Site icon Vistara News

Anganawadi student death : ಸೆಪ್ಟಿಕ್‌ ಟ್ಯಾಂಕ್‌ಗೆ ಬಿದ್ದು ಅಂಗನವಾಡಿ ಬಾಲಕಿ ದುರ್ಮರಣ

ಅಂಗನವಾಡಿಯಲ್ಲಿ ಮೃತಪಟ್ಟ ಮಗು

#image_title

ಬೀದರ್: ಅಂಗನವಾಡಿ ವಿದ್ಯಾರ್ಥಿನಿಯೊಬ್ಬಳು ಸೆಪ್ಟಿಕ್‌ ಟ್ಯಾಂಕ್‌ಗೆ ಬಿದ್ದು ಪ್ರಾಣ ಕಳೆದುಕೊಂಡ (Anganawadi student death) ಹೃದಯ ವಿದ್ರಾವಕ ಘಟನೆ ಬೀದರ್‌ ಜಿಲ್ಲೆಯಲ್ಲಿ ನಡೆದಿದೆ. ಬೀದರ್ ಜಿಲ್ಲೆಯ ಔರಾದ ಪಟ್ಟಣದ ಟೀಚರ್ ಕಾಲೋನಿಯಲ್ಲಿರುವ ಅಂಗನವಾಡಿಯಲ್ಲಿ ದುರಂತ ನಡೆದಿದ್ದು, ಸ್ಫೂರ್ತಿ ಎಂಬ ಬಾಲಕಿ ಮೃತಪಟ್ಟಿದ್ದಾಳೆ.

ಅಂಗನವಾಡಿಯ ಪಕ್ಕದಲ್ಲೇ ಕೊಳಚೆ ನೀರಿನ ಸಂಗ್ರಹ ಮತ್ತು ವಿಲೇವಾರಿಗಾಗಿ ಈ ಸೆಪ್ಟಿಕ್‌ ಟ್ಯಾಂಕನ್ನು ನಿರ್ಮಿಸಲಾಗಿದೆ. ಬಾಲಕಿ ಅಂಗನವಾಡಿಯ ತರಗತಿಯಿಂದ ಹೊರಗೆ ಬಂದು ಆಟವಾಡುತ್ತಿದ್ದ ವೇಳೆ ಆಯತಪ್ಪಿ ಸೆಪ್ಟಿಕ್‌ ಟ್ಯಾಂಕ್‌ಗೆ ಬಿದ್ದಿದ್ದಾಳೆ ಎನ್ನಲಾಗಿದೆ.

ಮಗು ಟ್ಯಾಂಕ್‌ಗೆ ಬಿದ್ದಿದ್ದನ್ನು ತಿಳಿದ ಊರಿನವರು ದೌಡಾಯಿಸಿ ಬಂದಿದ್ದು ಎಲ್ಲರೂ ಸೇರಿ ಮೇಲೆತ್ತಿದರು. ಆದರೆ, ಅಷ್ಟು ಹೊತ್ತಿಗೆ ಮಗುವಿನ ಪ್ರಾಣಪಕ್ಷಿ ಹಾರಿ ಹೋಗಿತ್ತು.

ಅಂಗನವಾಡಿ ಸಿಬ್ಬಂದಿ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿದೆ ಎಂದು ಊರಿನವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಬಂಧಿಕರು ಧಾವಿಸಿ ಬಂದಿದ್ದು ಅವರ ಆಕ್ರಂದನ ಮುಗಿಲು ಮುಟ್ಟಿದೆ.

ಔರಾದ ಪೋಲಿಸ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.

ಇದನ್ನೂ ಓದಿ : Heart Attack: ಶಾಲೆಯಲ್ಲಿ ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಕುಸಿದು ಬಿದ್ದು ಶಿಕ್ಷಕ ಸಾವು

Exit mobile version