Site icon Vistara News

ನಮ್ಮ ಬಿಜೆಪಿಯವರಿಗೆ ಅಹಂಕಾರ; ಮುಸ್ಲಿಮರಿಗೆ ಯಾಕೆ ಕೆಲಸ ಮಾಡಿಕೊಡಬೇಕು ಎಂದು ಕೇಳುತ್ತಾರೆ: ಉಮಾನಾಥ ಕೋಟ್ಯಾನ್

Arrogance for our BJP leaders Asks why help non voting Muslims says Umanatha Kotyan

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್‌ (Umanath Kotian) ಸ್ವಪಕ್ಷದ ವಿರುದ್ಧವೇ ಹರಿಹಾಯ್ದಿದ್ದಾರೆ. ಬಿಜೆಪಿಗೆ ಮುಸ್ಲಿಮರು ಅಪ್ಪಿತಪ್ಪಿಯೂ ಮತ ಹಾಕುವುದಿಲ್ಲ ಎಂದು ನಮ್ಮ ಪಕ್ಷದವರೇ ಹೇಳುತ್ತಾರೆ. ಅವರಿಗೆ ನಾವು ಯಾಕೆ ಕೆಲಸ ಮಾಡಬೇಕು ಎಂದೂ ಕೇಳುತ್ತಾರೆ. ನಮ್ಮ ಬಿಜೆಪಿ ಪಕ್ಷದವರಿಗೆ ಅಹಂಕಾರ ಎಂದು ಹೇಳಿದ್ದಾರೆ.

ಮೂರು ದಿನದ ಹಿಂದೆ ಕಿನ್ನಿಗೋಳಿಯಲ್ಲಿ ಮುಸ್ಲಿಮರ ಜತೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಉಮಾನಾಥ ಕೋಟ್ಯಾನ್ ಈ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಈ ವಿಡಿಯೊ ಈಗ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗಿದ್ದು, ಬಿಜೆಪಿಗೆ ಮುಜುಗರ ತಂದಿದೆ. ಅಲ್ಲದೆ, ಈ ಹೇಳಿಕೆಗೆ ಬಿಜೆಪಿ ವಲಯದಲ್ಲಿ ಭಾರಿ ಆಕ್ಷೇಪ ವ್ಯಕ್ತವಾಗಿದೆ.

ಇದನ್ನೂ ಓದಿ: Karnataka Congress: ಕಾಂಗ್ರೆಸ್‌ನಲ್ಲಿ ಆಕಾಂಕ್ಷಿಗಳ ಆಕ್ರೋಶ ಸ್ಫೋಟವಾಗುತ್ತದೆಯೇ?: ದೆಹಲಿಯಲ್ಲಿ ಕಾವೇರಿದ ಕರ್ನಾಟಕ ರಾಜಕೀಯ

ಮುಸ್ಲಿಮರು ನಮಗೆ ಮತ ಹಾಕಲ್ಲ, ನಾವು ಯಾಕೆ ಕೆಲಸ ಮಾಡಬೇಕು ಎಂದು ಪ್ರಶ್ನೆ ಕೇಳುತ್ತಾರೆ. ಆದರೆ ನಾನು ಹಾಗಲ್ಲ. ನಾನು‌ ಈ ಎರಡಕ್ಕೂ ವಿರುದ್ಧವಾಗಿ ಕೆಲಸ ಮಾಡುತ್ತಿದ್ದೇನೆ‌ ಎಂದು ಕೋಟ್ಯಾನ್ ಹೇಳಿದ್ದಾರೆ. ಈ ಹೇಳಿಕೆಗೆ ಹಿಂದು ಸಂಘಟನೆಗಳಿಂದಲೂ ಆಕ್ರೋಶ ವ್ಯಕ್ತವಾಗಿದೆ.

Exit mobile version