Site icon Vistara News

Bantwal News: ಗುಡ್ಡದಲ್ಲಿ ಬೆಂಕಿ ನಂದಿಸಲು ಹೋದ ವೃದ್ಧ ದಂಪತಿ ಸಜೀವ ದಹನ

Fire accident

ಮಂಗಳೂರು ಕಸ-ಕಡ್ಡಿಗೆ ಹಾಕಿದ ಬೆಂಕಿ ವ್ಯಾಪಿಸಿ ವೃದ್ಧ ದಂಪತಿ ಸಜೀವ ದಹನವಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ (Bantwal News) ಅಮ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತುಂಡುಪದವು ಎಂಬಲ್ಲಿ ಭಾನುವಾರ ನಡೆದಿದೆ. ಗುಡ್ಡಕ್ಕೆ ವ್ಯಾಪಿಸಿದ ಬೆಂಕಿ ನಂದಿಸಲು ತೆರಳಿದ ವೇಳೆ ವೃದ್ಧ ದಂಪತಿ ಬೆಂಕಿಗಾಹುತಿಯಾಗಿದ್ದಾರೆ.

ತುಂಡುಪದವು ನಿವಾಸಿಗಳಾದ ಗಿಲ್ಬರ್ಟ್ ಕಾರ್ಲೋ(78) ಹಾಗೂ ಕ್ರಿಸ್ಟಿನಾ ಕಾರ್ಲೋ (70) ಮೃತರು. ಮನೆಯ ಪಕ್ಕ ಕಸ-ಕಡ್ಡಿಗೆ ಹಾಕಿದ ಬೆಂಕಿ ವ್ಯಾಪಿಸಿ ಮನೆ ಸಮೀಪದ ಕಾಡನ್ನು ಆವರಿಸಿತ್ತು. ಹೀಗಾಗಿ ಬೆಂಕಿ ನಂದಿಸಲು ವೃದ್ಧ ದಂಪತಿ ತೆರಳಿದ್ದಾರೆ. ಆದರೆ, ಬೆಂಕಿಗೆ ಸಿಲುಕಿ ಇಬ್ಬರೂ ಸಜೀವ ದಹನವಾಗಿದ್ದಾರೆ. ಬಂಟ್ವಾಳ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | Road Accident : ಟಿಪ್ಪರ್‌ ಲಾರಿಗೆ ಛಿದ್ರಗೊಂಡ ಸವಾರ; ಕಾರಿಗೆ ಜೀಪ್‌, ಕ್ಯಾಂಟರ್‌ಗಳ ಮುಖಾಮುಖಿ ಡಿಕ್ಕಿ

ಮೃತರಿಗೆ ಮೂವರು ಮಕ್ಕಳಿದ್ದು, ಇಬ್ಬರು ವಿದೇಶದಲ್ಲಿ, ಇನ್ನೊಬ್ಬಾಕೆ ಮಂಗಳೂರಿನಲ್ಲಿ ನೆಲೆಸಿದ್ದಾರೆ. ಮನೆಯಲ್ಲಿ ದಂಪತಿ ಮಾತ್ರ ವಾಸವಿದ್ದರು.

ಗ್ಯಾಸ್ ಸೋರಿಕೆಯಾಗಿ ಸ್ಫೋಟ; ನಾಲ್ವರಿಗೆ ಗಂಭೀರ ಗಾಯ

ಬೆಳಗಾವಿ: ಗ್ಯಾಸ್ ಸೋರಿಕೆಯಾಗಿ ಸ್ಫೋಟವಾಗಿದ್ದರಿಂದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಬಸವನ ಗಲ್ಲಿಯಲ್ಲಿ ನಡೆದಿದೆ. ಗ್ಯಾಸ್‌ ಸೋರಿಕೆಯಾಗಿರುವುದು ಗೊತ್ತಾಗದೆ ಮಹಿಳೆ ಟೀ ಮಾಡಲು, ಲೈಟರ್ ಆನ್ ಮಾಡುತ್ತಿದ್ದಂತೆ ಗ್ಯಾಸ್ ಸಿಲಿಂಡರ್ ಬ್ಲಾಸ್ಟ್ ಆಗಿದೆ. ಲಲಿತಾ ಭಟ್, ಮೋಹನ್ ಭಟ್, ಕಮಲಾಕ್ಷಿ ಭಟ್, ಹೇಮಂತ್ ಭಟ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಬಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಮರಕ್ಕೆ ಡಿಕ್ಕಿ; ಐವರಿಗೆ ಗಾಯ

ಹಾಸನ: ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಮರಕ್ಕೆ ಡಿಕ್ಕಿಯಾಗಿ ಐವರು ಗಾಯಗೊಂಡಿರುವುದು ಜಿಲ್ಲೆ ಬೇಲೂರು ತಾಲ್ಲೂಕಿನ ನಿಡಗೋಡು ಗ್ರಾಮದ ಬಳಿ ನಡೆದಿದೆ. ಗಾಯಾಳುಗಳ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿದೆ.

ಇದನ್ನೂ ಓದಿ | Bengaluru News : ಮಲಗಿದ್ದ ನಾಯಿ ಮೇಲೆ ಕಾರು ಹತ್ತಿಸಿದ; ಚಕ್ರಕ್ಕೆ ಸಿಕ್ಕಿ ನರಳಾಡಿ ಸತ್ತ ಶ್ವಾನ

ಹಾಸನದ ಖಾಸಗಿ ಆಸ್ಪತ್ರೆಯಿಂದ ನಾಗೇನಹಳ್ಳಿ ಗ್ರಾಮಕ್ಕೆ ಮೃತದೇಹವನ್ನು ಕೊಂಡೊಯ್ಯುತ್ತಿದ್ದ ವೇಳೆ ಅಂಬ್ಯಲೆನ್ಸ್ ಅಪಘಾತ ನಡೆದಿದೆ. ಎದುರು ಬಂದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಅಂಬ್ಯುಲೆನ್ಸ್ ಡಿಕ್ಕಿ ಹೊಡೆದಿದೆ. ಚಾಲಕನ ಪಕ್ಕದಲ್ಲಿ ಕುಳಿತಿದ್ದ ಓರ್ವನಿಗೆ ಗಂಭೀರ ಗಾಯಗಳಾಗಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Exit mobile version