Site icon Vistara News

Accident | ಬೈಕ್‌ಗೆ ವಾಹನ ಡಿಕ್ಕಿ; ತಂದೆ ಸಾವು, ಮಕ್ಕಳಿಬ್ಬರು ಪ್ರಾಣಾಪಾಯದಿಂದ ಪಾರು

Accident

ಬಳ್ಳಾರಿ: ತಾಲೂಕಿನ ಶಂಕರಬಂಡೆ ಸಮೀಪ ಅಪರಿಚಿತ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದು(Accident) ತಂದೆ ಸ್ಥಳದಲ್ಲೇ ಮೃತಪಟ್ಟಿದ್ದು, ಅದೃಷ್ಟವಶಾತ್ ಮಕ್ಕಳಿಬ್ಬರು‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ತಿರುಮಲ ನಗರ ಕ್ಯಾಂಪಿನ ಎನ್.ಪಿ.ರಾಮಿರೆಡ್ಡಿ(43) ಮೃತ. ಇವರ ಮಕ್ಕಳಾದ ಹರ್ಷವರ್ಧನ್ (10) ಮತ್ತು ಚಾಣಕ್ಯ(6) ಗಾಯಗೊಂಡಿದ್ದಾರೆ. ಮಕ್ಕಳಿಗೆ ಆರೋಗ್ಯ ಸರಿಯಿಲ್ಲವೆಂದು ವೈದ್ಯರಿಗೆ ತೋರಿಸಲು ರಾಮಿರೆಡ್ಡಿ ಬೈಕ್‌ನಲ್ಲಿ ತಿರುಮಲ ನಗರ ಕ್ಯಾಂಪಿನಿಂದ ಶಂಕರಬಂಡೆಗೆ ಮಕ್ಕಳೊಂದಿಗೆ ತೆರಳುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿಯಾಗಿದೆ.

ಅಪಘಾತದಲ್ಲಿ ರಾಮಿರೆಡ್ಡಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಮಕ್ಕಳಿಗೆ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಬಳ್ಳಾರಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಿಚಿತ ವಾಹನ ಡಿಕ್ಕಿ, ವ್ಯಕ್ತಿ ಸಾವು
ಬಳ್ಳಾರಿ ತಾಲೂಕಿನ ಅಮರಾಪುರ ಗೋಡೆಹಾಳ್ ಕ್ರಾಸ್ ಸಮೀಪ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಈರಣ್ಣ (45) ಮೃತ ಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪಿಡಿ ಹಳ್ಳಿ ಪಿಎಸ್ಐ ಶಶಿಧರ್ ಭೇಟಿ ನೀಡಿ ಪರಿಶೀಲಿಸಿ, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪಿ.ಡಿ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | ಮುರುಘಾಶ್ರೀ ವಿರುದ್ಧದ ಪೋಕ್ಸೊ ಪ್ರಕರಣ ಬೇರೆ ರಾಜ್ಯಕ್ಕೆ ವರ್ಗಾಯಿಸಲು ಬಿಜೆಪಿ ಸಂಸದ ಲೆಹರ್‌ ಸಿಂಗ್ ಸಲಹೆ

Exit mobile version