Site icon Vistara News

ಜಸ್ಟ್‌ ಗುರಾಯಿಸಿದ್ದಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ; ಬಿಡಿಸಲು ಹೋದ ಐವರಿಗೆ ಗಂಭೀರ ಗಾಯ

ಚಿಕ್ಕನಾಯಕನಹಳ್ಳಿ

#image_title

ತುಮಕೂರು: ಚಿಕ್ಕನಾಯಕನಹಳ್ಳಿ ಪಟ್ಟಣದ ಜೋಗಿಹಳ್ಳಿ ಬಳಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಬೈಕ್‌ನಲ್ಲಿ‌ ತೆರಳುತ್ತಿದ್ದ ಭರತ್ ಎಂಬಾತನನ್ನು ಗಿರೀಶ್ ಎಂಬುವವನು ತಡೆದು ನಿಲ್ಲಿಸಿ ಹಲ್ಲೆ ಮಾಡಿದ್ದಾನೆ.

ಗಿರೀಶ್‌ ತಂಡ ಕಟ್ಟಿಕೊಂಡು ಭರತ್‌ನಿಗೆ ಯಾಕೆ ಗುರಾಯಿಸುತ್ತಿದ್ದೀಯಾ ಎಂದು ಹೇಳಿ ಏಕಾಏಕಿ ಹಲ್ಲೆ ಮಾಡಿದ್ದಾನೆ. ಬಳಿಕ ಎರಡು ಗುಂಪುಗಳ ನಡುವೆ ಇದೇ ವಿಚಾರಕ್ಕೆ ಮತ್ತೊಮ್ಮೆ ಮಾರಾಮಾರಿ ನಡೆದಿದೆ. ಈ ವೇಳೆ ಜಗಳ ಬಿಡಿಸಲು ಹೋದ ಐವರು ಗಂಭೀರ ಗಾಯಗೊಂಡಿದ್ದಾರೆ.

ಇದನ್ನೂ ಓದಿ: Accident Mystery: ದಾವಣಗೆರೆ ಬೈಕ್‌ ಅಪಘಾತಕ್ಕೆ ಟ್ವಿಸ್ಟ್‌; ಹೆದ್ದಾರಿಯಲ್ಲಿ ದರೋಡೆಗೆ ಯತ್ನಿಸಿದ್ದರಾ ಯುವಕರು?

ಪೊಲೀಸರು ಸ್ಥಳಕ್ಕಾಗಮಿಸಿ ಗಲಾಟೆ ಬಿಡಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಭರತ್, ಹರೀಶ್ ಇಬ್ಬರಿಗೂ ಗಂಭೀರ ಗಾಯವಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎರಡು ಗುಂಪುಗಳ ವಿರುದ್ಧವೂ ಪ್ರಕರಣ ದಾಖಲಾಗಿದೆ.

Exit mobile version