Site icon Vistara News

Appointment of Registrar: ರಾಜ್ಯದ 8 ವಿಶ್ವವಿದ್ಯಾಲಯಗಳಿಗೆ ನೂತನ ಕುಲಸಚಿವರ ನೇಮಕ

Appointment of new registrars for 8 universities in the karnataka

ಬೆಂಗಳೂರು: ರಾಜ್ಯ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿನ 8 ವಿಶ್ವವಿದ್ಯಾಲಯಗಳಿಗೆ ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ನೂತನ ಕುಲಸಚಿವರನ್ನು (ಮೌಲ್ಯಮಾಪನ) (Appointment of Registrar) ನೇಮಿಸಲಾಗಿದೆ. ಉನ್ನತ ಶಿಕ್ಷಣ ಇಲಾಖೆ ಹೊರಡಿಸಿರುವ ನೇಮಕಾತಿ ಆದೇಶದ ಸಂಪೂರ್ಣ ಮಾಹಿತಿ ಇಲ್ಲಿದೆ.

8 ವಿಶ್ವವಿದ್ಯಾಲಯಗಳ ನೂತನ ಕುಲಸಚಿವರ ಪಟ್ಟಿ

ಹಾಸನ ವಿಶ್ವವಿದ್ಯಾಲಯ– ಡಾ. ಪುಟ್ಟಸ್ವಾಮಿ, ಪ್ರಾಧ್ಯಾಪಕರು, ಹೇಮಗಂಗೋತ್ರಿ ಸ್ನಾತಕೋತ್ತರ ಕೇಂದ್ರ, ಮೈಸೂರು ವಿಶ್ವವಿದ್ಯಾಲಯ, ಹಾಸನ

ಚಾಮರಾಜನಗರ– ಡಾ. ಪಿ. ಮಾದೇಶ್‌, ಪ್ರಾಧ್ಯಾಪಕರು, ಭೂ ವಿಜ್ಞಾನ ಅಧ್ಯಯನ ವಿಭಾಗ, ಮೈಸೂರು ವಿಶ್ವವಿದ್ಯಾಲಯ, ಮೈಸೂರು

ಕೊಪ್ಪಳ ವಿಶ್ವವಿದ್ಯಾಲಯ– ಡಾ. ಕೆ. ವಿ. ಪ್ರಸಾದ್‌, ಪ್ರಾಧ್ಯಾಪಕರು, ಗಣಿತ ವಿಭಾಗ, ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯ, ಬಳ್ಳಾರಿ

ಹಾವೇರಿ ವಿಶ್ವವಿದ್ಯಾಲಯ– ಪ್ರೊ. ವಿಜಯಲಕ್ಷ್ಮೀ ತಿರ್ಲಾಪುರ, ಮುಖ್ಯಸ್ಥರು, ಆಂಗ್ಲ ವಿಭಾಗ ಮರಾಠಾ ಮಂಡಳ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯ, ಖಾನಾಪುರ, ಬೆಳಗಾವಿ

ಬಾಗಲಕೋಟೆ ವಿಶ್ವವಿದ್ಯಾಲಯ– ಡಾ. ಖಡ್ಕೆ ಉದಯಕುಮಾರ್, ಸಹ ಪ್ರಾಧ್ಯಾಪಕರು ಮತ್ತು ಅಧ್ಯಕ್ಷರು, ಭೌತಶಾಸ್ತ್ರ ವಿಭಾಗ, ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ, ಬಳ್ಳಾರಿ

ಕೊಡಗು ವಿಶ್ವವಿದ್ಯಾಲಯ– ಡಾ. ಸೀನಪ್ಪ, ಪ್ರಾಂಶುಪಾಲರು, ಸರ್ಕಾರಿ ಎಂಜಿನಿಯರಿಂಗ್ ಕಾಲೇಜು, ಮಾದಪಟ್ಟಣ, ಮಡಿಕೇರಿ ರಸ್ತೆ, ಕುಶಾಲನಗರ

ಬೀದರ್‌ ವಿಶ್ವವಿದ್ಯಾಲಯ– ಡಾ. ಪರಮೇಶ್ವರನಾಯ್ಕ್. ಬಿ, ಪ್ರಾಧ್ಯಾಪಕರು, ಸಸ್ಯಶಾಸ್ತ್ರ ವಿಭಾಗ, ಸಹ್ಯಾದ್ರಿ ವಿಜ್ಞಾನ ಕಾಲೇಜು, ಶಿವಮೊಗ್ಗ,

ಮೈಸೂರು ವಿಶ್ವವಿದ್ಯಾಲಯ- ಡಾ. ಕೆ.ಎಂ. ಮಹಾದೇವನ್, ಪ್ರಾಧ್ಯಾಪಕರು, ರಸಾಯನಶಾಸ್ತ್ರ ವಿಭಾಗ, ಕುವೆಂಪು ವಿಶ್ವವಿದ್ಯಾಲಯ, ಪಿಜಿ ಸೆಂಟರ್, ಕಡೂರು

ರಾಜ್ಯದ 7 ನೂತನ ವಿವಿಗಳಿಗೆ ಕುಲಪತಿಗಳ ನೇಮಕ

ಬೆಂಗಳೂರು: ರಾಜ್ಯದಲ್ಲಿ ನೂತನವಾಗಿ ಸ್ಥಾಪಿಸಿರುವ 7 ವಿಶ್ವವಿದ್ಯಾಲಯಗಳಿಗೆ ಕುಲಪತಿಗಳನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಹಾಗೂ ಬಾಗಲಕೋಟೆ ವಿಶ್ವವಿದ್ಯಾಲಯಗಳಿಗೆ ಚೊಚ್ಚಲ ಕುಲಪತಿಗಳನ್ನು (Vice Chancellor) ಮಾ.20ರಂದು ನೇಮಿಸಲಾಗಿದೆ.

ಇದನ್ನೂ ಓದಿ | Teacher Transfer : ಶಿಕ್ಷಕರ ವರ್ಗಾವಣೆಗೆ ಅನುಮತಿ ನೀಡುವಂತೆ ಚುನಾವಣಾ ಆಯೋಗಕ್ಕೆ ಶಿಕ್ಷಣ ಇಲಾಖೆ ಮನವಿ

ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾಹಿತಿ ನೀಡಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ಬಿ.ಕೆ. ರವಿ ಅವರನ್ನು ಕೊಪ್ಪಳ ವಿವಿ, ಬಾಗಲಕೋಟೆಯ ತೋಟಗಾರಿಕೆ ವಿವಿಯ ಡಾ. ಅಶೋಕ ಸಂಗಪ್ಪ ಆಲೂರು ಅವರನ್ನು ಕೊಡಗು ವಿವಿ, ಮೈಸೂರು ವಿವಿ ಮಾನವಶಾಸ್ತ್ರ ವಿಭಾಗದ ಡಾ. ಎಂ.ಆರ್‌. ಗಂಗಾಧರ ಅವರನ್ನು ಚಾಮರಾಜನಗರ ವಿವಿ, ಬೆಳಗಾವಿಯ ಕೆ. ಎಸ್‌. ಗೋಗಟೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಆನಂದ್‌ ಶರದ್‌ ದೇಶಪಾಂಡೆ ಅವರನ್ನು ಬಾಗಲಕೋಟೆ ವಿವಿ, ಕುವೆಂಪು ವಿವಿಯ ಡಾ. ಬಿ.ಎಸ್‌. ಬಿರಾದಾರ್‌ ಅವರನ್ನು ಬೀದರ್‌ ವಿವಿ, ಬಾಗಲಕೋಟೆಯ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್‌ ವಿಭಾಗದ ಡಾ.ಸುರೇಶ್‌ ಎಚ್‌. ಜಂಗಮಶೆಟ್ಟಿ ಅವರನ್ನು ಹಾವೇರಿ ವಿವಿ ಮತ್ತು ಧಾರವಾಡದ ಕರ್ನಾಟಕ ವಿವಿ ನಿವೃತ್ತ ಪ್ರೊಫೆಸರ್‌ ಆಗಿರುವ ಡಾ. ಟಿ.ಸಿ. ತಾರಾನಾಥ್‌ ಅವರನ್ನು ಹಾಸನ ವಿಶ್ವವಿದ್ಯಾಲಯದ ಕುಲಪತಿಗಳಾಗಿ ನೇಮಿಸಲಾಗಿದೆ ಎಂದು ಸಚಿವ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ನೂತನ 7 ವಿಶ್ವವಿದ್ಯಾಲಯಗಳ ಕುಲಪತಿಗಳು

Exit mobile version