Site icon Vistara News

Assault Case: ಎಣ್ಣೆ ಮತ್ತಲ್ಲಿ ಪೊಲೀಸ್ ಕಾನ್ಸ್‌ಟೇಬಲ್‌ಗೆ ಕಪಾಳಮೋಕ್ಷ ಮಾಡಿದ ಪುಂಡರು

Accused

ಕಲಬುರಗಿ: ಇಲ್ಲಿನ ದೇವಾ ನಗರದ ಸಾಯಿ ಮಂದಿರದ ಬಳಿಯಿರುವ ಯರಗೋಳ ಕಲ್ಯಾಣ ಮಂಟಪ ಬಳಿ ಎಣ್ಣೆ ಮತ್ತಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಹಲ್ಲೆ (Assault case) ಮಾಡಿದ್ದಾರೆ. ಸ್ಟೇಷನ್ ಬಜಾರ್ ಠಾಣೆಯ (Station Bazaar Police Station) ಪೊಲೀಸ್ ಕಾನ್ಸ್‌ಟೇಬಲ್ (Constable) ಶಾಂತಲಿಂಗ ಹಲ್ಲೆಗೊಳಗಾದವರು.

ಮಲ್ಲಿಕಾರ್ಜುನ ಮತ್ತು ವಿಜಯ ಎಂಬುವವರು ಕಂಠಪೂರ್ತಿ ಕುಡಿದು ಕಟ್ಟಡ ಒಂದರಲ್ಲಿ ಕುಳಿತು ಕಿರುಚಾಡುತ್ತಿದ್ದರು. ಕಿರುಚಾಟ ಕೇಳಿ ರಾತ್ರಿ ಗಸ್ತಿನಲ್ಲಿದ್ದ ಪಿಸಿ ಶಾಂತಲಿಂಗ ಮತ್ತು ದೇವೇಂದ್ರ ಎಂಬುವವರು ಸ್ಥಳಕ್ಕೆ ತೆರಳಿ ವಿಚಾರಿಸಿದ್ದಾರೆ.

ಈ ವೇಳೆ ಪಿಸಿ ಶಾಂತಲಿಂಗ ಅವರ ಶರ್ಟ್ ಹಿಡಿದು ಕಪಾಳಕ್ಕೆ ಹೊಡೆದು ಹಲ್ಲೆ ಮಾಡಿದ್ದಾರೆ. ಪಾನಮತ್ತರಾಗಿದ್ದ ಮಲ್ಲಿಕಾರ್ಜುನ ಮತ್ತು ವಿಜಯ ಪೊಲೀಸರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ. ಸದ್ಯ ಆರೋಪಿಗಳಿಬ್ಬರನ್ನು ಬಂಧಿಸಿದ್ದು, ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುತ್ತಪ್ಪ ರೈ ಮಗ ಮತ್ತು ಉದ್ಯಮಿ ನಾಯ್ಡು ನಡುವೆ ಮತ್ತೆ ಜಟಾಪಟಿ

ಬೆಂಗಳೂರಲ್ಲಿ ಈಗಾಗಲೇ ಪೊಲೀಸ್‌ ಠಾಣೆಯಲ್ಲಿ ಪರಸ್ಪರ ಪ್ರಕರಣ ದಾಖಲಾಗಿರುವ ಬೆಂಗಳೂರಿನ ಭೂಗತ ಜಗತ್ತಿನ (Bangalore underworld) ಇಬ್ಬರು ರೌಡಿಶೀಟರ್‌ಗಳ ನಡುವೆ ಮತ್ತೊಮ್ಮೆ ಜಟಾಪಟಿ ನಡೆದಿದೆ. ಮಾಜಿ ಡಾನ್‌ ಮುತ್ತಪ್ಪ ರೈ ಮಗ ರಿಕ್ಕಿ ರೈ ಹಾಗೂ ಉದ್ಯಮಿ ಶ್ರೀನಿವಾಸ್ ನಾಯ್ಡು ಮತ್ತೊಮ್ಮೆ ಕೈ ಮಿಲಾಯಿಸಿಕೊಂಡಿದ್ದಾರೆ.

ಲ್ಯಾವೆಲ್ಲೆ ರೋಡ್ ಖಾಜೆ ಬಾರ್ ಅಂಡ್ ಕಿಚನ್ ಹೋಟೆಲ್‌ನಲ್ಲಿ ಘಟನೆ ನಡೆದಿದೆ. ಮಧ್ಯರಾತ್ರಿ 1 ಗಂಟೆಗೆ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಹಾಗೂ ಉದ್ಯಮಿ ಶ್ರೀನಿವಾಸ್ ನಾಯ್ಡು ಮುಖಾಮುಖಿಯಾಗಿದ್ದು, ಇಬ್ಬರ ನಡುವೆ ಜಗಳ ಶುರುವಾಗಿದೆ. ಮದ್ಯದ ಅಮಲಿನಲ್ಲಿ ಇಬ್ಬರೂ ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಘಟನೆಯಲ್ಲಿ ರಿಕ್ಕಿ ರೈ ಹಣೆಗೆ ಗಾಯವಾಗಿದ್ದು, ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆ ಬಗ್ಗೆ ರಿಕ್ಕಿ ರೈ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಗಲಾಟೆ ಸಂಬಂಧಿಸಿದಂತೆ ಯಾವುದೇ ಪ್ರಕರಣ ದಾಖಲಾಗಿಲ್ಲ.

ಇದನ್ನೂ ಓದಿ: Karnataka Cabinet expansion: ಸಿದ್ದರಾಮಯ್ಯ ಸಂಪುಟದಲ್ಲಿ ಸಿಗದ ಸ್ಥಾನ; ಅಸಮಾಧಾನ ಸ್ಫೋಟ

ಈ ಹಿಂದೆ ಉದ್ಯಮಿ ಶ್ರೀನಿವಾಸ ನಾಯ್ಡುಗೆ ಸೇರಿದ ಒಂದು ಕೋಟಿ ರೂಪಾಯಿ ಬೆಲೆಯ ರೇಂಜ್‌ ರೋವರ್‌ ಕಾರನ್ನು ರಿಕ್ಕಿ ರೈ ಸಹಚರರು ಸುಟ್ಟುಹಾಕಿದ್ದಾರೆ ಎಂದು ನಾಯ್ಡು ದೂರು ನೀಡಿದ್ದರು. ಇದಕ್ಕೂ ಮೊದಲು ಒಡನಾಡಿಗಳಾಗಿದ್ದ ರಿಕ್ಕಿ ರೈ ಹಾಗೂ ಶ್ರೀನಿವಾಸ ನಾಯ್ಡು ನಡುವೆ ಬಳಿಕ ವೈಮನಸ್ಯ ಬೆಳೆದಿತ್ತು.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version