ಅರಶಿನಗುಂಡಿ ಫಾಲ್ಸ್‌ 200 ಮೀಟರ್ ಕೆಳಗಡೆ ಶರತ್‌ ಮೃತದೇಹ ಪತ್ತೆ Vistara News

ಉಡುಪಿ

ಅರಶಿನಗುಂಡಿ ಫಾಲ್ಸ್‌ 200 ಮೀಟರ್ ಕೆಳಗಡೆ ಶರತ್‌ ಮೃತದೇಹ ಪತ್ತೆ

ಕಳೆದ ಜು. 23ರಂದು ಅರಶಿನಗುಂಡಿ ಜಲಪಾತ (Arashinagundi falls) ವೀಕ್ಷಣೆಗೆ ತೆರಳಿದ್ದ ಶರತ್‌ ಕಾಲು ಜಾರಿ ಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರು. ಸತತ ಕಾರ್ಯಾಚರಣೆ ನಡೆಸಿ ಜು.30ರಂದು ಅರಶಿನಗುಂಡಿ‌ ಜಲಪಾತದಿಂದ 200 ಮೀಟರ್ ಕೆಳಗಡೆ ಮೃತದೇಹವು ಪತ್ತೆ ಆಗಿದೆ.

VISTARANEWS.COM


on

Arasinagundi Falls Sharath Kumar Incident
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉಡುಪಿ: ಇಲ್ಲಿನ ಬೈಂದೂರು ತಾಲೂಕಿನ ಕೊಲ್ಲೂರು (Kolluru incident) ಬಳಿಯಿರುವ ಅರಶಿನಗುಂಡಿ ಜಲಪಾತ (Arashina gundi Falls) ನೋಡಲು ಹೋಗಿ ಕಾಲು ಜಾರಿ ಬಿದ್ದು ನೀರುಪಾಲಾದ ಭದ್ರಾವತಿ ಮೂಲದ ಶರತ್ ಕುಮಾರ್ (23) ಮೃತದೇಹವು ಪತ್ತೆಯಾಗಿದೆ.

ಶರತ್ ಮೃತದೇಹವು ಅರಶಿನಗುಂಡಿ‌ ಜಲಪಾತದಿಂದ 200 ಮೀಟರ್ ಕೆಳಗಡೆ ಪತ್ತೆ ಆಗಿದೆ. ಕೊಲ್ಲೂರು ಪೊಲೀಸರು, ಅಗ್ನಿಶಾಮಕ ದಳ, ಸ್ಥಳೀಯರು ಸತತ 7 ದಿನಗಳ ಕಾಲ ಕಾರ್ಯಾಚರಣೆ ನಡೆಸಿದ್ದಾರೆ. ಬಂಡೆ ಕಲ್ಲಿನ ಒಳಗಡೆ ಶರತ್‌ ಮೃತದೇಹವು ಸಿಲುಕಿತ್ತು. ಜುಲೈ 23ರಂದು ಕಾಲು ಜಾರಿ‌ ನಾಪತ್ತೆಯಾಗಿದ್ದ ಶರತ್ ಜು.30ರಂದು ಶವವಾಗಿ ಪತ್ತೆ ಆಗಿದ್ದಾನೆ.

ಭದ್ರಾವತಿ ಮೂಲದ ಶರತ್ ಕುಮಾರ್ (23) ಸ್ನೇಹಿತರ ಜತೆ ಕೊಲ್ಲೂರಿಗೆ ಕಾರಿನಲ್ಲಿ ಬಂದಿದ್ದರು. ಇಲ್ಲಿ ಜಲಪಾತ ವೀಕ್ಷಣೆಗೆ ತೆರಳಿದ್ದ ಆತ ಭೋರ್ಗರೆಯುತ್ತಿದ್ದ ಜಲಪಾತದ ಎದುರು ಕಲ್ಲಿನ ಅಂಚಿನಲ್ಲಿ ನಿಂತಿದ್ದ. ಈ ವೇಳೆ ಸಣ್ಣಗೆ ಕಾಲು ಜಾರಿದ್ದು ಯುವಕ ಅಲ್ಲಿಂದಲೇ ನೀರಿಗೆ ಬಿದ್ದು ಕೊಚ್ಚಿ ಹೋಗಿದ್ದ.

ಇದೊಂದು ಅತ್ಯಂತ ದುರ್ಗಮ ಜಲಪಾತವಾಗಿದ್ದು, ಮಳೆಯಿಂದಾಗಿ ಧುಮ್ಮಿಕ್ಕಿ ಹರಿಯುತ್ತಿದೆ. ಮೇಲಿನಿಂದ ಬೀಳುವ ನೀರು ಅತ್ಯಂತ ಕಿರಿದಾದ ಕಲ್ಲುಗಳ ಬಂಡೆಗಳ ನಡುವೆ ಇಳಿದುಹೋಗುತ್ತಿದೆ. ಕಲ್ಲುಗಳ ನಡುವೆ ವೇಗವಾಗಿ ತೆವಳಿಕೊಂಡು ಜಿಗಿದುಕೊಂಡು ನೀರು ಹಾರುತ್ತದೆ. ಇದರಿಂದಾಗಿ ಶರತ್‌ ಕುಮಾರ್‌ ಅವರ ಶವವನ್ನು ಎಲ್ಲಿ ಹುಡುಕುವುದು ಎಂದು ತಿಳಿಯದೆ ಅಗ್ನಿ ಶಾಮಕ ದಳ ಕೂಡಾ ಕೈಚೆಲ್ಲುವ ಹಂತಕ್ಕೆ ಬಂದಿತ್ತು.

ಜಲಪಾತದಲ್ಲಿ ಕೊಚ್ಚಿಹೋದ ಯುವಕನನ್ನು ಪತ್ತೆ ಹಚ್ಚುವುದು ಹೇಗೆ ಎಂದು ತಿಳಿಯದೆ ಅಗ್ನಿಶಾಮಕ ದಳ ಕಂಗಾಲಾಗಿದ್ದ ಹೊತ್ತಿನಲ್ಲಿ ಉಡುಪಿಯ ಸಾಹಸಿ ಈಶ್ವರ ಮಲ್ಪೆ ಅವರ ಸಹಾಯವನ್ನು ಪಡೆದಿದ್ದರು. ಈ ಹಿಂದೆಯೂ ಕೆಲವೊಂದು ಅಪಾಯಕಾರಿ ಸನ್ನಿವೇಶಗಳಲ್ಲಿ ಧೈರ್ಯದಿಂದ ಮುನ್ನುಗ್ಗಿ ಕಾರ್ಯಾಚರಣೆ ನಡೆಸಿದ್ದ ಈಶ್ವರ ಮಲ್ಪೆ ಅವರು ಈ ಬಾರಿಯೂ ಮುನ್ನುಗ್ಗಿದ್ದರು.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉಡುಪಿ

Karnataka Weather : ಬಟ್ಟೆ ತೊಳೆಯೋಕೆ ವೀಕೆಂಡ್‌ವರೆಗೂ ಕಾಯ್ಬೇಡಿ; ಇನ್ನೊಂದು ವಾರ ಭಾರಿ ಮಳೆ!

karnataka Weather Forecast : ಎರಡು ದಿನಗಳ ಕಾಲ ಬ್ರೇಕ್‌ ಕೊಟ್ಟಿದ್ದ ಮಳೆರಾಯ (Rain News) ಮತ್ತೆ ಸಕ್ರಿಯಗೊಂಡಿದ್ದಾನೆ. ದಕ್ಷಿಣ ಒಳನಾಡಲ್ಲಿ ಭಾರಿ ಮಳೆ ಸೂಚನೆ ಇದ್ದು, ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದೆ.

VISTARANEWS.COM


on

By

Heavy Rain warning In karnataka
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಡಿ.8ರ ಶುಕ್ರವಾರ ಸಂಜೆಯಿಂದಲೇ ಹಲವೆಡೆ ಮಳೆಯಾಗುವ ಸೂಚನೆ (Karnataka Weather Forecast) ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದ್ದು, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಒಣ ಹವೆ (Dry weather) ಮೇಲುಗೈ ಸಾಧಿಸಲಿದೆ.

ರಾಮನಗರ-ಮಂಡ್ಯದಲ್ಲಿ ಭಾರಿ ಮಳೆ

ದಕ್ಷಿಣ ಒಳನಾಡಿನ ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ ಇದೆ. ಉಳಿದಂತೆ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು ಮತ್ತು ಚಾಮರಾಜನಗರದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಉಳಿದೆಡೆ ಮೋಡ ಕವಿದ ವಾತಾವರಣವಿರಲಿದೆ.

ಇನ್ನು ಉತ್ತರ ಒಳನಾಡಿನ ಕೊಪ್ಪಳ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಭಾಗಗಳಲ್ಲಿ ಒಣಹವೆ ಇರಲಿದೆ. ಜತೆಗೆ ಮಲೆನಾಡಿನ ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ ಇದ್ದು, ಗುಡುಗು ಸಾಥ್‌ ನೀಡಲಿದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಕರಾವಳಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ಶುಷ್ಕ ವಾತಾವರಣ ಇರಲಿದೆ.

ಇದನ್ನೂ ಓದಿ: Wedding Fashion: ಮದುಮಗನ ಆರತಕ್ಷತೆಯ ಗ್ರ್ಯಾಂಡ್‌ ಔಟ್‌ಫಿಟ್‌ ಆಯ್ಕೆಗೆ ಇಲ್ಲಿದೆ 5 ಸಿಂಪಲ್‌ ಸೂತ್ರ

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 30 ಡಿ.ಸೆ -19 ಡಿ.ಸೆ
ಮಂಗಳೂರು: 34 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 32 ಡಿ.ಸೆ – 17 ಡಿ.ಸೆ
ಗದಗ: 30 ಡಿ.ಸೆ – 18 ಡಿ.ಸೆ
ಹೊನ್ನಾವರ: 34 ಡಿ.ಸೆ- 23 ಡಿ.ಸೆ
ಕಲಬುರಗಿ: 26 ಡಿ.ಸೆ – 21 ಡಿ.ಸೆ
ಬೆಳಗಾವಿ: 30 ಡಿ.ಸೆ – 17 ಡಿ.ಸೆ
ಕಾರವಾರ: 35 ಡಿ.ಸೆ – 22 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಆರೋಗ್ಯ

Heart Attack : ಚಿಕಿತ್ಸೆ ನೀಡುತ್ತಿದ್ದ ವೇಳೆ ವೈದ್ಯೆಯೇ ಹೃದಯಾಘಾತದಿಂದ ಮೃತ್ಯು

Heart Attack : ಉಡುಪಿಯ ವೈದ್ಯರೊಬ್ಬರು ರೋಗಿಯ ಪರೀಕ್ಷೆ ನಡೆಸುತ್ತಿದ್ದಾಗಲೇ ಕುಸಿದುಬಿದ್ದು ಮೃತಪಟ್ಟಿದ್ದಾರೆ. ಮಹಿಳಾ ವೈದ್ಯೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

VISTARANEWS.COM


on

Heart attack doctor death in Udupi
Koo

ಉಡುಪಿ : ದೇಶಾದ್ಯಂತ ಹೃದಯಾಘಾತ (Heart Attack) ಒಂದೇ ಸಮನೆ ಹೆಚ್ಚುತ್ತಿದ್ದು, ಇದೀಗ ವೈದ್ಯೆಯೊಬ್ಬರು ಚಿಕಿತ್ಸೆ ನೀಡುತ್ತಿರುವ ವೇಳೆಯೇ ಹೃದಯದ ನೋವಿನಿಂದ ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ (Udupi District Hospital) ಈ ದುರಂತ ಘಟನೆ ನಡೆದಿದೆ. ಡಾ. ಶಶಿಕಲಾ (Dr Shashikala) ಚಿಕಿತ್ಸೆ ನೀಡುತ್ತಿದ್ದ ವೇಳೆ ಮೃತಪಟ್ಟವರು.

ಉಡುಪಿ ಅಜ್ಜರಕಾಡಿನಲ್ಲಿರುವ ಜಿಲ್ಲಾ ಆಸ್ಪತ್ರೆಯಲ್ಲಿ ಮೆಡಿಸಿನ್ ವಿಭಾಗದ ವೈದ್ಯರಾಗಿರುವ ಡಾ. ಶಶಿಕಲಾ ಅವರು ರೋಗಿಗೆ ಚಿಕಿತ್ಸೆ ನೀಡುವಾಗಲೇ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದು ಪ್ರಾಣ ಬಿಟ್ಟಿದ್ದಾರೆ. ಅವರಿಗೆ 60 ವರ್ಷ ಆಗಿತ್ತು.

ಶಶಿಕಲಾ ಅವರು 2022ರ ಫೆಬ್ರವರಿಯಲ್ಲಿ ವಯೋ ನಿವೃತ್ತಿ ಹೊಂದಿದ್ದರು. ಆದರೆ, ವೈದ್ಯರಿಲ್ಲದ ಹಿನ್ನೆಲೆಯಲ್ಲಿ ಅವರನ್ನು ಹೊರಗುತ್ತಿಗೆಯಲ್ಲಿ ಮುಂದುವರಿಸಲಾಗಿತ್ತು. ಅವರು ಹೊರರೋಗಿಗಳ ವಿಭಾಗದಲ್ಲಿ ಪ್ರಮುಖವಾಗಿ ರೋಗಿಗಳನ್ನು ನೋಡುತ್ತಿದ್ದರು.

ಗುರುವಾರ ಅವರು ಜಿಲ್ಲಾಸ್ಪತ್ರೆಯ ಹೊರ ರೋಗಿ ವಿಭಾಗದಲ್ಲಿ ಸೇವೆ ನೀಡುತ್ತಿದ್ದ ವೇಳೆ ಒಮ್ಮೆಗೇ ಕುಸಿದು ಬಿದ್ದರು. ರೋಗಿಗೆ ಚಿಕಿತ್ಸೆ ನೀಡುತ್ತಿರುವ ಸಂದರ್ಭದಲ್ಲೇ ಕುಸಿದು ಬಿದ್ದಿದ್ದ ಶಶಿಕಲಾ ಅವರನ್ನು ಕೂಡಲೇ ಜಿಲ್ಲಾಸ್ಪತ್ರೆ ಸಿಬ್ಬಂದಿಗಳು ತುರ್ತು ಚಿಕಿತ್ಸಾ ವಿಭಾಗಕ್ಕೆ ಕರೆದೊಯ್ದು ಚಿಕಿತ್ಸೆ ನೀಡಿದರು. ಆದರೆ, ಶಶಿಕಲಾ ಅವರು ಯಾವುದೇ ಚಿಕಿತ್ಸೆಗೆ ಸ್ಪಂದಿಸದೆ ಪ್ರಾಣ ಕಳೆದುಕೊಂಡರು. ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಡಾಕ್ಟರ್‌ಗೇ ಈ ರೀತಿಯಾ ಹೃದಯಾಘಾತ ಸಂಭವಿಸಿದ್ದು, ವೈದ್ಯಕೀಯ ವಲಯದಲ್ಲಿ ಆತಂಕ ಮೂಡಿಸಿದೆ.

ಇದನ್ನೂ ಓದಿ: Bomb Threat: ಗಂಡನ ಮೇಲಿನ ಸಿಟ್ಟಿಗೆ ಫೇಕ್‌ ಬಾಂಬ್‌ ಇಟ್ಟಳು! ಇದರ ಹಿಂದಿತ್ತು Love ಕಹಾನಿ

ಸಿಂಧನೂರಿನಲ್ಲಿ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು

ರಾಯಚೂರು: ಟಾಟಾ ಎಸಿ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ನಾಲ್ವರು ಸ್ಥಳದಲ್ಲೇ ಮೃತಪಟ್ಟು ಒಬ್ಬರು ಗಾಯಗೊಂಡ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ತಾ.ಪಗಡದಿನ್ನಿ ಕ್ಯಾಂಪ್ ಬಳಿ ನಡೆದಿದೆ.

ಇಸ್ಮಾಯಿಲ್(25),ಚನ್ನಬಸವ (26),ಅಂಬರೀಶ್ (20), ರವಿ( 21) ಮೃತರು. ಗಂಭೀರವಾಗಿ ಗಾಯಗೊಂಡವನ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಮೃತದೇಹಗಳನ್ನ ಸಿಂಧನೂರು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಉಡುಪಿ

Karnataka Weather : ಮತ್ತೆ ಬದಲಾಯ್ತು ವಾತಾವರಣ; ಮಳೆ ಹೋಯ್ತು, ಬಿಸಿಲು ಬಂತು!

Karnataka Weather Forecast : ಮಿಚುಂಗ್‌ ಸೈಕ್ಲೋನ್‌ ಪ್ರಭಾವದಿಂದಾಗಿ ಕಳೆದೊಂದು ವಾರದಿಂದ ರಾಜ್ಯದ ಬಹುತೇಕ ಕಡೆ ಮೋಡ ಕವಿದ ವಾತಾವರಣ ಇತ್ತು. ಇದೀಗ ಪ್ರಭಾವ ಕಡಿಮೆ ಆಗಿದ್ದು, ರಾಜ್ಯಾದ್ಯಂತ ಇನ್ನೆರಡು ದಿನಗಳು ಶುಷ್ಕ ವಾತಾವರಣ (Dry weather) ಇರಲಿದ್ದು, ಮಳೆಗೆ (Rain News) ಬ್ರೇಕ್‌ ಬಿದ್ದಿದೆ.

VISTARANEWS.COM


on

By

dry weather karnataka weather Forecast
Koo

ಬೆಂಗಳೂರು: ರಾಜ್ಯದ ಹಲವೆಡೆ ಮತ್ತೆ ವಾತಾವರಣ ಬದಲಾಗಿದೆ. ಮಳೆಗೆ ಹೋಗಿ ಮತ್ತೆ ಬಿಸಿಲು ಆವರಿಸುತ್ತಿದೆ. ಇನ್ನೆರಡು ದಿನಗಳು ರಾಜ್ಯದಲ್ಲಿ ಒಣಹವೆ (Dry weather) ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ಡಿ.7-8ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಗೆ ಯಾವುದೇ ಮಳೆ ಮುನ್ಸೂಚನೆಯಿಲ್ಲ. ಬದಲಿಗೆ ಒಣಹವೆಯೇ ಮೇಲುಗೈ ಸಾಧಿಸಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಶುಷ್ಕ ವಾತಾವರಣ ಇರಲಿದೆ.

ಇದನ್ನೂ ಓದಿ: Winter Cardigan Fashion: ಚಳಿಗಾಲದಲ್ಲಿ ಸ್ಟೈಲಿಶ್‌ ಆಗಿ ಕಾಣಿಸುವ ಕಾರ್ಡಿಗಾನ್‌ ಫ್ಯಾಷನ್‌

ಹಗುರ ಮಳೆಯಷ್ಟೇ!

ಇನ್ನೂ ದಕ್ಷಿಣ ಒಳನಾಡಿನ ಚಾಮರಾಜನಗರದಲ್ಲಿ ಮಾತ್ರ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ. ಉಳಿದಂತೆ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಚಿಕ್ಕಬಳ್ಳಾಪುರ ಸೇರಿ ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಲ್ಲಿ ಒಣಹವೆ ಇರಲಿದೆ.

ಇತ್ತ ಮಲೆನಾಡಿನ ಹಾಸನ, ಕೊಡಗು, ಶಿವಮೊಗ್ಗ,ಚಿಕ್ಕಮಗಳೂರಲ್ಲೂ ಮಳೆ ಮುನ್ಸೂಚನೆ ಇಲ್ಲ. ಬಿಸಿಲಿನಿಂದ ಕೂಡಿರಲಿದೆ. ಇನ್ನು ಬೆಂಗಳೂರಲ್ಲಿ ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಉಷ್ಣಾಂಶ 29 ಹಾಗೂ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 28 ಡಿ.ಸೆ -19 ಡಿ.ಸೆ
ಮಂಗಳೂರು: 33 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 29 ಡಿ.ಸೆ – 18 ಡಿ.ಸೆ
ಗದಗ: 30 ಡಿ.ಸೆ – 18 ಡಿ.ಸೆ
ಹೊನ್ನಾವರ: 34 ಡಿ.ಸೆ- 23 ಡಿ.ಸೆ
ಕಲಬುರಗಿ: 26 ಡಿ.ಸೆ – 21 ಡಿ.ಸೆ
ಬೆಳಗಾವಿ: 29 ಡಿ.ಸೆ – 17 ಡಿ.ಸೆ
ಕಾರವಾರ: 35 ಡಿ.ಸೆ – 23 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಉಡುಪಿ

Billionaire Farmer : ಕುಂದಾಪುರದ ರಮೇಶ್‌ ನಾಯಕ್‌ ಬಿಲಿಯನೇರ್‌ ರೈತ; ಇವರ ತೋಟ ನೋಡಿದ್ರಾ?

Billionaire farmer: ಕುಂದಾಪುರದ ಪ್ರಗತಿಪರ ರೈತ, ಉದ್ಯಮಿಯೊಬ್ಬರು ಕೇಂದ್ರ ಸರ್ಕಾರದ ಬಿಲಿಯನೇರ್‌ ರೈತ ಪ್ರಶಸ್ತಿ ಪಡೆದಿದ್ದಾರೆ. ಹಾಗಿದ್ದರೆ ಅವರು ಮಾಡಿದ್ದೇನು? ಇಲ್ಲಿದೆ ಮಾಹಿತಿ.

VISTARANEWS.COM


on

Ramesh Nayak Billionaire farmer
Koo

ಉಡುಪಿ: ರೈತ ಅಂದ ಕೂಡಲೇ ಬಡವ, ಸಾಲ ಸುಳಿಗೆ ಸಿಲುಕಿದವರು ಎಂಬೆಲ್ಲಾ ಚಿತ್ರಣಗಳು ಮೂಡುವ ಕಾಲದಲ್ಲಿ ಉಡುಪಿ ಜಿಲ್ಲೆಯ ಕುಂದಾಪುರದ ತೆಕ್ಕಟ್ಟೆಯ‌ ವ್ಯಕ್ತಿಯೊಬ್ಬರು ಬಿಲಿಯನೇರ್‌ ರೈತ (Billionaire Farmer) ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕೇಂದ್ರ ಸರ್ಕಾರ ಕೊಡುವ ಈ ಪ್ರಶಸ್ತಿಯನ್ನು ಪಡೆದವರು ತೆಕ್ಕಟ್ಟೆಯ ರೈತ ಕಮ್‌ ಉದ್ಯಮಿ ರಮೇಶ್‌ ನಾಯಕ್‌ (Ramesh Nayak). ಡಿಸೆಂಬರ್‌ 7ರಂದು ಸ್ವತಃ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರೇ ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ರೈಸ್‌ಮಿಲ್ ಉದ್ಯಮದ ಜತೆಗೆ ಕೃಷಿ ಮೌಲ್ಯವರ್ಧನೆ ಹಾಗೂ ಗ್ರಾಮೀಣ ರೈತರಿಗೆ ಬೆನ್ನೆಲುಬಾಗಿ ನಿಂತ ಉದ್ಯಮಿ ರಮೇಶ್ ನಾಯಕ್ ಕೇಂದ್ರ ಸರಕಾರ ಕೊಡಮಾಡುವ ಬಿಲಿಯನೇರ್ ರೈತ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ತೆಕ್ಕಟ್ಟೆಯ ರೈಸ್‌ಮಿಲ್ ಉದ್ಯಮಿ ರಮೇಶ್ ನಾಯಕ್ ಅವರು ಕುಂದಾಪುರ ತಾಲೂಕಿನ ಕೆದೂರು ಗ್ರಾಮದಲ್ಲಿ ಸುಮಾರು 13 ಎಕರೆ ಜಾಗದಲ್ಲಿ ಸುಮಾರು 11 ಜಾತಿಯ, ಸುಮಾರು 1,634 ವಿವಿಧ ತಳಿಯ ಹಣ್ಣಿನ ಗಿಡಗಳನ್ನು ನೆಟ್ಟು ಉತ್ತಮ ಫಸಲು ಕಂಡುಕೊಳ್ಳುವ ಮೂಲಕ ನಿಸರ್ಗ ಪ್ರೇಮ ಮೆರೆದು ಜಿಲ್ಲೆಯಲ್ಲಿ ಮಾದರಿಯಾಗಿದ್ದಾರೆ.

ವಾರ್ಷಿಕ ಸುಮಾರು ಕೋಟಿ ರೂ.ಗಳಿಗೂ ಅಧಿಕ ವಹಿವಾಟು ಮಾಡಿರುವ ಹಿನ್ನೆಲೆಯಲ್ಲಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಹೊಸದಿಲ್ಲಿಯಲ್ಲಿ ಡಿ. 7ರಂದು ನಡೆಯುವ ಕಾರ್ಯಕ್ರಮದಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

Ramesh Nayak Billionaire farmer

ಯಾರಿವರು ರೈತ ರಮೇಶ್‌ ನಾಯಕ್‌?

ತೆಕ್ಕಟ್ಟೆ ರಮೇಶ್ ನಾಯಕ್, ಮೂಲತಃ ರೈಸ್ ಮಿಲ್ ಉದ್ಯಮಿ, ಇವರು ಹಣ್ಣುಗಳ ಬಗ್ಗೆ ಇರುವ ವಿಶೇಷ ಪ್ರೀತಿಯಿಂದ ವಿವಿಧ ಉಪ ಉಷ್ಣ ವಲಯದಲ್ಲಿ ಎಳೆಯುವ ವಿಶೇಷ ಹಣ್ಣುಗಳ ಬಗ್ಗೆ ಅಧ್ಯಯನ ಮಾಡಿ
ಕೆದೂರು ಗ್ರಾಮದಲ್ಲಿ ಸುಮಾರು 13 ಎಕ್ರೆ ಜಾಗದಲ್ಲಿ ಕಾಮಾಕ್ಷಿ ಫಾರ್ಮ್ಸ ಅನ್ನು 2019ರಲ್ಲಿ ಸ್ಥಾಪಿಸಿದರು. ರಂಬುಟನ್, 5 ವಿಧದ ಹಲಸು, ಮ್ಯಾಂಗೋಸ್ಟೀನ್, ದುರಿಯನ್, ಡ್ರಾಗನ್, ಪ್ಯಾಶನ್ ಹಣ್ಣು ಹೀಗೆ ವಿವಿಧ ಹಣ್ಣುಗಳನ್ನು ಯಾವುದೇ ಹಾನಿಕಾರಕ ರಾಸಾಯನಿಕಗಳನ್ನು ಬಳಸದೆ ಬೆಳೆಯುತ್ತಾರೆ.

ಹಣ್ಣುಗಳನ್ನು ಬೆಳೆಯುವುದು ಅಷ್ಟೇ ಅಲ್ಲದೆ ಹಣ್ಣುಗಳನ್ನು ಸ್ವಚ್ಛಗೊಳಿಸಿ ಕತ್ತರಿಸಿ ಬಾಕ್ಸ್ ಗಳಲ್ಲಿ ಪ್ಯಾಕ್ ಮಾಡಿ ಮಾರಾಟ ಮಾಡಿ ಕರಾವಳಿ ಕರ್ನಾಟಕದಲ್ಲಿ ಹಣ್ಣುಗಳ ವ್ಯಾಪಾರಕ್ಕೆ ಹೊಸ ಭಾಷ್ಯ ಬರೆದಿದ್ದು ರಮೇಶ್ ನಾಯಕ್ ಅವರ ಕಾಮಾಕ್ಷಿ ಫಾರ್ಮ್ಸ್.

Ramesh Nayak Billionaire farmer

ಹಲಸಿನ ಸೊಳೆ ಹೋಮ್‌ ಡೆಲಿವರಿ ಮಾಡ್ತಾರೆ!

ವಿವಿಧ ತಳಿಯ ಹಲಸಿನ ಹಣ್ಣನ್ನು ಬಾಕ್ಸ್ ಮಾಡಿ ತಳಿಗಳ ಬಗ್ಗೆ ಗ್ರಾಹಕರಿಗೆ ತಿಳಿಸಿ ಉತ್ತಮ ರುಚಿಯ ಶುಚಿಯಾದ ಹಲಸಿನ ಸೊಳೆಗಳ ಬಾಕ್ಸ್ ಅನ್ನು ಹೋಂ ಡೆಲಿವರಿ ಮೂಲಕ ಮನೆ ಮನೆಗೆ ತಲುಪಿಸಿ ಪ್ರಾರಂಭವಾದ ಹಣ್ಣುಗಳ ಬಾಕ್ಸ್ ಮಾರಾಟ ನಂತರದ ದಿನಗಳಲ್ಲಿ ಅನಾನಸ್, ಪಪಾಯ, ಡ್ರಾಗನ್ ಹೀಗೆ ತೋಟದಲ್ಲಿ ಬೆಳೆಯುವ ಎಲ್ಲ ಹಣ್ಣುಗಳಿಗೆ ಅಳವಡಿಸಿ ಅದರಲ್ಲಿ ಯಶ ಕಂಡಿದ್ದಾರೆ. ತೋಟದಿಂದ ಗ್ರಾಹಕರಿಗೆ ಎಂಬ ವಿಚಾರವನ್ನಿಟ್ಟು ಉತ್ತಮ ಗುಣಮಟ್ಟದ ಹಣ್ಣುಗಳನ್ನು ನೇರವಾಗಿ ಗ್ರಾಹರಿಗೆ ತಲುಪಿಸುವಲ್ಲಿ ಹೆಜ್ಜೆಯನ್ನು ಇಟ್ಟಿದ್ದಾರೆ.

ಇದನ್ನೂ ಓದಿ: Agriculture APP : ರೈತರಿಗಾಗಿ AI ಆಧಾರಿತ ಆ್ಯಪ್ ಶೀಘ್ರ; ಕೃಷಿ ಇಲಾಖೆಯಿಂದ ಮಹತ್ವದ ಹೆಜ್ಜೆ

ವಿದೇಶದಿಂದ ಆಮದಾಗುವ ಹಣ್ಣುಗಳನ್ನು ರುಚಿ ಮತ್ತು ಗುಣಮಟ್ಟದಲ್ಲಿ ಯಾವುದೇ ರಾಜಿಯಾಗದೇ ಹಾನಿಕಾರಕ ರಾಸಾಯನಿಕಗಳನ್ನೂ ಬಳಸದೆ ಬೆಳೆದು ಮಾರುಕಟ್ಟೆ ಮಾಡುವಲ್ಲಿ ಕಾಮಾಕ್ಷಿ ಫಾರ್ಮ್ಸ್ ಯಶ ಕಂಡಿದೆ.

Continue Reading
Advertisement
cm k chandrashekar rao
ದೇಶ39 seconds ago

K Chandrasekhar Rao: ರೇವಂತ್‌ ರೆಡ್ಡಿ ಸಿಎಂ ಆದ ದಿನವೇ ಜಾರಿ ಬಿದ್ದು ಸೊಂಟ ಮುರಿದುಕೊಂಡ ಕೆಸಿಆರ್‌

Jasprit bumarh
ಕ್ರಿಕೆಟ್5 mins ago

Jasprit Bumrah : ಬುಮ್ರಾ ಚಿತ್ರ ಹಾಕಿ ಎಲ್ಲರಿಗೂ ಸಂದೇಶ ರವಾನಿಸಿದ ಮುಂಬಯಿ ಇಂಡಿಯನ್ಸ್​​​

Karthik threw the sandal to vinay Ugly Fight
ಬಿಗ್ ಬಾಸ್21 mins ago

BBK SEASON 10: ಚಪ್ಪಲಿ ಎಸೆದೆ ಕಾರ್ತಿಕ್‌; ನನಗೆ ಮರ್ಯಾದೆ ಇಲ್ವಾ? ಆಚೆ ಹೋಗ್ಬೇಕು ಎಂದ ವಿನಯ್‌!

RBI governor Shaktikanta Das
ದೇಶ45 mins ago

RBI monetary policy: ಆರ್‌ಬಿಐ ಹಣಕಾಸು ನೀತಿ ಸಮಿತಿ ಸಭೆಯ ನಿರ್ಧಾರ ಇಂದು; ಬಡ್ಡಿ ದರ ಏರುತ್ತಾ?

Stamp duty
ಕರ್ನಾಟಕ53 mins ago

Assembly Session : ಭೂಮಿ ಬೆಲೆ ಹೆಚ್ಚಿಸಿದ್ದ ಸರ್ಕಾರದಿಂದ ಮುದ್ರಾಂಕ ಶುಲ್ಕವೂ ಹೆಚ್ಚಳ

dengue flue
ಆರೋಗ್ಯ1 hour ago

Dengue Fever: ಸೊಳ್ಳೆಗಳಿಂದ ದೂರವಿರಿ! ಹೆಚ್ಚುತ್ತಿರುವ ಡೆಂಗ್ಯೂ ಜ್ವರ, 15 ಸಾವಿರ ಪ್ರಕರಣ ದಾಖಲು

Vistara Editorial, Government should conduct exam without any lapse
ಕರ್ನಾಟಕ2 hours ago

Cabinet Meeting: ಕೃಷಿಕರಲ್ಲದವರಿಂದ ಕೃಷಿ ಭೂಮಿ ಖರೀದಿಗೆ ಖೊಕ್‌, ವಿಧೇಯಕ ವಾಪಸ್ ಪಡೆಯಲು ಸಂಪುಟ ತೀರ್ಮಾನ

Raja Marga Father and Daughter
ಅಂಕಣ2 hours ago

Raja Marga Column : 13 ವರ್ಷದ ನನ್ನ ಮಗಳು ಒಮ್ಮಿಂದೊಮ್ಮೆಗೆ ಮಂಕಾಗಿದ್ದು ಯಾಕೆ?

Hair Care Tips
ಆರೋಗ್ಯ2 hours ago

Hair Care Tips: ಕೂದಲು ಚೆನ್ನಾಗಿರಬೇಕೆಂದರೆ ಯಾವ ಆಹಾರ ಸೇವಿಸಬೇಕು?

Heavy Rain warning In karnataka
ಉಡುಪಿ3 hours ago

Karnataka Weather : ಬಟ್ಟೆ ತೊಳೆಯೋಕೆ ವೀಕೆಂಡ್‌ವರೆಗೂ ಕಾಯ್ಬೇಡಿ; ಇನ್ನೊಂದು ವಾರ ಭಾರಿ ಮಳೆ!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Dina Bhavishya
ಪ್ರಮುಖ ಸುದ್ದಿ4 hours ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ15 hours ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

Veer Savarkar and Priyank Kharge
ಕರ್ನಾಟಕ15 hours ago

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

CM-Siddaramaiah
ಕರ್ನಾಟಕ21 hours ago

CM Siddaramaiah: ಮೌಲ್ವಿ ಬಗ್ಗೆ ಕೇಂದ್ರದಿಂದ ತನಿಖೆ ನಡೆಸಿ ಪ್ರೂವ್‌ ಮಾಡಲಿ; ಯತ್ನಾಳ್‌ಗೆ ಸಿಎಂ ಸವಾಲು

Dina Bhavihsya
ಪ್ರಮುಖ ಸುದ್ದಿ1 day ago

Dina Bhavishya: ಮದುವೆಗಿದ್ದ ಅಡೆತಡೆಗಳು ಮಾಯ; ಈ ರಾಶಿಯವರಿಗೆ ವಿವಾಹ ಯೋಗ!

R ashok and CM siddaramiah in Karnataka Assembly Session
ಕರ್ನಾಟಕ2 days ago

Belagavi Winter Session: ಮುಸ್ಲಿಮರಿಗೆ 10 ಸಾವಿರ ಕೋಟಿ ಕೊಡ್ತೀರಿ; ರೈತರಿಗೆ 2000 ರು. ಮಾತ್ರವೇ? ಬಿಜೆಪಿ ಕಿಡಿ

CM Siddaramaiah and Tanveer
ಕರ್ನಾಟಕ2 days ago

CM Siddaramaiah: ಸಿಎಂ ಪಕ್ಕ ಐಸಿಸ್‌ ಸಂಪರ್ಕಿತ ಆರೋಪಕ್ಕೆ ಫೋಟೊ ಸಾಕ್ಷಿ ಕೊಟ್ಟ ಯತ್ನಾಳ್!

MLA Basanagouda Patil Yatnal and CM Siddaramaiah
ಕರ್ನಾಟಕ2 days ago

CM Siddaramaiah: ಮುಸ್ಲಿಂ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಐಸಿಸ್‌ ಸಂಪರ್ಕಿತ; ಸಾಕ್ಷಿ ಕೊಡುವೆನೆಂದ ಯತ್ನಾಳ್‌

We will catch the wild elephant that killed Arjuna
ಕರ್ನಾಟಕ2 days ago

ಕಾರ್ಯಾಚರಣೆ ಸ್ಥಗಿತ; ಅರ್ಜುನನ ಕೊಂದ ಕಾಡಾನೆಯನ್ನು ಹಿಡಿದೇ ತೀರುವೆ-ಮಾವುತನ ಶಪಥ!

Government Job Vistara Exclusive and CM Siddaramaiah
ಉದ್ಯೋಗ2 days ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

ಟ್ರೆಂಡಿಂಗ್‌