Site icon Vistara News

ಧಾರವಾಡ ವಿಶ್ವೇಶ್ವರಯ್ಯ ಕಾಲೇಜಿನ ಲೈಂಗಿಕ ಕಿರುಕುಳ ಆರೋಪ; ಕಾಲೇಜು ಅಧ್ಯಕ್ಷನ ಬಂಧನ

assault

ಧಾರವಾಡ: ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಧಾರವಾಡ ವಿಶ್ವೇಶ್ವರಯ್ಯ ಕಾಲೇಜಿನ ಅಧ್ಯಕ್ಷನನ್ನು ಪೊಲೀಸರು ಬಂಧಿಸಿದ್ದಾರೆ.

ಬಸವರಾಜ ಯಡವಣ್ಣವರ ಬಂಧಿತ ಆರೋಪಿಯಾಗಿದ್ದು, ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ತಮ್ಮದೇ ಕಾಲೇಜಿನ ವಿದ್ಯಾರ್ಥಿನಿ ಜತೆ ಲೈಂಗಿಕ ಕಿರುಕುಳ ನೀಡಿರುವ ಆರೋಪವನ್ನು ಎದುರಿಸುತ್ತಿದ್ದು, ಒಂದು ವಾರದಿಂದ ತಲೆಮರೆಸಿಕೊಂಡಿದ್ದ. ಅಲ್ಲದೆ, ಈ ಪ್ರಕರಣ ಸಂಬಂಧ ಮಹಾದೇವ ಕುರವತ್ತಿಗೌಡರ ಎಂಬ ಕಾಲೇಜು ಪ್ರಿನ್ಸಿಪಾಲ್‌ನನ್ನು ಮೊದಲೇ ಬಂಧಿಸಲಾಗಿತ್ತು.

ಕಾಲೇಜು ಅಧ್ಯಕ್ಷ ಬಸವರಾಜ ಯಡವಣ್ಣವರ

ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿರುವ ಆರೋಪ ಇವರ ಮೇಲೆ ಇದೆ. ಅಲ್ಲದೆ, ವಿದ್ಯಾರ್ಥಿನಿಯನ್ನು ವೈದ್ಯಕೀಯ ತಪಾಸಣೆಗೆ ಪೊಲೀಸರು ಒಳಪಡಿಸಿದ್ದರು. ಎರಡನೇ ಆರೋಪಿಯಾಗಿದ್ದ ಮಹಾದೇವ ಕುರವತ್ತಿಗೌಡನನ್ನು ಉಪನಗರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈಗ ಪ್ರಮುಖ ಆರೋಪಿ ಸೆರೆ ಸಿಕ್ಕಂತಾಗಿದೆ.

ಇದನ್ನೂ ಓದಿ | ಅಪ್ರಾಪ್ತೆ ಮೇಲೆ ಸಂಬಂಧಿಗಳಿಂದಲೇ ಅತ್ಯಾಚಾರ; ಬಿಡಿಸಲು ಬಂದ ಅಜ್ಜಿಯ ಮೇಲೆಯೂ ರೇಪ್​

Exit mobile version