಗುರುಳಿದ ಬೃಹತ್‌ ಮರ, ವಿದ್ಯುತ್‌ ಕಂಬ

ಪ್ರಮುಖ ಸುದ್ದಿ8 hours ago

SSLC Result 2024: ಎಸ್‌ಎಸ್‌ಎಲ್‌ಸಿ ಸಾಧಕರನ್ನು ಸನ್ಮಾನಿಸಿ, ಪ್ರೋತ್ಸಾಹ ಧನ ಘೋಷಿಸಿದ ಸಿಎಂ, ಡಿಸಿಎಂ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ14 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ13 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202415 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202418 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ19 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು20 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌