Site icon Vistara News

Moral policing: ಚಿಕ್ಕಬಳ್ಳಾಪುರದಲ್ಲಿ ಮತ್ತೊಮ್ಮೆ ನೈತಿಕ ಪೊಲೀಸ್‌ಗಿರಿ; ವಿದ್ಯಾರ್ಥಿಗಳ ಮೇಲೆ ಹಲ್ಲೆ

Moral policing‌

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ (Moral policing) ಪ್ರಕರಣ ಬೆಳಕಿಗೆ ಬಂದಿದೆ. ಅನ್ಯಕೋಮಿನ ಯುವಕನ ಜತೆ ಯುವತಿ ಓಡಾಡುತ್ತಿದ್ದಳು ಎಂಬ ಕಾರಣಕ್ಕೆ ಕಿಡಿಗೇಡಿಗಳು ದಾಂಧಲೆ ನಡೆಸಿದ್ದಾರೆ.

ಚಿಂತಾಮಣಿ ನಗರದ ವಿವೇಕಾನಂದ ಕಾಲೇಜಿನಲ್ಲಿ ಓದುತ್ತಿರುವ ಬೇರೆ ಬೇರೆ ಕೋಮಿನ ವಿದ್ಯಾರ್ಥಿಗಳಿಬ್ಬರು, ಮೆಹಬೂಬ್ ನಗರದಲ್ಲಿ ತಿರುಗಾಡುತ್ತಿದ್ದರು. ಇದನ್ನು ಕಂಡ ಅನ್ಯಕೋಮಿನ ಯುವಕರು ವಿದ್ಯಾರ್ಥಿಗಳನ್ನು ಅಡ್ಡಗಟ್ಟಿದ್ದಾರೆ. ಬಳಿಕ ನೈತಿಕ ಪೊಲೀಸ್‌ಗಿರಿ ಪ್ರದರ್ಶಿಸಿ ದೌರ್ಜನ್ಯ ಎಸಗಿದ್ದಾರೆ.

ನಾವಿಬ್ಬರು ಸ್ನೇಹಿತರು ಎಂದು ಅಂಗಲಾಚಿ ಬೇಡಿಕೊಂಡರೂ ಬಿಡದೆ ಅನ್ಯಕೋಮಿನ ಯುವಕರ ಗುಂಪು ಯುವಕ, ಯುವತಿ ಮೇಲೆ ಹಲ್ಲೆ ನಡೆಸಿದ್ದಾರೆ. ಚಿಕ್ಕಬಳ್ಳಾಪುರದ ಚಿಂತಾಮಣಿ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಗೋಬಿ ತಿನ್ನುತ್ತಿದ್ದವರನ್ನು ಥಳಿಸಿದ್ದ ಕಿಡಿಗೇಡಿಗಳು

ಈ ಹಿಂದೆ, ಚಿಕ್ಕಬಳ್ಳಾಪುರ ನಗರದ (Chikkaballapura news) ಗೋಪಿಕಾ ಚಾಟ್ಸ್‌ಗೆ ಹಿಂದು ಹುಡುಗ ಮತ್ತು ಮುಸ್ಲಿಂ ಹುಡುಗಿ ಜತೆಯಾಗಿ ಬಂದಿದ್ದರು ಎಂಬ ಕಾರಣಕ್ಕೆ ನೈತಿಕ ಪೊಲೀಸ್‌ಗಿರಿ (Moral Policing) ನಡೆಸಿದ್ದರು. ಅವರಿಬ್ಬರ ಮೇಲೆ ಹಲ್ಲೆ ನಡೆಸಿದವರಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದರು.

ಹಿಂದೂ ಯುವಕ ಮತ್ತು ಮುಸ್ಲಿಂ ಯುವತಿ ಹೋಟೆಲ್‌ ಒಂದಕ್ಕೆ ಬಂದಿದ್ದರು. ಆಕೆ ಬುರ್ಕಾ ಮತ್ತು ಹಿಜಾಬ್‌ ಧರಿಸಿಯೇ ಅಲ್ಲಿಗೆ ಆಗಮಿಸಿದ್ದಳು. ಇದನ್ನು ಅಲ್ಲಿನ ಸ್ಥಳೀಯ ಮುಸ್ಲಿಂ ಯುವಕರು ನೋಡಿದ್ದರು. ಮುಸ್ಲಿಂ ಯುವತಿಯ ಜತೆ ಬಂದಿರುವ ಹುಡುಗ ಹಿಂದೂನಾ ಮುಸ್ಲಿಮನಾ ಎಂದು ಅಲ್ಲಿದ್ದವರಿಗೆ ಕುತೂಹಲ ಮೂಡಿತ್ತು. ಅವರಿಬ್ಬರೂ ಒಳಗೆ ಹೋಗುತ್ತಿದ್ದಂತೆಯೇ ಮುಸ್ಲಿಂ ಯುವಕರು ಅಲ್ಲೇ ಅವರ ಆಸುಪಾಸಿನಲ್ಲಿ ಠಳಾಯಿಸಿದ್ದಾರೆ. ಅವರಿಬ್ಬರೂ ಒಂದು ಟೇಬಲ್‌ಗೆ ಹೋಗಿ ಕುಳಿತಾಗ ಇಬ್ಬರು ಹುಡುಗರು ಬಂದು ಹುಡುಗಿಯ ಜತೆಗೆ ಇರುವವನು ಯಾವ ಧರ್ಮ ಎಂದು ದೃಢಪಡಿಸಿಕೊಂಡಿದ್ದ.

ಹುಡುಗ ಹಿಂದು ಎಂದು ತಿಳಿಯುತ್ತಿದ್ದಂತೆಯೇ ಆತ ಆಸುಪಾಸಿನಲ್ಲಿದ್ದ ಅವನ ಟೀಮ್‌ಗೆ ವಿಷಯ ಮುಟ್ಟಿಸಿದ್ದು, ತಕ್ಷಣವೆ ಕೆಲವು ಮಂದಿ ಅಲ್ಲಿ ಸೇರಿಸಿದ್ದರು. ಮುಸ್ಲಿಂ ಹುಡುಗರು ಯುವಕನನ್ನು ಪ್ರಶ್ನಿಸುವುದರ ಜತೆ ಹಲ್ಲೆಗೆ ಯತ್ನಿಸಿದ್ದಾರೆ. ಒಂದು ಹಂತದಲ್ಲಿ ಯುವತಿ ಅವನು ನನ್ನ ಪರಿಚಿತ, ಅವನ ಜತೆಗೆ ಹೋಟೆಲ್‌ಗೆ ಬಂದರೆ ತಪ್ಪೇನು ಎಂದು ಪ್ರಶ್ನಿಸಿ ಕೋಪ ತೋರಿಸಿದ್ದಳು.

ಯುವತಿ, ಹಿಂದೂ ಯುವಕನ ಪರ ವಹಿಸಿ ಮಾತನಾಡಿದ್ದರಿಂದ ಯುವಕರು ಆಕ್ರೋಶಗೊಂಡು ಆಕೆಯನ್ನೂ ಅವಮಾನಿಸಲು ಯತ್ನಿಸಿದ್ದರು. ಕೊನೆಗೆ ಯುವತಿಯ ಬಾಯಲ್ಲಿ ಈ ರೀತಿ ಬೇರೆ ಧರ್ಮದವರ ಜತೆಗೆ ಹೋಟೆಲ್‌ಗೆ ಹೋಗಿದ್ದು ತಪ್ಪಾಯಿತು, ಇದನ್ನು ನಾನು ಹೃದಯಪೂರ್ವಕವಾಗಿ ಹೇಳುತ್ತಿದ್ದೇನೆ ಎಂದು ಹುಡುಗಿಯ ಬಾಯಲ್ಲಿ ಹೇಳಿಸುವಲ್ಲಿ ನೈತಿಕ ಪೊಲೀಸ್‌ಗಿರಿ ನಡೆಸಿದರು.

ಇದಾದ ಬಳಿಕ ಯುವತಿಯ ಕಡೆಯವರು ಚಿಕ್ಕಬಳ್ಳಾಫುರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತಕ್ಷಣವೇ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿ ನ್ಯಾಯಾಧೀಶರ ಗೃಹ ಕಚೇರಿಗೆ ಆರೋಪಿಗಳನ್ನು ಹಾಜರುಪಡಿಸಿದರು. ನ್ಯಾ. ಬಾಲಪ್ಪ ಅಪ್ಪಣ್ಣ ಜರಗು ಅವರು ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದರು. ಪೊಲೀಸರು IPC ಸೇಕ್ಷನ್ 354 A and D, 341, 323 , 153A , 504, 506 ಸೆಕ್ಷನ್ ಗಳಡಿ ಕೇಸು ದಾಖಲಿಸಿಕೊಂಡಿದ್ದರು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ನೈತಿಕ ಪೊಲೀಸ್‌ಗಿರಿ ಮರುಕಳುಹಿಸಿದೆ.

ಇದನ್ನೂ ಓದಿ: Crime News : ಹಾಸ್ಟೆಲ್‌ನಲ್ಲೇ ಯುವತಿಯ ಅತ್ಯಾಚಾರ, ಕೊಲೆ; ಹಳಿ ಮೇಲೆ ಪತ್ತೆಯಾಯ್ತು ಮತ್ತೊಂದು ಶವ!

ನೈತಿಕ ಪೊಲೀಸ್‌ಗಿರಿ ತಡೆಗೆ ಆ್ಯಂಟಿ ಕಮ್ಯುನಲ್ ವಿಂಗ್

ನೈತಿಕ ಪೊಲೀಸ್‌ಗಿರಿ (Moral policing) ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ (Anti communal wing) ಅನ್ನು ಸ್ಥಾಪಿಸಲಾಗುವುದು. ಮಂಗಳೂರು ಕಮೀಷನರೇಟ್‌ (Mangalore Commissionerate) ವ್ಯಾಪ್ತಿಯಲ್ಲಿ ಈ ನೂತನ ಪಡೆ ಅಸ್ಥಿತ್ವಕ್ಕೆ ಬರಲಿದೆ ಎಂದು ಮಂಗಳೂರಿನಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ (Dr G Parameshwar) ಘೋಷಣೆ ಮಾಡಿದ್ದರು. ಇದರ ನಡುವೆಯೂ ರಾಜ್ಯದಲ್ಲಿ ನೈತಿಕ ಪೊಲೀಸ್‌ಗಿರಿ ಮುಂದುವರಿದಿದೆ.‌

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version