Site icon Vistara News

Ambedkar Bhavan: ಕುದ್ರಗಿಯಲ್ಲಿ ಅಂಬೇಡ್ಕರ್ ಭವನ ಉದ್ಘಾಟಿಸಿದ ಶಾಸಕ ಸುನಿಲ್‌ ನಾಯ್ಕ

Ambedkar Bhavan honnavar

#image_title

ಹೊನ್ನಾವರ: ಸಮಾಜ ಕಲ್ಯಾಣ ಇಲಾಖೆಯಿಂದ ಮಂಜೂರಾಗಿ ತಾಲೂಕಿನ ಕುದ್ರಗಿಯಲ್ಲಿ ನಿರ್ಮಾಣಗೊಂಡ ಅಂಬೇಡ್ಕರ್ ಭವನವನ್ನು (Ambedkar Bhavan) ಶಾಸಕ ಸುನಿಲ್‌ ನಾಯ್ಕ ಅವರು ಬುಧವಾರ (ಮಾ.22) ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, “ಗ್ರಾಮೀಣ ಭಾಗದಲ್ಲಿ ಹಿಂದುಳಿದ ಸಮಾಜದ ಅಭ್ಯುದಯಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯಿಂದ ಭವ್ಯವಾದ ಅಂಬೇಡ್ಕರ್ ಭವನ ನಿರ್ಮಾಣಗೊಂಡಿದ್ದು, ಈ ಭಾಗದ ನಿವಾಸಿಗಳು ಧಾರ್ಮಿಕ, ಹಾಗೂ ಸಾಮಾಜಿಕ ಕಾರ್ಯಕ್ರಮ ಸೇರಿದಂತೆ ವಿವಿಧ ಕಾರ್ಯಕ್ರಮಕ್ಕಾಗಿ ಇದನ್ನು ಬಳಸಿಕೊಳ್ಳಬಹುದಾಗಿದೆ. ಹೀಗಾಗಿ ಇದರ ಸದುಪಯೋಗ ಪಡೆದುಕೊಳ್ಳಬೇಕು. ಈ ಭಾಗದವರು ಈ ಹಿಂದೆ ನೀಡಿದ ಬೇಡಿಕೆಯಂತೆ ನಿರ್ಮಾಣಗೊಂಡಿದೆ. ನನ್ನ ಶಾಸಕತ್ವ ಅವಧಿಯಲ್ಲಿ ಗ್ರಾಮದ ವಿವಿಧಡೆ ರಸ್ತೆ, ಶಾಲಾ ಕೊಠಡಿ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯ ನಡೆದಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿವಿಧ ಯೋಜನೆಯನ್ನು ಜಾರಿಗೊಳಿಸಿದ್ದು, ಈ ಯೋಜನೆಯ ಮಾಹಿತಿ ಪಡೆದು ಫಲಾನುಭವಿಗಳಾಗಬೇಕು” ಎಂದು ಸಲಹೆ ನೀಡಿದರು.

ಇದನ್ನೂ ಓದಿ: Karnataka Election 2023: ರಾಜ್ಯದ ಹಲವೆಡೆ ದಾಖಲೆ ಇಲ್ಲದ 13.3 ಕೋಟಿ ರೂ. ನಗದು, 3 ಕೋಟಿ ರೂ. ಚಿನ್ನಾಭರಣ ವಶ

ಗ್ರಾ.ಪಂ. ಜನಪ್ರತಿನಿಧಿಗಳು, ಇಲಾಖೆಯ ಅಧಿಕಾರಿಗಳು, ಬಿಜೆಪಿ ಮುಖಂಡರು ಕಾರ್ಯಕರ್ತರು, ಸಾರ್ವಜನಿಕರು ಹಾಜರಿದ್ದರು.

Exit mobile version