Assembly Session: ಅವಾಚ್ಯ ಶಬ್ದ ಬಳಕೆ; ಆರ್.ಅಶೋಕ್ ವಿರುದ್ಧ ಪ್ರದೀಪ್ ಈಶ್ವರ್ ಹಕ್ಕು ಚ್ಯುತಿ ಮಂಡನೆ - Vistara News

ಕರ್ನಾಟಕ

Assembly Session: ಅವಾಚ್ಯ ಶಬ್ದ ಬಳಕೆ; ಆರ್.ಅಶೋಕ್ ವಿರುದ್ಧ ಪ್ರದೀಪ್ ಈಶ್ವರ್ ಹಕ್ಕು ಚ್ಯುತಿ ಮಂಡನೆ

Assembly Session: ಆರ್‌.ಅಶೋಕ್‌ ಅವರು ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಮತ್ತು ನಾನು ಮಾತನಾಡದಂತೆ ಅಡ್ಡಿಪಡಿಸಿದ್ದಾರೆ ಎಂದು ಶಾಸಕ ಪ್ರದೀಪ್‌ ಈಶ್ವರ್‌ ಅವರು ಸೋಮವಾರ ಹಕ್ಕು ಚ್ಯುತಿ ಮಂಡನೆ ಮಾಡಿದ್ದಾರೆ

VISTARANEWS.COM


on

Assembly Session
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ರತಿಪಕ್ಷ ನಾಯಕ ಆರ್. ಅಶೋಕ್ ವಿರುದ್ಧ ಚಿಕ್ಕಬಳ್ಳಾಪುರ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ಸದನದಲ್ಲಿ (Assembly Session) ಸೋಮವಾರ ಹಕ್ಕು ಚ್ಯುತಿ ಮಂಡನೆ ಮಾಡಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ವಿಪಕ್ಷ ನಾಯಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಪ್ರದೀಪ್‌ ಈಶ್ವರ್‌ ಆಗ್ರಹಿಸಿದ್ದಾರೆ.

16ನೇ ವಿಧಾನ ಸಭೆಯ 4ನೇ ಅಧಿವೇಶನದಲ್ಲಿ ಜುಲೈ 19ರಂದು ನಾನು ಮಾತನಾಡುವ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರು ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಮತ್ತು ನಾನು ಮಾತನಾಡದಂತೆ ಅಡ್ಡಿಪಡಿಸಿದ್ದಾರೆ. ಆದ್ದರಿಂದ ಅವರ ಮೇಲೆ ಹಕ್ಕುಚ್ಯುತಿ ಮಂಡಿಸಲು ಅನುಮತಿ ನೀಡಬೇಕು ಎಂದು ಪ್ರದೀಪ್‌ ಈಶ್ವರ್‌ ಮನವಿ ಮಾಡಿದ್ದರು. ಹೀಗಾಗಿ ಹಕ್ಕು ಚ್ಯುತಿ ಮಂಡನೆಗೆ ಸ್ಪೀಕರ್ ಯು.ಟಿ. ಖಾದರ್‌ ಅನುಮತಿ ನೀಡಿದರು.

ಆರ್.ಆಶೋಕ್ ವಿರುದ್ಧ ಹಕ್ಕು ಚ್ಯುತಿ ಮಂಡನೆ ಮಾಡಿ ಮಾತನಾಡಿದ ಪ್ರದೀಪ್ ಈಶ್ವರ್, ಮೊದಲ ಬಾರಿ ಶಾಸಕರಾದಾಗ ಖುಷಿ ಪಡಲು ಆರ್. ಆಶೋಕ್ ಅವರ ತಂದೆ-ತಾಯಿ ಇದ್ದರು. ಆದರೆ, ನಾನು ಶಾಸಕನಾದಾಗ ಖುಷಿ ಪಡಲು ನನ್ನ ತಂದೆ-ತಾಯಿ ಇರಲಿಲ್ಲ. ನಾನು ತಂದೆ-ತಾಯಿ ಕಳೆದುಕೊಂಡು ಪೇರೆಸಂದ್ರ ಗ್ರಾಮದಲ್ಲಿ ಕೂಲಿ ಮಾಡಿದ್ದೇನೆ, ತೋಟಕ್ಕೆ ನೀರು ಹರಿಸಿದ್ದೇನೆ. ಶಾಸಕನಾದ ಬಳಿಕ ಜನರಿಗೆ ಅನುಕೂಲವಾಗಲು 10 ಉಚಿತ ಆಂಬ್ಯುಲೆನ್ಸ್ ನೀಡಿದ್ದೇನೆ. ಅನೇಕ ಮಕ್ಕಳ ವಿಧ್ಯಾಭ್ಯಾಸಕ್ಕೆ ನೆರವಾಗಿದ್ದೇನೆ. ವಿದ್ಯಾರ್ಥಿಗಳಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದೇನೆ. ಆರ್. ಆಶೋಕ್ ಅಣ್ಣಾನ ಬಗ್ಗೆ ನನಗೆ ಗೌರವ ಇದೆ, ಅವರು ಮಾತುಗಳ ಬಗ್ಗೆ ನನಗೆ ಉತ್ತರ ಕೊಡಲಿ ಎಂದು ಆಗ್ರಹಿಸಿದರು.

ಇದನ್ನೂ ಓದಿ | Union Budget 2024: ಕೇಂದ್ರ ಬಜೆಟ್‌ನಲ್ಲಿ ರೈಲ್ವೇ ವಲಯದ 9 ಪ್ರಮುಖ ನಿರೀಕ್ಷೆಗಳಿವು

ಈ ವೇಳೆ ಮಾತನಾಡಿದ ಆರ್. ಆಶೋಕ್ ಅವರು, ನಾನು ಯಾವುದೇ ತಪ್ಪು ಪದ ಬಳಕೆ ಮಾಡಿಲ್ಲ. ದಾಖಲೆ ತೆಗೆದು ನೋಡಿದರೆ ಗೊತ್ತಾಗುತ್ತದೆ. ಒಂದು ವೇಳೆ ಅವರ ಪ್ರಕಾರ ತಪ್ಪು ಮಾಡಿದ್ದೇನೆಂದು ಎನಿಸಿದರೆ ಪರಿಶೀಲನೆ ಮಾಡಲಿ, ಅವರು ಬೇರೆ ಬೇರೆ ಭಾಷೆ ಬಳಸಿದ್ದಾರೆ. ಅದರ ಬಗ್ಗೆ ನಾವು ಚಕಾರ ಎತ್ತಿಲ್ಲ. ಪರಿಶೀಲನೆ ಮಾಡಿ ದಾಖಲೆಯಲ್ಲಿ ಇದ್ದರೆ ತೆಗೆದು ಹಾಕಿ, ನಮ್ಮ ಆಕ್ಷೇಪ ಇಲ್ಲ ಎಂದು ಹೇಳಿದರು.

ಇಬ್ಬರು ಸದಸ್ಯರ ಮಾತುಗಳನ್ನು ಆಲಿಸಿದ ಬಳಿಕ ಮಾತನಾಡಿದ ಸ್ಪೀಕರ್‌ ಖಾದರ್‌ ಅವರು, ಪ್ರದೀಪ್‌ ಈಶ್ವರ್‌ ಅವರು ತಮ್ಮ ವಿಚಾರಗಳನ್ನು ಹೇಳಿದ್ದಾರೆ. ಅಶೋಕ್‌ ಅವರು ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಈಗ ನಾನು ಕಲಾಪದ ವಿಡಿಯೊ ತರಿಸಿಕೊಂಡು ಪರಿಶೀಲನೆ ಮಾಡಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ವೇಳೆ ಸಿಮೆಂಟ್ ಮಂಜು ಮಾತನಾಡಿ, ಒಬ್ಬ ಶಾಸಕನಿಗೆ ಸಿಎಂ 25 ಕೋಟಿ ಅನುದಾನ ನೀಡಿದ್ದಾರೆ ಅಂತ ಪ್ರದೀಪ್ ಈಶ್ವರ್ ಸೋಶಿಯಲ್ ಮೀಡಿಯಾದಲ್ಲಿ ಹಾಕಿದ್ದಾರೆ. ಯಾರಿಗೆ ಕೊಟ್ಟಿದ್ದಾರೆ ಉತ್ತರ ಕೊಡಲಿ ಎಂದು ಆಗ್ರಹಿಸಿದರು. ಇದಕ್ಕೆ ಸ್ಪೀಕರ್‌ ಪ್ರತಿಕ್ರಿಯಿಸಿ, ಸೋಶಿಯಲ್ ಮೀಡಿಯಾದಲ್ಲಿ ಹಾಕಿದ ವಿಚಾರ ಚರ್ಚೆ ಮಾಡಲು ಆಗಲ್ಲ ಎಂದು ಹೇಳಿದರು.

ಏನಿದು ಹಕ್ಕು ಚ್ಯುತಿ ಮಂಡನೆ?

ಜನ ಪ್ರತಿನಿಧಿಗಳ ಹಕ್ಕು ರಕ್ಷಣೆಗಾಗಿ ಸಂವಿಧಾನದಲ್ಲಿ ಹಕ್ಕುಚ್ಯುತಿ ಮಂಡನೆಗೆ ಅವಕಾಶ ನೀಡಲಾಗಿದೆ. ತಮ್ಮ ಹಕ್ಕಿಗೆ ಯಾರಾದರೂ ಚ್ಯುತಿ ತಂದಿದ್ದಾರೆ ಎಂದು ಸಂಸದರು, ರಾಜ್ಯಸಭಾ ಸದಸ್ಯರು, ವಿಧಾನಸಭೆ ಮತ್ತು ಪರಿಷತ್ತಿನ ಸದಸ್ಯರು ಯಾರ ವಿರುದ್ಧ ಬೇಕಾದರೂ ಕ್ರಮಕ್ಕೆ ಆಗ್ರಹಿಸಬಹುದು. ಇಂತಹ ಪ್ರಕರಣದಲ್ಲಿ ಸಂಸತ್ತು ಮತ್ತು ಶಾಸನ ಸಭೆಯ ಕಾನೂನಿನ ಪ್ರಕಾರ ಶಿಕ್ಷೆ ವಿಧಿಸಲು ಸಹ ಅವಕಾಶವಿದೆ.

ಇದನ್ನೂ ಓದಿ | Amit Malaviya: ಸರ್ಕಾರಿ ನೌಕರರೂ RSS ಸೇರಬಹುದು; 58 ವರ್ಷಗಳ ಹಿಂದೆ ಇಂದಿರಾ ಗಾಂಧಿ ಹೇರಿದ್ದ ನಿಷೇಧ ರದ್ದು!

ಹಕ್ಕುಚ್ಯುತಿ ನಿರ್ಣಯವನ್ನು ಯಾವುದೇ ವ್ಯಕ್ತಿ, ಸದನದ ಇತರೆ ಸದಸ್ಯರು ಹೊರಗಿನ ವ್ಯಕ್ತಿಗಳ, ಸರ್ಕಾರಿ ಅಧಿಕಾರಿಗಳ ವಿರುದ್ಧವೂ ಮಂಡಿಸಬಹುದು. ಹಕ್ಕು ಬಾಧ್ಯತಾ ಸಮಿತಿಯ ವರದಿಯಲ್ಲಿ ತಪ್ಪು ಸಾಬೀತಾದರೆ ಜೈಲು ಶಿಕ್ಷೆ ವಿಧಿಸುವ ಅವಕಾಶವೂ ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Parashuram D : ವಿಸ್ತಾರ ಮೀಡಿಯಾದ ನೂತನ ಜಿ.ಎಮ್ ಆಗಿ ಪರಶುರಾಮ ಡಿ

Parashuram D: ವಿಸ್ತಾರ ಮೀಡಿಯಾದಲ್ಲಿ ಸಿಒಒ (ಚೀಫ್‌ ಆಪರೇಷನಲ್‌ ಆಫೀಸರ್‌) ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪರಶುರಾಮ್‌ ಡಿ ಅವರಿಗೆ ಜಿ.ಎಮ್‌ ಆಗಿ ಪದೋನ್ನತಿ ನೀಡಲಾಗಿದೆ. ಮಾಧ್ಯಮ ಕ್ಷೇತ್ರದಲ್ಲಿ ಸುಮಾರು ಎರಡು ದಶಕಗಳ ಅನುಭವ ಹೊಂದಿರುವ ಪರಶುರಾಮ್ ಡಿ ಅವರು ನುರಿತ ತಂತ್ರಜ್ಞರ ತಂಡದ ಮುಖ್ಯಸ್ಥರಾಗಿ ಅನೇಕ ಸಂಸ್ಥೆಗಳನ್ನು ಕಟ್ಟಿ ಬೆಳೆಸುವಲ್ಲಿ ಅಮೂಲ್ಯ ಕೊಡುಗೆ ನೀಡಿದ್ದಾರೆ. ಈ ಮೂಲಕ ಮಾಧ್ಯಮ ರಂಗದಲ್ಲಿ ಹೆಸರುವಾಸಿಯಾಗಿದ್ದಾರೆ. ನಾಡಿನಾದ್ಯಂತ ಪ್ರಸಿದ್ಧಿ ಪಡೆಯುತ್ತಿರುವ ʼವಿಸ್ತಾರ ನ್ಯೂಸ್‌ʼ ಚಾನೆಲ್ ಆರಂಭಿಕ ಕಾರ್ಯದಿಂದ ಹಿಡಿದು ಇಲ್ಲಿಯವರೆಗೆ ಪ್ರತಿ ಹೆಜ್ಜೆಯಲ್ಲಿಯೂ ಪರಿಶ್ರಮ ವಹಿಸಿದ್ದಾರೆ.

VISTARANEWS.COM


on

Parashuram D
Koo

ಬೆಂಗಳೂರು: ವಿಸ್ತಾರ ಮೀಡಿಯಾದ ನೂತನ ಜಿ ಎಮ್‌ (ಆಪರೇಷನ್‌) ಆಗಿ ಪರಶುರಾಮ್ ಡಿ (Parashuram D) ಅವರನ್ನು ನೇಮಕ ಮಾಡಲಾಗಿದೆ. ಪರಶುರಾಮ್‌ ಅವರು ಈಗ ವಿಸ್ತಾರ ಮೀಡಿಯಾದಲ್ಲಿ ಸಿಒಒ (ಚೀಫ್‌ ಆಪರೇಷನಲ್‌ ಆಫೀಸರ್‌) ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಮಾಧ್ಯಮ ಕ್ಷೇತ್ರದಲ್ಲಿ ಸುಮಾರು ಎರಡು ದಶಕಗಳ ಅನುಭವ ಹೊಂದಿರುವ ಪರಶುರಾಮ್ ಡಿ ಅವರು ನುರಿತ ತಂತ್ರಜ್ಞರ ತಂಡದ ಮುಖ್ಯಸ್ಥರಾಗಿ ಅನೇಕ ಸಂಸ್ಥೆಗಳನ್ನು ಕಟ್ಟಿ ಬೆಳೆಸುವಲ್ಲಿ ಅಮೂಲ್ಯ ಕೊಡುಗೆ ನೀಡಿದ್ದಾರೆ. ಈ ಮೂಲಕ ಮಾಧ್ಯಮ ರಂಗದಲ್ಲಿ ಹೆಸರುವಾಸಿಯಾಗಿದ್ದಾರೆ.

ಟೆಲಿವಿಷನ್ ಲೋಕದಲ್ಲಿನ ಎಲ್ಲಾ ಬಗೆಯ ವಿಡಿಯೊ – ಆಡಿಯೊ ಪ್ರೊಡಕ್ಷನ್ ಮತ್ತು ಬ್ರಾಡ್ಕಾಸ್ಟ್ ವಿಭಾಗದಲ್ಲಿ ಭಾರತದಲ್ಲಿಯೇ ಅತ್ಯುತ್ತಮ ತಂತ್ರಜ್ಞರೆಂದು ಗುರುತಿಸಲ್ಪಡುವ ಕೆಲವೇ ಕೆಲವು ಮಂದಿಯಲ್ಲಿ ಪರಶುರಾಮ್ ಅವರೂ ಒಬ್ಬರು ಎಂಬುದು ಹೆಮ್ಮೆಯ ಸಂಗತಿ. ಅವರ ಕಾರ್ಯವ್ಯಾಪ್ತಿ ಅಷ್ಟಕ್ಕೇ ನಿಲ್ಲದೇ ಇನ್ನೂ ಮುಂದಕ್ಕೆ ಹೋಗಿ, ಟಿವಿ ಮಾಧ್ಯಮ ಸಂಸ್ಥೆಗಳನ್ನು ಕಟ್ಟುವಲ್ಲಿಯೂ ಮುಂದುವರಿದಿದೆ. ಆರಂಭದ ಕಾರ್ಯಯೋಜನೆ ರೂಪಿಸುವ ಹಂತದಿಂದ ಹಿಡಿದು, ನಿರ್ಮಾಣ ಕಾರ್ಯ, ಲೋಕಾರ್ಪಣೆವರೆಗಿನ ಎಲ್ಲಾ ಹಂತದಲ್ಲೂ ದಕ್ಷತೆಯಿಂದ ಕಾರ್ಯನಿರ್ವಹಿಸಿ ಅದಕ್ಕೆ ಬೇಕಾಗಿರುವ ನುರಿತ ತಂತ್ರಜ್ಞರ ತಂಡವನ್ನು ಕಟ್ಟಿ ಮುನ್ನಡೆಸುವ ಅದಮ್ಯ ಸಾಮರ್ಥ್ಯವನ್ನು ಇವರು ಬೆಳೆಸಿಕೊಂಡಿದ್ದಾರೆ. ಇದಕ್ಕೆ ಸಾಕ್ಷಿ ʼವಿಸ್ತಾರ ನ್ಯೂಸ್‌ʼ ಕನ್ನಡ ವಾಹಿನಿ.

‘ಈ ಟಿವಿ’ಯಿಂದ ಬಿಗ್‌ ಬಾಸ್‌ವರೆಗೆ

ಪರಶುರಾಮ್‌ ಅವರು ಕನ್ನಡದ ಹೆಸರಾಂತ ಚಾನೆಲ್ ಎನಿಸಿಕೊಂಡ ʼಈ ಟಿವಿʼ ಕನ್ನಡ ವಾಹಿನಿಯ ತಾಂತ್ರಿಕ ವಿಭಾಗದಲ್ಲಿ ಕೆಲಸವನ್ನು ಪ್ರಾರಂಭಿಸಿದ್ದರು. ಕಿರುತೆರೆಯ ಮಾಧ್ಯಮ ಲೋಕದಲ್ಲಿ ಹೊಸ ಹೊಸ ಜವಾಬ್ದಾರಿಯನ್ನು, ಸಾಹಸವನ್ನು ಕೈಗೊಳ್ಳುತ್ತಾ ಟೆಕ್ನಿಕಲ್ ವಿಚಾರದಲ್ಲಿ ಹೆಚ್ಚು ಆಳವಾಗಿ ತಮ್ಮನ್ನು ತಾವು ತೊಡಗಿಸಿಕೊಂಡರು. ಮುಂದೆ ʼಸಮಯʼ ಮತ್ತು ʼಜನಶ್ರೀʼ ನ್ಯೂಸ್ ಚಾನೆಲ್‌ನಲ್ಲಿ ತಮ್ಮ ಕ್ರಿಯೇಟಿವಿಟಿಯಿಂದ ಮಾಧ್ಯಮ ಲೋಕದಲ್ಲಿ ಸಾಕಷ್ಟು ಹೆಸರನ್ನು ಸಂಪಾದಿಸಿದರು. ಇಂದು ನಾಡಿನಾದ್ಯಂತ ಮನೆ ಮಾತಾಗಿರುವ ರಿಯಾಲಿಟಿ ಶೋ ʼಬಿಗ್ ಬಾಸ್ʼ ಕನ್ನಡದ ಆನ್ ಲೈನ್ ತಾಂತ್ರಿಕ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿ ‘ಎಂಡಮೋಲ್’ ಕಂಪನಿಯಿಂದ ವಿಶೇಷ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಈಗಿನ ʼರಿಪಬ್ಲಿಕ್ ಕನ್ನಡʼ ಚಾನೆಲ್ ಆಗಿ ಪರಿವರ್ತನೆಯಾಗಿರುವ ಅಂದಿನ ʼದಿಗ್ವಿಜಯ ನ್ಯೂಸ್ʼ ಚಾನೆಲ್‌ನಲ್ಲಿ “ಪ್ರೊಡಕ್ಷನ್ ಹೆಡ್” ಆಗಿ ತಮ್ಮದೇ ಆದ ಕ್ರಿಯಾಶೀಲ ತಂಡವನ್ನು ರಚಿಸಿಕೊಂಡು ದಿಗ್ವಿಜಯ ಚಾನೆಲ್ ಅನ್ನು ಕ್ರಿಯೇಟಿವ್ ಆಗಿ ಮುನ್ನಡೆಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.

ಅಡ್ವರ್ಟೈಸಿಂಗ್ ಮತ್ತು ಬ್ರಾಂಡಿಂಗ್ ಛಾಪು

ತಮ್ಮದೇ ಆದ “ಅಧಿತಿ ಲಿಂಕ್ ಮೀಡಿಯಾ” ಎಂಬ ಸಂಸ್ಥೆಯ ಮೂಲಕ ಅಡ್ವರ್ಟೈಸಿಂಗ್ ಮತ್ತು ಬ್ರಾಂಡಿಂಗ್ ಲೋಕದಲ್ಲಿ ಹೊಸ ಛಾಪನ್ನೇ ಇವರು ಮೂಡಿಸಿ ಅಮೆಜಾನ್ ಪ್ರೈಮ್ ಮತ್ತು ಸ್ಪೈಸ್ ಕಂಪನಿಯೊಂದಿಗೆ ಚಲನಚಿತ್ರಗಳ ಪ್ರಮೋಷನ್ ವಿಭಾಗದಲ್ಲಿ ಹಾಗೂ ಮೈತ್ರಿ ಮೂವೀಸ್, ಗೀತಾ ಪಿಕ್ಚರ್ಸ್‌ನಂತಹ ತೆಲುಗಿನ ದೊಡ್ಡ, ದೊಡ್ಡ ಸಂಸ್ಥೆಯೊಂದಿಗೆ ಪ್ರಚಾರ ವಿಭಾಗದಲ್ಲಿ ಪಾಲುದಾರರಾಗಿ ಯಶಸ್ವಿಯಾಗಿದ್ದಾರೆ. ಅಲ್ಲದೇ ಟೈಮ್ಸ್ ಗ್ರೂಪ್‌ನ ಇವೆಂಟ್ಸ್‌ಗಳನ್ನು ಸಮರ್ಥವಾಗಿ ತಮ್ಮ ಅಧಿತಿ ಲಿಂಕ್ ಮೀಡಿಯಾದ ಮೂಲಕ ನಿಭಾಯಿಸಿದ್ದಾರೆ. ತಮ್ಮದೇ ಆದ ಸಂಸ್ಥೆಯೊಂದನ್ನು ಕಟ್ಟಿ ಬೆಳೆಸಿ ಆಡಳಿತಾತ್ಮಕ ವಿಚಾರದಲ್ಲಿ ಹೆಚ್ಚಿನ ಅನುಭವವನ್ನು ಹೊಂದಿದ್ದಾರೆ.

ವಿಸ್ತಾರ ನ್ಯೂಸ್​​ನಲ್ಲಿ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ʼವಿಸ್ತಾರ ನ್ಯೂಸ್‌ʼ ಹಿಂದಿನ ಶಕ್ತಿ

ನಾಡಿನಾದ್ಯಂತ ಪ್ರಸಿದ್ಧಿ ಪಡೆಯುತ್ತಿರುವ ʼವಿಸ್ತಾರ ನ್ಯೂಸ್‌ʼ ಚಾನೆಲ್ ಆರಂಭದ ಮೊದಲ ಸದಸ್ಯರಾಗಿ, ಚಾನೆಲ್ ಪ್ರಾರಂಭಿಸಬೇಕೆಂಬ ಮೊದಲ ಹೆಜ್ಜೆಯಿಂದ ಹಿಡಿದು ಇಲ್ಲಿಯವರೆಗೆ ಪ್ರತಿ ಹೆಜ್ಜೆಯಲ್ಲಿಯೂ ಪರಿಶ್ರಮ ವಹಿಸಿದ್ದಾರೆ. ಪೂರ್ವ ತಯಾರಿಯಿಂದ ಹಿಡಿದು ಚಾನೆಲ್ ಲೋಕಾರ್ಪಣೆಯವರೆಗೆ ಆಡಳಿತ ಮಂಡಳಿ ಹಾಗೂ ಸಹೋದ್ಯೋಗಿಗಳ ಜೊತೆಗಿದ್ದು ಅವರು ಪಟ್ಟ ಕಠಿಣ ಪರಿಶ್ರಮ ಹಾಗೂ ಅವರ ನಿಷ್ಠೆ, ಪ್ರಾಮಾಣಿಕತೆ, ಬದ್ಧತೆಯ ಫಲವಾಗಿ ಈಗ ಸಂಸ್ಥೆಯ ಉನ್ನತವಾದ ಜವಾಬ್ದಾರಿಯನ್ನು ನಿರ್ವಹಿಸುವ ಹಂತಕ್ಕೆ ತಲುಪಿದ್ದಾರೆ.

ಶುಭ ಹಾರೈಕೆ

ಮಾಧ್ಯಮ ಲೋಕದಲ್ಲಿನ ಎಲ್ಲಾ ಹಂತದ ಅವರ ಒಟ್ಟೂ ಅನುಭವಕ್ಕೆ ವಿಸ್ತಾರ ಮೀಡಿಯಾ ಸಂಸ್ಥೆಯನ್ನು ಬಹಳ ಎತ್ತರಕ್ಕೆ ಕೊಂಡೊಯ್ಯುವ ಶಕ್ತಿ ಇದೆ. ಅವರ ಹಾಗೂ ಇಡೀ ವಿಸ್ತಾರ ತಂಡದ ಪರಿಶ್ರಮ ಜೊತೆಗೂಡಿ ವಿಸ್ತಾರ ಮೀಡಿಯಾ ಸಂಸ್ಥೆ ದೇಶದಲ್ಲಿಯೇ ಗುರುತಿಸಿಕೊಳ್ಳುವಂತಹ ಹೆಮ್ಮೆಯ ಸಂಸ್ಥೆಯಾಗಿ ರೂಪುಗೊಳ್ಳಲಿದೆ ಎಂಬ ವಿಶ್ವಾಸ ನಮಗಿದೆ. ಪರಶುರಾಮ್‌ ಡಿ ಅವರಿಗೆ ಶುಭ ಹಾರೈಸುತ್ತೇವೆ ಎಂದು ವಿಸ್ತಾರ ಮೀಡಿಯಾ ಪ್ರೈ. ಲಿ.ನ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ವೈರಲ್ ನ್ಯೂಸ್

Boycott PhonePe: ತಾಕತ್ತಿದ್ರೆ ಫೋನ್ ಪೇ ತರಹದ ಕಂಪನಿ ಹುಟ್ಟುಹಾಕಿ; ಕನ್ನಡಿಗರ ವಿರುದ್ಧ ಯುವಕ ಆಕ್ರೋಶ! ವಿಡಿಯೊ ಇದೆ

Boycott PhonePe: ಫೋನ್ ಪೇ ಅನ್ ಇನ್‌ಸ್ಟಾಲ್ ಮಾಡುತ್ತಿರುವ ಕನ್ನಡಿಗರ ವಿರುದ್ಧ ಯುವಕ ಆಕ್ರೋಶ ಹೊರಹಾಕಿದ್ದಾನೆ. ಈ ರೀತಿ ಕಂಪನಿಗಳನ್ನು ಬಾಯ್ಕಾಟ್‌ ಮಾಡುವುದರಿಂದ ರಾಜ್ಯದ ಆರ್ಥಿಕತೆಗೆ ಎಷ್ಟು ದೊಡ್ಡ ಹೊಡೆತ ಬೀಳುತ್ತೆ ಎಂದು ಯೋಚಿಸಿದ್ದೀರಾ ಎಂದು ಪ್ರಶ್ನಿಸಿದ್ದಾನೆ.

VISTARANEWS.COM


on

Boycott PhonePe
Koo

ಬೆಂಗಳೂರು: ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ರಾಜ್ಯ ಸರ್ಕಾರದ ಪ್ರಸ್ತಾವನೆಗೆ ಅಸಮಾಧಾನ ವ್ಯಕ್ತಪಡಿಸಿದ್ದಕ್ಕೆ ವಿರೋಧ ವ್ಯಕ್ತವಾದ ಬೆನ್ನಲ್ಲೇ ಫೋನ್‌ ಪೇ ಸಿಇಒ ಸಮೀರ್‌ ನಿಗಮ್‌ ಕ್ಷಮೆ ಕೋರಿದ್ದರು. ಈ ನಡುವೆ ʼಬಾಯ್ಕಾಟ್‌ ಫೋನ್‌ ಪೇʼ ಅಭಿಯಾನ (Boycott PhonePe) ಟ್ರೆಂಡ್‌ ಆಗುತ್ತಿರುವುದಕ್ಕೆ ಯುವಕನೊಬ್ಬ ಕನ್ನಡಿಗರ ವಿರುದ್ಧ ಆಕ್ರೋಶ ಹೊರಹಾಕಿದ್ದು, ತಾಕತ್ತಿದ್ದರೆ ಫೋನ್ ಪೇ ತರಹದ ಕಂಪನಿಯನ್ನು ಹುಟ್ಟು ಹಾಕಿ ಎಂದು ಸವಾಲು ಹಾಕಿದ್ದಾನೆ.

ಕಿರಣ್‌ ಎಂಬ ಯುವಕ ವಿಡಿಯೊ ಹಂಚಿಕೊಂಡಿದ್ದು, ಇದರಲ್ಲಿ ಫೋನ್ ಪೇ ಅನ್ ಇನ್‌ಸ್ಟಾಲ್ ಮಾಡುತ್ತಿರುವ ಕನ್ನಡಿಗರ ವಿರುದ್ಧ ಆಕ್ರೋಶ ಹೊರಹಾಕಿದ್ದಾನೆ. ಫೋನ್ ಪೇ ಪರ ವಹಿಸಿಕೊಂಡು ಯುವಕ ಮಾತನಾಡಿದ್ದು, ತಾಕತ್ತಿದ್ದರೆ ಫೋನ್ ಪೇ ತರಹದ ಕಂಪನಿಯನ್ನು ಹುಟ್ಟು ಹಾಕಿ, ಇಂತಹ ಕಂಪನಿಗಳು ಇಲ್ಲಿ ಇಲ್ಲವೆಂದರೆ ಯಾರಿಗೂ ಆದಾಯ ಇಲ್ಲ. ಬೆಂಗಳೂರಿನಲ್ಲಿ ಬೇರೆ ದೇಶ, ರಾಜ್ಯದವರಿಂದಲೇ ಅರ್ಥಿಕತೆ ಬೆಳೆಯುತ್ತಿದೆ. ಬೇರೆ ಕಂಪನಿಗಳಿಲ್ಲವೆಂದರೆ ಏನೂ ಸಿಕ್ಕಲ್ಲ ಎಂದು ಹೇಳಿದ್ದಾನೆ. ಸದ್ಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.

ಕನ್ನಡಿಗರಿಗೆ ಮೀಸಲಾತಿ ವಿರೋಧಿಸಿದ್ದಕ್ಕೆ ಫೋನ್‌ ಪೇ ಅನ್‌ ಇನ್‌ಸ್ಟಾಲ್‌ ಮಾಡುವುದು ದೊಡ್ಡ ವಿಚಾರವಲ್ಲ. ಅಂತಹ ಕಂಪನಿಯನ್ನು ಹುಟ್ಟುಹಾಕುವುದಕ್ಕೆ ಗಂಡಸುತನ ಇರಬೇಕು. ನಮ್ಮ ರಾಜಕಾರಣಿಗಳು ಹೇಳೋದನ್ನು ಕೇಳಿಕೊಂಡಿರುವ ನಮಗೆ ಇಂತಹ ಕಂಪನಿ ಸೃಷ್ಟಿಸಲು ಸಾಧ್ಯವಿಲ್ಲ. ಈ ರೀತಿ ಕಂಪನಿಗಳನ್ನು ಬಾಯ್ಕಾಟ್‌ ಮಾಡುವುದರಿಂದ ರಾಜ್ಯದ ಆರ್ಥಿಕತೆಗೆ ಎಷ್ಟು ದೊಡ್ಡ ಹೊಡೆತ ಬೀಳುತ್ತೆ ಎಂದು ಯೋಚಿಸಿದ್ದೀರಾ? ರಾಜಕಾರಣಿಗಳು ಇಂತಹವುಗಳ ಬಗ್ಗೆ ಯೋಚಿಸಲ್ಲ. ಯಾಕೆಂದರೆ ಅವರ ಮಕ್ಕಳು, ಮೊಮ್ಮಕ್ಕಳು ವಿದೇಶದಲ್ಲಿರುತ್ತಾರೆ. ಈ ಕೆಟ್ಟ ರಾಜಕಾರಣಿಗಳ ಕುತಂತ್ರಗಳಿಗೆ ನೀವು ಬಲಿಯಾಗಬೇಡಿ. ಇಂತಹ ವಿಚಾರಗಳಿಂದ ದೇಶದ ಏಕತೆ, ಅಭಿವೃದ್ಧಿಗೆ ಅಡ್ಡಿಯಾಗಬಾರದು ಎನ್ನುವುದೇ ನನ್ನ ಉದ್ದೇಶ ಎಂದು ವಿಡಿಯೊದಲ್ಲಿ ಯುವಕ ಹೇಳಿದ್ದಾನೆ.

ಇದನ್ನೂ ಓದಿ | Karnataka Jobs Reservation: ಉದ್ಯೋಗ ವಿಚಾರದಲ್ಲಿ ಕನ್ನಡಿಗರೊಂದಿಗೆ ಸರ್ಕಾರ ಚೆಲ್ಲಾಟ: ವಿಜಯೇಂದ್ರ ಆಕ್ರೋಶ

ಬಾಯ್ಕಾಟ್ ಫೋನ್ ಪೇ ಅಭಿಯಾನ

ಬೆಂಗಳೂರು: ಖಾಸಗಿ ವಲಯದ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಚಾರಕ್ಕೆ ಫೋನ್ ಪೇ ಸಿಇಒ ಸಮೀರ್ ನಿಗಮ್ ಅಸಮಾಧಾನ ಹೊರಹಾಕಿದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರು ಆಕ್ರೋಶ ಹೊರಹಾಕುತ್ತಿದ್ದಾರೆ. ಕನ್ನಡಿಗರ ವಿಷಯದಲ್ಲಿ ಫೋನ್ ಪೇ ಸಿಇಒ ಸಮೀರ್ ನಿಗಮ್ ಉದ್ಧಟತನ ತೋರಿದ್ದಾರೆ. ಹೀಗಾಗಿ ಫೋನ್‌ ಪೇ ಆ್ಯಪ್ ಅನ್ನು ಯಾರೂ ಬಳಸಬೇಡಿ. 1 ರೇಟಿಂಗ್ ನೀಡಿದ ಬಳಿಕ ಆ್ಯಪ್ ಡಿಲಿಟ್ ಮಾಡುವಂತೆ ಅಭಿಯಾನ ಮಾಡಲಾಗುತ್ತಿದೆ.

ಇನ್ನು ಕೆಲ ನೆಟ್ಟಿಗರು, ಯಾರಾದರೂ ನನ್ನ ಹೆಸರಲ್ಲಿ ಫೋನ್ ಪೇ ಮಾಡಿ ಎಂದರೆ ಯಾರು ಮಾಡಬೇಡಿ. ಯಾಕೆಂದರೆ ನನ್ನ ಹತ್ತಿರ ಫೋನ್ ಪೇ ಇಲ್ಲ. ಕನ್ನಡಿಗರಿಗೆ ಕೆಲಸದಲ್ಲಿ ಮೀಸಲಾತಿ ಕೊಡುವುದಕ್ಕೆ ಎದುರು ಮಾಡಿರುವ ಫೋನ್‌ಪೇ ಸಿಇಒಗೆ ಬುದ್ಧಿ ಕಲಿಸಲು ಫೋನ್‌ಪೇ ಅನ್‌ಇನ್ಸ್ಟಾಲ್ ಮಾಡಿ. ಕನ್ನಡಿಗರ ಬಲ ತೋರಿಸಿ ಎಂದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ | Karnataka Job Reservation : ಹಗರಣಗಳನ್ನು ಮುಚ್ಚಿಡಲು ಕನ್ನಡಿಗರಿಗೆ ಮೀಸಲು ವಿಚಾರ ಮುನ್ನೆಲೆಗೆ ತಂದ ಸರ್ಕಾರ; ಸಿಟಿ ರವಿ ಆರೋಪ

Continue Reading

ಮಳೆ

Karnataka Rain : ನಿರಂತರ ಮಳೆಗೆ ಮೈಸೂರಿನ ಒಲಂಪಿಯಾ ಚಿತ್ರಮಂದಿರದ ಗೋಡೆ ಕುಸಿತ; ನಾಲ್ವರು ಗಂಭೀರ

Karnataka Rain : ಸತತವಾಗಿ ಸುರಿದ ಮಳೆಗೆ ಹಲವೆಡೆ ಗೋಡೆ ಕುಸಿತ ಪ್ರಕರಣಗಳು ಹೆಚ್ಚಾಗುತ್ತಿವೆ. ಮೈಸೂರಿನಲ್ಲಿ ಒಲಂಪಿಯಾ ಚಿತ್ರಮಂದಿರದ ಗೋಡೆ ಕುಸಿದು ನಾಲ್ವರು ಗಾಯಗೊಂಡಿದ್ದಾರೆ. ಹೆದ್ದಾರಿಗೆ ಬೃಹತ್‌ ಮರ ಬಿದ್ದಿದ್ದು, ಶಿರಸಿ-ಬನವಾಸಿ ರಸ್ತೆ ಸಂಚಾರ ಬಂದ್ ಆಗಿದೆ.

VISTARANEWS.COM


on

By

karnataka rain
Koo

ಮೈಸೂರು: ನಿರಂತರ ಮಳೆಗೆ ಮೈಸೂರಿನ ಒಲಂಪಿಯಾ ಚಿತ್ರಮಂದಿರದ ಹಿಂಬದಿ ಗೋಡೆ ಕುಸಿದು (Karnataka Rain) ಬಿದ್ದಿದೆ. ಚಿತ್ರಮಂದಿರ ಪಕ್ಕದಲ್ಲೇ ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದ ನಾಲ್ವರು ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಕೆಆರ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಸೋಮವಾರ ಮಧ್ಯಾಹ್ನ ಈ ದುರ್ಘಟನೆ ನಡೆದಿದ್ದು, ತಬರೀಸ್ ಮತ್ತು ಅರ್ಮಾನ್ ಎಂಬುವವರು ಗಂಭೀರವಾಗಿ ಗಾಯಗೊಂಡವರು. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಗೋಡೆ ಕೆಳಗೆ ಬಿದ್ದ ಪರಿಣಾಮ ಬಟ್ಟೆ ಅಂಗಡಿಯ ಸ್ಟಾಲ್‌ಗಳು ನೆಲಕಚ್ಚಿವೆ. ಜೆಸಿಬಿ ಯಂತ್ರದ ಮೂಲಕ ತೆರವು ಕಾರ್ಯಾಚರಣೆ ನಡೆಯುತ್ತಿದೆ.

ಹೆದ್ದಾರಿಗೆ ಬಿದ್ದ ಬೃಹತ್‌ ಮರ

ಉತ್ತರಕನ್ನಡ ಜಿಲ್ಲೆಯಲ್ಲಿ ವರುಣಾರ್ಭಟ ಮುಂದುವರಿದಿದ್ದು, ಶಿರಸಿ-ಹೊಸನಗರ ರಾಜ್ಯ ಹೆದ್ದಾರಿಗೆ ಬೃಹತ್ ಮರವೊಂದು ಬಿದ್ದಿದೆ. ಶಿರಸಿ ತಾಲೂಕಿನ ಗುಡ್ನಾಪುರ ಗ್ರಾಮದ ಬಳಿ ಘಟನೆ ನಡೆದಿದೆ. ಮರ ಬಿದ್ದ ಪರಿಣಾಮ ಶಿರಸಿ-ಬನವಾಸಿ ರಸ್ತೆ ಸಂಚಾರ ಬಂದ್ ಆಗಿದ್ದು, ಮರ ಬಿದ್ದ ಪರಿಣಾಮ ಹಲವು ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಅರಣ್ಯ, ಲೋಕೋಪಯೋಗಿ ಇಲಾಖೆ, ಹೆಸ್ಕಾಂ, ಪೊಲೀಸ್ ಇಲಾಖೆಯಿಂದ ತೆರವು ಕಾರ್ಯಾಚರಣೆ ನಡೆದಿದೆ.

ಭಾರಿ ಮಳೆಗೆ ಸೋರುತ್ತಿರುವ ಗ್ರಂಥಾಲಯ

ಭಾರಿ ಮಳೆಗೆ ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಸಕಲೇಶಪುರ ಪಟ್ಟಣದ ಐಬಿ ರಸ್ತೆಯಲ್ಲಿರುವ ಸ್ಕೌಟ್ ಅಂಡ್ ಗೈಡ್ ಕಟ್ಟಡದಲ್ಲಿರುವ ಗ್ರಂಥಾಲಯ ಸೋರುತಿದ್ದು, ಪುಸ್ತಕಗಳು ನೀರುಪಾಲಾಗಿವೆ. ಗ್ರಂಥಾಲಯದ ಹೆಂಚುಗಳು ಹೊಡೆದು ಹೋಗಿದ್ದು, ಯಾವ ಕ್ಷಣದಲ್ಲಾದರೂ ಲೈಬ್ರರಿ ಬೀಳುವ ಸಾಧ್ಯತೆ ಇದೆ. ಸೋರುತ್ತಿರುವ ಮಳೆ ನೀರಿನಿಂದ ಲಕ್ಷಾಂತರ ರೂ ಮೌಲ್ಯದ ಅಮೂಲ್ಯ ಪುಸ್ತಕಗಳಿಗೆ ಹಾನಿಯಾಗಿದೆ.

ಇದನ್ನೂ ಓದಿ: Karnataka Rain : ಭಾರಿ ಮಳೆ-ಗಾಳಿಗೆ ಯುವಕನ ತಲೆ ಮೇಲೆ ಮುರಿದು ಬಿದ್ದ ವಿದ್ಯುತ್‌ ಕಂಬ

ಊರ ಬಾಗಿಲಿಗೆ ಬಂದು‌ನಿಂತ ಘಟಪ್ರಭಾ ನದಿ ನೀರು

ಬೆಳಗಾವಿಯಲ್ಲಿ ಅಪಾಯದ ಮಟ್ಟ ಮೀರಿ ಘಟಪ್ರಭಾ ನದಿ ಹರಿಯುತ್ತಿದ್ದು, ಊರ ಬಾಗಿಲಿಗೆ ಬಂದು‌ನಿಂತಿದೆ. ಮುಸಗುಪ್ಪಿ ಗ್ರಾಮಕ್ಕೆ ಪ್ರವಾಹದ ಆತಂಕ ಶುರುವಾಗಿದೆ. ನದಿ ಪಕ್ಕದ ಕಬ್ಬು ಸೇರಿದಂತೆ ಹಲವು ಬೆಳೆಗಳು ಸಂಪೂರ್ಣ ಜಲಾವೃತಗೊಂಡಿದೆ. ಇನ್ನೂ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಬಿಟ್ಟು ಬಿಡದೇ ಮಳೆ ಸುರಿಯುತ್ತಿದ್ದು, ಕೃಷ್ಣಾ ನದಿ ತೀರದಲ್ಲಿ ಪ್ರವಾಹದ ಆತಂಕ ಎದುರಾಗಿದೆ.

ಕೃಷ್ಣೆಯ ಜತೆಗೆ ದೂದಗಂಗಾ, ವೇದಗಂಗಾ ಹಾಗೂ ಹೀರಣ್ಯಕೇಶಿ ನದಿಗಳ ನೀರಿನ ಮಟ್ಟದಲ್ಲೂ ಏರಿಕೆಯಾಗಿದ್ದು, ಈಗಾಗಲೇ ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ 7 ಸೇತುವೆಗಳು ಮುಳುಗಡೆಯಾಗಿವೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಲ್ಲೋಳ‌ ಗ್ರಾಮದವರಿಗೂ ನದಿ ತೀರಕ್ಕೆ ಹೋಗದಂತೆ ಜಿಲ್ಲಾಡಳಿತದಿಂದ ಕಟ್ಟು ನಿಟ್ಟಿನ ಎಚ್ಚರಿಕೆವಹಿಸಿದೆ.

ಹಾವೇರಿ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಧರ್ಮಾ ನದಿ ಉಕ್ಕಿ ಹರಿಯುತ್ತಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ಹರಿದಿರುವ ಧರ್ಮಾ ಕಾಲುವೆಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಹಾನಗಲ್ ತಾಲೂಕಿನ ಕಂಚಿನೆಗಳೂರು ಬಳಿ ಜಲಪಾತ ಸೃಷ್ಟಿಯಾಗಿದೆ. ವರದಾನದಿಯ ಅಬ್ಬರಕ್ಕೆ ಹಾವೇರಿಯ ಹೊಸರಿತ್ತಿಯಲ್ಲಿರುವ ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ ಮೂಲ ಸಂಸ್ಥಾನ ಮಟ ಜಲಾವೃತಗೊಂಡಿದೆ. ಮಠದ ಒಳಗೆ ನೀರು ನುಗ್ಗುವ ಆತಂಕಇದ್ದು, ನೂರಾರು ಎಕರೆ ಬೆಳೆ ಮುಳುಗಡೆಯಾಗಿದೆ.

ಕೆಆರ್‌ಎಸ್‌ ಬೋಟಿಂಗ್‌ ಪಾಯಿಂಟ್‌ಗೆ ನಿಷೇಧ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್‌ಎಸ್‌ನ ಬೋಟಿಂಗ್ ಪಾಯಿಂಟ್‌ಗೆ ಸಾರ್ವಜನಿಕರಿಗೆ ನಿಷೇಧ ಹೇರಲಾಗಿದೆ. ಜನರು ಓಡಾಡುವ ಸ್ಥಳದಲ್ಲೂ ನೀರು ತುಂಬಿದೆ. ನೀರಿನ ಪ್ರಮಾಣ ಕಡಿಮೆ ಆಗುವವರೆಗೂ ಬೋಟಿಂಗ್ ಸ್ಥಗಿತ ಮಾಡಲಾಗಿದೆ.

ತುಮಕೂರಿನಲ್ಲಿ ಕೆಸರು ಗದ್ದೆಯಂತಾದ ರಸ್ತೆ

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತುಮಕೂರಿನ ಹಿರೇಹಳ್ಳಿಯಲ್ಲಿ ರಸ್ತೆಯು ಕೆಸರು ಗದ್ದೆಯಂತಾಗಿದೆ. ಹಿರೇಹಳ್ಳಿ ಇಂಡಸ್ಟ್ರಿಯಲ್ ಏರಿಯಾಗೆ ಕೆಲಸಕ್ಕೆ ಹೋಗಲು ಪ್ರತಿನಿತ್ಯ ನೂರಾರು ವಾಹನಗಳು ಓಡಾಟ ನಡೆಸುತ್ತವೆ. ರಸ್ತೆಯಲ್ಲಿ ಎರಡು ಮೂರು ಅಡಿಗಳಷ್ಟು ಗುಂಡಿ ಬಿದ್ದರು ರಸ್ತೆ ಸರಿಪಡಿಸದೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ.

ಇದನ್ನೂ ಓದಿ: Forced Conversion : ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದವರಿಗೆ ಬ್ರೈನ್‌ ವಾಶ್‌; ಮತಾಂತರಕ್ಕೆ ಯತ್ನಿಸಿದ ಇಬ್ಬರು ಅರೆಸ್ಟ್‌

ನಿರಂತರ ಜಡಿ ಮಳೆ ಎಫೆಕ್ಟ್‌; ಅಡಿಕೆ ಕೊಯ್ಲಿಗೆ ತೊಂದರೆ

ದಾವಣಗೆರೆ ಜಿಲ್ಲೆಯ ಚನ್ನಗಿರಿ ರಾಜ್ಯದಲ್ಲಿ ಅತಿ ಹೆಚ್ಚು ಅಡಿಕೆ ಬೆಳೆಯುವ ತಾಲೂಕಾಗಿದೆ. 36 ಸಾವಿರ ಹೆಕ್ಟೇರ್ ಪ್ರದೇಶದಲ್ಲಿನ ಅಡಿಕೆ ಬೆಳೆ ಕೊಯ್ಲಿಗೆ ಬಂದಿದೆ. ಆದರೆ ನಿರಂತರ ಜಡಿ ಮಳೆಯಿಂದಾಗಿ ಕೊಯ್ಲಿಗೆ ತೊಂದರೆ ಆಗುತ್ತಿದೆ. ರೈತರು ಕಳೆದ ವರ್ಷ ಮಳೆಯಿಲ್ಲದೇ ಟ್ಯಾಂಕರ್ ಮೂಲಕ ನೀರು ಪೂರೈಸಿ ಅಡಿಕೆ ತೋಟ ಉಳಿಸಿಕೊಂಡಿದ್ದರು. ಈ ವರ್ಷ ಉತ್ತಮ‌ ಮಳೆಯಾಗುತ್ತಿದ್ದು, ನಿರಂತರ ಜಡಿ ಮಳೆಯಾಗುತ್ತಿರುವ ಹಿನ್ನೆಲೆ ಅಡಿಕೆ ತೋಟಗಳಲ್ಲಿ ಹೆಜ್ಜೆ ಇಡದ ಸ್ಥಿತಿ ನಿರ್ಮಾಣವಾಗಿದೆ. ಅಡಿಕೆ ಕೊಯ್ಲಿ ಮಾಡದಿದ್ದರೇ ಅಡಿಕೆ ಗೋಟು ಆಗುವ ಭಯವಿದೆ. ಅಡಿಕೆ ಗೋಟು ಆದರೆ ಮಾರುಕಟ್ಟೆಯಲ್ಲಿ ದರ ಕಡಿಮೆಯಾಗಲಿದೆ.

ಬಿರುಗಾಳಿಗೆ ಮುರಿದು ಬಿದ್ದ ವಿದ್ಯುತ್‌ ಕಂಬ

ಕಾಫಿನಾಡು ಚಿಕ್ಕಮಗಳೂರಲ್ಲಿ ಮಳೆ ತಗ್ಗಿದ್ದರೂ ಗಾಳಿ ವೇಗ ತಗ್ಗುತ್ತಿಲ್ಲ. ಭಾರಿ ಗಾಳಿಗೆ ಬೃಹತ್ ವಿದ್ಯುತ್ ಕಂಬ ಮುರಿದು ಬಿದ್ದಿದೆ. 66 ಕೆ.ವಿ. ವಿದ್ಯುತ್ ಟವರ್ ಅರ್ಧಕ್ಕೆ ಮುರಿದು ಬಿದ್ದಿದೆ. ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಸಮೀಪದ ಆಮೆಕಟ್ಟೆ ಬಳಿ ಘಟನೆ ನಡೆದಿದೆ. ಆಲ್ದೂರು ಹೋಬಳಿಯ ಹತ್ತಾರು ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ ಬಂದ್ ಆಗಿದೆ. ಇನ್ನು ಎರಡು ದಿನ ಕತ್ತಲಲ್ಲಿ ಕಳೆಯುವಂತಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

LKG UKG in Anganwadis: ಬೆಂಗಳೂರಿನ ಅಂಗನವಾಡಿಯಲ್ಲಿ ಎಲ್‌ಕೆಜಿ, ಯುಕೆಜಿಗೆ ಚಾಲನೆ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

LKG UKG in Anganwadis: ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರದ ಪಟ್ಟೇಗಾರ ಪಾಳ್ಯದ ಅಂಗನವಾಡಿ ಕೇಂದ್ರದಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚಾಲನೆ ನೀಡಿದರು.

VISTARANEWS.COM


on

LKG UKG in Anganwadis
Koo

ಬೆಂಗಳೂರು: ಇಡೀ ದೇಶದಲ್ಲೆ ಪ್ರಪ್ರಥಮ ಬಾರಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮಗ್ರ ಶಿಶು ಯೋಜನೆಯಡಿ ಆರಂಭಿಸಲಾಗಿರುವ ಸರ್ಕಾರಿ ಮಾಂಟೆಸ್ಸರಿ (L.K.G, UKG) ತರಗತಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸೋಮವಾರ ಚಾಲನೆ ನೀಡಿದರು. ಬೆಂಗಳೂರಿನ ಗೋವಿಂದರಾಜನಗರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಪಟ್ಟೇಗಾರ ಪಾಳ್ಯದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಪೂರ್ವ ಪ್ರಾಥಮಿಕ ತರಗತಿಗಳಿಗೆ ಚಾಲನೆ ನೀಡಿದರು.

LKG UKG in Anganwadis

ಈ ವೇಳೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಅಂಗನವಾಡಿ ಕೇಂದ್ರಗಳ ಉನ್ನತೀಕರಣದ ಮೊದಲ ಭಾಗವಾಗಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಇಂದು ಪೂರ್ವ ಪ್ರಾಥಮಿಕ ಶಾಲೆಗಳಿಗೆ ಚಾಲನೆ ನೀಡಿದ್ದು, ಇನ್ಮುಂದೆ ನಮ್ಮ ಪುಟಾಣಿಗಳು ಅಂಗನವಾಡಿ ಕೇಂದ್ರಗಳಲ್ಲೇ ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮದಲ್ಲಿ ಕಲಿಯಲಿದ್ದಾರೆ. ಇಂದು ಮೊದಲ ಹಂತದಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 250 ಹಾಗೂ ರಾಜ್ಯಾದ್ಯಂತ 500 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳು ಆರಂಭಗೊಳ್ಳಲಿವೆ ಎಂದು ತಿಳಿಸಿದರು.

ಈ ವೇಳೆ ವಿಜಯನಗರ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ಇಲಾಖೆಯ ನಿರ್ದೇಶಕರಾದ ಎನ್.ಸಿದ್ದೇಶ್ವರ್, ವಿಕಲಾಂಗ ಇಲಾಖೆಯ ಆಯುಕ್ತರಾದ ದಾಸ್ ಸೂರ್ಯವಂಶಿ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್. ನಿಶ್ಚಲ್, ಸೇರಿದಂತೆ ಇಲಾಖೆಯ ಅಧಿಕಾರಿಗಳು, ಕಾವೇರಿಪುರ ವಾರ್ಡ್ ನ ಪ್ರಮುಖರು ಉಪಸ್ಥಿತರಿದ್ದರು.

ಇದನ್ನೂ ಓದಿ | Economic Survey 2023-24: ದೇಶದ ಆರ್ಥಿಕತೆ ಸುಭದ್ರ, ಜಿಡಿಪಿ 7% ಬೆಳವಣಿಗೆ; ಆರ್ಥಿಕ ಸಮೀಕ್ಷೆ ಪ್ರಕಟ

ಸರ್ಕಾರದಿಂದಲೇ ಬ್ಯಾಗ್, ಪುಸ್ತಕ, ಸಮವಸ್ತ್ರ ಉಚಿತ

ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕದ ಅಂಗನವಾಡಿ ಕೇಂದ್ರಗಳ ಉನ್ನತೀಕರಣದ (LKG UKG in Anganwadis) ಮೊದಲ ಭಾಗವಾಗಿ ಜುಲೈ 22ರಂದು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಎಲ್‌ಕೆಜಿ, ಯುಕೆಜಿ) ತರಗತಿಗಳನ್ನು ಸಾಂಕೇತಿಕವಾಗಿ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಇತ್ತೀಚೆಗೆ ತಿಳಿಸಿದ್ದರು.

ಪೂರ್ವ ಪ್ರಾಥಮಿಕ ಶಾಲಾ ಮಕ್ಕಳಿಗೆ ಇಲಾಖೆ ವತಿಯಿಂದಲೇ ಬ್ಯಾಗ್, ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಿಸಲಾಗುವುದು. ಮೊದಲ ಹಂತದಲ್ಲಿ 15 ರಿಂದ 20 ಸಾವಿರ ಶಾಲೆಗಳಲ್ಲಿ ಗವರ್ನಮೆಂಟ್ ಮಾಂಟೆಸ್ಸರಿ ಆರಂಭಿಸಲಾಗುತ್ತಿದೆ. ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣ ಮಾಡುವುದೇ ಇಲಾಖೆಯ ಉದ್ದೇಶ. ಈಗಾಗಲೇ ಇಲಾಖೆ ವತಿಯಿಂದ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಗುಣಮಟ್ಟದ ಆಹಾರ, ಶಿಕ್ಷಕಿಯರಿಗೆ ಸೀರೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಅಂಗನವಾಡಿ ಶಿಕ್ಷಕಿಯರನ್ನು ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದರು.

30 ವರ್ಷಕ್ಕಿಂತ ಮೇಲ್ಪಟ್ಟ ಅಂಗನವಾಡಿ ಕೇಂದ್ರಗಳನ್ನು ಉನ್ನತ ದರ್ಜೆಗೆ ಏರಿಸಲಾಗುವುದು. ನನ್ನ ಅಧಿಕಾರ ಅವಧಿಯಲ್ಲಿ ಇಲಾಖೆಗೆ ಕೈಲಾದಷ್ಟು ಉತ್ತಮ ಕೆಲಸ ಮಾಡುವೆ. ಕಾರ್ಯಕರ್ತೆಯರ ಹೋರಾಟದ ಶಕ್ತಿಯೇ ಅಂಗನವಾಡಿ ಉನ್ನತೀಕರಣಕ್ಕೆ ಕಾರಣ ಎಂದು ಹೇಳಿದ್ದರು.

ಇದನ್ನೂ ಓದಿ | NEET UG 2024: ಅಧಿವೇಶನದಲ್ಲಿ ‘ನೀಟ್‌’ ಪ್ರಸ್ತಾಪಿಸಿದ ರಾಹುಲ್‌ ಗಾಂಧಿ; ಪ್ರತ್ಯುತ್ತರ ಕೊಟ್ಟ ಕೇಂದ್ರ ಸಚಿವ

ಈ ಮೊದಲು ಪ್ರಾಥಮಿಕ ಶಾಲೆಗಳಲ್ಲೇ ಎಲ್‌ಕೆಜಿ, ಯುಕೆಜಿ ತರಗತಿ ಆರಂಭಿಸಲು ಸರ್ಕಾರ ನಿರ್ಧರಿಸಿತ್ತು. ಆದರೆ, ಇದಕ್ಕೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ವಿರೋಧ ವ್ಯಕ್ತಪಡಿಸಿದ್ದರು. ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಆರಂಭಿಸಿದರೆ ಅಂಗನವಾಡಿ ಕೇಂದ್ರಗಳ ಅಸ್ತಿತ್ವಕ್ಕೆ ಧಕ್ಕೆಯಾಗಲಿದೆ. ಹೀಗಾಗಿ ಅಂಗನವಾಡಿಗಳಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಿಸಬೇಕು ಎಂದು ಒತ್ತಾಯ ಕೇಳಿಬಂದಿತ್ತು. ಹೀಗಾಗಿ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ತರಗತಿಗಳನ್ನು ರಾಜ್ಯ ಸರ್ಕಾರ ಆರಂಭಿಸಿದೆ.

Continue Reading
Advertisement
Parashuram D
ಪ್ರಮುಖ ಸುದ್ದಿ6 mins ago

Parashuram D : ವಿಸ್ತಾರ ಮೀಡಿಯಾದ ನೂತನ ಜಿ.ಎಮ್ ಆಗಿ ಪರಶುರಾಮ ಡಿ

Gautam Gambhir
ಪ್ರಮುಖ ಸುದ್ದಿ30 mins ago

Gautam Gambhir : ವಿರಾಟ್​ ಕೊಹ್ಲಿ, ರೋಹಿತ್​ ಶರ್ಮಾ 2027ರ ವಿಶ್ವ ಕಪ್​ ತನ ಆಡುತ್ತಾರೆ ಎಂದ ಗಂಭೀರ್​

Kanwar Yatra
ದೇಶ38 mins ago

Kanwar Yatra: ಕನ್ವರ್ ಯಾತ್ರೆ ಮಾರ್ಗದಲ್ಲಿನ ಅಂಗಡಿ ಮಾಲೀಕರ ಹೆಸರು ಪ್ರದರ್ಶನಕ್ಕೆ ಸೂಚಿಸಿಲ್ಲ; ಮಧ್ಯಪ್ರದೇಶ ಸರ್ಕಾರ ಸ್ಪಷ್ಟನೆ

Boycott PhonePe
ವೈರಲ್ ನ್ಯೂಸ್40 mins ago

Boycott PhonePe: ತಾಕತ್ತಿದ್ರೆ ಫೋನ್ ಪೇ ತರಹದ ಕಂಪನಿ ಹುಟ್ಟುಹಾಕಿ; ಕನ್ನಡಿಗರ ವಿರುದ್ಧ ಯುವಕ ಆಕ್ರೋಶ! ವಿಡಿಯೊ ಇದೆ

Hombale Films Keerthy Suresh Talks 'Raghu Thatha' and Anti-Hindi Speculations
ಸ್ಯಾಂಡಲ್ ವುಡ್41 mins ago

Hombale Films: ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣದ ಸಿನಿಮಾದಲ್ಲಿ ಇರಲಿದ್ಯಾ ಹಿಂದಿ ಹೇರಿಕೆ ವಿವಾದ? ಕೀರ್ತಿ ಸುರೇಶ್‌ ಹೇಳಿದ್ದೇನು?

karnataka rain
ಮಳೆ47 mins ago

Karnataka Rain : ನಿರಂತರ ಮಳೆಗೆ ಮೈಸೂರಿನ ಒಲಂಪಿಯಾ ಚಿತ್ರಮಂದಿರದ ಗೋಡೆ ಕುಸಿತ; ನಾಲ್ವರು ಗಂಭೀರ

Gautam Gambhir
ಕ್ರೀಡೆ51 mins ago

Gautam Gambhir : ನನ್ನ ಎಲ್ಲ ಬೇಡಿಕೆಗಳಿಗೆ ಬಿಸಿಸಿಐ ಸಮ್ಮತಿಸಿದೆ; ಗೌತಮ್ ಗಂಭೀರ್​

Job Alert
ಉದ್ಯೋಗ2 hours ago

Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅಪ್ಲೈ ಮಾಡುವ ವಿಧಾನ ಇಲ್ಲಿದೆ

Nipah Virus
ದೇಶ2 hours ago

Nipah Virus: ಕೇರಳದಲ್ಲಿ ನಿಫಾ ಭೀತಿ; ಬಾಲಕ ಸಾವಿನ ಬೆನ್ನಲ್ಲೇ ಮತ್ತೆ 6 ಮಂದಿಯಲ್ಲಿ ಸೋಂಕು ಪತ್ತೆ

SS Rajamouli Modern Masters Official Trailer Netflix India
ಬಾಲಿವುಡ್2 hours ago

SS Rajamouli: ರಾಜಮೌಳಿಯನ್ನು ಜ್ಯೂನಿಯರ್‌ ಎನ್‌ಟಿಆರ್‌ ʻಮ್ಯಾಡ್‌ ಮ್ಯಾನ್‌ʼ ಎಂದು ಕರೆದಿದ್ದೇಕೆ? ವಿಡಿಯೊದಲ್ಲಿ ಏನಿದೆ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ2 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ3 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ3 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ4 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ6 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ7 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 week ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌