Appu Namana | ಆಹ್ವಾನವಿಲ್ಲ, ಕಾರ್ಯಕ್ರಮಕ್ಕೆ ಹೋಗಲ್ಲ ಎಂದ ಸಿದ್ದು; ರಾಜ್ಯಪಾಲರನ್ನೂ ಕರೆದಿಲ್ಲ! - Vistara News

ಕನ್ನಡ ರಾಜ್ಯೋತ್ಸವ

Appu Namana | ಆಹ್ವಾನವಿಲ್ಲ, ಕಾರ್ಯಕ್ರಮಕ್ಕೆ ಹೋಗಲ್ಲ ಎಂದ ಸಿದ್ದು; ರಾಜ್ಯಪಾಲರನ್ನೂ ಕರೆದಿಲ್ಲ!

Appu Namana | ಪುನೀತ್‌ ರಾಜಕುಮಾರ್‌ ಅವರಿಗೆ ಕೊಡಮಾಡಲಾಗುತ್ತಿರುವ ಕರ್ನಾಟಕ ರತ್ನ ಪ್ರಶಸ್ತಿ ಸಮಾರಂಭಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸುತ್ತಿಲ್ಲ ಎಂದು ಹೇಳಿಕೊಂಡಿದ್ದಾರೆ. ಶಿಷ್ಟಾಚಾರದ ಪ್ರಕಾರ ಕರೆಯಲಿಲ್ಲ ಎಂಬ ಕಾರಣವನ್ನೂ ಅವರು ನೀಡಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಪುನೀತ್‌ ರಾಜಕುಮಾರ್‌ (Appu Namana) ಅವರಿಗೆ ನೀಡಲಾಗುತ್ತಿರುವ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಸಮಾರಂಭಕ್ಕೆ ನಾನು ಹೋಗುತ್ತಿಲ್ಲ. ಶಿಷ್ಟಾಚಾರದ ಪ್ರಕಾರ ನನ್ನನ್ನು ಕರೆದಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದ ಮುಂಭಾಗ ಹಾಕಲಾಗಿರುವ ಬೃಹತ್‌ ವೇದಿಕೆಯಲ್ಲಿ ಅಶ್ವಿನಿ ಪುನೀತ್‌ ರಾಜಕುಮಾರ್‌ ಅವರಿಗೆ ಪುನೀತ್‌ ರಾಜಕುಮಾರ್‌ ಪರವಾಗಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ಕೊಡಮಾಡಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಅನೇಕ ಗಣ್ಯರು ಭಾಗವಹಿಸುತ್ತಿದ್ದಾರೆ.

ಆಮಂತ್ರಣ ಪತ್ರಿಕೆಯಲ್ಲಿ ಸಿದ್ದರಾಮಯ್ಯ ಹೆಸರನ್ನು ಮುದ್ರಿಸಿದ್ದರೂ ಅವರನ್ನು ಶಿಷ್ಟಾಚಾರದ ಪ್ರಕಾರ ಆಹ್ವಾನ ನೀಡಿಲ್ಲ ಎಂಬ ಆರೋಪ ಈಗ ಕೇಳಿಬಂದಿದೆ. ಈ ಬಗ್ಗೆ ಸ್ವತಃ ಸಿದ್ದರಾಮಯ್ಯ ಅವರೇ ಮಾತನಾಡಿ, ಪುನೀತ್‌ ರಾಜಕುಮಾರ್‌ ಅವರಿಗೆ ಮರಣೋತ್ತರ ಪ್ರಶಸ್ತಿಯನ್ನು ಕೊಡಲಾಗುತ್ತಿದೆ. ಇದನ್ನು ನಾನು ಸ್ವಾಗತ ಮಾಡುತ್ತೇನೆ. ಆದರೆ ಪ್ರೋಟೋಕಾಲ್ ಪ್ರಕಾರ ನನ್ನನ್ನು ಕರೆದಿಲ್ಲ. ಹಾಗಾಗಿ ನಾನು ಹೋಗುತ್ತಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯಪಾಲರಿಗೂ ಇಲ್ಲ ಆಹ್ವಾನ
ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಶಿಷ್ಟಾಚಾರ ಉಲ್ಲಂಘನೆಯ ಮಾತುಗಳು ಕೇಳಿಬರುತ್ತಿವೆ. “ಕರ್ನಾಟಕ ರತ್ನ”ವು ರಾಜ್ಯದ ಅತ್ಯುನ್ನತ ಪ್ರಶಸ್ತಿಯಾಗಿದೆ. ಆದರೆ, ಈ ಕಾರ್ಯಕ್ರಮಕ್ಕೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಶಿಷ್ಟಾಚಾರದ ಪ್ರಕಾರ ಆಹ್ವಾನ ನೀಡಿಲ್ಲ. 1992ರಲ್ಲಿ ರಾಜಕುಮಾರ್‌ಗೆ ಆಗಿನ ರಾಜ್ಯಪಾಲರಿಂದ ಪ್ರಶಸ್ತಿ ಪ್ರದಾನವಾಗಿತ್ತು.

ಇದನ್ನೂ ಓದಿ | Appu Namana | ಬೆಂಗಳೂರಿಗೆ ಸೂಪರ್‌ ಸ್ಟಾರ್‌ ರಜನಿಕಾಂತ್‌, ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Kannada Pride: ಇನ್ನು ಕನ್ನಡದಲ್ಲೇ ಸಿಆರ್‌ಪಿಎಫ್, ಬಿಎಸ್‌ಎಫ್, ಸಿಐಎಸ್‌ಎಫ್ ಕಾನ್ಸ್‌ಟೇಬಲ್ ಎಕ್ಸಾಮ್!

Kannada Pride: ಕೇಂದ್ರ ಸಶಸ್ತ್ರ ಮೀಸಲು ಪಡೆಗಳ ನೇಮಕಾತಿಯ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ 13 ಪ್ರಾದೇಿಕ ಭಾಷೆಗಳಲ್ಲಿ ನಡೆಸಲು ಕೇಂದ್ರ ಗೃಹ ಇಲಾಖೆಯು ಕಳೆದ ವರ್ಷವೇ ನಿರ್ಧರಿಸಿತ್ತು.

VISTARANEWS.COM


on

Karnataka Candidate can write CRPF, BSF, CIS Constable Exam in Kannada, Kannada Pride
Koo

ನವದೆಹಲಿ: ಸಿಆರ್‌ಪಿಎಫ್(CRPF), ಬಿಎಸ್‌ಎಫ್ (BSF) ಮತ್ತು ಸಿಐಎಸ್ಎಫ್‌ನಂಥ (CISF) ಅರೆ ಸೇನಾ ಪಡೆಗಳ ಕಾನ್ಸ್‌ಟೇಬ್ ನೇಮಕಾತಿ ಪರೀಕ್ಷೆಯನ್ನು (Constable Exam) ಇಂಗ್ಲಿಷ್ ಮತ್ತು ಹಿಂದಿ ಮಾತ್ರವಲ್ಲದೇ, ಕನ್ನಡವೂ (Kannada Pride) ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯವು ಭಾನುವಾರ ಹೇಳಿದೆ.

ದೇಶಾದ್ಯಂತ 128 ನಗರಗಳಲ್ಲಿ ನಡೆಯಲಿರುವ ಪರೀಕ್ಷೆಯಲ್ಲಿ ಸುಮಾರು 48 ಲಕ್ಷ ಅಭ್ಯರ್ಥಿಗಳು ಎಕ್ಸಾಮ್ ಬರೆಯಲಿದ್ದಾರೆ. ಈ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ನಡೆಯಲು ಕಳೆದ ವರ್ಷ ಏಪ್ರಿಲ್ ತಿಂಗಳಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು ಎಂದು ಸಚಿವಾಲಯವು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಪ್ರಾದೇಶಿಕ ಭಾಷೆಗಳಿಗೆ ಉತ್ತೇಜನ ಮತ್ತು ಕೇಂದ್ರ ಸಶಸ್ತ್ರ ಮೀಸಲು ಪಡೆಯಲ್ಲಿ ಸ್ಥಳೀಯ ಯುವಕರು ಪಾಲ್ಗೊಳ್ಳುವುದನ್ನು ಹೆಚ್ಚಿುವುದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಐತಿಹಾಸಿಕ ನಿರ್ಧಾರವನ್ನು ಕೈಗೊಂಡಿದ್ದಾರೆ ಎಂದು ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹಿಂದಿ ಮತ್ತು ಇಂಗ್ಲಿಷ್ ಮಾತ್ರವಲ್ಲದೇ, ಅಸ್ಸಾಮಿ, ಬೆಂಗಾಲಿ, ಗುಜರಾತಿ, ಮರಾಠಿ, ಮಲಯಾಳಂ, ಕನ್ನಡ, ತಮಿಳು, ತೆಲುಗು, ಉರ್ದು, ಪಂಜಾಬಿ, ಮಣಿಪುರಿ ಮತ್ತು ಕೊಂಕಣಿ ಸೇರಿದಂತೆ 13 ಸ್ಥಳೀಯ ಭಾಷೆಗಳಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸ್ಟಾಫ್ ಸೆಲಕ್ಷನ್ ಕಮಿಷನ್(SSC) ಈ ಕಾನ್‌ಸ್ಟೇಬಲ್(ಸಾಮಾನ್ಯ ಕರ್ತವ್ಯ) ಪರೀಕ್ಷೆಯನ್ನು ಕೈಗೊಳ್ಳುತ್ತಿದೆ. ಈ ಮೂಲಕ ಕೇಂದ್ರ ಸಶಸ್ತ್ರ ಪಡೆಗಳಿಗೆ ಲಕ್ಷಾಂತರ ಯುವಕರನ್ನು ಆಕರ್ಷಿಸಲಾಗುತ್ತಿದೆ. ಪರೀಕ್ಷೆಗಳನ್ನು ಸ್ಥಳೀಯ ಭಾಷೆಗಳಲ್ಲಿ ನಡೆಸಲು ಎಸ್ಎಸ್‌ಸಿ ಮತ್ತು ಕೇಂದ್ರ ಗೃಹ ಸಚಿವಾಲಯವು ತಿಳಿವಳಿಕಾ ಒಪ್ಪಂದಕ್ಕೆ ಸಹಿ ಹಾಕಿವೆ.

ಈ ಸುದ್ದಿಯನ್ನೂ ಓದಿ: ಕನ್ನಡಿಗರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ; ಕನ್ನಡ ಸೇರಿ 15 ಭಾಷೆಗಳಲ್ಲಿ ನೇಮಕಾತಿ ಪರೀಕ್ಷೆ, ಯಾವ ಹುದ್ದೆಗೆ ಅನ್ವಯ?

Continue Reading

ಕನ್ನಡ ರಾಜ್ಯೋತ್ಸವ

Kannada Koota Luxembourg: ಲಕ್ಸಂಬರ್ಗ್ ಕನ್ನಡ ಕೂಟದಿಂದ ಅದ್ಧೂರಿ ಕನ್ನಡೋತ್ಸವ-2023

Kannada Koota Luxembourg: ಯುರೋಪ್ ಖಂಡದ ಚಿಕ್ಕ ದೇಶದಲ್ಲಿ ಲಕ್ಸಂಬರ್ಗ್ ಕನ್ನಡ ಕೂಟ, ಕರುನಾಡು ಸಂಸ್ಕೃತಿಯ ಅನಾವರಣ ಮಾಡಿದೆ.

VISTARANEWS.COM


on

Kannada Koota Luxembourg
Koo

ಲಕ್ಸಂಬರ್ಗ್: ಕನ್ನಡದ ಕಂಪನ್ನು ಪಸರಿಸುವ ಮತ್ತು ಕನ್ನಡದ ಸಂಸ್ಕೃತಿಯನ್ನು ಬೆಳೆಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿರುವ ಕನ್ನಡ ಕೂಟ ಲಕ್ಸಂಬರ್ಗ್ (ಕೆಕೆಎಲ್) (Kannada Koota Luxembourg) ಅದ್ಧೂರಿಯಾಗಿ `ಕನ್ನಡೋತ್ಸವ -2023’ ನಡೆಸುವ ಮೂಲಕ ಯುರೋಪ್ ಖಂಡದ ಚಿಕ್ಕ ದೇಶದಲ್ಲಿ ಕರುನಾಡು ಸಂಸ್ಕೃತಿಯ ಅನಾವರಣ ಮಾಡಿದೆ.

ಲಕ್ಸಂಬರ್ಗ್‌ನ ಬೆಗ್ಗೆನ್ ಸಾಂಸ್ಕೃತಿಕ ಕೇಂದ್ರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅಲ್ಲಿ ನೆಲೆಸಿರುವ ಕನ್ನಡಿಗರೆಲ್ಲರೂ ಪಾಲ್ಗೊಂಡು ಕನ್ನಡದ ಕೀರ್ತಿ ಪತಾಕೆಯನ್ನು ಹಾರಿಸಿದರು. ಈ ಮೂಲಕ ಕನ್ನಡಿಗರೆಲ್ಲರೂ ಒಂದೆಡೆ ಸೇರಿ ಕನ್ನಡ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಿದರು.

ಬೆಂಗಳೂರು ನಗರ ಜಿಲ್ಲೆಯಷ್ಟು ದೊಡ್ಡದಿರುವ ಲಕ್ಸಂಬರ್ಗ್‌ನಲ್ಲಿ ಸುಮಾರು 6 ಲಕ್ಷ ಜನಸಂಖ್ಯೆ ಇದೆ. ಚಿಕ್ಕದಾದರೂ ಇಲ್ಲಿ ವೈವಿಧ್ಯಮಯ ಸಂಸ್ಕೃತಿ ಶ್ರೀಮಂತವಾಗಿದೆ. ಈ ಬಹುಸಾಂಸ್ಕೃತಿಕ ಪ್ರದೇಶದಲ್ಲಿ ಭಾರತೀಯರು ಅದರಲ್ಲೂ ವಿಶೇಷವಾಗಿ ಕನ್ನಡಿಗರು ಗಮನಾರ್ಹವಾದ ರೀತಿಯಲ್ಲಿ ತಮ್ಮ ಭಾಷೆ ಮತ್ತು ಸಂಸ್ಕೃತಿಯನ್ನು ಪಸರಿಸುವಲ್ಲಿ ಯಶಸ್ವಿಯಾಗುತ್ತಿದ್ದಾರೆ. ಇಲ್ಲಿ 100ಕ್ಕೂ ಹೆಚ್ಚು ಕನ್ನಡಿಗ ಕುಟುಂಬಗಳು ವಾಸ ಮಾಡುತ್ತಿದ್ದು, 2022ರ ಅಂತ್ಯದಲ್ಲಿ ಆರಂಭವಾದ ಕನ್ನಡ ಕೂಟ ಲಕ್ಸಂಬರ್ಗ್ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು, ಕಾರ್ಯಾಗಾರಗಳು ಹಾಗೂ ಹಬ್ಬಗಳ ಮೂಲಕ ಕನ್ನಡಿಗರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಿದೆ.

ಇದನ್ನೂ ಓದಿ | ದಶಮುಖ ಅಂಕಣ: ನಿದ್ದೆಗೊಮ್ಮೆ ನಿತ್ಯ ಮರಣ, ಎದ್ದ ಸಲ ನವೀನ ಜನನ!

ಕೆಕೆಎಲ್ ಕನ್ನಡೋತ್ಸವ 2023 ಎರಡನೇ ಕರ್ನಾಟಕ ರಾಜ್ಯೋತ್ಸವವನ್ನು ಆಯೋಜಿಸಿದ್ದು, ಇದರಲ್ಲಿ 120ಕ್ಕೂ ಹೆಚ್ಚು ಕನ್ನಡದ ಮನಸುಗಳು ಪಾಲ್ಗೊಂಡಿದ್ದವು. ಇದರ ವಿಶೇಷವೆಂದರೆ ದೊಡ್ಡ ಮಟ್ಟದಲ್ಲಿ ಭಾರತೀಯರು ಮತ್ತು ಕೆಲವು ಯೂರೋಪಿಯನ್ನರೂ ಪಾಲ್ಗೊಂಡಿದ್ದರು. ಕನ್ನಡದ ಶ್ರೀಮಂತ ಪರಂಪರೆಯನ್ನು ಬಿಂಬಿಸುವ ಹಾಗೂ ಸಾಂಸ್ಕೃತಿಕ ಸಂಪ್ರದಾಯವನ್ನು ಬಿಂಬಿಸುವ ರೀತಿಯಲ್ಲಿ ಹಚ್ಚೇವು ಕನ್ನಡದ ದೀಪ ಹಾಡಿನೊಂದಿಗೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು ಮತ್ತು ನಾಡಗೀತೆಯನ್ನು ಹಾಡಲಾಯಿತು.

ಕನ್ನಡಿಗ ಸಮುದಾಯಕ್ಕೆ ತಮ್ಮದೇ ಆದ ಕೊಡುಗೆ ನೀಡುತ್ತಾ ಬಂದಿರುವ ವನಜಾಕ್ಷಿ ಜಗದೀಶ್ ಮತ್ತು ಡಾ.ಪುನೀತ್ ಜುಬ್ಬ ಹೊನ್ನಯ್ಯ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಶರಣ್ಯ ಮತ್ತು ಪ್ರಮೋದ್ ಈಶ್ವರ್ ಅವರು ಈ ಕಾರ್ಯಕ್ರಮದ ನಿರೂಪಣೆ ಮಾಡಿದರು.

ಶಾಸ್ತ್ರೀಯ ಸಂಗೀತ, ಸಿನಿಮಾ ಹಾಡುಗಳ ಗಾಯನ, ನೃತ್ಯ ಮತ್ತು ಆರ್ಕೆಸ್ಟ್ರಾ ಕಾರ್ಯಕ್ರಮಗಳನ್ನು ಈ ಸಂದರ್ಭದಲ್ಲಿ ಆಯೋಜಿಸಲಾಗಿತ್ತು. ವಿಶೇಷವೆಂದರೆ ಈ ಕಾರ್ಯಕ್ರಮಗಳ ಅರ್ಧದಷ್ಟು ಕಾರ್ಯಕ್ರಮಗಳನ್ನು ಮಕ್ಕಳೇ ನಡೆಸಿಕೊಟ್ಟರು. ಈ ಮೂಲಕ ಮಕ್ಕಳು ಕನ್ನಡದ ಸಂಸ್ಕೃತಿಯನ್ನು ಬಿಂಬಿಸಿದರು. ಇದೇ ವೇಳೆ, ಆದರ್ಶ ದಂಪತಿ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು. ಈ ಪೈಕಿ 5 ಅತ್ಯುತ್ತಮ ಜೋಡಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯೆಂದರೆ ಕನ್ನಡಿಗರಾದ ಅಚಲ್ ಮೂರ್ತಿ ಮತ್ತು ಲಕ್ಸಂಬರ್ಗ್ ಮೂಲದ ಬ್ಯಾಂಡ್ `ಅಹ್ಮದ್ ರಾದ್ವಾನ್ & ಲೆಸ್ ಹಿರೋಂಡೆಲ್ಸ್’ ನ ಕಲಾವಿದರು ತಮ್ಮ ಕಲೆಯನ್ನು ಪ್ರದರ್ಶನ ಮಾಡಿ ಎಲ್ಲರ ಗಮನ ಸೆಳೆದರು. ಅಲ್ಲದೇ, ಇಲ್ಲಿ ಆಯೋಜಿಸಲಾಗಿದ್ದ ವಿವಿಧ ಖಾದ್ಯಗಳ ಪ್ರದರ್ಶನ ತಿಂಡಿ ಪ್ರಿಯರಿಗೆ ಆಹ್ಲಾದವನ್ನು ಉಂಟು ಮಾಡಿತು.

ಕೆಕೆಎಲ್ ಅಧ್ಯಕ್ಷರಾದ ಭವಾನಿ ಶಂಕರ್ ಅವರು ಈ ಕಾರ್ಯಕ್ರಮದ ಯಶಸ್ಸಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
“ಲಕ್ಸಂಬರ್ಗ್ ಮತ್ತು ಕರ್ನಾಟಕದ ಕನ್ನಡಿಗರ ನಡುವಿನ ಬಾಂಧವ್ಯ ಬಲವರ್ಧನೆಗೆ ಈ ಕಾರ್ಯಕ್ರಮ ನಾಂದಿ ಹಾಡಿದೆ. ಈ ಕನ್ನಡೋತ್ಸವ 2023 ಕೇವಲ ನಮ್ಮ ನಡುವಿನ ಪ್ರತಿಭೆಗಳನ್ನು ಹೊರ ಜಗತ್ತಿಗೆ ಅನಾವರಣ ಮಾಡಲಷ್ಟೇ ಕಾರಣವಾಗಿಲ್ಲ. ಇದರೊಂದಿಗೆ ಒಗ್ಗಟ್ಟು ಮತ್ತು ಪ್ರೀತಿ ವಿಶ್ವಾಸವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸಹಕಾರಿಯಾಗಿದೆ. ನಮ್ಮ ಶ್ರೀಮಂತ ಸಂಸ್ಕೃತಿಯನ್ನು ಹೊರ ಜಗತ್ತಿಗೆ ತೋರಿಸುವಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಗಿದೆ’’ ಎಂದರು.

ಸಂಧ್ಯಾ ಸುರೇಶ್, ಪುನೀತಾ ರೆಡ್ಡಿ, ಕಾರ್ತೀಕ್ ರಾಮಮೂರ್ತಿ, ನರಸಿಂಹ ಹೆಬ್ಬಾರ್, ಮಂಜುನಾಥ್ ಪ್ರಸಾದ್, ನಿರಂಜನ್ ವಿಶ್ವಮೂರ್ತಿ, ಹಿತೇಶ್ ಚಿಡ್ಗಲ್, ಪ್ರಶಾಂತ್ ಅಳವಂಡಿ, ರಮೇಶ್ ಪಾಂಡುರಂಗ ಸೇರಿದಂತೆ ಇನ್ನಿತರ ಆಡಳಿತ ಮಂಡಳಿ ಸದಸ್ಯರು ನೇತೃತ್ವದಲ್ಲಿ ಹಾಗೂ ಸ್ವಯಂಸೇವಕರ ಶ್ರಮದ ಫಲವಾಗಿ ಈ ಕಾರ್ಯಕ್ರಮದಲ್ಲಿ ಯಶಸ್ವಿಯಾಗಿ ನಡೆಯಲು ಕಾರಣವಾಗಿದೆ.

ಇದನ್ನೂ ಓದಿ | Cultural Events : ಡಿ.13-14ರಂದು ನೃತ್ಯ ವೈಭವದ ತ್ಯಾಗರಾಜ ಹೃತ್ಸದನ

ಈ ಕನ್ನಡೋತ್ಸವ 2023 ಕನ್ನಡದ ಸಮುದಾಯದ ಒಗ್ಗಟ್ಟನ್ನು ಪ್ರದರ್ಶಿಸುವುದರೊಂದಿಗೆ ಕನ್ನಡೇತರರು ಮತ್ತು ಸ್ಥಳೀಯ ನಾಗರಿಕರೊಂದಿಗೆ ಸಂಬಂಧ ಬೆಳೆಸುವುದು ಮತ್ತು ಸಂಸ್ಕೃತಿ ವಿನಿಮಯಕ್ಕೆ ಒಂದು ಉತ್ತಮವಾದ ವೇದಿಕೆಯನ್ನು ಒದಗಿಸಿಕೊಟ್ಟಿತು.

Continue Reading

ಕನ್ನಡ ರಾಜ್ಯೋತ್ಸವ

RK Balachandra: ʼಕರ್ನಾಟಕ ಸಾಧಕ ರತ್ನʼ ಪ್ರಶಸ್ತಿಗೆ ಕುಶಾಲನಗರದ ಆರ್.ಕೆ. ಬಾಲಚಂದ್ರ ಆಯ್ಕೆ

R. K. Balachandra: ಬಳ್ಳಾರಿಯ ಸ್ಮಿಯಾಕ ಚಾರಿಟಬಲ್ ಟ್ರಸ್ಟ್‌ನಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ʼಕರ್ನಾಟಕ ಸಾಧಕ ರತ್ನʼ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ.

VISTARANEWS.COM


on

RK Balachandra
Koo

ಮಡಿಕೇರಿ: 68ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಬಳ್ಳಾರಿಯ ಸ್ಮಿಯಾಕ ಚಾರಿಟಬಲ್ ಟ್ರಸ್ಟ್‌ನಿಂದ ನೀಡುವ ʼಕರ್ನಾಟಕ ಸಾಧಕ ರತ್ನʼ ರಾಜ್ಯೋತ್ಸವ ಪ್ರಶಸ್ತಿಗೆ ಕೊಡಗು ಜಿಲ್ಲೆಯ ಕುಶಾಲನಗರದ ಆರ್.ಕೆ. ಬಾಲಚಂದ್ರ (RK Balachandra) ಅವರು ಆಯ್ಕೆಯಾಗಿದ್ದಾರೆ.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಬಹುಮುಖ್ಯವಾಗಿ ಅನ್ಯ ರಾಜ್ಯದ ಕನ್ನಡೇತರರಿಗೆ ಕನ್ನಡ ಕಲಿಸುವಿಕೆ ಹಾಗೂ ರಾಜ್ಯಾದಂತ ಉಚಿತವಾಗಿ ಬ್ಯಾಂಕಿಂಗ್ ಹಾಗೂ ಇತರೆ ಸ್ಪರ್ಧಾತ್ಮಗಳ ಪರೀಕ್ಷೆ ತರಬೇತಿಯ ಸೇವೆಯನ್ನು ಗುರುತಿಸಿ ಶಿಕ್ಷಣ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗೆ ಇವರಿಗೆ ʼಕರ್ನಾಟಕ ಸಾಧಕ ರತ್ನʼ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಇದನ್ನೂ ಓದಿ | ವಿಸ್ತಾರ ಸಂಪಾದಕೀಯ: ರಾಮಾಯಣ, ಮಹಾಭಾರತ ಕಲಿಕೆ ಶಿಫಾರಸು ಸ್ವಾಗತಾರ್ಹ

ಕನ್ನಡ ರಾಜ್ಯೋತ್ಸವದ ಅಂಗವಾಗಿ ನವೆಂಬರ್‌ 26ರಂದು ಹಮ್ಮಿಕೊಂಡಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಆರ್.ಕೆ. ಬಾಲಚಂದ್ರ ಸೇರಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕನ್ನಡ ರಾಜ್ಯೋತ್ಸವ

Karnataka Sambhrama 50: ಹೋರಾಟ, ತ್ಯಾಗ-ಬಲಿದಾನದಿಂದ ಕನ್ನಡ ನಾಡು ಉದಯ: ಸಿದ್ದರಾಮಯ್ಯ

Karnataka Sambhrama 50: ಗದಗದಲ್ಲಿ ಆಯೋಜಿಸಿದ್ದ ʼಕರ್ನಾಟಕ ಸಂಭ್ರಮ-50ʼ ರಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.

VISTARANEWS.COM


on

CM Siddaramaiah
Koo

ಗದಗ: ಹೋರಾಟ, ತ್ಯಾಗ-ಬಲಿದಾನಗಳಿಂದ ಕನ್ನಡ ನಾಡು (Karnataka Sambhrama 50) ಉದಯವಾಗಿದೆ. ಈ ನಾಡಲ್ಲಿ ಕನ್ನಡತ್ವ ಮತ್ತಷ್ಟು ಆಳವಾಗಿ ಬೇರೂರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದಲ್ಲಿ ಆಯೋಜಿಸಿದ್ದ ʼಕರ್ನಾಟಕ ಸಂಭ್ರಮ-50ʼ ಅದ್ಧೂರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕ ನಾಮಕರಣ ಆಗಲು ಶ್ರಮಿಸಿ ಹೋರಾಡಿದ ಕೆ.ಎಚ್. ಪಾಟೀಲ್ ಮತ್ತು ಎಲ್ಲಾ ಹೋರಾಟದ ಸಂಗತಿಗಳನ್ನು ಇಂದು ನಾನು ಸ್ಮರಿಸುತ್ತೇನೆ. ಅವತ್ತು ಕೆ.ಎಚ್.ಪಾಟೀಲ್, ಇಂದು ಎಚ್.ಕೆ.ಪಾಟೀಲ್, ಅವತ್ತು ದೇವರಾಜ ಅರಸು ಕುಳಿತಿದ್ದ ಮುಖ್ಯಮಂತ್ರಿ ಕುರ್ಚಿಯಲ್ಲಿ ಇವತ್ತು ನಾನು ಕುಳಿತಿದ್ದೇನೆ. ಇದೇನು ಕಾಕತಾಳೀಯ ಅಲ್ಲ ಎಂದರು.

ಇಂಗ್ಲಿಷ್‌ನಲ್ಲಿ ಶೇಕ್ಸ್ ಪಿಯರ್ ಸಾಹಿತ್ಯ ರಚಿಸುವುದಕ್ಕೂ 500 ವರ್ಷಗಳ ಮೊದಲೇ ಕನ್ನಡದಲ್ಲಿ ವಿಶ್ವ ಮಟ್ಟದ ಅತ್ಯುನ್ನತ ಸಾಹಿತ್ಯ ರಚನೆಯಾಗಿತ್ತು. ಪಂಪನಿಂದ ಹಿಡಿದು ವಚನಕಾರರನ್ನೂ ಸೇರಿಸಿ ಹಲವರು ಅತ್ಯುನ್ನತ ಸಾಹಿತ್ಯ ರಚಿಸಿದ್ದರು ಎಂದು ಕನ್ನಡ ಭಾಷಾ ಹಿರಿಮೆಯನ್ನು ಉದಾಹರಿಸಿದರು.

ಇದನ್ನೂ ಓದಿ | Karnataka Drought : 324 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಕನ್ನಡ ಕಲಿಯದೆಯೂ ಕರ್ನಾಟಕದಲ್ಲಿ ವ್ಯವಹರಿಸಬಹುದು ಎನ್ನುವ ವಾತಾವರಣ ಬದಲಾಗಬೇಕು. ಕನ್ನಡದ ಸಂಸ್ಕೃತಿ ಜತೆಗೆ ನಮ್ಮೆಲ್ಲರಲ್ಲಿ ಕನ್ನಡತನ ಬೇರೂರಬೇಕು. ಆಗ ಮಾತ್ರ ಕನ್ನಡದ ವಾತಾವರಣ ಇಡಿ ನಾಡಿನಲ್ಲಿ ಪಸರಿಸುತ್ತದೆ ಎಂದರು.

CM Siddaramaiah talks in Karnataka sambhrama at Gadag

ಕನ್ನಡ ಸಂಸ್ಕೃತಿ ಎಂದಾಗ ಬಸವಾದಿ ಶರಣರ ಕಾಯಕ ಸಂಸ್ಕೃತಿಯೂ ಸೇರಿದೆ. ಬಸವಣ್ಣನವರ ಆಶಯದಂತೆ ವರ್ಗರಹಿತ, ಜಾತಿರಹಿತ ಸಮಾಜದ ನಿರ್ಮಾಣ ಮತ್ತು ಅಭಿವೃದ್ಧಿ ನಮ್ಮ ಗುರಿಯಾಗಿದೆ. ಆ ಕಾರಣಕ್ಕೇ ಸರ್ವ ಜಾತಿ-ಧರ್ಮದವರ ಬದುಕನ್ನು ಎತ್ತರಿಸುವ ಗ್ಯಾರಂಟಿ ಕಾರ್ಯಕ್ರಮಗಳನ್ನು ನಾವು ನೀಡಿದ್ದೇವೆ ಎಂದರು.

ಈ ಹಿಂದೆ ಕೆ.ಎಚ್.ಪಾಟೀಲರು ಇಡೀ ಜಿಲ್ಲೆಗೆ ಕುಡಿಯುವ ನೀರು ಕೊಟ್ಟರು. ಅವರ ಪುತ್ರ ಎಚ್.ಕೆ.ಪಾಟೀಲರೂ ಇಡೀ ರಾಜ್ಯಕ್ಕೆ ಉತ್ತಮ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಹೀಗಾಗಿ ನಾಮಪತ್ರ ಸಲ್ಲಿಸಿದರೆ ಸಾಕು, ನೀವೆಲ್ಲಾ ಎಚ್.ಕೆ.ಪಾಟೀಲರನ್ನು ಗೆಲ್ಲಿಸಬೇಕು. ಇಡೀ ರಾಜ್ಯಕ್ಕೆ ಅಷ್ಟೊಂದು ಕೆಲಸ ಮಾಡಿರುವ ಎಚ್.ಕೆ.ಪಾಟೀಲರು ಮತ ಕೇಳಬಾರದು. ನೀವೆಲ್ಲಾ ಅವರನ್ನೂ ಹಾಗೇ ಗೆಲ್ಲಿಸಬೇಕು ಎಂದು ಕರೆ ನೀಡಿದರು.

ಅವಳಿ ನಗರಕ್ಕೆ 61 ಕೋಟಿ ಕೊಟ್ಟಿದ್ದೇವೆ

ಗದಗ-ಬೆಟಗೇರಿ ಅವಳಿ ನಗರದ ಕುಡಿಯುವ ನೀರಿನ ವ್ಯವಸ್ಥೆಯನ್ನು ಇನ್ನಷ್ಟು ಸಮರ್ಪಕಗೊಳಿಸಲು ಈಗಾಗಲೇ 61 ಕೋಟಿ ರೂ. ನೀಡಿದ್ದೇವೆ. ಅಗತ್ಯಬಿದ್ದರೆ ಮತ್ತಷ್ಟು ಹಣ ಕೊಡಲು ನಮ್ಮ ಸರ್ಕಾರ ಸಿದ್ದವಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರಚಾಸೋದ್ಯಮ ಇಲಾಖೆ ಮತ್ತು ಗದಗ ಜಿಲ್ಲಾಡಳಿತ ಜಂಟಿಯಾಗಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರವಾಸೋದ್ಯಮ ಸಚಿವರೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಾ.ಎಚ್.ಕೆ.ಪಾಟೀಲ್ ಅವರು ವಹಿಸಿದ್ದರು.

ಇದನ್ನೂ ಓದಿ | Cauvery Dispute : ರಾಜ್ಯಕ್ಕೆ ಮತ್ತೆ ಕಾವೇರಿ ಜಲಾಘಾತ; ಇನ್ನು 20 ದಿನ ನಿರಂತರ ನೀರು ಹರಿಸಲು ಪ್ರಾಧಿಕಾರ ಸೂಚನೆ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಸಚಿವರಾದ ಕೆ.ಎಚ್.ಮುನಿಯಪ್ಪ, ಶಿವರಾಜ ತಂಗಡಗಿ, ಲಕ್ಷ್ಮೀ ಹೆಬ್ಬಾಳ್ಕರ್, ಬೈರತಿ ಸುರೇಶ್, ಮಂಕಾಳ ವೈದ್ಯ, ಶರಣ ಪ್ರಕಾಶ್ ಪಾಟೀಲ್, ಶಿವಾನಂದ ಪಾಟೀಲ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಸೇರಿ ಹಲವಾರು ಶಾಸಕರು, ಇಲಾಖಾ ಕಾರ್ಯದರ್ಶಿಗಳು-ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading
Advertisement
Baking Soda Benefits
ಆರೋಗ್ಯ18 mins ago

Baking Soda Benefits: ಅಡುಗೆ ಸೋಡಾದಿಂದ ಎಷ್ಟೊಂದು ಪ್ರಯೋಜನಗಳಿವೆ ನೋಡಿ!

Dina Bhavishya
ಭವಿಷ್ಯ1 hour ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Implement the work without damaging the drinking water pipelines says ZP CEO Sadashiva Prabhu
ವಿಜಯನಗರ6 hours ago

Vijayanagara News: ಕುಡಿಯುವ ನೀರಿನ ಪೈಪ್‌ಲೈನ್‌ಗಳು ಹಾಳಾಗದಂತೆ ಕಾಮಗಾರಿ ಅನುಷ್ಠಾನಗೊಳಿಸಿ: ಜಿಪಂ ಸಿಇಒ

Congress leader Rahul Gandhi speech in Ballari
ಕರ್ನಾಟಕ6 hours ago

Lok Sabha Election 2024: ದೇಶ, ರಾಜ್ಯಕ್ಕೆ ಬಿಜೆಪಿಯಿಂದ ಖಾಲಿ ಚೊಂಬು ಕೊಟ್ಟಿದ್ದಾರೆ: ರಾಹುಲ್‌ ಗಾಂಧಿ

lok sabha election
ಪ್ರಮುಖ ಸುದ್ದಿ6 hours ago

ವಿಸ್ತಾರ ಸಂಪಾದಕೀಯ: ಗ್ರಾಮಾಂತರ ಜನರ ಮತೋತ್ಸಾಹ ನಗರದ ‘ಬುದ್ಧಿವಂತ’ ಮತದಾರರಲ್ಲಿ ಏಕಿಲ್ಲ?

Neha Murder Case
ಕರ್ನಾಟಕ7 hours ago

Neha Murder Case: ನೇಹಾ ತಂದೆಗೆ ಗನ್ ಮ್ಯಾನ್, ಮನೆಗೆ ಪೊಲೀಸ್ ಭದ್ರತೆ ಏರ್ಪಡಿಸಿದ ರಾಜ್ಯ ಸರ್ಕಾರ

IPL 2024
ಪ್ರಮುಖ ಸುದ್ದಿ7 hours ago

IPL 2024 : ಬೈರ್​ಸ್ಟೋವ್​ ಸ್ಫೋಟಕ ಶತಕ; ಕೆಕೆಆರ್​ ವಿರುದ್ಧ ಪಂಜಾಬ್​​ಗೆ ವಿಶ್ವ ದಾಖಲೆಯ ವಿಜಯ

Bike Accident
ಕರ್ನಾಟಕ7 hours ago

Bike Accident: ಮತದಾನ ಮಾಡಿ ತೆರಳುತ್ತಿದ್ದ ವೇಳೆ ಬೈಕ್‌ ಅಪಘಾತ; ಸ್ಥಳದಲ್ಲೇ ಇಬ್ಬರ ದುರ್ಮರಣ

lok sabha election
Lok Sabha Election 20247 hours ago

Lok Sabha Election : ಲೊಕಸಭಾ ಚುನಾವಣೆಯ ಎರಡನೇ ಹಂತದ 88 ಕ್ಷೇತ್ರಗಳಲ್ಲಿ ಶೇ 60.96 ಮತದಾನ

Hassan News
ಕರ್ನಾಟಕ8 hours ago

Hassan News: ಎರಡು ಗುಂಪುಗಳ ನಡುವೆ ಮಾರಾಮಾರಿ; ಕೈ ಕಾರ್ಯಕರ್ತನಿಗೆ ಗಂಭೀರ ಗಾಯ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 hour ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ18 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 202419 hours ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 202419 hours ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ1 day ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20242 days ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ3 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

ಟ್ರೆಂಡಿಂಗ್‌