Assembly Session : ಜಮೀರ್‌ ಮುಸ್ಲಿಂ ಸ್ಪೀಕರ್‌ ಹೇಳಿಕೆ ಚರ್ಚೆಗೆ ಅವಕಾಶ; ನಾಳೆ ನಡೆಯಲಿದೆ ಬಿಗ್‌ ಫೈಟ್‌ - Vistara News

ಕರ್ನಾಟಕ

Assembly Session : ಜಮೀರ್‌ ಮುಸ್ಲಿಂ ಸ್ಪೀಕರ್‌ ಹೇಳಿಕೆ ಚರ್ಚೆಗೆ ಅವಕಾಶ; ನಾಳೆ ನಡೆಯಲಿದೆ ಬಿಗ್‌ ಫೈಟ್‌

Assembly Session : ಮುಸ್ಲಿಂ ಸ್ಪೀಕರ್‌ ಗೆ ಬಿಜೆಪಿಯವರು ಎದ್ದು ನಿಂತು ನಮಸ್ಕಾರ್‌ ಸಾಬ್‌ ಅಂತಾರೆ ಎಂಬ ಸಚಿವ ಜಮೀರ್‌ ಖಾನ್‌ ಹೇಳಿಕೆಯ ಬಗ್ಗೆ ಚರ್ಚೆಗೆ ಸ್ಪೀಕರ್‌ ಯು.ಟಿ. ಖಾದರ್‌ ಅವಕಾಶ ನೀಡಿದ್ದಾರೆ. ಮಂಗಳವಾರ ಬಿಗ್‌ ಫೈಟ್‌ ನಡೆಯುವ ನಿರೀಕ್ಷೆ ಇದೆ.

VISTARANEWS.COM


on

Speaker UT Khader
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ವಸತಿ ಸಚಿವ ಜಮೀರ್‌ ಅಹಮದ್‌ ಖಾನ್‌ (Zameer Ahmad Khan) ಅವರ ವಿವಾದಿತ ಮುಸ್ಲಿಂ ಸ್ಪೀಕರ್‌ ಹೇಳಿಕೆ ಬಗ್ಗೆ ವಿಧಾನಸಭೆಯಲ್ಲಿ (Assembly Session)AssS ಚರ್ಚೆ ನಡೆಸಲು ಸ್ಪೀಕರ್‌ ಯು.ಟಿ. ಖಾದರ್‌ (Speaker UT Khader) ಅವಕಾಶ ನೀಡಿದ್ದಾರೆ. ಸೋಮವಾರ ದಿನವಿಡೀ ಈ ಬಗ್ಗೆ ಬಿಜೆಪಿ ಶಾಸಕರು ಸದನದಲ್ಲಿ ಗದ್ದಲ ನಡೆಸಿದ ಬಳಿಕ ಅಂತಿಮವಾಗಿ ಸದನದ ಕಲಾಪಗಳು ಮುಗಿಯುವ ಹೊತ್ತಿನಲ್ಲಿ ಸ್ಪೀಕರ್‌ ಖಾದರ್‌ ಅವರು ಜಮೀರ್‌ ಹೇಳಿಕೆಯ ಬಗ್ಗೆ ಮಂಗಳವಾರ ಚರ್ಚೆಗೆ ಅವಕಾಶ ನೀಡುವುದಾಗಿ (Permission granted for debate) ಭರವಸೆ ನೀಡಿದರು.

ಮುಸ್ಲಿಂ ಶಾಸಕರೊಬ್ಬರು ನಡೆದುಬರುತ್ತಿದ್ದಂತೆಯೇ ಬಿಜೆಪಿಯ ದೊಡ್ಡ ದೊಡ್ಡ ನಾಯಕರು ಕೂಡಾ ಎದ್ದು ನಿಂತು ನಮಸ್ಕಾರ್‌ ಸಾಬ್‌ ಎಂದು ಹೇಳುವ ಹಾಗೆ ಕಾಂಗ್ರೆಸ್‌ ಮಾಡಿದೆ ಎಂದು ಸ್ಪೀಕರ್‌ ಸ್ಥಾನದ (Speaker post) ಬಗ್ಗೆ ಮಾತನಾಡಿದ್ದ ವಸತಿ ಸಚಿವ ಜಮೀರ್‌ ಅಹಮದ್‌ ಖಾನ್‌ (Zameer ahmad Khan) ಅವರು ಹಿಂದುಗಳಿಗೆ, ಸ್ಪೀಕರ್‌ ಹುದ್ದೆಗೆ ಅಪಮಾನ ಮಾಡಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿತ್ತು. ಜತೆಗೆ ಜಮೀರ್‌ ಅಹಮದ್‌ ಖಾನ್‌ ಅವರು ತಮ್ಮ ಹುದ್ದೆಗೆ ರಾಜೀನಾಮೆ (BJP urges for Dissmissal of Zameer Khan) ನೀಡಬೇಕು ಎಂದು ಆಗ್ರಹಿಸಿ ವಿಧಾನಸಭೆಯಲ್ಲಿ (Assembly Session) ಕೋಲಾಹಲವೆಬ್ಬಿಸಿತ್ತು.

ಅಧಿವೇಶನದ ಎರಡನೇ ವಾರದ ಮೊದಲ ದಿನವೇ ಬಿಜೆಪಿ ಕಾರ್ಯತಂತ್ರವನ್ನು ರೂಪಿಸಿಕೊಂಡು ಬಂದು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಯತ್ನಿಸಿತು. ಜಮೀರ್‌ ಪ್ರಕರಣವನ್ನು ಉಲ್ಲೇಖಿಸಿ ಅವರನ್ನು ಮಂತ್ರಿ ಸ್ಥಾನದಿಂದ ವಜಾ ಮಾಡಬೇಕು ಎಂಬ ಬೇಡಿಕೆಯನ್ನು ಮುಂದಿಡಲಾಯಿತು.

ಜಮೀರ್‌ ಖಾನ್‌ ಅವರು ಸಚಿವರಾಗಿ‌ ಒಂದು ಪ್ರಶ್ನೆಗೆ ಉತ್ತರ ನೀಡಲು ಮುಂದಾದಾಗ ವಿಧಾನಸಭೆಯಲ್ಲಿ ಪ್ರತಿಪಕ್ಷ ನಾಯಕರಾಗಿರುವ ಆರ್‌. ಅಶೋಕ್‌ ಮತ್ತು ಇತರರು ಆಕ್ಷೇಪಿಸುವಲ್ಲಿಂದ ಪ್ರತಿಭಟನೆ ಆರಂಭಗೊಂಡಿತು. ಆದರೆ, ಸ್ಪೀಕರ್‌ ಖಾದರ್‌ ಅವರು ಇದಕ್ಕೆ ಸೊಪ್ಪು ಹಾಕಲಿಲ್ಲ. ಅದರ ನಡುವೆ ಕಾಂಗ್ರೆಸ್‌ ಹಾಗೂ ಬಿಜೆಪಿ ಶಾಸಕರ ನಡುವೆ ಭಾರಿ ಜಗಳವೇ ನಡೆಯಿತು.

ಇದನ್ನೂ ಓದಿ: Assembly Session: ಹಿಂದುಗಳು ಮುಸ್ಲಿಮರ ಅಡಿಯಾಳುಗಳು ಎಂದೇ ಜಮೀರ್‌ ಹೇಳಿದ್ದು; ಆರ್‌ ಅಶೋಕ್‌

ಒಂದು ಹಂತದಲ್ಲಿ ಕಲಾಪ ಮುಂದೂಡಿದ ಸ್ಪೀಕರ್‌ ಖಾದರ್‌ ಅವರು ಸಂಧಾನ ಸಭೆ ನಡೆಸಿದರೂ ಫಲ ನೀಡಲಿಲ್ಲ. ಬಿಜೆಪಿ ಶಾಸಕರು ಇಡೀ ದಿನ ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ಸ್ಪೀಕರ್‌ ಖಾದರ್‌ ಅವರು ನೋಟಿಸ್‌ ನೀಡಿದರೆ ಚರ್ಚೆಗೆ ಅವಕಾಶ ನೀಡಲಾಗುವುದು ಎಂದು ಹೇಳಿದರು. ಬಿಜೆಪಿ ಗದ್ದಲದ ನಡುವೆಯೇ ಬರ ಚರ್ಚೆ, ಉತ್ತರಗಳು ನಡೆದವು. ಇದರ ನಡುವೆ ಬಿಜೆಪಿ ನಾಯಕರು ಪತ್ರಿಕಾಗೋಷ್ಠಿ ನಡೆಸಿ ತಮ್ಮ ಆಕ್ರೋಶವನ್ನು ತೆರೆದಿಟ್ಟರು.‌ ಜಮೀರ್‌ ಅಹಮದ್‌ ಖಾನ್‌ ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು. ಸಿಎಂ ಸಿದ್ದರಾಮಯ್ಯ ಕೂಡಾ ಜಮೀರ್‌ ಬೆನ್ನಿಗೆ ನಿಂತರು.

ಇದೆಲ್ಲವೂ ನಡೆದು ಕಲಾಪ ಅಂತ್ಯಗೊಳ್ಳುತ್ತಿದ್ದಂತೆಯೇ ಮಂಗಳವಾರ ಈ ಬಗ್ಗೆ ಚರ್ಚೆಗೆ ಅವಕಾಶ ಕೊಡುವುದಾಗಿ ಸ್ಪೀಕರ್‌ ಯು.ಟಿ. ಖಾದರ್‌ ಭರವಸೆ ನೀಡಿದರು. ಅಲ್ಲಿಗೆ ಬಿಜೆಪಿಯವರ ಪ್ರತಿಭಟನೆ ಅಂತ್ಯಗೊಂಡಿತು. ಮಂಗಳವಾರದ ಬೆಳವಣಿಗೆಗಳು ಕುತೂಹಲ ಕೆರಳಿಸಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

VISTARANEWS.COM


on

ಕಾಂಗ್ರೆಸ್‌ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌‌‌ ಅಭ್ಯರ್ಥಿ ಸಮರ್ಥ್​ ಮಲ್ಲಿಕಾರ್ಜುನ್‌‌‌‌‌‌ ವಿಜಯ ಪತಾಕೆ ಹಾರಿಸಿದ್ದಾರೆ. ದಿವಂಗತ ಶಾಮನೂರು ಶಿವಶಂಕರಪ್ಪ ಮೊಮ್ಮಗ ಹಾಗೂ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌, ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ ಅವರ ಪುತ್ರ ಸಮರ್ಥ್‌ ಉಪಸಮರದಲ್ಲಿ ಗೆದ್ದು ಬೀಗಿದ್ದಾರೆ. ಇವರಿಗೆ ಪ್ರಬಲ ಪೈಪೋಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಸೋಲನುಭವಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಏ.9ರಂದು ಉಪಚುನಾವಣೆ ನಡೆದಿತ್ತು.

Continue Reading

Latest

ಬಾಗಲಕೋಟೆಯಲ್ಲಿ ಕಾಂಗ್ರೆಸ್‌‌‌ನ ಉಮೇಶ್‌ ಮೇಟಿ ಭರ್ಜರಿ ಗೆಲುವು

VISTARANEWS.COM


on

ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌‌ ಮೇಟಿ ಗೆಲುವು ಸಾಧಿಸಿದ್ದಾರೆ. 21,866 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಮಠ ವಿರುದ್ಧ ಕಾಂಗ್ರೆಸ್‌‌ನ ಉಮೇಶ್‌ ಮೇಟಿ ಗೆಲುವು ಪಡೆದಿದ್ದಾರೆ. ಉಮೇಶ್‌ ಮೇಟಿ 97,941 ಮತಗಳನ್ನು ಪಡೆದಿದ್ರೆ, ವೀರಣ್ಣ ಚರಂತಿಮಠ 76,075 ಮತಗಳನ್ನು ಪಡೆದುಕೊಂಡಿದ್ದರು. ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಉಮೇಶ್‌‌ ಮೇಟಿಯವರ ತಂದೆ ಹೆಚ್‌.ವೈ.ಮೇಟಿ ಯವರ ನಿಧನದಿಂದ ತೆರವಾಗಿದ್ದ ಕ್ಷೇತ್ರವನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್‌ ಪಕ್ಷ ಯಶಸ್ವಿಯಾಗಿದೆ.

Continue Reading

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading

Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

VISTARANEWS.COM


on

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ. ಇಂದಿನಿಂದ (ಮೇ.1) ರಿಂದ ಹೊಸ ದರ ಅನ್ವಯವಾಗಲಿದ್ದು, ಹೋಟೆಲ್‌, ರೆಸ್ಟೋರೆಂಟ್‌, ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 993 ರೂಪಾಯಿ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಈ ಹಿಂದೆ 2161 ರೂ ಇದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 3154 ರೂಪಾಯಿಗೆ ಏರಿದೆ. ಒಂದೇ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿರುವುದು ವ್ಯಾಪಾರ ವಲಯದಲ್ಲಿ ಆತಂಕ ಮೂಡಿಸಿದೆ. ಈ ಬೆಲೆ ಏರಿಕೆಯಿಂದಾಗಿ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಉದ್ಯಮಿಗಳಿಗೆ ಹೆಚ್ಚುವರಿ ವೆಚ್ಚದ ಒತ್ತಡ ಎದುರಾಗಲಿದೆ. ಈಗಾಗಲೇ ಹೆಚ್ಚುತ್ತಿರುವ ಇತರೆ ಖರ್ಚುಗಳ ನಡುವೆ ಈ ಏರಿಕೆ ಮತ್ತಷ್ಟು ಭಾರವಾಗಲಿದೆ ಎಂದು ವ್ಯಾಪಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಿಂದ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ.

Continue Reading
Advertisement
Latest4 hours ago

ಪಶ್ಚಿಮ ಬಂಗಾಳದಲ್ಲಿ ಕೇಸರಿ ಪರ್ವ: ಯಾರಾಗಲಿದ್ದಾರೆ ʼಸಿಎಂʼ?

Latest5 hours ago

ದಳಪತಿʼ ಪಟ್ಟಾಭಿಷೇಕಕ್ಕೆ ಕ್ಷಣಗಣನೆ : ತಮಿಳುನಾಡು ರಾಜಕಾರಣದಲ್ಲಿ ಬಿರುಗಾಳಿ

Latest1 day ago

ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುವುದಿಲ್ಲ ಎಂದಿದ್ದೇಕೆ ಮಮತಾ ಬ್ಯಾನರ್ಜಿ?

Latest1 day ago

ಬಿಜೆಪಿ ಬಂಗಾಳ ಗೆದ್ದಾಯ್ತು, ಸಿಎಂ ರೇಸ್‌ನಲ್ಲಿ ಯಾರು?

Latest1 day ago

ತಮಿಳುನಾಡು: ಬಹುಮತ ಪಡೆಯಲು ದಳಪತಿ ಮುಂದಿರುವ ತಂತ್ರಗಳೇನು?

Latest2 days ago

ಪಶ್ಚಿಮ ಬಂಗಾಳದಲ್ಲಿ ಕೇಸರಿ, ತಮಿಳುನಾಡಲ್ಲಿ ದಳಪತಿ, ಕೇರಳಂನಲ್ಲಿ ಕಾಂಗ್ರೆಸ್‌ ದರ್ಬಾರ್‌

Latest2 days ago

ಕೇರಳಂ: ಯುಡಿಎಫ್‌ ಗೆಲುವಿನ ಹಿಂದಿನ ಏಳು ರಣತಂತ್ರ!

Latest2 days ago

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

Latest2 days ago

ಬಾಗಲಕೋಟೆಯಲ್ಲಿ ಕಾಂಗ್ರೆಸ್‌‌‌ನ ಉಮೇಶ್‌ ಮೇಟಿ ಭರ್ಜರಿ ಗೆಲುವು

Latest2 days ago

ದ್ರಾವಿಡ ನಾಡಲ್ಲಿ ʼದಳಪತಿʼ ಯುಗಾರಂಭ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌