Assembly session: ಅಧಿವೇಶನ ಅನಿರ್ದಿಷ್ಟಾವಧಿಗೆ ಮುಂದೂಡಿಕೆ; ನಾಳೆ ಮುಗಿಯಬೇಕಿದ್ದ ಕಲಾಪ ಇಂದೇ ಮೊಟಕು! - Vistara News

ಕರ್ನಾಟಕ

Assembly session: ಅಧಿವೇಶನ ಅನಿರ್ದಿಷ್ಟಾವಧಿಗೆ ಮುಂದೂಡಿಕೆ; ನಾಳೆ ಮುಗಿಯಬೇಕಿದ್ದ ಕಲಾಪ ಇಂದೇ ಮೊಟಕು!

Assembly session: 16ನೇ ವಿಧಾನ ಸಭೆಯ 4ನೇ ಅಧಿವೇಶನದಲ್ಲಿ ಒಟ್ಟು 8 ದಿನಗಳ ಕಲಾಪ ನಡೆದಿದ್ದು, 12 ವಿಧೇಯಕಗಳನ್ನು ಅಂಗೀಕಾರ ಮಾಡಲಾಗಿದೆ. ನೀಟ್‌ ಪರೀಕ್ಷೆ ರದ್ದು, ಒನ್ ನೆಷನ್-ಒನ್ ಎಲೆಕ್ಷನ್‌ಗೆ ವಿರೋಧ ಸೇರಿ 4 ನಿರ್ಣಯಗಳು ಪಾಸ್‌ ಆಗಿವೆ.

VISTARANEWS.COM


on

Assembly session
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಧಾನ ಮಂಡಲ ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿಕೆ ಮಾಡಲಾಗಿದೆ. ಇದರಿಂದ ನಾಳೆ (ಜು.26) ಮುಗಿಯಬೇಕಿದ್ದ ಅಧಿವೇಶನ (Assembly session) ಇಂದೇ ಮೊಟಕುಗೊಂಡಂತಾಗಿದೆ. 16ನೇ ವಿಧಾನ ಸಭೆಯ ನಾಲ್ಕನೇ ಅಧಿವೇಶನ 8 ದಿನಗಳ ಕಾಲ (37 ಗಂಟೆ, 30 ನಿಮಿಷ) ನಡೆದಿದ್ದು, ರಾಷ್ಟ್ರಗೀತೆಯೊಂದಿಗೆ ಅನಿರ್ಧಿಷ್ಟಾವಧಿಗೆ ಕಲಾಪ ಮುಂದೂಡಿಕೆಯಾಗಿದೆ.

ಅಧಿವೇಶನ ಅನಿರ್ಧಿಷ್ಟಾವಧಿ ಮುಂದೂಡಿಕೆ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಸದಸ್ಯರು ರಾಜಭವನಕ್ಕೆ ತೆರಳಲಿದರು. ಸ್ಪೀಕರ್ ನಡೆ ಕಾಂಗ್ರೆಸ್ ಕಡೆ ಎಂದು ಕೂಗಿ ಆಕ್ರೋಶ ಹೊರಹಾಕಿದ್ದಾರೆ. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ನಲ್ಲಿ ಭೇಟಿ ಮಾಡಿ ದೂರು ನೀಡಿದ ಬಿಜೆಪಿ-ಜೆಡಿಎಸ್ ನಿಯೋಗ, ಮುಡಾ ಹಗರಣ ವಿಚಾರ ಚರ್ಚೆಗೆ ನೀಡದ ಬಗ್ಗೆ ಹಾಗೂ ನಾಳೆಗೆ ಮುಗಿಯುವ ಅಧಿವೇಶನ ಇಂದೇ ಮೊಟಕುಗೊಳಿಸಿದ್ದಾರೆ. ಈ ಬಗ್ಗೆ ಸರ್ಕಾರಕ್ಕೆ ಚಾಟಿ ಬೀಸುವಂತೆ ಮನವಿ ಮಾಡಿದ್ದಾರೆ.

12 ವಿಧೇಯಕಗಳ ಅಂಗೀಕಾರ

16ನೇ ವಿಧಾನ ಸಭೆಯ 4ನೇ ಅಧಿವೇಶನದಲ್ಲಿ ಒಟ್ಟು 8 ದಿನಗಳ ಕಲಾಪ ನಡೆದಿದ್ದು, ಪೂರಕ ಅಂದಾಜುಗಳು, ಲೆಕ್ಕಪರಿಶೋಧಕರ ವರದಿ ಮಂಡನೆ ಮಾಡಲಾಗಿದೆ. ಭರವಸೆಗಳ ಸಮಿತಿ, ಕಾಗದ ಪತ್ರಗಳ ಸಮಿತಿ, ಅಂದಾಜು ಸಮಿತಿ, ಅನುಸೂಚಿತ ಜಾತಿ, ಅನುಸೂಚಿತ ಪಂಗಡ ಕಲ್ಯಾಣ ಸಮಿತಿ, ಅಲ್ಪಾಸಂಖ್ಯಾತ ಸಮಿತಿಯ ಮೊದಲ ವರದಿ ಮಂಡನೆ ಮಾಡಲಾಗಿದೆ.

ಇದನ್ನೂ ಓದಿ | Assembly session: ಪರಿಷತ್‌ನಲ್ಲೂ ಸಿನಿ, ಸಾಂಸ್ಕೃತಿಕ ಕಾರ್ಯಕರ್ತರ ಮಸೂದೆ ಪಾಸ್; ಹೆಚ್ಚಲಿದೆ ಸಿನಿಮಾ ಟಿಕೆಟ್ ದರ, ಒಟಿಟಿ ಶುಲ್ಕ!

12 ವಿಧೇಯಕಗಳನ್ನು ಅಂಗೀಕಾರ ಮಾಡಲಾಗಿದ್ದು, ಗ್ರೇಟರ್ ಬೆಂಗಳೂರು ವಿಧೇಯಕವನ್ನು ಜಂಟಿ ಪರಿಶೀಲನಾ ಸಮಿತಿಗೆ ಒಪ್ಪಿಸಲಾಗಿದೆ. ನಿಯಮ 69 ಅಡಿಯಲ್ಲಿ 14 ಸೂಚನೆಗಳ ಅಂಗೀಕಾರ ಸಿಕ್ಕಿದ್ದು, 117 ಪ್ರಶ್ನೆಗಳಿಗೆ ಉತ್ತರ ಹಾಗೂ 1902 ಪ್ರಶ್ನೆಗಳಿಗೆ ಪೈಕಿ 1438 ಪ್ರಶ್ನೆಗಳಿಗೆ ಉತ್ತರ ನೀಡಲಾಗಿದೆ. 170 ಗಮನ ಸೆಳೆಯುವ ಸೂಚನೆ ಗಳಿಗೆ ಉತ್ತರ ನೀಡಲಾಗಿದೆ.

ನಾಲ್ಕು ನಿರ್ಣಯ ಪಾಸ್

  • ಒನ್ ನೆಷನ್-ಒನ್ ಎಲೆಕ್ಷನ್‌ಗೆ ವಿರೋಧ
  • ನೀಟ್ ಪರೀಕ್ಷೆ ರದ್ದು
  • 1971 ಜನಗಣತಿ ಆಧರಿಸಿ ಲೋಕಸಭಾ ಕ್ಷೇತ್ರಗಳ ಮರು ವಿಂಗಡಣೆ
  • ಅರಣ್ಯವಾಸಿ ಅನುಸೂಚಿತ ಬುಡಕಟ್ಟುಗಳು ಪಾರಂಪರಿಕ ಅರಣ್ಯವಾಸಿಗಳ ಅಧಿನಿಯಮ 2006 ಅಡಿಯಲ್ಲಿ ಮಾಡಲಾದ ನಿಯಮಗಳನ್ನು ಸೂಕ್ತವಾಗಿ ಮಾರ್ಪಾಡು ಮಾಡುವ ನಿರ್ಣಯ

ನಕಲಿ ವೈದ್ಯರಿಗೆ 1 ಲಕ್ಷದವರೆಗ ದಂಡ!

ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕೆಲವು ಕಾನೂನು (ತಿದ್ದುಪಡಿ) ವಿಧೇಯಕ – 2024 ವಿಧಾನ ಪರಿಷತ್‌ನಲ್ಲಿ ಅಂಗೀಕಾರಗೊಂಡಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ವಿಧೇಯಕ ಮಂಡಿಸಿದ್ದು, ನಕಲಿ ವೈದ್ಯರ ಮೇಲಿನ ದಂಡ 10 ಸಾವಿರದಿಂದ ಒಂದು ಲಕ್ಷದವರೆಗೆ ಏರಿಕೆ ಮಾಡಿದ್ದೇವೆ. ಉದ್ದೇಶಪೂರ್ವಕವಾಗಿ ವೈದರ ಮೇಲೆ ಹಲ್ಲೆ, ನಿಂದನೆ, ಅವಮಾನಿಸುವುದನ್ನು ನಿಷೇಧಿಸಿರುವ ತಿದ್ದುಪಡಿ ತಂದಿದ್ದೇವೆ. ವೈದ್ಯರ ಮೇಲಿನ ಹಲ್ಲೆಗೆ ಮೂರು ವರ್ಷದಿಂದ 7 ವರ್ಷದ ತನಕ ಜೈಲು ಶಿಕ್ಷೆ ವಿಧಿಸುವ ತಿದ್ದುಪಡಿ ಮಾಡಿದ್ದೇವೆ ಎಂದರು. ಬಳಿಕ ವಿಧೇಯಕಕ್ಕೆ ಅಂಗೀಕಾರ ನೀಡಲಾಯಿತು.

ಐತಿಹಾಸಿಕ ಸ್ಥಳ, ಸ್ಮಾರಕ ವಿರೂಪಗೊಳಿಸಿದ್ರೆ ಜೈಲು ಫಿಕ್ಸ್‌

ಇನ್ನು ಮುಂದೆ ಐತಿಹಾಸಿಕ ಸ್ಥಳಗಳ ವಿರೂಪ ಅಥವಾ ಸ್ಮಾರಕಗಳನ್ನು ನಾಶಪಡಿಸಿದರೆ ಜೈಲು ಶಿಕ್ಷೆ ಖಚಿತ. ಐತಿಹಾಸಿಕ ಸ್ಥಳ, ಸ್ಮಾರಕಗಳ ಸಂರಕ್ಷಣೆಗೆ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದ್ದು, ಇದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪ್ರಾಚೀನ ಐತಿಹಾಸಿಕ ಸ್ಮಾರಕಗಳು ಮತ್ತು ಪುರಾತತ್ವ ಸ್ಥಳಗಳ ಅವಶೇಷಗಳ (ತಿದ್ದುಪಡಿ) ವಿಧೇಯಕ 2024 ಬಿಲ್ ವಿಧಾನ ಪರಿಷತ್‌ನಲ್ಲಿ ಮಂಡನೆಯಾಗಿ (Assembly session), ಅಂಗೀಕಾರಗೊಂಡಿದೆ.

ವಿಧಾನ ಪರಿಷತ್‌ನಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್ ಅವರು ಕರ್ನಾಟಕ ಪ್ರಾಚೀನ ಐತಿಹಾಸಿಕ ಸ್ಮಾರಕಗಳು ಮತ್ತು ಪುರಾತತ್ವ ಸ್ಥಳಗಳ ಅವಶೇಷಗಳ (ತಿದ್ದುಪಡಿ) ವಿಧೇಯಕ 2024 ಬಿಲ್ ಮಂಡಿಸಿದರು. ಇದರಲ್ಲಿ ಪ್ರಾಚೀನ ಹಾಗೂ ಐತಿಹಾಸಿಕ ಸ್ಮಾರಕ ದತ್ತು ತೆಗೆದುಕೊಳ್ಳಲು ಅವಕಾಶ ನೀಡಲಾಗಿದ್ದು, ಐತಿಹಾಸಿಕ ಸ್ಥಳ ಅಥವಾ ಸ್ಮಾರಕಗಳನ್ನು ನಾಶಪಡಿಸಿದರೆ ಮೂರು ತಿಂಗಳ ಕಠಿಣ ಶಿಕ್ಷೆ ಅಥವಾ ದಂಡ ವಿಧಿಸಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ | Assembly session: ನೀಟ್ ಪರೀಕ್ಷೆ ರದ್ದು, ಒನ್ ನೇಷನ್-ಒನ್ ಎಲೆಕ್ಷನ್ ವಿರುದ್ಧ ನಿರ್ಣಯ; ಉಭಯ ಸದನಗಳಲ್ಲೂ ಅಂಗೀಕಾರ

ಎಚ್.ಕೆ.ಪಾಟೀಲ್ ಅವರು ವಿಧೇಯಕದ ಬಗ್ಗೆ ಮಾತನಾಡಿ, ಪ್ರಾಚೀನ ಮತ್ತು ಐತಿಹಾಸಿಕ ಸ್ಮಾರಕ ಮತ್ತು ಪುರಾತತ್ವ ಸ್ಥಳಗಳ ಸಂರಕ್ಷಣೆ ಮಾಡುವ ಕರ್ತವ್ಯವಿದೆ. ಸ್ಮಾರಕಗಳನ್ನು ದತ್ತು ತೆಗೆದುಕೊಳ್ಳಲು ಈ ವಿಧೇಯಕ ಅವಕಾಶ ಮಾಡಿಕೊಡಲಿದೆ. ಸೊಸೈಟಿ, ಸಹಕಾರ ಸಂಘಗಳು, ಟ್ರಸ್ಟ್​​ಗಳು, ಸರ್ಕಾರೇತರ ಸಂಸ್ಥೆಗಳು ಆಸಕ್ತಿಯುಲ್ಳ ವ್ಯಕ್ತಿಗಳನ್ನು ಸ್ಮಾರಕ ಪಟ್ಟಿಯಲ್ಲಿ ಸೇರಿಸಲು ತಿದ್ದುಪಡಿ ತರಲಾಗಿದೆ ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Lokayukta: ಲೋಕಾಯುಕ್ತ ಎಡಿಜಿಪಿಯಾಗಿ ಮನೀಶ್‌ ಕರ್ಬೀಕರ್‌, ಅಗ್ನಿಶಾಮಕ ದಳ ಡಿಜಿಪಿಯಾಗಿ ಪ್ರಶಾಂತ್ ಕುಮಾರ್ ಥಾಕೂರ್‌ ನೇಮಕ

Lokayukta: ಹಿರಿಯ ಐಪಿಎಸ್ ಅಧಿಕಾರಿಗಳಾದ ಮನೀಶ್‌ ಕರ್ಬೀಕರ್‌ ಮತ್ತು ಪ್ರಶಾಂತ್ ಕುಮಾರ್ ಥಾಕೂರ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.‌

VISTARANEWS.COM


on

Lokayukta
ಲೋಕಾಯುಕ್ತ ನೂತನ ಎಡಿಜಿಪಿ ಮನೀಶ್‌ ಕರ್ಬೀಕರ್‌
Koo

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿಗಳಾದ ಮನೀಶ್‌ ಕರ್ಬೀಕರ್‌ ಮತ್ತು ಪ್ರಶಾಂತ್ ಕುಮಾರ್ ಥಾಕೂರ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.‌ ಸಿಐಡಿ ಎಡಿಜಿಪಿ (ಆರ್ಥಿಕ ಅಪರಾಧಗಳು) ಆಗಿದ್ದ ಮನೀಶ್‌ ಕರ್ಬೀಕರ್‌ ಅವರು ಲೋಕಾಯುಕ್ತ ಎಡಿಜಿಪಿಯಾಗಿ (Lokayukta) ನೇಮಕವಾಗಿದ್ದು, ಲೋಕಾಯುಕ್ತ ಡಿಜಿಪಿಯಾಗಿದ್ದ ಪ್ರಶಾಂತ್ ಕುಮಾರ್ ಥಾಕೂರ್ ಅವರು ಅಗ್ನಿಶಾಮಕ ದಳ ಡಿಜಿಪಿಯಾಗಿ ವರ್ಗಾವಣೆಯಾಗಿದ್ದಾರೆ.

ಮನೀಶ್‌ ಕರ್ಬೀಕರ್‌ ಅವರು ಸದ್ಯ ವಾಲ್ಮೀಕಿ ನಿಗಮದ ಹಗರಣ ಹಾಗೂ ಬಿಟ್ ಕಾಯಿನ್ ಹಗರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಮುಖ್ಯಸ್ಥರೂ ಆಗಿದ್ದಾರೆ. ಇವರು ಲೋಕಾಯುಕ್ತ ಎಡಿಜಿಪಿಯಾಗಿ ನೇಮಕವಾಗಿದ್ದರೂ ಕೂಡ ಎರಡೂ ಪ್ರಕರಣಗಳ ಎಸ್ಐಟಿ ಮುಖ್ಯಸ್ಥರಾಗಿ ಮುಂದುವರಿಯುವಂತೆ ಸೂಚಿಸಲಾಗಿದೆ.

ಇನ್ನು ಲೋಕಾಯುಕ್ತ ಡಿಜಿಪಿಯಾಗಿದ್ದ ಪ್ರಶಾಂತ್ ಠಾಕೂರ್ ಅವರನ್ನು ಅಗ್ನಿಶಾಮಕ ದಳ ಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಅಗ್ನಿಶಾಮಕ ದಳ ಡಿಜಿಪಿ ಹಾಗೂ ಮಹಾ ನಿರ್ದೇಶಕರಾಗಿದ್ದ ಮಾಲಿನಿ ಕೃಷ್ಣಮೂರ್ತಿ ಅವರನ್ನು ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ.

ಇದನ್ನೂ ಓದಿ | NEET UG 2024: ನೀಟ್‌ ಪರಿಷ್ಕೃತ ಫಲಿತಾಂಶ ಪ್ರಕಟ ಆಗಿಲ್ಲ, ಹಳೇ ಲಿಂಕ್‌ ಹಂಚಿಕೆ ಎಂದ ಕೇಂದ್ರ; ಮತ್ತೊಂದು ಪ್ರಮಾದ?

ನೀಟ್ ಪರೀಕ್ಷೆ ರದ್ದು, ಒನ್ ನೇಷನ್-ಒನ್ ಎಲೆಕ್ಷನ್ ವಿರುದ್ಧ ನಿರ್ಣಯ

ಬೆಂಗಳೂರು: ಕೇಂದ್ರ ಸರ್ಕಾರದ ನೀಟ್ ಪರೀಕ್ಷಾ ವ್ಯವಸ್ಥೆ, ಒನ್ ನೇಷನ್-ಒನ್ ಎಲೆಕ್ಷನ್ ವಿರುದ್ಧ ರಾಜ್ಯ ಸರ್ಕಾರ ಮಂಡಿಸಿರುವ ನಿರ್ಣಯ ವಿಧಾನಮಂಡಲದ ಉಭಯ ಸದನಗಳಲ್ಲಿ (Assembly session) ಅಂಗೀಕಾರವಾಗಿದೆ. ಕೇಂದ್ರ ಸರ್ಕಾರದ ನೀಟ್‌ ಪರೀಕ್ಷೆ, ಒಂದು ದೇಶ-ಒಂದು ಎಲೆಕ್ಷನ್‌ ತೀರ್ಮಾನಗಳನ್ನು ವಿರೋಧಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಇದೀಗ ಅಧಿವೇಶನದಲ್ಲಿ ರಾಜ್ಯ ಸರ್ಕಾರ ನಿರ್ಣಯ ಮಂಡಿಸಿ, ಅಂಗೀಕಾರ ಪಡೆದಿದೆ.

ವಿಧಾನ ಸಭೆಯಲ್ಲಿ ಸಚಿವ ಶರಣು ಪ್ರಕಾಶ್ ಪಾಟೀಲ್ ಅವರು ನೀಟ್ ರದ್ದು ನಿರ್ಣಯ ಮಂಡನೆ ಮಾಡಿದ್ದು, ವಿಧಾನ ಪರಿಷತ್‌ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಮಂಡಿಸಿದರು. ಇನ್ನು ವಿಧಾನ ಸಭೆಯಲ್ಲಿ ಒನ್ ನೇಷನ್- ಒನ್ ಎಲೆಕ್ಷನ್ ವಿರುದ್ಧದ ನಿರ್ಣಯವನ್ನು ಸಚಿವ ಎಚ್‌.ಕೆ. ಪಾಟೀಲ್, ವಿಧಾನ ಪರಿಷತ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದರು. ಉಭಯ ಸದನಗಳಲ್ಲೂ ನಿರ್ಣಯಗಳು ಅಂಗೀಕಾರವಾಗಿವೆ.

ಒನ್ ನೇಷನ್, ಒನ್ ಎಲೆಕ್ಷನ್ ವಿರುದ್ಧವಾಗಿ ವಿಧಾನಪರಿಷತ್‌ನಲ್ಲಿ ನಿರ್ಣಯ ಮಂಡನೆ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಈ ರೀತಿಯ ಚುನಾವಣೆಗೆ ನಮ್ಮ ವಿರೋಧ ಇದೆ. ಒಂದು ದೇಶ, ಒಂದು ಚುನಾವಣೆಯಿಂದ ಪ್ರಜಾಪ್ರಭುತ್ವಕ್ಕೆ ಮಾರಕ. ಏಕರೂಪ ಚುನಾವಣೆ ರಾಷ್ಟ್ರೀಯವಾಗಿ ಸಮಸ್ಯೆ ಆಗಲಿದೆ. ಸ್ಥಳೀಯವಾಗಿ ಹಲವು ತಾಂತ್ರಿಕ ಸಮಸ್ಯೆ ಆಗಲಿದೆ. ಇದನ್ನು ಅನುಷ್ಠಾನ ಮಾಡಬಾರದು ಅಂತ‌ ಕೇಂದ್ರದ ಮೇಲೆ ಒತ್ತಡ ಹಾಕಬೇಕು ಅಂತ ಸದಸ್ಯರಿಗೆ ಮನವಿ ಮಾಡಿದರು.

ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (NEET) ರದ್ದುಗೊಳಿಸಬೇಕು ಎಂದು ತಮಿಳುನಾಡು ಸೇರಿ ಹಲವು ರಾಜ್ಯಗಳಲ್ಲಿ ಆಗ್ರಹ ಕೇಳಿಬರುತ್ತಿದೆ. ಅದರಲ್ಲೂ, ನೀಟ್‌ ಯುಜಿ ಪರೀಕ್ಷೆಯ (NEET UG 2024) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು ದೇಶಾದ್ಯಂತ ಸುದ್ದಿಯಾದ ಬಳಿಕ ಆಗ್ರಹ ಹೆಚ್ಚಾಗಿದೆ. ಇದರ ಬೆನ್ನಲ್ಲೇ, ಕರ್ನಾಟಕದಲ್ಲೂ ನೀಟ್‌ ಪರೀಕ್ಷೆ ಸೇರಿ ಕೇಂದ್ರ ಸರ್ಕಾರದ ಮೂರು ತೀರ್ಮಾನಗಳನ್ನು ವಿರೋಧಿಸುವ ಕುರಿತು ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿತ್ತು,.

ನೀಟ್‌ ಪರೀಕ್ಷೆ ಬದಲು ಹಳೆಯ ಪ್ರವೇಶ ಪರೀಕ್ಷೆ ವ್ಯವಸ್ಥೆಗೆ ಮರಳಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ರಾಜ್ಯವು ತನ್ನದೇ ವೈದ್ಯಕೀಯ ಪ್ರವೇಶ ಪರೀಕ್ಷೆ ನಡೆಸಲು ತೀರ್ಮಾನಿಸಿದ್ದು, ಈ ಮೂಲಕ ತಮಿಳುನಾಡಿನಂತೆಯೇ 12ನೇ ತರಗತಿಯ ಅಂಕಗಳ ಆಧಾರದ ಮೇಲೆ ವೈದ್ಯಕೀಯ ಪ್ರವೇಶವನ್ನು ನಡೆಸಲು ಚಿಂತನೆ ನಡೆಸಿದೆ.

Continue Reading

ಪರಿಸರ

ವಿಸ್ತಾರ ಗ್ರಾಮ ದನಿ: ಅಡಿಕೆ ಬೆಳೆಗಾರರೂ ‘ಇನ್‌ಕಮ್ ಟ್ಯಾಕ್ಸ್ ರಿಟರ್ನ್ಸ್ʼ ಸಲ್ಲಿಸಬೇಕಾ? ಸಲ್ಲಿಸದಿದ್ದರೆ ಏನಾಗುತ್ತದೆ?

Vistara Gramadani: ಯಾವ ಬ್ಯಾಂಕ್ ಕೂಡ TDS ಕಟ್ಟಿ (ವಿಸ್ತಾರ ಗ್ರಾಮ ದನಿ) ಅಂತ ಕೇಳಲ್ಲ. ಗಾಬರಿ ಬೇಡ. TDS ಅಂದ್ರೆ TAX Deducted at Source ಅಂತ. ಅಂದರೆ ಈಗಾಗಲೆ ನಿಮ್ಮ ಫಿಕ್ಸೆಡ್ ಡಿಪಾಸಿಟ್ (FD ಅಕೌಂಟ್) ಮೇಲೆ ಕೊಟ್ಟ ಒಟ್ಟು ಬಡ್ಡಿಯ ಮೇಲೆ 10% ಆದಾಯ ತೆರಿಗೆಯನ್ನು ನಿಮ್ಮ ಬಡ್ಡಿಯಿಂದ ಕಳೆದು, ಆದಾಯ ತೆರಿಗೆ ಇಲಾಖೆಗೆ ಕಟ್ಟಿರುತ್ತಾರೆ. ಅಡಿಕೆ ಬೆಳೆಗಾರರೂ ಇದಕ್ಕೆ ಹೊರತಲ್ಲ! ಹಾಗಾದರೆ ಹಣ ಕಟ್‌ ಆಗದ ಹಾಗೆ ಮಾಡಲು ಏನು ಮಾಡಬೇಕು? ಇಲ್ಲಿದೆ ಸರಳ ಮಾಹಿತಿ.

VISTARANEWS.COM


on

Arecanut Price
Koo
Aravinda Sigadal

| ಅರವಿಂದ ಸಿಗದಾಳ್, ಮೇಲುಕೊಪ್ಪ
ಉಜಿರೆ ಸಮೀಪದ ಒಂದು ಹಳ್ಳಿಯಿಂದ ಮಂಜುನಾಥ್ ಎನ್ನುವವರು ಫೋನ್ ಮಾಡಿ “ನಾನು ಅಡಿಕೆ ಬೆಳೆಗಾರ, ನಿಮ್ಮ ಅಡಿಕೆ ಬೆಳೆಗಾರರ ವಾಟ್ಸಪ್ ಗ್ರೂಪ್‌ನಲ್ಲಿದ್ದೇನೆ. ನನಗೆ ನನ್ನ ಬ್ಯಾಂಕಿಂದ ಒಂದು ಇ-ಮೇಲ್‌ ಬಂದಿದೆ. ಅದರಲ್ಲಿ ₹ 6,200 TDS ಕಟ್ಟಬೇಕು ಅಂತ ಬಂದಿದೆ. ಎನು ಮಾಡುವುದು? ಈ TDS ಅಂದ್ರೆ ಎಂತ?” ಅಂದ್ರು. “ಮೊದಲನೆಯದಾಗಿ, ಯಾವ ಬ್ಯಾಂಕ್ ಕೂಡ TDS ಕಟ್ಟಿ ಅಂತ ಕೇಳಲ್ಲ. ಗಾಬರಿ ಬೇಡ. TDS ಅಂದ್ರೆ TAX Deducted at Source ಅಂತ. ಅಂದ್ರೆ ಈಗಾಗಲೆ ನಿಮ್ಮ ಫಿಕ್ಸೆಡ್ ಡಿಪೋಸಿಟ್ (FD ಅಕೌಂಟ್) ಮೇಲೆ ಕೊಟ್ಟ ಒಟ್ಟು ಬಡ್ಡಿಯ ಮೇಲೆ 10% ಆದಾಯ ತೆರಿಗೆಯನ್ನು ನಿಮ್ಮ ಬಡ್ಡಿಯಿಂದ ಕಳೆದು, ಆದಾಯ ತೆರಿಗೆ ಇಲಾಖೆಗೆ ಕಟ್ಟಿರುತ್ತಾರೆ. ನಿಮಗೆ ಬಂದಿರೋ ಮಾಹಿತಿ ಬಹುಶಃ (Vistara Gramadani) ಅದೇ ಇರಬೇಕು” ಅಂದೆ.

ನಾನೊಬ್ಬ ಕೃಷಿಕ, ತೆರಿಗೆ ಕಟ್ಟಬೇಕಾ?

“ಅಯ್ಯೋ, ನನ್ನಿಂದ ಯಾಕೆ ಆದಾಯ ತೆರಿಗೆ ತಗೊಂಡಿದಾರೆ? ನಾನೊಬ್ಬ ಕೃಷಿಕ. ಈ ರೀತಿ ನನಗೆ ಗೊತ್ತಿಲ್ಲದೆ ಟ್ಯಾಕ್ಸ್ ತಗೊಂಡಿದ್ದು ತಪ್ಪಲ್ವಾ? ಅದರಲ್ಲೂ ನನಗೆ ಕೃಷಿ ಇನ್‌ಕಮ್ ಬಿಟ್ಟು ಬೇರೆ ಆದಾಯ ಇಲ್ಲ. ಕೃಷಿ ಆದಾಯಕ್ಕೆ ಟ್ಯಾಕ್ಸ್ ಇಲ್ಲ ಅಲ್ವಾ?” ಅಂದ್ರು. “ಹೌದು. ಕೃಷಿ ಆದಾಯಕ್ಕೆ ಟ್ಯಾಕ್ಸ್ ಇಲ್ಲ. ಕೃಷಿಕರಾದವರಿಗೆ ಕೃಷಿಯೇತರ ಆದಾಯ ಇದ್ರೆ, ಅದೂ ತೆರಿಗೆ ಮಿತಿಗೆ ಒಳ ಪಡುವ ಆದಾಯಕ್ಕಿಂತ ಹೆಚ್ಚಿದ್ದರೆ ಮಾತ್ರ ತೆರಿಗೆ ಬರುತ್ತದೆ. ನಿಮ್ಮ FD ಬಡ್ಡಿ ಕೃಷಿಯೇತರ ಆದಾಯ ಆಗಿದೆ. FDಯ ಮೂಲ ಇನ್ವೆಸ್ಟ್‌ಮೆಂಟ್ ಹಣ ಕೃಷಿಯದ್ದಾದರೂ, ಅದಕ್ಕೆ ಬಂದ ಬಡ್ಡಿ ಕೃಷಿಯೇತರ ಆದಾಯವಾಗಿರುತ್ತದೆ. ಹಾಗಾಗಿ ಬ್ಯಾಂಕ್‌ನವರು FD ಬಡ್ಡಿಗೆ 10% ತೆರಿಗೆಯನ್ನು ಬ್ಯಾಂಕಿನಲ್ಲಿ ಮುರಿದುಕೊಂಡಿದ್ದಾರೆ. ಜೊತೆಗೆ, ಬುಹುಶಃ ನೀವು FD ಮಾಡುವಾಗ ಕೊಡಬೇಕಿದ್ದ ಫಾರಂ 15G/ ಅಥವಾ 15H ನ್ನು ಕೊಟ್ಟಿರುವುದಿಲ್ಲ. ಇದರಿಂದ ನಿಮ್ಮ ಬಡ್ಡಿ ಹಣದಲ್ಲಿ 6,200 ರೂಪಾಯಿಗಳು TDS ಕಟ್ಟಾಗಿದೆ. ಏನೂ ಸಮಸ್ಯೆ ಇಲ್ಲ, ಹತ್ತಿರದ ಟ್ಯಾಕ್ಸ್ ಕನ್ಸಲ್ಟೆಂಟ್ ಅಥವಾ ಇನ್‌ಕಮ್‌ ಟ್ಯಾಕ್ಸ್ ರಿಟರ್ನ್ಸ್ ಮಾಹಿತಿ ಇದ್ದವರ ಬಳಿಯಲ್ಲಿ ಟ್ಯಾಕ್ಸ್ ರಿಟರ್ನ್ಸ್ ಸಬ್‌ಮಿಶನ್ ಮಾಡ್ಸಿ, 45 ದಿನಗಳ ಒಳಗೆ 6,200 ವಾಪಾಸ್ ಬರುತ್ತೆ”

ಕೃಷಿ ಆದಾಯಕ್ಕೆ ಆದಾಯ ತೆರಿಗೆ ಇಲ್ಲ

ಭಾರತವು ತನ್ನ ಮೂಲಭೂತ ಆಹಾರದ ಅವಶ್ಯಕತೆಗಳಿಗಾಗಿ ಸಂಪೂರ್ಣವಾಗಿ ಕೃಷಿಯ ಮೇಲೆ ಅವಲಂಬಿತವಾಗಿದೆ. ಈ ವಲಯದಲ್ಲಿ ಬೆಳವಣಿಗೆಯನ್ನು ಉತ್ತೇಜಿಸಲು ಸರ್ಕಾರವು ಹಲವಾರು ಯೋಜನೆಗಳು, ನೀತಿಗಳು ಮತ್ತು ಇತರ ಕ್ರಮಗಳನ್ನು ಹೊಂದಿದೆ – ಅವುಗಳಲ್ಲಿ ಒಂದು ಕೃಷಿ ಆದಾಯವನ್ನು ಆದಾಯ ತೆರಿಗೆಯಿಂದ ವಿನಾಯಿತಿಗೊಳಿಸಲಾಗಿದೆ. ಕೃಷಿ ಆದಾಯಕ್ಕೆ ಆದಾಯ ತೆರಿಗೆ ಇಲ್ಲ.
ಕೃಷಿಯೇತರ ವ್ಯವಹಾರಗಳಿಂದ ಬರುವ ಆದಾಯ ಮೂಲ ವಿನಾಯಿತಿ ಮಿತಿಗಿಂತ ಕಡಿಮೆಯಿದ್ದರೆ ಅದಕ್ಕೂ ತೆರಿಗೆ ಇರುವುದಿಲ್ಲ. ಉದಾಹರಣೆಗೆ ದೊಡ್ಡ ಮೊತ್ತವನ್ನು ಫಿಕ್ಸಡ್ ಡೆಪೋಸಿಟ್ ಮಾಡಿ ಅದಕ್ಕೆ ವಾರ್ಷಿಕ 1.8 ಲಕ್ಷ ರೂಪಾಯಿ ಆದಾಯ ಬಂದಿದ್ದರೂ ಅದಕ್ಕೆ ಆದಾಯ ತೆರಿಗೆ ಇರುವುದಿಲ್ಲ. ಯಾಕೆಂದರೆ, ಕೃಷಿಯೇತರ ಆದಾಯ, ಆದಾಯ ಮೂಲ ವಿನಾಯಿತಿ ಮಿತಿಗಿಂತ ಕಡಿಮೆಯಿದೆ. (2023-24 ಕ್ಕೆ ಆದಾಯ ಮೂಲ ವಿನಾಯಿತಿ ಮಿತಿ ₹.3.00 ಲಕ್ಷ)

ಇದನ್ನೂ ಓದಿ: ವಿಸ್ತಾರ ಗ್ರಾಮ ದನಿ: ಅಡಿಕೆ ರೋಗಗಳ ನಿವಾರಣೆಗೆ ‘ಕೃಷಿ ಸುಣ್ಣ’ ರಾಮಬಾಣ!

ಫಾರಂ 15G ಮತ್ತು 15H ಅಂದರೇನು?

ಸೂಕ್ಷ್ಮ ಇರುವುದು ಇಲ್ಲಿ. ವಾರ್ಷಿಕ FD ಇಂಟ್ರೆಸ್ಟ್ ಆದಾಯ ಮೂಲ ವಿನಾಯಿತಿ ಮಿತಿಗಿಂತ ಕಡಿಮೆ ಇರುವ ಸಂದರ್ಭದಲ್ಲಿ, ಬ್ಯಾಂಕಿನಲ್ಲಿ FD ಮಾಡುವಾಗ, ಆದಾಯ ಮೂಲ ವಿನಾಯಿತಿ ಮಿತಿಗಿಂತ ಕಡಿಮೆಯಿದೆ ಎಂದು ಫಾರಂ 15G ಮತ್ತು 15H ನ್ನು ಭರ್ತಿ ಮಾಡಿ ಕೊಡಬೇಕು.
ಒಬ್ಬ ವ್ಯಕ್ತಿಯ ಬಡ್ಡಿ ಆದಾಯವು ವರ್ಷಕ್ಕೆ ರೂ. 10,000ಕ್ಕಿಂತ ಹೆಚ್ಚಿರುವಾಗ ಬ್ಯಾಂಕುಗಳು TDS ಅನ್ನು ಕಡಿತಗೊಳಿಸಬೇಕಾಗುತ್ತದೆ. ₹10,000 ಈ ಮಿತಿಯನ್ನು ನಿರ್ಧರಿಸಲು ಬ್ಯಾಂಕ್ ಎಲ್ಲಾ ಶಾಖೆಗಳಲ್ಲಿ ಹೊಂದಿರುವ ಠೇವಣಿಗಳನ್ನು ಒಳಗೊಂಡಿದೆ. ಒಬ್ಬ ವ್ಯಕ್ತಿಯ ಒಟ್ಟು ಆದಾಯವು ತೆರಿಗೆಯ ಮಿತಿಗಿಂತ ಕಡಿಮೆಯಿದ್ದರೆ, ಅವನು/ಅವಳು ಬಡ್ಡಿ ಮೊತ್ತದ ಮೇಲೆ TDS ಕಡಿತಗೊಳಿಸದಂತೆ ವಿನಂತಿಸಲು ಬ್ಯಾಂಕ್‌ಗೆ ಫಾರ್ಮ್ 15G ಮತ್ತು ಫಾರ್ಮ್ 15H ಅನ್ನು ಸಲ್ಲಿಸಬಹುದು. ಈ ಫಾರಂ ಸಲ್ಲಿಸದಿದ್ದಲ್ಲಿ, ಬ್ಯಾಂಕುಗಳು ಸಹಜವಾಗಿ ಒಟ್ಟು ಬಡ್ಡಿಯಲ್ಲಿ 10% ಆದಾಯ ತೆರಿಗೆ ಎಂದು ಕಡಿತ ಮಾಡಿ, ತೆರಿಗೆಯನ್ನು ತೆರಿಗೆ ಇಲಾಖೆಗೆ ಕಟ್ಟುತ್ತದೆ. ಅದರ ಒಂದು ದಾಖಲಾತಿಯಾಗಿ TDS (ಟ್ಯಾಕ್ಸ್ ಡಿಡಕ್ಟೆಡ್ ಎಟ್ ಸೋರ್ಸ್) ಬ್ಯಾಂಕಿನವರು ಕೊಡುತ್ತಾರೆ. (ಬ್ಯಾಂಕಿನವರು ಕೇಳಿದರೆ ಕೊಡ್ತಾರೆ. ಕೆಲವು ಬ್ಯಾಂಕ್‌ಗಳಲ್ಲಿ ಇ-ಮೇಲ್‌ ಮಾಡಿರ್ತಾರೆ).
TDS ಅನ್ನು ಬ್ಯಾಂಕಿನವರು ಕೊಡುವುದೂ ಬೇಕಾಗಿಲ್ಲ. PAN ನಂಬರ್‌ ಬಳಸಿ, Incomtax portalನಲ್ಲಿ ಇದನ್ನು ಪಡೆದು ಪರಿಶೀಲಿಸಬಹುದು.

ಉಜಿರೆ ರೈತರ ಹಣ ಕಡಿತ ಆಗಿದ್ದೇಕೆ?

ಈಗ ಅಡಿಕೆ ಬೆಳೆಗಾರ ಉಜಿರೆ ಮಂಜುನಾಥ್‌ ಅವರ ವಿಷಯಕ್ಕೆ ಬರೋಣ. ಅವರು FD ಮಾಡುವಾಗ ಫಾರ್ಮ್ 15G ಮತ್ತು ಫಾರ್ಮ್ 15H ಕೊಟ್ಟಿಲ್ಲದ ಕಾರಣ ₹ 6,200 TDS ಕಟ್ಟಾಗಿದೆ.
ಮಂಜುನಾಥ‌ರವರು ಆ 6,200ನ್ನು ಹಿಂಪಡೆಯಲು ಜುಲೈ 31ರ ಒಳಗೆ ಇನ್‌ಕಮ್ ಟ್ಯಾಕ್ಸ್ ರಿಟರ್ನ್ಸ್‌ನ್ನು (ITR) ಆದಾಯ ತೆರಿಗೆ ಇಲಾಖೆಗೆ ಸಲ್ಲಿಸಬೇಕು. ಕೃಷಿ ಆದಾಯ, ಕೃಷಿಯೇತರ (ಬಡ್ಡಿ) ಆದಾಯದ ಮಾಹಿತಿಗಳನ್ನು ITR ನಲ್ಲಿ ತೋರಿಸಬೇಕು. 45 ದಿನಗಳೊಳಗೆ ಬ್ಯಾಂಕ್ ಕಡಿತಗೊಳಿಸಿದ TDS ಮರು ಪಾವತಿಯಾಗಿ SB ಖಾತೆಗೆ ಜಮಾ ಆಗುತ್ತದೆ.
ITR ಸಲ್ಲಿಸುವಾಗ ಎಲ್ಲಾ SB ಖಾತೆಗಳ ಮಾಹಿತಿಯನ್ನು (ಅಕೌಂಟ್ ನಂಬರ್, IFSC ಕೋಡ್) ನಮೂದಿಸಬೇಕು. ಹಾಗಾಗಿ, ಇಂತಹ ಸಂದರ್ಭದಲ್ಲಿ, ಅಡಿಕೆ ಬೆಳೆಗಾರರು ಮತ್ತು ಎಲ್ಲಾ ಕೃಷಿಕರು ಇನ್‌ಕಮ್ ಟ್ಯಾಕ್ಸ್ ರಿಟರ್ನ್ಸ್ ಸಬ್‌ಮಿಷನ್ ಮಾಡಬೇಕು. ಎಷ್ಟೋ ಸಂದರ್ಭಗಳಲ್ಲಿ TDS ಕಡಿತಗೊಳಿಸಿದ ಮಾಹಿತಿ ತೆರಿಗೆದಾರನಿಗೆ ತಿಳಿಯದೇ ಹೋಗಬಹುದು. ಎಲ್ಲಾ ಬ್ಯಾಂಕುಗಳು TDS ಕಡಿತದ ಮಾಹಿತಿಯನ್ನು ಕೊಡುವುದಿಲ್ಲ (ಕೇಳಿದರೆ ಮಾತ್ರ ಕೊಡ್ತಾರೆ).

ಇದನ್ನೂ ಓದಿ: ವಿಸ್ತಾರ ಗ್ರಾಮ ದನಿ: ಗ್ರಾಮೀಣ ಪ್ರದೇಶದಲ್ಲೇ ಹೆಚ್ಚು ಮತದಾನ, SSLC ಫಲಿತಾಂಶದಂತೆ!

ಜಮೀನು, ಮನೆ ಮಾರಿದಾಗ?

ಇದಲ್ಲದೆ ಕೃಷಿ ಜಮೀನು, ಮನೆ ಮಾರಾಟ ಮಾಡುವಾಗ, ಮಾರಾಟದ ಬೆಲೆ ₹ 50 ಲಕ್ಷಕ್ಕಿಂತ ಹೆಚ್ಚಿದ್ದಾಗ, ಖರೀದಿಸುವವನು ಖರೀದಿ ಮೌಲ್ಯದ ಮೇಲೆ, ಸರಿ ಸುಮಾರು 0.75% (₹.37,500+)TDS ಕಟ್ಟಿರುತ್ತಾನೆ. ಇದೂ ಕೂಡ ತೆರಿಗೆ ಆದಾಯ ಮಿತಿಯ ಒಳಗೆ ಇದ್ದರೆ, ಇನ್‌ಕಮ್ ಟ್ಯಾಕ್ಸ್ ರಿಟರ್ನ್ಸ್ ಮಾಡುವುದರಿಂದ ಹಿಂಪಡೆಯಬಹುದಾಗಿರುತ್ತದೆ. ನಿಮ್ಮ ಯಾವುದೇ ಆದಾಯದಿಂದ ಟಿಡಿಎಸ್ ಕಡಿತಗೊಂಡಿದ್ದರೆ ನೀವು ತೆರಿಗೆ ಕ್ರೆಡಿಟ್ ಫಾರ್ಮ್ 26AS ಮೂಲಕ ಗಮನಿಸಬಹುದು . ಈ ಫಾರ್ಮ್ ಏಕೀಕೃತ TDS ಹೇಳಿಕೆಯಾಗಿದ್ದು ಅದು ಎಲ್ಲಾ PAN ಹೊಂದಿರುವವರಿಗೆ ಇನ್‌ಕಮ್ ಟ್ಯಾಕ್ಸ್ ಪೋರ್ಡಲ್‌ನಲ್ಲಿ ಲಭ್ಯವಿದೆ. ಹಾಗಾಗಿ ಅಡಿಕೆ ಬೆಳೆಗಾರರು ಮತ್ತು ಎಲ್ಲಾ ಕೃಷಿಕರು ಕೃಷಿ ಆದಾಯದ ಜೊತೆ, ಕೃಷಿಯೇತರ ಆದಾಯವೂ ಇದ್ದಲ್ಲಿ, ಮತ್ತು ಅದು ಮೂಲ ವಿನಾಯಿತಿ ಮಿತಿಗಿಂತ ಕಡಿಮೆಯಿದ್ದರೂ, ರಿಟರ್ನ್ಸ್ ಸಲ್ಲಿಸಬೇಕು. ಕೃಷಿಯೇತರ ಆದಾಯ ಮೂಲ ವಿನಾಯಿತಿ ಮಿತಿಗಿಂತ ಹೆಚ್ಚಿದ್ದರೆ, ರಿಟರ್ನ್ಸ್ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.
ಅಂದ ಹಾಗೆ, ITR ರಿಟರ್ನ್ಸ್ ಮಾಡಲು ಇನ್ನು 5 ದಿನಗಳು ಮಾತ್ರ ಬಾಕಿ ಇವೆ. ಕೊನೇಯ ದಿನಾಂಕ 31.07.2024.

Continue Reading

ಕರ್ನಾಟಕ

Fortis Hospital: ಯಕೃತ್‌ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ತಾಯಿಗೆ ಮಗನಿಂದ ಲಿವರ್‌ ದಾನ!

Fortis Hospital: ಯಕೃತ್‌ ಕ್ಯಾನ್ಸರ್‌ಗೆ ಒಳಗಾಗಿದ್ದ 52 ವರ್ಷದ ತನ್ನ ತಾಯಿಗೆ ಸ್ವತಃ ಮಗನೇ ಯಕೃತ್‌ ಭಾಗವನ್ನು ದಾನ ಮಾಡಿದ್ದಾನೆ. ಬೆಂಗಳೂರಿನ ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯ ಯಕೃತ್ತಿನ ಕಸಿ ಶಸ್ತ್ರಚಿಕಿತ್ಸಕರಾದ ಡಾ. ಕಿಶೋರ್ ಜಿ.ಎಸ್‌.ಬಿ. ಮತ್ತು ಡಾ. ಪಿಯೂಷ್ ಸಿನ್ಹಾ ಹಾಗೂ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಬಿ.ಎಸ್. ರವೀಂದ್ರ ಅವರ ತಂಡ, ಈ ಮಹಿಳೆಗೆ ಯಶಸ್ವಿಯಾಗಿ ಯಕೃತ್‌ ಕಸಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.

VISTARANEWS.COM


on

Successful liver transplant surgery at Fortis Hospital
Koo

ಬೆಂಗಳೂರು: ಯಕೃತ್‌ ಕ್ಯಾನ್ಸರ್‌ಗೆ ಒಳಗಾಗಿದ್ದ 52 ವರ್ಷದ ತನ್ನ ತಾಯಿಗೆ ಸ್ವತಃ ಮಗನೇ ಯಕೃತ್‌ ಭಾಗವನ್ನು ದಾನ ಮಾಡುವ ಮೂಲಕ ಮಹಿಳೆಗೆ ಯಶಸ್ವಿಯಾಗಿ ಯಕೃತ್‌ ಕಸಿ (Fortis Hospital) ನಡೆಸಲಾಗಿದೆ. ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯ ಯಕೃತ್ತಿನ ಕಸಿ ಶಸ್ತ್ರಚಿಕಿತ್ಸಕರಾದ ಡಾ. ಕಿಶೋರ್ ಜಿ.ಎಸ್‌.ಬಿ. ಮತ್ತು ಡಾ. ಪಿಯೂಷ್ ಸಿನ್ಹಾ ಹಾಗೂ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಬಿ.ಎಸ್. ರವೀಂದ್ರ ಅವರ ತಂಡ ಯಶಸ್ವಿಯಾಗಿ ಈ ಸಂಕೀರ್ಣ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.

ಈ ಕುರಿತು ಫೋರ್ಟಿಸ್‌ ಆಸ್ಪತ್ರೆಯ ಲಿವರ್‌ ಟ್ರಾನ್ಸ್‌ಪ್ಲಾಂಟ್‌ ಸರ್ಜನ್‌ ಡಾ. ಕಿಶೋರ್ ಜಿ.ಎಸ್‌.ಬಿ. ಮತ್ತು ಡಾ. ಪಿಯೂಷ್ ಸಿನ್ಹಾ ಅವರು ಮಾತನಾಡಿ, 2021 ರಲ್ಲಿ 52 ವರ್ಷದ ಲೀಲಾ ಎಂಬುವವರು ಕಾಮಾಲೆ ಕಾಯಿಲೆಗೆ ತುತ್ತಾದರು. ಇದರ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಾದ ಬಳಿಕ ಅವರಿಗೆ ಲಿವರ್ ಸಿರೋಸಿಸ್ ಇರುವುದು ಪತ್ತೆಯಾಯಿತು. ಬಳಿಕ ಅವರು ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು.

ಇದನ್ನೂ ಓದಿ: Samsung Galaxy: ಎಐ ಆಧರಿತ ಗ್ಯಾಲಕ್ಸಿ ಝಡ್ ಫೋಲ್ಡ್ 6, ಝಡ್ ಫ್ಲಿಪ್6 ಹೇಗಿದೆ? ದರ ಎಷ್ಟು?

ದೀರ್ಘಕಾಲದಿಂದ ಯಕೃತ್‌ನ ಕಾಯಿಲೆ ಇರುವ ಕಾರಣ ಅವರ ಯಕೃತ್‌ನಲ್ಲಿ ದ್ರವದ ಶೇಖರಣೆಯಾಗಿ ಯಕೃತ್‌ ಸರಿಯಾಗಿ ಕಾರ್ಯ ನಿರ್ವಹಿಸುತ್ತಿರಲಿಲ್ಲ. ಇದರಿಂದ ಅವರ ಜೀವನ ಶೈಲಿಯ ಮೇಲೆ ತೀವ್ರ ಪರಿಣಾಮ ಉಂಟು ಮಾಡುತ್ತಿತ್ತು. ಅವರನ್ನು ಮತ್ತಷ್ಟು ತಪಾಸಣೆಗೆ ಒಳಪಡಿಸಿದ ಬಳಿಕ ಪಿತ್ತರಸ ನಾಳದಲ್ಲಿ ಕಲ್ಲು ಇರುವುದು ಪತ್ತೆಯಾಯಿತು. ಗ್ಯಾಸ್ಟ್ರೋ ತಂಡವು ಈ ಕಲ್ಲು ತೆಗೆಯುವ ಶಸ್ತ್ರಚಿಕಿತ್ಸೆ ವೇಳೆ ಆಕೆಗೆ ಯಕೃತ್‌ನ ಕ್ಯಾನ್ಸರ್‌ ಪ್ರಾರಂಭಿಕ ಹಂತದಲ್ಲಿರುವುದು ಸಹ ತಿಳಿದುಬಂತು. ಹೀಗಾಗಿ ಆಕೆಗೆ ಲಿವರ್ ಸಿರೋಸಿಸ್ ಮತ್ತು ಯಕೃತ್ತಿನ ಕ್ಯಾನ್ಸರ್‌ಗೆ ಕೂಡಲೇ ಯಕೃತ್‌ ಕಸಿ ಅಗತ್ಯತೆ ಬಿತ್ತು. ಸ್ವತಃ 31 ವರ್ಷದ ಮಗನೇ ತನ್ನ ಯಕೃತ್‌ನ ಭಾಗವನ್ನು ದಾನ ಮಾಡಲು ಮುಂದಾದರು. ಸಕಾಲದಲ್ಲಿ ಯಕೃತ್‌ ಸಿಕ್ಕ ಪರಿಣಾಮ ಅವರಿಗೆ ಯಶಸ್ವಿಯಾಗಿ ಕಸಿ ಮಾಡಲಾಯಿತು ಎಂದು ವಿವರಿಸಿದರು.

ದಾನಿಯ ಯಕೃತ್ತಿನ ಉಳಿದ ಭಾಗವು ತಕ್ಷಣವೇ ಪುನರುತ್ಪಾದಿಸಲು ಪ್ರಾರಂಭಿಸುತ್ತದೆ. ಆರರಿಂದ ಎಂಟು ವಾರಗಳಲ್ಲಿ ಅದರ ಸಾಮಾನ್ಯ ಗಾತ್ರಕ್ಕೆ ಯಕೃತ್‌ ಬೆಳೆಯುತ್ತದೆ. ಹೆಚ್ಚಿನ ಯಕೃತ್‌ ದಾನಿಗಳು ಶಸ್ತ್ರಚಿಕಿತ್ಸೆಯ ಒಂದು ವಾರದ ನಂತರ ಸಾಮಾನ್ಯ ಜೀವನಕ್ಕೆ ಮರಳಬಹುದು ಎಂದರು.

ಇದನ್ನೂ ಓದಿ: Pralhad joshi: ನವೀಕರಿಸಬಹುದಾದ ಇಂಧನ ಉತ್ಪಾದನೆ; ವಿಶ್ವದಲ್ಲೇ 4ನೇ ಸ್ಥಾನದಲ್ಲಿ ಭಾರತ

ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ವಿಭಾಗದ ನಿರ್ದೇಶಕ ಡಾ. ಬಿ.ಎಸ್. ರವೀಂದ್ರ ಮಾತನಾಡಿ, ಯಕೃತ್ತಿನ ಕ್ಯಾನ್ಸರ್ ಅನ್ನು CT ಸ್ಕ್ಯಾನ್ ಸ್ಕ್ರೀನಿಂಗ್‌ನಲ್ಲಿ ಪತ್ತೆ ಹಚ್ಚಲಾಯಿತು. ಕೊಲಾಂಜೈಟಿಸ್‌ನೊಂದಿಗೆ ಸಿರೋಟಿಕ್ ರೋಗಿಗೆ ಚಿಕಿತ್ಸೆ ನೀಡುವುದು ಸವಾಲಿನ ಸಂಗತಿ, ಜತೆಗೆ ಸಾಮಾನ್ಯ ಪಿತ್ತರಸ ನಾಳದಿಂದ ಕಲ್ಲುಗಳನ್ನು ಯಶಸ್ವಿಯಾಗಿ ಹೊರತೆಗೆದು ಸ್ಟೆಂಟ್‌ಗಳನ್ನು ಇರಿಸಲು ಸಾಧ್ಯವಾಯಿತು ಎಂದು ವಿವರಿಸಿದರು.

Continue Reading

ಮಳೆ

Karnataka Weather : ಭಾರಿ ಮಳೆ ಎಚ್ಚರಿಕೆ; ನಾಳೆ ಹಾಸನ, ಕೊಡಗಿನ ಈ ಶಾಲೆಗಳಿಗೆ ರಜೆ ಘೋಷಣೆ

Karnataka Weather Forecast : ರಾಜ್ಯಾದ್ಯಂತ ಮಳೆ ಅಬ್ಬರ (Rain News) ಮುಂದುವರಿದಿದೆ. ಮುಂಜಾಗ್ರತಾ ಕ್ರಮವಾಗಿ ಹಾಸನದ ಕೆಲ ಶಾಲೆಗಳಿಗೆ ಶುಕ್ರವಾರ ರಜೆ ಘೋಷಣೆ ಮಾಡಲಾಗಿದೆ. ಮುಂದಿನ 24ಗಂಟೆಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

VISTARANEWS.COM


on

By

karnataka weather Forecast
Koo

ಹಾಸನ: ಹಾಸನ ಜಿಲ್ಲೆಯಾದ್ಯಂತ ಮಳೆ (Heavy rain) ಮುಂದುವರಿದಿದ್ದು, ಆರು ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ (Karnataka Weather Forecast) ಮಾಡಲಾಗಿದೆ. ಜು.26ರಂದು ಸಕಲೇಶಪುರ, ಆಲೂರು, ಬೇಲೂರು, ಹಾಸನ, ಹೊಳೆನರಸೀಪುರ ಹಾಗೂ ಅರಕಲಗೂಡು ತಾಲೂಕುಗಳಿಗೆ ರಜೆ ಘೋಷಿಸಿ ಡಿಡಿಪಿಐ ಹೆಚ್.ಕೆ.ಪಾಂಡು ಆದೇಶ ಹೊರಡಿಸಿದ್ದಾರೆ. ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.

ಇನ್ನೂ ಕೊಡಗು ಜಿಲ್ಲೆಯಲ್ಲೂ ಮಳೆ ಅಬ್ಬರದಿಂದಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳನ್ನು ಹೊರತು ಪಡಿಸಿ ಅಂಗನವಾಡಿ ಸೇರಿದಂತೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ.

ಭಾರಿ ಮಳೆಗೆ ಉಕ್ಕಿ ಹರಿದ ಐಗೂರು ಹೊಳೆ

ಭಾರಿ ಮಳೆಗೆ ಹಾಸನದ ಐಗೂರು ಹೊಳೆ ಉಕ್ಕಿ ಹರಿದಿದೆ. ಪರಿಣಾಮ ಯಡಿಕೇರಿ-ಕುಂಬ್ರಳ್ಳಿ ,ಹೆತ್ತೂರು ನಡುವಿನ ಸೇತುವೆ ಮಳುಗಡೆಯಾಗಿದೆ. ಸಕಲೇಶಪುರ ತಾಲೂಕಿನ ಯಡಿಕೇರಿ-ಕುಂಬ್ರಳ್ಳಿ ನಡುವಿನ ಸೇತುವೆ ಮುಳುಗಡೆಯಿಂದಾಗಿ ಯಡಿಕೇರಿ-ಕುಂಬ್ರಳ್ಳಿ-ಹೆತ್ತೂರು ಹಾಗೂ ಸಕಲೇಶಪುರಕ್ಕೆ ರಸ್ತೆ ಸಂಪರ್ಕ ಕಡಿತಗೊಂಡಿದೆ.

ರಸ್ತೆ ಸಂಪರ್ಕವಿಲ್ಲದೆ ಗ್ರಾಮಸ್ಥರು ಪರದಾಟ ಅನುಭವಿಸಿದರು. ಜನ-ಜಾನುವಾರು, ವಾಹನ ಓಡಾಡಲಾಗದೆ ತೀವ್ರ ಸಮಸ್ಯೆಗೆ ಸಿಲುಕಬೇಕಾಯಿತು. ಸೇತುವೆ ದುರಸ್ತಿ ಮಾಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಸೇತುವೆ ಮೇಲೆ ಅಪಾಯಕಾರಿ ರೀತಿಯಲ್ಲಿ ನೀರು ಹರಿಯುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಸೇತುವೆ ಮೇಲೆ ಸಂಚಾರ ನಿಷೇಧ ಹಾಕಲಾಗಿದೆ. ಸೇತುವೆಯ ಎರಡೂ ಬದಿಗೂ ಬ್ಯಾರಿಕೇಡ್ ಹಾಕಿ ಸಂಚಾರಕ್ಕೆ ತಡೆಹಿಡಿಯಲಾಗಿದೆ.

ಸಕಲೇಶಪುರ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹೇಮಾವತಿ ಜಲಾಶಯಕ್ಕೆ ಒಳಹರಿವು ಏರಿಕೆಯಾಗುತ್ತಿದೆ. ಒಳಹರಿವು ಹೆಚ್ಚಾದ ಹಿನ್ನೆಲೆ‌ಯಲ್ಲಿ ಆರು ಕ್ರಸ್ಟ್ ಗೇಟ್‌ಗಳ ಮೂಲಕ 65 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಹೀಗಾಗಿ ಹೇಮಾವತಿ ನದಿಯ ತಗ್ಗು ಪ್ರದೇಶದ ಮತ್ತು ನದಿಯ ಎರಡು ದಂಡೆಯಲ್ಲಿರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ. ಅಲ್ಲದೇ ಆಸ್ತಿ ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳವಂತೆ ಹೇಮಾವತಿ ಅಣೆಕಟ್ಟು ವಿಭಾಗದ ಕಾರ್ಯಪಾಲಕ ಇಂಜಿನಿಯರ್‌ರಿಂದ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

ಭಾರಿ ಮಳೆ ಮುನ್ಸೂಚನೆ

ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಸೇರಿ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗಲಿದೆ. ಜತೆಗೆ ಬೆಳಗಾವಿ ಜಿಲ್ಲೆಯ ಘಟ್ಟ ಪ್ರದೇಶದಲ್ಲಿ ಭರ್ಜರಿ ಮಳೆಯೊಂದಿಗೆ ನಿರಂತರ ಗಾಳಿಯ ವೇಗವು 40-50 ಕಿಮೀ ತಲುಪುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹಾಸನ ಜಿಲ್ಲೆಯ ಘಟ್ಟ ಪ್ರದೇಶದಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಗಾಳಿ ವೇಗವು ವಿಪರೀತವಾಗಿರಲಿದೆ.

ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳ ಕೆಲವೆಡೆ ಗಾಳಿ ಜತೆಗೆ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಉಳಿದೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಗಾಳಿಯ ವೇಗ 40-50 ಕಿ.ಮೀ ತಲುಪುವ ಸಾಧ್ಯತೆ ಇದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Monsoon Fashion
ಫ್ಯಾಷನ್10 mins ago

Monsoon Fashion: ಮಾನ್ಸೂನ್‌ ಸೀಸನ್‌ಗೆ ಇಶಾನಿ ಶೆಟ್ಟಿಯ ಫ್ಯಾಷನ್‌ ಟಿಪ್ಸ್‌ ಹೀಗಿದೆ!

Paris Olympics 2024
ಕ್ರೀಡೆ19 mins ago

Paris Olympics 2024: ಕ್ವಾರ್ಟರ್​ ಫೈನಲ್​ಗೆ ಲಗ್ಗೆಯಿಟ್ಟ ಭಾರತ ಪುರುಷರ ಆರ್ಚರಿ ತಂಡ; 4ನೇ ಸ್ಥಾನ ಪಡೆದ ಧೀರಜ್​ ಬೊಮ್ಮದೇವರ

Viral Video
Latest25 mins ago

Viral Video: ಜಾರಿ ಬಿದ್ದ ವಧುವನ್ನು ಎತ್ತದ ವರ; ಸಹೋದರನಿಂದ ಮದುವೆ ಮಂಟಪದಲ್ಲೇ ಬಿತ್ತು ಗೂಸಾ!

Lokayukta
ರಾಜಕೀಯ28 mins ago

Lokayukta: ಲೋಕಾಯುಕ್ತ ಎಡಿಜಿಪಿಯಾಗಿ ಮನೀಶ್‌ ಕರ್ಬೀಕರ್‌, ಅಗ್ನಿಶಾಮಕ ದಳ ಡಿಜಿಪಿಯಾಗಿ ಪ್ರಶಾಂತ್ ಕುಮಾರ್ ಥಾಕೂರ್‌ ನೇಮಕ

Arecanut Price
ಪರಿಸರ36 mins ago

ವಿಸ್ತಾರ ಗ್ರಾಮ ದನಿ: ಅಡಿಕೆ ಬೆಳೆಗಾರರೂ ‘ಇನ್‌ಕಮ್ ಟ್ಯಾಕ್ಸ್ ರಿಟರ್ನ್ಸ್ʼ ಸಲ್ಲಿಸಬೇಕಾ? ಸಲ್ಲಿಸದಿದ್ದರೆ ಏನಾಗುತ್ತದೆ?

BJP
ದೇಶ36 mins ago

BJP: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಬದಲಾವಣೆಗೂ ಮೊದಲು ಕಾರ್ಯಕಾರಿ ಅಧ್ಯಕ್ಷರ ನೇಮಕ; ಶೀಘ್ರದಲ್ಲೇ ಆದೇಶ?

Tax Saving Tips
ಮನಿ-ಗೈಡ್44 mins ago

Tax Saving Tips: 10 ಲಕ್ಷ ರೂ. ಆದಾಯ ಇದ್ದರೂ ತೆರಿಗೆಯಿಂದ ಪಾರಾಗಲು ಸಾಧ್ಯ! ಇಲ್ಲಿದೆ ಸರಳ ಲೆಕ್ಕಾಚಾರ!

Murder Case
Latest59 mins ago

Murder Case: ʼಸಾಫ್ಟ್ ಟಚ್ʼ ಸ್ಪಾಗೆ ಹೋಗಿದ್ದ ಕ್ರಿಮಿನಲ್‌ನನ್ನು ಪ್ರೇಯಸಿ ಎದುರೇ ತುಂಡು ತುಂಡಾಗಿ ಕತ್ತರಿಸಿದರು!

Successful liver transplant surgery at Fortis Hospital
ಕರ್ನಾಟಕ1 hour ago

Fortis Hospital: ಯಕೃತ್‌ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ತಾಯಿಗೆ ಮಗನಿಂದ ಲಿವರ್‌ ದಾನ!

Home Remedies for Dengue
ಆರೋಗ್ಯ1 hour ago

Home Remedies for Dengue: ಡೆಂಗ್ಯು ಜ್ವರ ಬಂದರೂ ಪ್ಲೇಟ್‌ಲೆಟ್‌ ಸಂಖ್ಯೆ ಕುಸಿಯದಿರಲು ಯಾವ ಆಹಾರ ಸೇವಿಸಬೇಕು?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ3 hours ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್7 hours ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ7 hours ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ9 hours ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ2 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ2 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ2 days ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ2 days ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ5 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

ಟ್ರೆಂಡಿಂಗ್‌