Assembly session : ಈಶ್ವರ ಖಂಡ್ರೆ ವಿರುದ್ಧ ಸ್ಪೀಕರ್‌ ಗರಂ; ಗದ್ದಲದ ಬಳಿಕ ಶಾಂತರಾದ ಕಾಗೇರಿ, ಕಾಂಗ್ರೆಸ್‌ ಕೂಡಾ ಕೂಲ್‌ - Vistara News

ಕರ್ನಾಟಕ

Assembly session : ಈಶ್ವರ ಖಂಡ್ರೆ ವಿರುದ್ಧ ಸ್ಪೀಕರ್‌ ಗರಂ; ಗದ್ದಲದ ಬಳಿಕ ಶಾಂತರಾದ ಕಾಗೇರಿ, ಕಾಂಗ್ರೆಸ್‌ ಕೂಡಾ ಕೂಲ್‌

ವಿಧಾನಸಭೆಯಲ್ಲಿ ನಡೆದ ಶಾಸಕ ಈಶ್ವರ ಖಂಡ್ರೆ ಮತ್ತು ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ನಡುವಿನ ವಾಕ್ಸಮರ ಶಾಂತವಾಗಿ, ಪರಸ್ಪರ ಸಮಾಧಾನ ಮಾಡಿಕೊಂಡರು.

VISTARANEWS.COM


on

speaker Vs Khandre
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾಲ್ಕಿ ಶಾಸಕ ಈಶ್ವರ ಖಂಡ್ರೆ ಅವರ ವಿರುದ್ಧ ಒಂದು ಹಂತದಲ್ಲಿ ತೀವ್ರವಾಗಿ ಮುನಿಸಿಕೊಂಡು ಎಚ್ಚರಿಕೆ ನೀಡಿದ್ದ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಬಳಿಕ ಶಾಂತರಾದ ಘಟನೆ ನಡೆದಿದೆ.

ಸಿದ್ದರಾಮಯ್ಯ ಅವರನ್ನು ಟಿಪ್ಪು ಸುಲ್ತಾನ್‌ನಂತೆ ಹೊಡೆದು ಹಾಕಬೇಕು ಎಂಬ ವಿವಾದಿತ ಹೇಳಿಕೆಯನ್ನು ನೀಡಿದ್ದ ಸಚಿವ ಅಶ್ವತ್ಥ ನಾರಾಯಣ ಅವದು ಸದನದಲ್ಲೂ ತಮ್ಮ ಹೇಳಿಕೆಯನ್ನು ಸಮರ್ಥಿಸಲು ಆರಂಭಿಸಿದಾಗ ಕಾಂಗ್ರೆಸ್‌ ಶಾಸಕರು ಸಿಟ್ಟಿಗೆದ್ದು ಆಕ್ರೋಶ ವ್ಯಕ್ತಪಡಿಸಿದರು. ಇದರಲ್ಲಿ ಮುಂಚೂಣಿಯಲ್ಲಿದ್ದ ಭಾಲ್ಕಿ ಶಾಸಕ ಈಶ್ವರ ಖಂಡ್ರೆ ಅವರಿಗೆ ಸ್ಪೀಕರ್‌ ಎಚ್ಚರಿಕೆ ನೀಡಿದ್ದರು. ಆದರೆ, ಈಶ್ವರ ಖಂಡ್ರೆ ಇದನ್ನು ಕೇಳಿಸಿಕೊಳ್ಳದೆ ಜೋರಾಗಿಯೇ ಮಾತನಾಡಿದರು.

ಆಗ ಉದ್ವಿಗ್ನರಾಗಿ, ಭಾವುಕರಾಗಿ, ಸ್ವಲ್ಪ ಮಟ್ಟಿಗೆ ಆಕ್ರೋಶಿತರಾಗಿ ಪ್ರತಿಕ್ರಿಯಿಸಿದ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ʻʻಸದನ ಅಂದ್ರೆ ಏನಂದುಕೊಂಡಿದ್ದೀರಿ? ಸದನದಿಂದ ಹೊರಗೆ ಹಾಕಬೇಕಾಗುತ್ತದೆ. ತಮಾಷೆ ಮಾಡ್ತಿದ್ದೀರಾ? ಕೂತ್ಕೊಳಿ, ಮಾತಾಡಬೇಡಿ? ನನ್ನ ಅಧಿಕಾರ ಪೂರ್ಣ ಪ್ರಮಾಣದಲ್ಲಿ ಚಲಾಯಿಸಲು ಅವಕಾಶ ಕೊಡಬೇಡಿ. ಸದನದಿಂದ ಹೊರಗೆ ಹಾಕಲಾ?ʼʼ ಎಂದು ಸಿಟ್ಟಾಗಿ ಮಾತನಾಡಿದರು ಸ್ಪೀಕರ್‌. ಸ್ಪೀಕರ್ ಮಾತಿಗೆ ಸಿಟ್ಟಿಗೆದ್ದ ಈಶ್ವರ ಖಂಡ್ರೆ ಸದನ ಬಾವಿಗಿಳಿದರು, ಅವರಿಗೆ ಕಾಂಗ್ರೆಸ್‌ ಶಾಸಕರು ಸಾಥ್‌ ನೀಡಿದರು.

ಈ ನಡುವೆ, ಈಶ್ವರ ಖಂಡ್ರೆ ಅವರ ನಡೆಯನ್ನು ಆಕ್ಷೇಪಿಸಿದ ಸ್ಪೀಕರ್‌ ಅವರು ಸಭೆಯನ್ನು ನಡೆಸಿದರು. ಅದರಲ್ಲಿ ಸ್ಪೀಕರ್‌, ಮಾಧುಸ್ವಾಮಿ, ಕೃಷ್ಣ ಭೈರೇಗೌಡ, ಖಾದರ್ ಮತ್ತಿತರರು ಭಾಗಿಯಾಗಿದ್ದರು. ಸಭೆಯ ಬಳಿಕ ಸದನದ ಕಲಾಪ ಮತ್ತೆ ಆರಂಭವಾಯಿತು. ಆಗಲೂ ಕಾಂಗ್ರೆಸ್‌ ಶಾಸಕರ ಪ್ರತಿಭಟನೆ ಮುಂದುವರಿಸಿದ್ದರು.

ಮರಳಿ ಸದನಕ್ಕೆ ಆಗಮಿಸಿದ ಸ್ಪೀಕರ್‌ ಕಾಗೇರಿ ಅವರು ಈಶ್ಚರ್ ಖಂಡ್ರೆ ಮತ್ತು ಕಾಂಗ್ರೆಸ್ ಸದಸ್ಯರನ್ನು ಸ್ಥಾನಕ್ಕೆ ಮರಳುವಂತೆ ಮನವಿ ಮಾಡಿದರು.

ʻʻನಿಮ್ಮ ಬಗ್ಗೆ, ಕ್ಷೇತ್ರದ ಜನರ ಬಗ್ಗೆ ನನಗೆ ಗೌರವವಿದೆ. ನಿಮ್ಮ ತಂದೆಯವರ ಜೊತೆ ಕೆಲಸ ಮಾಡಿದ್ದೇನೆ. ನಿಮ್ಮ ಮತ್ತು ನನ್ನ ನಡುವೆ ವೈಮನಸ್ಸು ಇಲ್ಲ. ಉದ್ರೇಕದ ಕ್ಷಣದಲ್ಲಿ ಮಾತನಾಡಿದ್ದೇನೆ. ಇದನ್ನು ಇಲ್ಲಿಗೆ ಮುಗಿಸೋಣʼʼ ಎಂದು ಸ್ಪೀಕರ್ ಕಾಗೇರಿ ಅವರು ಈಶ್ವರ್‌ ಖಂಡ್ರೆ ಅವರಲ್ಲಿ ಮನವಿ ಮಾಡಿದರು.

ʻʻಈಶ್ವರ್ ಖಂಡ್ರೆ ಅವರ ಮೇಲೆ ಯಾವುದೇ ವೈಯುಕ್ತಿಕ ಭಿನ್ನಾಭಿಪ್ರಾಯ ಇಲ್ಲ. ನಾನು ಉದ್ವೇಗದಿಂದ ಮಾತನಾಡಿದ್ದೇನೆ. ನಾನು ನಿಮ್ಮ ತಂದೆಯವರ ಜತೆ ಕೆಲಸ ಮಾಡಿದ್ದೇನೆ. ಅ ವಿಶ್ವಾಸದ ಮೇಲೆ ನಿಮ್ಮ ಬಗ್ಗೆ ಆ ರೀತಿ ಮಾತನಾಡಿದ್ದೇನೆ. ಕಡತ ತರಿಸಿಕೊಂಡು ನೋಡಿ ಅದರಲ್ಲಿ ಕೆಲ ವಿಚಾರ ತೆಗೆಸುವ ಕೆಲಸ ಮಾಡ್ತೀನಿʼʼ ಎಂದರು. ಈ ಮಾತಿನ ಬಳಿಕ ಕಾಂಗ್ರೆಸ್‌ ಸದಸ್ಯರು ತಮ್ಮ ಪ್ರತಿಭಟನೆ ಹಿಂಪಡೆದರು.

ಇದಾದ ಬಳಿಕ ಸ್ಪೀಕರ್‌ ಅವರನ್ನು ಉದ್ದೇಶಿಸಿ ಮಾತನಾಡಿದ ಈಶ್ವರ ಖಂಡ್ರೆ ಅವರು, ʻʻನನ್ನನ್ನು ಜನ ಗೆಲ್ಲಿಸಿ ಕಳುಹಿಸಿದ್ದಾರೆ. ನಮ್ಮ ಕ್ಷೇತ್ರದ ಜನ ಮೂರು ಲಕ್ಷ ಜನ ಮತ ಚಲಾಯಿಸಿದ್ದಾರೆ. ನಾನು ಅಗೌರವ ತೋರಿಸುವ ಕೆಲಸ ಮಾಡಿಲ್ಲ. ನೀವು ಯಾವುದೋ ಹಳೆಯದ್ದನ್ನ ಇಟ್ಟುಕೊಂಡು ಮಾತನಾಡಿದಂತೆ ಇತ್ತು. ಅದು ನನಗೆ ಬೇಸರವಾಯಿತುʼʼ ಎಂದು ಹೇಳಿದರು.

ʻʻನನ್ನ ಧ್ವನಿ ಸ್ವಲ್ಪ ದೊಡ್ಡದು. ನಾನು ಸಹಜವಾಗಿ ಮಾತನಾಡಿದ್ದು ನಿಮಗೆ ಸ್ವಲ್ಪ ಜೋರಾಗಿ ಕೇಳಿಸಿ ತಪ್ಪು ಅರ್ಥ ಬಂದಿರಹುದುʼʼ ಎಂದು ಸಮಾಧಾನ ಮಾಡಿದರು. ಅಲ್ಲಿಗೆ ವಿವಾದ ಕೊನೆಗೊಂಡಿತು.

ಇದನ್ನೂ ಓದಿ : ಹೊಡೆದು ಹಾಕಿ ಹೇಳಿಕೆಯನ್ನು ಸದನದಲ್ಲಿ ಸಮರ್ಥಿಸಿದ ಅಶ್ವತ್ಥ್‌ ನಾರಾಯಣ್‌; ಕಾಂಗ್ರೆಸ್‌ ಕೆಂಡಾಮಂಡಲ, ಭಾರಿ ಗದ್ದಲ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

UGCET 2024: ಆ.7ರಂದು ಮಧ್ಯಾಹ್ನ 2 ಗಂಟೆಗೆ ಸಿಇಟಿ ಅಣಕು ಸೀಟು ಹಂಚಿಕೆ ಪ್ರಕಟ; ಆಪ್ಶನ್ ಎಂಟ್ರಿಗೆ ನಾಳೆ ಲಾಸ್ಟ್ ಡೇಟ್

UGCET 2024: ಇಂಜಿನಿಯರಿಂಗ್, ಯೋಗ, ನ್ಯಾಚುರೋಪಥಿ, ಪಶುವೈದ್ಯ, ನರ್ಸಿಂಗ್, ಕೃಷಿ ವಿಜ್ಞಾನ, ಬಿ -ಫಾರ್ಮಾ ಮತ್ತು ಡಿ-ಫಾರ್ಮಾ ಕೋರ್ಸ್ ಮತ್ತು ಕಾಲೇಜ್‌ಗಳ ಆಯ್ಕೆಗೆ ಇನ್ನೂ ಎರಡು ದಿನ ಸಮಯವಿದೆ. ಅಭ್ಯರ್ಥಿಗಳು ಎಚ್ಚರಿಕೆಯಿಂದ ತಮ್ಮ ಆಸಕ್ತಿ ಅನುಸಾರ ಆಪ್ಷನ್ ದಾಖಲಿಸಬೇಕು.

VISTARANEWS.COM


on

UGCET 2024
Koo

ಬೆಂಗಳೂರು: ಇಂಜಿನಿಯರಿಂಗ್ (Engineering) ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ (Professional Course) ಪ್ರವೇಶಕ್ಕೆ ತಮ್ಮ ಆಸಕ್ತಿಗನುಗುಣವಾಗಿ ಆಪ್ಷನ್ ದಾಖಲಿಸಲು ಸಿಇಟಿ ರ‍್ಯಾಂಕಿಂಗ್ (CET Ranking) ಅಭ್ಯರ್ಥಿಗಳಿಗೆ ಆಗಸ್ಟ್ 4 ಕೊನೆಯ (UGCET 2024) ದಿನವಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ತಿಳಿಸಿದೆ.

ಇಂಜಿನಿಯರಿಂಗ್, ಯೋಗ, ನ್ಯಾಚುರೋಪಥಿ, ಪಶುವೈದ್ಯ, ನರ್ಸಿಂಗ್, ಕೃಷಿ ವಿಜ್ಞಾನ, ಬಿ -ಫಾರ್ಮಾ ಮತ್ತು ಡಿ-ಫಾರ್ಮಾ ಕೋರ್ಸ್ ಮತ್ತು ಕಾಲೇಜ್‌ಗಳ ಆಯ್ಕೆಗೆ ಇನ್ನೂ ಎರಡು ದಿನ ಸಮಯವಿದೆ. ಅಭ್ಯರ್ಥಿಗಳು ಎಚ್ಚರಿಕೆಯಿಂದ ತಮ್ಮ ಆಸಕ್ತಿ ಅನುಸಾರ ಆಪ್ಷನ್ ದಾಖಲಿಸಬೇಕು. ನಂತರ ಆಗಸ್ಟ್ 7ರಂದು ಮಧ್ಯಾಹ್ನ 2 ಗಂಟೆಗೆ ಅಣಕು ಸೀಟು ಹಂಚಿಕೆ ಮಾಡಲಾಗುವುದು. ಬಳಿಕ ನೈಜ ಸೀಟು ಹಂಚಿಕೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಈ ಮೊದಲು ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಏಳು ದಿನ ಅವಕಾಶ ನೀಡಲಾಗಿತ್ತು. ಜು.30ರಂದು ಕೊನೆಯಾಗಲಿದ್ದ ಅದನ್ನು ಅಭ್ಯರ್ಥಿಗಳ ಮನವಿ ಮೇರೆಗೆ ಮತ್ತೂ ವಿಸ್ತರಿಸಲಾಗಿತ್ತು. ಅಭ್ಯರ್ಥಿಗಳು ಎಚ್ಚರಿಕೆಯಿಂದ ಇಚ್ಛೆಗಳನ್ನು ದಾಖಲು ಮಾಡಬೇಕು. ಯೋಗ ಮತ್ತು ನ್ಯಾಚುರೋಪತಿ ಕೋರ್ಸುಗಳ ಸೀಟ್ ಮ್ಯಾಟ್ರಿಕ್ಸ್ ಬಂದಿದ್ದು, ಅದಕ್ಕೂ ಆಯ್ಕೆಗಳನ್ನು ದಾಖಲಿಸಲು ಈಗ ಅವಕಾಶ ನೀಡಲಾಗಿದೆ.

ಪ್ರಕಟಿಸಲಾದ ಸೀಟ್ ಮ್ಯಾಟ್ರಿಕ್ಸ್‌ ಅನ್ನು ಪರಿಶೀಲಿಸಿ ಇಚ್ಚೆ / ಆಯ್ಕೆಗಳನ್ನು ದಾಖಲಿಸುವ ಸಮಯದಲ್ಲಿ ಆದ್ಯತಾ ಕ್ರಮಗಳನ್ನು ಅನುಸರಿಸಲು ಸೂಚಿಸಲಾಗಿದೆ. ಆಪ್ಶನ್‌ಗಳನ್ನು ದಾಖಲಿಸುವ ಬಗ್ಗೆ, ಸೀಟು ಹಂಚಿಕೆಯ ವಿವಿಧ ಹಂತಗಳ ಕುರಿತು ವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಯುಜಿಸಿಇಟಿ-24ರ ಸೀಟು ಹಂಚಿಕೆಯ ಮಾಹಿತಿ ಪುಸ್ತಕದಲ್ಲಿ ನೀಡಿರುವ ಸೂಚನೆಗಳನ್ನು ಓದಿಕೊಳ್ಳಬೇಕು.

ರಾಷ್ಟ್ರೀಯ ವೈದ್ಯಕೀಯ ಮಂಡಳಿ, ಕಾಲಕಾಲಕ್ಕೆ ಹೊರಡಿಸುವ ಸೂಚನೆಗಳು / ಅಧಿಸೂಚನೆಗಳ ಅನ್ವಯ ವೈದ್ಯಕೀಯ ಮತ್ತು ದಂತ ವೈದ್ಯಕ್ಯೀಯ ಕೋರ್ಸುಗಳಿಗೆ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತದೆ.

ಚಟುವಟಿಕೆಗಳ ವಿವರ ಹೀಗಿದೆ

-ಜು.23ರಿಂದಲೇ Option Entry ಪೋರ್ಟಲ್‌ ತೆರೆಯಲಾಗಿದೆ. ಅಭ್ಯರ್ಥಿಗಳು ಆದ್ಯತಾ ಕ್ರಮದಲ್ಲಿ ಇಚ್ಛೆ/ಆಯ್ಕೆಗಳನ್ನು ದಾಖಲಿಸಬಹುದು. ಆಯ್ಕೆಗಳನ್ನು ದಾಖಲಿಸಲು 7 ದಿನಗಳ ಕಾಲಾವಕಾಶವನ್ನು ನೀಡಲಾಗಿತ್ತು. ಇದೀಗ ಮತ್ತಷ್ಟು ದಿನ ವಿಸ್ತರಣೆ ಆಗಿದೆ.

-ಇಚ್ಛೆ/ಆಯ್ಕೆಗಳನ್ನು ದಾಖಲಿಸುವುದಕ್ಕೆ ನಿಗದಿಪಡಿಸಿದ ಕೊನೆಯ ದಿನಾಂಕದ 3 ದಿನಗಳ ನಂತರ ಅಣುಕು ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಕಟಿಸಲಾಗುವುದು.

-ಅಣುಕು ಸೀಟು ಹಂಚಿಕೆಯ ಫಲಿತಾಂಶ ಪ್ರಕಟಣೆಯ ನಂತರ ಇಚ್ಛೆ-ಆಯ್ಕೆಗಳನ್ನು ಸೇರಿಸಲು/ಅಳಿಸಲು/ಬದಲಾಯಿಸಲು/ಮಾರ್ಪಡಿಸಲು 3 ದಿನಗಳ ಕಾಲಾವಕಾಶ ನೀಡಲಾಗುತ್ತದೆ.

ಈ ಮೇಲಿನ ಪ್ರಕ್ರಿಯೆ ಮುಕ್ತಾಯವಾದ 3 ದಿನಗಳ ನಂತರ ಮೊದಲನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಕಟಿಸಲಾಗುವುದು.

ಇದನ್ನೂ ಓದಿ: UGCET 2024 : ಯುಜಿಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ; ಆಪ್ಶನ್ ಎಂಟ್ರಿ ಮಾಡಲು ಕೆಲವೇ ದಿನಗಳು ಬಾಕಿ!

Continue Reading

ಪ್ರಮುಖ ಸುದ್ದಿ

BJP-JDS Padayatra: ಪಾದಯಾತ್ರೆಗೆ ಹೈಕೋರ್ಟ್‌ನಿಂದಲೇ ಅನುಮತಿ ಪಡೆದ ಬಿಜೆಪಿ

BJP-JDS Padayatra: ಪಾದಯಾತ್ರೆಗೆ ಸರ್ಕಾರದಿಂದ ಅನುಮತಿ ಇಲ್ಲ ಎಂದು ಮೊನ್ನೆ ಗೃಹ ಸಚಿವ ಪರಮೇಶ್ವರ (G Parameshwara) ಹೇಳಿದ ಬೆನ್ನಲ್ಲೇ ಸರ್ಕಾರದಿಂದ ಸಮಸ್ಯೆ ಆಗದಂತೆ ಬಿಜೆಪಿ ಮುನ್ನೆಚ್ಚರಿಕೆ ವಹಿಸಿ ಉಚ್ಚ ನ್ಯಾಯಾಲಯಕ್ಕೆ ತೆರಳಿತ್ತು. ಶಾಸಕ ಪಿ. ರಾಜೀವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಮಯ, ಅನುಮತಿ ನೀಡಿದೆ.

VISTARANEWS.COM


on

BJP-JDS Padayatra 1
Koo

ಬೆಂಗಳೂರು: “ಭ್ರಷ್ಟ ಕಾಂಗ್ರೆಸ್ ತೊಲಗಿಸಿ” ಎಂಬ ಘೋಷಣೆಯಡಿ ಹಮ್ಮಿಕೊಂಡಿರುವ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆಗೆ (BJP-JDS Padayatra) ನೇರವಾಗಿ ಹೈಕೋರ್ಟ್‌ನಿಂದ (High court) ಅನುಮತಿ ಪಡೆಯಲಾಗಿದೆ. ಸರ್ಕಾರದಿಂದ ಅನುಮತಿ ದೊರೆಯುವುದು ವಿಳಂಬವಾದ ಹಿನ್ನೆಲೆಯಲ್ಲಿ ಹೈಕೋರ್ಟ್‌ಗೆ ಹೋಗಿದ್ದ ಬಿಜೆಪಿ (BJP) ಮುಖಂಡರು, ಪಾದಯಾತ್ರೆಗೆ ಅನುಮತಿ ಪಡೆದುಕೊಂಡಿದ್ದಾರೆ.

ಪಾದಯಾತ್ರೆಗೆ ಸರ್ಕಾರದಿಂದ ಅನುಮತಿ ಇಲ್ಲ ಎಂದು ಮೊನ್ನೆ ಗೃಹ ಸಚಿವ ಪರಮೇಶ್ವರ (G Parameshwara) ಹೇಳಿದ ಬೆನ್ನಲ್ಲೇ ಸರ್ಕಾರದಿಂದ ಸಮಸ್ಯೆ ಆಗದಂತೆ ಬಿಜೆಪಿ ಮುನ್ನೆಚ್ಚರಿಕೆ ವಹಿಸಿ ಉಚ್ಚ ನ್ಯಾಯಾಲಯಕ್ಕೆ ತೆರಳಿತ್ತು. ಶಾಸಕ ಪಿ. ರಾಜೀವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಚಂದನ್ ಗೌಡರ್, ಅನುಮತಿ ನೀಡಿದ್ದು, ಪಾದಯಾತ್ರೆ ಸಾಗುವ ಜಾಗದಲ್ಲಿ ಭದ್ರತೆ ನೀಡುವಂತೆ ಡಿಸಿ, ಎಸ್ಪಿಗೆ ಸೂಚನೆ ನೀಡಿದ್ದಾರೆ.

ಚಾಮುಂಡೇಶ್ವರಿ ದರ್ಶನ

ಮೈಸೂರು: ಮುಡಾ ಹಗರಣ ವಿರುದ್ದ ಇಂದಿನಿಂದ ನಡೆಯಲಿರುವ ಮೈಸೂರು ಚಲೋ ಪಾದಯಾತ್ರೆ ಪ್ರಾರಂಭಕ್ಕೂ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ದೇವಿ ಚಾಮುಂಡೇಶ್ವರಿ ಮೊರೆಹೋದರು. ಮೈಸೂರಿನ‌ ಚಾಮುಂಡಿ ಬೆಟ್ಟಕ್ಕೆ ಬಿ.ವೈ ವಿಜಯೇಂದ್ರ ಭೇಟಿ ನೀಡಿ ನಾಡದೇವತೆ ಚಾಮುಂಡಿ ತಾಯಿ ದರ್ಶನ ಪಡೆದರು. ಪಾದಯಾತ್ರೆ ಯಶಸ್ಸಿಗೆ ಚಾಮುಂಡೇಶ್ವರಿ ಬಳಿ ಪ್ರಾರ್ಥನೆ ಮಾಡಿ, ದಂಪತಿ ಸಮೇತ ಚಾಮುಂಡಿಗೆ ವಿಶೇಷ ಪೂಜೆ ಸಲ್ಲಿಸಿದರು. ವಿಜಯೇಂದ್ರಗೆ ಮಾಜಿ ಶಾಸಕ ನಾಗೇಂದ್ರ ಸೇರಿ ಮುಖಂಡರು ಸಾಥ್ ನೀಡಿದರು.

ಇಂದು 9.30ಕ್ಕೆ ಚಾಲನೆ

ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಅನುಮತಿ ಕೊಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. “ಭ್ರಷ್ಟ ಕಾಂಗ್ರೆಸ್ ತೊಲಗಿಸಿ” ಎಂಬ ಘೋಷಣೆಯಡಿ ಹಮ್ಮಿಕೊಂಡಿರುವ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆಗೆ (BJP-JDS Padayatra) ಶನಿವಾರ ಬೆಳಗ್ಗೆ 9.30ಕ್ಕೆ ಕೆಂಗೇರಿಯ ಕೆಂಪಮ್ಮ ದೇವಸ್ಥಾನದ ಬಳಿ ಚಾಲನೆ ನೀಡಲಾಗುತ್ತದೆ. ಏಳು ದಿನಗಳ ಪಾದಯಾತ್ರೆ ಸಾಗುವ ಮಾರ್ಗದ ವಿವರವನ್ನು ಇಲ್ಲಿ ನೀಡಲಾಗಿದೆ.

ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ, ಕೇಂದ್ರ ಸಚಿವರಾದ ಎಚ್‌.ಡಿ. ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ ಅವರು ಚಾಲನೆ ನೀಡಲಿದ್ದಾರೆ. ಒಟ್ಟು 124 ಕಿ.ಮೀ ಪಾದಯಾತ್ರೆ ಸಾಗಲಿದ್ದು, ಸಮಾರೋಪ ಸಮಾರಂಭ ಸೇರಿ ಒಟ್ಟು ಎಂಟು ದಿನಗಳ ಕಾರ್ಯಕ್ರಮದ ಮಾಹಿತಿ ಇಲ್ಲಿದೆ.

ಪಾದಯಾತ್ರೆ ಸಾಗುವ ಮಾರ್ಗದ ವಿವರ
ಆ.3- ಕೆಂಗೇರಿಯಿಂದ ಹೊರಟು ಬಿಡದಿಯಲ್ಲಿ ವಾಸ್ತವ್ಯ
ಆ.4- ಬಿಡದಿಯಿಂದ ಹೊರಟು ಕೆಂಗಲ್‌ನಲ್ಲಿ ಹಾಲ್ಟ್
ಆ.5- ಕೆಂಗಲ್ ನಿಂದ ಹೊರಟು ನಿಡಘಟ್ಟದಲ್ಲಿ ವಾಸ್ತವ್ಯ
ಆ.6- ನಿಡಘಟ್ಟದಿಂದ ಹೊರಟು ಮಂಡ್ಯ
ಆ.7- ಮಂಡ್ಯದಿಂದ ಹೊರಟು ತೂಬಿನಕೆರೆಯಲ್ಲಿ ವಾಸ್ತವ್ಯ
ಆ.8- ತೂಬಿನ ಕೆರೆಯಿಂದ ಹೊರಟು ಶ್ರೀರಂಗಪಟ್ಟಣದಲ್ಲಿ ಹಾಲ್ಟ್
ಆ.9- ಶ್ರೀರಂಗಪಟ್ಟಣದಿಂದ ಹೊರಟು ಮೈಸೂರು ಹೊರವಲಯದಲ್ಲಿ ವಾಸ್ತವ್ಯ
ಆ.10- ಮೈಸೂರು ಹೊರವಲಯದಿಂದ ಕೇಂದ್ರ ನಾಯಕರ ಜತೆ ಪಾದಯಾತ್ರೆ ಹೊರಟು ಸಮಾರೋಪ ಸಮಾರಂಭದ ವೇದಿಕೆ ತಲುಪುವುದು.

ನಗರದಲ್ಲಿ ಪ್ರತಿಭಟನೆಗೆ ಅವಕಾಶವಿಲ್ಲ ಎಂದ ಕಮಿಷನರ್

ನಾಳೆ ಬಿಜೆಪಿ-ಜೆಡಿಎಸ್ ಪಾದಯಾತ್ರೆ ಹಿನ್ನೆಲೆ‌ ನಗರ ಪೊಲೀಸ್ ಆಯುಕ್ತ ದಯಾನಂದ್ ಪ್ರತಿಕ್ರಿಯಿಸಿ, ಎಲ್ಲಿಂದ ಯಾವ ರೀತಿ ಪಾದಯಾತ್ರೆ ಮಾಡುತ್ತಾರೋ ಅಂತ ಇನ್ನೂ ಗೊತ್ತಿಲ್ಲ. ನಗರದಲ್ಲಿ ಪ್ರತಿಭಟನೆ, ರ‍್ಯಾಲಿ, ಪಾದಯಾತ್ರೆಗೆ ಅನುಮತಿ ಇಲ್ಲ. ಹೈಕೋರ್ಟ್ ಆದೇಶದ ಅನ್ವಯ ಅನುಮತಿ ಇಲ್ಲ. ಆದರೂ ಪೂರಕವಾಗಿ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳುತ್ತೇವೆ. ನನ್ನ ಮಟ್ಟದಲ್ಲಿ ಯಾರು ಬಂದು ಇದುವರೆಗೂ ಅನುಮತಿ ಕೇಳಿಲ್ಲ. ಪ್ರತಿಭಟನೆಗೆ ಬೆಂಗಳೂರಿನಲ್ಲಿ ಯಾವುದೇ ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.

ಪಾದಯಾತ್ರೆ ಹಿನ್ನಲೆಯಲ್ಲಿ ಕೆಂಗೇರಿಯಲ್ಲಿ ಎರಡು ಕೆಎಸ್ಆರ್‌ಪಿ ತುಕಡಿ, 100 ಜನ ಪೊಲೀಸರ ನಿಯೋಜನೆ ಮಾಡಲಾಗಿದೆ. 2 ಎಸಿಪಿ, 7 ಜನ ಇನ್ಸ್ಪೆಕ್ಟರ್ 15 ಜನ ಸಬ್ ಇನ್ಸ್ಪೆಕ್ಟರ್ ಸೇರಿ ನೂರು ಜನರಿಂದ ಬಂದೋಬಸ್ತ್ ಮಾಡಲಾಗಿದೆ. ರಾಮನಗರದವರೆಗೂ ಬೆಂಗಳೂರು ನಗರ ಪೊಲೀಸರು ಬಂದೋಬಸ್ತ್ ಒದಗಿಸಲಿದ್ದಾರೆ.

ಇದನ್ನೂ ಓದಿ: BJP-JDS Padayatra: ಮೈಸೂರು ಚಲೋಗೆ ಸರ್ಕಾರ ಅನುಮತಿ; ನಾಳೆ ಬೆಳಗ್ಗೆ ಚಾಲನೆ, ಪಾದಯಾತ್ರೆ ಮಾರ್ಗದ ವಿವರ ಇಲ್ಲಿದೆ

Continue Reading

ಪ್ರಮುಖ ಸುದ್ದಿ

PSI Death: ನಿನ್ನೆ ಬೀಳ್ಕೊಡುಗೆ ಪಡೆದ ಪಿಎಸ್‌ಐ ಇಂದು ಹೃದಯಾಘಾತದಿಂದ ಸಾವು; 30 ಲಕ್ಷ ರೂ. ಲಂಚಕ್ಕೆ ಶಾಸಕ ಒತ್ತಡ ಹಾಕಿದ್ದರಿಂದ ಖಿನ್ನತೆ?

PSI Death: ಸ್ಥಳೀಯ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಲಂಚದ ಹಣಕ್ಕಾಗಿ ಹೇರುತ್ತಿದ್ದ ಒತ್ತಡದಿಂದಲೇ ಪತಿಗೆ ಹೃದಯಾಘಾತ ಉಂಟಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸ್ಥಳೀಯ ದಲಿತ ಸಂಘಟನೆಗಳು ಶಾಸಕರ ವಿರುದ್ಧ ಪ್ರತಿಭಟನೆಗೆ ಮುಂದಾಗಿವೆ.

VISTARANEWS.COM


on

psi death yadgir
Koo

ಯಾದಗಿರಿ: ಯಾದಗಿರಿ (Yadgir news) ನಗರ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ (34) ಅವರು ಹೃದಯಾಘಾತದಿಂದ (Heart Attack) ನಿನ್ನೆ (PSI Death) ಸಾವಿಗೀಡಾಗಿದ್ದಾರೆ. ಇತ್ತೀಚೆಗೆ ಸೈಬರ್ ಕ್ರೈಮ್ (Cyber Crime) ಪಿಎಸ್ಐ ಆಗಿ ವರ್ಗಾವಣೆಗೊಂಡಿದ್ದ ಪರಶುರಾಮ, ಮೊನ್ನೆಯಷ್ಟೇ ನಗರ ಠಾಣೆಯಲ್ಲಿ ಅಭಿಮಾನದ ಬೀಳ್ಕೊಡುಗೆ ಪಡೆದಿದ್ದರು. ನಿನ್ನೆ ಪೊಲೀಸ್ ಕ್ವಾರ್ಟರ್ಸ್‌ ನಿವಾಸದಲ್ಲಿ ಹಠಾತ್ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.

ಈ ಸಾವು ಅನುಮಾನ ಮೂಡಿಸಿದ್ದು, ಕುಟುಂಬಸ್ಥರನ್ನು ಶಾಕ್‌ಗೆ ದೂಡಿದೆ. ಪರಶುರಾಮ್‌ ಅವರ ಪತ್ನಿ ಗರ್ಭಿಣಿಯಾಗಿದ್ದು ತವರಿಗೆ ತೆರಳಿದ್ದವರು ಮರಳಿದ್ದಾರೆ. ಸ್ಥಳೀಯ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಲಂಚದ ಹಣಕ್ಕಾಗಿ ಹೇರುತ್ತಿದ್ದ ಒತ್ತಡದಿಂದಲೇ ಪತಿಗೆ ಹೃದಯಾಘಾತ ಉಂಟಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸ್ಥಳೀಯ ದಲಿತ ಸಂಘಟನೆಗಳು ಶಾಸಕರ ವಿರುದ್ಧ ಪ್ರತಿಭಟನೆಗೆ ಮುಂದಾಗಿವೆ.

ಈ ಕುರಿತು ಪರಶುರಾಮ್‌ ಅವರ ಪತ್ನಿ ಶ್ವೇತಾ ದೂರು ನೀಡಿದ್ದಾರೆ. ಯಾದಗಿರಿ ನಗರ ಠಾಣೆಯಲ್ಲಿ ಉಳಿದುಕೊಳ್ಳಲು ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ಅವರು 30 ಲಕ್ಷ ರೂ. ಹಣ ಲಂಚ ನೀಡುವಂತೆ ಒತ್ತಾಯಿಸಿದ್ದರು. ಕಳೆದ ಏಳು ತಿಂಗಳ ಹಿಂದಷ್ಟೇ 30 ಲಕ್ಷ ರೂ. ಹಣ ನೀಡಿ ನಗರ ಠಾಣೆಗೆ ಪೋಸ್ಟಿಂಗ್ ಪಡೆದುಕೊಂಡಿದ್ದರು. ಇದರಿಂದ ಸಾಲದ ಸುಳಿಗೆ ಸಿಲುಕಿದ್ದರು. ಇದೀಗ ‌ಮತ್ತೆ ನಿಯಮಬಾಹಿರವಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಒಂದು ವರ್ಷ ಪೂರೈಸುವ ಮೊದಲೇ ವರ್ಗಾವಣೆ ಮಾಡಿದ್ದರಿಂದ ಒತ್ತಡಕ್ಕೆ ಒಳಗಾಗಿದ್ದರು ಎಂದು ಶ್ವೇತಾ ಆರೋಪಿಸಿದ್ದಾರೆ.

ನಿನ್ನೆಯಷ್ಟೇ ಸಚಿವ ಪ್ರಿಯಾಂಕ ಖರ್ಗೆ ಅವರೊಂದಿಗೂ ಪಿಎಸ್ಐ ಪರಶುರಾಮ್‌ ಫೋನ್‌ನಲ್ಲಿ ಮಾತಾಡಿದ್ದರು ಎಂದು ಪತ್ನಿ ಹೇಳಿದ್ದಾರೆ. ಸ್ಥಳಕ್ಕೆ ಶಾಸಕ ಬರುವಂತೆ ಪಿಎಸ್ಐ ಪತ್ನಿ ಪಟ್ಟು ಹಿಡಿದಿದ್ದು, ಅವರ ಗೋಳಾಟ ಕರುಳು ಚುರ್ ಎನ್ನುವಂತಿದೆ. ನನ್ನ ಗಂಡನ ಸಾವಿಗೆ‌ ನ್ಯಾಯ ಸಿಗಬೇಕು, ಶಾಸಕ ಎಲ್ಲಿ ಕರಿರಿ ಎಂದು ಪತ್ನಿ ಗೋಳಾಡಿದ್ದಾರೆ. ಮಧ್ಯರಾತ್ರಿಯೂ ನನ್ನ ಗಂಡ ಎಸ್ಪಿ‌ ಮೇಡಂ ಪೋನ್ ಹಚ್ಚಿದರು ಅಂತ ಓಡುತ್ತಿದ್ದರು. ಈ ಸಾವಿಗೆ ನನ್ನ ಗಂಡ ಏನು ಅನ್ಯಾಯ ಮಾಡಿದ್ದರು. ಎಂಎಲ್ಎ ಬರುವವರೆಗೂ ನಾನು ಇಲ್ಲಿಂದ ಹೋಗುವುದಿಲ್ಲ ಎಂದು ಯಾದಗಿರಿ ಎಸ್ಪಿ ಜಿ.‌ಸಂಗೀತಾ ಎದುರು ಪತ್ನಿ ಶ್ವೇತಾ ಕಣ್ಣೀರಿಟ್ಟಿದ್ದಾರೆ.

ಯಾದಗಿರಿ ಶಾಸಕ ಹಾಗೂ ಪುತ್ರನ ವಿರುದ್ಧ ದೂರು

ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು, ಅವರ ಪುತ್ರ ಪಂಪನಗೌಡ (ಸನ್ನಿಗೌಡ) ವಿರುದ್ಧ ದೂರು ಪಿಎಸ್ಐ ಪತ್ನಿ ಶ್ವೇತಾ ಯಾದಗಿರಿ ಎಸ್ಪಿ ಸಂಗೀತಾ ಅವರಿಗೆ ದೂರು ನೀಡಿದ್ದಾರೆ. ಪೋಸ್ಟಿಂಗ್‌ಗಾಗಿ ಪದೇ ಪದೆ ಹಣಕ್ಕೆ ಕಿರುಕುಳ ನೀಡುತ್ತಿದ್ದ ಆರೋಪ ದಾಖಲಿಸಲಾಗಿದೆ. ಶಾಸಕ, ಅವರ ಪುತ್ರ ಹಣಕ್ಕಾಗಿ ನಿರಂತರ ಕಿರುಕುಳ ನೀಡುತ್ತಿದ್ದ ಬಗ್ಗೆ ಪತ್ನಿಗೆ ಪರಶುರಾಮ ಹೇಳಿದ್ದರು. 30 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಜಾತಿ ನಿಂದನೆಯನ್ನೂ ಮಾಡಿದ್ದರು. ಶಾಸಕರ ಕಿರುಕುಳದಿಂದ ಪರಶುರಾಮ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ಪತ್ನಿ ದೂರಿದ್ದಾರೆ.

ಶಾಸಕ, ಆತನ ಪುತ್ರನ‌ ಮೇಲೆ ಕೇಸ್ ದಾಖಲಿಸಿದ ಬಳಿಕ‌ ಮರಣೋತ್ತರ ಪರೀಕ್ಷೆಗೆ ಪತ್ನಿ ಒಪ್ಪಿಗೆ ಸೂಚಿಸಿದ್ದು, ಯಾದಗಿರಿ ಯಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ಪರಶುರಾಮ ಶವ ರವಾನೆಯಾಗಿದೆ.

ಪರಶುರಾಮ ಮಾವ ವೆಂಕಟಸ್ವಾಮಿ ಕೂಡ ಶಾಸಕರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಯಾದಗಿರಿ ಎಂಎಲ್‌ಗೆ ದುಡ್ಡಿನ ಆಸೆ ವಿಪರೀತವಾಗಿದೆ. ಅವಧಿ ಪೂರ್ವ ವರ್ಗಾವಣೆಯಿಂದ ಪರಶುರಾಮ ನೊಂದಿದ್ದರು. 7 ತಿಂಗಳ ಅವಧಿಯಲ್ಲಿ ಎಂಎಲ್‌ಎ ಬೇರೆಯವರನ್ನು ಪಿಎಸ್‌ಐ ಆಗಿ ಹಾಕಿಸಿದ್ದಾರೆ. ವರ್ಗಾವಣೆ ಆಗುತ್ತಿರುವುದು ಹೋಂ ಮಿನಿಸ್ಟರ್ ಹಾಗೂ ಸಿಎಂ ಗಮನಕ್ಕೆ ಬರುತ್ತಿಲ್ಲವೇ? ದಕ್ಷ ಅಧಿಕಾರಿಗಳು ಸಾಯುವುದಕ್ಕೆ ಇರುವುದೇ ಎಂದು ಅವರು ಪ್ರಶ್ನಿಸಿದ್ದಾರೆ.

ಸಂಘಟನೆಗಳಿಂದ ಪ್ರತಿಭಟನೆ

ಪಿಎಸ್ಐ ಪರಶುರಾಮ ಸಾವಿನ ಸುತ್ತ ಅನುಮಾನಗಳು ಮೂಡುತ್ತಿದ್ದು, ಯಾದಗಿರಿಯ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆದಿದೆ. ನಗರದ ಖಾಸಗಿ ಆಸ್ಪತ್ರೆ ಬಳಿ ಜಮಾಯಿಸಿದ ವಿವಿಧ ಸಂಘಟನೆಗಳ ಕಾರ್ಯಕರ್ತರು, ಆಂಬ್ಯುಲೆನ್ಸ್ ತಡೆದು ಪ್ರತಿಭಟಿಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಶವ ರವಾನೆ ಮಾಡುತ್ತಿದ್ದಾಗ ಆಂಬ್ಯುಲೆನ್ಸ್‌ ಅಡ್ಡಗಟ್ಟಿ ಕುಳಿತ ಸಂಘಟನೆಗಳ ಕಾರ್ಯಕರ್ತರು, ಸಾವಿನ ಬಗ್ಗೆ ಸೂಕ್ತ ತನಿಖೆ ಆಗಬೇಕೆಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Road Accident: ಆಡಿ ಕಾರ್‌ ಮರಕ್ಕೆ ಡಿಕ್ಕಿಯಾಗಿ 3 ವಿದ್ಯಾರ್ಥಿಗಳು ದುರ್ಮರಣ; ಐಷಾರಾಮಿ ಕಾರಿನಲ್ಲಿ ಏರ್‌ಬ್ಯಾಗ್‌ ಇರಲೇ ಇಲ್ಲ!

Continue Reading

ಕೋಲಾರ

Road Accident: ಆಡಿ ಕಾರ್‌ ಮರಕ್ಕೆ ಡಿಕ್ಕಿಯಾಗಿ 3 ವಿದ್ಯಾರ್ಥಿಗಳು ದುರ್ಮರಣ; ಐಷಾರಾಮಿ ಕಾರಿನಲ್ಲಿದ್ದ ಏರ್‌ಬ್ಯಾಗ್‌ ಸಹ ಚಿಂದಿ!

Road Accident: ಕೋಲಾರ ‌ಹೊರವಲಯದ ಬಂಗಾರಪೇಟೆ ಮುಖ್ಯ ರಸ್ತೆಯ ಸಹಕಾರ ನಗರ ಬಳಿ ಘಟನೆ ನಡೆದಿದೆ. ಮೃತರು ರೇವಾ ಯೂನಿವರ್ಸಿಟಿ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ಮೃತರನ್ನು ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ‌ ಬಸವರಾಜ್ ಹಾಗೂ ಬಂಗಾರಪೇಟೆಯ ನಿಚ್ಚಲ್ ಎಂದು ಗುರುತಿಸಲಾಗಿದೆ.

VISTARANEWS.COM


on

audi car road accident kolar
Koo

ಕೋಲಾರ: ಕೋಲಾರದ (Kolar news) ಹೊರವಲಯದಲ್ಲಿ ಭೀಕರ ದುರಂತ ಸಂಭವಿಸಿದೆ. ಆಡಿ ಕಾರ್ ಮರಕ್ಕೆ ಡಿಕ್ಕಿಯಾಗಿ (Audi Car Accident) ನಡೆದ ಭೀಕರ ಅಪಘಾತದಲ್ಲಿ (Road Accident) ಮೂವರು ವಿದ್ಯಾರ್ಥಿಗಳು (Students Death) ಸ್ಥಳದಲ್ಲೇ ಮೃತಪಟ್ಟಿದ್ದು, ಇತ್ತೊಬ್ಬ ಆಶ್ಚರ್ಯಕರ ರೀತಿಯಲ್ಲಿ ಬಚಾವ್ ಆಗಿದ್ದಾನೆ.

ಕೋಲಾರ ‌ಹೊರವಲಯದ ಬಂಗಾರಪೇಟೆ ಮುಖ್ಯ ರಸ್ತೆಯ ಸಹಕಾರ ನಗರ ಬಳಿ ಘಟನೆ ನಡೆದಿದೆ. ಮೃತರು ರೇವಾ ಯೂನಿವರ್ಸಿಟಿ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ಮೃತರನ್ನು ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ‌ ಬಸವರಾಜ್ ಹಾಗೂ ಬಂಗಾರಪೇಟೆಯ ನಿಚ್ಚಲ್ ಎಂದು ಗುರುತಿಸಲಾಗಿದೆ.

ಬಂಗಾರಪೇಟೆ ಮೂಲದ ಸಾಯಿ ಗಗನ್ ಬಚಾವ್ ಆಗಿದ್ದಾನೆ. ಅಪಘಾತದ ರಭಸಕ್ಕೆ ಆಡಿ ಕಾರ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಬಚಾವಾದ ಸಾಯಿಗಗನ್‌ ಮನೆಗೆ ಸ್ನೇಹಿತರು ಬಂದಿದ್ದರು. ಮನೆಯಿಂದ ಕೋಲಾರಕ್ಕೆ ಮರಳುವಾಗ ಅಪಘಾತ ಸಂಭವಿಸಿದೆ. ಅಪಘಾತಕ್ಕೆ ಅತಿ ವೇಗ ಕಾರಣ ಎನ್ನಲಾಗಿದೆ. ಮದ್ಯ ಸೇವನೆಯ ಸಾಧ್ಯತೆಯನ್ನು ಪೋಸ್ಟ್‌ ಮಾರ್ಟಂ ಮೂಲಕ ನಿರ್ಣಯಿಸಲಿದ್ದಾರೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಅಪಘಾತದ ಭೀಕರತೆಗೆ ಕಾರು ಚಿಂದಿಚಿಂದಿಯಾಗಿದೆ. ಕಾರಿನಲ್ಲಿದ್ದ ಏರ್‌ಬ್ಯಾಗ್‌ಗಳು ಕೂಡ ಚಿಂದಿಚಿಂದಿಯಾಗಿವೆ. ಸುಮಾರು 50 ಲಕ್ಷ ರೂಪಾಯಿ ಬೆಲೆಬಾಳುವ ಕಾರಿನಲ್ಲಿದ್ದ ಅಪಘಾತ ಸುರಕ್ಷತಾ ಕ್ರಮಗಳು ಕೆಲಸ ಮಾಡದಿರುವುದು ಅಚ್ಚರಿಗೆ ಕಾರಣವಾಗಿದೆ.

ಬಸ್ಸಿಗೆ ಸಿಲುಕಿ ವಿದ್ಯಾರ್ಥಿ ಮೃತ್ಯು

ಕೋಲಾರ : ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ (Road Accidentಸಂಭವಿಸಿದೆ. ಜವರಾಯನ ಅಟ್ಟಹಾಸಕ್ಕೆ ವಿದ್ಯಾರ್ಥಿ ಮಸಣ ಸೇರಿದ್ದಾನೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಗ್ರಾಮದ ಬಳಿ ಅಪಘಾತ ಸಂಭವಿಸಿದೆ.

ತಮಟಂಪಲ್ಲಿ ಗ್ರಾಮದ ಭಾರ್ಗವ್ ರೆಡ್ಡಿ (18) ಮೃತ ದುರ್ದೈವಿ. ಭಾರ್ಗವ್‌ ಚಿಂತಾಮಣಿ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಬಸ್ ಮಿಸ್ ಆದ ಕಾರಣ ದ್ವಿಚಕ್ರ ವಾಹನದಲ್ಲಿ ಅಡ್ಡಗಲ್ ಗ್ರಾಮಕ್ಕೆ ಬರುತ್ತಿದ್ದ. ಈ ವೇಳೆ ಬಸ್‌ವೊಂದು ಬೈಕ್‌ಗೆ ಗುದ್ದಿದೆ. ಪರಿಣಾಮ ಕೆಳಗೆ ಬಿದ್ದ ಭಾರ್ಗವ್‌ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ.

ಮಗನ ಮೃತ ದೇಹ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.

ಹಿಟ್‌ ಆ್ಯಂಡ್‌ ರನ್‌ ಮಾಡಿ ಎಸ್ಕೇಪ್‌ ಆದ ಬೈಕ್‌ ಸವಾರ

ಬೆಂಗಳೂರು: ಮಕ್ಕಳನ್ನು ರಸ್ತೆಯಲ್ಲಿ ಆಟವಾಡಲು ಬಿಡುವ ಪೋಷಕರೇ ಎಚ್ಚರವಾಗಿರಿ. ಯಾಕೆಂದರೆ ಬೆಂಗಳೂರಿನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಹಿಟ್‌ ಆ್ಯಂಡ್‌ ರನ್‌ ಮಾಡಿ ಎಸ್ಕೇಪ್‌ ಆಗಿದ್ದಾನೆ. ಸೈಕಲ್ ತುಳಿಯುತ್ತಾ ಆಟವಾಡುತ್ತಿದ್ದ ಬಾಲಕನಿಗೆ ಗುದ್ದಿ ಕಾಲ್ಕಿತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಂಗಳೂರಿನ ಬನಶಂಕರಿ 6ನೇ ಹಂತದಲ್ಲಿ ಈ ಅಪಘಾತ ನಡೆದಿದೆ. ನಂಬರ್ ಪ್ಲೇಟ್‌ ಇಲ್ಲದ ಆರ್‌ಎಕ್ಸ್ ಬೈಕ್‌ನಲ್ಲಿ ಬಂದಿದ್ದ ವ್ಯಕ್ತಿಯೊಬ್ಬ ಮನೆಯ ಮುಂಭಾಗದ ರಸ್ತೆಯಲ್ಲಿ ಸೈಕಲ್ ತುಳಿಯುತ್ತಿದ್ದ ಬಾಲಕನಿಗೆ ವೇಗವಾಗಿ ಬಂದು ಗುದ್ದಿದ್ದಾನೆ.

ಬಾಲಕ ರಸ್ತೆಯಲ್ಲೇ ಬಿದ್ದು ಅಳುತ್ತಿದ್ದರು ಬೈಕ್‌ ಸವಾರ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಕಳೆದ ಆಗಸ್ಟ್ 1ರ ರಾತ್ರಿ 8 ಗಂಟೆ ಸುಮಾರಿಗೆ ಅಪಘಾತ ನಡೆದಿದೆ. ತಲಘಟ್ಟಪುರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸದ್ಯ ಆರೋಪಿಗಾಗಿ ದಕ್ಷಿಣ ವಿಭಾಗದ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ: Love case : ಅಂತರ್ಜಾತಿ ವಿವಾಹಕ್ಕೆ ಪೋಷಕರ ವಿರೋಧ; ವಿಷ ಸೇವಿಸಿ ಪ್ರೇಮಿಗಳಿಬ್ಬರು ಆತ್ಮಹತ್ಯೆ

Continue Reading
Advertisement
Neeraj Chopra
ಕ್ರೀಡೆ6 mins ago

Neeraj Chopra: ನೀರಜ್​ ಚಿನ್ನ ಗೆದ್ದರೆ ನೀವು ಕೂಡ ಉಚಿತ ವಿದೇಶ ಪ್ರವಾಸ ಕೈಗೊಳ್ಳಬಹುದು; ಇದು ಹೇಗೆ ಸಾಧ್ಯ?

World Bank
ವಾಣಿಜ್ಯ12 mins ago

World Bank: ಅಮೆರಿಕದ ತಲಾ ಆದಾಯದ ಕಾಲು ಭಾಗ ತಲುಪಲು ಭಾರತಕ್ಕೆ 75 ವರ್ಷ ಬೇಕು: ವಿಶ್ವ ಬ್ಯಾಂಕ್‌

Rakshit Shetty Richard Anthony Produce By Hombale
ಅವಿಭಾಗೀಕೃತ16 mins ago

US Military: ಇರಾನ್, ಹಮಾಸ್, ಹಿಜ್ಬುಲ್ಲಾ ದಾಳಿಯಿಂದ ಇಸ್ರೇಲ್ ರಕ್ಷಿಸಲು ಭದ್ರಕೋಟೆ ನಿರ್ಮಿಸಿದ ಅಮೆರಿಕ

Jr NTR -Janhvi Kapoor Devara Song take centre stage
ಟಾಲಿವುಡ್35 mins ago

Jr NTR -Janhvi Kapoor: ರೊಮ್ಯಾಂಟಿಕ್​ ಆಗಿ ಕಾಣಿಸಿಕೊಂಡ ಜ್ಯೂನಿಯರ್‌ ಎನ್‌ಟಿಆರ್- ಜಾಹ್ನವಿ; ಆ.5ಕ್ಕೆ ಚಿತ್ರತಂಡದಿಂದ ಗಿಫ್ಟ್‌!​

IND vs SL
ಕ್ರೀಡೆ36 mins ago

IND vs SL: ಭಾರತ-ಲಂಕಾ ಏಕದಿನ ಪಂದ್ಯ ಟೈ ಆದರೂ ಸೂಪರ್​ ಓವರ್​ ಏಕೆ ಆಡಿಸಲಿಲ್ಲ?; ಇಲ್ಲಿದೆ ಉತ್ತರ

UGCET 2024
ಪ್ರಮುಖ ಸುದ್ದಿ56 mins ago

UGCET 2024: ಆ.7ರಂದು ಮಧ್ಯಾಹ್ನ 2 ಗಂಟೆಗೆ ಸಿಇಟಿ ಅಣಕು ಸೀಟು ಹಂಚಿಕೆ ಪ್ರಕಟ; ಆಪ್ಶನ್ ಎಂಟ್ರಿಗೆ ನಾಳೆ ಲಾಸ್ಟ್ ಡೇಟ್

Lion & Lioness Name
ದೇಶ1 hour ago

Lion & Lioness Name: ಅಕ್ಬರ್‌-ಸೀತಾ ಸಿಂಹಗಳಿಗೆ ಹೊಸ ಹೆಸರು; ವಿವಾದಕ್ಕೆ ತೆರೆ ಎಳೆದ ದೀದಿ ಸರ್ಕಾರ

Kamala Harris
ವಿದೇಶ1 hour ago

Kamala Harris: ಅಮೆರಿಕ ಅಧ್ಯಕ್ಷ ಸ್ಥಾನಕ್ಕೆ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿ ಕಮಲಾ ಹ್ಯಾರಿಸ್ ಹೆಸರು ಅಂತಿಮ

Kannada New Movie Tenant sonu gowda First look out
ಸ್ಯಾಂಡಲ್ ವುಡ್1 hour ago

Kannada New Movie: ʻಟೆನೆಂಟ್’ ಸಿನಿಮಾದ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌; ಸೋನು ಗೌಡ ನಾಯಕಿ!

Rohit Sharma
ಕ್ರೀಡೆ1 hour ago

Rohit Sharma: ಲಂಕಾ ವಿರುದ್ಧ ಅರ್ಧಶತಕ ಬಾರಿಸಿ ಹಲವು ದಾಖಲೆ ಬರೆದ ರೋಹಿತ್​ ಶರ್ಮ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Rain
ಮಳೆ2 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ4 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ4 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ5 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ5 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ5 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ6 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌