Site icon Vistara News

ATM Robbery: ಎಟಿಎಂನಲ್ಲಿ 15 ಲಕ್ಷ ರೂ. ದೋಚಿದ ಕಳ್ಳರು; ಗ್ಯಾಸ್ ಕಟರ್ ಬಳಸಿ ಕೃತ್ಯ!

ATM Robbery

ದೊಡ್ಡಬಳ್ಳಾಪುರ: ಎಟಿಎಂನಲ್ಲಿ ಕಳ್ಳರು 15 ಲಕ್ಷ ರೂ. ದೋಚಿದ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಎಸ್‌ಬಿಐ ಎಟಿಎಂನಲ್ಲಿ ಕಳವಾಗಿದ್ದು (ATM Robbery), ಗ್ಯಾಸ್ ಕಟರ್ ಬಳಸಿ ಎಟಿಎಂ ಯಂತ್ರ ಕಟ್ ಮಾಡಿ ಹಣ ಕದಿಯಲಾಗಿದೆ.

ಶನಿವಾರ ತಡರಾತ್ರಿ 2 ಗಂಟೆ ವೇಳೆ ಗ್ಯಾಸ್ ಕಟರ್‌ನಿಂದ ಎಟಿಎಂ ಕಟ್ ಮಾಡಿರುವ ಖದೀಮರು, 15 ಲಕ್ಷ ರೂಪಾಯಿ ದೋಚಿ ಪರಾರಿಯಾಗಿದ್ದಾರೆ. ಸಿಸಿಟಿವಿ ಕಣ್ಣಿಂದ ತಪ್ಪಿಸಿಕೊಳ್ಳಲು ಅದಕ್ಕೆ ಬ್ಲಾಕ್ ಸ್ಪ್ರೇಯನ್ನು ಕಳ್ಳರು ಹೊಡೆದಿದ್ದಾರೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳೆದ ವರ್ಷ ಇದೇ ಎಟಿಎಂನಲ್ಲಿ ಆರೆಯಿಂದ ಮೀಟಿ ಹಣ ದೋಚಲು ಕಳ್ಳರು ಯತ್ನಿಸಿದ್ದರು.

ಇದನ್ನೂ ಓದಿ | Dengue Cases in Hassan: ಹಾಸನದಲ್ಲಿ ಶಂಕಿತ ಡೆಂಗ್ಯೂಗೆ 26 ವರ್ಷದ ಯುವತಿ ಬಲಿ

murder case

ಶಿವಮೊಗ್ಗ : ಕಾಣೆಯಾಗಿದ್ದ (Missing Case) ಯುವತಿಯೊಬ್ಬಳು ಶವವಾಗಿ (Dead Body Found) ಪತ್ತೆಯಾಗಿದ್ದಾಳೆ. ಶಿವಮೊಗ್ಗದ (Shivamogga News) ತೀರ್ಥಹಳ್ಳಿ ತಾಲೂಕಿನ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ (Murder case) ಘಟನೆ ನಡೆದಿದೆ. ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿಯಾಗಿದ್ದ ಪೂಜಾ.ಎ.ಕೆ (24) ಕೊಲೆಯಾದ ಮೃತ ದುರ್ದೈವಿ.

ಕಳೆದ ಜೂ.30ರಂದು ಮನೆಯಿಂದ ಕೆಲಸಕ್ಕೆ ಹೋಗಿದ್ದ ಪೂಜಾ ಏಕಾಏಕಿ ಕಾಣೆಯಾಗಿದ್ದಳು. ಮನೆಗೆ ವಾಪಸ್ ಬರದ ಹಿನ್ನೆಲೆಯಲ್ಲಿ ಪೂಜಾ ಪೋಷಕರು ಆತಂಕಗೊಂಡು ಎಲ್ಲೆಡೆ ಹುಡುಕಾಟ ನಡೆಸಿದ್ದರು. ಬಳಿಕ ಆಗುಂಬೆ ಪೊಲೀಸ್ ಠಾಣೆಯಲ್ಲಿ ತಂದೆ ಕುಶಾಲ್ ಮಿಸ್ಸಿಂಗ್‌ ಕಂಪ್ಲೇಟ್‌ ಕೊಟ್ಟಿದ್ದರು.

ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆಗಿಳಿದಾಗ ಪೂಜಾಳ ಶವವು ಪತ್ತೆಯಾಗಿತ್ತು. ಬಳಿಕ ಆಕೆಯ ಫೋನ್‌ ಕಾಲ್‌ ಲಿಸ್ಟ್‌ ತೆಗೆದು ಮಿಸ್ಸಿಂಗ್‌ ಆದ ಕೊನೆ ದಿನ ಯಾರೆಲ್ಲ ಕರೆ ಮಾಡಿದ್ದರು ಅವರನ್ನೆಲ್ಲ ಪೊಲೀಸರು ವಿಚಾರಣೆ ನಡೆಸಿದ್ದರು.

ಈ ವೇಳೆ ಹಲವು ವರ್ಷಗಳಿಂದ ಸ್ನೇಹಿತನಾಗಿದ್ದ ಮಣಿಕಂಠ ಎಂಬಾತನಿಂದಲೇ ಪೂಜಾ ಕೂಲೆಯಾಗಿದ್ದಳು. ಪೊಲೀಸರು ತಮ್ಮದೇ ಸ್ಟೈಲ್‌ನಲ್ಲಿ ವಿಚಾರನೆ ನಡೆಸಿದಾಗ ಪೂಜಾಳನ್ನು ಕೊಂದಿದ್ದಾಗಿ ಮಣಿಕಂಠ ಒಪ್ಪಿಕೊಂಡಿದ್ದಾನೆ. ಹಣಕಾಸಿ‌ ವಿಚಾರಕ್ಕೆ ಜಗಳ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ.

ಇದನ್ನೂ ಓದಿ: Crime News: ಗಾಂಜಾ ಮತ್ತಿನಲ್ಲಿ ಕಾರು ಓಡಿಸಿ ಬೈಕ್‌ಗಳಿಗೆ ಗುದ್ದಿದ ಚಾಲಕ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳರು

ಸದ್ಯ ಆಗುಂಬೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಯಿಂದ ಮತ್ತಷ್ಟು ಮಾಹಿತಿಯನ್ನು ಪೊಲೀಸರು ಕಲೆಹಾಕುತ್ತಿದ್ದಾರೆ.

Exit mobile version