Site icon Vistara News

Assault Case: ಬಿಜೆಪಿ ಅಭ್ಯರ್ಥಿ ಪರ ಮತಯಾಚಿಸಿದ್ದಕ್ಕೆ ಜೆಡಿಎಸ್‌ ಗ್ರಾಪಂ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ

Assault case

ತುಮಕೂರು: ಬಿಜೆಪಿ ಅಭ್ಯರ್ಥಿ ಪರ ಮತಯಾಚನೆ ಮಾಡಿದ್ದಕ್ಕೆ ಜೆಡಿಎಸ್‌ ಗ್ರಾಪಂ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಕುಣಿಗಲ್ ತಾಲೂಕಿನ ಅಂಚೇಪಾಳ್ಯದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್ ಮಂಜುನಾಥ್ ಪರ ಪ್ರಚಾರ ಮಾಡಿದ್ದಕ್ಕೆ ಕಾಂಗ್ರೆಸ್ ಮುಖಂಡ ಹಾಗೂ ಬೆಂಬಲಿಗರು ಹಲ್ಲೆ (Assault Case) ಮಾಡಿರುವ ಆರೋಪ ಕೇಳಿಬಂದಿದೆ.

ಕೆಂಪನಹಳ್ಳಿ ಗ್ರಾಪಂ ಜೆಡಿಎಸ್ ಸದಸ್ಯ ಮಂಜುನಾಥ್ ಮೇಲೆ ಹಲ್ಲೆಗೊಳಗಾದವರು. ಕೆಂಪನಹಳ್ಳಿ‌ ಕಾಂಗ್ರೆಸ್‌ ಮುಖಂಡ ಬೊರೇಗೌಡ ಹಾಗೂ ಬೆಂಬಲಿಗರ ವಿರುದ್ಧ ಹಲ್ಲೆ ಆರೋಪ ಹಲ್ಲೆ ಆರೋಪ ಕೇಳಿಬಂದಿದೆ. ಬುಧವಾರ ಸಂಜೆ ಮಾತನಾಡಬೇಕೆಂದು‌ ಮಂಜುನಾಥ್‌ ಅವರನ್ನು ಬೋರೇಗೌಡ ಕರೆಸಿಕೊಂಡಿದ್ದ. ಅಂಚೇಪಾಳ್ಯದ ಬಳಿ ಬರುತ್ತಿದ್ದಂತೆ ಏಕಾಏಕಿ ಚಾಕುವಿಂದ‌ ಬೋರೇಗೌಡ ತಿವಿದು ಹಲ್ಲೆ ನಡೆಸಿದ್ದಾನೆ. ಹೀಗಾಗಿ ಪ್ರಾಣ ಉಳಿಸಿಕೊಳ್ಳಲು ಮಂಜುನಾಥ್ ಕೆಳಗೆ ಬಗ್ಗಿದ್ದಾರೆ. ಈ ವೇಳೆ ಮಂಜುನಾಥ್‌ ತಲೆಗೆ ಚಾಕು ಚುಚ್ಚಿದ್ದು, ಗಂಭೀರ ಗಾಯವಾಗಿದೆ. ಅವರನ್ನು ಕುಣಿಗಲ್ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಗೆ ಮಂಜುನಾಥ್ ದೂರು‌ ನೀಡಿದ್ದಾರೆ.

ಇದನ್ನೂ ಓದಿ | Snake Bite: ಚಿಕ್ಕೋಡಿ ಬಳಿ ಹಾವು ಕಚ್ಚಿ ಎರಡೂವರೆ ವರ್ಷದ ಬಾಲಕಿ ಸಾವು

ತುಮಕೂರಲ್ಲಿ ಯುಗಾದಿಯಂದು ಜೂಜಾಟದಲ್ಲಿ ತೊಡಗಿದ್ದ 291 ಮಂದಿ ಬಂಧನ!

ತುಮಕೂರು: ಯುಗಾದಿ ಹಬ್ಬದಂದು ತುಮಕೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಜಿಲ್ಲೆಯ ವಿವಿಧೆಡೆ ಜೂಜಾಟಕ್ಕೆ ಸಂಬಂಧಿಸಿ 53 ಪ್ರಕರಣ ದಾಖಲಾಗಿದ್ದು, ಒಟ್ಟು 291 ಜನರನ್ನು ಬಂಧಿಸಿ, 3.21 ಲಕ್ಷ ರೂ.ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತುಮಕೂರು ನಗರ ಉಪವಿಭಾಗದಲ್ಲಿ 15 ಪ್ರಕರಣದಲ್ಲಿ 77 ಜನರ ಬಂಧನವಾಗಿದ್ದು, ತಿಪಟೂರು ಉಪವಿಭಾಗದಲ್ಲಿ 11 ಪ್ರಕರಣದಲ್ಲಿ 63 ಜನರು, ಶಿರಾ ಉಪವಿಭಾಗದಲ್ಲಿ 20 ಪ್ರಕರಣದಲ್ಲಿ 108 ಮಂದಿ, ಮಧುಗಿರಿ ಉಪವಿಭಾಗದಲ್ಲಿ 7 ಪ್ರಕರಣದಲ್ಲಿ 43 ಜನರನ್ನು ಬಂಧಿಸಲಾಗಿದೆ.

ಇದನ್ನೂ ಓದಿ | FedEx Scam: ಬೆಂಗಳೂರು ವಕೀಲೆಗೆ 15 ಲಕ್ಷ ರೂ. ವಂಚನೆ; ವೆಬ್‌ಕ್ಯಾಮ್‌ ಎದುರು ಬೆತ್ತಲೆ ನಿಂತಿದ್ದೇಕೆ?

ತುಮಕೂರು ಎಸ್‌ಪಿ ಅಶೋಕ್ ಕೆ.ವಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಬಂಧಿತರ ವಿಚಾರಣೆ ಮುಂದುವರಿದಿದೆ.

Exit mobile version