Assembly Session: ಅಧಿಕಾರಿಗಳು ಮಾಡಿದ ಅಕ್ರಮಕ್ಕೆ ಸಚಿವರ ವಿರುದ್ಧ ಆರೋಪಿಸುವುದು ಸರಿಯಲ್ಲ ಎಂದ ಡಿಕೆಶಿ! - Vistara News

ಕರ್ನಾಟಕ

Assembly Session: ಅಧಿಕಾರಿಗಳು ಮಾಡಿದ ಅಕ್ರಮಕ್ಕೆ ಸಚಿವರ ವಿರುದ್ಧ ಆರೋಪಿಸುವುದು ಸರಿಯಲ್ಲ ಎಂದ ಡಿಕೆಶಿ!

Assembly Session: ಯಾರೋ ಅಧಿಕಾರಿ ಮಾಡಿದ ತಪ್ಪಿಗೆ ಸಚಿವರ ಮೇಲೆ ಆರೋಪ ಹೊರಿಸಲು ಆಗುವುದಿಲ್ಲ. ಮಂತ್ರಿಗಳು, ಶಾಸಕರು ಅಕ್ರಮಗಳಲ್ಲಿ ಭಾಗಿಯಾಗಿದ್ದರೆ ಯಾವುದೇ ಕಾರಣಕ್ಕೂ ನಾವು ಅದಕ್ಕೆ ಬೆಂಬಲವಾಗಿ ನಿಲ್ಲುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

VISTARANEWS.COM


on

Assembly Session
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: “ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಹಗರಣದಲ್ಲಿ (Assembly Session) ರಾಷ್ಟ್ರೀಯ ಬ್ಯಾಂಕುಗಳು ಭಾಗಿಯಾಗಿದ್ದರೆ, ಅದಕ್ಕೆ ದೆಹಲಿಯ ಕೇಂದ್ರ ಸಚಿವರು ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲು ಸಾಧ್ಯವೇ?, ಅಧಿಕಾರಿಗಳು ಮಾಡುವ ಅಕ್ರಮಕ್ಕೆ ಸಚಿವರನ್ನು ತಪ್ಪಿತಸ್ಥರನ್ನಾಗಿ ಮಾಡಲು ಸಾಧ್ಯವೇ?” ಎಂದು ಎಂಎಲ್‌ಸಿ ಸಿ.ಟಿ. ರವಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು.

ವಿಧಾನ ಪರಿಷತ್‌ನಲ್ಲಿ ಮಂಗಳವಾರ ನಡೆದ ಕಲಾಪದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ವಿಚಾರವಾಗಿ ಸಿ.ಟಿ.ರವಿ ಅವರು, “ವಾಲ್ಮೀಕಿ ನಿಗಮದ ಹಗರಣ ಪೂರ್ವನಿಯೋಜಿತವಾಗಿದ್ದು, ಮೊದಲೇ ಇ ಸ್ಟಾಂಪ್ ಪೇಪರ್ ಖರೀದಿ ಮಾಡಿ, ಒಂದೇ ದಿನದಲ್ಲಿ ಸಾಲಕ್ಕೆ ಅರ್ಜಿ ಹಾಕಿ, ಸೆಕ್ಯುರಿಟಿ ಓವರ್ ಡ್ರಾಫ್ಟ್ ತೆಗೆದುಕೊಂಡು ಹಣ ಪಡೆಯಲಾಗಿದೆ” ಎಂಬ ವಿಚಾರ ಪ್ರಸ್ತಾಪಿಸಿದರು.

ಇದಕ್ಕೆ ಪ್ರತ್ಯುತ್ತರ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ಸಿ.ಟಿ ರವಿ ಅವರು ಅಕ್ರಮದ ಬಗ್ಗೆ ಮಾತನಾಡುತ್ತಾ ಅಕ್ರಮ ಮಾಡಿದವರ ಒಂದು ಕೂಟ ಇದೆ ಎಂದೆಲ್ಲಾ ಪ್ರಸ್ತಾಪ ಮಾಡಿದ್ದಾರೆ. ಬ್ಯಾಂಕಿನಲ್ಲಿ ಆಗಿರುವ ಅಕ್ರಮದ ವಿಚಾರ ಪ್ರಸ್ತಾಪಿಸಿದ್ದಾರೆ. ಅಕ್ರಮವಾಗಿ ಬ್ಯಾಂಕಿಗೆ ವರ್ಗಾವಣೆಯಾದ ಹಣದ ಮೇಲೆ ಒಂದೇ ದಿನದಲ್ಲಿ ಸಾಲಕ್ಕೆ ಅರ್ಜಿ ಹಾಕಿದರು, ಓವರ್ ಡ್ರಾಫ್ಟ್ ತೆಗೆದುಕೊಂಡು ಹಣ ಬಿಡಿಸಿಕೊಂಡರು ಎಂದೆಲ್ಲ ವಿವರಿಸಿದ್ದಾರೆ. ಬ್ಯಾಂಕಿನಲ್ಲಿ ಒಂದೇ ದಿನದಲ್ಲಿ ಇಷ್ಟೆಲ್ಲಾ ಆಗಿದೆ ಎಂದರೆ ಇಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಸಹ ಭಾಗಿಯಾಗಿದೆ ಎಂದು ಅರ್ಥವಲ್ಲವೇ? ಹೀಗಾಗಿ ನಾನು ಇದರಲ್ಲಿ ದೆಹಲಿಯ ಸನ್ಮಾನ್ಯ ಕೇಂದ್ರ ಸಚಿವರು ಭಾಗಿಯಾಗಿದ್ದಾರೆ ಎಂದು ಹೇಳಲು ಆಗುತ್ತದೆಯೇ?” ಎಂದು ಪ್ರಶ್ನೆಸಿದರು.

ಇದನ್ನೂ ಓದಿ | Uttara Kannada News: ರಾಷ್ಟ್ರೀಯ ಹೆದ್ದಾರಿಯಲ್ಲಿ ಕೃತಕ ನೆರೆ ತಡೆಗೆ ಶಾಶ್ವತ ಪರಿಹಾರ; ಕಾಗೇರಿ

“ಯಾರೋ ಅಧಿಕಾರಿ ಮಾಡಿದ ತಪ್ಪಿಗೆ ಸಚಿವರ ಮೇಲೆ ಆರೋಪ ಹೊರಿಸಲು ಆಗುವುದಿಲ್ಲ. ಮಂತ್ರಿಗಳು, ಶಾಸಕರು ಅಕ್ರಮಗಳಲ್ಲಿ ಭಾಗಿಯಾಗಿದ್ದರೆ ಯಾವುದೇ ಕಾರಣಕ್ಕೂ ನಾವು ಅದಕ್ಕೆ ಬೆಂಬಲವಾಗಿ ನಿಲ್ಲುವುದಿಲ್ಲ. ಈ ಪ್ರಕರಣದಲ್ಲಿ ನಮ್ಮ ಸರ್ಕಾರ ನಿರ್ದಾಕ್ಷಿಣ್ಯವಾಗಿ ನಡೆದುಕೊಂಡು, ತನಿಖಾ ತಂಡ ರಚನೆ ಮಾಡಿದೆ. ತನಿಖಾ ತಂಡವು ಹಣವನ್ನು ಮರಳಿ ಪಡೆದಿದೆ. ಮಾಜಿ ಮಂತ್ರಿಗಳಿಗೆ ಹಾಗೂ ಶಾಸಕರಿಗೆ ನೋಟಿಸ್ ನೀಡಿದೆ. ಎಸ್ ಐಟಿ ಯಾವ ಕ್ರಮ ಬೇಕಾದರೂ ತೆಗೆದುಕೊಳ್ಳಲಿ. ಸಿಬಿಐ ಸೇರಿದಂತೆ ಯಾರು ಬೇಕಾದರೂ ಬಂದು ತನಿಖೆ ಮಾಡಲಿ. ಆದರೆ ನೀವು ಅದಕ್ಕಿಂತ ಮುಂಚಿತವಾಗಿ ಮಂತ್ರಿಗಳನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿಸಿದರೆ ಹೇಗೆ? ನೀವು ಯಾವ ದೃಷ್ಟಿಕೋನದಲ್ಲಿ ಸರಕಾರ ಆರೋಪಿಗಳ ರಕ್ಷಣೆ ಮಾಡುತ್ತಾ ಇದೆ ಎಂದು ಹೇಳಲು ಹೊರಟಿದ್ದೀರಿ ಎಂದು ನನಗೆ ತಿಳಿದಿದೆ. ನೀವು ಅವರ ಹೆಸರು ಹೇಳಿ. ನಾನು ಸಹ ನನಗೆ ಗೊತ್ತಿರುವ ಹೆಸರುಗಳನ್ನು ಹೇಳುತ್ತೇನೆ” ಎಂದು ಸಿ.ಟಿ.ರವಿ ಅವರಿಗೆ ಕುಟುಕಿದರು.

ಕಲಾಪದ ನಡುವೆ ವಿರೋಧ ಪಕ್ಷದವರ ದೋಷಗಳನ್ನು ಕುಳಿತಲ್ಲೇ ತಿದ್ದಿದ ಸಿಎಂ

7th Pay Commission

ಬೆಂಗಳೂರು: 16ನೇ ವಿಧಾನಸಭೆಯ ನಾಲ್ಕನೇ ಅಧಿವೇಶನದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಪ್ರಕರಣ ಕುರಿತಂತೆ ಕಲಾಪದಲ್ಲಿ ಆಡಿದ ಪ್ರತೀ ಮಾತುಗಳನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಳಿಸಿಕೊಂಡರು.

ಸೋಮವಾರ ಮಧ್ಯಾಹ್ನ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರಿಂದ ಮಂಗಳವಾರ ರಾತ್ರಿ ಜೆಡಿಎಸ್ ನ ಶಾರದಾ ಪೂರ್ಯಾನಾಯ್ಕ್ ಮತ್ತು ಬಿಜೆಪಿಯ ಅರವಿಂದ್ ಬೆಲ್ಲದ್ ಅವರು ಮಾತನಾಡುವವರೆಗೂ ಪ್ರತಿಯೊಬ್ಬರ ಮಾತನ್ನೂ ಕೇಳಿಸಿಕೊಂಡರು.

ಎರಡೂ ದಿನದಲ್ಲಿ ಆರ್.ಅಶೋಕ್ ಅವರ ಸುದೀರ್ಘ ನಾಲ್ಕು ಗಂಟೆಗಳ ಮಾತಿನ ಸಮೇತ ಸ್ವಪಕ್ಷದವರ ಮತ್ತು ವಿರೋಧ ಪಕ್ಷದವರ ಮಾತುಗಳನ್ನು ಕೇಳಿಸಿಕೊಂಡರು. ಕುಳಿತ ಜಾಗದಿಂದ ಕದಲದಂತೆ ಶಾಂತಚಿತ್ತವಾಗಿ ಪ್ರತಿಯೊಬ್ಬರ ಮಾತನ್ನೂ ‘ಪಿನ್ ಟು ಪಿನ್’ ಕೇಳಿಸಿಕೊಂಡ ಸಿದ್ದರಾಮಯ್ಯ ಅವರು, ಕಲಾಪದ ನಡುವೆ ವಿರೋಧ ಪಕ್ಷದವರ factual errors ಗಳನ್ನು ಕುಳಿತಲ್ಲೇ ತಿದ್ದುತ್ತಾ ಮುತ್ಸದ್ದಿತನ‌ ಮೆರೆದರು.

ಇದನ್ನೂ ಓದಿ | Manikanta Rathod: ಅನ್ನ ಭಾಗ್ಯ ಅಕ್ಕಿ ಕಳವು ಕೇಸ್‌ನಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಬಂಧನ

ವಿರೋಧ ಪಕ್ಷದವರ ಎಂಟತ್ತು ಗಂಟೆಗಳ ಆರೋಪ, ದಾಳಿ, ಆಕ್ರೋಶದ ನುಡಿಗಳನ್ನು ಬಹುತೇಕ ಎಲ್ಲವನ್ನೂ ಹೆಚ್ಚಿನ ಅಡ್ಡಿ ಪಡಿಸದೆ ಮುಖ್ಯಮಂತ್ರಿಗಳು ಮತ್ತು ಆಡಳಿತ ಪಕ್ಷದ ಸದಸ್ಯರು ಆಲಿಸಿ ಸದನದ ಘನತೆ ಹೆಚ್ಚಿಸಿದರು. ವಾಲ್ಮೀಕಿ ನಿಗಮ ಪ್ರಕರಣದ ವಿರೋಧ ಪಕ್ಷದವರ ಎಲ್ಲಾ ಆರೋಪ ಮತ್ತು ಮಾತುಗಳಿಗೆ ಮುಖ್ಯಮಂತ್ರಿಗಳು ಗುರುವಾರ ಉತ್ತರ ನೀಡಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Bengaluru News: ಬೆಂಗಳೂರಿನಲ್ಲಿ ಗ್ಯಾಲರಿ ಜಿ ಯಿಂದ ‘ಮೊಸಾಯಿಕ್ ಆಫ್ ಮಾಡರ್ನಿಟಿ’ ಕಲಾ ಪ್ರದರ್ಶನ

Bengaluru News: ಬೆಂಗಳೂರಿನ ಗ್ಯಾಲರಿ ಜಿ, ಸಂದೀಪ್ ಮತ್ತು ಗೀತಾಂಜಲಿ ಮೈನಿ ಫೌಂಡೇಶನ್ ಸಹಯೋಗದಲ್ಲಿ ನಗರದ ಗ್ಯಾಲರಿ ಜಿ ಯಲ್ಲಿ ‘ಮೊಸಾಯಿಕ್ ಆಫ್ ಮಾಡರ್ನಿಟಿ ಎಕ್ಸ್‌ಪ್ಲೋರಿಂಗ್‌ ಡೈವರ್ಸಿಟಿ ಇನ್ ಆರ್ಟ್’ ಎಂಬ ಕಲಾಪ್ರದರ್ಶನಕ್ಕೆ ಸೋಮವಾರ ಚಾಲನೆ ನೀಡಲಾಯಿತು.

VISTARANEWS.COM


on

Mosaic of Modernity art exhibition by Gallery G in Bengaluru
Koo

ಬೆಂಗಳೂರು: ಗ್ಯಾಲರಿ ಜಿ, ಸಂದೀಪ್ ಮತ್ತು ಗೀತಾಂಜಲಿ ಮೈನಿ ಫೌಂಡೇಶನ್ ಸಹಯೋಗದಲ್ಲಿ ನಗರದ ಗ್ಯಾಲರಿ ಜಿ ಯಲ್ಲಿ ‘ಮೊಸಾಯಿಕ್ ಆಫ್ ಮಾಡರ್ನಿಟಿ ಎಕ್ಸ್‌ಪ್ಲೋರಿಂಗ್‌ ಡೈವರ್ಸಿಟಿ ಇನ್ ಆರ್ಟ್’ ಎಂಬ ಕಲಾಪ್ರದರ್ಶನಕ್ಕೆ ಸೋಮವಾರ ಚಾಲನೆ (Bengaluru News) ನೀಡಲಾಯಿತು.

ಈ ವಿಶಿಷ್ಟ ಗುಂಪು ಕಲಾ ಪ್ರದರ್ಶನದಲ್ಲಿ ಭಾರತದಾದ್ಯಂತದ ಎಂಟು ಪ್ರತಿಭಾವಂತ ಕಲಾವಿದರ ಕೃತಿಗಳು ಪ್ರದರ್ಶನಗೊಳ್ಳುತ್ತಿವೆ. ಪ್ರತಿಯೊಬ್ಬರೂ ತಮ್ಮ ವಿಶಿಷ್ಟ ಪ್ರಕಾರ ಮತ್ತು ಕಲಾ ಮಾಧ್ಯಮವನ್ನು ಗ್ಯಾಲರಿಯಲ್ಲಿ ಪ್ರಸ್ತುತಪಡಿಸುತ್ತಿದ್ದಾರೆ. ಈ ಪ್ರದರ್ಶನವು ಆಗಸ್ಟ್ 15ರವರೆಗೆ ನಡೆಯಲಿದೆ.

ಇದನ್ನೂ ಓದಿ: Assembly Session: ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ; ಏನೆಲ್ಲ ಅರ್ಹತೆ ಇರಬೇಕು?

ಈ ಪ್ರದರ್ಶನವು ವೀಕ್ಷಕ್ಷರಿಗೆ ಸ್ಪೂರ್ತಿದಾಯಕ ಮತ್ತು ಸೃಜನಶೀಲ ಜಾಗೃತಿಯ ಭರವಸೆ ಕೊಡುತ್ತದೆ. ಈ ಪ್ರದರ್ಶನದಲ್ಲಿ ಕಾಣಿಸಿಕೊಂಡ ಕಲಾವಿದರ ಮಾಹಿತಿ ಇಲ್ಲಿದೆ.

ಜೈ ಖನ್ನಾ: ಬಣ್ಣ ಮತ್ತು ಸಂಕೀರ್ಣ ವಿವರಗಳ ರೋಮಾಂಚಕ ಬಳಕೆಗೆ ಹೆಸರುವಾಸಿಯಾದ ಜೈ ಖನ್ನಾ ಅವರ ಕೆಲಸವು ಹೆಚ್ಚಾಗಿ ಪುರಾಣ ಮತ್ತು ಆಧ್ಯಾತ್ಮಿಕತೆಯ ವಿಷಯಗಳಿಗೆ ಸಂಬಂಧಿಸಿದ್ದು. ಅವರ ವರ್ಣಚಿತ್ರಗಳು ದೃಶ್ಯ ಕಾವ್ಯದಂತೆ ಇದ್ದು. ಸಾಂಪ್ರದಾಯಿಕ ಭಾರತೀಯ ಕಲಾಪ್ರಕಾರಗಳಲ್ಲದೆ ಸಮಕಾಲೀನ ಸೌಂದರ್ಯಶಾಸ್ತ್ರದೊಂದಿಗೆ ಸಮ್ಮಿಲನಗೊಂಡಿದೆ.

ದಿನೇಶ್ ಮಗರ್: ದಿನೇಶ್ ಮಗರ್ ಅವರ ಕಲಾಕೃತಿಗಳು ಅವುಗಳ ದಿಟ್ಟ ಸಂಯೋಜನೆಗಳು ಮತ್ತು ಕ್ರಿಯಾತ್ಮಕ ಶಕ್ತಿಗಾಗಿ ಖ್ಯಾತಿ ಪಡೆದಿದೆ. ಅವರ ಕೆಲಸವು ಹೆಚ್ಚಾಗಿ ದೈವಾಂಶ ಮತ್ತು ಪ್ರಕೃತಿಯೊಂದಿಗಿನ ಅವರ ಆಳವಾದ ಕಲ್ಪನೆಯನ್ನು ಪ್ರತಿಬಿಂಬಿಸುತ್ತದೆ, ಶಾಂತಿ ಮತ್ತು ಆಧ್ಯಾತ್ಮಿಕತೆಯ ಪ್ರಜ್ಞೆಯನ್ನು ಪ್ರಚೋದಿಸಲು ರೂಪಗಳು ಮತ್ತು ವಿನ್ಯಾಸಗಳನ್ನು ಬಳಸಲಾಗಿದೆ.

ಆರೋಹಿ ಸಿಂಗ್: ಆರೋಹಿ ಸಿಂಗ್ ಒಬ್ಬ ಬಹುಮುಖ ಪ್ರತಿಭೆಯ ಕಲಾವಿದೆಯಾಗಿದ್ದು, ಅವರ ಸಂಗ್ರಹಗಳು ಜಾನಪದ ಕಲೆಯಿಂದ ಹಿಡಿದು ಆಧುನಿಕ ಶೈಲಿ ಸೇರಿದಂತೆ ಎಲ್ಲವನ್ನೂ ಒಳಗೊಂಡಿದೆ. ಅವರ ಕೃತಿಗಳು ಭಾರತೀಯ ಸಾಂಸ್ಕೃತಿಕ ಪರಂಪರೆಯಿಂದ ಪಡೆಯಲಾದ ಶ್ರೀಮಂತ ನಿರೂಪಣೆಗಳು ಮತ್ತು ರೋಮಾಂಚಕ ಸಂಗತಿಗಳಿಂದ ನಿರೂಪಿಸಲ್ಪಟ್ಟಿದೆ.

ದಾಮೋದರ್ ಅವಾರೆ: ಅಬ್ಸ್ಟ್ರಾಕ್ ಕಲೆಯಲ್ಲಿ ನೈಪುಣ್ಯ ಹೊಂದಿರುವ ದಾಮೋದರ್ ಅವಾರೆ ಅವರ ವರ್ಣಚಿತ್ರಗಳು ಅವುಗಳ ಪ್ರಶಾಂತ ಮತ್ತು ಚಿಂತನಶೀಲ ಗುಣಗಳಿಂದ ಕೂಡಿದ್ದು ಭಿನ್ನವೆನಿಸುತ್ತದೆ. ಅವರ ಕೃತಿಗಳು ಆಗಾಗ್ಗೆ ಲ್ಯಾಂಡ್ಸ್ಕೇಪ್ ಮತ್ತು ಪಾಕೃತಿಕ ವಿಷಯಗಳನ್ನು ಆಧರಿಸಿದೆ. ಅವುಗಳ ಚಿಂತನಶೀಲ ಸೌಂದರ್ಯವನ್ನು ತನ್ನ ಕ್ಯಾನ್ವಾಸ್ನಲ್ಲಿ ಮೂಡಿಸುತ್ತಾರೆ.

ತುಷಾರ್ ಶಿಂಧೆ: ತುಷಾರ್ ಶಿಂಧೆ ಅವರ ಕಲೆಯು ಬಣ್ಣ ಮತ್ತು ರೂಪಗಳ ಆಚರಣೆಯಾಗಿದೆ. ಅವರ ವರ್ಣಚಿತ್ರಗಳು ತಮ್ಮ ಅಭಿವ್ಯಕ್ತಿಶೀಲ ಗೆರೆಗಳು ಮತ್ತು ದಿಟ್ಟ ಮಾದರಿಗಳಿಗೆ ಹೆಸರುವಾಸಿಯಾಗಿವೆ, ಹೆಚ್ಚಾಗಿ ನಗರ ಜೀವನ ಮತ್ತು ನಗರ ಪ್ರದೇಶಗಳ ಗದ್ದಲದ ಕುರಿತ ಪ್ರತಿಬಿಂಬವಾಗಿದೆ. ಅವರ ಕೃತಿಗಳು ಆಯಾಮ ಮತ್ತು ರೂಪದ ದಿಟ್ಟ ಪ್ರಯೋಗಗಳಾಗಿವೆ.

ರೂನಾ ಬಿಸ್ವಾಸ್: ರೂನಾ ಬಿಸ್ವಾಸ್ ಅವರ ಕೆಲಸವು ಹೆಗ್ಗುರುತು ಮತ್ತು ಸ್ಮರಣೆಯ ವಿಷಯಗಳನ್ನು ಒಳಗೊಂಡಿವೆ.. ಅವರ ಮಿಶ್ರ ಮಾಧ್ಯಮ ರಚನೆಗಳು ಆಳ ಮತ್ತು ವೈಯಕ್ತಿಕ, ಪದರಗಳು, ಆತ್ಮಾವಲೋಕನದ ತುಣುಕುಗಳನ್ನು ರಚಿಸಲು ಕೊಲಾಜ್ ಮತ್ತು ಪಠ್ಯಗಳನ್ನು ಅವರು ಉತ್ತಮವಾಗಿ ಬಳಸಿಕೊಂಡಿದ್ದಾರೆ.

ಅನಾಮಿಕ ಕುಚ್ಚನ್: ಅನಾಮಿಕ ಕುಚ್ಚನ್ ಅವರ ಕಲಾ ಪ್ರಕಾರವು ಸಾಂಪ್ರದಾಯಿಕ ಮತ್ತು ಆಧುನಿಕತೆಯ ಮಿಶ್ರಣವಾಗಿದೆ. ಅವರ ಕೃತಿಗಳು ಅತಿ ಸೂಕ್ಷ್ಮ ಕುಂಚ ಮತ್ತು ಸೂಕ್ಷ್ಮ ಬಣ್ಣಗಳನ್ನು ಒಳಗೊಂಡಿವೆ, ಪ್ರಕೃತಿ ಮತ್ತು ಜೀವನದ ವಿಷಯಗಳನ್ನು ಅದರಲ್ಲಿ ಚಿತ್ರಿಸಲಾಗಿದೆ.

ತ್ರಿದಿಬ್ ಬೇರಾ: ತ್ರಿದಿಬ್ ಬೆರಾ ಅವರ ವಿಶಿಷ್ಟ ಶೈಲಿಯು ಗಾಢವಾದ ಗೆರೆಗಳು ಮತ್ತು ವಿಶೇಷ ಕಾಂಟ್ರಾಸ್ಟ್ಗಳಿಂದ ತುಂಬಿದೆ. ಅವರ ಕಲೆಗಳು ಆಗಾಗ್ಗೆ ಮಾನವ ಭಾವನೆಗಳು ಮತ್ತು ಸಾಮಾಜಿಕ ಸಮಸ್ಯೆಗಳನ್ನು ಬೊಟ್ಟು ಮಾಡುತ್ತವೆ, ಆಲೋಚನೆ ಮತ್ತು ಸಂವಾದ ಪ್ರಕ್ರಿಯೆಯನ್ನು ಪ್ರಚೋದಿಸಲು ಶಕ್ತಿಯುತ ದೃಶ್ಯ ಭಾಷೆಯನ್ನು ಬಳಸುತ್ತಾರೆ.

ಇದನ್ನೂ ಓದಿ: Assembly Session: ಕಾರ್ಮಿಕ ಇಲಾಖೆಯಿಂದ ಸಿನಿ ಕಾರ್ಮಿಕರಿಗೆ ಭರ್ಜರಿ ಗಿಫ್ಟ್!

ಪ್ರದರ್ಶನದಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬ ಕಲಾವಿದ ವಿಶಿಷ್ಟ ದೃಷ್ಟಿಕೋನ ಮತ್ತು ವಿಷಯಾಧಾರಿತ ಸಿದ್ಧಾಂತವನ್ನು ಹೊಂದಿದ್ದಾರೆ. ಎಲ್ಲಾ ಕಲಾ ಉತ್ಸಾಹಿಗಳಿಗೆ ವೈವಿಧ್ಯಮಯ ಮತ್ತು ಸಮೃದ್ಧ ಅನುಭವವನ್ನು ಸೃಷ್ಟಿಸಿಕೊಟ್ಟಿದ್ದಾರೆ. ಈ ಪ್ರದರ್ಶನವು ವೈವಿಧ್ಯಮಯ ಕಲಾತ್ಮಕ ಅಭಿವ್ಯಕ್ತಿಗಳನ್ನು ಬೆರೆಸುವ ಗುರಿ ಹೊಂದಿದೆ, ಇದು ಭಾರತದ ಶ್ರೀಮಂತ ಸಾಂಸ್ಕೃತಿಕ ಚಿತ್ರಣವನ್ನು ಬಿಂಬಿಸಲಿದೆ.

Continue Reading

ಕರ್ನಾಟಕ

Fortis Hospital: 111 ಕೆಜಿ ತೂಕವಿದ್ದ ಬಾಲಕನಿಗೆ ಪಾರ್ಶ್ವವಾಯು ತಪ್ಪಿಸಿದ ʼಬೆನ್ನೆಲುಬಿನ ಡಿಸ್ಕ್ʼ ಶಸ್ತ್ರಚಿಕಿತ್ಸೆ

Fortis Hospital: ಬೆನ್ನುಮೂಳೆಯ ಡಿಸ್ಕ್‌ಲೊಕೇಟ್ ಆಗಿದ್ದ ಪರಿಣಾಮ, ಪಾರ್ಶ್ವವಾಯುಗೆ ಒಳಗಾಗುವ ಸಾಧ್ಯತೆ ಇದ್ದ 111 ಕೆ.ಜಿ. ತೂಕದ 15 ವರ್ಷದ ಬಾಲಕನಿಗೆ, ‘ಮೈಕ್ರೋ-ಲುಂಬಾರ್ ಡಿಸ್ಸೆಕ್ಟಮಿ’ ಎಂಬ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಯನ್ನು ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ಮಾಡಿದೆ.

VISTARANEWS.COM


on

A 15 year old boy weighing 111 kg underwent successful spinal disc surgery that avoided potential paralysis
Koo

ಬೆಂಗಳೂರು: ಬೆನ್ನುಮೂಳೆಯ ಡಿಸ್‌ಲೋಕೇಟ್ ಆಗಿದ್ದ ಪರಿಣಾಮ ಪಾರ್ಶ್ವವಾಯುವಿಗೆ ಒಳಗಾಗುವ ಸಾಧ್ಯತೆ ಇದ್ದ 111 ಕೆ.ಜಿ. ತೂಕದ 15 ವರ್ಷದ ಬಾಲಕನಿಗೆ, ‘ಮೈಕ್ರೋ-ಲುಂಬಾರ್ ಡಿಸ್ಸೆಕ್ಟಮಿ’ ಎಂಬ ಬೆನ್ನು ಮೂಳೆಯ ಶಸ್ತ್ರಚಿಕಿತ್ಸೆಯನ್ನು ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆ (Fortis Hospital) ವೈದ್ಯರ ತಂಡ ಯಶಸ್ವಿಯಾಗಿ ಮಾಡಿದೆ.

ಫೋರ್ಟಿಸ್‌ ಆಸ್ಪತ್ರೆಯ ನರಶಸ್ತ್ರಚಿಕಿತ್ಸಕ ಸಲಹೆಗಾರ ಡಾ. ಗಣೇಶ್ ವಿ. ನೇತೃತ್ವದ ತಂಡ ಒಂದು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದೆ. ಈ ಕುರಿತು ಮಾತನಾಡಿದ ಅವರು, 111 ಕೆ.ಜಿ. ತೂಕದ ಹೊಂದಿದ್ದ 15 ವರ್ಷದ ಸೈಯದ್ ಸಲಾಹುದೀನ್ ಕ್ವಾದ್ರಿ ಎಂಬ ಬಾಲಕನಿಗೆ ಕಾರಣಾಂತರಗಳಿಂದ ಬೆನ್ನಿನ ಮೂಳೆಯ ಡಿಸ್‌ಲೊಕೇಟ್‌ ನಿಂದ ಅಸಾಧ್ಯ ನೋವು ಕಾಣಿಸಿಕೊಂಡಿತ್ತು. ಈ ನೋವು ಕ್ರಮೇಣ ಬೆನ್ನಿನಿಂದ ಕಣಕಾಲುವರೆಗೂ ಹಬ್ಬಿತ್ತು.

ಇದನ್ನೂ ಓದಿ: Assembly Session: ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ; ಏನೆಲ್ಲ ಅರ್ಹತೆ ಇರಬೇಕು?

ನಾಲ್ಕು ತಿಂಗಳುಗಳ ಕಾಲ ಈ ನೋವನ್ನು ಹಾಗೇ ನಿರ್ಲಕ್ಷಿಸಿದ್ದಾರೆ. ಪರಿಣಾಮ ಈ ಬಾಲಕ ನಡೆಯಲು, ಕೂರಲು ಸಹ ಆಗದಷ್ಟು ಅಗಾಧ ನೋವಿಗೆ ಒಳಗಾಗಿದ್ದ. ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದ ಬಳಿಕ ಅವರಿಗೆ ಎಂಆರ್‌ಐ ಸ್ಕ್ಯಾನ್‌ ಮಾಡುವ ಮೂಲಕ ಅವರ ಬೆನ್ನುಮೂಳೆಯ L3-L4 ಮಟ್ಟದಲ್ಲಿ ತೀವ್ರವಾದ ಪೋಸ್ಟರೊಸೆಂಟ್ರಲ್ ಡಿಸ್ಕ್ ಎಕ್ಸ್‌ಟ್ರಶನ್ ಆಗಿರುವುದು ಬಹಿರಂಗವಾಯಿತು. ಹೀಗಾಗಿ ಬಾಲಕನ ಕಣಕಾಲಿನವರೆಗೂ ಡಿಸ್‌ಲೊಕೇಟ್‌ನ ಪರಿಣಾಮ ಸಂಭವಿಸಿತ್ತು.

ಈ ನೋವನ್ನು ಹೀಗೆ ನಿರ್ಲಕ್ಷ್ಯ ಮಾಡಿದ್ದರೆ ಮುಂದೊಂದು ದಿನ ಆ ಕಾಲು ಪಾರ್ಶ್ವವಾಯು ಆಗುವ ಸಾಧ್ಯತೆ ತುಂಬಾ ಇತ್ತು. ಬಾಲಕನ ಆರೋಗ್ಯದ ಗಂಭೀರತೆಯನ್ನು ಪರಿಗಣಿಸಿ ಆತನಿಗೆ ಮೈಕ್ರೊ-ಲುಂಬರ್ ಡಿಸೆಕ್ಟಮಿ ಶಸ್ತ್ರಚಿಕಿತ್ಸೆಯನ್ನು ಶಿಫಾರಸು ಮಾಡಿದೆವು, ಇದು ನರಗಳ ಮೇಲಿನ ಒತ್ತಡವನ್ನು ನಿವಾರಿಸಲು ಡಿಸ್‌ಲೊಕೇಟ್‌ ಆಗಿರುವ ಡಿಸ್ಕ್ ಅನ್ನು ತೆಗೆದುಹಾಕುವ ಶಸ್ತ್ರಚಿಕಿತ್ಸಾ ವಿಧಾನವಾಗಿದೆ.

ಇದನ್ನೂ ಓದಿ: Assembly Session: ಕಾರ್ಮಿಕ ಇಲಾಖೆಯಿಂದ ಸಿನಿ ಕಾರ್ಮಿಕರಿಗೆ ಭರ್ಜರಿ ಗಿಫ್ಟ್!

ಬಾಲಕನ ತೂಕ ಅಧಿಕವಾಗಿದ್ದರಿಂದ ಈ ಶಸ್ತ್ರಚಕಿತ್ಸೆ ಸಾಕಷ್ಟು ಸವಾಲಾಗಿತ್ತು, ಆದರೂ ನಮ್ಮ ತಂಡ ಕಾರ್ಯಕ್ಷಮತೆಯಿಂದ ಸುರಕ್ಷತೆಯಾಗಿ ಈ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದ್ದೇವೆ. ಈ ಶಸ್ತ್ರಚಿಕಿತ್ಸೆಯ ನಂತರ ಬಾಲಕನ ನೋವು ಸಂಪೂರ್ಣ ನಿವಾರಣೆಯಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.

Continue Reading

ಕರ್ನಾಟಕ

Assembly Session: ಲಾರ್ವಾ ಸರ್ವೇ; ಜಿಪಿಎಸ್ ಇಲ್ಲದ ಹಳೆ ಫೋಟೋ ತೋರಿಸಿ ಕೋಟ್ಯಂತರ ರೂ. ಮೋಸ; ಶರವಣ ಆರೋಪ

Assembly Session: ಲಾರ್ವಾ ಸಮೀಕ್ಷೆಯ ಜಿಪಿಎಸ್ ಇಲ್ಲದ ಹಳೇ ಫೋಟೋಗಳನ್ನು ತೋರಿಸಿ ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿಗಳನ್ನು ಮೋಸ ಮಾಡುತ್ತಿದ್ದಾರೆ. ಇದು ನಾಗರಿಕರ ಆರೋಗ್ಯದ ಜತೆ ಚೆಲ್ಲಾಟ ನಡೆಸಿದಂತೆ. ಇಂತಹ ತಪ್ಪುಗಳು ಪುನರಾವರ್ತಿಸದಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು ಹಾಗೂ ತಪ್ಪುಗಳು ಪುನರಾವರ್ತಿಸಿದಲ್ಲಿ ಅಂತಹ ಅಧಿಕಾರಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಎಂಎಲ್‌ಸಿ ಟಿ.ಎ. ಶರವಣ ಸರ್ಕಾರವನ್ನು ಒತ್ತಾಯಿಸಿದ್ದಾರೆ.

VISTARANEWS.COM


on

Larva survey Show the old photo without GPS and get crores of rupees to the government Cheating Alleged by MLC TA Sharavana
Koo

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣಗಳು ಮತ್ತು ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಶೂನ್ಯ ವೇಳೆಯಲ್ಲಿ ವಿಧಾನ ಪರಿಷತ್ ಸದಸ್ಯ ಟಿ. ಎ. ಶರವಣ (Assembly Session) ಪ್ರಸ್ತಾಪಿಸಿದರು.

ಇತ್ತೀಚಿಗೆ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಉಲ್ಬಣಗೊಳ್ಳುತ್ತಿರುವುದು ಜನರಲ್ಲಿ ಭಯ ಹುಟ್ಟಿಸುತ್ತಿದೆ. ಮಳೆಗಾಲದಲ್ಲಿ ಸೊಳ್ಳೆಗಳ ಸಂಖ್ಯೆ ಹೆಚ್ಚುವುದರಿಂದ ಡೆಂಗ್ಯೂ, ಮಲೇರಿಯಾ, ಚಿಕನ್‌ಗುನ್ಯಾದಂತಹ ರೋಗಗಳು ಜಾಸ್ತಿಯಾಗುತ್ತವೆ. ಈ ರೋಗಗಳ ನಿಯಂತ್ರಣಕ್ಕೆ ಪ್ರತಿ ವರ್ಷ ಸರ್ಕಾರ ಕೋಟ್ಯಾಂತರ ರೂಪಾಯಿಗಳನ್ನು ಖರ್ಚು ಮಾಡುತ್ತಿದೆ.

ಇದನ್ನೂ ಓದಿ: Assembly Session: ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ; ಏನೆಲ್ಲ ಅರ್ಹತೆ ಇರಬೇಕು?

ಸರ್ಕಾರಕ್ಕೆ ಕೋಟ್ಯಂತರ ರೂ. ಮೋಸ

ಈ ಸಮೀಕ್ಷೆ ಮಾಡಲು ಪ್ರತಿ ಮಳೆಗಾಲದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಆಶಾ ಕಾರ್ಯಕರ್ತೆಯರನ್ನೊಳಗೊಂಡ ತಂಡ ರಚಿಸಿ ಸಮೀಕ್ಷೆ ನಡೆಸಲಾಗುತ್ತದೆ. ಈ ಸಂಬಂಧ ನಗರ ಪ್ರದೇಶಗಳಲ್ಲಿ ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶುಕ್ರವಾರ ಆರೋಗ್ಯ ನಿರೀಕ್ಷಣಾಧಿಕಾರಿಗಳು (HIO) ಮತ್ತು ಆರೋಗ್ಯ ಸುರಕ್ಷತಾಧಿಕಾರಿಗಳು (PHCO) ಲಾರ್ವಾ ಸಮೀಕ್ಷೆ ನಡೆಸುತ್ತಾರೆ. ಮನೆ-ಮನೆಗೆ ತೆರಳಿ ಸಮೀಕ್ಷೆ ಮಾಡಿ ಸೊಳ್ಳೆಗಳ ಉತ್ಪತ್ತಿ ತಾಣಗಳನ್ನು ನಾಶಪಡಿಸುವುದು ಈ ಸಮೀಕ್ಷೆಯ ಮೂಲ ಉದ್ದೇಶ. ಆದರೆ ಇವರಿಗೆ ಒಂದು ದಿನಕ್ಕೆ ತಲಾ ತಿಂಗಳಿಗೆ 300 ರೂ. ಗಳನ್ನು ಕೊಡಲಾಗುತ್ತಿದೆ ಎಂದು ಹೇಳಿಕೊಳ್ಳುತ್ತಿರುವ ಆರೋಗ್ಯ ಇಲಾಖೆ ಅಧಿಕಾರಿಗಳು, ಜಿಪಿಎಸ್ ಇಲ್ಲದ ಹಳೆಯ ಫೋಟೋಗಳನ್ನು ತೋರಿಸಿ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿಗಳನ್ನು ಮೋಸ ಮಾಡುತ್ತಿದ್ದಾರೆ ಎಂದು ಟಿ. ಎ. ಶರವಣ ಆರೋಪಿಸಿದರು.

ಇದನ್ನೂ ಓದಿ: Assembly Session: ಸರ್ಕಾರಕ್ಕೆ ವಾಲ್ಮೀಕಿ ಜನಾಂಗದ ಶಾಪ ತಟ್ಟಬಾರದೆಂದರೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ; ಆರ್‌. ಅಶೋಕ್‌ ಆಗ್ರಹ

ಇದು ನಾಗರಿಕರ ಆರೋಗ್ಯದ ಜತೆ ಚೆಲ್ಲಾಟ ನಡೆಸಿದಂತೆ, ಇಂತಹ ತಪ್ಪುಗಳು ಪುನರಾವರ್ತಿಸದಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು ಹಾಗೂ ತಪ್ಪುಗಳು ಪುನರಾವರ್ತಿಸಿದಲ್ಲಿ ಅಂತಹ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಎಂಎಲ್‌ಸಿ ಟಿ.ಎ. ಶರವಣ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Continue Reading

ಉತ್ತರ ಕನ್ನಡ

Uttara Kannada News: ರಾಷ್ಟ್ರೀಯ ಹೆದ್ದಾರಿಯಲ್ಲಿ ಕೃತಕ ನೆರೆ ತಡೆಗೆ ಶಾಶ್ವತ ಪರಿಹಾರ; ಕಾಗೇರಿ

Uttara Kannada News: ಕಾರವಾರ ಸೀಬರ್ಡ್ ನೌಕಾನೆಲೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಡುಬರುವ ಕೃತಕ ನೆರೆಯನ್ನು ತಡೆಯಲು ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

VISTARANEWS.COM


on

A permanent solution to artificial flood on national highways says MP Vishweshwar Hegde Kageri
Koo

ಕಾರವಾರ: ಕಾರವಾರ ಸೀಬರ್ಡ್ ನೌಕಾನೆಲೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಡುಬರುವ ಕೃತಕ ನೆರೆಯನ್ನು ತಡೆಯಲು ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ (Uttara Kannada News) ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತೀ ಮಳೆಗಾಲದಲ್ಲಿ ಸೀಬರ್ಡ್ ನೌಕಾನೆಲೆ ಬಳಿಯ ರಾಷ್ಟ್ರೀಯ ಹೆದ್ದಾರಿ ಬಳಿ ಗುಡ್ಡದಿಂದ ಬರುವ ನೀರು ಸರಾಗವಾಗಿ ಹರಿದು ಸಮುದ್ರ ಸೇರಲು ಇರುವ ಅಡೆತಡೆಗಳನ್ನು ಶಾಶ್ವತವಾಗಿ ನಿವಾರಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು, ಸೀಬರ್ಡ್ ಮತ್ತು ನೌಕಾನೆಲೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮಳೆ ಕಡಿಮೆಯಾದ ಕೂಡಲೇ ಆ ಪ್ರದೇಶಕ್ಕೆ ಭೇಟಿ ನೀಡಿ ಅಗತ್ಯ ಮಾರ್ಗೋಪಾಯಗಳನ್ನು ಕಂಡುಕೊಂಡು ಅವುಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದ ಸಂಸದರು, ನೌಕಾನೆಲೆಯ ಅಧಿಕಾರಿಗಳು ಜಿಲ್ಲಾಡಳಿತದ ಈ ಯೋಜನೆಗಳಿಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Assembly Session: ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ; ಏನೆಲ್ಲ ಅರ್ಹತೆ ಇರಬೇಕು?

ಜಿಲ್ಲೆಯಲ್ಲಿ ಕಾರವಾರದಿಂದ ಭಟ್ಕಳದವರೆಗಿನ ರೈಲು ಮಾರ್ಗದಲ್ಲಿ ರೈಲ್ವೆ ನಿಲ್ದಾಣಗಳಲ್ಲಿ ಕೈಗೊಳ್ಳಬೇಕಾದ ಅಗತ್ಯ ಕಾಮಗಾರಿಗಳು ಮತ್ತು ಪ್ರಯಾಣಿಕರ ಹಿತದೃಷ್ಠಿಯಿಂದ ಕೈಗೊಳ್ಳಬೇಕಾಗಿರುವ ಸುಧಾರಣಾ ಕ್ರಮಗಳು ಹಾಗೂ ರೂಪಿಸಬಹುದಾದ ಯೋಜನೆಗಳ ಕುರಿತ ವಿವರವಾದ ಸಂಪೂರ್ಣ ಮಾಹಿತಿಯನ್ನು ನೀಡುವಂತೆ ಕೊಂಕಣ ರೈಲ್ವೆಯ ಅಧಿಕಾರಿಗಳಿಗೆ ಸೂಚಿಸಿದ ಸಂಸದರು, ಜಿಲ್ಲೆಯಲ್ಲಿ ರೈಲ್ವೆಗೆ ಸಂಬಂಧಪಟ್ಟ ಯೋಜನೆಗಳನ್ನು ಅಭಿವೃದ್ಧಿಪಡಿಸುವ ಕುರಿತಂತೆ ರೈಲ್ವೆ ಖಾತೆಯ ಸಚಿವರೊಂದಿಗೆ ಚರ್ಚಿಸಿ ಅವುಗಳ ಸಂಪೂರ್ಣ ಅನುಷ್ಠಾನಕ್ಕೆ ಪ್ರಯತ್ನಿಸುವುದಾಗಿ ಹೇಳಿದರು.

ಕೊಂಕಣ ರೈಲ್ವೆಗೆ ಸಂಬಂಧಪಟ್ಟಂತೆ ಬಾಕಿ ಇರುವ ಭೂಸ್ವಾಧೀನ ಪ್ರಕರಣಗಳ ಪರಿಹಾರದ ಮೊತ್ತವನ್ನು ಸಂತ್ರಸ್ತರಿಗೆ ಶೀಘ್ರದಲ್ಲಿ ಪಾವತಿಸಲು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆಯುವವರಿಗೆ ವೈದ್ಯಕೀಯ ನೆರವಿನೊಂದಿಗೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸವಂತೆ ತಿಳಿಸಿದ ಅವರು, ವಿಕೋಪ ಸಂದರ್ಭದಲ್ಲಿ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಸೇವಾ ಮನೋಭಾವ ಮತ್ತು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಬೇಕು. ಸಂಬಂಧಪಟ್ಟ ಇಲಾಖೆಗಳು ವಿಪತ್ತು ಎದುರಿಸಲು ಅಗತ್ಯವಿರುವ ಎಲ್ಲಾ ಸಿದ್ಧತೆಗಳೊಂದಿಗೆ ಸದಾ ಜಾಗರೂಕರಾಗಿರಬೇಕು ಎಂದರು.

ಇದನ್ನೂ ಓದಿ: Paris Olympics 2024 : ಟೋಕಿಯೊದಲ್ಲಿ ನಡೆದ 2020ರ ಒಲಿಂಪಿಕ್ಸ್​ನಲ್ಲಿ ಭಾರತ ಗೆದ್ದ ಪದಕಗಳ ಸಂಖ್ಯೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ ಕಾಂದೂ, ಎಸ್ಪಿ ನಾರಾಯಣ್, ಕಾರವಾರ ಉಪ ವಿಭಾಗಾಧಿಕಾರಿ ಕನಿಷ್ಕ ಹಾಗೂ ಸೀಬರ್ಡ್, ನೌಕಾನಲೆ, ರೈಲ್ವೆ, ರಾಷ್ಟ್ರೀಯ ಹೆದ್ದಾರಿ ಮತ್ತಿತರ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading
Advertisement
Mosaic of Modernity art exhibition by Gallery G in Bengaluru
ಕರ್ನಾಟಕ40 seconds ago

Bengaluru News: ಬೆಂಗಳೂರಿನಲ್ಲಿ ಗ್ಯಾಲರಿ ಜಿ ಯಿಂದ ‘ಮೊಸಾಯಿಕ್ ಆಫ್ ಮಾಡರ್ನಿಟಿ’ ಕಲಾ ಪ್ರದರ್ಶನ

Viral Video
ವೈರಲ್ ನ್ಯೂಸ್3 mins ago

Viral Video: ಪಕ್ಷದ ಕಾರ್ಯಕರ್ತನಿಗೆ ರಪ್‌ ಅಂತಾ ಕೆನ್ನೆಗೆ ಬಾರಿಸಿದ ಟಿಎಂಸಿ ನಾಯಕಿ; ವಿಡಿಯೋ ಇದೆ

T20 World Cup 2024
ಪ್ರಮುಖ ಸುದ್ದಿ43 mins ago

T20 World Cup 2024 : 30 ಎಸೆತಕ್ಕೆ 30 ರನ್​ ಇದ್ದಾಗ ದಿಕ್ಕೇ ತೋಚದಂತಾಗಿದ್ದೆ! ಆ ತಲ್ಲಣ ವಿವರಿಸಿದ ಶರ್ಮಾ

Assembly Session
ಕರ್ನಾಟಕ57 mins ago

Assembly Session: ಅಧಿಕಾರಿಗಳು ಮಾಡಿದ ಅಕ್ರಮಕ್ಕೆ ಸಚಿವರ ವಿರುದ್ಧ ಆರೋಪಿಸುವುದು ಸರಿಯಲ್ಲ ಎಂದ ಡಿಕೆಶಿ!

A 15 year old boy weighing 111 kg underwent successful spinal disc surgery that avoided potential paralysis
ಕರ್ನಾಟಕ1 hour ago

Fortis Hospital: 111 ಕೆಜಿ ತೂಕವಿದ್ದ ಬಾಲಕನಿಗೆ ಪಾರ್ಶ್ವವಾಯು ತಪ್ಪಿಸಿದ ʼಬೆನ್ನೆಲುಬಿನ ಡಿಸ್ಕ್ʼ ಶಸ್ತ್ರಚಿಕಿತ್ಸೆ

Pooja Khedkar
ದೇಶ1 hour ago

Pooja Khedkar: ಪೂಜಾ ಖೇಡ್ಕರ್‌ ಪುಣೆ ಜಿಲ್ಲಾಧಿಕಾರಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ

Larva survey Show the old photo without GPS and get crores of rupees to the government Cheating Alleged by MLC TA Sharavana
ಕರ್ನಾಟಕ1 hour ago

Assembly Session: ಲಾರ್ವಾ ಸರ್ವೇ; ಜಿಪಿಎಸ್ ಇಲ್ಲದ ಹಳೆ ಫೋಟೋ ತೋರಿಸಿ ಕೋಟ್ಯಂತರ ರೂ. ಮೋಸ; ಶರವಣ ಆರೋಪ

A permanent solution to artificial flood on national highways says MP Vishweshwar Hegde Kageri
ಉತ್ತರ ಕನ್ನಡ1 hour ago

Uttara Kannada News: ರಾಷ್ಟ್ರೀಯ ಹೆದ್ದಾರಿಯಲ್ಲಿ ಕೃತಕ ನೆರೆ ತಡೆಗೆ ಶಾಶ್ವತ ಪರಿಹಾರ; ಕಾಗೇರಿ

ಕರ್ನಾಟಕ1 hour ago

Dengue Fever: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳಲ್ಲಿ ತೀವ್ರ ಏರಿಕೆ; ಮಂಗಳವಾರ 487 ಕೇಸ್‌ ಪತ್ತೆ!

Chennai Super King
ಕ್ರೀಡೆ1 hour ago

Chennai Super King : ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಕ್ರಿಕೆಟ್ ಅಕಾಡೆಮಿ ಆರಂಭಿಸಿದ ಚೆನ್ನೈ ಸೂಪರ್ ಕಿಂಗ್ಸ್​

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ10 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ11 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 day ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌