Assembly Session : ಸಿಎಂ ಸನ್ನೆ ಮಾಡಿದ್ದಕ್ಕೆ ಬಿಜೆಪಿ ಶಾಸಕರನ್ನು ಸ್ಪೀಕರ್ ಅಮಾನತು ಮಾಡಿದರು: ಎಚ್‌.ಡಿ. ಕುಮಾರಸ್ವಾಮಿ - Vistara News

ಕರ್ನಾಟಕ

Assembly Session : ಸಿಎಂ ಸನ್ನೆ ಮಾಡಿದ್ದಕ್ಕೆ ಬಿಜೆಪಿ ಶಾಸಕರನ್ನು ಸ್ಪೀಕರ್ ಅಮಾನತು ಮಾಡಿದರು: ಎಚ್‌.ಡಿ. ಕುಮಾರಸ್ವಾಮಿ

Assembly Session : ಬಿಜೆಪಿ ಕಾರ್ಯಕರ್ತರನ್ನು ಅಮಾನತು ಮಾಡಿದ್ದರ ಹಿಂದಿನ ಸತ್ಯಾಂಶದ ಬಗ್ಗೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಮಹಾಘಟಬಂಧನ ಕಾರ್ಯಕ್ರಮಕ್ಕೆ ಉನ್ನತ ಮಟ್ಟದ ಐಎಎಸ್‌ ಅಧಿಕಾರಿಗಳನ್ನು ಬಳಸಿಕೊಂಡಿದ್ದನ್ನು ಪ್ರಶ್ನೆ ಮಾಡಿ ವಿಧೇಯಕ ಪ್ರತಿಯನ್ನು ಹರಿದು ಸ್ಪೀಕರ್‌ ಕಡೆಗೆ ಎಸೆದಿದ್ದರು. ಇದಕ್ಕೆ ಸ್ಪೀಕರ್‌ ಅವರನ್ನು ಅಮಾನತು ಮಾಡಿದ್ದರು. ಆದರೆ, ಸಿಎಂ ಸಿದ್ದರಾಮಯ್ಯ ಸನ್ನೆ ಮಾಡಿದ ಬಳಿಕ ಸ್ಪೀಕರ್‌ ಈ ಕ್ರಮವನ್ನು ಕೈಗೊಂಡಿದ್ದಾರೆ ಎಂದು ಎಚ್‌ಡಿಕೆ ಆರೋಪ ಮಾಡಿದ್ದಾರೆ.

VISTARANEWS.COM


on

HD Kumaraswamy CM Siddaramaiah and UT Khadar on Assembly Session
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಧಾನ ಮಂಡಲ ಅಧಿವೇಶನ (Assembly Session) ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಸನ್ನೆ ಮಾಡಿದ್ದಕ್ಕೆ ಬಿಜೆಪಿ ಶಾಸಕರನ್ನು ಸ್ಪೀಕರ್ ಯು.ಟಿ. ಖಾದರ್‌ ಅಮಾನತು ಮಾಡಿದರು. ಸ್ಪೀಕರ್ ಉದ್ದೇಶ ಪೂರ್ವಕವಾಗಿ ಶಾಸಕರನ್ನು ಅಮಾನತು ಮಾಡಿದ್ದಾರೆ. ಹುಡುಗಾಟಿಕೆ ರೀತಿಯಲ್ಲಿ ಹೀಗೆ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಗಂಭೀರ ಆರೋಪ ಮಾಡಿದ್ದಾರೆ.

ಬಿಜೆಪಿಯ 10 ಸದಸ್ಯರನ್ನು ಅಮಾನತು ಮಾಡಿರುವ ಸ್ಪೀಕರ್‌ ಯು.ಟಿ. ಖಾದರ್‌ ಕ್ರಮವನ್ನು ಖಂಡಿಸಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ಕಾಂಗ್ರೆಸ್‌ ಸೇರಿದಂತೆ ದೇಶದ ಹಲವು ಪಕ್ಷಗಳು ಒಕ್ಕೂಟವನ್ನು ರಚಿಸಿಕೊಂಡು, ಅದಕ್ಕೆ “ಇಂಡಿಯಾ” ಎಂದು ದೇಶದ ಹೆಸರಿಟ್ಟು ಎರಡನೇ ದಿನಕ್ಕೆ ಪ್ರಜಾಪ್ರಭುತ್ವ ಕಗ್ಗೊಲೆ ಮಾಡಿದ್ದಾರೆ. ಸರ್ಕಾರದ ‌ಬಲ್ಡೋಜರ್‌ ನೀತಿ ಸರಿಯಲ್ಲ ಎಂದು ಹೇಳಿದರು.

ಇದನ್ನೂ ಓದಿ: Assembly Session : ಬಿಜೆಪಿ ರೌಡಿಗಿರಿಗೆ ಹೆದರಲ್ಲ; ಮಹಾಘಟಬಂಧನಕ್ಕೆ IAS ಅಧಿಕಾರಿಗಳ ಬಳಕೆ ತಪ್ಪಲ್ಲ: ಸಿದ್ದರಾಮಯ್ಯ

ಸಭಾಧ್ಯಕ್ಷರ ಪೀಠದಲ್ಲಿ ದಲಿತರು ಕುಳಿತುಕೊಂಡಿದ್ದಾರೆ ಎಂದು ಕಾಂಗ್ರೆಸ್ ಆರೋಪ ಮಾಡುವ ಮೂಲಕ ಕ್ಷುಲ್ಲಕ, ‌ಕೀಳು ಮಟ್ಟದ ಅಭಿರುಚಿ ತೋರಿಸಿದ್ದಾರೆ. ದಲಿತರ ಅನುಕಂಪ ಪಡೆಯಲು ಈ ರೀತಿ ಮಾಡುತ್ತಲಿದ್ದಾರೆ. ಆ ಪೀಠದಲ್ಲಿ ‌ಕುಳಿತಿರುವುದು ಉಪ ಸಭಾಧ್ಯಕ್ಷರಾಗಿದ್ದಾರೆ. ಬಿಜೆಪಿ ಸದಸ್ಯರ ಹೋರಾಟಕ್ಕೆ ನನ್ನ ಬೆಂಬಲ ಇದೆ. ಬಿಜೆಪಿಯವರು ನಾವು ಸೇರಿ ಹೋರಾಟ ಮಾಡುತ್ತಿದ್ದೇವೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ನಾವು ಹೀಗೆ ಮಾಡಿಲ್ಲ

ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆದ ಮಹಾಘಟಬಂಧನ ಸಭೆ ವಿಚಾರವಾಗಿ ರಾಜ್ಯ ಸರ್ಕಾರವು ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದೆ. ಐಎಎಸ್ ಅಧಿಕಾರಿಗಳನ್ನು ರಾಜಕೀಯ ಸಭೆಗೆ ಬಳಸಿಕೊಂಡಿದ್ದಾರೆ. ಸರ್ಕಾರದ ಹಿರಿಯ ಅಧಿಕಾರಿಗಳನ್ನು ದುರ್ಬಳಕೆ ‌ಮಾಡಿಕೊಳ್ಳಲಾಗಿದೆ. ಸದನದಲ್ಲಿ ಇಂದು ಜೆಡಿಎಸ್, ಬಿಜೆಪಿಯವರು ಈ ವಿಚಾರದ ಬಗ್ಗೆ ಚರ್ಚೆ ನಡೆಸಲು ಮುಂದಾದೆವು. ಆದರೆ, ಪ್ರತಿಷ್ಠೆಯಿಂದ ನಾವು ಮಾಡಿದ್ದೇ ಸರಿ ಎಂದು ಕಾಂಗ್ರೆಸ್‌ನವರು ನಡೆದುಕೊಂಡಿದ್ದಾರೆ. ನಾವು ಯಾವುದೇ ರೀತಿ ಗಣ್ಯರಿಗೆ ಭದ್ರತೆ ಕೊಡಲು ಅಧಿಕಾರಿಗಳನ್ನು ಬಳಸಿಕೊಂಡಿಲ್ಲ. ಪ್ರಮಾಣ ವಚನ ಕಾರ್ಯಕ್ರಮಕ್ಕೆ ಗಣ್ಯರನ್ನು ಸ್ವಾಗತಿಸಲು ಅಧಿಕಾರಿಗಳನ್ನು ಬಳಸಿಕೊಂಡಿಲ್ಲ. ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ಯಾವುದೇ ಶಿಷ್ಟಾಚಾರ ಉಲ್ಲಂಘನೆ ‌ಮಾಡಿಲ್ಲ. ಗುಲಮರಾನ್ನಾಗಿ ಅಧಿಕಾರಿಗಳನ್ನು ಯಾರ ಮನೆ ಬಾಗಿಲಿಗೂ‌ ಕಳುಹಿಸಿಲ್ಲ. ಈ ಸರ್ಕಾರದವರು ಸುಳ್ಳು ‌ಹೇಳಿದ್ದಾರೆ. ವಿರೋಧ ಪಕ್ಷಗಳನ್ನು ನೆಲಸಮ ಮಾಡಲು ಹೊರಟಿರೋದು ಸರ್ಕಾರದ ಉದ್ಧಟತನ. ಪ್ರಜಾಪ್ರಭುತ್ವ ವ್ಯವಸ್ಥೆಯ ಕಗ್ಗೊಲೆ. ಬಿಜೆಪಿ ನಾವು ಸೇರಿ ಹೋರಾಟ ಮಾಡ್ತಾ ಇದ್ದೇವೆ. ಕೆಲವು ಮಂತ್ರಿಗಳು, ಶಾಸಕರನ್ನು ಮುಗಿಸುವುದಾಗಿ ಸದನದಲ್ಲಿ ಹೇಳಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.

ಎಚ್‌.ಡಿ. ಕುಮಾರಸ್ವಾಮಿ ಮಾಡಿದ ಆರೋಪ ಏನು? ಇಲ್ಲಿದೆ ವಿಡಿಯೊ

ಇದನ್ನೂ ಓದಿ: Assembly Session : ಸಸ್ಪೆಂಡ್‌ ವಿರೋಧಿಸಿ ಬಿಜೆಪಿ, ಜೆಡಿಎಸ್‌ ಪ್ರತಿಭಟನೆ; ನಾಳೆ ರಾಜ್ಯಪಾಲರಿಗೆ ದೂರು

ವಿಧಾನಸಭೆ ಕಾರ್ಯದರ್ಶಿಗೆ ಪತ್ರ

ಇದೇ ವೇಳೆ ವಿಧಾನಸಭಾಧ್ಯಕ್ಷ ಯು.ಟಿ‌.‌ ಖಾದರ್ ವಿರುದ್ಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಅವಿಶ್ವಾಸ ಮಂಡಿಸಲು ಅವಕಾಶ ಕೋರಿ ವಿಧಾನಸಭೆ ಕಾರ್ಯದರ್ಶಿಗೆ ಪತ್ರ ಸಲ್ಲಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Drama Artist: ಶಕುನಿಯಾಗಿ ಘರ್ಜಿಸುತ್ತಿರುವಾಗಲೇ ಹೃದಯಾಘಾತ; ಮೊಬೈಲ್‌ನಲ್ಲಿ ಸೆರೆಯಾಯ್ತು ಕಲಾವಿದನ ಕೊನೆಯ ಕ್ಷಣ

Drama Artist: ನಾಟಕದಲ್ಲಿ ಅಭಿನಯಿಸುತ್ತಿರುವಾಗಲೇ ವೇದಿಕೆಯಲ್ಲೇ ಕುಸಿದು ಬಿದ್ದು ಕಲಾವಿದರೊಬ್ಬರು ಮೃತಪಟ್ಟಿದ್ದಾರೆ. ಎನ್.ಮುನಿಕೆಂಪಣ್ಣ (72) ಅವರು ಯಲಹಂಕದ ಸಾತನೂರು ಗ್ರಾಮದಲ್ಲಿ ʼಕುರುಕ್ಷೇತ್ರʼ ನಾಟಕ ಪ್ರದರ್ಶಿಸುತ್ತಿದ್ದ ವೇಳೆ ನಿಧನ ಹೊಂದಿದ್ದಾರೆ. ʼಕುರುಕ್ಷೇತ್ರʼ ನಾಟಕದಲ್ಲಿ ಮುನಿಕೆಂಪಣ್ಣ ಅವರು ಶಕುನಿ ಪಾತ್ರ ನಿರ್ವಹಿಸುತ್ತಿದ್ದರು. ಮಧ್ಯರಾತ್ರಿಯವರೆಗೂ ಅದ್ಬುತ ಪ್ರದರ್ಶನ ನೀಡಿದ ಅವರು ಒಂದು ಗಂಟೆಯ ವೇಳೆಗೆ ಇದ್ದಕ್ಕಿದ್ದಂತೆ ವೇದಿಕೆ ಮೇಲೆಯೇ ಕುಸಿದು ಬಿದ್ದಿದ್ದಾರೆ. ಸದ್ಯ ಅವರು ಕುಸಿದು ಬೀಳುತ್ತಿರುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ವೈರಲ್‌ ಆಗಿದೆ.

VISTARANEWS.COM


on

Drama Artist
Koo

ಯಲಹಂಕ: ನಾಟಕದಲ್ಲಿ ಅಭಿನಯಿಸುತ್ತಿರುವಾಗಲೇ ವೇದಿಕೆಯಲ್ಲೇ ಕುಸಿದು ಬಿದ್ದು ಕಲಾವಿದರೊಬ್ಬರು ಮೃತಪಟ್ಟಿದ್ದಾರೆ. ಎನ್.ಮುನಿಕೆಂಪಣ್ಣ (72) ಅವರು ಯಲಹಂಕದ ಸಾತನೂರು ಗ್ರಾಮದಲ್ಲಿ ʼಕುರುಕ್ಷೇತ್ರʼ ನಾಟಕ ಪ್ರದರ್ಶಿಸುತ್ತಿದ್ದ ವೇಳೆ ನಿಧನ ಹೊಂದಿದ್ದಾರೆ.

ʼಕುರುಕ್ಷೇತ್ರʼ ನಾಟಕದಲ್ಲಿ ಮುನಿಕೆಂಪಣ್ಣ ಅವರು ಶಕುನಿ ಪಾತ್ರ ನಿರ್ವಹಿಸುತ್ತಿದ್ದರು. ಮಧ್ಯರಾತ್ರಿಯವರೆಗೂ ಅದ್ಬುತ ಪ್ರದರ್ಶನ ನೀಡಿದ ಅವರು ಒಂದು ಗಂಟೆಯ ವೇಳೆಗೆ ಇದ್ದಕ್ಕಿದ್ದಂತೆ ವೇದಿಕೆ ಮೇಲೆಯೇ ಕುಸಿದು ಬಿದ್ದಿದ್ದಾರೆ. ಸದ್ಯ ಅವರು ಕುಸಿದು ಬೀಳುತ್ತಿರುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ವೈರಲ್‌ ಆಗಿದೆ.

ಹಿಂದೆ ಉಪನ್ಯಾಸಕರಾಗಿದ್ದ ಮುನಿಕೆಂಪಣ್ಣ ಅವರು ನಾಟಕದಲ್ಲಿ ಅಪಾರ ಆಸಕ್ತಿ ಹೊಂದಿದ್ದು, ಆಗಾಗ ವೇಷ ಹಚ್ಚುತ್ತಿರುತ್ತಾರೆ. ದೇವನಹಳ್ಳಿಯಲ್ಲಿ ನಡೆದ 28ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಹೃದಯಾಘಾತದಿಂದ ಮೃತಪಟ್ಟ ಮುನಿಕೆಂಪಣ್ಣ ಅವರ ಅಂತ್ಯ ಸಂಸ್ಕಾರ ಅವರ ಹುಟ್ಟೂರು ಅರದೇಶನಹಳ್ಳಿಯಲ್ಲಿ ನಡೆಯಲಿದೆ. ಇದಕ್ಕಾಗಿ ಸಿದ್ಧತೆ ಕೈಗೊಳ್ಳಲಾಗಿದೆ.

ವೇಷ ಕಳಚುತ್ತಿರುವಾಗಲೇ ಹೃದಯ ಸ್ತಬ್ಧ; ಯಕ್ಷಗಾನ ಕಲಾವಿದ ಇನ್ನಿಲ್ಲ

ಮಂಗಳೂರು: ವೇಷ ಕಳಚುತ್ತಿರುವಾಗಲೇ ಹೃದಯಾಘಾತದಿಂದ ಧರ್ಮಸ್ಥಳ ಯಕ್ಷಗಾನ ಮೇಳದ ಸವ್ಯಸಾಚಿ ಕಲಾವಿದ ಗಂಗಾಧರ ಪುತ್ತೂರು(60) ಅವರು ಇಹಲೋಕ ತ್ಯಜಿಸಿದ್ದಾರೆ. ಮೇ 1ರಂದು ರಾತ್ರಿ ಕೋಟ ಗಾಂಧಿಮೈದಾನದ ಬಳಿ ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಅವರು ಕುಕ್ಕಿಂತ್ತಾಯ ದೈವದ ವೇಷವನ್ನು ನಿರ್ವಹಿಸಿದ್ದರು. ಬಳಿಕ ಚೌಕಿಗೆ ಆಗಮಿಸಿ ಕಿರೀಟ, ಯಕ್ಷಗಾನದ ಆಭರಣ ತೆಗೆದಿಟ್ಟು, ಮುಖದ ಬಣ್ಣವನ್ನು ಅಳಿಸುತ್ತಿರುವಾಗ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಪುತ್ತೂರಿನ ಸೇಡಿಯಾಪು ನಿವಾಸಿಯಾಗಿರುವ ಇವರು ಏಳನೇ ತರಗತಿಯವರೆಗೆ ವಿದ್ಯಾಭ್ಯಾಸ ಹೊಂದಿದ್ದರು. ತಮ್ಮ 18ನೇ ವಯಸ್ಸಿಗೆ ಯಕ್ಷಗಾನ ತಿರುಗಾಟ ಆರಂಭಿಸಿದ ಗಂಗಾಧರ ಪುತ್ತೂರು ಸುದೀರ್ಘ 40 ವರ್ಷಗಳಷ್ಟು ಕಾಲ ಯಕ್ಷಗಾನ ರಂಗದಲ್ಲಿ ವ್ಯವಸಾಯ ಮಾಡಿದ್ದರು. ಕರ್ಗಲ್ಲು ವಿಶ್ವೇಶ್ವರ ಭಟ್ ಹಾಗೂ ಕೆ.ಗೋವಿಂದ ಭಟ್ ಅವರಿಂದ ನಾಟ್ಯಾಭ್ಯಾಸ ಮಾಡಿದರು.

ಯಕ್ಷಗಾನ ರಂಗದ ಸವ್ಯಸಾಚಿ ಕಲಾವಿದರಾದ ಇವರು ಸ್ತ್ರೀವೇಷದಿಂದ ಹಿಡಿದು ಪುಂಡುವೇಷ, ರಾಜವೇಷ, ಹೆಣ್ಣುಬಣ್ಣ ಸಮರ್ಥವಾಗಿ ನಿರ್ವಹಿಸುತ್ತಿದ್ದರು. 30 ವರ್ಷಗಳಿಗಿಂತಲೂ ಅಧಿಕ ಕಾಲದಿಂದ ಗಂಗಾಧರ ಪುತ್ತೂರು ಧರ್ಮಸ್ಥಳ ಮೇಳದಲ್ಲಿಯೇ ಕಲಾವಿದರಾಗಿ ತಿರುಗಾಟ ಮಾಡಿದ್ದರು.

ಇದನ್ನೂ ಓದಿ: Srinivas Prasad: ತೀವ್ರ ಹೃದಯಾಘಾತದಿಂದ ಹಿರಿಯ ಸಂಸದ ಶ್ರೀನಿವಾಸ್‌ ಪ್ರಸಾದ್‌ ವಿಧಿವಶ

Continue Reading

ಪ್ರಮುಖ ಸುದ್ದಿ

Prajwal Revanna Case: ಕಾಣದಂತೆ ಮಾಯವಾದ ಎಚ್‌ಡಿ ರೇವಣ್ಣ ! ಇಂದು ಜಾಮೀನು ಸಿಗದೇ ಹೋದರೆ….

Prajwal Revanna Case: ರೇವಣ್ಣಗೆ ಎಸ್ಐಟಿ ಮುಂದೆ ಹಾಜರಾಗಲು ನೋಟೀಸ್ ನೀಡಲಾಗಿದೆ. ಆದರೆ ಕಳೆದ ಎರಡು ದಿನಗಳಿಂದ ರೇವಣ್ಣ ನಾಪತ್ತೆಯಾಗಿದ್ದಾರೆ. ಅವರು ಅತ್ತ ಎಚ್.ಡಿ ದೇವೇಗೌಡರ ನಿವಾಸದಲ್ಲಿಯಾಗಲೀ, ಈತ್ತ ಬಸವನಗುಡಿಯ ತಮ್ಮ ನಿವಾಸದಲ್ಲಿಯಾಗಲೀ, ಹಾಸನದ ಎರಡು ನಿವಾಸಗಳಲ್ಲಾಗಲೀ ಇಲ್ಲ.

VISTARANEWS.COM


on

hd revanna prajwal revanna case
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್‌ ರೇವಣ್ಣ (Prajwal Revanna Case) ಲೈಂಗಿಕ ಹಗರಣದಲ್ಲಿ (Physical Abuse) ಎಸ್‌ಐಟಿ (SIT) ಮುಂದೆ ವಿಚಾರಣೆಗೆ ಬೇಕಾಗಿರುವ ಮಾಜಿ ಸಚಿವ, ಜೆಡಿಎಸ್‌ ನಾಯಕ ಎಚ್‌.ಡಿ ರೇವಣ್ಣ (HD Revanna) ಅವರು ವಿಶೇಷ ತನಿಖಾ ತಂಡ ಹಾಗು ಪೊಲೀಸರ ಯಾವ ನೋಟಕ್ಕೂ ಸಿಗದೇ ಗುಪ್ತ ಸ್ಥಳಕ್ಕೆ ತೆರಳಿದ್ದು, ಎರಡು ದಿನಗಳಿಂದ ಎಲ್ಲೂ ಕಾಣಿಸಿಕೊಂಡಿಲ್ಲ. ಇಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಅವರ ಜಾಮೀನು ಅರ್ಜಿ (Bail plea) ವಿಚಾರಣೆಗೆ ಬರಲಿದೆ.

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ (Pen Drive Case) ಪ್ರಕರಣದಲ್ಲಿ ರೇವಣ್ಣಗೆ ಎಸ್ಐಟಿ ಮೂರನೇ ನೋಟೀಸ್ ಹಾಗೂ ಕೊನೆಗೆ ಲುಕೌಟ್ ನೋಟೀಸ್ (Lookout notice) ಜಾರಿಯಿಂದಾಗಿ ಮತ್ತಷ್ಟು ಸಂಕಷ್ಟ ಎದುರಾಗಿದೆ. ರೇವಣ್ಣ ಅವru ವಿದೇಶಕ್ಕೆ ಹಾರಬಹುದು ಎಂಬ ಮುಂದಾಲೋಚನೆಯಿಂದ ಲುಕೌಟ್‌ ನೋಟೀಸ್‌ ಜಾರಿ ಮಾಡಲಾಗಿದ್ದು, ಈಗ ಅವರು ಯಾವುದೇ ಏರ್‌ಪೋರ್ಟ್‌ ಮೂಲಕ ಹಾದು ಹೋಗಲು ಸಾಧ್ಯವಿಲ್ಲದಾಗಿದೆ.

ವಿದೇಶದಲ್ಲಿದ್ದುಕೊಂಡು ಲೈಂಗಿಕ ಹಗರಣ (Pen drive case) ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿರುವ ಪ್ರಜ್ವಲ್ ರೇವಣ್ಣ (Prajwal Revanna Case) ವಿರುದ್ಧ ರೆಡ್ ಕಾರ್ನರ್ ನೊಟೀಸ್ (Red Corner Notice) ಜಾರಿ ಮಾಡಲು ಎಸ್‌ಐಟಿ (SIT) ಸಿದ್ಧತೆ ನಡೆಸಿದೆ ಎನ್ನಲಾಗಿದ್ದು, ಇನ್ನೊಂದೆಡೆ ಭವಾನಿ ರೇವಣ್ಣ ಅವರಿಗೂ ವಿಚಾರಣೆಗೆ ಎಸ್‌ಐಟಿ ಬುಲಾವ್‌ ಮಾಡಿದೆ.

ಸದ್ಯ ರೇವಣ್ಣ ವಿರುದ್ಧ ತನಿಖೆಗೆ ಒಳಗಾಗಬೇಕಾದ ಗಂಭೀರ ಆರೋಪವಿದೆ. ಮೈಸೂರಿನಲ್ಲಿ ಸಂತ್ರಸ್ತೆಯ ಪುತ್ರ ರೇವಣ್ಣ ವಿರುದ್ಧ ಕಿಡ್ನಾಪ್ ಪ್ರಕರಣ ದಾಖಲು ಮಾಡಿದ್ದಾರೆ. ಹೀಗಾಗಿ ರೇವಣ್ಣಗೆ ಎಸ್ಐಟಿ ಮುಂದೆ ಹಾಜರಾಗಲು ನೋಟೀಸ್ ನೀಡಲಾಗಿದೆ. ಆದರೆ ಕಳೆದ ಎರಡು ದಿನಗಳಿಂದ ರೇವಣ್ಣ ನಾಪತ್ತೆಯಾಗಿದ್ದಾರೆ. ಅವರು ಅತ್ತ ಎಚ್.ಡಿ ದೇವೇಗೌಡರ ನಿವಾಸದಲ್ಲಿಯಾಗಲೀ, ಈತ್ತ ಬಸವನಗುಡಿಯ ತಮ್ಮ ನಿವಾಸದಲ್ಲಿಯಾಗಲೀ, ಹಾಸನದ ಎರಡು ನಿವಾಸಗಳಲ್ಲಾಗಲೀ ಇಲ್ಲ.

ಹೀಗಾಗಿ ಅವರು ಬಂಧನದ ಭೀತಿಯಿಂದ ಅಜ್ಞಾತ ಸ್ಥಳಕ್ಕೆ ಎಸ್ಕೇಪ್ ಆಗಿರಬಹುದು ಎಂದು ಶಂಕೆಯನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಸದ್ಯ ರೇವಣ್ಣ ಅವರಿಗೆ ಬಂಧನದ ಭಯ ಕಾಡುತ್ತಿದೆ. ಕಿಡ್ನಾಪ್ ಪ್ರಕರಣದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ತೀರ್ಪು ನೋಡಿಕೊಂಡು ನಿರ್ಧಾರ ಮಾಡಲಿದ್ದಾರೆ. ಜಾಮೀನು ಸಿಕ್ಕರೆ ಎಸ್ಐಟಿ ಮುಂದೆ ಬರುವುದು, ಇಲ್ಲವೇ ಮೇಲಿನ ಕೋರ್ಟ್ ಮೊರೆ ಹೋಗೋಣ ಎಂದು ರೇವಣ್ಣ ಪರ ವಕೀಲರು ಹೇಳಿದ್ದಾರೆ.

ಇಂದು ಜಾಮೀನು ಅರ್ಜಿ ವಿಚಾರಣೆ

ಮಹಿಳೆಯೊಬ್ಬರನ್ನು ಅಪಹರಣ ಮಾಡಿ ಅಕ್ರಮ ಬಂಧನದಲ್ಲಿಟ್ಟಿದ್ದ ಆರೋಪದ ಮೇಲೆ ಮೈಸೂರಿನ ಕೆ.ಆರ್.‌ ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಇಂದು (ಶನಿವಾರ) ನಡೆಸಲಿದೆ. ಇದೇ ವೇಳೆ ರೇವಣ್ಣ ಶನಿವಾರ ಎಸ್‌ಐಟಿ ಮುಂದೆ ಹಾಜರಾಗಲು ಸಿದ್ಧರಿದ್ದಾರೆ ಎಂದು ಅವರ ಪರ ವಕೀಲರು ಕೋರ್ಟ್‌ಗೆ ತಿಳಿಸಿದ್ದಾರೆ. ಎರಡನೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಚ್.ಡಿ. ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿಶೇಷ ಸಾರ್ವಜನಿಕ ಅಭಿಯೋಜಕರಿಗೆ ನೋಟಿಸ್‌ ನೀಡಿದೆ. ಬಳಿಕ ವಿಚಾರಣೆಯನ್ನು ಶನಿವಾರಕ್ಕೆ (ಮೇ 4) ಮುಂದೂಡಿದೆ.

ಈ ವೇಳೆ ಎಚ್.ಡಿ. ರೇವಣ್ಣ ಪರ ವಕೀಲರಾದ ಮೂರ್ತಿ ಡಿ ನಾಯ್ಕ್ ವಾದ ಮಂಡಿಸಿದ್ದು, ಕೆ.ಆರ್. ನಗರ ಠಾಣೆಯ ಎಫ್ಐಆರ್‌ನಲ್ಲಿ ಜಾಮೀನು ರಹಿತ ಸೆಕ್ಷನ್‌ಗಳಿವೆ. 364 A, ಅಪಹರಣ, 364 ಅಕ್ರಮ ಬಂಧನದಡಿ ಕೇಸ್‌ ದಾಖಲು ಮಾಡಲಾಗಿದೆ. ಇವುಗಳು ಜಾಮೀನು ರಹಿತವಾಗಿವೆ ಎಂದು ದೂರಿನ ಸಾರಾಂಶವನ್ನು ಓದಿ ತಿಳಿಸಿದರು. ಅಲ್ಲದೆ, ಈ ದೂರಿನಲ್ಲಿ ಮಹಿಳೆಯ ಹೆಸರನ್ನೇ ಉಲ್ಲೇಖಿಸಿಲ್ಲ. ಇನ್ನು ನಾಳೆ ಎಸ್ಐಟಿ ಮುಂದೆ ಎಚ್.ಡಿ. ರೇವಣ್ಣ ಹಾಜರಾಗಲು ಸಿದ್ಧರಿದ್ದಾರೆ. ಹೀಗಾಗಿ ಈ ಪ್ರಕರಣದಲ್ಲಿ ಮಧ್ಯಂತರ ಜಾಮೀನು ನೀಡಬೇಕು ಎಂದು ಮನವಿ ಮಾಡಿದರು. ವಾದ ಆಲಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್, ಶನಿವಾರ ಬೆಳಗ್ಗೆ 11 ಗಂಟೆಗೆ ವಿಚಾರಣೆಯನ್ನು ಮುಂದೂಡಿದ್ದು, ಎಸ್ಐಟಿ ಪರ ಎಸ್‌ಪಿಪಿಗೆ ಕೋರ್ಟ್ ನೋಟಿಸ್ ನೀಡಿದ್ದಾರೆ.

ಇದನ್ನೂ ಓದಿ: Prajwal Revanna Case: ಹಾಸನ ಸಂಸದರ ನಿವಾಸದ ಗೇಟಿಗೆ ಬೀಗ; ನಿವಾಸದ ಕೀ ನಾಪತ್ತೆ! ಎಚ್‌ಡಿ ರೇವಣ್ಣ ಕೂಡ ಗಾಯಬ್!‌

Continue Reading

ಕ್ರೈಂ

Prajwal Revanna Case: ಹಾಸನ ಸಂಸದರ ನಿವಾಸದ ಗೇಟಿಗೆ ಬೀಗ; ನಿವಾಸದ ಕೀ ನಾಪತ್ತೆ! ಎಚ್‌ಡಿ ರೇವಣ್ಣ ಕೂಡ ಗಾಯಬ್!‌

Prajwal Revanna Case: ಸಂಸದರ ನಿವಾಸಕ್ಕೂ ಬೀಗ ಬಿದ್ದಿದ್ದು, ಬೀಗದ ಕೀ ಯಾರ ಬಳಿ ಇದೆ ಎಂಬುದು ನಿಗೂಢವಾಗಿದೆ. ಇಂದು ಸಂತ್ರಸ್ತೆ ಜೊತೆ SIT ತಂಡ ಸ್ಥಳ ಮಹಜರು ಮಾಡುವ ಸಾಧ್ಯತೆ ಇದೆ. ಆದರೆ ಕಳೆದೊಂದು ವಾರದಿಂದ ಸಂಸದರ ನಿವಾಸಕ್ಕೆ ಬೀಗ ಬಿದ್ದಿದ್ದು, ಮೇಟಿ ಕುಟುಂಬವೂ ಕಣ್ಮರೆಯಾಗಿದೆ. ಸ್ಥಳ ಮಹಜರಿಗೆ ಸಂಸದರ ಕಚೇರಿ ಬೀಗದ ಕೀ ಯಾರ ಬಳಿ ಇದೆ ಎಂಬುದು ಗೊತ್ತಾಗಿಲ್ಲ.

VISTARANEWS.COM


on

prajwal revanna case hassan MP home
Koo

ಹಾಸನ: ಹಾಸನ ಸಂಸದ (Hassan MP) ಪ್ರಜ್ವಲ್‌ ರೇವಣ್ಣ (Prajwal Revanna Case) ನಿವಾಸದಲ್ಲೇ ನಿವಾಸದಲ್ಲೇ ಅತ್ಯಾಚಾರ (Physical abuse) ನಡೆದಿರುವ ಬಗ್ಗೆ ದೂರು ನೀಡಲಾಗಿರುವ ಹಿನ್ನೆಲೆಯಲ್ಲಿ, ಸಂಸದರ ನಿವಾಸದ ಗೇಟ್‌ಗೆ ನಿನ್ನೆ ಬೀಗ ಜಡಿಯಲಾಗಿದೆ. ಇನ್ನೊಂದು ಕಡೆ ಲುಕೌಟ್‌ ನೋಟೀಸ್‌ (Lokkout notice) ಹೊರಡಿಸಿದರೂ ಪ್ರಕರಣ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಮಾಜಿ ಸಚಿವ ಎಚ್‌ಡಿ ರೇವಣ್ಣ (HD Revanna) ತಲೆ ಮರೆಸಿಕೊಂಡಿದ್ದಾರೆ. ಭವಾನಿ ರೇವಣ್ಣ (Bhavani Revanna) ಅವರಿಗೂ ವಿಚಾರಣೆಗೆ ಎಸ್‌ಐಟಿ ಬುಲಾವ್‌ ಮಾಡಿದೆ.

ಸಂಸದರ ನಿವಾಸದ ರೂಮ್‌ನಲ್ಲಿ ಅತ್ಯಾಚಾರ ನಡೆಸಲಾಗಿದೆ ಎಂದು ಪ್ರಜ್ವಲ್ ರೇವಣ್ಣ‌ ವಿರುದ್ಧ ಅತ್ಯಾಚಾರದ ದೂರು ನೀಡಿದ್ದ ಮಹಿಳೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. CID ಪೊಲೀಸರ ಮುಂದೆ, ಸಂಸದರ ನಿವಾಸದಲ್ಲಿ ಅತ್ಯಾಚಾರ ನಡೆಸಲಾಗಿದೆ ಎಂದು ದೂರು ನೀಡಲಾಗಿದೆ. ಹೀಗಾಗಿ ಸಾಕ್ಷಿ ನಾಶದ ಆತಂಕದ ಹಿನ್ನೆಲೆಯಲ್ಲಿ ಸಂಸದರ ನಿವಾಸದ ಆವರಣಕ್ಕೆ ಪ್ರವೇಶ ನಿರ್ಬಂಧಿಸಿ ಗೇಟಿಗೆ ಬೀಗ ಹಾಕಲಾಗಿದೆ. SIT ತಂಡ ತನಿಖೆಗೆ ಆಗಮಿಸುವ ಹಿನ್ನೆಲೆಯಲ್ಲಿ ಪೊಲೀಸರು ಬೀಗ ಹಾಕಿದ್ದಾರೆ.

ಸಂಸದರ ನಿವಾಸಕ್ಕೂ ಬೀಗ ಬಿದ್ದಿದ್ದು, ಬೀಗದ ಕೀ ಯಾರ ಬಳಿ ಇದೆ ಎಂಬುದು ನಿಗೂಢವಾಗಿದೆ. ಇಂದು ಸಂತ್ರಸ್ತೆ ಜೊತೆ SIT ತಂಡ ಸ್ಥಳ ಮಹಜರು ಮಾಡುವ ಸಾಧ್ಯತೆ ಇದೆ. ಆದರೆ ಕಳೆದೊಂದು ವಾರದಿಂದ ಸಂಸದರ ನಿವಾಸಕ್ಕೆ ಬೀಗ ಬಿದ್ದಿದ್ದು, ಮೇಟಿ ಕುಟುಂಬವೂ ಕಣ್ಮರೆಯಾಗಿದೆ. ಸ್ಥಳ ಮಹಜರಿಗೆ ಸಂಸದರ ಕಚೇರಿ ಬೀಗದ ಕೀ ಯಾರ ಬಳಿ ಇದೆ ಎಂಬುದು ಗೊತ್ತಾಗಿಲ್ಲ.

ರೇವಣ್ಣಗೂ ಲುಕ್‌ಔಟ್‌ ನೋಟೀಸ್‌

ಪ್ರಕರಣದ ಪ್ರಮುಖ ಆರೋಪಿ, ಮಾಜಿ ಸಚಿವ ಎಚ್.ಡಿ. ರೇವಣ್ಣ ವಿರುದ್ಧವೂ ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಪ್ರಕರಣ ದಾಖಲಾಗಿದೆ. ಕಳೆದ ಎರಡು ದಿನಗಳಿಂದ ಎಚ್.ಡಿ. ರೇವಣ್ಣ ಕಾಣಿಸಿಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್‌ ಅನ್ನು ಜಾರಿ ಮಾಡಿದ್ದಾರೆ.

ಕೆ. ಆರ್. ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಡಿ ಲುಕ್ ಔಟ್ ನೋಟಿಸ್‌ ಅನ್ನು ಜಾರಿ ಮಾಡಲಾಗಿದೆ. ಈಗ ಎಚ್.ಡಿ. ರೇವಣ್ಣ ಸಹ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದ್ದು, ದೇಶ ಬಿಟ್ಟು ಹೋಗುವ ಸಾಧ್ಯತೆ ಇದೆ. ಒಂದು ವೇಳೆ ಅವರು ದೇಶ ಬಿಟ್ಟು ಹೋದರೆ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಲಿದೆ. ಇದೊಂದು ಹೈಪ್ರೊಫೈಲ್‌ ಕೇಸ್‌ ಆಗಿದ್ದು, ಸೂಕ್ಷ್ಮವಾಗಿ ತನಿಖೆ ನಡೆಸಬೇಕಿದೆ. ಹೀಗಾಗಿ ಎಸ್‌ಐಟಿ ಅಧಿಕಾರಿಗಳು ಎಲ್ಲ ಆಯಾಮಗಳಲ್ಲಿಯೂ ತನಿಖೆ ಮಾಡುತ್ತಿದ್ದಾರೆ.

ಇದರ ಜತೆಗೆ ರೇವಣ್ಣ ಅವರಿಗೆ ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ನೋಟಿಸ್‌ ನೀಡುತ್ತಲೇ ಬರಲಾಗಿದೆ. ಇಷ್ಟಾದರೂ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಎಸ್‌ಐಟಿ ಲುಕ್‌ಔಟ್‌ ನೋಟಿಸ್‌ ಜಾರಿಗೊಳಿಸಿದೆ.

ಭವಾನಿಗೂ ಬುಲಾವ್‌

ಅಪ್ಪ ಮಗನ ಬಳಿಕ ಭವಾನಿ ರೇವಣ್ಣಗೂ ಎಸ್ಐಟಿ‌ ನೊಟೀಸ್ ಕಳಿಸಿದೆ. ಕೆಆರ್ ನಗರ ಠಾಣೆಯಲ್ಲಿ ದಾಖಲಾದ ಕಿಡ್ನಾಪ್ ಪ್ರಕರಣ ಸಂಬಂಧ ಭವಾನಿ ರೇವಣ್ಣಗೆ ಎಸ್ಐಟಿ ನೊಟೀಸ್ ಕಳಿಸಿದ್ದು, ಇಂದು ವಿಚಾರಣೆಗೆ ಹಾಜರಾಗಲು ಸೂಚಿಸಿದೆ. ಕಿಡ್ನಾಪ್ ಪ್ರಕರಣದಲ್ಲಿ ಭವಾನಿ ‌ರೇವಣ್ಣ ಸಂಬಂಧಿ ಸತೀಶ್ ಬಾಬು ಎಂಬಾತನ ಬಂಧನ ಆಗಿದೆ.

ಪ್ರಮುಖ ಆರೋಪಿ ಎಚ್‌.ಡಿ. ರೇವಣ್ಣ (HD Revanna) ವಿರುದ್ಧವೂ ಈಗ ಎಸ್‌ಐಟಿ ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದೆ. ದೇಶ ಬಿಟ್ಟು ಹೋಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಲುಕ್‌ಔಟ್ ನೋಟಿಸ್ (Lookout Notice) ಜಾರಿ ಮಾಡಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: Prajwal Revanna Case: ವಿದೇಶದಿಂದ ಪ್ರಜ್ವಲ್‌ ರೇವಣ್ಣ ಎಳೆತರಲು ರೆಡ್‌ ಕಾರ್ನರ್‌ ನೋಟಿಸ್?‌ ಭವಾನಿ ರೇವಣ್ಣಗೂ ವಿಚಾರಣೆಗೆ ಬುಲಾವ್

Continue Reading

ಕ್ರೈಂ

Robbery Case: ಕಾರು ತಪಾಸಣೆ ನೆಪದಲ್ಲಿ ಸುಲಿಗೆ; ಪೊಲೀಸರ ವಿರುದ್ಧವೇ ಕೇಳಿ ಬಂತು ಗಂಭೀರ ಆರೋಪ

Robbery Case: ಕಾರಿನಲ್ಲಿ ಮಲಗಿದ್ದವನನ್ನು ಎಚ್ಚರಿಸಿ ಪೊಲೀಸರು ಸುಲಿಗೆ ಮಾಡಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ. ಸದ್ಯ ತಲಘಟ್ಟಪುರ ಪೊಲೀಸರ ಮೇಲೆ ಇಂತಹ ಗಂಭೀರ ಆರೋಪ ಕೇಳಿ ಬಂದಿದ್ದು, ತನ್ನ ಕಾರು ಪರಿಶೀಲಿಸಿ ಸುಲಿಗೆ ಮಾಡಲಾಗಿದೆ ಎಂದು ವ್ಯಕ್ತಿಯೊಬ್ಬರು ದೂರಿದ್ದಾರೆ. ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

VISTARANEWS.COM


on

Robbery Case
Koo

ಬೆಂಗಳೂರು: ತಮ್ಮ ಕಾರಲ್ಲೂ ಆರಾಮಾಗಿ ಮಲಗೋ ಹಾಗಿಲ್ವಾ? ಸದ್ಯ ಹೀಗೊಂದು ಪ್ರಶ್ನೆ ಬೆಂಗಳೂರಿಗರನ್ನು ಕಾಡುತ್ತಿದೆ. ಯಾಕೆಂದರೆ ಕಾರಿನಲ್ಲಿ ಮಲಗಿದ್ದವನನ್ನು ಎಚ್ಚರಿಸಿ ಪೊಲೀಸರು ಸುಲಿಗೆ ಮಾಡಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ (Robbery Case).

ಸದ್ಯ ತಲಘಟ್ಟಪುರ ಪೊಲೀಸರ ಮೇಲೆ ಇಂತಹ ಗಂಭೀರ ಆರೋಪ ಕೇಳಿ ಬಂದಿದ್ದು, ತನ್ನ ಕಾರು ಪರಿಶೀಲಿಸಿ ಸುಲಿಗೆ ಮಾಡಲಾಗಿದೆ ಎಂದು ವ್ಯಕ್ತಿಯೊಬ್ಬರು ದೂರಿದ್ದಾರೆ. ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಏನಿದು ಪ್ರಕರಣ?

ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಮ್ಮ ಕಾರು ನಿಲ್ಲಿಸಿದ ವ್ಯಕ್ತಿಯೊಬ್ಬರು ಅದರಲ್ಲಿ ಮಲಗಿದ್ದರು. ಈ ವೇಳೆ ಕಾರು ತಪಾಸಣೆ ನಡೆಸಬೇಕು ಎಂದು ಪೊಲೀಸ್ ಸಿಬ್ಬಂದಿ ಮಹಾದೇವ್ ನಾಯಕ್ ಹಾಗೂ ಅಂಜನಪ್ಪ ಆ ವ್ಯಕ್ತಿಯನ್ನು ಏಬ್ಬಿಸಿದ್ದರು. ʼʼಬಳಿಕ ಕಾರು ಪರಿಶೀಲಿಸದಾಗ ಇ ಸಿಗರೇಟ್(ವೇಫರ್) ಕಂಡು ಬಂದಿತ್ತು. ಇ ಸಿಗರೇಟು ಇಟ್ಟುಕೊಂಡರೆ ಒಂದು ಲಕ್ಷ ರೂ. ದಂಡ ಕಟ್ಟಬೇಕು ಎಂದು ಪೊಲೀಸ್ ಸಿಬ್ಬಂದಿ ಮಹಾದೇವ್ ನಾಯಕ್ ಹಾಗೂ ಅಂಜನಪ್ಪ ಹೇಳಿದ್ದರುʼʼ ಎಂದು ವ್ಯಕ್ತಿ ಆರೋಪಿಸಿದ್ದಾರೆ.

ʼʼಸ್ಥಳದಲ್ಲೇ 50 ಸಾವಿರ ರೂ. ಕಟ್ಟಿದ್ರೆ ಬಿಟ್ಟು ಬಿಡುತ್ತೇವೆ ಎಂದು ಸಿಬ್ಬಂದಿ ಹೇಳಿದರು. ಸಾಧ್ಯವಿಲ್ಲ ಎಂದಾಗ 50 ರೂ.ಯಿಂದ 10 ಸಾವಿರ ರೂ.ಗೆ ಪೊಲೀಸ್ ಸಿಬ್ಬಂದಿ ಬೇಡಿಕೆ ಇಟ್ಟಿದ್ದಾರೆ. ಸದ್ಯ ಕೈಯಲ್ಲಿ ಹಣ ಇಲ್ಲವೆಂದು ಹಣ ಕಟ್ಟಲು ನಿರಾಕರಿಸಿದ್ದೆʼʼ ಎಂದು ಅವರು ಹೇಳಿದ್ದಾರೆ.

ನಂತರ ಪರಿಚಿತರ ಬಳಿಯಿಂದ ಹಣ ಹಾಕಿಸಿಕೊಳ್ಳುವಂತೆಯೂ ಪೊಲೀಸರು ಸಲಹೆ ನೀಡಿದ್ದರಂತೆ. ಈ ವೇಳೆ ಅಂಜನಪ್ಪ ಮತ್ತು ಮಹಾದೇವ್ ನಾಯಕ್ ಮಾತನಾಡಿರುವ ಆಡಿಯೋ ಲಭ್ಯವಾಗಿದೆ. ಸಿದ್ದರಾಜು ಎಂಬುವರೊಂದಿಗೆ ಮಾತನಾಡಿದ್ದ ಪೊಲೀಸರು ಕೊನೆಗೆ ಸದ್ಯ ಐದು ಸಾವಿರ ರೂ. ಕೊಡಿ ಉಳಿದ ಐದು ಸಾವಿರ ರೂ. ಮತ್ತೆ ಪಾವತಿಸುವಂತೆ ಹೇಳಿದ್ದರು. ʼʼಕೊನೆಗೂ ಒಂದು ಸಾವಿರ ರೂ. ಮತ್ತು ಇ ಸಿಗರೇಟ್ ತೆಗೆದುಕೊಂಡ ಪೊಲೀಸರು ಹೊರಟು ಹೋಗಿದ್ದಾರೆ. ಜತೆಗೆ ಸಂಬಳ ಬಂದ ಮೇಲೆ ಹಣ ಕಳಿಸುವಂತೆ ಫೋನ್‌ ನಂಬರ್ ಕೊಟ್ಟು ಕಳಿಸಿದ್ದಾರೆʼʼ ಎಂದು ವ್ಯಕ್ತಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Assault Case : ಆಫೀಸ್‌ನಲ್ಲಿ ಟಾರ್ಚರ್‌ ಕೊಟ್ಟ ಮೇಲಾಧಿಕಾರಿಗೆ ಸುಪಾರಿ ಕೊಟ್ಟು ಹೊಡೆಸಿದ್ರು ಸಿಬ್ಬಂದಿ!

ನೀರು ಕೇಳುವ ನೆಪದಲ್ಲಿ ದರೋಡೆ

ತುಮಕೂರು: ಪಿಸ್ತೂಲ್‌ನಿಂದ ಫೈರ್ ಮಾಡಿ ಸುಲಿಗೆಗೆ ಯತ್ನಿಸಿದ ಜಾರ್ಖಂಡ್ ಮೂಲದ ಇಬ್ಬರು ಆರೋಪಿಗಳನ್ನು (Robbery Case) ಪೊಲೀಸರು ಬಂಧಿಸಿದ್ದಾರೆ. ಏಜಾಸ್ ಮಿರ್ದಹ (30), ಸಹಿಬುಲ್ ಅನ್ಸಾರಿ (30) ಬಂಧಿತ ಆರೋಪಿಗಳು. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಉರ್ಕೆಹಳ್ಳಿ ಗ್ರಾಮದಲ್ಲಿ ಗಂಗಣ್ಣ ಎಂಬುವರ ತೋಟದ ಮನೆಯಲ್ಲಿ ಸುಲಿಗೆಗೆ ಮುಂದಾಗಿದ್ದರು. ಕಳೆದ ಮಾ. 26ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಕುಡಿಯಲು ನೀರು ಕೇಳುವ ನೆಪದಲ್ಲಿ ಎಂಟ್ರಿ ಕೊಟ್ಟಿದ್ದರು.

ನೀರು ತರಲು ಹೋದಾಗ ಮನೆಯೊಳಗೆ ನುಗ್ಗಿ, ಹಣ ದೋಚಲು ಯತ್ನಿಸಿದ್ದರು. ಈ ವೇಳೆ ಆರೋಪಿಗಳನ್ನು ಹಿಡಿಯಲು ಹೋದ ಮನೆ ಮಾಲೀಕ ಗಂಗಣ್ಣನ ಮೇಲೆ ಪಿಸ್ತೂಲ್‌ನಿಂದ ಫೈರ್ ಮಾಡಿ, ಎಸ್ಕೇಪ್ ಆಗಿದ್ದರು. ಈ ವೇಳೆ ಗಂಗಣ್ಣ ಕಾಲಿಗೆ ಪೆಟ್ಟಾಗಿತ್ತು. ಪ್ರಕರಣ ಸಂಬಂಧ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದ ಕುಣಿಗಲ್ ಪೊಲೀಸರು, ದೂರು ದಾಖಲಿಸಿಕೊಂಡು ತನಿಖೆಗಿಳಿದಿದ್ದರು. ಸುಲಿಗೆ ಮಾಡಲು ಯತ್ನಿಸಿದ ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Continue Reading
Advertisement
Urfi Javed magical butterflies dress Samantha reacts
ಬಾಲಿವುಡ್31 seconds ago

Urfi Javed: ಉರ್ಫಿ ʻಮ್ಯಾಜಿಕ್ʼ ಡ್ರೆಸ್‌ಗೆ ಸಮಂತಾ ಮೆಚ್ಚುಗೆ; ಗೌನ್‌ನಿಂದ ಹಾರಿತು ಬಣ್ಣದ ಚಿಟ್ಟೆ!

IPL 2024
ಕ್ರೀಡೆ11 mins ago

IPL 2024: ಬರೋಬ್ಬರಿ 12 ವರ್ಷಗಳ ಬಳಿಕ ವಾಂಖೆಡೆಯಲ್ಲಿ ಗೆಲುವು ಸಾಧಿಸಿದ ಕೆಕೆಆರ್​

Drama Artist
ಕರ್ನಾಟಕ11 mins ago

Drama Artist: ಶಕುನಿಯಾಗಿ ಘರ್ಜಿಸುತ್ತಿರುವಾಗಲೇ ಹೃದಯಾಘಾತ; ಮೊಬೈಲ್‌ನಲ್ಲಿ ಸೆರೆಯಾಯ್ತು ಕಲಾವಿದನ ಕೊನೆಯ ಕ್ಷಣ

Amith Shah
ದೇಶ22 mins ago

Amit Shah: ತೆಲಂಗಾಣದಲ್ಲಿ ಗೃಹಸಚಿವ ಅಮಿತ್ ಶಾ ವಿರುದ್ಧ FIR ದಾಖಲು

Porbandar Tour
ಪ್ರವಾಸ27 mins ago

Porbandar Tour: ಪೋರ್ ಬಂದರಿನಲ್ಲಿ ನೋಡಲೇಬೇಕಾದ ಅದ್ಭುತ ಸ್ಥಳಗಳಿವು

hd revanna prajwal revanna case
ಪ್ರಮುಖ ಸುದ್ದಿ47 mins ago

Prajwal Revanna Case: ಕಾಣದಂತೆ ಮಾಯವಾದ ಎಚ್‌ಡಿ ರೇವಣ್ಣ ! ಇಂದು ಜಾಮೀನು ಸಿಗದೇ ಹೋದರೆ….

Cocoa Price
ಕೃಷಿ50 mins ago

Cocoa Price: ಅಡಿಕೆ ಮರದೆತ್ತರಕ್ಕೆ ಕೋಕೋ ಬೆಳೆಯ ಧಾರಣೆ! 800% ಏರಿಕೆ!

IPL 2024 POINTS TABLE
ಕ್ರೀಡೆ1 hour ago

IPL 2024 POINTS TABLE: ಕೆಕೆಆರ್​ ಗೆಲುವಿನ ಬಳಿಕ ಅಂಕಪಟ್ಟಿ ಹೇಗಿದೆ?

prajwal revanna case hassan MP home
ಕ್ರೈಂ1 hour ago

Prajwal Revanna Case: ಹಾಸನ ಸಂಸದರ ನಿವಾಸದ ಗೇಟಿಗೆ ಬೀಗ; ನಿವಾಸದ ಕೀ ನಾಪತ್ತೆ! ಎಚ್‌ಡಿ ರೇವಣ್ಣ ಕೂಡ ಗಾಯಬ್!‌

Robbery Case
ಕ್ರೈಂ1 hour ago

Robbery Case: ಕಾರು ತಪಾಸಣೆ ನೆಪದಲ್ಲಿ ಸುಲಿಗೆ; ಪೊಲೀಸರ ವಿರುದ್ಧವೇ ಕೇಳಿ ಬಂತು ಗಂಭೀರ ಆರೋಪ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ6 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ19 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ1 day ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌