Karnataka Rajyotsava : ಕನ್ನಡ ರಾಜ್ಯೋತ್ಸವ ಆಮಂತ್ರಣ ಪತ್ರಿಕೆಯಲ್ಲಿ ಅನ್ನದಾನೀಶ್ವರ ಶ್ರೀಗಳಿಗೆ ಅಪಮಾನ; ಡಿಸಿಗೆ ಮನವಿ - Vistara News

ಕರ್ನಾಟಕ

Karnataka Rajyotsava : ಕನ್ನಡ ರಾಜ್ಯೋತ್ಸವ ಆಮಂತ್ರಣ ಪತ್ರಿಕೆಯಲ್ಲಿ ಅನ್ನದಾನೀಶ್ವರ ಶ್ರೀಗಳಿಗೆ ಅಪಮಾನ; ಡಿಸಿಗೆ ಮನವಿ

Karnataka Rajyotsava : ಕನ್ನಡ ರಾಜ್ಯೋತ್ಸವ ಆಮಂತ್ರಣ ಪತ್ರಿಕೆಯಲ್ಲಿ ಮುಂಡರಗಿ ಸಂಸ್ಥಾನಮಠದ ಜ.ನಾಡೋಜ ಡಾ.ಅನ್ನದಾನೀಶ್ವರ ಮಹಾಶಿವಯೋಗಿಗಳ ಹೆಸರನ್ನು ಕೊನೆಯಲ್ಲಿ ಹಾಕಿ ಅವಮಾನ ಮಾಡಲಾಗಿದೆ ಎಂದು ಭಕ್ತವೃಂದ ಆಕ್ರೋಶಗೊಂಡಿದೆ. ಈ ಸಂಬಂಧ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಮುಂದೆ ಇಂತಹ ಪ್ರಮಾದ ಆಗದಂತೆ ಕ್ರಮ ವಹಿಸಲು ಒತ್ತಾಯಿಸಿವೆ.

VISTARANEWS.COM


on

Mundaragi Dr Annadaneshwara Mahashivayogi Swamiji
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗದಗ: ಕನ್ನಡ ಸಾಹಿತ್ಯ ಲೋಕಕ್ಕೆ ಇಡೀ ಜೀವನವನ್ನೇ ಸವೆಸಿದ, ನಡೆದಾಡುವ ವಿಶ್ವವಿದ್ಯಾಲಯವೆಂದೇ ಖ್ಯಾತಿ ಪಡೆದಿರುವ ಹಿರಿಯ ಮಠಾಧೀಶರಾದ ಮುಂಡರಗಿ ಸಂಸ್ಥಾನಮಠದ ಜ. ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳಿಗೆ (Dr Annadaneshwara Mahashivayogi Swamiji) ಮುಂಡರಗಿ ತಾಲೂಕು ಆಡಳಿತವು ಅಗೌರವ ತೋರಿದೆ ಎಂದು ಜನಾಕ್ರೋಶ ವ್ಯಕ್ತವಾಗಿದೆ. ನವೆಂಬರ್‌ 1ರಂದು ತಾಲೂಕು ಆಡಳಿತದ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ (Karnataka Rajyotsava) ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಮಹಾ ಸ್ವಾಮೀಜಿಯವರ ಹೆಸರನ್ನು ಸಾಮಾನ್ಯರ ಸಾಲಿನಲ್ಲಿ ಮುದ್ರಣ ಮಾಡಿರುವುದು ಈಗ ತಾಲೂಕು ಜನತೆಯ ಅಸಮಾಧಾನಕ್ಕೆ ಕಾರಣವಾಗಿದೆ. ಇದು ಸ್ವಾಮೀಜಿಯವರಿಗೆ ತೋರಿದ ಅಗೌರವ ಎಂದು ಆಕ್ರೋಶವನ್ನು ಹೊರಹಾಕಿದ್ದಾರೆ. ಅಲ್ಲದೆ, ಮುಂದೆ ಇಂತಹ ಅಚಾತುರ್ಯ ನಡೆಯದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳಿಗೂ ಮನವಿ ಸಲ್ಲಿಸಲಾಗಿದೆ.

ಗದಗ ಜಿಲ್ಲೆ ಮುಂಡರಗಿ ಸಂಸ್ಥಾನಮಠದ ಜ.ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ನಡೆದಾಡುವ ವಿಶ್ವವಿದ್ಯಾಲಯವೆಂದೇ ಖ್ಯಾತಿ ಪಡೆದಿದ್ದಾರೆ.ನೂರಾರು ಕೃತಿಗಳ ರಚನೆ, ಪ್ರಕಟಣೆ ಸೇರಿದಂತೆ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಶ್ರೀಗಳ ಕೊಡುಗೆ ಅನನ್ಯವಾಗಿದೆ.

Mundaragi Dr Annadaneshwara Mahashivayogi Swamiji
Mundaragi Dr Annadaneshwara Mahashivayogi Swamiji

ಇದನ್ನೂ ಓದಿ: Fraud Case : ಎನ್ವಿ ಗ್ರೀನ್ ಕಂಪನಿ ಮಾಲೀಕನ ವಿರುದ್ಧ ಎಫ್ಐಆರ್; ಕೋಟಿ ವಂಚಿಸಿದ್ರಾ ಅಶ್ವತ್ಥ್‌ ಹೆಗ್ಡೆ?

ಡಾ. ಅನ್ನದಾನೀಶ್ವರ ಶ್ರೀಗಳು ಮಠಾಧೀಶರಾದರೂ ಧಾರ್ಮಿಕ ಕ್ಷೇತ್ರದ ಜತೆ ಜತೆಗೆ ಶಿಕ್ಷಣ, ಸಾಹಿತ್ಯ, ಕೃಷಿ, ಸಮಾಜ ಸೇವೆ, ವಿಜ್ಞಾನ, ಆರೋಗ್ಯ ಮೊದಲಾದ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಶ್ರೀಗಳು ರಚಿಸಿರುವ ಗ್ರಂಥಗಳು ಇಂಗ್ಲಿಷ್ ಭಾಷೆ ಸೇರಿದಂತೆ ಹಲವು ಭಾಷೆಗಳಿಗೆ ಭಾಷಾಂತರಗೊಂಡಿವೆ. ಡಾ. ಅನ್ನದಾನೀಶ್ವರ ಸ್ವಾಮೀಜಿಗಳ ಸಾಹಿತ್ಯ ಕೃಷಿಯನ್ನು ಪರಿಗಣಿಸಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯದ ವತಿಯಿಂದ ನಾಡೋಜ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಅಲ್ಲದೆ, ಹಲವಾರು ಪ್ರಶಸ್ತಿ ಪುರಸ್ಕಾರಗಳು ಶ್ರೀಗಳನ್ನು ಅರಸಿ ಬಂದಿವೆ.

Mundaragi Dr Annadaneshwara Mahashivayogi Swamiji
ತಾಲೂಕು ಆಡಳಿತಕ್ಕೆ ಮನವಿ ನೀಡಿದ ಭಕ್ತ ವೃಂದ

ಮಹಿಳಾ ವಿವಿಯಲ್ಲಿ ಜಗದ್ಗುರು ಅನ್ನದಾನೀಶ್ವರ ಅಧ್ಯಯನ ಪೀಠ

ಡಾ. ಅನ್ನದಾನೀಶ್ವರ ಶ್ರೀಗಳ ಸಮಗ್ರ ಸಾಹಿತ್ಯದ ಮೇಲೆ 19 ಸಂಪುಟಗಳು ಬಿಡುಗಡೆಗೊಂಡಿದ್ದು, ಶ್ರೀಗಳ ಸಾಹಿತ್ಯದ ಮೇಲೆ ಈಗಾಗಲೇ ಐದು ಜನ ಪಿಎಚ್.ಡಿ ಪದವಿ ಹಾಗೂ ಹಲವು ಜನ ಎಂಫಿಲ್ ಪದವಿ ಪಡೆದಿದ್ದಾರೆ. ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಜಗದ್ಗುರು ಅನ್ನದಾನೀಶ್ವರ ಅಧ್ಯಯನ ಪೀಠವನ್ನು ತೆರೆಯಲಾಗಿದೆ‌.

ಮುಂಡರಗಿಗೆ ನೀಡಿದ ಕೊಡುಗೆ ಅನನ್ಯ

ಇದೇ ಮುಂಡರಗಿ ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ತಿನ ಭವನಕ್ಕೆ, ವಿಜ್ಞಾನ ಭವನಕ್ಕೆ ಹಾಗೂ ಆಸ್ಪತ್ರೆ, ಕ್ರೀಡಾಂಗಣ, ಸೇರಿದಂತೆ ಹಲವು ಗ್ರಾಮಗಳಲ್ಲಿನ ಶಾಲಾ ಕಾಲೇಜು, ವಸತಿ ನಿಲಯದ ಕಟ್ಟಡಗಳಿಗೆ ಉಚಿತವಾಗಿ ಭೂಮಿ ಸೇರಿದಂತೆ ಹಣದ ಸಹಾಯ, ಸಹಕಾರವನ್ನು ಡಾ. ಅನ್ನದಾನೀಶ್ವರ ಸ್ವಾಮೀಜಿಗಳು ನೀಡಿದ್ದಾರೆ.

ಆಮಂತ್ರಣ ಪತ್ರಿಕೆಯಲ್ಲಿ ಕೊನೆಯ ಸಾಲು!

ಈಗ ಮುಂಡರಗಿ ತಾಲೂಕು ಆಡಳಿತ ವ್ಯವಸ್ಥೆ ಹಾಗೂ ತಾಲೂಕು ರಾಜ್ಯೋತ್ಸವ ಸಮಿತಿಯು ಡಾ. ಅನ್ನದಾನೀಶ್ವರ ಶ್ರೀಗಳ ಹೆಸರನ್ನು ಕೊನೆಯ ಸಾಲಿನಲ್ಲಿ ಹಾಕಿ ಪ್ರಮಾದ ಎಸಗಿದೆ. ಶ್ರೀಗಳ ಹೆಸರನ್ನು ಕರ್ನಾಟಕ ರಾಜ್ಯೋತ್ಸವದ ಸಂಭ್ರಮದ ಆಮಂತ್ರಣ ಪತ್ರಿಕೆಯಲ್ಲಿ ಮೊದಲಿನ ಸಾನಿಧ್ಯ ಸ್ಥಾನವನ್ನು ನೀಡುವುದು ಇದುವರೆಗೆ ನಡೆದುಕೊಂಡು ಬಂದ ಪದ್ಧತಿಯಾಗಿತ್ತು. ಆದರೆ, ಈಗ ಆಮಂತ್ರಣ ಪತ್ರಿಕೆಯಲ್ಲಿ ಕಾರ್ಯಕ್ರಮದ ಪಟ್ಟಿಯ ಕೊನೇ ಸಾಲಿನಲ್ಲಿ ಮುದ್ರಿಸಿರುವುದು ಭಕ್ತವೃಂದದ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: Chaitra Fraud Case : ಚೈತ್ರಾ ವಂಚನೆ ಪ್ರಕರಣ; ಸಿಸಿಬಿ ತನಿಖೆ ಪೂರ್ಣ, ಮುಂದಿನ ವಾರ ಚಾರ್ಜ್‌ಶೀಟ್‌?

ಅಲ್ಲದೆ, ಈ ವಿಚಾರದ ಬಗ್ಗೆ ರಾಜ್ಯೋತ್ಸವಕ್ಕೆ ಆಗಮಿಸಿದ್ದ ಕಾರ್ಯಕ್ರಮದಲ್ಲಿಯೇ ಸ್ವತಃ ಡಾ. ಅನ್ನದಾನೀಶ್ವರ ಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದ್ದು, ಈ ಅಪಮಾನವು ಕನ್ನಡ ತಾಯಿಗೆ ಮಾಡಿರುವುದಾಗಿದೆ ಎಂದು ಹೇಳಿದ್ದರು.

ಹಾರಿಕೆ ಉತ್ತರ ನೀಡುತ್ತಿರುವ ಅಧಿಕಾರಿಗಳು

ಈ ವಿಚಾರಕ್ಕೆ ತಾಲೂಕಿನ ದಂಡಾಧಿಕಾರಿಯನ್ನು ಪ್ರಶ್ನೆ ಮಾಡಿದಾ, ಸರ್ಕಾರಿ ಶಿಷ್ಟಾಚಾರದ ಪ್ರಕಾರವಾಗಿ ಆಮಂತ್ರಣ ಪತ್ರಿಕೆಯನ್ನು ಮುದ್ರಿಸಲಾಗಿದೆ. ಕಳೆದ ವರ್ಷದ ಆಮಂತ್ರಣ ಪತ್ರಿಕೆಯನ್ನು ನೋಡಿಯೇ ಈ ವರ್ಷವೂ ಅದೇ ರೀತಿ ಮುದ್ರಿಸಲಾಗಿದೆ. ಮುಂಬರುವ ಸರ್ಕಾರಿ ಕಾರ್ಯಕ್ರಮಗಳಲ್ಲಿ ಜಿಲ್ಲಾಡಳಿತದೊಂದಿಗೆ ಚರ್ಚಿಸಿ ಶಿಷ್ಟಾಚಾರ ನಿಯಮವನ್ನು ಬದಲಾಯಿಸಿಕೊಳ್ಳುತ್ತೇವೆ ಎಂದು ಹಾರಿಕೆ ಉತ್ತರ ನಿಡಿದ್ದಾರೆ.

ಜಿಲ್ಲಾಧಿಕಾರಿಗೆ ಮನವಿ

ಈಗ ಡಾ. ಅನ್ನದಾನೀಶ್ವರ ಶ್ರೀಗಳ ಭಕ್ತವೃಂದದವರು ಜಿಲ್ಲಾಧಿಕಾರಿಗೆ ಮನವಿ ನೀಡಿದ್ದು, ಇನ್ನು ಮುಂದೆ ನಡೆಯುವ ಸರ್ಕಾರಿ ಕಾರ್ಯಕ್ರಮಗಳಲ್ಲಿ ಶ್ರೀಗಳಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಮನವಿ ಮಾಡಿದ್ದಾರೆ.

Mundaragi Dr Annadaneshwara Mahashivayogi Swamiji
ಜಿಲ್ಲಾಧಿಕಾರಿಗೆ ಮನವಿ ನೀಡಿದ ಭಕ್ತವೃಂದ

ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿ ಪತ್ರದಲ್ಲೇನಿದೆ?

ಮುಂಡರಗಿಯ ಪರಮ ಪೂಜ್ಯ ಜಗದ್ಗುರು ನಾಡೋಜ ಡಾ|| ಅನ್ನದಾನೀಶ್ವರ ಮಹಾಶಿವಯೋಗಿಗಳು ಈ ನಾಡು ಕಂಡ ಅಪರೂಪ ಜಗದ್ಗುರುಗಳು. ತ್ರಿಭಾಷಾ ಪಂಡಿತರಾದ ಜಗದ್ಗುರುಗಳು ಈ ನಾಡಿನ ಸರ್ವಶ್ರೇಷ್ಠ ಸಾಹಿತಿಗಳಾಗಿ ಒಂದು ನೂರಾ ಐವತ್ತಕ್ಕಿಂತ ಹೆಚ್ಚು ಕೃತಿಗಳನ್ನು ರಚಿಸಿ ಈ ನಾಡಿನ ಸಾಹಿತ್ಯ ದೇವಿಯ ಸಿರಿವಂತಿಕೆಯನ್ನು ಹೆಚ್ಚಿಸಿದ್ದಾರೆ. ಪೂಜ್ಯರ ಸಾಹಿತ್ಯವನ್ನು ಕುರಿತು ಐದು ಜನ ವಿದ್ವಾಂಸರು ಮಹಾಪ್ರಬಂಧಗಳನ್ನು ರಚಿಸಿ ವಿಶ್ವವಿದ್ಯಾಲಯಗಳಿಂದ ಡಾಕ್ಟರೇಟ್‌ ಪದವಿಯನ್ನು ಪಡೆದುಕೊಂಡಿದ್ದಾರೆ. ಶ್ರೀ ಮಠದಿಂದ ಸುಮಾರು ಎರಡು ನೂರಾ ಅರವತ್ತು ಪುಸ್ತಕಗಳನ್ನು ಪ್ರಕಟಿಸಿ ಸಾಹಿತ್ಯ ಜಗದ್ಗುರುಗಳು ಎಂಬ ಪ್ರಸಿದ್ಧಿಯನ್ನು ಪಡೆದುಕೊಂಡಿದ್ದಾರೆ.

ಶಿಕ್ಷಣ ಪ್ರೇಮಿಗಳಾದ ಶ್ರೀ ಜಗದ್ಗುರು ಅನ್ನದಾನೀಶ್ವರ ಮಹಾಸ್ವಾಮಿಗಳು ಶೈಕ್ಷಣಿಕವಾಗಿ ತೀರಾ ಹಿಂದುಳಿದ ಮುಂಡರಗಿಯಲ್ಲಿ ಆರಂಭ ಮಾಡಿ ಬಡ ಮಕ್ಕಳಿಗೆ ನಿರಂತರವಾಗಿ ಜ್ಞಾನದಾಸೋಹ ಹಾಗೂ ಉಚಿತ ಪ್ರಸಾದ ದಾಸೋಹವನ್ನು ನೀಡಿ ಈ ಭಾಗ ಬಡ ವಿದ್ಯಾರ್ಥಿಗಳ ಕಾಮಧೇನು ಕಲ್ಪವೃಕ್ಷವಾಗಿದ್ದಾರೆ. ಪೂಜ್ಯರ ಅಹರ್ನಿಶಿ ಪ್ರಯತ್ನದಿಂದ ಇಂದು ನಾಡಿನಾದ್ಯಾಂತ ಮೂವತ್ತೆರಡು ಅಂಗ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿರುವುದು ಅವರ ಶಿಕ್ಷಣ ಪ್ರೇಮ ಹಾಗೂ ಕಾರ್ಯದಕ್ಷತೆಗೆ ಕನ್ನಡಿ ಹಿಡಿಯುತ್ತದೆ. ಇಂತಹ ವಿದ್ಯಾ ಸಂಸ್ಥೆಗಳನ್ನು ಗ್ರಾಮೀಣ ಭಾಗದಲ್ಲಿ ನಡೆಸುವುದರಿಂದ ಅನೇಕರಿಗೆ ಉದ್ಯೋಗವನ್ನು ನೀಡಿ ಅವರ ಬಾಳಿಗೆ ದಾರಿ ದೀಪವಾಗಿದ್ದಾರೆ.

ಕೋಡಗೈ ದಾನಿಗಳಾದ ಪರಮ ಪೂಜ್ಯ ಜಗದ್ಗುರು ಅನ್ನದಾನೀಶ್ವರ ಮಹಾಶಿವಯೋಗಿಗಳು ಈ ಭಾಗದ ಸಮಗ್ರ ಅಭಿವೃದ್ಧಿಗಾಗಿ ಸದಾ ಧನಸಹಾಯ ನೀಡುವುದರೊಂದಿಗೆ ಸುಮಾರು ಒಂದು ನೂರು ಎಕರೆ ಭೂಮಿಯನ್ನು ದಾನ ಮಾಡಿ ಈ ಭಾಗದ ಪುಣ್ಯಪುರುಷರೆಂಬ ಖ್ಯಾತಿಯನ್ನು ಪಡೆದುಕೊಂಡಿದ್ದಾರೆ.

ಪರಮ ಪೂಜ್ಯ ಜಗದ್ಗುರು ಅನ್ನದಾನೀಶ್ವರ ಮಹಾಶಿವಯೋಗಿಗಳು ಎಂಬತ್ತರ ಇಳಿ ವಯಸ್ಸಿನಲ್ಲಿಯೂ ಧರ್ಮ ಪ್ರಸಾರ ಹಾಗೂ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ನಿರಂತರವಾಗಿ ತೊಡಗಿಸಿಕೊಂಡು ಭಕ್ತ ಜನರನ್ನು ಧರ್ಮದ ಹಾದಿಯಲ್ಲಿ ನಡೆಸಿದ್ದಾರೆ. ಸಮಾಜ ಸೇವೆಯೆ ಶಿವಪೂಜೆ ಎಂದು ಭಾವಿಸಿ ಹಗಲಿರುಳು ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತಿರುವುದು ಆದರ್ಶವಾಗಿದೆ.

ಇದನ್ನೂ ಓದಿ: Karnataka Politics : 6 ತಿಂಗಳಾದರೂ ಸುಧಾರಿಸದ ಸರ್ಕಾರ, ಹಿಡಿತವಿಲ್ಲದ ಸಿಎಂ; ಬಿಜೆಪಿಯಿಂದ ಉಗ್ರ ಹೋರಾಟ: ಬಿಎಸ್‌ವೈ

ಪರಮ ಪೂಜ್ಯ ಜಗದ್ಗುರು ಅನ್ನದಾನೀಶ್ವರ ಮಹಾಶಿವಯೋಗಿಗಳು ಸಾಹಿತ್ಯಿಕ, ಶೈಕ್ಷಣಿಕ, ಸಾಮಾಜಿಕ ಹಾಗೂ ಧಾರ್ಮಿಕ ಸಾಧನೆಗಳನ್ನು ಗುರುತಿಸಿ ಕರ್ನಾಟಕ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್‌ ಪದವಿಯನ್ನು ನೀಡಿದರೆ, ಹಂಪಿಯ ಕನ್ನಡ ವಿಶ್ವವಿದ್ಯಾಲಯ ನಾಡೋಜ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಕನ್ನಡ ನಾಡಿಗೆ ಇಂತಹ ಮಹದುಪಕಾರವನ್ನು ಮಾಡಿದ ಪರಮ ಪೂಜ್ಯ ಜಗದ್ಗುರುಗಳಿಗೆ 2023ರ ನವೆಂಬರ್‌ 1ರಂದು ಜರುಗಿದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸೂಕ್ತ ಸ್ಥಾನ ಮಾನವನ್ನು ನೀಡದೆ, ತಾಲೂಕು ಆಡಳಿತ ಅವರಿಗೆ ಅಗೌರವವನ್ನು ಮಾಡಿದೆ. ಈ ಕಾರ್ಯವೈಖರಿಯಿಂದ ಪೂಜ್ಯ ಜಗದ್ಗುರುಗಳ ಮನಸ್ಸಿಗೆ ನೋವಾಗಿದೆ. ಈ ಭಾಗದ ಭಕ್ತರಿಗೂ ಬಹಳಷ್ಟು ಬೇಸರವಾಗಿದೆ. ಆದ ಕಾರಣ ಭವಿಷ್ಯದಲ್ಲಿ ಇಂತಹ ಅವಘಡಗಳಿಗೆ ಅವಕಾಶ ಕೊಡದೆ ಸರ್ಕಾರಿ ಕಾರ್ಯಕ್ರಮಗಳನ್ನು ಸಂಯೋಜಿಸಬೇಕೆಂದು ಈ ಭಾಗದ ಸಮಗ್ರ ಜನತೆಯ ಪರವಾಗಿ ತಮ್ಮಲ್ಲಿ ನಮ್ರವಾಗಿ ವಿನಂತಿಸುತ್ತೇವೆ” ಎಂದು ಮುಂಡರಗಿಯ ಭಕ್ತ ಸಮೂಹವು ಜಿಲ್ಲಾಧಿಕಾರಿಗೆ ಮನವಿಯನ್ನು ಸಲ್ಲಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಗದಗ

Lakshmeshwara Town: ಗೋಸಾವಿ ಸಮಾಜದ ಮೇಲೆ ಲಾಠಿ ಚಾರ್ಜ್; ಅ.19ರಂದು ಲಕ್ಷ್ಮೇಶ್ವರ ಪಟ್ಟಣ ಬಂದ್‌ಗೆ ಶ್ರೀರಾಮಸೇನೆ ಕರೆ

Lakshmeshwara Town : ನ್ಯಾಯ ಕೇಳಲು ಹೋದ ಗೋಸಾವಿ ಸಮುದಾಯದ ಜನರಿಗೆ ಲಕ್ಷ್ಮೇಶ್ವರ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಲಕ್ಷ್ಮೇಶ್ವರ ಪಿಎಸ್ಐ ಈರಣ್ಣ ರಿತ್ತಿ ಅವರು ಏಕಪಕ್ಷಿಯಗಾಗಿ ನಡೆದುಕೊಂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಲಾಠಿ ಚಾರ್ಜ್ ಪ್ರಕರಣ ಖಂಡಿಸಿ, ಶ್ರೀರಾಮಸೇನೆ ಲಕ್ಷ್ಮೇಶ್ವರ ಬಂದ್‌ಗೆ ಕರೆ ನೀಡಿದ್ದು, ಅಕ್ಟೋಬರ್ 19 ರಂದು ಲಕ್ಷ್ಮೇಶ್ವರ ಪಟ್ಟಣ ಬಂದ್ ಮಾಡುವ ಮೂಲಕ ಪ್ರತಿಭಟನೆಗೆ ಮತ್ತಷ್ಟು ಬಿಸಿ‌ ಮುಟ್ಟಿಸಲು ಸಜ್ಜಾಗಿದೆ.

VISTARANEWS.COM


on

By

Gosavi samaj lathicharged Sri Ram Sene calls for bandh in Lakshmeshwara town on October 19
Koo

ಗದಗ: ಲಕ್ಷ್ಮೇಶ್ವರ ಪಟ್ಟಣವನ್ನು (Lakshmeshwara Town) ಬಂದ್‌ ಮಾಡುವುದು ಖಚಿತ ಎಂದು ಶ್ರೀರಾಮ ಸೇನೆ ಪಣ ತೊಟ್ಟಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಗೋಸಾವಿ ಸಮಾಜದ ಮೇಲೆ ಲಾಠಿ ಚಾರ್ಜ್ ಪ್ರಕರಣ ಖಂಡಿಸಿ, ಶ್ರೀರಾಮಸೇನೆ ಲಕ್ಷ್ಮೇಶ್ವರ ಬಂದ್‌ಗೆ ಕರೆ ನೀಡಿದ್ದು, ಅಕ್ಟೋಬರ್ 19 ರಂದು ಲಕ್ಷ್ಮೇಶ್ವರ ಪಟ್ಟಣ ಬಂದ್ ಮಾಡುವ ಮೂಲಕ ಪ್ರತಿಭಟನೆಗೆ ಮತ್ತಷ್ಟು ಬಿಸಿ‌ ಮುಟ್ಟಿಸಲು ಸಜ್ಜಾಗಿದೆ.

ಗುರುವಾರ ಗದಗನ ಪತ್ರಿಕಾ ಭವನದಲ್ಲಿ ಈ ಕುರಿತು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಶ್ರೀರಾಮಸೇನೆ ರಾಜ್ಯ‌ ಕಾರ್ಯದರ್ಶಿ ರಾಜು ಖಾನಪ್ಪನವರ, ದಸರಾ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರಿಂದ ಗೋಸಾವಿ ಸಮಾಜದ ಯುವಕರ ಮೇಲೆ ಹಲ್ಲೆಯಾಗಿದೆ. ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ ಗೋಸಾವಿ ಸಮಾಜದ ಮೇಲೆ ಲಾಠಿ ಚಾರ್ಜ್ ಆಗಿದೆ. ಇದೆಲ್ಲದಕ್ಕೂ‌ ಕಾರಣ, ಠಾಣೆಯ ಪಿಎಸ್ಐ ಈರಣ್ಣ ರಿತ್ತಿ ಆಗಿದ್ದು, ಅವರನ್ನು ಕೂಡಲೇ‌ ಅಮಾನತು ಮಾಡುವಂತೆ ಒತ್ತಾಯಿಸಿದರು.

ಇನ್ನು ಈ ಬಂದ್ ಕರೆ ವಿರೋಧಿಸಿ ಮುಸ್ಲಿಂ ಹಾಗೂ ಹಿಂದೂ ಸಮಾಜದ ಮುಖಂಡರು ಸುದ್ದಿಗೋಷ್ಠಿ ನಡೆಸಿ ವಿರೋಧ ಮಾಡಿದ್ದಾರೆ. ಆದರೆ ಅ.19 ರಂದು ಲಕ್ಷ್ಮೇಶ್ವರ ಬಂದ್ ಮಾಡೋದಕ್ಕೆ ಸ್ಥಳಿಯರೇ ನಮಗೆಲ್ಲ ಬೆಂಬಲ ನೀಡುತ್ತಿದ್ದಾರೆ. ಬಂದ್‌ಗೆ ವಿರೋಧಿಸುತ್ತಿರುವವರು ಯಾರೂ ಸಹ ಸ್ಥಳೀಯ ನಾಯಕರಲ್ಲ. ಅವರೆಲ್ಲ ಗ್ಯಾಂಬ್ಲರ್ ಗಳು. ಇವರು ಮಾಡುವ ದಂಧೆಗೆಲ್ಲ ಪಿಎಸ್ಐ ಈರಣ್ಣ ರಿತ್ತಿ ಬೆಂಬಲ ಇದೆ.‌ ಹೀಗಾಗಿ ಪಿಎಸ್‌ಐ ಪರವಾಗಿ ಇವರೆಲ್ಲ ನಿಂತಿದ್ದಾರೆ.‌ ಅದೇನೆ ಇರಲಿ,‌ ನಾವು ಮಾತ್ರ ಬಂದ್ ಮಾಡುವುದು ನೂರಕ್ಕೆ ನೂರರಷ್ಟು ಖಚಿತ ಎಂದು ಹೇಳಿದ್ದರು.

ಏನಿದು ಘಟನೆ?

ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ದಸರಾ ಅಂಗವಾಗಿ ದುರ್ಗಾದೇವಿ ಮೂರ್ತಿಯ ವಿಸರ್ಜನಾ ಮೆರವಣಿಗೆ ನಡೆಯುತ್ತಿತ್ತು. ಗೋಸಾವಿ ಸಮುದಾಯ ಸಂಭ್ರಮ ಸಡಗರದಿಂದ ಭಾಗಿಯಾಗಿದ್ದರು. ಈ ವೇಳೆ ಲಕ್ಷ್ಮೇಶ್ವರ ಪಟ್ಟಣದ ಮಾರ್ಕೆಟ್ ಪ್ರದೇಶದಲ್ಲಿ ಮೆರವಣಿಗೆ ಸಾಗುವ ವೇಳೆ,‌ ಅನ್ಯಕೋಮಿನ ಯುವಕರು ಬಂದು ಮೆರವಣಿಗೆಯಲ್ಲಿ ಭಾಗಿಯಾದ ಗೋಸಾವಿ ಯುವಕರ ನಡುವೆ ಗಲಾಟೆಯಾಗಿದೆ. ಆಗ ಗೋಸಾವಿ ಯುವಕರು ಕೇಸರಿ ಶಾಲನ್ನು ಹಿಡಿದು ಹಲ್ಲೆ ಮಾಡಿದ್ದಾರಂತೆ.

ಹೀಗಾಗಿ ಶನಿವಾರ ತಡವಾಗಿದ್ದಕ್ಕೆ ಮರುದಿನ ರವಿವಾರ, ಹಲ್ಲೆಗೊಳಗಾದ ಯುವಕರು ಹಾಗೂ ಗೋಸಾವಿ ಸಮುದಾಯದ ಜನರು ಲಕ್ಷ್ಮೇಶ್ವರ ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದರು. ಆಗ ಲಕ್ಷ್ಮೇಶ್ವರ ಪೊಲೀಸರು ದೂರು ದಾಖಲು ಮಾಡಿಕೊಳ್ಳದೆ,‌ ಗೋಸಾವಿ ಸಮುದಾಯದ ಮೇಲೆ ಲಾಠಿ ಚಾರ್ಜ್ ಮಾಡಿದ್ದರಂತೆ. ಹೀಗಾಗಿ ಲಕ್ಷ್ಮೇಶ್ವರ ಪಟ್ಟಣದ ಶಿಗ್ಲಿ ಕ್ರಾಸ್ ಬಳಿ, ಗೋಸಾವಿ ಸಮುದಾಯದವರು ಲಕ್ಷ್ಮೇಶ್ವರ ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದ್ದರು.

ಲಕ್ಷ್ಮೇಶ್ವರ ಪೊಲೀಸರಿಂದ ನಮಗೆ ಅನ್ಯಾಯವಾಗಿದೆ, ನ್ಯಾಯ ಕೊಡಿಸಿ ಎಂದು ಒತ್ತಾಯ ಮಾಡಿದ್ದರು. ಇನ್ನು ನ್ಯಾಯ ಕೇಳಲು ಹೋದ ಗೋಸಾವಿ ಸಮುದಾಯದ ಜನರಿಗೆ ಲಕ್ಷ್ಮೇಶ್ವರ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಲಕ್ಷ್ಮೇಶ್ವರ ಪಿಎಸ್ಐ ಈರಣ್ಣ ರಿತ್ತಿ ಅವರು ಏಕಪಕ್ಷಿಯಗಾಗಿ ನಡೆದುಕೊಂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಲಕ್ಷ್ಮೇಶ್ವರ ಪೊಲೀಸರಿಂದ ನಮಗೆ ಅನ್ಯಾಯವಾಗಿದೆ ಎಂದು ಗದಗ ಎಸ್ಪಿ ಕಚೇರಿಗೆ ಗೋಸಾವಿ ಸಮುದಾಯದ, ಯುವಕರು, ಮಹಿಳೆಯರು, ಹಿರಿಯರು ಆಗಮಿಸಿದ್ದರು.

ನಾವು ಬಡ ಜನರು, ಉದ್ಯೋಗ ಮಾಡಿಕೊಂಡು ಜೀವನ ನಡೆಸುತ್ತೇವೆ. ನಾವು ಹಿಂದೂಗಳು ಹೀಗಾಗಿ ಎಲ್ಲ ಹಬ್ಬಗಳನ್ನು ಆಚರಣೆ ಮಾಡುತ್ತೇವೆ. ಆದರೆ, ಅನ್ಯಕೋಮಿನ ಯುವಕರು ನಮ್ಮ ಯುವಕರು ಹಾಕಿದ ಕೇಸರಿ ಶಾಲ್ ಹಿಡಿದು ಎಳೆದಾಡಿ ಹಲ್ಲೆ ಮಾಡಿದ್ದಾರೆ. ಆದರೆ ಹಲ್ಲೆ‌ಗೊಳಗಾದವರು ನ್ಯಾಯ ಕೇಳಲು ಹೋದರೆ ಅವರ ಮೇಲೆಯೇ ಲಾಠಿ ಚಾರ್ಜ್ ಮಾಡಿದ್ದಾರೆ. ಯುವಕರು, ಮಹಿಳೆಯರಿಗೆ ಏಟು ಬಿದ್ದಿವೆ. ನಮಗೆ ನ್ಯಾಯ ಕೊಡಿಸಿ ಎಂದು ಗದಗ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ನೀಡಿ ಒತ್ತಾಯ ಮಾಡಿದ್ದರು.

ಆದರೆ ಪೊಲೀಸರ ಹೇಳಿಕೆ‌ ಪ್ರಕಾರ, ಠಾಣೆ ಎದುರು ಗುಂಪು ಚದುರಿಸುವ ಸಲುವಾಗಿ, ಲಾಠಿ ಚಾರ್ಜ್ ಮಾಡಲಾಗಿದೆ ಎಂದು ವಾದಿಸಿದ್ದಾರೆ. ಸದ್ಯ ಎರಡು ಕಡೆ ದೂರು- ಪ್ರತಿದೂರು ದಾಖಲಿಸಿಕೊಂಡು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದೀಗ ಮುಂದುವರೆದ ಭಾಗವಾಗಿ, ಅ.19 ರಂದು ಶ್ರೀರಾಮಸೇನೆ ಸಂಘಟನೆ, ಲಕ್ಷ್ಮೇಶ್ವರ ಪಟ್ಟಣ ಬಂದ್‌ಗೆ ಕರೆ ನೀಡಿದೆ.

Continue Reading

ಬೆಂಗಳೂರು

Murder Case: ಪ್ರಿಯಕರ ಜತೆ ಏಕಾಂತದಲ್ಲಿ ಇರುವಾಗಲೆ ಪತ್ನಿ ಲಾಕ್‌; ಇಬ್ಬರನ್ನು ಕೊಂದು ಪತಿ ಸೂಸೈಡ್‌

Murder Case: ಮಹಿಳೆಯೊಬ್ಬಳು ಪ್ರಿಯಕರ ಜತೆ ಏಕಾಂತದಲ್ಲಿ ಇರುವಾಗಲೆ ಪತಿಗೆ ಸಿಕ್ಕಿಬಿದ್ದಿದ್ದಾಳೆ. ಪತ್ನಿಯ ಕಳ್ಳಾಟಕ್ಕೆ ಸಿಟ್ಟಾದ ಪತಿ ಇಬ್ಬರನ್ನು ಕೊಂದು ಬಳಿಕ ತಾನೂ ನೇಣಿಗೆ ಶರಣಾಗಿದ್ದಾನೆ.

VISTARANEWS.COM


on

By

A man killed his wife and her lover then committed suicide
Koo

ಬೆಂಗಳೂರು: ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಪ್ರಿಯಕರನನ್ನು ಕೊಲೆ (Murder case) ಮಾಡಿದ್ದಾನೆ. ಪೈತಮ್ಮ (40), ಗಣೇಶ್ ಕುಮಾರ್ ಕೊಲೆಯಾದವರು. ಗೊಲ್ಲಬಾಬು ಕೊಲೆಗೈದು ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇವರೆಲ್ಲರೂ ಮೂಲತಃ ಆಂಧ್ರ ಪ್ರದೇಶದವರು ಎಂದು ತಿಳಿದು ಬಂದಿದೆ.

ಪೈತಮ್ಮ (40), ಗೊಲ್ಲಬಾಬು (45) ದಂಪತಿ ಕೆಲಸ ಅರಸಿ ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಬಂದಿದ್ದರು. ಕೆಲ ವರ್ಷಗಳಿಂದ ಬೆಂಗಳೂರಿನಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದರು. ಪತ್ನಿ ಪೈತಮ್ಮ ಮೇಲೆ ಆಗಾಗ ಗೊಲ್ಲಬಾಬು ಅನುಮಾನ ವ್ಯಕ್ತ ಪಡಿಸಿದ್ದ. ನಿನ್ನೆ ತಡರಾತ್ರಿಯಲ್ಲಿ ಗಣೇಶ್ ಕುಮಾರ್ ಜತೆಗಿದ್ದಾಗಲೇ ಪೈತಮ್ಮ ಪತಿಗೆ ಸಿಕ್ಕಿಬಿದ್ದಿದ್ದಳು.

ಮತ್ತೊಬ್ಬನೊಟ್ಟಿಗೆ ಪತ್ನಿಯನ್ನು ಕಂಡೊಡನೆ ಸಿಟ್ಟಾದ ಗೊಲ್ಲಬಾಬು ಅಲ್ಲೇ ಇದ್ದ ಮರದ ರಿಪೀಸ್‌ನಿಂದ ಹಲ್ಲೆ ನಡೆಸಿ, ಇಬ್ಬರನ್ನು ಕೊಲೆ ಮಾಡಿದ್ದಾನೆ. ನಂತರ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆರ್ ಬಿ ಐ ಲೇಔಟ್ ಸಮೀಪದ ಸೋಮೇಶ್ವರ ಬಡಾವಣೆಯ ನಿರ್ಮಾಣ ಹಂತದ ‌ಕಟ್ಟಡದಲ್ಲಿ ಈ ಕೃತ್ಯ ನಡೆದಿದೆ.

ಕೋಣನಕುಂಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

Continue Reading

ಬೆಂಗಳೂರು

Bengaluru Airport : ಬೆಂಗಳೂರು ಏರ್‌ಪೋರ್ಟ್‌ನ 17.7 ಎಕರೆಗಳಲ್ಲಿ ತಲೆ ಎತ್ತಲಿದೆ ಬಿಸಿನೆಸ್‌ ಪಾರ್ಕ್‌

Bengaluru Airport : ಬೆಂಗಳೂರು ಏರ್‌ಪೋರ್ಟ್ ಸಿಟಿ ಲಿಮಿಟೆಡ್ (BACL) ಬೆಂಗಳೂರು ಏರ್‌ಪೋರ್ಟ್ ಸಿಟಿಯಲ್ಲಿ 2 ದಶಲಕ್ಷ ಚದರ ಅಡಿ ಪ್ರದೇಶದ ಬಿಸಿನೆಸ್ ಪಾರ್ಕ್ ತೆರೆಯಲು ಮೊದಲ ಹೆಜ್ಜೆ ಇಟ್ಟಿದೆ.

VISTARANEWS.COM


on

By

ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನ (BIAL) ಅಂಗ ಸಂಸ್ಥೆಯಾದ (Bengaluru Airport) ಬೆಂಗಳೂರು ಏರ್‌ಪೋರ್ಟ್ ಸಿಟಿ ಲಿಮಿಟೆಡ್ (BACL) ನ ಮಹತ್ವಾಕಾಂಕ್ಷಿ ಯೋಜನೆಯಾದ “ಬಿಸಿನೆಸ್‌ ಪಾರ್ಕ್‌” ತೆರೆಯಲು 2 ದಶಲಕ್ಷ ಚದರ ಅಡಿ ಪ್ರದೇಶವನ್ನು ತನ್ನದಾಗಿಸಿಕೊಳ್ಳುವ ಮೂಲಕ ಈ ಯೋಜನೆಯತ್ತ ತನ್ನ ಮೊದಲ ಹೆಜ್ಜೆಯನ್ನು ಇಟ್ಟಿದೆ.

ಜಾಗತಿಕ ಸಾಮರ್ಥ್ಯ ಕೇಂದ್ರ (ಗ್ಲೋಬಲ್ ಕೆಪ್ಯಾಸಿಟಿ ಸೆಂಟರ್,ಜಿಸಿಸಿ) ಗಳಲ್ಲೇ ಬೆಂಗಳೂರನ್ನು ಜಾಗತಿಕ ಕೇಂದ್ರವನ್ನಾಗಿಸುವ ಗುರಿಯನ್ನು ಹೊಂದಲಾಗಿದ್ದು, ಇದರ ಭಾಗವಾಗಿ ಬೃಹತ್‌ ಬಿಸಿನೆಸ್‌ ಪಾರ್ಕ್‌ ತೆರೆಯಲಾಗುತ್ತಿದೆ. ಇದರಿಂದ ಒಟ್ಟು 3.5 ಲಕ್ಷ ಉದ್ಯೋಗ ಸೃಷ್ಟಿಗೆ ಹಾಗೂ ಆರ್ಥಿಕತೆಗೆ 50 ಶತಕೋಟಿ ಡಾಲರ್‌ ಕೊಡುಗೆ ನೀಡಲಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (BLR ವಿಮಾನ ನಿಲ್ದಾಣ) ಆವರಣದ್ಲಲಿರುವ ಬೆಂಗಳೂರು ವಿಮಾನ ನಿಲ್ದಾಣ ನಗರವನ್ನು ವಿಶ್ವ ದರ್ಜೆಯ ಮಿಶ್ರ-ಬಳಕೆಯ ತಾಣವಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಈ ವಿಮಾನ ನಿಲ್ದಾಣ ನಗರದಲ್ಲಿ ಪ್ರಮುಖವಾಗಿ ವ್ಯಾಪಾರ, ಉದ್ಯಾನವನಗಳು, ಶಿಕ್ಷಣ ಮತ್ತು ಆರೋಗ್ಯ ಕೇಂದ್ರಗಳು, ಸಂಶೋಧನೆ ಮತ್ತು ಅಭಿವೃದ್ಧಿ (ಆರ್ & ಡಿ) ಕೇಂದ್ರಗಳು ಮತ್ತು ವಿವಿಧ ಮನರಂಜನಾ ಹಾಗೂ ಆತಿಥ್ಯ ತಾಣಗಳು ತಲೆಯೆತ್ತಲಿದೆ. ಈ ನಗರವು ಸುಸ್ಥಿರ, ಸ್ಮಾರ್ಟ್, ಆಕರ್ಷಕ ನಗರಾಭಿವೃದ್ಧಿಯಿಂದ ಅಂತಾರಾಷ್ಟ್ರೀಯ ಹೆಬ್ಬಾಗಿಲಾಗಿ ಈ ನಗರ ಕಾರ್ಯನಿರ್ವಹಿಸಲು ಸಿದ್ಧವಾಗುತ್ತಿದೆ.

Construction of Business Park of Bangalore Airport City Limited a subsidiary of Bangalore International Airport Limited
Construction of Business Park of Bangalore Airport City Limited a subsidiary of Bangalore International Airport Limited

ಈ ಬ್ಯುಸಿನೆಸ್ ಪಾರ್ಕ್ ಅನ್ನು 17.7 ಎಕರೆಗಳಲ್ಲಿ ನಿರ್ಮಿಸಲಾಗುತ್ತಿರುವ ಈ ಬಿಸಿನೆಸ್ ಪಾರ್ಕ್, ನಾಲ್ಕು ಬ್ಲಾಕ್‌ಗಳನ್ನು ಒಳಗೊಂಡಿದ್ದು, ಪ್ರತಿ ಬ್ಲಾಕ್‌ 0.5 ಮಿಲಿಯನ್ ಚದರ ಅಡಿ ನಗರ ಅರಣ್ಯದೊಳಗೆ ಮೂಡಿಬರಲಿದೆ. ಬಯೋಫಿಲಿಕ್ ವಿನ್ಯಾಸವು ಸೊಂಪಾದ ಉದ್ಯಾನಗಳು, ಬಾಲ್ಕನಿಗಳು ಮತ್ತು ಹಸಿರಿನಿಂದ ಕೂಡಿರುವ ಸ್ಥಳಗಳನ್ನು ಒಳಗೊಂಡಿದ್ದು, ಈ ಮೂಲಕ ವ್ಯಾಪಾರ ವಹಿವಾಟನ್ನು ಇನ್ನಷ್ಟು ಆಸಕ್ತಿದಾಯಗೊಳಿಸುವ ಉದ್ದೇಶವನ್ನು ಹೊಂದಿದೆ.

ಬಿಎಸಿಎಲ್‌ನ ಕಾರ್ಯನಿರ್ವಾಹಕ ನಿರ್ದೇಶಕ ಮತ್ತು ಸಿಇಒ ರಾವ್ ಮುನುಕುಟ್ಲ ಮಾತನಾಡಿ, “ಬೆಂಗಳೂರು ವಿಶ್ವದ ಜಿಸಿಸಿ ರಾಜಧಾನಿಯಾಗಿ ಬೆಳೆಯುತ್ತಿದೆ. ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಾಹನ ಮತ್ತು ಏರೋಸ್ಪೇಸ್‌ ಕ್ಷೇತ್ರದಲ್ಲಿ ಶೇ. 36ರಷ್ಟು ಜಾಗತಿಕ ಸಾಮರ್ಥ್ಯ ಕೇಂದ್ರಗಳಿಗೆ (GCCs) ಬೆಂಗಳೂರು, ಭಾರತದ ಪ್ರಧಾನ ಕೇಂದ್ರವಾಗಿ ಹೊರಹೊಮ್ಮುತ್ತಿದೆ. ಬೆಂಗಳೂರು ಏರ್‌ಪೋರ್ಟ್ ಸಿಟಿಯಲ್ಲಿರುವ 2 ಮಿಲಿಯನ್ ಚದರ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಬಿಸಿನೆಸ್ ಪಾರ್ಕ್ ಸಾಕಷ್ಟು ನೆಟ್‌ವರ್ಕಿಂಗ್ ಅವಕಾಶಗಳು, ಸುಧಾರಿತ ಮೂಲಸೌಕರ್ಯಗಳು ಹಾಗೂ ಉನ್ನತ ದರ್ಜೆಯ ಸೌಕರ್ಯಗಳೊಂದಿಗೆ ಅಭಿವೃದ್ಧಿ ಹೊಂದುತ್ತದೆ ಎಂದು ಹೇಳಿದರು.

ಈ ನಮ್ಮ ಯೋಜನೆಯು ಕರ್ನಾಟಕ ರಾಜ್ಯದ ಪ್ರಸ್ತುತ ಜಿಸಿಸಿ ನೀತಿಯೊಂದಿಗೆ ಸಂಪೂರ್ಣವಾಗಿ ಹೊಂದಿಕೆಯಾಗುವ ಮೂಲಕ, ಬೆಂಗಳೂರನ್ನು ಅಂತಾರಾಷ್ಟ್ರೀಯ ವ್ಯವಹಾರಗಳಿಗೆ ಕೇಂದ್ರಬಿಂದುವಾಗಿಸಲಿದೆ. ವಿಮಾನ ನಿಲ್ದಾಣ ನಗರದ ಒಟ್ಟಾರೆ ಅಭಿವೃದ್ಧಿಯ ಶೇ.52 ರಷ್ಟು ಭಾಗವು ವ್ಯಾಪಾರ ಉದ್ಯಾನವನಗಳ (ಬಿಸಿನೆಸ್ ಪಾರ್ಕ್) ಜಾಲವನ್ನು ಹೊಂದಲಿದ್ದು, ಸಹಯೋಗ ಹಾಗೂ ನಾವಿನ್ಯತೆಗೆ ಪ್ರೋತ್ಸಾಹ ಕೊಡಲಿದೆ.

ಇದನ್ನೂ ಓದಿ: Jio Cloud PC : ಮನೆಯ ಟಿವಿಯನ್ನು ಕಂಪ್ಯೂಟರ್ ಆಗಿ ಪರಿವರ್ತಿಸಲಿದೆ ‘ಜಿಯೋ ಕ್ಲೌಡ್ ಪಿಸಿ’

ಮುಂದಿನ ದಿನಗಳಲ್ಲಿ ತಲೆ ಎತ್ತಲಿರುವ ಏರ್‌ಪೋರ್ಟ್ ವೆಸ್ಟ್ ಮೆಟ್ರೋ ನಿಲ್ದಾಣವು ಈ ಬಿಸಿನೆಸ್ ನ ಅತಿ ಸಮೀಪದಲ್ಲಿದ್ದು, ಬೆಂಗಳೂರಿನ ಸಿಟಿ ಸೆಂಟರ್‌ಗೆ ಸಂಪರ್ಕವನ್ನು ಕಲ್ಪಿಸಲಿದೆ. ಇದರಿಂದ ಉದ್ಯೋಗಿಗಳು, ಸಂದರ್ಶಕರಿಗೂ ಸಹ ವೇಗ ಮತ್ತು ಪರಿಸರ ಸ್ನೇಹಿ ಪ್ರಯಾಣವನ್ನು ಒದಗಿಸಲಿದೆ. ಬೆಂಗಳೂರು ವಿಮಾನ ನಿಲ್ದಾಣ ನಗರವು ಸುಧಾರಿತ ತಂತ್ರಜ್ಞಾನ ಕೇಂದ್ರವನ್ನು ರೂಪಿಸುತ್ತಿದ್ದು, ಇದರಲ್ಲಿ 3D ಮುದ್ರಣ ಸಂಸ್ಥೆ ಮತ್ತು ಹೈಟೆಕ್ ಕೇಂದ್ರ ಪಾಕಶಾಲೆಗಳು ಸೇರಿದಂತೆ ಹಲವು ನಾವಿನ್ಯತೆಯ ಕೇಂದ್ರಬಿಂದುವಾಗಿರಲಿದೆ ಎಂದರು.

ಈ ನಗರದಲ್ಲಿ ಮನರಂಜನೆ ಮತ್ತು ಆತಿಥ್ಯ ತಾಣಗಳು ತಲೆ ಎತ್ತುತ್ತಿದ್ದು, ವಿಮಾನ ನಿಲ್ದಾಣ ಪರಿಸರ ವ್ಯವಸ್ಥೆಯಲ್ಲಿ ಭಾರತದ ಪ್ರಪ್ರಥಮ ಕನ್ಸರ್ಟ್ ಅರೆನಾ, ಸಮಾವೇಶ ಮತ್ತು ಪ್ರದರ್ಶನ ಕೇಂದ್ರಗಳನ್ನು ಸಹ ಈ ಯೋಜನೆ ಒಳಗೊಂಡಿದೆ. ಈಗಾಗಲೇ ಏರ್‌ಪೋರ್ಟ್‌ ಆವರಣದಲ್ಲಿರುವ ಹೋಟೆಲ್‌ ತಾಜ್ ಬೆಂಗಳೂರು ಮತ್ತು ಪ್ರಸ್ತುತ ನಿರ್ಮಾಣ ಹಂತದಲ್ಲಿರುವ 775 ಕೊಠಡಿಗಳ ಕಾಂಬೋ ಹೋಟೆಲ್ (ವಿವಾಂಟಾ & ಜಿಂಜರ್) ಸೇರಿದಂತೆ ಏರ್‌ಪೋರ್ಟ್ ಸಿಟಿಯೊಳಗೆ 5,200 ಹೋಟೆಲ್ ಕೊಠಡಿಗಳನ್ನು ಒಳಗೊಂಡು ಬೃಹತ್‌ ಆತಿಥ್ಯ ತಾಣವಾಗಿ ಹೊರಹೊಮ್ಮಲಿದೆ.

ಏರ್‌ಪೋರ್ಟ್ ಸಿಟಿಯು ಅದ್ಭುತ ವಿನ್ಯಾಸದಿಂದ ರೂಪುಗೊಳ್ಳುತ್ತಿದ್ದು, ಇಡೀ ಆವರಣ ಶಕ್ತಿ-ತಟಸ್ಥವಾಗಿ ಕಾರ್ಯನಿರ್ವಹಿಸಿ, ನವೀಕರಿಸಬಹುದಾದ ಸಂಪನ್ಮೂಲಗಳಿಂದ ನಿರ್ಮಾಣಗೊಳ್ಳುತ್ತಿದ್ದು, ಐಜಿಬಿಸಿ ಯ ಗ್ರೀನ್ ಸಿಟೀಸ್ ಪ್ಲಾಟಿನಂ ಪ್ರಮಾಣೀಕರಣವನ್ನು ಗಳಿಸಿದೆ. ಅಷ್ಟೇ ಅಲ್ಲದೆ, ಬೃಹತ್‌ ಪ್ರಮಾಣದಲ್ಲಿ ಮಳೆನೀರು ಕೊಯ್ಲು ಅಳವಡಿಸಿಕೊಳ್ಳಲಾಗುತ್ತಿದ್ದು , ಇದರಿಂದ ವಿಮಾನ ನಿಲ್ದಾಣ ನಗರದ ನೀರಿನ ಅಗತ್ಯಗಳನ್ನು ಪೂರೈಸಲಿದೆ, ಈ ನಿಟ್ಟಿನಲ್ಲಿ ವಿಶ್ವ ಸಂಸ್ಥೆಯ ಪರಿಸರ ಸ್ನೇಹಿ, ಸುಸ್ಥಿರ ಅಭಿವೃದ್ಧಿ ಮಾರ್ಗದರ್ಶನದ ಜವಾಬ್ದಾರಿ ನಿರ್ವಹಣೆಯ ಧ್ಯೇಯದೊಂದಿಗೆ ಹೊಂದಿಸಲಾಗಿದೆ.

ಇನ್ನು, ಬೆಂಗಳೂರು ವಿಮಾನ ನಿಲ್ದಾಣ ನಗರವು ಅತಿ ನಿರೀಕ್ಷಿತ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರವನ್ನು ಬೃಹತ್‌ ಪ್ರಮಾಣದಲ್ಲಿ ವಿಸ್ತರಿಸುತ್ತಿದೆ, ಇದಕ್ಕಾಗಿ ಪ್ರಮುಖ ಅಂತಾರಾಷ್ಟ್ರೀಯ ಸಂಸ್ಥೆಗಳನ್ನು ಆಕರ್ಷಿಸುತ್ತಿದ್ದು, ಇದು ರಾಜ್ಯದ ಶೈಕ್ಷಣಿಕ ಮತ್ತು ಆರೋಗ್ಯ ಮೂಲಸೌಕರ್ಯವನ್ನು ಉನ್ನತೀಕರಿಸಲು ಲೈಫ್ ಸೈನ್ಸಸ್ ಪಾರ್ಕ್ ಅನ್ನು ಸ್ಥಾಪಿಸುತ್ತಿದೆ. BIAL ಅಕಾಡೆಮಿ ಮತ್ತು ಏರ್ ಇಂಡಿಯಾ ಅಕಾಡೆಮಿಯಂತಹ ಸಂಸ್ಥೆಗಳು ಮುಂದಿನ ಪೀಳಿಗೆಯ ವಾಯುಯಾನ ಮತ್ತು ಆತಿಥ್ಯ ವೃತ್ತಿಪರರಿಗೆ ತರಬೇತಿ ನೀಡಲಿವೆ.

ಬೆಂಗಳೂರು ವಿಮಾನ ನಿಲ್ದಾಣ ನಗರವು ಸುಸ್ಥಿರ, ನವೀನ ಮತ್ತು ಸಂಪರ್ಕಿತ ನಗರಾಭಿವೃದ್ಧಿಯ ದೃಷ್ಟಿಯನ್ನು ಸಾಕಾರಗೊಳಿಸುತ್ತಿದ್ದು, ಮಿಶ್ರ-ಬಳಕೆಯ ನಗರದ ಯೋಜನೆಗೆ ಜಾಗತಿಕವಾಗಿ ಮಾದರಿಯಾಗಲಿದೆ. ಈ ಪ್ರದೇಶದ ಆರ್ಥಿಕ ಬೆಳವಣಿಗೆಯ ಕೇಂದ್ರಭಾಗದಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (BLR ವಿಮಾನ ನಿಲ್ದಾಣ) ವಿಶ್ವಾದ್ಯಂತ ವೇಗವಾಗಿ ಬೆಳೆಯುತ್ತಿರುವ ವಿಮಾನ ನಿಲ್ದಾಣಗಳಲ್ಲಿ ಒಂದಾಗಿದೆ, ಕಳೆದ ವರ್ಷ 37.5 ದಶಲಕ್ಷ ರನ್ನು ನಿರ್ವಹಿಸಿದೆ. ವಿಮಾನ ನಿಲ್ದಾಣವು 2030 ರ ವೇಳೆಗೆ ತನ್ನ ಸಾಮರ್ಥ್ಯವನ್ನು 90 ದಶಲಕ್ಷ ಪ್ರಯಾಣಿಕರಿಗೆ ವಿಸ್ತರಿಸಲು ಯೋಜಿಸಲಾಗಿದೆ. ಈ ಅಭಿವೃದ್ಧಿ ಬೆಂಗಳೂರಿನ ಪಾತ್ರವನ್ನು ಜಾಗತಿಕ ವ್ಯವಹಾರಗಳಿಗೆ ಮತ್ತು ಸುಧಾರಿತ ಉತ್ಪಾದನೆಗೆ ಪ್ರಮುಖ ಕೇಂದ್ರವಾಗಿ ಮತ್ತಷ್ಟು ಗಟ್ಟಿಗೊಳಿ ಸಲು ಅನುವುಮಾಡಿಕೊಡಲಿದೆ. ವಿಶೇಷವಾಗಿ ಏರೋಸ್ಪೇಸ್ ವಲಯದಲ್ಲಿ, ಏರ್‌ಬಸ್ ಮತ್ತು ಬೋಯಿಂಗ್‌ನಂತಹ ಉದ್ಯಮದ ದೈತ್ಯರು ನಗರದ ನುರಿತ ಉದ್ಯೋಗಿಗಳಿಂದ ಲಾಭ ಪಡೆಯಲಿದ್ದಾರೆ.

Continue Reading

ಮಳೆ

Karnataka Rain : ನಿರಂತರ ಮಳೆಗೆ ಬೆಂಗಳೂರಿಗರು ಕಂಗಾಲು; ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Karnataka Rain : ನಿರಂತರ ಮಳೆಗೆ ಬೆಂಗಳೂರಿಗರು ಕಂಗಾಲಾಗಿದ್ದಾರೆ. ನಾಳೆ ಬುಧವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Rain
Koo

ಬೆಂಗಳೂರು: ಬೆಂಗಳೂರಿನಲ್ಲಿ ಬಿಟ್ಟು ಬಿಡದೆ ಸುರಿಯುತ್ತಿರುವ ನಿರಂತರ ಮಳೆಗೆ (Karnataka Rain) ಜನರು ಕಂಗಲಾಗಿದ್ದಾರೆ. ಹೀಗಾಗಿ ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ (School Holidays) ನಾಳೆ (ಬುಧವಾರ) ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರ ಡಿಸಿ ಜಗದೀಶ್ ಮಾಹಿತಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ನಾಳೆ ಒಂದು ದಿನ ರಜೆ ನೀಡಲು ನಿರ್ಧಾರ ಮಾಡಲಾಗಿದೆ. ಮಳೆಯ ಸ್ಥಿತಿಗತಿ ನೋಡಿಕೊಂಡು ಮುಂದಿನ ತೀರ್ಮಾನ ಮಾಡಲಾಗುವುದು. ಖಾಸಗಿ ಹಾಗೂ ಸರ್ಕಾರಿ ಎರಡೂ ಶಾಲಾ ಕಾಲೇಜಿಗೆ ರಜೆ ನೀಡಲು ನಿರ್ಧಾರ ಮಾಡಲಾಗಿದೆ.

ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳೆಲ್ಲವೂ ಜಲಾವೃತಗೊಂಡಿದೆ. ವೈಟ್ ಫೀಲ್ಡ್‌, ಮಾರತಹಳ್ಳಿ, ಸರ್ಜಾಪುರ ಸುತ್ತಮುತ್ತ ಭಾರಿ ಮಳೆಯಾಗುತ್ತಿದೆ. ಮಳೆಯಿಂದ ರಸ್ತೆಗಳೆಲ್ಲ ಜಲಾವೃತಗೊಂಡಿದೆ. ಡ್ರೈನೇಜ್ ಪೈಪ್ ಹೊಡೆದು ರಸ್ತೆ ಮಧ್ಯೆ ಮೋರಿ ನೀರು ಹಾರಿಯುತ್ತಿದೆ. ಪರಿಣಾಮ ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು. ಇತ್ತ ಹಲಸೂರು ಸುತ್ತಮುತ್ತ ಧಾರಾಕಾರ ಮಳೆಯಾಗುತ್ತಿದ್ದು, ಗುಪ್ತ ಲೇಔಟ್‌ನಲ್ಲಿ ಮ್ಯಾನ್ ಹೋಲ್ ಉಕ್ಕಿ ಹರಿದಿದೆ. ಭಾರಿ ಮಳೆಗೆ ಬನಶಂಕರಿ ಸಿಂಡಿಕೇಟ್ ಕಾಲೋನಿ ಸಮೀಪ ಮರವೊಂದು ನೆಲಕ್ಕೆ ಉರುಳಿದೆ. ಅದೃಷ್ಟವಶಾತ್‌ ಮಳೆ ಕಾರಣಕ್ಕೆ ಜನರ ಓಡಾಟ ಇರಲಿಲ್ಲ ಹೀಗಾಗಿ ಅನಾಹುತ ಸಂಭವಿಸಿಲ್ಲ.

ಎಲ್ಲೆಲ್ಲಿ ಎಷ್ಟು ಪ್ರಮಾಣದಲ್ಲಿ ಮಳೆ

ಹಂಪಿ ನಗರ 26 ಮಿ.ಮೀ, ಕೆಂಗೇರಿ 25.5 ಮಿ.ಮೀ, ಮಾರುತಿ ಮಂದಿರ 25 ಮಿ.ಮೀ, ದೊರೆಸಾನಿಪಾಳ್ಯ 21.5 ಮಿ.ಮೀ, ರಾಜರಾಜೇಶ್ವರಿ ನಗರ 19.5 ಮಿ.ಮೀ, ನಾಯಂಡಹಳ್ಳಿ 17 ಮಿ.ಮೀ, ನಂದಿನಿ ಲೇಔಟ್​​ 16.5 ಮಿ.ಮೀ, ಬಿಟಿಎಂ ಲೇಔಟ್​​ 16.5 ಮಿ.ಮೀ ಮಳೆಯಾಗಿದೆ.

ಡಿಸಿ ಕಚೇರಿ ಆವರಣದಲ್ಲಿರುವ ಹೋಟೆಲ್‌ಗೆ ಮಳೆ ನೀರು ನುಗ್ಗಿದ್ದರೆ, ಗುಟ್ಟಹಳ್ಳಿ ಸರ್ಕಲ್ ಬಳಿ ಚರಂಡಿ ನೀರು ತುಂಬಿ ರಸ್ತೆ ಮೇಲೆ ಹರಿಯುತ್ತಿದೆ. ಮಾನ್ಯತಾ ಟೆಕ್ ಪಾರ್ಕ್‌ನ ರಸ್ತೆಗಳಲ್ಲಿ ಮಳೆ ನೀರು ಹೊಳೆಯಂತೆ ಹರಿಯುತ್ತಿದೆ. ಟೆಕ್ ಪಾರ್ಕ್‌ನ ರಸ್ತೆಗಳೆಲ್ಲ ಜಲಾವೃತಗೊಂಡಿದೆ. ಕೋಟಿ ಕೋಟಿ ಬೆಲೆ ಬಾಳುವ ಕಾರುಗಳು ನೀರಿನಲ್ಲಿ ಮುಳುಗಡೆಯಾಗಿದೆ.

ಬೆಳ್ಳಂದೂರು ಲೇಕ್ ರಸ್ತೆಯಲ್ಲಿ ಕೆಸರು ಮಯವಾಗಿತ್ತು. ದೊಡ್ಡ ದೊಡ್ಡ ಗುಂಡಿಗಳು ಸೃಷ್ಟಿಯಾಗಿದ್ದು, ಕೆಸರಿನ ರಸ್ತೆಯಲ್ಲಿ ಸಂಚಾರಿಸಲು ವಾಹನ ಸವಾರರು ಪರದಾಡಿದರು. ಸುತ್ತ 2 ಕಿಲೋ ಮೀಟರ್ ಸಂಚಾರ ಸಾಧ್ಯ ಆಗದೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಬೆಳಿಗ್ಗೆಯಿಂದ ಹಲವು ವಾಹನಗಳು ಕೆಟ್ಟು ನಿಂತು ಫಜೀತಿ ಉಂಟಾಗಿತ್ತು. ಆಳವಾದ ಗುಂಡಿ ಭಾಗಕ್ಕೆ ಬ್ಯಾರಿಕೇಡ್ ಅಳವಡಿಸಲಾಗಿತ್ತು. ರಸ್ತೆಯಲ್ಲಿ 4 ಅಡಿಯಷ್ಟು ನೀರು ನಿಂತಿತ್ತು. ಕೆ.ಆರ್ ವಿಧಾನಸಭಾ ಕ್ಷೇತ್ರದ ವಡ್ಡರಪಾಳ್ಯದ ಸಾಯಿ ಲೇಔಟ್‌ಗೆ ಮಳೆ ನೀರು ನುಗ್ಗಿದೆ. ಮಳೆ ನೀರಿನಿಂದ ಮನೆಗಳು ಜಲಾವೃತಗೊಂಡಿದ್ದವು.

karnataka Rain
karnataka Rain

ಬೆಂಗಳೂರಿನ ಶಿವಾಜಿನಗರದ, ಬ್ರಹ್ಮಕುಮಾರಿ ವೃತ್ತ , ಸೆಪ್ಪಿಂಗ್ ರಸ್ತೆ ಸಂಪೂರ್ಣ ಜಲಾವೃತವಾಗಿದೆ. ರಸ್ತೆಯಲ್ಲಿ ಮೊಣಕಾಲುದ್ದ ನೀರು ತುಂಬಿದ್ದು, ಅಂಗಡಿ ಮುಂಗಟ್ಟುಗಳಿಗೆ ದೇವಸ್ಥಾನಗಳಿಗೆ ನೀರು ನುಗ್ಗಿದೆ. ವಾಹನಗಳ ಇಂಜಿನ್‌ಗೆ ನೀರು ನುಗ್ಗಿ ವಾಹನಗಳು ಕೆಟ್ಟೋ ರಸ್ತೆಯಲ್ಲೇ ನಿಂತು ಹೋಗುತ್ತಿವೆ. ಪಾಟರಿ ಟೌನ್ ಬಳಿಯ ಗಾಂಧಿ ಗ್ರಾಮದ ರಸ್ತೆಯಿಂದ ಟ್ಯಾನಿರೋಡ್‌ಗೆ ಸಂಪರ್ಕಿಸುವ ರಸ್ತೆ ಕರೆಯಂತಾಗಿದೆ. ಯಲಹಂಕದಲ್ಲಿರುವ ಕೇಂದ್ರಿಯ ವಿಹಾರ ಅಪಾರ್ಟ್ಮೆಂಟ್ ಮತ್ತೆ ಜಲಾವೃತಗೊಂಡಿದೆ.

Continue Reading
Advertisement
Dina bhavishya
ಭವಿಷ್ಯ2 ಗಂಟೆಗಳು ago

Dina Bhavishya : ಅತಿಯಾದ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಪಿತೂರಿ ಮಾಡುವ ಜನರ ಬಗ್ಗೆ ಇರಲಿ ಎಚ್ಚರ

Gosavi samaj lathicharged Sri Ram Sene calls for bandh in Lakshmeshwara town on October 19
ಗದಗ17 ಗಂಟೆಗಳು ago

Lakshmeshwara Town: ಗೋಸಾವಿ ಸಮಾಜದ ಮೇಲೆ ಲಾಠಿ ಚಾರ್ಜ್; ಅ.19ರಂದು ಲಕ್ಷ್ಮೇಶ್ವರ ಪಟ್ಟಣ ಬಂದ್‌ಗೆ ಶ್ರೀರಾಮಸೇನೆ ಕರೆ

A man killed his wife and her lover then committed suicide
ಬೆಂಗಳೂರು20 ಗಂಟೆಗಳು ago

Murder Case: ಪ್ರಿಯಕರ ಜತೆ ಏಕಾಂತದಲ್ಲಿ ಇರುವಾಗಲೆ ಪತ್ನಿ ಲಾಕ್‌; ಇಬ್ಬರನ್ನು ಕೊಂದು ಪತಿ ಸೂಸೈಡ್‌

Parvati Nair to play dual role in suspense thriller un Paravail Tamil film
ಸಿನಿಮಾ20 ಗಂಟೆಗಳು ago

Parvati Nair : ಸಸ್ಪೆನ್ಸ್ ಥ್ರಿಲ್ಲರ್‌ ʻಊಣ್‌ ಪರವೈಲ್‌ʼ ತಮಿಳು ಚಿತ್ರದಲ್ಲಿ ಪಾರ್ವತಿ ನಾಯರ್‌ ದ್ವಿಪಾತ್ರದಲ್ಲಿ ಮಿಂಚಿಂಗ್‌

ಬೆಂಗಳೂರು22 ಗಂಟೆಗಳು ago

Bengaluru Airport : ಬೆಂಗಳೂರು ಏರ್‌ಪೋರ್ಟ್‌ನ 17.7 ಎಕರೆಗಳಲ್ಲಿ ತಲೆ ಎತ್ತಲಿದೆ ಬಿಸಿನೆಸ್‌ ಪಾರ್ಕ್‌

Jio Cloud PC to turn home TV into computer
ಹೊಸ ಸುದ್ದಿ23 ಗಂಟೆಗಳು ago

Jio Cloud PC : ಮನೆಯ ಟಿವಿಯನ್ನು ಕಂಪ್ಯೂಟರ್ ಆಗಿ ಪರಿವರ್ತಿಸಲಿದೆ ‘ಜಿಯೋ ಕ್ಲೌಡ್ ಪಿಸಿ’

Dina Bhavishya
ಭವಿಷ್ಯ23 ಗಂಟೆಗಳು ago

Dina Bhavishya : ಕುಟುಂಬದ ಸದಸ್ಯರಿಂದ ರಹಸ್ಯ ಸುದ್ದಿಯೊಂದು ಈ ರಾಶಿಯವರಿಗೆ ಅಚ್ಚರಿ ತರಲಿದೆ

dina bhavishya
ಭವಿಷ್ಯ2 ದಿನಗಳು ago

Dina Bhavishya : ಬಹುದಿನಗಳ ಕನಸು ನನಸಾಗುವ ಸಮಯವಿದು; ಹೊಸ ಅವಕಾಶಗಳು ಗರಿಗೆದರಲಿವೆ

karnataka Rain
ಮಳೆ3 ದಿನಗಳು ago

Karnataka Rain : ನಿರಂತರ ಮಳೆಗೆ ಬೆಂಗಳೂರಿಗರು ಕಂಗಾಲು; ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Actor Darshan
ಬೆಂಗಳೂರು3 ದಿನಗಳು ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬೇಲ್‌ ಕನಸು ನಚ್ಚು ನೂರು; ನಟ ದರ್ಶನ್‌ ಜಾಮೀನು ನಿರಾಕರಣೆಗೆ ಕೋರ್ಟ್‌ ಕೊಟ್ಟ 9 ಕಾರಣಗಳು

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌