Site icon Vistara News

Hubballi News: ರಾಜ್ಯ ಸರ್ಕಾರಿ ರೇಡಿಯಾಲಜಿ ಇಮೇಜಿಂಗ್ ಅಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಅಶೋಕ ವಾಲ್ಮೀಕಿ ಆಯ್ಕೆ

Hubballi News

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ರೇಡಿಯಾಲಜಿ ಇಮೇಜಿಂಗ್ ಅಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಅಶೋಕ ವಾಲ್ಮೀಕಿ ಆಯ್ಕೆಯಾಗಿದ್ದಾರೆ. ಹುಬ್ಬಳ್ಳಿಯಲ್ಲಿ (Hubballi News) ಭಾನುವಾರ ನಡೆದ ಸಂಘದ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಹೊಸ ಪದಾಧಿಕಾರಿಗಳ ಚುನಾವಣೆ ನಡೆಯಿತು. ಖಜಾಂಚಿಯಾಗಿ ಪ್ರಮೋದ್ ಹಿರೇಮಠ ಆಯ್ಕೆಯಾದರು.

ಇದನ್ನೂ ಓದಿ: Kannada New Movie: ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ‘ಭೈರತಿ ರಣಗಲ್‍’ ಚಿತ್ರ ನ.15ಕ್ಕೆ ರಿಲೀಸ್‌

ಚುನಾವಣಾಧಿಕಾರಿಗಳಾಗಿ ಸೊಸೈಟಿ ಆಫ್ ಇಂಡಿಯನ್ ರೇಡಿಯೋಗ್ರಾಫರ್ಸ್‌ ಅಸೋಸಿಯೇಶನ್ಸ್ ಸಂಸ್ಥಾಪಕ ಎಸ್.ಎ. ವಾಜಿದ್ ಕಾರ್ಯನಿರ್ವಹಿಸಿದರು. ಸಂಘದ ಇತರ ಪದಾಧಿಕಾರಿಗಳಾದ ವೆಂಕಟರಮಣಪ್ಪ, ಕಿಶೋರ ಕೋಟೂರ, ನಂಜುಂಡಸ್ವಾಮಿ, ಅಶ್ವಥನಾರಾಯಣ ಮುಂತಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ: Kannappa Movie: ಕಣ್ಣಪ್ಪ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಮೋಹನ್‌ ಬಾಬು ಮೊಮ್ಮಗ ಅವ್ರಾಮ್ ಮಂಚು

ಅಶೋಕ ವಾಲ್ಮೀಕಿ ಅವರು ಹುಬ್ಬಳ್ಳಿಯ ಕರ್ನಾಟಕ ಮೆಡಿಕಲ್ ಕಾಲೇಜ್ ಮತ್ತು ರೀಸರ್ಚ್ ಇನ್ಸ್‌ಟಿಟ್ಯೂಟ್ (ಕೆಎಂಸಿಆರ್‌ಐ) ನಲ್ಲಿ ರೇಡಿಯಾಲಜಿ ಇಮೇಜಿಂಗ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Exit mobile version