ಕರ್ನಾಟಕ
Assembly Session : ಸಿಎಂ ಸನ್ನೆ ಮಾಡಿದ್ದಕ್ಕೆ ಬಿಜೆಪಿ ಶಾಸಕರನ್ನು ಸ್ಪೀಕರ್ ಅಮಾನತು ಮಾಡಿದರು: ಎಚ್.ಡಿ. ಕುಮಾರಸ್ವಾಮಿ
Assembly Session : ಬಿಜೆಪಿ ಕಾರ್ಯಕರ್ತರನ್ನು ಅಮಾನತು ಮಾಡಿದ್ದರ ಹಿಂದಿನ ಸತ್ಯಾಂಶದ ಬಗ್ಗೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಮಹಾಘಟಬಂಧನ ಕಾರ್ಯಕ್ರಮಕ್ಕೆ ಉನ್ನತ ಮಟ್ಟದ ಐಎಎಸ್ ಅಧಿಕಾರಿಗಳನ್ನು ಬಳಸಿಕೊಂಡಿದ್ದನ್ನು ಪ್ರಶ್ನೆ ಮಾಡಿ ವಿಧೇಯಕ ಪ್ರತಿಯನ್ನು ಹರಿದು ಸ್ಪೀಕರ್ ಕಡೆಗೆ ಎಸೆದಿದ್ದರು. ಇದಕ್ಕೆ ಸ್ಪೀಕರ್ ಅವರನ್ನು ಅಮಾನತು ಮಾಡಿದ್ದರು. ಆದರೆ, ಸಿಎಂ ಸಿದ್ದರಾಮಯ್ಯ ಸನ್ನೆ ಮಾಡಿದ ಬಳಿಕ ಸ್ಪೀಕರ್ ಈ ಕ್ರಮವನ್ನು ಕೈಗೊಂಡಿದ್ದಾರೆ ಎಂದು ಎಚ್ಡಿಕೆ ಆರೋಪ ಮಾಡಿದ್ದಾರೆ.
ಬೆಂಗಳೂರು: ವಿಧಾನ ಮಂಡಲ ಅಧಿವೇಶನ (Assembly Session) ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಸನ್ನೆ ಮಾಡಿದ್ದಕ್ಕೆ ಬಿಜೆಪಿ ಶಾಸಕರನ್ನು ಸ್ಪೀಕರ್ ಯು.ಟಿ. ಖಾದರ್ ಅಮಾನತು ಮಾಡಿದರು. ಸ್ಪೀಕರ್ ಉದ್ದೇಶ ಪೂರ್ವಕವಾಗಿ ಶಾಸಕರನ್ನು ಅಮಾನತು ಮಾಡಿದ್ದಾರೆ. ಹುಡುಗಾಟಿಕೆ ರೀತಿಯಲ್ಲಿ ಹೀಗೆ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಗಂಭೀರ ಆರೋಪ ಮಾಡಿದ್ದಾರೆ.
ಬಿಜೆಪಿಯ 10 ಸದಸ್ಯರನ್ನು ಅಮಾನತು ಮಾಡಿರುವ ಸ್ಪೀಕರ್ ಯು.ಟಿ. ಖಾದರ್ ಕ್ರಮವನ್ನು ಖಂಡಿಸಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ಕಾಂಗ್ರೆಸ್ ಸೇರಿದಂತೆ ದೇಶದ ಹಲವು ಪಕ್ಷಗಳು ಒಕ್ಕೂಟವನ್ನು ರಚಿಸಿಕೊಂಡು, ಅದಕ್ಕೆ “ಇಂಡಿಯಾ” ಎಂದು ದೇಶದ ಹೆಸರಿಟ್ಟು ಎರಡನೇ ದಿನಕ್ಕೆ ಪ್ರಜಾಪ್ರಭುತ್ವ ಕಗ್ಗೊಲೆ ಮಾಡಿದ್ದಾರೆ. ಸರ್ಕಾರದ ಬಲ್ಡೋಜರ್ ನೀತಿ ಸರಿಯಲ್ಲ ಎಂದು ಹೇಳಿದರು.
ಇದನ್ನೂ ಓದಿ: Assembly Session : ಬಿಜೆಪಿ ರೌಡಿಗಿರಿಗೆ ಹೆದರಲ್ಲ; ಮಹಾಘಟಬಂಧನಕ್ಕೆ IAS ಅಧಿಕಾರಿಗಳ ಬಳಕೆ ತಪ್ಪಲ್ಲ: ಸಿದ್ದರಾಮಯ್ಯ
ಸಭಾಧ್ಯಕ್ಷರ ಪೀಠದಲ್ಲಿ ದಲಿತರು ಕುಳಿತುಕೊಂಡಿದ್ದಾರೆ ಎಂದು ಕಾಂಗ್ರೆಸ್ ಆರೋಪ ಮಾಡುವ ಮೂಲಕ ಕ್ಷುಲ್ಲಕ, ಕೀಳು ಮಟ್ಟದ ಅಭಿರುಚಿ ತೋರಿಸಿದ್ದಾರೆ. ದಲಿತರ ಅನುಕಂಪ ಪಡೆಯಲು ಈ ರೀತಿ ಮಾಡುತ್ತಲಿದ್ದಾರೆ. ಆ ಪೀಠದಲ್ಲಿ ಕುಳಿತಿರುವುದು ಉಪ ಸಭಾಧ್ಯಕ್ಷರಾಗಿದ್ದಾರೆ. ಬಿಜೆಪಿ ಸದಸ್ಯರ ಹೋರಾಟಕ್ಕೆ ನನ್ನ ಬೆಂಬಲ ಇದೆ. ಬಿಜೆಪಿಯವರು ನಾವು ಸೇರಿ ಹೋರಾಟ ಮಾಡುತ್ತಿದ್ದೇವೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ನಾವು ಹೀಗೆ ಮಾಡಿಲ್ಲ
ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆದ ಮಹಾಘಟಬಂಧನ ಸಭೆ ವಿಚಾರವಾಗಿ ರಾಜ್ಯ ಸರ್ಕಾರವು ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದೆ. ಐಎಎಸ್ ಅಧಿಕಾರಿಗಳನ್ನು ರಾಜಕೀಯ ಸಭೆಗೆ ಬಳಸಿಕೊಂಡಿದ್ದಾರೆ. ಸರ್ಕಾರದ ಹಿರಿಯ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಸದನದಲ್ಲಿ ಇಂದು ಜೆಡಿಎಸ್, ಬಿಜೆಪಿಯವರು ಈ ವಿಚಾರದ ಬಗ್ಗೆ ಚರ್ಚೆ ನಡೆಸಲು ಮುಂದಾದೆವು. ಆದರೆ, ಪ್ರತಿಷ್ಠೆಯಿಂದ ನಾವು ಮಾಡಿದ್ದೇ ಸರಿ ಎಂದು ಕಾಂಗ್ರೆಸ್ನವರು ನಡೆದುಕೊಂಡಿದ್ದಾರೆ. ನಾವು ಯಾವುದೇ ರೀತಿ ಗಣ್ಯರಿಗೆ ಭದ್ರತೆ ಕೊಡಲು ಅಧಿಕಾರಿಗಳನ್ನು ಬಳಸಿಕೊಂಡಿಲ್ಲ. ಪ್ರಮಾಣ ವಚನ ಕಾರ್ಯಕ್ರಮಕ್ಕೆ ಗಣ್ಯರನ್ನು ಸ್ವಾಗತಿಸಲು ಅಧಿಕಾರಿಗಳನ್ನು ಬಳಸಿಕೊಂಡಿಲ್ಲ. ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ಯಾವುದೇ ಶಿಷ್ಟಾಚಾರ ಉಲ್ಲಂಘನೆ ಮಾಡಿಲ್ಲ. ಗುಲಮರಾನ್ನಾಗಿ ಅಧಿಕಾರಿಗಳನ್ನು ಯಾರ ಮನೆ ಬಾಗಿಲಿಗೂ ಕಳುಹಿಸಿಲ್ಲ. ಈ ಸರ್ಕಾರದವರು ಸುಳ್ಳು ಹೇಳಿದ್ದಾರೆ. ವಿರೋಧ ಪಕ್ಷಗಳನ್ನು ನೆಲಸಮ ಮಾಡಲು ಹೊರಟಿರೋದು ಸರ್ಕಾರದ ಉದ್ಧಟತನ. ಪ್ರಜಾಪ್ರಭುತ್ವ ವ್ಯವಸ್ಥೆಯ ಕಗ್ಗೊಲೆ. ಬಿಜೆಪಿ ನಾವು ಸೇರಿ ಹೋರಾಟ ಮಾಡ್ತಾ ಇದ್ದೇವೆ. ಕೆಲವು ಮಂತ್ರಿಗಳು, ಶಾಸಕರನ್ನು ಮುಗಿಸುವುದಾಗಿ ಸದನದಲ್ಲಿ ಹೇಳಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.
ಎಚ್.ಡಿ. ಕುಮಾರಸ್ವಾಮಿ ಮಾಡಿದ ಆರೋಪ ಏನು? ಇಲ್ಲಿದೆ ವಿಡಿಯೊ
ಇದನ್ನೂ ಓದಿ: Assembly Session : ಸಸ್ಪೆಂಡ್ ವಿರೋಧಿಸಿ ಬಿಜೆಪಿ, ಜೆಡಿಎಸ್ ಪ್ರತಿಭಟನೆ; ನಾಳೆ ರಾಜ್ಯಪಾಲರಿಗೆ ದೂರು
ವಿಧಾನಸಭೆ ಕಾರ್ಯದರ್ಶಿಗೆ ಪತ್ರ
ಇದೇ ವೇಳೆ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ವಿರುದ್ಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಅವಿಶ್ವಾಸ ಮಂಡಿಸಲು ಅವಕಾಶ ಕೋರಿ ವಿಧಾನಸಭೆ ಕಾರ್ಯದರ್ಶಿಗೆ ಪತ್ರ ಸಲ್ಲಿಸಿದ್ದಾರೆ.
ಶಿವಮೊಗ್ಗ
Shivamogga News: ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅಮಾನತಿಗೆ ಶಾಸಕ ಗೋಪಾಲಕೃಷ್ಣ ಸೂಚನೆ
Shivamogga News: ರಿಪ್ಪನ್ಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶುಕ್ರವಾರ ಶಾಸಕ ಗೋಪಾಲಕೃಷ್ಣ ಬೇಳೂರು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ರಿಪ್ಪನ್ಪೇಟೆ: ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದ (Primary Health Centre) ವೈದ್ಯಾಧಿಕಾರಿ ಡಾ.ಅನಿಲ್ಕುಮಾರ್ ಸರಿಯಾಗಿ ಕರ್ತವ್ಯಕ್ಕೆ (Duty) ಹಾಜರಾಗುತ್ತಿಲ್ಲ ಎಂದು ಸಾರ್ವಜನಿಕರ ದೂರಿನನ್ವಯ ಶುಕ್ರವಾರ ಶಾಸಕ ಗೋಪಾಲಕೃಷ್ಣ ಬೇಳೂರು ಆಸ್ಪತ್ರೆಗೆ ದಿಢೀರ್ ಭೇಟಿ (Surprise Visit) ನೀಡಿದರು.
ಆಸ್ಪತ್ರೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರು, ಭೇಟಿ ನೀಡಿದ ಸಂದರ್ಭದಲ್ಲಿಯೂ ವೈದ್ಯಾಧಿಕಾರಿ ಗೈರಾಗಿರುವುದನ್ನು ಕಂಡು ಕೂಡಲೇ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ದೂರವಾಣಿ ಮೂಲಕ ಇಲ್ಲಿನ ವೈದ್ಯಾಧಿಕಾರಿಯನ್ನು ಅಮಾನತು ಪಡಿಸಿ, ವರದಿ ನೀಡುವಂತೆ ಅವರು ಸೂಚಿಸಿದರು.
ಇದನ್ನೂ ಓದಿ: Sirsi News:ಅಕ್ರಮ ದಾಸ್ತಾನು ಮಾಡಿದ್ದ 64.950 ಕೆಜಿ ತೂಕದ ಶ್ರೀಗಂಧ ವಶ
ಪ್ರಾಥಮಿಕ ಆರೋಗ್ಯ ಕೇಂದ್ರದ ಹಲವು ಸಮಸ್ಯೆಗಳ ಕುರಿತು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮತ್ತು ಸಾರ್ವಜನಿಕರಿಂದ ಸಾಕಷ್ಟು ದೂರುಗಳನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಆಲಿಸಿದರು.
ಆಸ್ಪತ್ರೆಯಲ್ಲಿ ಫಾರ್ಮಾಸಿಸ್ಟ್ ಕರ್ತವ್ಯಕ್ಕೆ ಸರಿಯಾಗಿ ಹಾಜರಾಗುತ್ತಿಲ್ಲ, ಇದರಿಂದ ಸರಿಯಾಗಿ ಔಷಧಿ ವಿತರಣೆಯಾಗದೇ ರೋಗಿಗಳು ಖಾಸಗಿ ಮೆಡಿಕಲ್ಗಳಿಗೆ ಚೀಟಿ ಹಿಡಿದು ಹೋಗುವಂತಾಗಿದೆ ಎಂದು ಸಾರ್ವಜನಿಕರು ದೂರಿದರು, ಆಗ ಶಾಸಕರು ಈ ಬಗ್ಗೆ ಸಂಬಂಧಿಸಿದ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ದೂರವಾಣಿ ಮೂಲಕ ಸ್ಥಳೀಯ ಅಸ್ಪತ್ರೆಯ ಫಾರ್ಮಾಸಿಸ್ಟ್ ಸರಿಯಾಗಿ ಕೆಲಸಕ್ಕೆ ಬಾರದಿರುವುದರ ಬಗ್ಗೆ ಅವರ ಮೇಲೆ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದರು.
ಇದನ್ನೂ ಓದಿ: Shivamogga News: ವಿಶ್ವ ಹಿಂದೂ ಮಹಾಸಭಾ ಗಣಪತಿ ಉತ್ಸವ ಸಮಿತಿಯಿಂದ ಸೆ.23ರಿಂದ ಸೊರಬದಲ್ಲಿ ಕಾರ್ಯಕ್ರಮ
ಈ ಸಂದರ್ಭದಲ್ಲಿ ಡಾ.ಅಂಜನಪ್ಪ, ಸಿಬ್ಬಂದಿಗಳಾದ ಗಾಯಿತ್ರಿ, ಜಿ.ಪಂ.ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ತಾ.ಪಂ. ಮಾಜಿ ಸದಸ್ಯ ಚಂದ್ರು ಮೌಳಿಗೌಡ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮಿ,ಕೆಂಚನಾಲ ಗ್ರಾ.ಪಂ. ಅಧ್ಯಕ್ಷೆ ಉಭೇದುಲ್ಲಾ ಷರೀಫ್, ಆಶೀಫ್, ಗಣಪತಿ, ಉಂಡಗೋಡು ನಾಗಪ್ಪ, ಶ್ರೀಧರ್, ರಮೆಶ್ ಪ್ಯಾನ್ಸಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಕರ್ನಾಟಕ
Cabinet Meeting: ವಾಹನಗಳ ಗುಜರಿ ನೀತಿ-2022 ಜಾರಿ ಮಾಡಲು ಸಚಿವ ಸಂಪುಟ ಒಪ್ಪಿಗೆ
Cabinet Meeting: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನೋಂದಾಯಿತ ವಾಹನಗಳ ಗುಜರಿ ನೀತಿ-2022 ಅನ್ನು ರಾಜ್ಯದಲ್ಲಿ ಜಾರಿ ಮಾಡಲು ಒಪ್ಪಿಗೆ ಸೂಚಿಸಲಾಗಿದೆ.
ಬೆಂಗಳೂರು: ಕಾವೇರಿ ವಿಚಾರದಲ್ಲಿ ಮುಂದಿನ ಕಾನೂನು ಹೋರಾಟ, ತಮಿಳುನಾಡಿಗೆ ನೀರು ಬಿಡುಗಡೆ ಮಾಡದಿರಲು ನಿರ್ಣಯ ಮಾಡಲು ವಿಶೇಷ ಅಧಿವೇಶನ ಕರೆಯುವುದು, ಬರ ಪರಿಹಾರ, ನೋಂದಾಯಿತ ವಾಹನಗಳ ಗುಜರಿ ನೀತಿ ಜಾರಿ (Vehicle Scrapping Policy) ಮಾಡುವುದು ಸೇರಿ ಹಲವು ಮಹತ್ವದ ವಿಷಯಗಳ ಬಗ್ಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು.
ಸುಮಾರು ಎರಡು ಗಂಟೆ ನಡೆದ ಸಭೆಯ ಬಳಿಕ ಮಾತನಾಡಿದ ಕಾನೂನು ಸಚಿವ ಎಚ್.ಕೆ. ಪಾಟೀಲ್ ಅವರು, ಬರ ಸ್ಥಿತಿಯಿಂದ 30,432 ಕೋಟಿ ರೂ. ನಷ್ಟ ಉಂಟಾಗಿದೆ. ಹೀಗಾಗಿ 4860 ಕೋಟಿ ರೂ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಬೇಡಿಕೆ ಇಡುತ್ತಿದ್ದೇವೆ. ಸುಮಾರು 39,039 ಲಕ್ಷ ಹೆಕ್ಟೇರ್ ಕೃಷಿ ಬೆಳೆ ನಷ್ಟವಾಗಿದ್ದು, ಇದಕ್ಕಾಗಿ ಎನ್ಡಿಆರ್ಎಫ್ ಮಾರ್ಗಸೂಚಿ ಪ್ರಕಾರ 3824 ಕೋಟಿ ರೂ. ಪರಿಹಾರ ಕೋರುತ್ತಿದ್ದೇವೆ ಎಂದು ತಿಳಿಸಿದರು.
ತೋಟಗಾರಿಕೆ ಬೆಳೆ ನಷ್ಟ 2655 ಕೋಟಿ ಆಗಿದ್ದು, ಇದಕ್ಕಾಗಿ 206 ಕೋಟಿ ಪರಿಹಾರ ಕೋರಿಕೆಗೆ ನಿರ್ಧಾರ ಮಾಡಿದ್ದೇವೆ. 195 ಪಶು ಶಿಬಿರಕ್ಕಾಗಿ 104 ಕೋಟಿ ರೂ. , 624 ಮೇವು ಬ್ಯಾಂಕ್ ಸ್ಥಾಪನೆಗೆ 1063 ಕೋಟಿ ರೂ. ಔಷಧಗಳಿಗೆ 25 ಕೋಟಿ, ಆಹಾರ, ಮೇವು ಬೀಜಕ್ಕೆ 50 ಕೋಟಿ ರೂ. ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.
ಗುಜರಿ ನೀತಿ ಜಾರಿ ಮಾಡಲು ನಿರ್ಧಾರ: ಡಿ.ಕೆ.ಶಿವಕುಮಾರ್
ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿ, ನೋಂದಾಯಿತ ವಾಹನಗಳ ಗುಜರಿ ನೀತಿ-2022 (Vehicle Scrapping Policy-2022) ಜಾರಿ ಮಾಡಲು ಸಚಿವ ಸಂಪುಟದಲ್ಲಿ ನಿರ್ಧಾರ ಮಾಡಲಾಗಿದ್ದು, 15 ವರ್ಷಗಳ ಕಾಲ ಸಂಚರಿಸಿದ ವಾಹನಗಳನ್ನು ಸ್ಕ್ರ್ಯಾಪ್ ಮಾಡಲಾಗುತ್ತದೆ. 15,295 ವಾಹನಗಳನ್ನು ಸ್ಕ್ರ್ಯಾಪ್ ಮಾಡಬೇಕಿದ್ದು, 2023-24ರ ಮೊದಲ ಹಂತದಲ್ಲಿ 5000 ವಾಹನ ನಾಶ ಪಡಿಸುತ್ತೇವೆ. ಇದಕ್ಕೆ ಒಂದು ನೂರು ಕೋಟಿ ರೂಪಾಯಿ ಪ್ರೋತ್ಸಾಹ ಧನ ಕೇಂದ್ರದಿಂದ ಬರಲಿದೆ ಎಂದು ತಿಳಿಸಿದರು.
ಕಾವೇರಿ ನೀರು ಹಂಚಿಕೆ ವಿಚಾರವಾಗಿ ನ್ಯಾಯಾಲಯದ ಆದೇಶ ಪಾಲನೆ ಹಾಗೂ ರಾಜ್ಯದ ರೈತರ ಹಿತ ಕಾಯಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಮೇಕೆದಾಟು ಯೋಜನೆ ವಿಚಾರ ಸುಪ್ರೀಂ ಕೋರ್ಟ್ ವಿಚಾರಣೆ ವೇಳೆಗೆ ಪ್ರಸ್ತಾಪ ಆಗಿದೆ. ಈ ಯೋಜನೆ ಮುಂದುವರಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕೇಂದ್ರ ಸರ್ಕಾರದ ಅನುಮತಿ ಪಡೆದು ಯೋಜನೆ ಆರಂಭಿಸಲು ಸರ್ಕಾರದ ಪ್ರಯತ್ನ ಮುಂದುವರಿಯಲಿದೆ. ಈ ಯೋಜನೆಯಿಂದ ಎರಡೂ ರಾಜ್ಯಗಳಿಗೆ ಉಪಯೋಗ ಆಗಲಿದೆ. ಇದಕ್ಕೆ ಬೇಕಾದ ಎಲ್ಲ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುತ್ತೇವೆ ಎಂದು ತಿಳಿಸಿದರು.
ಈಗಾಗಲೇ ಆಣೆಕಟ್ಟು ಕೆಳ ಹಂತದಲ್ಲಿ ನಮ್ಮ ನಿಯಂತ್ರಣ ಮೀರಿ 3500 ಕ್ಯೂಸೆಕ್ ನೀರು ಹರಿಯುತ್ತಿದೆ. ಉಳಿದ ನೀರನ್ನು ಹೊಂದಿಸಿ ಆದೇಶ ಪಾಲನೆ ಮಾಡುತ್ತೇವೆ. ಇದರ ಜತೆಗೆ ರಾಜ್ಯದ ಕುಡಿಯುವ ನೀರು ಅಗತ್ಯ ಹಾಗೂ ರೈತರ ಹಿತ ಕಾಯುವ ಕೆಲಸ ಮಾಡುತ್ತೇವೆ. ಇಂದು ಕಾವೇರಿ ವಿಚಾರವಾಗಿ ಅಡ್ವೊಕೇಟ್ ಜನರಲ್ ಅವರು ಸಂಪುಟ ಸದಸ್ಯರಿಗೆ ವಸ್ತುಸ್ಥಿತಿ ವಿವರಿಸಿದ್ದಾರೆ. ಇಂದು ಕಾವೇರಿ ಆಣೆಕಟ್ಟುಗಳ ಒಳಹರಿವು 7500 ರಿಂದ 8000 ಕ್ಯೂಸೆಕ್ ಇದೆ. 3500 ಕ್ಯೂಸೆಕ್ ನಷ್ಟು ನೀರು ಹೊರ ಹೋಗುತ್ತಿದೆ ಎಂದು ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
ಕಾವೇರಿ ವಿವಾದ; ಮಧ್ಯಸ್ಥಿಕೆ ವಹಿಸಲು ಕೇಂದ್ರಕ್ಕೆ ಮನವಿ
ತಮಿಳುನಾಡು ಜತೆ ಮಾತುಕತೆ ಮಾಡುತ್ತೀರಾ ಎಂಬ ಪ್ರಶ್ನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿ, ಈ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ವಿಶೇಷ ಅಧಿವೇಶನದ ಬಗ್ಗೆ ಚರ್ಚೆ ಮಾಡಲಿಲ್ಲವೇ ಎಂದು ಕೇಳಿದಾಗ, ನಮಗೆ ಈ ವಿಚಾರವಾಗಿ ಯಾವುದೇ ಪ್ರಸ್ತಾವನೆ ಬಂದಿಲ್ಲ. ಹೀಗಾಗಿ ಈ ಬಗ್ಗೆ ಚರ್ಚೆ ಮಾಡಿಲ್ಲ ಎಂದು ತಿಳಿಸಿದರು.
ಬಂದ್ ಹಾಗೂ ಬಿಜೆಪಿ ಹೋರಾಟದ ಬಗ್ಗೆ ಕೇಳಿದಾಗ, ಬಿಜೆಪಿ ಅವರ ರಾಜಕಾರಣ ಮಾಡುತ್ತಿದ್ದಾರೆ ಮಾಡಲಿ. ನಾವು ನಮ್ಮ ಕೆಲಸ ಮಾಡುತ್ತೇವೆ. ನ್ಯಾಯಾಲಯದ ಆದೇಶ ಪಾಲನೆ ಮಾಡುತ್ತಾ ರೈತರ ಹಿತ ಕಾಯಬಹುದೆ ಎಂದು ಕೇಳಿದಾಗ, ಖಂಡಿತವಾಗಿ ನಾವು ಆದೇಶ ಪಾಲನೆ ಹಾಗೂ ರೈತರ ಹಿತ ಕಾಯುತ್ತೇವೆ ಎಂದರು. ಬಿಜೆಪಿ ಜೆಡಿಎಸ್ ಮೈತ್ರಿ ಬಗ್ಗೆ ಕೇಳಿದಾಗ, ಒಳ್ಳೆಯದಾಗಲಿ ಎಂದು ತಿಳಿಸಿದರು.
ಕೇಂದ್ರ ಒಬಿಸಿ ಪಟ್ಟಿಗೆ ಕುಂಚಿಟಿಗ ಒಕ್ಕಲಿಗ ಸಮುದಾಯ
ಕುಂಚಿಟಿಗ ಒಕ್ಕಲಿಗ ಸಮುದಾಯವನ್ನು ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಗೆ ಸೇರಿಸಲು ಶಿಫಾರಸು ಮಾಡಲು ತೀರ್ಮಾನಿಸಲಾಗಿದೆ. ಕೊಡವ ಸಮಾಜದಲ್ಲಿ ಕೊಡವರು, ಕೊಡವ ಎಂಬ ಪದದ ವಿಚಾರವಾಗಿ ಇದ್ದ ಗೊಂದಲ ಬಗೆ ಹರಿಸಲು ತೀರ್ಮಾನಿಸಲಾಗಿದೆ. ಪೊಲೀಸ್ ಇಲಾಖೆಯಲ್ಲಿ 15 ವರ್ಷಗಳ ಹಳೆಯ ವಾಹನಗಳನ್ನು ಸ್ಕ್ರ್ಯಾಪ್ ಮಾಡಲು ಸರ್ಕಾರ ತೀರ್ಮಾನಿಸಿದೆ. ಖಾಸಗಿ ವಾಹನ ವಿಚಾರವಾಗಿ ಮುಂದೆ ತೀರ್ಮಾನ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾಹಿತಿ ನೀಡಿದರು.
ಐಪಿ ಸೆಟ್ ಸಕ್ರಮಕ್ಕೆ ಇಂದು ಕೊನೆ ದಿನ. ಅರ್ಜಿ ಹಾಕಿದವರನ್ನು ಸಕ್ರಮ ಎಂದು ಘೋಷಿಸುತ್ತೇವೆ. ಇನ್ನುಮುಂದೆ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆಯುವವರಿಗೆ ಅವಕಾಶ ಇಲ್ಲ ಎಂದು ತಿಳಿಸಿದರು.
ಇದನ್ನೂ ಓದಿ | Dakshin Bharat Utsav: ಪ್ರವಾಸೋದ್ಯಮ ಉತ್ತೇಜಿಸಲು ಖಾಸಗಿ ವಲಯಕ್ಕೆ 550 ಸ್ಮಾರಕ ದತ್ತು: ಸಚಿವ ಎಚ್.ಕೆ. ಪಾಟೀಲ್
ಸಚಿವ ಸಂಪುಟ ಸಭೆಯ ಮುಖ್ಯಾಂಶಗಳು
- ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಕಲ್ಪಿಸಲು ಸಂಬಂಧ ರಚಿಸಲಾಗಿದ್ದ ನ್ಯಾ. ಭಕ್ತವತ್ಸಲ ಆಯೋಗದ ಎರಡನೇ ವರದಿ ಬಗ್ಗೆ ಸಂಪುಟದಲ್ಲಿ ಚರ್ಚೆ ನಡೆದು ಅಂಗೀಕರಿಸಲಾಗಿದೆ. ಈ ವರದಿಯನ್ನು ಆಧರಿಸಿ ಸುಪ್ರಿಂಕೋರ್ಟ್ಗೆ ಅಫಿಡೆವಿಟ್ ಸಲ್ಲಿಸಲಾಗುತ್ತದೆ. ಈ ಹಿಂದೆ ಯಾವ ಆಧಾರದಲ್ಲಿ ರಾಜಕೀಯ ಮೀಸಲು ನೀಡಲಾಗುತ್ತಿದೆ ಎಂದು ಮಹಾರಾಷ್ಟ್ರ ಪ್ರಕರಣದಲ್ಲಿ ಸುಪ್ರಿಂಕೋರ್ಟ್ ಪ್ರಶ್ನಿಸಿತ್ತಲ್ಲದೇ ಎಲ್ಲ ರಾಜ್ಯಗಳಿಗೂ ಅನ್ವಯಿಸಿತ್ತು. ಇದರಿಂದ ನಗರ, ಗ್ರಾಮೀಣ ಸ್ಥಳೀಯ ಸಂಸ್ಥೆ ಚುನಾವಣೆ ನೆನೆಗುದಿಗೆ ಬಿದ್ದಿತ್ತು. ಹೀಗಾಗಿ ಬಿಜೆಪಿ ಸರ್ಕಾರ ನ್ಯಾ. ಭಕ್ತವತ್ಸಲ ಸಮಿತಿ ರಚಿಸಿತ್ತು. ಈ ಸಮಿತಿ ಎರಡನೇ ಪೂರಕ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು.
- ನೀರಾವರಿ ಪಂಪ್ ಸೆಟ್ ಸೌರೀಕರಣ: ನೀರಾವರಿ ಪಂಪ್ ಸೆಟ್ಗಳಿಗೆ ಸ್ಟಾಂಡ್ ಅಲೋನ್, ಆಫ್ ಗ್ರಿಡ್ ಸೋಲಾರ್ ಪಂಪ್ ಸೆಟ್ ಒದಗಿಸಲು ಬೆಂಬಲ ಹಾಗೂ ನೀರಾವರಿ ಪಂಪ್ ಸೆಟ್ ಫೀಡರ್ಗಳ ಸೌರೀಕರಣಕ್ಕೆ ಕೈಗೆತ್ತಿಕೊಳ್ಳಲು ಸಂಪುಟ ಒಪ್ಪಿಗೆ ನೀಡಿದೆ. ಅದೇ ರೀತಿ ರಾಜ್ಯದಲ್ಲಿ ನೀರಾವರಿ ಪಂಪ್ಸೆಟ್ಗಳನ್ನು 2015ರಿಂದ ಸಕ್ರಮ ಗೊಳಿಸಿರುವ ಕ್ರಮಕ್ಕೆ ಘಟನೋತ್ತರ ಅನುಮೋದನೆ.
- ಏಳುಕಡೆ ಕೈಗಾರಿಕಾ ವಸಾಹತು: ಕೆಎಸ್ಎಸ್ಐಡಿಸಿ ವತಿಯಿಂದ ರಾಜ್ಯದ ಏಳು ಕೈಗಾರಿಕಾ ವಸಾಹತು ಸ್ಥಾಪನೆಗೆ ನಿರ್ಧರಿಸಲಾಗಿದೆ. ಚಿತ್ತಾಪುರ, ಕೋಡ್ಕಣಿ, ಕಣಗಾಲ, ಬದನಗುಪ್ಪೆ, ಇಂಡಿಯಲ್ಲಿ ವಸಾಹತು ಸ್ಥಾಪನೆಗೆ 166 ಕೋಟಿ ರೂ. ಹಾಗೂ ಹುಬ್ಬಳ್ಳಿ ಮತ್ತು ಶಹಪೂರದಲ್ಲಿ ಭೂ ಸ್ವಾಧೀನಕ್ಕೆ ಸಮ್ಮತಿ.
- ಪೊಲೀಸ್ ಇಲಾಖೆಗೆ 1682 ಹೊಸ ವಾಹನ: ಪೊಲೀಸ್ ಮೊಬಿಲಿಟಿ ಯೋಜನೆಯಡಿ ಪೊಲೀಸ್ ಇಲಾಖೆಯು 1682 ವಾಹನಗಳನ್ನು 83.38 ಕೋಟಿ ರೂ. ವೆಚ್ಚದಲ್ಲಿ ಖರೀದಿಸಲು ಅನುಮೋದನೆ.
- ಕೃಷಿ ನವೋದ್ಯಮ ಯೋಜನೆ ಜಾರಿ. ಕೃಷಿ ಪ್ರೋತ್ಸಾಹಿಸಲು ಕೃಷಿ ನವೋದ್ಯಮ ಯೋಜನೆ ಜಾರಿ ಮಾಡಲಾಗುತ್ತಿದೆ.
ಕೃಷಿ ಕ್ಷೇತ್ರದಲ್ಲಿ ಉದ್ಯಮಶೀಲತೆ ಹೆಚ್ಚಿಸಲು ಹಾಗೂ ಕೃಷಿ ಪದವೀಧರರು, ಆಸಕ್ತ ಪ್ರಗತಿಪರ ರೈತರು ಕೃಷಿಯಲ್ಲಿ ನವೋದ್ಯಮ ಆರಂಭಿಸಲು ಮತ್ತು ಕೃಷಿಯಲ್ಲಿ ನವೀನ ಪರಿಕಲ್ಪನೆಗಳ ವಾಣಿಜ್ಯೀಕರಣ ಉತ್ತೇಜಿಸಲು ಕೃಷಿ ನವೋದ್ಯಮ ಯೋಜನೆ ಜಾರಿಗೆ ಅನುಮೋದನೆ. - ಒಂದು ವರ್ಷದ ದಂಡ ವಿನಾಯಿತಿ: ರಾಜ್ಯದಲ್ಲಿ ನೋಂದಾಯಿತ ವಾಹನಗಳ ಸ್ಕ್ರ್ಯಾಪಿಂಗ್ ಪಾಲಿಸಿ 2022 ಜಾರಿಗೊಳಿಸಲು ನಿರ್ಧರಿಸಲಾಗಿದೆ. ಸರ್ಕಾರಿ ಇಲಾಖೆಗಳು, ನಿಗಮಗಳು, ಮಂಡಳಿಗಳಲ್ಲಿರುವ 15 ವರ್ಷ ಪೂರೈಸಿರುವ ವಾಹನಗಳನ್ನು ನಾಶ ಪಡಿಸಲು ಹಾಗೂ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ನಾಶ ಪಡಿಸಲು ಉದ್ದೇಶಿಸಿರುವ ವಾಹನಗಳ ಮೇಲೆ ಕೊನೆಯ ಒಂದು ವರ್ಷದಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿನ ಬಾಕಿ ದಂಡಗಳ ವಸೂಲಿಯಿಂದ ಒಂದು ವರ್ಷದವರೆಗೆ ಮಾತ್ರ ವಿನಾಯಿತಿ ನೀಡಲು ಅನುಮೋದನೆ.
- ಆಶಾಕಿರಣ ಯೋಜನೆಯಲ್ಲಿ ಕಣ್ಣಿನ ತಪಾಸಣೆ, ಕನ್ನಡಕ ವಿತರಣೆಗೆ ಚಿತ್ರದುರ್ಗ, ರಾಯಚೂರು, ಉತ್ತರ ಕನ್ನಡ, ಮಂಡ್ಯ ಜಿಲ್ಲೆಯಲ್ಲಿ ಜಾರಿಗೆ 29.14 ಕೋಟಿ ರೂ. ಯೋಜನೆಗೆ ಸಮ್ಮತಿ.
- ಮಂಗಳೂರು ಮೀನುಗಾರಿಕೆ ಬಂದರಿನ 3ನೇ ಹಂತದ ವಿಸ್ತರಣೆ ಕಾಮಗಾರಿ ಪೂರ್ಣಗೊಳಿಸಲು 49.50 ಕೋಟಿ ರೂ.ಪರಿಷ್ಕೃತ ಅಂದಾಜಿಗೆ ಅನುಮೋದನೆ.
- ಕೊಡಗರು ಎಂಬುದನ್ನು ಕೊಡವ ಎಂದು ಬದಲಾವಣೆ ಮಾಡಲು ನಿರ್ಣಯ.
- ಕೇಂದ್ರ ಹಿಂದುಳಿದ ವರ್ಗಗಳ (ಒಬಿಸಿ)ಪಟ್ಟಿಗೆ ಕುಂಚಿಟಿಗರ ಸಮುದಾಯ(ವರ್ಗ) ಸೇರ್ಪಡೆಗೆ ಶಿಫಾರಸು.
- ಕೆಪಿಎಸ್ಸಿ ಅಧ್ಯಕ್ಷ ಮತ್ತು ಸದಸ್ಯರಿಗೆ ನಿವೃತ್ತಿ ವೇತನಕ್ಕೆ ಕಾಯ್ದೆ ತಿದ್ದುಪಡಿ.
- ಕೆಪಿಎಸ್ಸಿ ವರದಿ ಮಂಡನೆ.
- ಕಾನೂನು ಮಾಪನ ಇಲಾಖೆಯ ನೇಮಕಾತಿ ನಿಯಮಗಳಿಗೆ ತಿದ್ದುಪಡಿ
- ಬೆಂಗಳೂರಿನ ಬಿಟಿಎಂ ಬಡಾವಣೆಯಲ್ಲಿ 2.17 ಎಕರೆಯಲ್ಲಿ ಪ್ರಯಾಣಿಕರ ತಂಗುದಾಣ ನಿರ್ಮಿಸಲು 67.62 ಕೋಟಿ ರೂ.ಮಂಜೂರು
- ರಾಷ್ಟ್ರೀಯ ವಿಧಿ ವಿಜ್ಞಾನಗಳ ವಿಶ್ವ ವಿದ್ಯಾಲಯ ಸ್ಥಾಪನೆಗೆ ಧಾರವಾಡದ ಕೃಷಿ ವಿಜ್ಞಾನಗಳ ವಿವಿ ಅಧೀನದಲ್ಲಿರುವ 45.19 ಎಕರೆ ಜಮೀನನ್ನು 30 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದಲ್ಲಿ ನೀಡಲು ಸಮ್ಮತಿ
- ಲೋಕಾಯುಕ್ತ ಸಂಸ್ಥೆಯಲ್ಲಿ ಅಪರ ನಿಬಂಧಕರು (ವಿಚಾರಣೆಗಳು) ಹುದ್ದೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಮೂವರು ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರುಗಳ ಸೇವೆ ಇನ್ನೊಂದು ವರ್ಷದ ಅವಧಿಗೆ ಮುಂದುವರಿಕೆ
- ರಾಯಚೂರು ಬಳಿಯ ಕಲ್ಮಲ ಜಂಕ್ಷನ್ನಿಂದ ಸಿಂಧನೂರು ಬಳಿಯ ಬಳ್ಳಾರಿ ಲಿಂಗಸಗೂರು ರಸ್ತೆ ವೃತ್ತದವವರೆಗೆ (78.45 ಕಿಮೀ) ರಸ್ತೆ ಅಭಿವೃದ್ಧಿಗೆ 1695.85 ಕೋಟಿ ರೂ. ಯೋಜನಾ ವೆಚ್ಚಕ್ಕೆ ಅನುಮತಿ. ಎಚ್ ಎಎಂ ಮಾದರಿಯಲ್ಲಿ ಕೈಗೊಳ್ಳವಲ್ಲಿ ಕೆ ಆರ್ ಡಿಸಿಎಲ್ ಗೆ ಅನುಮತಿ
- ಮೋಟಾರು ವಾಹನ ಕಾಯ್ದೆ 1988ರ ಕಲಂ 136ಎ ಮತ್ತು ಕೇಂದ್ರ ಮೋಟಾರು ವಾಹನ ನಿಯಮಾವಳಿಗಳ ನಿಯಮ 1989ರ ನಿಯಮ 167ಎ ಅಡಿಯಲ್ಲಿ ಎಲೆಕ್ಟ್ರಾನಿಕ್ ಮಾನಿಟರಿಂಗ್ ಮತ್ತು ಎನ್ ಫೋರ್ಸ್ ಮೆಂಟ್ ಆಫ್ ರೋಡ್ ಸೇಫ್ಟಿ ಯೋಜನೆಯನ್ನು 20 ಕೋಟಿ ರೂ.ವೆಚ್ಚದಲ್ಲಿ ಅನುಷ್ಠಾನ ಗೊಳಿಸಲು ಅನುಮೋದನೆ
ಕರ್ನಾಟಕ
VISTARA TOP 10 NEWS: ಬಿಜೆಪಿ-ಜೆಡಿಎಸ್ ಮೈತ್ರಿ ಸೆಟ್ಟಾಯ್ತು, ಸೆ. 26ರವರೆಗೆ ನೀರು ಬಿಡೋದೂ ಫಿಕ್ಸಾಯ್ತು!
VISTARA TOP 10 NEWS: ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಹೊಸ ರಾಜಕೀಯ ಶಕೆ ಆರಂಭವಾಗಿದೆ. ಕಾವೇರಿ ನೀರು ಬಿಡುಗಡೆ ಮುಂದುವರಿಸಲು ತೀರ್ಮಾನವಾಗಿದೆ. ಹೀಗೆ ದಿನದ ಪ್ರಮುಖ ಸುದ್ದಿಗಳ ಗುಚ್ಛವೇ ವಿಸ್ತಾರ ಟಾಪ್ 10 ನ್ಯೂಸ್
1.ಬಿಜೆಪಿ-ಜೆಡಿಎಸ್ ಮೈತ್ರಿ ಘೋಷಣೆ; ಕಾಂಗ್ರೆಸ್ ಮಣಿಸಲು ಅಮಿತ್ ಶಾ-ಕುಮಾರಸ್ವಾಮಿ ಪಣ
ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ದೃಷ್ಟಿಯಿಂದ ಕೊನೆಗೂ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ (BJP-JDS Alliance) ಅಧಿಕೃತ ಮುದ್ರೆ ಬಿದ್ದಿದೆ. ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರನ್ನು ಭೇಟಿಯಾದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಎರಡೂ ಪಕ್ಷಗಳ ಮೈತ್ರಿಗೆ ಅಧಿಕೃತ ಮುದ್ರೆ ಒತ್ತಿದರು. ಪೂರ್ಣ ಸುದ್ದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಪೂರಕ ಸುದ್ದಿ: ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ರಾಜ್ಯ ರಾಜಕಾರಣದಲ್ಲಿ ಹೊಸ ಶಕೆ ಆರಂಭ!
2. ಸೆ.26ರವರೆಗೆ ಕಾವೇರಿ ನೀರು ಬಿಡುಗಡೆ ಫಿಕ್ಸ್; ಬಳಿಕ ಬಿಡುವುದಿಲ್ಲ ಎಂದು ಅಧಿವೇಶನ ಕರೆದು ನಿರ್ಣಯ?
ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ ಕಾವೇರಿ ಬಿಕ್ಕಟ್ಟು ಚರ್ಚೆಯಾಗಿದೆ. ಸುಪ್ರೀಂ ಕೋರ್ಟ್ ಸೂಚನೆಯಂತೆ ಸೆ. 26ರವರೆಗೆ ನೀರು ಬಿಡುಗಡೆ ಮಾಡುವುದು, ಮುಂದೆ ಮತ್ತೊಮ್ಮೆ ಆದೇಶ ನೀಡದಂತೆ ಅಧಿವೇಶನ ಕರೆದು ನೀರು ಬಿಡುವುದಿಲ್ಲ ಎಂಬ ನಿರ್ಣಯ ತೆಗೆದುಕೊಳ್ಳುವುದೆಂದು ಚರ್ಚೆ ನಡೆದಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಪೂರಕ ಸುದ್ದಿ: ಕಾವೇರಿ ಹೋರಾಟಕ್ಕೆ ಧುಮುಕಿದ ಚುಂಚಶ್ರೀ, ರೈತ ಪರ ನಿರ್ಧಾರ ತೆಗೆದುಕೊಳ್ಳಲು ಹಕ್ಕೊತ್ತಾಯ
3. ಏಷ್ಯನ್ ಗೇಮ್ಸ್ಗೆ ಅರುಣಾಚಲದ ಅಥ್ಲಿಟ್ಗೆ ಚೀನಾ ಪ್ರವೇಶ ನಿರಾಕರಣೆ: ಏನಿದು ಹೊಸ ವಿವಾದ?
ಚೀನಾದ ಆತಿಥ್ಯದಲ್ಲಿ ನಡೆಯುವ ಏಷ್ಯನ್ ಗೇಮ್ಸ್ನಲ್ಲಿ (Asian Games 2023) ಗಡಿ ರಾಜಕೀಯ ಮುನ್ನೆಲೆಗೆ ಬಂದಿದೆ. ಅರುಣಾಚಲ ಪ್ರದೇಶದ ಮೂವರು ವುಶ್ ಸ್ಪರ್ಧಿಗಳಿಗೆ ಚೀನಾದ ಅಧಿಕಾರಿಗಳು ಪ್ರವೇಶ ನಿರಾಕರಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಏನಿದು ವಿವಾದ? ಪೂರ್ಣ ಸುದ್ದಿಗೆ ಈ ಲಿಂಕ್ ಕ್ಲಿಕ್ ಮಾಡಿ
4. ಸ್ತ್ರೀ ಸಬಲೀಕರಣಕ್ಕೆ ಮಹಿಳಾ ಮೀಸಲಾತಿ ಶಕ್ತಿ, ಇದು ಐತಿಹಾಸಿಕ; ಮೋದಿ ಸಂತಸ
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲು ಕಲ್ಪಿಸುವ ವಿಧೇಯಕಕ್ಕೆ ಅಂಗೀಕಾರ ದೊರೆತ ಹಿನ್ನೆಲೆಯಲ್ಲಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಂಭ್ರಮಾಚರಣೆ ಮಾಡಲಾಗಿದೆ. ಆಗ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಸಂತಸ ಹಂಚಿಕೊಂಡರು. ಪೂರ್ಣ ಸುದ್ದಿಗೆ ಈ ಲಿಂಕ್ ಕ್ಲಿಕ್ ಮಾಡಿ
5. ಸನಾತನ ಧರ್ಮ; ಉದಯನಿಧಿ ಸ್ಟಾಲಿನ್ಗೆ ಸುಪ್ರೀಂ ನೋಟಿಸ್, ಎದುರಾಯ್ತು ಸಂಕಷ್ಟ
“ಸನಾತನ ಧರ್ಮವು ಕೊರೊನಾ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕು” ಎಂಬ ವಿವಾದಾತ್ಮಕ ಹೇಳಿಕೆ ನೀಡಿದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹಾಗೂ ತಮಿಳುನಾಡು ಸರ್ಕಾರ ಸೇರಿ 16 ಜನರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಪೂರ್ಣ ಸುದ್ದಿಗೆ ಈ ಲಿಂಕ್ ಕ್ಲಿಕ್ ಮಾಡಿ
6. ಬಿಎಸ್ಪಿ ಸಂಸದ ಡ್ಯಾನಿಷ್ ಅಲಿ ಉಗ್ರ ಎಂದು ಜರಿದ ಬಿಜೆಪಿ ಎಂಪಿ, ಕ್ರಮಕ್ಕೆ ಪ್ರತಿಪಕ್ಷಗಳ ಆಗ್ರಹ
ಬಿಎಸ್ಪಿಯ ಸಂಸದ ಡ್ಯಾನಿಶ್ ಅಲಿ (BSP MP Danish Ali) ಅವರಿಗೆ ಭಾರತೀಯ ಜನತಾ ಪಾರ್ಟಿಯ ಸಂಸದ ರಮೇಶ್ ಬಿಧುರಿ (BJP MP Ramesh Bidhuri) ಅವರು ಸಂಸತ್ತಿನಲ್ಲಿ ‘ಉಗ್ರ’ (Terrorist) ಎಂದು ಕರೆದಿದ್ದು ಭಾರೀ ವಿವಾದಕ್ಕೆ ಕಾರಣವಾಗಿದೆ. ಪೂರ್ಣ ಸುದ್ದಿಗೆ ಈ ಲಿಂಕ್ ಕ್ಲಿಕ್ ಮಾಡಿ
7. ಮೊದಲ ಏಕದಿನ ಶುಭಾರಂಭ: ಆಸ್ಟ್ರೇಲಿಯಾಕ್ಕೆ ಸೋಲುಣಿಸಿ ನಂ. 1 ಪಟ್ಟಕ್ಕೇರಿದ ಭಾರತ
ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಏಕ ದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ 5 ವಿಕೆಟ್ಗಳ ಸುಲಭ ಗೆಲುವು ಸಾಧಿಸಿದೆ. ಬೌಲಿಂಗ್ನಲ್ಲಿ ಮೊಹಮ್ಮದ್ ಶಮಿ, ಬ್ಯಾಟಿಂಗ್ನಲ್ಲಿ ಶುಭಮನ್ ಗಿಲ್, ಕೆ.ಎಲ್ ರಾಹುಲ್, ಋತುರಾಜ್ ಗಾಯಕ್ವಾಡ್, ಸೂರ್ಯಕುಮಾರ್ ಯಾದವ್ ಸಖತ್ತಾಗಿ ಮಿಂಚಿದರು. ಈ ಗೆಲುವಿನಿಂದ ಭಾರತ ಏಕದಿನ ಕ್ರಿಕೆಟ್ನಲ್ಲೂ ನಂಬರ್ ಒನ್ ಸ್ಥಾನಕ್ಕೆ ಬಂತು. ಪೂರ್ಣ ಸುದ್ದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಪೂರಕ ಸುದ್ದಿ: ಏಕದಿನ ವಿಶ್ವಕಪ್ ಬಹುಮಾನ ಎಷ್ಟು ಗೊತ್ತೆ? ಇಲ್ಲಿದೆ ಎಲ್ಲ ವಿವರ
8 ಯೋಗಿ ರಾಜ್ಯದಲ್ಲಿ ಎನ್ಕೌಂಟರ್ಗೆ ಮತ್ತೊಬ್ಬ ಪಾತಕಿ ಬಲಿ, ದುಷ್ಕರ್ಮಿಗಳಿಗೆ ನಡುಕ
ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ (Yogi Adityanath) ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕ್ರಿಮಿನಲ್ಗಳ ಎನ್ಕೌಂಟರ್ ಜಾಸ್ತಿಯಾಗಿವೆ. ಇದೀಗ ಮಹಿಳಾ ಪೊಲೀಸ್ ಪೇದೆಯೊಬ್ಬರ ಹತ್ಯೆಯ ಪ್ರಮುಖ ಆರೋಪಿಯಾದ ಅನೀಶ್ ಖಾನ್ ಎಂಬುವನನ್ನು ಎನ್ಕೌಂಟರ್ ಮಾಡಲಾಗಿದೆ. ಪೂರ್ಣ ಸುದ್ದಿಗೆ ಈ ಲಿಂಕ್ ಕ್ಲಿಕ್ ಮಾಡಿ
9. ಮುಂದಿನ ಆಸ್ಕರ್ ರೇಸ್ನಲ್ಲಿ ಯಾವೆಲ್ಲ ಚಿತ್ರಗಳು ಇರಲಿವೆ?
2024ರ ಆಸ್ಕರ್ (Oscars 2024) ರೇಸ್ನಲ್ಲಿ ಯಾವೆಲ್ಲ ಭಾರತೀಯ ಸಿನಿಮಾಗಳು ಬರಬಹುದು ಎಂಬ ಚರ್ಚೆ ಶುರುವಾಗಿವೆ. ʻರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿʼ (Rocky Aur Rani Kii Prem Kahaani), ʻಜ್ವಿಗಾಟೊʼ (Zwigato), ʻದಿ ಕೇರಳ ಸ್ಟೋರಿʼ ಹೆಸರು ಜೋರಾಗಿ ಕೇಳಿಬರುತ್ತಿದೆ ಪೂರ್ಣ ಸುದ್ದಿಗೆ ಈ ಲಿಂಕ್ ಕ್ಲಿಕ್ ಮಾಡಿ
10. ವ್ಯಾನ್ನಿಂದ ಜಿಗಿದು ಇಬ್ಬರು ಕೈದಿಗಳ ಪರಾರಿ, ಕತ್ತೆ ಕಾಯುತ್ತಿದ್ದ ಪೊಲೀಸರು!
ಉತ್ತರ ಪ್ರದೇಶದಲ್ಲಿ ಮೂವರು ಆರೋಪಿಗಳು ಪೊಲೀಸ್ ವ್ಯಾನ್ನಿಂದ ತಪ್ಪಿಸಿಕೊಂಡು ಓಡಿಹೋದ ವಿಡಿಯೊ ಈಗ ಭಾರಿ ವೈರಲ್ ಆಗಿದೆ. ಹಾಗೆಯೇ, ಉತ್ತರ ಪ್ರದೇಶ ಪೊಲೀಸರ ಕಾರ್ಯವೈಖರಿ ಕುರಿತು ಜನರಿಂದ ಅಸಮಾಧಾನ ವ್ಯಕ್ತವಾಗಿದೆ. ಅವರೇನು ಕತ್ತೆ ಕಾಯ್ತಿದ್ರಾ ಎಂದು ಜನ ಕೇಳ್ತಿದಾರೆ. ಪೂರ್ಣ ಸುದ್ದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ
ಕರ್ನಾಟಕ
Heart Attack: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಡಿಜೆ ಸದ್ದಿಗೆ ಹಾರಿಹೋಯ್ತು ಯುವಕನ ಪ್ರಾಣ!
Heart Attack: ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಹೃದಯಾಘಾತವಾಗಿ ಯವಕ ಮೃತಪಟ್ಟಿದ್ದಾನೆ.
ವಿಜಯನಗರ: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಹೃದಯಾಘಾತದಿಂದ (Heart Attack) ಯುವಕ ಮೃತಪಟ್ಟಿರುವ ಘಟನೆ ಹಗರಿಬೊಮ್ಮನಹಳ್ಳಿ ಪಟ್ಟಣದ ಭೋವಿ ಕಾಲನಿಯಲ್ಲಿ ಶುಕ್ರವಾರ ನಡೆದಿದೆ. ಮೆರವಣಿಗೆ ವೇಳೆ ಡಿಜೆ ಸದ್ದಿಗೆ ನೂರಾರು ಯುವಕರು ಕುಣಿಯುತ್ತಿದ್ದರು. ಈ ವೇಳೆ ಯುವಕನಿಗೆ ಹೃದಯಾಘಾತವಾಗಿದೆ.
ಜಮೀರ್ ಪಿಂಜಾರ (22) ಮೃತ ಯುವಕ. ಮೆರವಣಿಗೆಯಲ್ಲಿ ಏಕಾಏಕಿ ಯುವಕ ಕುಸಿದು ಬಿದ್ದ ಹಿನ್ನೆಲೆಯಲ್ಲಿ ತಕ್ಷಣವೇ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಹೃದಯಾಘಾತದಿಂದ ಯುವಕ ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಅತಿಯಾಗಿ ಮದ್ಯ ಸೇವನೆ ಮಾಡಿದ್ದರಿಂದ ಯುವಕ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಸಾವಿನ ಖಚಿತ ಮಾಹಿತಿ ಲಭ್ಯವಾಗಲಿದೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಇನ್ನೂ ಪ್ರಕರಣ ದಾಖಲಾಗಿಲ್ಲ.
ಪ್ರಿಯಕರನ ಜತೆ ವಿಹಾರಕ್ಕೆ ಬಂದಿದ್ದ ಯುವತಿ ಆತ್ಮಹತ್ಯೆ
ಕೋಲಾರ: ಪ್ರಿಯಕರನ ಜತೆ ವಿಹಾರಕ್ಕೆ ಬಂದಿದ್ದ ಯುವತಿ ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕು ಸುಣ್ಣಕಲ್ಲು ಅರಣ್ಯ ಪ್ರದೇಶದಲ್ಲಿ ನಡೆದಿದೆ. ಆಂಧ್ರ ಮೂಲದ ಹರ್ಷಿತ (21) ಮೃತ ಯುವತಿ.
ಇದನ್ನೂ ಓದಿ | Assault Case : ಕೈ ತಾಗಿದ್ದಕ್ಕೆ ಯುವಕರ ಮಧ್ಯೆ ಕಿರಿಕ್; ಖಾನಾಪುರದಲ್ಲಿ ಬಿಗುವಿನ ವಾತಾವರಣ
ಯುವತಿ ಮೃತ ಪಟ್ಟ ಹಿನ್ನೆಲೆ ಪ್ರಿಯಕರ ಹೆದ್ದಾರಿಯಲ್ಲಿ ಬಂದು ಚೀರಾಡುತ್ತಿದ್ದ ಹಿನ್ನೆಲೆಯಲ್ಲಿ ಸುತ್ತಮುತ್ತಲ ಗ್ರಾಮಸ್ಥರು ಸ್ಥಳಕ್ಕೆ ಭೇಟಿ ನೀಡಿ ವಿಚಾರಿಸಿದ್ದಾರೆ. ಇಬ್ಬರು ಸುಣ್ಣಕಲ್ ಅರಣ್ಯ ಪ್ರದೇಶಕ್ಕೆ ವಿಹಾರಕ್ಕೆ ಬಂದಿದ್ದರು ಎಂದು ತಿಳಿದುಬಂದಿದೆ. ಈ ವೇಳೆ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ರಾಯಲ್ಪಾಡು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಮೃತಳ ಪ್ರಿಯಕರ ಹೇಮಂತ್ ಎಂಬಾತನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಯುವತಿ ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿವೆ.
-
ಪ್ರಮುಖ ಸುದ್ದಿ17 hours ago
Lina Mukherjee: ಇಸ್ಲಾಮಿಕ್ ದೇಶದಲ್ಲಿ ಹಂದಿ ಮಾಂಸ ತಿಂದ ಟಿಕ್ಟಾಕ್ ಸ್ಟಾರ್ಗೆ 2 ವರ್ಷ ಜೈಲು ಶಿಕ್ಷೆ!
-
ಪ್ರಮುಖ ಸುದ್ದಿ8 hours ago
Ipsos poll Survey: ಟ್ರುಡೋ ಜನಪ್ರಿಯತೆ ಕುಸಿತ, ಕೆನಡಾ ಪಿಎಂ ಆಗಲು ಪ್ರತಿಪಕ್ಷ ನಾಯಕನೇ ಬೆಸ್ಟ್!
-
ಉಡುಪಿ14 hours ago
FB Profile Deleted: 20ಕ್ಕೂ ಅಧಿಕ ಹಿಂದು ಜಾಗರಣ ವೇದಿಕೆ ನಾಯಕರ ಫೇಸ್ ಬುಕ್ ಪ್ರೊಫೈಲ್ ಏಕಕಾಲದಲ್ಲಿ ಡಿಲೀಟ್!
-
ಗ್ಯಾಜೆಟ್ಸ್11 hours ago
YouTube: ಯುಟ್ಯೂಬ್ ವಿಡಿಯೋ ಮಾಡುವುದು ಇನ್ನೂ ಸುಲಭ! ಹೊಸ ಎಡಿಟಿಂಗ್ ಆ್ಯಪ್ ಲಾಂಚ್
-
ದೇಶ10 hours ago
Prisoners Escape: ವ್ಯಾನ್ನಿಂದ ಜಿಗಿದು ಇಬ್ಬರು ಕೈದಿಗಳು ಪರಾರಿ; ಕತ್ತೆ ಕಾಯುತ್ತಿದ್ದ ಪೊಲೀಸರು!
-
ಉತ್ತರ ಕನ್ನಡ11 hours ago
ದೇವಾಲಯದ ಅವಶೇಷಕ್ಕೆ ಕಲ್ಲೆಸೆದ ಅನ್ಯಕೋಮಿನ ಯುವಕರು; ಹಿಂದು ಸಂಘಟನೆಗಳು ಕಿಡಿ
-
ಆರೋಗ್ಯ20 hours ago
Health Tips: ಎಳನೀರು ಒಳ್ಳೆಯದೆಂದು ಕುಡಿಯುವ ಮೊದಲು ಅದರ ಅವಗುಣಗಳೂ ಗೊತ್ತಿರಲಿ!
-
ಕ್ರೈಂ10 hours ago
Assault Case : ಕೈ ತಾಗಿದ್ದಕ್ಕೆ ಯುವಕರ ಮಧ್ಯೆ ಕಿರಿಕ್; ಖಾನಾಪುರದಲ್ಲಿ ಬಿಗುವಿನ ವಾತಾವರಣ